*ಡೆವಿಲ್ ಜೊತೆಗೆ ಕುಡುಕನ ಎಂಟ್ರಿ.. ಪಿಯೊಟ್ ರಿಲೀಸ್* *ಡೆವಿಲ್ ನೋಡಿ ಸೆಕೆಂಡ್ ಪಿಯೊಟ್ ನೋಡಿ : ಚಿತ್ರತಂಡ ಮನವಿ* ಪಿವಟ್ ಅಂತ ಯಾರನ್ನ ಕರೆಯುತ್ತಾರೆ ಅನ್ನೋದು ನಿಮಗೆಲ್ಲಾ ಗೊತ್ತಿರುವ ವಿಚಾರವೇ. ಕುಡಿಯುವುದಕ್ಕೆ ಸಮಯವೇ ಬೇಕಿಲ್ಲ. ಸದಾ ಕುಡಿಯುವುದರ ಕಡೆಗೆ ಗಮನ ಹರಿಸುವವರನ್ನ ಪಿಯೊಟ್ ಅಂತಾರೆ. ಈ ರೀತಿ ಕುಡಿಯುವುದರಿಂದ ಏನೆಲ್ಲಾ ಸಮಸ್ಯೆ ಆಗುತ್ತೆ, ಕುಡಿತ ಬಿಡುವುದಕ್ಕೆ ಮನಸ್ಸು ಮಾಡುದಾಗ ಎಷ್ಟೆಲ್ಲಾ ಕಷ್ಟವಾಗುತ್ತೆ ಎಂಬ ಸಂದೇಶವನ್ನಿತ್ತು ಪಿಯೊಟ್ ಸಿನಿಮಾ ಬರ್ತಾ ಇದೆ. ಇದೆ ಡಿಸೆಂಬರ್ 12ಕ್ಕೆ ರಿಲೀಸ್ ಆಗ್ತಾ ಇದೆ. ಇಡೀ ಚಿತ್ರತಂಡ ಮಾಧ್ಯಮದವರ ಮುಂದೆ ತಮ್ಮ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಡೆವಿಲ್ ನೋಡಿದ ಮೇಲೆ ....
*ಡಿಸೆಂಬರ್ 15 ರಂದು ಬಹು ನಿರೀಕ್ಷಿತ ಮಲ್ಟಿಸ್ಟಾರರ್ "45" ಚಿತ್ರದ ಟ್ರೇಲರ್ ಬಿಡುಗಡೆ* . *ಬೆಂಗಳೂರಿನಲ್ಲಿ ಅದ್ದೂರಿ ಇವೆಂಟ್. ಕರ್ನಾಟಕದ ಏಳು ಜಿಲ್ಲೆಗಳ ಚಿತ್ರಮಂದಿರದಲ್ಲಿ ಇವೆಂಟ್ ನ ನೇರ ಪ್ರಸಾರ* . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು ನಿರ್ಮಿಸಿರುವ ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ಮಲ್ಟಿಸ್ಟಾರರ್ “45” ಚಿತ್ರ ಡಿಸೆಂಬರ್ 25 ಕ್ರಿಸ್ಮಸ್ ದಿನದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಡಿಸೆಂಬರ್ 15 ರಂದು ....
*ಸದ್ದು ಮಾಡುತ್ತಿದೆ ’ಪದ್ಮಗಂಧಿ’* ಹಿರಿಯ ನಟ *ಕ.ಸುಚೇಂದ್ರ ಪ್ರಸಾದ ಚಿತ್ರಕಥೆ-ಸಂಭಾಷಣೆ ಜತೆಗೆ ನಿರ್ದೇಶನ* ಮಾಡಿರುವ *ಪದ್ಮಗಂಧಿ* ಚಿತ್ರದ ಕನ್ನಡ, ಸಂಸ್ಕ್ರತ ಮತ್ತು ಹಿಂದಿ ಭಾಷೆಯ ಟ್ರೇಲರ್ ಹಾಗೂ ಹಾಡುಗಳು ಬಿಡುಗಡೆಗೊಂಡು ಪ್ರಶಂಸೆಯ ಸುರಿಮಳೆಗಳು ಬರುತ್ತಿದೆ. ಮಾಜಿ ಎಂಎಲ್ಸಿ, ಅಂಕಣಕಾರ್ತಿ, ಸಂಸ್ಕ್ರತ ಭೂಮಿಕೆಯಲ್ಲಿ ನಾನಾ ದಿಕ್ಕಿನಲ್ಲಿ ಅಧ್ಯಯನ ನಡೆಸಿರುವ ನಿವೃತ ಪ್ರೊಫೆಸರ್ *ಎಸ್.ಆರ್.ಲೀಲಾ ರಚಸಿ, ನಿರ್ಮಾಣ* ಮಾಡಿರುವುದು ಹೊಸ ಅನುಭವ. ವಿದ್ಯಾರ್ಥಿಯಾಗಿ ಕು.ಮಹಾಪದ್ಮ, ಗುರುಮಾತೆ ಪಾತ್ರದಲ್ಲಿ ಉಡುಪಿಯ ಪರಿಪೂರ್ಣ ಚಂದ್ರಶೇಖರ್ ಇವರೊಂದಿಗೆ ರಿಯಲ್ದಲ್ಲಿ ಹೆಸರು ಮಾಡಿರುವ ಶತಾವಧಾನಿ ಡಾ.ಆರ್.ಗಣೇಶ್, ಡಾ.ಗೌರಿ ....
*ಡಿಸೆಂಬರ್ 11 ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ "ದಿ ಡೆವಿಲ್" ಚಿತ್ರ ರಾಜ್ಯಾದ್ಯಂತ ಅದ್ದೂರಿ ಬಿಡುಗಡೆ.* *ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾಹಿತಿ ನೀಡಿದ ಚಿತ್ರತಂಡ* ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ದಿ ಡೆವಿಲ್" ಚಿತ್ರ ಇದೇ ಡಿಸೆಂಬರ್ 11 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು "ದಿ ಡೆವಿಲ್" ಚಿತ್ರದ ....
ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಟೀಸರ್ ಬಿಡುಗಡೆ! ಕಾಮಿಡಿ ಶೋಗಳ ಮೂಲಕ ಪ್ರವರ್ಧಮಾನಕ್ಕೆ ಬಂದು, ಇದೀಗ ಬಿಗ್ ಬಾಸ್ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿರುವವರು ಗಿಲ್ಲಿ ನಟ. ಗಿಲ್ಲಿ ನಾಯಕನಾಗಿ ನಟಿಸಿರುವ ಸೂಪರ್ ಹಿಟ್ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ. ವಿಜಯಾನಂದ್ ನಿರ್ದೇಶನದ ಈ ಸಿನಿಮಾದ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈ ಕುರಿತಾದ ಪತ್ರಿಕಾಗೋಷ್ಠಿಯ ಮೂಲಕ ಚಿತ್ರತಂಡ ಒಟ್ಟಾರೆ ಸಿನಿಮಾದ ಬಗೆಗಿನ ಒಂದಷ್ಟು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದೆ. ಹೀಗೆ ಬಿಡುಗಡೆಗೊಂಡಿರುವ `ಸೂಪರ್ ಹಿಟ್’ ಟೀಸರ್ ಸು ಫ್ರಂ ಸೋ ನಂತರದಲ್ಲಿ ಮತ್ತೊಂದು ಮಟ್ಟದ ಕಾಮಿಡಿಯ ಮೂಲಕ ಸಂಚಲನ ಸೃಷ್ಟಿಸುವ ಲಕ್ಷಣಗಳು ದಟ್ಟವಾಗಿ ಕಾಣಿಸುತ್ತಿವೆ. ಸಿನಿಮಾವೊಂದು ....
*ಜನವರಿ 2 ರಂದು ರೂಪ ಅಯ್ಯರ್ ನಿರ್ದೇಶನದ ’ಆಜಾದ್ ಭಾರತ್’ ಚಿತ್ರ ದೇಶದಾದ್ಯಂತ ಬಿಡುಗಡೆ* . *ಇದು ಕನ್ನಡಗರಿಂದ ನಿರ್ಮಾಣವಾಗಿರುವ ದೇಶಪ್ರೇಮ ಸಾರುವ ಹಿಂದಿ ಚಿತ್ರ* . ನಟಿಯಾಗಿ, ನಿರ್ದೇಶಕಿಯಾಗಿ ಅಷ್ಟೇ ಅಲ್ಲದೆ ಸಮಾಜಮುಖಿ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿರುವ ರೂಪ ಅಯ್ಯರ್ ನಿರ್ದೇಶನದ "ಆಜಾದ್ ಭಾರತ್" ಹಿಂದಿ ಚಿತ್ರ ಜನವರಿ 2 ರಂದು ದೇಶದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ’ನೀರಾ ಆರ್ಯ’ ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆಯನ್ನು "ಆಜಾದ್ ಭಾರತ್" ಎಂದು ಬದಲಿಸಲಾಗಿದೆ. ಈ ಚಿತ್ರವನ್ನು ನೇತಾಜಿ ಸುಭಾಷ್ ಚಂದ್ರ ....
*ಸುಧೀಂದ್ರ ವೆಂಕಟೇಶ್ ನಿರ್ಮಾಣದ "ಫಸ್ಟ್ ಸ್ಯಾಲರಿ"ಗೆ ಪವನ್ ವೆಂಕಟೇಶ್ ನಿರ್ದೇಶನ* . *ಕಿರುಚಿತ್ರದ ಮೊದಲ ಪ್ರದರ್ಶನದಲ್ಲಿ ನಟಿ ಶ್ರುತಿ, ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿ* . ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ನಿರ್ಮಾಣ ಮಾಡಿರುವ, ಅವರ ಪುತ್ರ ಪವನ್ ವೆಂಕಟೇಶ್ ನಿರ್ದೇಶನ ಮಾಡಿರುವ "ಫಸ್ಟ್ ಸ್ಯಾಲರಿ" ಫಸ್ಟ್ ಶೋ ಇತ್ತೀಚೆಗೆ ನಡೆಯಿತು. ಮೊದಲ ಪ್ರದರ್ಶನದಲ್ಲಿ ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟಿ ಶೃತಿ ಹಾಗೂ ಗುರುಗಳಾದ ಕಮಲಾಕರ್ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ತಂಡದ ಸದಸ್ಯರು ಮಾತನಾಡಿದರು. ಡಿ.ವಿ.ಸುಧೀಂದ್ರ ....
*ಜನವರಿ 2 ರಂದು ರೂಪ ಅಯ್ಯರ್ ನಿರ್ದೇಶನದ ’ಆಜಾದ್ ಭಾರತ್’ ಚಿತ್ರ ದೇಶದಾದ್ಯಂತ ಬಿಡುಗಡೆ* . *ಇದು ಕನ್ನಡಗರಿಂದ ನಿರ್ಮಾಣವಾಗಿರುವ ದೇಶಪ್ರೇಮ ಸಾರುವ ಹಿಂದಿ ಚಿತ್ರ* . ನಟಿಯಾಗಿ, ನಿರ್ದೇಶಕಿಯಾಗಿ ಅಷ್ಟೇ ಅಲ್ಲದೆ ಸಮಾಜಮುಖಿ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿರುವ ರೂಪ ಅಯ್ಯರ್ ನಿರ್ದೇಶನದ "ಆಜಾದ್ ಭಾರತ್" ಹಿಂದಿ ಚಿತ್ರ ಜನವರಿ 2 ರಂದು ದೇಶದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ’ನೀರಾ ಆರ್ಯ’ ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆಯನ್ನು "ಆಜಾದ್ ಭಾರತ್" ಎಂದು ಬದಲಿಸಲಾಗಿದೆ. ಈ ಚಿತ್ರವನ್ನು ನೇತಾಜಿ ಸುಭಾಷ್ ಚಂದ್ರ ....
*ಬಿಡುಗಡೆಯಾಯಿತು ನವೀನ್ ಸಜ್ಜು ಅಭಿನಯದ "ಲೋ ನವೀನ" ಚಿತ್ರದ "ಕೋಣಾಣೆ" ಹಾಡು* . *ಜನಪದ ಸೊಗಡಿನ ಈ ಗೀತೆಗೆ ತಲೆದೂಗುತ್ತಿದೆ ಕರುನಾಡು* . ಗಾಯಕನಾಗಿ ಕನ್ನಡಿಗರ ಮನ ಗೆದ್ದಿರುವ ನವೀನ್ ಸಜ್ಜು ನಾಯಕನಾಗಿ ನಟಿಸಿರುವ ಮೊದಲ ಚಿತ್ರ "ಲೋ ನವೀನ". ಇತ್ತೀಚೆಗೆ ಈ ಚಿತ್ರದ "ಕೋಣಾಣೆ" ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮಾಜಿ ಶಾಸಕರಾದ ಎ.ಮಂಜು, ಪುಟ್ಟರಾಜು, ಅಮರನಾಥ ಗೌಡ, ವಿಶ್ವಾಮಿತ್ರ, ಜಿ.ಟಿ.ಮಾಲ್ ನ ಆನಂದ್, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, ಹಾಡು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಅಪ್ಪಟ ಜನಪದ ಶೈಲಿಯ ಈ ಹಾಡನ್ನು ಮೈಸೂರಿನ ....
*ಮೂಷಿಕವಾಹನನ ಸನ್ನಿಧಿಯಲ್ಲಿ ಆರಂಭವಾಯಿತು "ಮುಜುಗರ"* . *ಈ ಚಿತ್ರದ ಮೂಲಕ ಕಲಾತಪಸ್ವಿ ರಾಜೇಶ್ ಅವರ ಮೊಮ್ಮಗ ಸಾಯಿನಂದ್ ನಾಯಕನಾಗಿ ಪದಾರ್ಪಣೆ* . ತಮ್ಮ ಜನಪ್ರಿಯ ನಟನೆಯ ಮೂಲಕ ಕನ್ನಡಿಗರ ಜನಮನಸೂರೆಗೊಂಡಿದ್ದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಅವರ ಮೊಮ್ಮಗ ಸಾಯಿನಂದ್ "ಮುಜುಗರ" ಚಿತ್ರದ ಮೂಲಕ ನಾಯಕನಾಗಿ ಚಂದನವನಕ್ಕೆ ಅಡಿಯಿಟ್ಟಿದ್ದಾರೆ. ಶಾಂತ ಶ್ರೀನಿವಾಸ್ ಡಿ ನಿರ್ಮಿಸುತ್ತಿರುವ ಈ ಚಿತ್ರವನ್ನು ತರುಣ್ ಎನ್ (ಜ್ಯೋತಿಪ್ರಿಯ) ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನೆಟ್ಟಕಲ್ಲಪ್ಪ ಸರ್ಕಲ್ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ....
*ಬದುಕು ಒಂಥರ ಟ್ರಾಫಿಕ್ ಸಿಗ್ನಲ್ ಇದ್ದಂತೆ* ವಿಭಿನ್ನ ಶೀರ್ಷಿಕೆ *ಕೆಂಪು ಹಳದಿ ಹಸಿರು* ಚಿತ್ರದ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಸಮಾರಂಭವು ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. *ಸನ್ರೈಸ್ ಎಂಟರ್ಟೈನ್ಮೆಂಟ್ ಅಂಡ್ ಫಿಲಂಸ್ ಬ್ಯಾನರ್ ಮೂಲಕ ಪ್ರಸಾದ್ಕುಮಾರ್ ನಾಯ್ಕ್ ಬಂಡವಾಳ* ಹೂಡುತ್ತಿರುವುದು ಮೂರನೇ ಅನುಭವ. ಒಂದು ತುಳು ಸಿನಿಮಾಗಳನ್ನು ನಿರ್ದೇಶನ ಮಾಡಿರುವ *ಮಣಿ.ಎಜೆ.ಕಾರ್ತಿಕೇಯನ್ ಮೊದಲ ಬಾರಿ ಕನ್ನಡ ಸಿನಿಮಾಕ್ಕೆ ಆಕ್ಷನ್ ಕಟ್* ಹೇಳಿದ್ದಾರೆ. ’ಸ್ಟಾಪ್, ಥಿಂಕ್ ಅಂಡ್ ಪ್ರೊಸೀಡ್ ಇನ್ ಲೈಫ್’ ಎಂಬ ಅರ್ಥಪೂರ್ಣ ಅಡಿಬರಹ ಇರಲಿದೆ. ಬಾಲಾಜಿ ಫಿಲಂ ವರ್ಕ್ಸ್ ಅಡಿಯಲ್ಲಿ ಪ್ರಸಾದ್ ಈರ್ಲಾ ಮತ್ತು ಹರೀಶ್ ಧಾಸ್ಮಾನ ಸಹ ....
*ನಾಗಸಾಧುಗಳ ಸಮ್ಮುಖದಲ್ಲಿ ಮಣಿಕಂಠ ಮುಹೂರ್ತ* ಸ್ವಾಮಿ ಶರಣಂ ಅಯ್ಯಪ್ಪನ ಕುರಿತಾದ ಚಿತ್ರವು ಮೂರು ದಶಕಗಳ ನಂತರ *ಮಣಿಕಂಠ* ಹೆಸರಿನಲ್ಲಿ ಸಿನಿಮಾವೊಂದು ಸಿದ್ದಗೊಳ್ಳುತ್ತಿದೆ. ನವೆಂಬರ್-ಡಿಸೆಂಬರ್ ಅಂದರೆ ಸ್ವಾಮಿ ದರ್ಶನಕ್ಕೆ ಮಾಲಾಧಾರಿಯಾಗಿ ಹೋಗುವುದುಂಟು. ಈ ಹಿನ್ನಲೆಯಲ್ಲಿ ಮಹಾಲಕ್ಷೀಪುರಂನ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ದೇವಸ್ಥಾನದಲ್ಲಿ ಭಕ್ತರು ತುಂಬಿಕೊಂಡಿದ್ದರು. ಇದರ ನಡುವೆ ’ಮಣಿಕಂಠ’ ಮುಹೂರ್ತ ನಡೆಯಿತು. ತಂಡಕ್ಕೆ ಶುಭ ಹಾರೈಸಲು ಕಾಶಿಯಿಂದ ಸಾಕ್ಷಾತ್ ಎಂಟು ನಾಗಸಾಧುಗಳು ಆಗಮಿಸಿದ್ದು ವಿಶೇಷವಾಗಿತ್ತು. ಅವರ ಸಮ್ಮುಖದಲ್ಲಿ ಶುಭಕಾರ್ಯ ಯಶಸ್ವಿಯಾಗಿ ನಡೆಯಿತು. ಅಶ್ವಿನಿ ಪ್ರೊಡಕ್ಷನ್ಸ್ ಅಡಿಯಲ್ಲಿ ....
*ಗವಿ ಗಂಗಾಧರೇಶ್ವರ ಸನ್ನಿಧಿಯಲ್ಲಿ "ದಿ ರೈಸ್ ಆಫ್ ಅಶೋಕ" ಸಿನಿಮಾದ ಸಾಂಗ್ ಅನಾವರಣ* *ಏಳೋ ಏಳೋ ಮಾದೇವ..ಇದು ಸತೀಶ್ ನೀನಾಸಂ ಶಿವ ಪರಾಕಾಷ್ಠೆ* *ದಿ ರೈಸ್ ಆಫ್ ಅಶೋಕ ಸಿನಿಮಾದ ಮೊದಲ ಹಾಡು ರಿಲೀಸ್..ಮಾದೇವನ ಪರಾಕಾಷ್ಠೆಯಲ್ಲಿ ಸತೀಶ್ ನೀನಾಸಂ* ಅಭಿನಯ ಚತುರ ಸತೀಶ್ ನೀನಾಸಂ ಅವರ ಭತ್ತಳಿಕೆಯಿಂದ ಬರ್ತಿರುವ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ. ಟೈಟಲ್ ಹಾಗೂ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಗರಿಗೆದರುವಂತೆ ಮಾಡಿರುವ ಈ ಚಿತ್ರದ ಮೊದಲ ಹಾಡು ಅನಾವರಣಗೊಂಡಿದೆ. ಮಾದೇವನ ಕುರಿತ ಹಾಡನ್ನು ಬೆಂಗಳೂರಿನ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಸ್ವತಃ ಸತೀಶ್ ಏಳೋ ಏಳೋ ಮಹಾದೇವ ಗೀತೆ ....
*"ಕೊರಗಜ್ಜ" ಚಿತ್ರದ ಗುಳಿಗಾ...ಗುಳಿಗಾ...ಹಾಡಿನಿಂದ ’ಗುಳಿಗ ದೈವ’ಕ್ಕೆ ಸಂತೋಷ-ಪ್ರಶ್ನೆ ಇಟ್ಟಾಗ ಜ್ಯೋತಿಷ್ಯದಲ್ಲಿ ಕಂಡು ಬಂದ ಸತ್ಯ* ಇತ್ತೀಚೆಗೆ ಜೀ಼ ಮ್ಯೂಜಿಕ್ ಮೊತ್ತಮೊದಲ ಬಾರಿಗೆ ಕನ್ನಡದಲ್ಲಿ ಬಿಡುಗಡೆ ಗೊಳಿಸಿದ "ಕೊರಗಜ್ಜ" ಚಿತ್ರದ, ಜಾವೆದ್ ಆಲಿ ಮತ್ತು ಸುಧೀರ್ ಅತ್ತಾವರ್ ಹಾಡಿರುವ,ಗೋಪಿ ಸುಂದರ್ ಸಂಗೀತ ಮತ್ತು ಸುಧೀರ್ ಅತ್ತಾವರ್ ಸಾಹಿತ್ಯದ ಗುಳಿಗಾ...ಗುಳಿಗಾ...ಹಾಡಿನ ಅಬ್ಬರ ದೇಶದೆಲ್ಲೆಡೆ ಹಬ್ಬಿ ಹವಾ ಎಬ್ಬಿಸುತ್ತಿರುವಂತೆಯೇ, ಭಯಂಕರ ಉಗ್ರ ರೂಪದ ಕಾರಣಿಕದ "ಗುಳಿಗದೈವ" ಈ ಹಾಡಿನಿಂದ ಕ್ರೋಧ ಗೊಂಡಿರಬಹುದೇ ಅಥವ ದೈವಕ್ಕೆ ಅಪಚಾರಾಗಿರಬಹುದೇ ಎಂಬ ಎಂಬ ಸಂಶಯದಿಂದ ಇಂದು ನಿರ್ದೇಶಕ ಸುಧೀರ್ ಅತ್ತಾವರ್ ರವರು ಕೇರಳದ ತ್ರಿಶೂರ್ ....
*ಚೋಮನದುಡಿ ರೂಪಾಂತರ* ಜ್ಘಾನಪೀಠ ಪ್ರಶಸ್ತಿ ವಿಜೇತ ಡಾ.ಶಿವರಾಮಕಾರಂತರ ಕೃತಿ ’ಚೋಮನದುಡಿ’ ಚಿತ್ರವಾಗಿ ಮೂಡಿಬಂದು ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿತ್ತು. ಕಟ್ ಮಾಡಿದರೆ ಬರೋಬ್ಬರಿ ಐವತ್ತು ವರ್ಷಗಳ ನಂತರ ಇದೇ ಸಿನಿಮಾ ನೆನಪಿಸುವ *ಬಿಚ್ಚುಗತ್ತಿಯ ಬಂಟನ ಬಲ್ಲರೇನ* ಚಿತ್ರವೊಂದು ತೆರೆಗೆ ಬರಲು ಅಣಿಯಾಗಿದೆ. ’ದುಡಿಯ ಸದ್ದಿಗೆ ಕ್ರಾಂತಿಯ ಎದ್ದಿದೆ’ ಎಂಬ ತೂಕದ ಅಡಿಬರಹ ಇರಲಿದೆ. ದೋರಸಮುದ್ರ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ *ಅನಿಲ್ ದೋರಸಮುದ್ರ ನಿರ್ದೇಶನ ಹಾಗೂ ಬಂಡವಾಳ* ಹೂಡಿದ್ದಾರೆ. ಸಹೋದರ *ನವೀನ್ ಸಿಂಬಾವಿ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ*. ಪ್ರಚಾರದ ಕೊನೆ ಹಂತವಾಗಿ ಟ್ರೇಲರ್ ಹಾಗೂ ....
ಜಾತಿ, ಧರ್ಮದ ಹಿನ್ನೆಲೆಯ ಕಥನ " ಧರ್ಮಂ" ಚಿತ್ರದ ಟ್ರೈಲರ್ ಬಿಡುಗಡೆ "ಜಾತಿಯಲ್ಲಿ ಹಿಂದುಳಿಯುದಲ್ಲ.. ಜೀವನದಲ್ಲಿ ಮುಂದೆ ಬರದಂತೆ ನೋಡಿಕೊಳ್ಳಬೇಕು.. ಇಲ್ಲಿ ನ್ಯಾಯ ನೀತಿ ಧರ್ಮಕ್ಕೆ ಬೆಲೆ ಇಲ್ಲ..." ಅವ್ನಾ ಉಸಿರಾಡೋಕೆ ಬಿಟ್ಟರೆ ನಮಗೇ ತೊಂದರೆ.." ಧರ್ಮ ಉಳಿಬೇಕಂದ್ರೆ ..ನಿನ್ನ ಜಾತಿ ಸಾಯಬೇಕು.." ಹಳ್ಳಿಯ ಹಿನ್ನೆಲೆಯಲ್ಲಿ ರಗಡ್ ಲುಕ್ ನಲ್ಲಿರುವ " ಧರ್ಮಂ " ಚಿತ್ರದ ಖಡಕ್ ಸಂಭಾಷಣೆ ಇರುವ ಟ್ರೈಲರ್ ನಲ್ಲಿ ಶೋಷಣೆ ,ದಬ್ಬಾಳಿಕೆ, ಸೇರಿದಂತೆ ಆಕ್ಷನ್ ಸನ್ನಿವೇಶ ಹದಗೊಳಿಸಿ ಚಿತ್ರವನ್ನು ತೆರೆಗೆ ಕಟ್ಟಿಕೊಡಲಾಗಿದ್ದು ಡಿಸೆಂಬರ್ 5 ರಂದು ಚಿತ್ರ ತೆರೆಗೆ ಬರಲಿದ್ದು ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಕೆರಳಿಸಿದೆ. "ಧರ್ಮಂ " ....
*ಟ್ರೇಲರ್ ನಲ್ಲೇ ಗಮನ ಸೆಳೆದ ದೀಕ್ಷಿತ್ ಶೆಟ್ಟಿ ಅಭಿನಯದ "ಬ್ಯಾಂಕ್ of ಭಾಗ್ಯಲಕ್ಷ್ಮಿ".* . *ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಟ್ರೇಲರ್ ಅನಾವರಣ* . *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ನವೆಂಬರ್ 21 ರಂದು ತೆರೆಗೆ* . ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್ ನಿರ್ಮಾಣದ, "ದಿಯಾ", "ಬ್ಲಿಂಕ್" ಸೇರಿದಂತೆ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ನಾಯಕರಾಗಿ ಮತ್ತು ಬೃಂದಾ ಆಚಾರ್ಯ ನಾಯಕಿಯಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ "ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ" ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ....
*ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಂದ ಗೀತಪ್ರಿಯ ಅಭಿನಯದ ’ಅಪರಿಚಿತೆ’ ಚಿತ್ರದ ಟ್ರೇಲರ್ ಅನಾವರಣ* . ಈ ಮೊದಲು ’ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆ ಚಿತ್ರದ ಹೆಸರು ’ಅಪರಿಚಿತೆ’. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಅನಾವರಣ ಸಮಾರಂಭ ನಗರದ ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಮಾಜಿ ಮುಖ್ಯಮಂತ್ರಿ, ಮಾಜಿ ಬಿ.ಜೆ.ಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಟ್ರೇಲರ್ ಅನಾವರಣ ಮಾಡಿದರು. ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದ ಗೌಡ ಹಾಗೂ ನಟಿ ತಾರಾ ಅನುರಾಧ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಟಿ ತಾರಾ ....
*ಚಿಂತಾಮಣಿಯಲ್ಲಿ ಅದ್ಧೂರಿಯಾಗಿ ಜರುಗಿದ ಅಖಂಡ-2 ಟ್ರೇಲರ್ ಲಾಂಚ್ ಕಾರ್ಯಕ್ರಮ..ಬಾಲಯ್ಯ ಸಿನಿಮಾಗೆ ಶಿವಣ್ಣ ಸಾಥ್* *ಬಾಲಯ್ಯ ಅಖಂಡ-2 ಟ್ರೇಲರ್ ಲಾಂಚ್...ಶಿವಣ್ಣ ಶುಭ ಹಾರೈಕೆ* ನಂದಮೂರಿ ಬಾಲಕೃಷ್ಣ ನಟನೆಯ ಬಹುನಿರೀಕ್ಷಿತ ಸಿನಿಮಾ ಅಖಂಡ-2. ಅಖಂಡ ಚಿತ್ರದ ಮುಂದುವರಿದ ಭಾಗವಾಗಿರುವ ಅಖಂಡ ಸೀಕ್ವೆಲ್ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ ಬೃಹತ್ ವೇದಿಕೆ ಹಾಕಿ ಟ್ರೇಲರ್ ರಿಲೀಸ್ ಮಾಡಲಾಯಿತು. ದೊಡ್ಡ ತಾರಾಬಳಗವೇ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಿಶೇಷ ಅತಿಥಿಯಾಗಿ ಭಾಗಿ ಬಾಲಯ್ಯ ಚಿತ್ರಕ್ಕೆ ಶುಭ ಹಾರೈಸಿದರು. ಫೈಟ್ ಮಾಸ್ಟರ್ ....
*"ಕೊರಗಜ್ಜ" ಚಿತ್ರದ ಬಗ್ಗೆ ಸಾಕ್ಷಾ ಚಿತ್ರ ಪ್ರಸಾರಮಾಡಿದ ದೂರದರ್ಶನ!* ಒಂದು ಸಿನಿಮಾದ ಬಗ್ಗೆ ದೂರದರ್ಶನ ವಾಹಿನಿಯು ಸಾಕ್ಷಾಚಿತ್ರ ನಿರ್ಮಿಸಿ ಪ್ರಸಾರ ಮಾಡಲು ಸಾಧ್ಯವೇ...? ಇಂತಹ ಪ್ರಶ್ನೆಯನ್ನು "ಕೊರಗಜ್ಜ" ಚಿತ್ರ ಸಾಧ್ಯವಾಗಿಸಿದೆ...! ಹೌದು...ಮಹಾರಾಷ್ಟ್ರ ದೂರದರ್ಶನದ ಸಹ್ಯಾದ್ರಿ ವಾಹಿನಿಯು ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ"ಸಿನಿಮಾದ ಕುರಿತು ತನ್ನ ವಾಹಿನಿಯಲ್ಲಿ ನಿನ್ನೆ ರಾತ್ರಿ 10.30 ಕ್ಕೆ ಡಾಕ್ಯುಮೆಂಟರಿ ಒಂದನ್ನು ಪ್ರಸಾರ ಮಾಡಿ ಹೊಸ ವಿಕ್ರಮ ಸ್ಥಾಪಿಸಿದೆ.ಅಲ್ಲದೆ ಇಂದು ಮರುಪ್ರಸಾರ ಸಹ ಮಾಡುತ್ತಿದೆ. ದೂರದರ್ಶನ ಪ್ರಸಾರಭಾರತಿಯ "ವೇವ್ಸ್" ಒಟಿಟಿ ಪ್ಲಾಟ್ ಫಾರ್ಮ್ ನಲ್ಲೂ ಈ ಸಾಕ್ಷ್ಯಾ ಚಿತ್ರ ಲಭ್ಯ. ಅತ್ಯಂತ ....