Abhay Veer.Film News

Friday, June 18, 2021

 

*ದರ್ಶನ್ ಅನುಸರಿಸಿದ ನಟ ಅಭಯ್ ವೀರ್*

 

ವನ್ಯಜೀವಿಗಳ ಮೇಲೆ ಅಪಾರ ಕಾಳಜಿ ಹೊಂದಿರುವ  ಚಾಲೆಂಜಿಂಗ್ ಸ್ಟಾರ್ ದರ್ಶನ್  ಅವರು  ಕೊರೋನಾ ಸಂದರ್ಭದಲ್ಲಿ‌  ಆಹಾರ ಕೊರತೆ ಎದುರಿಸುತ್ತಿರುವ  ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಪ್ರಾಣಿಸಂತತಿ ಉಳಿಸಿ ಎಂದು ಕರೆ ಕೊಟ್ಟಿದ್ದರು.  ಈಗ ಉತ್ತರ ಕರ್ನಾಟಕದ ಯುವಪ್ರತಿಭೆ ಅಭಯ್‌ವೀರ್  ಅವರು ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ  ನಿಸರ್ಗ ಧಾಮದಿಂದ ಅರ್ಜುನ ಎಂಬ ಚಿರತೆಯನ್ನು ಒಂದು

ವರ್ಷದ ‌ ‌‌‌‌ಅವಧಿಗೆ ದತ್ತು ಪಡೆಯುವ  ಮೂಲಕ ದರ್ಶನ್ ರನ್ನು ಅನುಸರಿಸಿದ್ದಾರೆ.

435

Read More...

Film Dir Mansore Engagement.News

Sunday, July 04, 2021

ಜುಲೈ 04, ಬೆಂಗಳೂರು.‌

 

ಹರಿವು, ನಾತಿಚರಾಮಿ ಮತ್ತು ಆಕ್ಟ್-1978 ಚಿತ್ರಗಳ ನಿರ್ದೇಶಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ ’ಮಂಸೋರೆ’ ಅವರು ಇಂದು ಬೆಂಗಳೂರಿನಲ್ಲಿ ’ಅಖಿಲಾ’ ಅವರೊಂದಿಗೆ ನಿಶ್ಚಿತಾರ್ಥವಾಗಿ ಉಂಗುರ ಬದಲಾಯಿಸಿಕೊಂಡಿದ್ದಾರೆ. ಕೋವಿಡ್ ಕಾರಣದಿಂದಾಗಿ ಹೆಚ್ಚು ಜನರನ್ನು ಆಹ್ವಾನಿಸದೇ, ಕುಟುಂಬದವರು ಹಾಗೂ ಕೆಲವು ಗೆಳೆಯರ ಸಮಕ್ಷಮದಲ್ಲಿ ನಿಶ್ಚಿತಾರ್ಥ ನಡೆದಿದ್ದು, ಮದುವೆಗೆ ಆಗಸ್ಟ್ 15ನೇ ತಾರೀಖು ದಿನಾಂಕ ನಿಗದಿ ಆಗಿದೆ. ಮಂಸೋರೆ ಅವರ ವೃತ್ತಿಜೀವನದಲ್ಲಿ ಮಾಧ್ಯಮ ಮಿತ್ರರು ಹಾಗೂ ಚಿತ್ರರಂಗದ ಹಲವಾರು ಸ್ನೇಹಿತರು ಭಾಗಿಯಾಗಿರುವುದರಿಂದ, ಮಾಧ್ಯಮಗಳ ಮೂಲಕವೇ ಅವರೆಲ್ಲರಿಗೂ ತಮ್ಮ ಮದುವೆ ನಿಶ್ಚಯವಾಗಿರುವ ಶುಭಸುದ್ದಿಯನ್ನು ಹಂಚಿಕೊಳ್ಳುತ್ತಿದ್ದಾರೆ.  

354

Read More...

Mafia.Film News

Saturday, July 03, 2021

 

ಪ್ರಜ್ವಲ್ ದೇವರಾಜ್ ಅಭಿನಯದ  35ನೇ ಚಿತ್ರ "ಮಾಫಿಯಾ".

ಹುಟ್ಟುಹಬ್ಬದ ದಿನದಂದೇ ಬಿಡುಗಡೆಯಾಯಿತು ಚಿತ್ರದ ಫಸ್ಟ್ ಲುಕ್.

 

 ಗುರುದತ್ ಗಾಣಿಗ ನಿರ್ದೇಶನದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್  ದೇವರಾಜ್   ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರಕ್ಕೆ "ಮಾಫಿಯಾ" ಎಂದು ಹೆಸರಿಡಲಾಗಿದೆ.

ಜುಲೈ 4 ಪ್ರಜ್ವಲ್ ಅವರ ಹುಟ್ಟುಹಬ್ಬದ ಪ್ರಯುಕ್ತ ಶೀರ್ಷಿಕೆ ಅನಾವರಣ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಯಿತು.

341

Read More...

Kalachakra.Film News

Friday, July 02, 2021

  ನ್ಯೂಯಾರ್ಕ್ - ಪ್ಯಾರಿಸ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿ ಗೆಲ್ಲುವತ್ತ "ಕಾಲಚಕ್ರ" ದಾಪುಗಾಲು.   ಪಶ್ಚಿಮ ಬಂಗಾಳದ ಟ್ಯಾಗೂರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ಜ್ಯೂರಿ ಪ್ರಶಸ್ತಿ.     ವಸಿಷ್ಠ ಎನ್ ಸಿಂಹ ನಾಯಕರಾಗಿ ಅಭಿನಯಿಸಿರುವ ’ಕಾಲಚಕ್ರ’ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.  ಅದಕ್ಕೂ ಮುನ್ನ ಪಶ್ಚಿಮ ಬಂಗಾಳದ ಟ್ಯಾಗೂರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು,  ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿದೆ.  ನ್ಯೂಯಾರ್ಕ್, ಪ್ಯಾರಿಸ್  ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ ಈ ಚಿತ್ರ ಆಯ್ಕೆಯಾಗಿದ್ದು, ಸದ್ಯದಲ್ಲೇ ಪ್ರದರ್ಶನವಾಗಲಿದೆ. ನ್ಯೂಯಾರ್ಕ್ ಅಂತಾರಾಷ್ಟ್ರೀಯ ....

320

Read More...

Dr.Kamini Rao.EXCELLENCE AWARDS.News

Friday, July 02, 2021

  ಪ್ರತಿಭಾವಂತ ಮಕ್ಕಳಿಗೆ ಡಾ. ಕಾಮಿನಿ ರಾವ್ ಕೇರ್ಸ್ ಎಕ್ಸ್​​ಲೆನ್ಸ್ ಅವಾರ್ಡ್ಸ್​ ಮೂಲಕ ಶಿಷ್ಯವೇತನ.   ಹುಟ್ಟುಹಬ್ಬದ ದಿನ ಉತ್ತಮ ಕಾರ್ಯಕ್ಕೆ ಚಾಲನೆ ನೀಡಿದ ಖ್ಯಾತ ವೈದ್ಯೆ.   ಸದ್ಯದಲ್ಲೇ ಚಲನಚಿತ್ರಗಳ ನಿರ್ಮಾಣಕ್ಕೂ ಚಾಲನೆ.   ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಪದ್ಮಶ್ರೀ ಪುರಸ್ಕೃತೆ ಡಾ. ಕಾಮಿನಿ ರಾವ್ ಈಗಾಗಲೇ ಮನರಂಜನಾ ಕ್ಷೇತ್ರಕ್ಕೂ ಪದಾರ್ಪಣೆ ಮಾಡಿದ್ದಾರೆ. ಇದೀಗ ಇವೆರಡೂ ಕ್ಷೇತ್ರಗಳ ಜತೆಗೆ ಶಿಕ್ಷಣ ಕ್ಷೇತ್ರದ ಕಡೆಗೂ ಮುಖ ಮಾಡಿದ್ದಾರೆ. ಅಂದರೆ, ಕಾಮಿನಿ ಕೇರ್ಸ್​ ಎಕ್ಸ್​ಲೆನ್ಸ್ ಅವಾರ್ಡ್ಸ್​ ಹೆಸರಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲು ನಿರ್ಧರಿಸಿದ್ದಾರೆ. ಈ ವಿಚಾರವನ್ನು ಹೇಳಿಕೊಳ್ಳಬೇಕೆಂಬ ....

339

Read More...

Kapo Kalitam.Film Press Meet

Friday, July 02, 2021

ಸ್ವಯಂಕಲ್ಪನೆಯಿಂದ ಆಗುವ ಘಟನೆಗಳು ಸಂಪೂರ್ಣ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ಚಿತ್ರ ‘ಕಪೋ ಕಲ್ಪಿತ’ ಸದ್ಯದಲ್ಲೆ ಸನ್ಸಾರ್ ಅಂಗಳಕ್ಕೆ ಹೋಗಲಿದೆ.ಪ್ರಚಾರದ ಸಲುವಾಗಿಟ್ರೈಲರ್ ಬಿಡುಗಡೆಕಾರ್ಯಕ್ರಮರೇಣುಕಾಂಬ ಸ್ಟುಡಿಯೋದಲ್ಲಿ ಸರಳವಾಗಿ ನಡೆಯಿತು.ನಾಯಕಿ ಮತ್ತು ನಿರ್ದೇಶಕಿ ಸುಮಿತ್ರಾರಮೇಶ್‌ಗೌಡ ಸಿನಿಮಾದಕುರಿತಂತೆ ಮಾಹಿತಿ ಹಂಚಿಕೊಂಡರು.ಪತ್ರಕರ್ತೆಯಾಗಿ ಕಾಣಿಸಿಕೊಂಡಿದ್ದೇನೆ. ಶೀರ್ಷಿಕೆಯು ಸಂಸ್ಕ್ರತ ಪದವಾಗಿದೆ.ಸ್ವಯಂಕಲ್ಪನೆಎಂಬುದುಅರ್ಥಕೊಡುತ್ತದೆ.ಅಂದರೆಒಂದು ವಿಷಯವುಒಬ್ಬರಿಂದ ಮತ್ತೋಬ್ಬರಿಗೆತಲುಪುವಾಗ ಹೆಚ್ಚಿಗೆ ಸೇರಿಕೊಂಡು ಸಂಶಯಕ್ಕೆ ನಾಂದಿಯಾಗುತ್ತದೆ. ಹೀಗಾಯಿತಂತೆ, ಹಾಗಾಯಿತಂತೆ, ಅಂಗಾಯ್ತು, ....

369

Read More...

KGF-2.Film News

Thursday, July 01, 2021

 

ಕೆ.ಜಿ.ಎಫ್ 2 ಚಿತ್ರದ ಆಡಿಯೋ ಹಕ್ಕು ಲಹರಿ ಮಡಿಲಿಗೆ.

 

ರಾಕಿಂಗ್ ಸ್ಟರ್ ಯಶ್ ಅಭಿನಯದ, ಹೊಂಬಾಳೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ವಿಜಯ್ ಕಿರಂಗದೂರು ಅವರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದ ಕೆ.ಜಿ.ಎಫ್ 2 ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಖ್ಯಾತ ಮ್ಯೂಸಿಕ್ ಸಂಸ್ಥೆ ಲಹರಿ ಈ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದ್ದಾರೆ.‌

ಹಲವು ಭಾಷೆಗಳಲ್ಲಿ ಕೆ.ಜಿ.ಎಫ್  2 ಚಿತ್ರ ನಿರ್ಮಾಣವಾಗಿದ್ದು, ರವಿ ಬಸ್ರೂರು ಸಂಗೀತ ನೀಡಿದ್ದಾರೆ.

ಎಲ್ಲಾ ಭಾಷೆಯ ಆಡಿಯೋ ಹಕ್ಕನ್ನು ಲಹರಿ‌ ಸಂಸ್ಥೆಯೇ ಖರೀದಿಸಿದೆ.

324

Read More...

Shreyas K Manju.New Film Pooja

Thursday, July 01, 2021

 

ಶ್ರೇಯಸ್ಸ್ ಕೆ ಮಂಜು ಈಗ "ರಾಣ"

 

ಜುಲೈ 7 ರಂದು ಮುಹೂರ್ತ.

 

ಖ್ಯಾತ ನಿರ್ಮಾಪಕ ಕೆ.ಮಂಜು ಅರ್ಪಿಸುವ, ನಂದಕಿಶೋರ್ ನಿರ್ದೇಶನದ ಹಾಗೂ ಗುಜ್ಜಲ್ ಪುರುಷೋತ್ತಮ್ ನಿರ್ಮಾಣದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಇಂದು ಬೆಳಗ್ಗೆ ಮೋದಿ‌ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನೆರವೇರಿತು.

ಚಿತ್ರಕ್ಕೆ "ರಾಣ" ಎಂದು ಹೆಸರಿಡಲಾಗಿದೆ. ಶೀರ್ಷಿಕೆ ಅನಾವರಣ ಸಮಾರಂಭದಲ್ಲಿ ಕೆ.ಮಂಜು, ನಿರ್ಮಾಪಕ ಪುರುಷೋತ್ತಮ ಗುಜ್ಜಾಲ್, ನಿರ್ದೇಶಕ ನಂದಕಿಶೋರ್, ನಾಯಕ ಶ್ರೇಯಸ್ಸ್ ಹಾಗೂ ನಾಯಕಿ ರೇಶ್ಮಾ ನಾಣಯ್ಯ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು.

381

Read More...

Wheelchair Romeo.Film News

Tuesday, June 29, 2021

  ಭಾರಿ ಸದ್ದು ಮಾಡುತ್ತಿದೆ.."ವ್ಹೀಲ್ ಚೇರ್ ರೋಮಿಯೋ" ಚಿತ್ರದ ಲಿರಿಕಲ್ ಸಾಂಗ್..   ವಿಭಿನ್ನ ಕಥಾಹಂದರ ಹೊಂದಿರುವ "ವ್ಹೀಲ್ ಚೇರ್ ರೋಮಿಯೋ" ಚಿತ್ರದ ಲಿರಿಕಲ್ ಸಾಂಗ್ ಇತ್ತೀಚೆಗೆ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಬಿಡುಗಡಯಾದ ಮೂರೇ ದಿನಕ್ಕೆ ಆರು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಈ ಹಾಡು ವೀಕ್ಷಣೆಗೊಂಡು ಜನಪ್ರಿಯವಾಗಿದೆ. ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ ಬರೆದಿರುವ "ಕನಸಿನಲ್ಲಿ ನಾ ನಡೆವೆ" ಎಂಬ ಸುಂದರಹಾಡನ್ನು ಸುಮಧುರ ಕಂಠದ ಗಾಯಕ ಸಂಚಿತ್ ಹೆಗ್ಡೆ ಸುಶ್ರಾವ್ಯವಾಗಿ ಹಾಡಿದ್ದಾರೆ. ಬಿ.ಜೆ.ಭರತ್ ಈ ಚಿತ್ರದ ಸಂಗೀತ ನಿರ್ದೇಶಕರು. ಕಾಲು ಕಳೆದುಕೊಂಡಿರುವ ಹುಡುಗ ಹಾಗೂ ಕಣ್ಣಿಲ್ಲದಿರುವ ಹುಡುಗಿಯ ಪ್ರೇಮಕಥೆಯ "ವ್ಹೀಲ್ ಚೇರ್ ....

339

Read More...

Hedaradiru O Manase.Video Song

Monday, June 28, 2021

  "ಹೆದರದಿರು ಓ ಮನಸೇ..."   "ಕೊರೋನಾ ಮೆಟ್ಟು ನಿಲ್ಲೋಣ ಕೊರೋನಾ ಸುಟ್ಟು ಸಾಗೋಣ"   ಕರೋನ ದಿಂದಾಗಿ ಲಾಕ್ ಡೌನ್ ಆಗಿ ಚಿತ್ರರಂಗ ಸಂಪೂರ್ಣ ಸ್ಥಗಿತಗೊಂಡು ಹೆಚ್ಚು ಕಮ್ಮಿ ಎರಡುವರೆ ತಿಂಗಳಗಿತ್ತು. ಈಗ ಹಂತ ಹಂತವಾಗಿ ಲಾಕ್ ಡೌನ್ ಸಡಿಲಗೊಂಡು ಒಂದೊಂದೆ ಉದ್ಯಮಗಳು ಬಾಗಿಲು ತೆಗೆದು ಧೂಳು ಕೊಡವಿಕೊಂಡು ನಿತ್ಯ ಜೀವನಕ್ಕೆ ಸಿದ್ಧವಾಗುತ್ತಿವೆ. ಇಂತಹ ಸಂಧರ್ಭದಲ್ಲಿ ಸಿನಿಮಾ ಮಾಧ್ಯಮ  ಕೂಡ ಹೊರತೇನಲ್ಲ . ಇಂದು ಎರಡು ಮಾಧ್ಯಮಗೋಷ್ಠಿ ಶುರುವಾಗಿದ್ದು  ಬಹಳ ದಿನಗಳ ನಂತರ ಮಾಧ್ಯಮ ಮಿತ್ರರು ಒಟ್ಟಿಗೆ ಸೇರಿದ್ದು ಒಂದು ಸಂತಸದ ವಿಷಯ. ಇಂದು ನಡೆದ ಮಾಧ್ಯಮಗೋಷ್ಠಿ ಯಲ್ಲಿ ನಟ, ನಿರ್ಮಾಪಕ, ಗೋಪ್ರೇಮಿ ಉದ್ಯಮಿ ಮಹೇಂದ್ರ ಮುನ್ನೋತ್ ರವರು  ಎರಡು ....

375

Read More...

Anireekshitha.Film News

Monday, June 28, 2021

  ಎರಡೇ ಪಾತ್ರಗಳ‌ ಅಭಿನಯದಲ್ಲಿ, ಎರಡು ಭಾಷೆಗಳಲ್ಲಿ ಸಿದ್ದವಾಗಿದೆ “ಅನಿರೀಕ್ಷಿತ”. ಚಿತ್ರದ ಟ್ರೇಲರ್ ಗೆ ಚಂದನವನದ ತಾರೆಯರ ಮೆಚ್ಚುಗೆ.   ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ಸಿನಿರಸಿಕರು ಮೆಚ್ಚುಗೆ ಸೂಚಿಸಿದ್ದಾರೆ. ಅಂತಹದೊಂದು ವಿಭಿನ್ನ ಕಥಾಹಂದರ ಹೊಂದಿರುವ "ಅನಿರೀಕ್ಷಿತ" ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಕೇವಲ ಎರಡೇ ಪಾತ್ರಗಳು ಈ ಚಿತ್ರದಲ್ಲಿದ್ದು, ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ‌ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಲಾಕ್ ಡೌನ್ ನಂತರ ಸುಮಾರು ಎರಡುವರೆ ತಿಂಗಳ ಬಳಿಕ ಆಯೋಜಿಸಿದ್ದ ಮೊದಲ ಪತ್ರಿಕಾಗೋಷ್ಠಿ ಇದು. ಚಿತ್ರದ ಪ್ರಮುಖ ....

507

Read More...

Man Of The Match.Film News

Sunday, June 27, 2021

  *ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರೀಕರಣ ಸ್ಥಳಕ್ಕೆ ಪುನೀತ್ ರಾಜ್ ಕುಮಾರ್ ಭೇಟಿ*   ಯೋಜನೆಗಳ ಪ್ರಕಾರ ಈ ಹೊತ್ತಿಗೆ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಚಿತ್ರವೊಂದನ್ನು ಸತ್ಯಪ್ರಕಾಶ್ ನಿರ್ದೇಶನ ಮಾಡಬೇಕಿತ್ತು. ಕೋವಿಡ್ ಮತ್ತು ಲಾಕ್ ಡೌನ್ ನಿರ್ಬಂಧಗಳಿಂದಾಗಿ ಆ ಚಿತ್ರವು ಸ್ವಲ್ಪ ತಡವಾಗುತ್ತಾ ಬಂದಿತ್ತು. ಆ ಚಿತ್ರದ ಚರ್ಚೆಯ ಸಂದರ್ಭದಲ್ಲೇ ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರದ ಎಳೆಯನ್ನು ಸತ್ಯಪ್ರಕಾಶ್ ಪುನೀತ್ ಅವರ ಬಳಿ ಹೇಳಿದ್ದರು. ಹೊಸ ಕಲಾವಿದರಿಗಾಗಿಯೇ ತಯಾರಿಸಿದ್ದ ಆ ಕಥೆಯ ವಸ್ತು ಹಾಗೂ ಚಿತ್ರಕಥೆಯಲ್ಲಿದ್ದ ಹೊಸತನ, ಪುನೀತ್ ಅವರಿಗೂ ಸಹ ಮೆಚ್ಚುಗೆಯಾಗಿ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್ ಇತ್ತರು. ಆಗ ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರಕ್ಕೆ ....

318

Read More...

Kabzaa.Film News

Saturday, June 26, 2021

  ನಾಳೆ  ಬೆಳಗ್ಗೆ 6 ಗಂಟೆಗೆ ಬಿಡುಗಡೆಯಾಗಲಿದೆ ಪ್ಯಾನ್ ಇಂಡಿಯಾ ಸಿನಿಮಾ  ’ಕಬ್ಜ’ ದ ವಿಶೇಷ ಪೋಸ್ಟರ್ .‌   ಕುತೂಹಲ ಕೆರಳಿಸಿದೆ ಹಾಲಿವುಡ್‌ ಶೈಲಿಯ ವಿಭಿನ್ನ ಪೋಸ್ಟರ್.   ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ’ಕಬ್ಜ’. ಈ ಚಿತ್ರದ ವಿನೂತನ ಹಾಲಿವುಡ್ ಶೈಲಿಯ ಪೋಸ್ಟರ್ ನಾಳೆ ಬೆಳಗ್ಗೆ 6 ಗಂಟೆಗೆ ಬಿಡುಗಡೆಯಾಗಲಿದೆ. ತ್ರಿಬಲ್ ಆರ್, ಕೆ.ಜಿ.ಎಫ್ 2, ವಿಕ್ರಾಂತ್ ರೋಣ ಚಿತ್ರಗಳ ಪೋಸ್ಟರ್ ನೋಡುಗರ ಗಮನ ಸೆಳೆದಿದೆ. ನಾಳೆ ಬಿಡುಗಡೆಯಾಗಲಿರುವ ಕಬ್ಜ ಚಿತ್ರದ ಪೋಸ್ಟರ್ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವಿದೆ. ಈ ವಿಭಿನ್ನ ಪೋಸ್ಟರ್ ಬಗ್ಗೆ ಮುಂಬೈ ಟೈಮ್ಸ್ ವರದಿ ಮಾಡಿದೆ. ಯಶ್ ಅವರ ಕೆ.ಜಿ.ಎಫ್ ....

304

Read More...

Shreyas K Manju.New Film News

Friday, June 25, 2021

 

ಶ್ರೇಯಸ್ಸ್ ಕೆ ಮಂಜು ಅಭಿನಯದ,

ನಂದ ಕಿಶೋರ್ ನಿರ್ದೇಶನದ ನೂತನ ಚಿತ್ರಕ್ಕೆ ಜುಲೈ 7ರಂದು ಮುಹೂರ್ತ.

 

ಜುಲೈ 1 ರಂದು ಶೀರ್ಷಿಕೆ ಅನಾವರಣ

 

 

ಖ್ಯಾತ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ಸ್ ಅವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರವನ್ನು  ನಂದ ಕಿಶೋರ್(ಪೊಗರು) ನಿರ್ದೇಶಿಸುತ್ತಿದ್ದಾರೆ.

ಈ ನೂತನ ಚಿತ್ರದ ಮುಹೂರ್ತ ಸಮಾರಂಭ ಜುಲೈ 7ರಂದು ಗವಿಪುರಂನ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಲಿದೆ.

311

Read More...

Sneharshi Film.Food Kits.

Friday, June 25, 2021

  *ಸ್ನೇಹರ್ಷಿ ಕಿರಣ್ ನಾರಾಯಣ್ ನೆರವಿನ ಹಸ್ತ*      ಕೊರೋನಾ ಸಂಕಷ್ಟದ ಸಮಯದಲ್ಲಿ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿರುವ ಸ್ನೇಹರ್ಷಿ  ನಾಯಕ ಕಿರಣ್ ನಾರಾಯಣ್ ಇದೀಗ ಚಿತ್ರರಂಗದ ಅಸಂಘಟಿತರಿಗೆ ತಮ್ಮ ಸಹಾಯಹಸ್ತ ಚಾಚಿದ್ದಾರೆ. ಗುರುತಿನ ಚೀಟಿ ಇಲ್ಲದೆ ಸರ್ಕಾರದ ಸಹಾಯ ಧನದಿಂದ ವಂಚಿತರಾದವರ ಹಸಿವನ್ನು ನೀಗಿಸುವ ಪುಣ್ಯದ ಕೆಲಸ ಮಾಡಿದ್ದಾರೆ. ಇತ್ತೀಚೆಗೆ ಬಾಮ ಹರೀಶ್ ಅವರ ಉಲ್ಲಾಸ್ ಶಾಲೆಯ ಆವರಣದಲ್ಲಿ ೧೫೦ಕ್ಕೂ ಹೆಚ್ಚು ಸಿನಿಕಾರ್ಮಿಕರಿಗೆ ಕಿರಣ್ ನಾರಾಯಣ್ ಅವರು ದಿನಸಿ ಕಿಟ್‌ಗಳನ್ನು  ವಿತರಣೆ ಮಾಡಿದರು. ಅವರ ಈ ಕಾರ್ಯದಲ್ಲಿ ಭಾಮ ಹರೀಶ್ ನೆರವಾದರು. ಇದೇ ಸಮಯದಲ್ಲಿ  ಅನಾಥ ಶವಗಳ ಬಂಧು ಎನಿಸಿಕೊಂಡ ನಟ ಅರ್ಜುನ್‌ಗೌಡ, ಪತ್ರಿಕಾ ....

305

Read More...

Karnataka Chalanachitra Academy.News

Thursday, June 24, 2021

  ಚಲನಚಿತ್ರ ಅಕಾಡೆಮಿಯಲ್ಲಿ ಚಿತ್ರರಂಗದ ವಿಶೇಷ ಪ್ಯಾಕೇಜ್ ಸಹಾಯವಾಣಿ   ಬೆಂಗಳೂರು, ಜೂನ್ 24- ಸೇವಾಸಿಂಧು ಮೂಲಕ ವಿಶೇಷ ಪ್ಯಾಕೇಜ್ ಪಡೆಯುವ ಕನ್ನಡ ಚಿತ್ರರಂಗದ ಫಲಾನುಭವಿಗಳ ಅನುಕೂಲಕ್ಕಾಗಿ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಗೆ  ಗುರುವಾರ ಚಾಲನೆ ದೊರೆತಿದೆ.  ಸಹಾಯವಾಣಿಗೆ ಚಾಲನೆ ನೀಡಿದ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್,  ಕೋವಿಡ್-19 ಎರಡನೆ ಅಲೆಯ ಲಾಕ್ ಡೌನ್  ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ನೀಡಿರುವ ವಿಶೇಷ ಪ್ಯಾಕೇಜ್ ಸೇವಾಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ನಲ್ಲಿ ದಾಖಲೆಗಳನ್ನು ಸಲ್ಲಿಸಿ ಫಲಾನುಭವಿಗಳು ಸಹಾಯಧನ ಪಡೆಯಬಹುದಾಗಿದೆ. ....

382

Read More...

Manaadu Lyrical Video Rel.Film News

Wednesday, June 23, 2021

ಪ್ಯಾನ್ ಇಂಡಿಯಾ ಸಿನಿಮಾದ ಲಿರಿಕಲ್ ಹಾಡು ಬಿಡುಗಡೆ

     ಕಾಲಿವುಡ್ ಸ್ಟಾರ್ ನಟ ಸಿಲಂಬರಸನ್.ಟಿ.ಆರ್ ನಟನೆಯ ‘ಮಾನಾಡು’ ತಮಿಳು ಚಿತ್ರವು ಐದು ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿದೆ. ಕನ್ನಡದಲ್ಲಿ ಸುದೀಪ್, ತಮಿಳಿನಲ್ಲಿ ಎ.ಆರ್.ರೆಹಮಾನ್, ಹಿಂದಿಯಲ್ಲಿ ಅನುರಾಗ್‌ಕಶ್ಯಪ್, ತೆಲುಗುದಲ್ಲಿ ರವಿತೇಜ ಮತ್ತು ಮಲೆಯಾಳಂದಲ್ಲಿ ಪೃಥ್ವಿರಾಜ್ ಟೈಟಲ್‌ನ್ನು ಲೋಕಾರ್ಪಣೆ ಮಾಡಿದ್ದರು. ಸದ್ಯ ಕನ್ನಡದ ಶೀರ್ಷಿಕೆಯನ್ನು ತಂಡವು ರಿವೀಲ್ ಮಾಡಿರುವುದಿಲ್ಲ. 

323

Read More...

Food Kits To Prodution Managers.News

Wednesday, June 23, 2021

ನಿರ್ಮಾಣ ನಿರ್ವಾಹಕರುಗಳಿಗೆ ಫುಡ್ಕಿಟ್ ವಿತರಣೆ

ಕೊರೋನ ಬಂದಾಗಿನಿಂದಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿದೆ. 

359

Read More...

Anireekshitha.Film News

Wednesday, June 23, 2021

 

ಲಾಕ್ ಡೌನ್ ಸಮಯದಲ್ಲಿ ಸಿದ್ದವಾಯಿತು “ಅನಿರೀಕ್ಷಿತ”.

 

ಮಿಮಿಕ್ರಿ ಮೂಲಕ ಜಮಮನಸೂರೆಗೊಂಡಿರುವ ಮಿಮಿಕ್ರಿ ದಯಾನಂದ್ ಪ್ರಥಮ‌ ನಿರ್ದೇಶನ.

 

 

ಜೀವನದ ಅನಿರೀಕ್ಷಿತ ತಿರುವುಗಳು ಬದುಕಿನ ಗತಿಯನ್ನೇ ಬದಲಿಸಿ,ಯಾರೂ ಕಲಿಸದ ಪಾಠವನ್ನು ಕಲಿಸಿಬಿಡುತ್ತವೆ. ಇಂತಹ ತಾತ್ವೀಕವಾದ ಎಳೆಯೊಂದು, ಕುತೂಹಲ ಹಿಡಿದಿಟ್ಟುಕೊಂಡು ಹೇಗೆ ಎಳೆಎಳೆಯಾಗಿ ರಹಸ್ಯ ಬಿಚ್ಚಿಕೊಳ್ಳುತ್ತ ಸಾಗುತ್ತದೆ ಎಂಬುದನ್ನು ನಿರೂಪಿಸುವುದೇ, “ಅನಿರೀಕ್ಷಿತ” ಚಿತ್ರದ ಕಥಾಹಂದರ.

ಲಾಕ್ ಡೌನ್ ಸಮಯ ವ್ಯರ್ಥ ಮಾಡಬಾರದೆಂದು ತಿಳಿದ ಹದಿಮೂರು ಜನ ಪ್ರತಿಭಾವಂತರ ತಂಡದ ಪರಿಶ್ರಮದ ‌ಫಲವಾಗಿ ಈ ಚಿತ್ರ ಮೂಡಿಬಂದಿದೆ.

529

Read More...

Antamma.Short Film News

Tuesday, June 08, 2021

 

*ಕಲಾವಿದರ ಕತ್ತಲ ಬದುಕನ್ನು ಅನಾವರಣಗೊಳಿಸಿದ ಅಣ್ತಮ್ಮ…*

 

ಜನಸಾಮಾನ್ಯರ ದೃಷ್ಟಿಯಲ್ಲಿ ಸಿನಿಮಾರಂಗ ಅಂದ ತಕ್ಷಣ ಕಣ್ತುಂಬ ಬಣ್ಣಗಳೇ ತುಂಬಿಕೊಳ್ಳುತ್ತವೆ. ಹಾಗೆ ನೋಡಿದರೆ ಬೇರೆಲ್ಲ ಉದ್ಯಮಕ್ಕಿಂತಾ ಅನಿಶ್ಚಿತತೆ, ಅಭದ್ರತೆ ಇಲ್ಲಿ ಸ್ವಲ್ಪ ಹೆಚ್ಚೇ ಇದೆ. ಈ ಕ್ಷೇತ್ರದಲ್ಲಿ ಇವತ್ತಲ್ಲಾ ನಾಳೆ ಗೆಲ್ಲುತ್ತೇವೆ, ಆ ಮೂಲಕ ಬದುಕಲ್ಲಿ ಬೆಳಕು ಮೂಡುತ್ತದೆ ಎಂಬ ಭರವಸೆಯಿಂದ ಕಾದಿರುವ ಅದೆಷ್ಟೋ ಜನ ಕಾರ್ಮಿಕರು, ಕಲಾವಿದರು, ತಂತ್ರಜ್ಞರು ಇಲ್ಲಿದ್ದಾರೆ. ಕೊರೋನಾ ಎನ್ನುವ ದುಷ್ಟ ವೈರಸ್ಸು ಅಂಥ ಎಲ್ಲರ ಬದುಕನ್ನೂ ಅಕ್ಷರಶಃ ನರಕವನ್ನಾಗಿಸಿದೆ.

549

Read More...
Copyright@2018 Chitralahari | All Rights Reserved. Photo Journalist K.S. Mokshendra,