*ಜನವರಿ 2 ರಂದು ರೂಪ ಅಯ್ಯರ್ ನಿರ್ದೇಶನದ ’ಆಜಾದ್ ಭಾರತ್’ ಚಿತ್ರ ದೇಶದಾದ್ಯಂತ ಬಿಡುಗಡೆ* . *ಇದು ಕನ್ನಡಗರಿಂದ ನಿರ್ಮಾಣವಾಗಿರುವ ದೇಶಪ್ರೇಮ ಸಾರುವ ಹಿಂದಿ ಚಿತ್ರ* . ನಟಿಯಾಗಿ, ನಿರ್ದೇಶಕಿಯಾಗಿ ಅಷ್ಟೇ ಅಲ್ಲದೆ ಸಮಾಜಮುಖಿ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿರುವ ರೂಪ ಅಯ್ಯರ್ ನಿರ್ದೇಶನದ "ಆಜಾದ್ ಭಾರತ್" ಹಿಂದಿ ಚಿತ್ರ ಜನವರಿ 2 ರಂದು ದೇಶದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ’ನೀರಾ ಆರ್ಯ’ ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆಯನ್ನು "ಆಜಾದ್ ಭಾರತ್" ಎಂದು ಬದಲಿಸಲಾಗಿದೆ. ಈ ಚಿತ್ರವನ್ನು ನೇತಾಜಿ ಸುಭಾಷ್ ಚಂದ್ರ ....
*ಬಿಡುಗಡೆಯಾಯಿತು ನವೀನ್ ಸಜ್ಜು ಅಭಿನಯದ "ಲೋ ನವೀನ" ಚಿತ್ರದ "ಕೋಣಾಣೆ" ಹಾಡು* . *ಜನಪದ ಸೊಗಡಿನ ಈ ಗೀತೆಗೆ ತಲೆದೂಗುತ್ತಿದೆ ಕರುನಾಡು* . ಗಾಯಕನಾಗಿ ಕನ್ನಡಿಗರ ಮನ ಗೆದ್ದಿರುವ ನವೀನ್ ಸಜ್ಜು ನಾಯಕನಾಗಿ ನಟಿಸಿರುವ ಮೊದಲ ಚಿತ್ರ "ಲೋ ನವೀನ". ಇತ್ತೀಚೆಗೆ ಈ ಚಿತ್ರದ "ಕೋಣಾಣೆ" ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮಾಜಿ ಶಾಸಕರಾದ ಎ.ಮಂಜು, ಪುಟ್ಟರಾಜು, ಅಮರನಾಥ ಗೌಡ, ವಿಶ್ವಾಮಿತ್ರ, ಜಿ.ಟಿ.ಮಾಲ್ ನ ಆನಂದ್, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, ಹಾಡು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಅಪ್ಪಟ ಜನಪದ ಶೈಲಿಯ ಈ ಹಾಡನ್ನು ಮೈಸೂರಿನ ....
*ಮೂಷಿಕವಾಹನನ ಸನ್ನಿಧಿಯಲ್ಲಿ ಆರಂಭವಾಯಿತು "ಮುಜುಗರ"* . *ಈ ಚಿತ್ರದ ಮೂಲಕ ಕಲಾತಪಸ್ವಿ ರಾಜೇಶ್ ಅವರ ಮೊಮ್ಮಗ ಸಾಯಿನಂದ್ ನಾಯಕನಾಗಿ ಪದಾರ್ಪಣೆ* . ತಮ್ಮ ಜನಪ್ರಿಯ ನಟನೆಯ ಮೂಲಕ ಕನ್ನಡಿಗರ ಜನಮನಸೂರೆಗೊಂಡಿದ್ದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಅವರ ಮೊಮ್ಮಗ ಸಾಯಿನಂದ್ "ಮುಜುಗರ" ಚಿತ್ರದ ಮೂಲಕ ನಾಯಕನಾಗಿ ಚಂದನವನಕ್ಕೆ ಅಡಿಯಿಟ್ಟಿದ್ದಾರೆ. ಶಾಂತ ಶ್ರೀನಿವಾಸ್ ಡಿ ನಿರ್ಮಿಸುತ್ತಿರುವ ಈ ಚಿತ್ರವನ್ನು ತರುಣ್ ಎನ್ (ಜ್ಯೋತಿಪ್ರಿಯ) ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನೆಟ್ಟಕಲ್ಲಪ್ಪ ಸರ್ಕಲ್ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ....
*ಬದುಕು ಒಂಥರ ಟ್ರಾಫಿಕ್ ಸಿಗ್ನಲ್ ಇದ್ದಂತೆ* ವಿಭಿನ್ನ ಶೀರ್ಷಿಕೆ *ಕೆಂಪು ಹಳದಿ ಹಸಿರು* ಚಿತ್ರದ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಸಮಾರಂಭವು ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. *ಸನ್ರೈಸ್ ಎಂಟರ್ಟೈನ್ಮೆಂಟ್ ಅಂಡ್ ಫಿಲಂಸ್ ಬ್ಯಾನರ್ ಮೂಲಕ ಪ್ರಸಾದ್ಕುಮಾರ್ ನಾಯ್ಕ್ ಬಂಡವಾಳ* ಹೂಡುತ್ತಿರುವುದು ಮೂರನೇ ಅನುಭವ. ಒಂದು ತುಳು ಸಿನಿಮಾಗಳನ್ನು ನಿರ್ದೇಶನ ಮಾಡಿರುವ *ಮಣಿ.ಎಜೆ.ಕಾರ್ತಿಕೇಯನ್ ಮೊದಲ ಬಾರಿ ಕನ್ನಡ ಸಿನಿಮಾಕ್ಕೆ ಆಕ್ಷನ್ ಕಟ್* ಹೇಳಿದ್ದಾರೆ. ’ಸ್ಟಾಪ್, ಥಿಂಕ್ ಅಂಡ್ ಪ್ರೊಸೀಡ್ ಇನ್ ಲೈಫ್’ ಎಂಬ ಅರ್ಥಪೂರ್ಣ ಅಡಿಬರಹ ಇರಲಿದೆ. ಬಾಲಾಜಿ ಫಿಲಂ ವರ್ಕ್ಸ್ ಅಡಿಯಲ್ಲಿ ಪ್ರಸಾದ್ ಈರ್ಲಾ ಮತ್ತು ಹರೀಶ್ ಧಾಸ್ಮಾನ ಸಹ ....
*ನಾಗಸಾಧುಗಳ ಸಮ್ಮುಖದಲ್ಲಿ ಮಣಿಕಂಠ ಮುಹೂರ್ತ* ಸ್ವಾಮಿ ಶರಣಂ ಅಯ್ಯಪ್ಪನ ಕುರಿತಾದ ಚಿತ್ರವು ಮೂರು ದಶಕಗಳ ನಂತರ *ಮಣಿಕಂಠ* ಹೆಸರಿನಲ್ಲಿ ಸಿನಿಮಾವೊಂದು ಸಿದ್ದಗೊಳ್ಳುತ್ತಿದೆ. ನವೆಂಬರ್-ಡಿಸೆಂಬರ್ ಅಂದರೆ ಸ್ವಾಮಿ ದರ್ಶನಕ್ಕೆ ಮಾಲಾಧಾರಿಯಾಗಿ ಹೋಗುವುದುಂಟು. ಈ ಹಿನ್ನಲೆಯಲ್ಲಿ ಮಹಾಲಕ್ಷೀಪುರಂನ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ದೇವಸ್ಥಾನದಲ್ಲಿ ಭಕ್ತರು ತುಂಬಿಕೊಂಡಿದ್ದರು. ಇದರ ನಡುವೆ ’ಮಣಿಕಂಠ’ ಮುಹೂರ್ತ ನಡೆಯಿತು. ತಂಡಕ್ಕೆ ಶುಭ ಹಾರೈಸಲು ಕಾಶಿಯಿಂದ ಸಾಕ್ಷಾತ್ ಎಂಟು ನಾಗಸಾಧುಗಳು ಆಗಮಿಸಿದ್ದು ವಿಶೇಷವಾಗಿತ್ತು. ಅವರ ಸಮ್ಮುಖದಲ್ಲಿ ಶುಭಕಾರ್ಯ ಯಶಸ್ವಿಯಾಗಿ ನಡೆಯಿತು. ಅಶ್ವಿನಿ ಪ್ರೊಡಕ್ಷನ್ಸ್ ಅಡಿಯಲ್ಲಿ ....
*ಗವಿ ಗಂಗಾಧರೇಶ್ವರ ಸನ್ನಿಧಿಯಲ್ಲಿ "ದಿ ರೈಸ್ ಆಫ್ ಅಶೋಕ" ಸಿನಿಮಾದ ಸಾಂಗ್ ಅನಾವರಣ* *ಏಳೋ ಏಳೋ ಮಾದೇವ..ಇದು ಸತೀಶ್ ನೀನಾಸಂ ಶಿವ ಪರಾಕಾಷ್ಠೆ* *ದಿ ರೈಸ್ ಆಫ್ ಅಶೋಕ ಸಿನಿಮಾದ ಮೊದಲ ಹಾಡು ರಿಲೀಸ್..ಮಾದೇವನ ಪರಾಕಾಷ್ಠೆಯಲ್ಲಿ ಸತೀಶ್ ನೀನಾಸಂ* ಅಭಿನಯ ಚತುರ ಸತೀಶ್ ನೀನಾಸಂ ಅವರ ಭತ್ತಳಿಕೆಯಿಂದ ಬರ್ತಿರುವ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ. ಟೈಟಲ್ ಹಾಗೂ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಗರಿಗೆದರುವಂತೆ ಮಾಡಿರುವ ಈ ಚಿತ್ರದ ಮೊದಲ ಹಾಡು ಅನಾವರಣಗೊಂಡಿದೆ. ಮಾದೇವನ ಕುರಿತ ಹಾಡನ್ನು ಬೆಂಗಳೂರಿನ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಸ್ವತಃ ಸತೀಶ್ ಏಳೋ ಏಳೋ ಮಹಾದೇವ ಗೀತೆ ....
*"ಕೊರಗಜ್ಜ" ಚಿತ್ರದ ಗುಳಿಗಾ...ಗುಳಿಗಾ...ಹಾಡಿನಿಂದ ’ಗುಳಿಗ ದೈವ’ಕ್ಕೆ ಸಂತೋಷ-ಪ್ರಶ್ನೆ ಇಟ್ಟಾಗ ಜ್ಯೋತಿಷ್ಯದಲ್ಲಿ ಕಂಡು ಬಂದ ಸತ್ಯ* ಇತ್ತೀಚೆಗೆ ಜೀ಼ ಮ್ಯೂಜಿಕ್ ಮೊತ್ತಮೊದಲ ಬಾರಿಗೆ ಕನ್ನಡದಲ್ಲಿ ಬಿಡುಗಡೆ ಗೊಳಿಸಿದ "ಕೊರಗಜ್ಜ" ಚಿತ್ರದ, ಜಾವೆದ್ ಆಲಿ ಮತ್ತು ಸುಧೀರ್ ಅತ್ತಾವರ್ ಹಾಡಿರುವ,ಗೋಪಿ ಸುಂದರ್ ಸಂಗೀತ ಮತ್ತು ಸುಧೀರ್ ಅತ್ತಾವರ್ ಸಾಹಿತ್ಯದ ಗುಳಿಗಾ...ಗುಳಿಗಾ...ಹಾಡಿನ ಅಬ್ಬರ ದೇಶದೆಲ್ಲೆಡೆ ಹಬ್ಬಿ ಹವಾ ಎಬ್ಬಿಸುತ್ತಿರುವಂತೆಯೇ, ಭಯಂಕರ ಉಗ್ರ ರೂಪದ ಕಾರಣಿಕದ "ಗುಳಿಗದೈವ" ಈ ಹಾಡಿನಿಂದ ಕ್ರೋಧ ಗೊಂಡಿರಬಹುದೇ ಅಥವ ದೈವಕ್ಕೆ ಅಪಚಾರಾಗಿರಬಹುದೇ ಎಂಬ ಎಂಬ ಸಂಶಯದಿಂದ ಇಂದು ನಿರ್ದೇಶಕ ಸುಧೀರ್ ಅತ್ತಾವರ್ ರವರು ಕೇರಳದ ತ್ರಿಶೂರ್ ....
*ಚೋಮನದುಡಿ ರೂಪಾಂತರ* ಜ್ಘಾನಪೀಠ ಪ್ರಶಸ್ತಿ ವಿಜೇತ ಡಾ.ಶಿವರಾಮಕಾರಂತರ ಕೃತಿ ’ಚೋಮನದುಡಿ’ ಚಿತ್ರವಾಗಿ ಮೂಡಿಬಂದು ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿತ್ತು. ಕಟ್ ಮಾಡಿದರೆ ಬರೋಬ್ಬರಿ ಐವತ್ತು ವರ್ಷಗಳ ನಂತರ ಇದೇ ಸಿನಿಮಾ ನೆನಪಿಸುವ *ಬಿಚ್ಚುಗತ್ತಿಯ ಬಂಟನ ಬಲ್ಲರೇನ* ಚಿತ್ರವೊಂದು ತೆರೆಗೆ ಬರಲು ಅಣಿಯಾಗಿದೆ. ’ದುಡಿಯ ಸದ್ದಿಗೆ ಕ್ರಾಂತಿಯ ಎದ್ದಿದೆ’ ಎಂಬ ತೂಕದ ಅಡಿಬರಹ ಇರಲಿದೆ. ದೋರಸಮುದ್ರ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ *ಅನಿಲ್ ದೋರಸಮುದ್ರ ನಿರ್ದೇಶನ ಹಾಗೂ ಬಂಡವಾಳ* ಹೂಡಿದ್ದಾರೆ. ಸಹೋದರ *ನವೀನ್ ಸಿಂಬಾವಿ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ*. ಪ್ರಚಾರದ ಕೊನೆ ಹಂತವಾಗಿ ಟ್ರೇಲರ್ ಹಾಗೂ ....
ಜಾತಿ, ಧರ್ಮದ ಹಿನ್ನೆಲೆಯ ಕಥನ " ಧರ್ಮಂ" ಚಿತ್ರದ ಟ್ರೈಲರ್ ಬಿಡುಗಡೆ "ಜಾತಿಯಲ್ಲಿ ಹಿಂದುಳಿಯುದಲ್ಲ.. ಜೀವನದಲ್ಲಿ ಮುಂದೆ ಬರದಂತೆ ನೋಡಿಕೊಳ್ಳಬೇಕು.. ಇಲ್ಲಿ ನ್ಯಾಯ ನೀತಿ ಧರ್ಮಕ್ಕೆ ಬೆಲೆ ಇಲ್ಲ..." ಅವ್ನಾ ಉಸಿರಾಡೋಕೆ ಬಿಟ್ಟರೆ ನಮಗೇ ತೊಂದರೆ.." ಧರ್ಮ ಉಳಿಬೇಕಂದ್ರೆ ..ನಿನ್ನ ಜಾತಿ ಸಾಯಬೇಕು.." ಹಳ್ಳಿಯ ಹಿನ್ನೆಲೆಯಲ್ಲಿ ರಗಡ್ ಲುಕ್ ನಲ್ಲಿರುವ " ಧರ್ಮಂ " ಚಿತ್ರದ ಖಡಕ್ ಸಂಭಾಷಣೆ ಇರುವ ಟ್ರೈಲರ್ ನಲ್ಲಿ ಶೋಷಣೆ ,ದಬ್ಬಾಳಿಕೆ, ಸೇರಿದಂತೆ ಆಕ್ಷನ್ ಸನ್ನಿವೇಶ ಹದಗೊಳಿಸಿ ಚಿತ್ರವನ್ನು ತೆರೆಗೆ ಕಟ್ಟಿಕೊಡಲಾಗಿದ್ದು ಡಿಸೆಂಬರ್ 5 ರಂದು ಚಿತ್ರ ತೆರೆಗೆ ಬರಲಿದ್ದು ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಕೆರಳಿಸಿದೆ. "ಧರ್ಮಂ " ....
*ಟ್ರೇಲರ್ ನಲ್ಲೇ ಗಮನ ಸೆಳೆದ ದೀಕ್ಷಿತ್ ಶೆಟ್ಟಿ ಅಭಿನಯದ "ಬ್ಯಾಂಕ್ of ಭಾಗ್ಯಲಕ್ಷ್ಮಿ".* . *ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಟ್ರೇಲರ್ ಅನಾವರಣ* . *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ನವೆಂಬರ್ 21 ರಂದು ತೆರೆಗೆ* . ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್ ನಿರ್ಮಾಣದ, "ದಿಯಾ", "ಬ್ಲಿಂಕ್" ಸೇರಿದಂತೆ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ನಾಯಕರಾಗಿ ಮತ್ತು ಬೃಂದಾ ಆಚಾರ್ಯ ನಾಯಕಿಯಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ "ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ" ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ....
*ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಂದ ಗೀತಪ್ರಿಯ ಅಭಿನಯದ ’ಅಪರಿಚಿತೆ’ ಚಿತ್ರದ ಟ್ರೇಲರ್ ಅನಾವರಣ* . ಈ ಮೊದಲು ’ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆ ಚಿತ್ರದ ಹೆಸರು ’ಅಪರಿಚಿತೆ’. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಅನಾವರಣ ಸಮಾರಂಭ ನಗರದ ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಮಾಜಿ ಮುಖ್ಯಮಂತ್ರಿ, ಮಾಜಿ ಬಿ.ಜೆ.ಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಟ್ರೇಲರ್ ಅನಾವರಣ ಮಾಡಿದರು. ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದ ಗೌಡ ಹಾಗೂ ನಟಿ ತಾರಾ ಅನುರಾಧ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಟಿ ತಾರಾ ....
*ಚಿಂತಾಮಣಿಯಲ್ಲಿ ಅದ್ಧೂರಿಯಾಗಿ ಜರುಗಿದ ಅಖಂಡ-2 ಟ್ರೇಲರ್ ಲಾಂಚ್ ಕಾರ್ಯಕ್ರಮ..ಬಾಲಯ್ಯ ಸಿನಿಮಾಗೆ ಶಿವಣ್ಣ ಸಾಥ್* *ಬಾಲಯ್ಯ ಅಖಂಡ-2 ಟ್ರೇಲರ್ ಲಾಂಚ್...ಶಿವಣ್ಣ ಶುಭ ಹಾರೈಕೆ* ನಂದಮೂರಿ ಬಾಲಕೃಷ್ಣ ನಟನೆಯ ಬಹುನಿರೀಕ್ಷಿತ ಸಿನಿಮಾ ಅಖಂಡ-2. ಅಖಂಡ ಚಿತ್ರದ ಮುಂದುವರಿದ ಭಾಗವಾಗಿರುವ ಅಖಂಡ ಸೀಕ್ವೆಲ್ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ ಬೃಹತ್ ವೇದಿಕೆ ಹಾಕಿ ಟ್ರೇಲರ್ ರಿಲೀಸ್ ಮಾಡಲಾಯಿತು. ದೊಡ್ಡ ತಾರಾಬಳಗವೇ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಿಶೇಷ ಅತಿಥಿಯಾಗಿ ಭಾಗಿ ಬಾಲಯ್ಯ ಚಿತ್ರಕ್ಕೆ ಶುಭ ಹಾರೈಸಿದರು. ಫೈಟ್ ಮಾಸ್ಟರ್ ....
*"ಕೊರಗಜ್ಜ" ಚಿತ್ರದ ಬಗ್ಗೆ ಸಾಕ್ಷಾ ಚಿತ್ರ ಪ್ರಸಾರಮಾಡಿದ ದೂರದರ್ಶನ!* ಒಂದು ಸಿನಿಮಾದ ಬಗ್ಗೆ ದೂರದರ್ಶನ ವಾಹಿನಿಯು ಸಾಕ್ಷಾಚಿತ್ರ ನಿರ್ಮಿಸಿ ಪ್ರಸಾರ ಮಾಡಲು ಸಾಧ್ಯವೇ...? ಇಂತಹ ಪ್ರಶ್ನೆಯನ್ನು "ಕೊರಗಜ್ಜ" ಚಿತ್ರ ಸಾಧ್ಯವಾಗಿಸಿದೆ...! ಹೌದು...ಮಹಾರಾಷ್ಟ್ರ ದೂರದರ್ಶನದ ಸಹ್ಯಾದ್ರಿ ವಾಹಿನಿಯು ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ"ಸಿನಿಮಾದ ಕುರಿತು ತನ್ನ ವಾಹಿನಿಯಲ್ಲಿ ನಿನ್ನೆ ರಾತ್ರಿ 10.30 ಕ್ಕೆ ಡಾಕ್ಯುಮೆಂಟರಿ ಒಂದನ್ನು ಪ್ರಸಾರ ಮಾಡಿ ಹೊಸ ವಿಕ್ರಮ ಸ್ಥಾಪಿಸಿದೆ.ಅಲ್ಲದೆ ಇಂದು ಮರುಪ್ರಸಾರ ಸಹ ಮಾಡುತ್ತಿದೆ. ದೂರದರ್ಶನ ಪ್ರಸಾರಭಾರತಿಯ "ವೇವ್ಸ್" ಒಟಿಟಿ ಪ್ಲಾಟ್ ಫಾರ್ಮ್ ನಲ್ಲೂ ಈ ಸಾಕ್ಷ್ಯಾ ಚಿತ್ರ ಲಭ್ಯ. ಅತ್ಯಂತ ....
*RED & WHITE ಸೆವೆನ್ ರಾಜ್ ನಿರ್ಮಾಣದ ಹಾಗೂ ಅಫ್ಜಲ್ ನಿರ್ದೇಶನದ "ನೆನಪುಗಳ ಮಾತು ಮಧುರ" ಚಿತ್ರ ತೆರೆಗೆ ಬರಲು ಸಿದ್ದ* . *ನಿರ್ಮಾಪಕರ ಹುಟ್ಟುಹಬ್ಬದಂದೆ ಚಿತ್ರದ ಟ್ರೇಲರ್ ಅನಾವರಣ* . ಪತ್ರಕರ್ತ, ಕಾರ್ಯಕಾರಿ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನೃತ್ಯ ನಿರ್ದೇಶನದ ಜೊತೆಗೆ ನಿರ್ದೇಶನವನ್ನು ಮಾಡಿರುವ ಹಾಗೂ RED & WHITE ಸೆವೆನ್ ರಾಜ್ ನಟಿಸಿ, ನಿರ್ಮಿಸಿರುವ "ನೆನಪುಗಳ ಮಾತು ಮಧುರ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಟ್ರೇಲರ್ ಅನಾವರಣ ಮಾಡಿ ಶುಭ ಕೋರಿದರು. ನವಶಕ್ತಿ ನಾಗರಾಜ್, ಮಹೇಂದರ್, ಲೋಕೇಂದ್ರ, ಮುನಿಕೃಷ್ಣ ....
*ಭಯೋತ್ಪಾದನೆಯ ವಿರುದ್ಧ ಸಮರ. ಅದುವೇ "ರಕ್ತಕಾಶ್ಮೀರ"* . *ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಸಿನಿಮಾ ಸದ್ಯದಲ್ಲೇ ತೆರೆಗೆ.* . *ಹದಿನೆಂಟು ನಿಮಿಷಗಳ ಒಂದು ಹಾಡಿನಲ್ಲಿ ಹದಿನೈದು ಜನ ನಾಯಕರು ಇದು ಈ ಚಿತ್ರದ ವಿಶೇಷತೆ* . MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವೃತ್ತಿಜೀವನದಲ್ಲಿ ಐವತ್ತು ವರ್ಷಗಳನ್ನು ಪೂರೈಸಿರುವ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ - ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ "ರಕ್ತ ಕಾಶ್ಮೀರ" ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ ಈ ಕುರಿತು ಮಾಹಿತಿ ನೀಡಲು ನಿರ್ದೇಶಕರು ಪತ್ರಿಕಾಗೋಷ್ಠಿ ಆಯೋಜಿಸಿದ್ದರು. ....
*"ಚಿತ್ರಲಹರಿ" ಚಿತ್ರದ "ಟೀಸರ್" ಹಾಗೂ "ಹಾಡುಗಳು" ಚಿತ್ರರಂಗದ ಗಣ್ಯರಿಂದ ಅನಾವರಣ.* ಕೇಸರಿ ನಂದನ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನವನೀತ ಲಕ್ಷ್ಮೀ ಅವರು ನಿರ್ಮಿಸಿರುವ ಹಾಗೂ ಕೆ.ಆರ್ ಸುರೇಶ್ ನಿರ್ದೇಶನದ " ಚಿತ್ರಲಹರಿ" ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಟೀಸರ್ ಅನ್ನು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ ಅವರು ಹಾಗೂ ಹಾಡುಗಳನ್ನು ಹಿರಿಯ ನಿರ್ದೇಶಕ ಪುರುಷೋತ್ತಮ್ ಬಿಡುಗಡೆ ಮಾಡಿದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ನಿರ್ದೇಶಕರು ಸಂಭಾಷಣೆ ಇಲ್ಲದೆ ಟೀಸರ್ ಸಿದ್ದ ಮಾಡಿದ್ದಾರೆ. ಇದು ಬಹಳ ನನಗೆ ಬಹಳ ಹಿಡಿಸಿತು. ಚಿತ್ರ ....
*ಝೀ ಮ್ಯೂಜಿಕ್ ನಿಂದ* *"ಕೊರಗಜ್ಜ" ಚಿತ್ರದ "ಗುಳಿಗ...ಗುಳಿಗ..."ಹಾಡಿನ ಭೋರ್ಗರೆತ....ಅಬ್ಬರ... ಇಂದಿನಿಂದ!!* ಜೀ಼ ಮ್ಯೂಜಿಕ್ ಇಂದಿನಿಂದ , ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿಯ ಅತ್ಯಂತ ನಿರೀಕ್ಷೆಯ "ಕೊರಗಜ್ಜ" ಚಿತ್ರದಲ್ಲಿ ಮೂಡಿ ಬರುವ ಕರಾವಳಿಯ ಉಗ್ರಭಯಂಕರ,ರಕ್ತ ದಾಹದ ದೈವ "ಗುಳಿಗ" ನ ಕುರಿತಾದ ಹಾಡನ್ನು ಜನಮನ್ನಣೆಯ "ಮರಳಿ ಮರೆಯಾಗಿ..." ಯಂತಹ ಗೀತೆಯ ಸಾಹಿತಿ- ನಿರ್ದೇಶಕ,ಸುಧೀರ್ ಅತ್ತಾವರ್ ರವರೇ ಬರೆದಿರುವ "ಗುಳಿಗ.,.ಗುಳಿಗ...ಗುಳಿಗ...ಗುಳಿಗ...ಗುಳಿಗ...ಗುಳಿಗ...ಘೋರ ಗುಳಿಗಾ...!" ಎನ್ನುವ ರ್ ಯಾಪ್ ಮಿಶ್ರಿತ ಹಾಡು ಇಂದು ಎಲ್ಲೆಡೆ ಭೋರ್ಗರೆಯಲಿದೆ...! ದಕ್ಷಿಣ ಭಾರತದ ಖ್ಯಾತ ಸಂಗೀತಗಾರ ....
ಮಕ್ಕಳ ರಕ್ಷಣೆಗೆ ಪೋಷಕರ 'ರುದ್ರ ಅವತಾರ’ ಪಾತ್ರ ಪರಿಚಯಿಸುವ ಮೋಷನ್ ಪೋಸ್ಟರ್ ಸುಪ್ರೀಂ ಹೀರೋ ಶಶಿಕುಮಾರ್ -ತಾರಾ ಜೋಡಿಯ 26ನೇ ಚಿತ್ರ . ಸವಾದ್ ಮಂಗಳೂರು ನಿರ್ದೇಶನದ ರುದ್ರ ಅವತಾರ ಚಿತ್ರದ ಮೂಲಕ ಹಿರಿಯನಟ ಶಶಿಕುಮಾರ್ ಅವರು ಬಹಳ ದಿನಗಳ ಬಳಿಕ ಚಿತ್ರರಂಗಕ್ಕೆ ಮರಳಿದ್ದಾರೆ, ರುದ್ರ ಅವತಾರ ಚಿತ್ರದಲ್ಲಿ ಅವರು ಒಬ್ಬ ಜವಾಬ್ದಾರಿಯುತ ತಂದೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸವಾದ್ ಮಂಗಳೂರು ಈ ಚಿತ್ರದ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದು, ಪ್ರೇಮ್ ಜಿ ಪ್ರೊಡಕ್ಷನ್ಸ್ ಮೂಲಕ ದಾಂಡೇಲಿಯ ಉದ್ಯಮಿ ಡಾ.ಪ್ರೇಮಾನಂದ್ ವಿ ಗವಸ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ....
*'ಆಂಧ್ರ ಕಿಂಗ್ ತಾಲೂಕ’ ಟ್ರೇಲರ್ ರಿಲೀಸ್..ಸೂಪರ್ ಸ್ಟಾರ್ ಸೂರ್ಯ ಕುಮಾರ್ ಆಗಿ ಉಪೇಂದ್ರ ಮಿಂಚು* *ಬೆಂಗಳೂರಿನಲ್ಲಿ ಆಂಧ್ರ ಕಿಂಗ್ ತಾಲೂಕ ಪ್ರಚಾರ..ಟ್ರೇಲರ್ ಬಿಡುಗಡೆ ಮಾಡಿದ ಚಿತ್ರತಂಡ* ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ನಟಿಸಿರುವ ತೆಲುಗು ಸಿನಿಮಾ ‘ಆಂಧ್ರ ಕಿಂಗ್ ತಾಲೂಕ’ ಟ್ರೈಲರ್ ಬಿಡುಗಡೆ ಆಗಿದೆ. ನಿನ್ನೆ ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಟ್ರೇಲರ್ ರಿಲೀಸ್ ಕಾರ್ಯಕ್ರಮ ನಡೆಯಿತು. ಸಿನಿಮಾನಲ್ಲಿ ತೆಲುಗು ನಟ ರಾಮ್ ಪೋತಿನೇನಿ ಮತ್ತು ಉಪೇಂದ್ರ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಭಾಗ್ಯಶ್ರೀ ಬೋರ್ಸೆ ಸಾಥ್ ಕೊಟ್ಟಿದ್ದಾರೆ. ಉಪೇಂದ್ರ ಮಾತನಾಡಿ, ಎಲ್ಲಾ ಸಿನಿಮಾ ಮಾಡೋದಿಕ್ಕೆ ಒಂದೊಂದು ಕಾರಣ ....
*"Congratulations ಬ್ರದರ್" ತಂಡಕ್ಕೆ ಶುಭ ಹಾರೈಸಿದ ಡಾರ್ಲಿಂಗ್ ಕೃಷ್ಣ* . *ಹೊಸತಂಡದ ಹೊಸಪ್ರಯತ್ನ ನವೆಂಬರ್ 21ಕ್ಕೆ ತೆರೆಗೆ* . ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ "Congratulations ಬ್ರದರ್". ಈಗ ಈ ಜನಪ್ರಿಯ ಡೈಲಾಗ್ ಸಿನಿಮಾ ಶೀರ್ಷಿಕೆಯಾಗಿರುವುದು ಎಲ್ಲರಿಗೂ ತಿಳಿದ ಸಂಗತಿ. ಕಲ್ಲೂರ್ ಸಿನಿಮಾಸ್, ಪೆನ್ ಎನ್ ಪೇಪರ್ ಸ್ಟುಡಿಯೋಸ್ ಹಾಗೂ ಸ್ಕ್ರೀನ್ ಫಸ್ಟ್ ಪ್ರೊಡಕ್ಷನ್ ಲಾಂಛನದಲ್ಲಿ ಪ್ರಶಾಂತ್ ಕಲ್ಲೂರ್ ಅವರು ನಿರ್ಮಿಸಿರುವ, ಪ್ರತಾಪ್ ಗಂಧರ್ವ ನಿರ್ದೇಶನದ, ಹೆಸರಾಂತ ನಿರ್ದೇಶಕ ಹರಿ ಸಂತೋಷ್ ಕಥೆ ಬರೆದು ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಿರುವ ಹಾಗೂ ಯುವ ನಟ ರಕ್ಷಿತ್ ನಾಗ್ ನಾಯಕನಾಗಿ ಹಾಗೂ ಸಂಜನ್ ದಾಸ್ ....