ನೈಜ ಹಾಗೂ ಕಾಲ್ಪನಿಕ ಕಾಣೆಯಾಗಿದ್ದಾಳೆ
ವಿನೂತನ ಶೀರ್ಷಿಕೆ ಹೊಂದಿರುವ ‘ಕಾಣೆಯಾಗಿದ್ದಾಳೆ’ ಚಿತ್ರವನ್ನು ಆರ್ಕೆ ನಿರ್ದೇಶನ ಮಾಡಿದ್ದಾರೆ. ಹುಡುಕಿಕೊಟ್ಟವರಿಗೆ ಬಹುಮಾನ ಎಂಬುದಾಗಿ ಅಡಿಬರಹವಿದೆ. ಸಾಮಾಜಿಕ ಕಳಕಳಿಯ ಚಿತ್ರದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಹಳ್ಳಿಯಿಂದ ನಗರಕ್ಕೆ ಬಂದ ಹೆಣ್ಣುಮಗಳೊಬ್ಬಳಿಗೆ ನಗರದಲ್ಲಿ ಯಾವೆಲ್ಲಾ ಸಮಸ್ಯೆಗಳು ಕಾಡುತ್ತವೆ. ಆಕೆ ಎದುರಿಸುವ ಸವಾಲುಗಳೇನು? ಐಎಎಸ್ ಅಧಿಕಾರಿ ಆಗುತ್ತಾಳಾ? ಪ್ರಸ್ತುತ ಸನ್ನಿವೇಶದಲ್ಲಿ ಹೆಣ್ಣುಮಕ್ಕಳು ಎದುರಿಸುವ ಸಮಸ್ಯೆಗಳ ವಿಚಾರವನ್ನು ಯಾಕೆ ಜನರ ಮುಂದಿಡಬಾರದು ಎನ್ನುವಂತಹ ವಿಷಯಗಳನ್ನು ತೋರಿಸಲಾಗಿದೆ.
*"ಸಿನಿ ಬಜಾರ್" ಇದು ನಿರ್ಮಾಪಕರ ಸ್ನೇಹಿ ಓಟಿಟಿ.* ತಂತ್ರಜ್ಞಾನ ಮುಂದುವರಿದ ಹಾಗೆ ಜೀವನಶೈಲಿ ಕೂಡ ಬದಲಾಗುತ್ತಿದೆ. ಜನರಿಗೆ ಆಧುನಿಕ ತಂತ್ರಜ್ಞಾನದಿಂದ ಸಾಕಷ್ಟು ಅನುಕೂಲವಾಗುತ್ತಿದೆ. ಇಂತಹುದೇ ವಿಶೇಷ ತಂತ್ರಜ್ಞಾನವುಳ್ಳ "ಸಿನಿಬಜಾರ್" ಎಂಬ ಓಟಿಟಿ ಬಿಡುಗಡೆಯಾಗಿದ್ದು, ಈ ಓಟಿಟಿ ಮೂಲಕ ವಿಶ್ವದ ಅನೇಕ ರಾಷ್ಟ್ರಗಳ ಜನರು ತಮ್ಮ ನೆಚ್ಚಿನ ಸಿನಿಮಾಗಳನ್ನು ತಾವು ಇದ್ದಲ್ಲಿಯೇ ನೋಡಬಹುದು. ಇದರಿಂದ ನಿರ್ಮಾಪಕರಿಗೆ ಹೆಚ್ಚು ಅನುಕೂಲವಾಗಲಿದೆ. ಇತ್ತೀಚಿಗೆ "ಸಿನಿಬಜಾರ್" ಓಟಿಟಿ ಬಗ್ಗೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. "ಸಿನಿಬಜಾರ್" ಓಟಿಟಿಯಲ್ಲಿ ಪ್ರತಿ ಶುಕ್ರವಾರ ಸಿನಿಮಾಗಳು ಫ್ಯಾನ್ ವಲ್ಡ್ ವಿಶ್ವದ 177 ದೇಶಗಳಲ್ಲಿ ....
ಮನಸೂರೆಗೊಳ್ಳುತ್ತಿರುವ ಜೂಲಿಯೆಟ್-೨ ಟ್ರೇಲರ್
ಉತ್ತಮ ಅಂಶಗಳನ್ನು ಒಳಗೊಂಡಿರುವ ‘ಜೂಲೆಯಟ್-೨’ ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಗೊಂಡಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡು ಎಲ್ಲಾ ಕಡೆಗಳಿಂದಲೂ ಪ್ರಶಂಸೆಗಳು ಬರುತ್ತಿದೆ. ‘ಪ್ರೇಮಂಪೂಜ್ಯಂ’ ಖ್ಯಾತಿಯ ಬೃಂದಾಆಚಾರ್ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿರಾಟ್.ಬಿ.ಗೌಡ ನಿರ್ದೇಶನ ಮಾಡಿದ್ದು, ಲಿಖಿತ್.ಆರ್.ಕೋಟ್ಯಾನ್ ಬಂಡವಾಳ ಹೂಡಿದ್ದಾರೆ.
ತೆರೆಗೆ ಸಿದ್ದ ಅಸ್ಥಿರ ನಿರ್ದೇಶಕ ಹೊರತುಪಡಿಸಿ ಬಹುತೇಕ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ‘ಅಸ್ಥಿರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ಎಸ್ಆರ್ವಿ ಪ್ರಿವ್ಯೂ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಉಪಾಧ್ಯಕ್ಷ ಮತ್ತು ಹಿರಿಯಪತ್ರಕರ್ತ ಎನ್ಆರ್ಕೆ.ವಿಶ್ವನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಸ್ಥಿರವಲ್ಲದ್ದನ್ನು ಅಸ್ಥಿರ ಎಂದು ಕರೆಯುವುದುಂಟು. ಅದೇ ರೀತಿ ಸೀಮಿತ ಮನಸ್ಥಿತಿ ಇಲ್ಲದೆ ಇರುವ ವ್ಯಕ್ತಿಯು ಪ್ರೀತಿಯಲ್ಲಿ ಸೋತಾಗ ಸಾಮಾನ್ಯ ಹುಡುಗನಾದವನು ಯಾವ ರೀತಿ ಇರುತ್ತಾನೆ ಎಂಬುದನ್ನು ಹೇಳಲಾಗಿದೆ. ತ್ರಿಕೋನ ಪ್ರೇಮ ಕಥೆಯು ....
ಲಂಕಾಸುರದಲ್ಲಿ ಮಾಡರ್ನ್ ಮಹಾಲಕ್ಷೀ ಗೀತೆ
ವಿನೋದ್ಪ್ರಭಾಕರ್ ನಾಯಕನಾಗಿ ನಟಿಸಿರುವ ‘ಲಂಕಾಸುರ’ ಚಿತ್ರದ ‘ಮಾಡರ್ನ್ ಮಹಾಲಕ್ಷೀ’ ಹಾಡನ್ನು ಮಾಲಾಶ್ರೀ ಬಿಡುಗಡೆ ಮಾಡಿದರು. ನಂತರ ಮಾತನಾಡಿ ನಾನು ವಿನೋದ್ಪ್ರಭಾಕರ್ ದೊಡ್ಡ ಅಭಿಮಾನಿ. ಅವರ ಸಾಹಸ ಸನ್ನಿವೇಶಗಳು ನನಗೆ ತುಂಬಾ ಇಷ್ಟ. ಟೈಗರ್ ಟಾಕೀಸ್ ಮೂಲಕ ಪತ್ನಿ ನಿಶಾ ಹೆಸರಿನಲ್ಲಿ ಮೊದಲ ಬಾರಿ ಬಂಡವಾಳ ಹೂಡಿದ್ದಾರೆ.
ಅಮೋಘ ಸಾಲುಗಳಿಂದ ಸಂಗೀತ ಪ್ರಿಯರ ಮನಗೆಲ್ಲುತ್ತಿರುವ ಜೂಲಿಯೆಟ್ 2 ಚಿತ್ರದ "ನೆನಪೆಲ್ಲಿ ಈಗ" ವಿಡಿಯೋ ಸಾಂಗ್ ಇದೀಗ 5 ಲಕ್ಷ ವೀಕ್ಷಣೆಯನ್ನು ಪಡೆಯುವತ್ತ ದಾಪುಗಾಲಿಟ್ಟಿದೆ
*ಗಾಂಧಿ ಬಜಾರ್ ನಲ್ಲಿ ಆರಂಭವಾಯಿತು "Combat warriors"* . *ಇದು ಚಲನಚಿತ್ರದಲ್ಲಿ ನಟಿಸಲು ಬಯಸುವವರಿಗೆ ಫಿಸಿಕಲ್ ಫಿಟ್ನೆಸ್ ಮತ್ತು ಸೆಲ್ಫ್ ಡಿಫೆನ್ಸ್ ಕುರಿತು ಶಿಕ್ಷಣ ನೀಡುವ ಸಂಸ್ಥೆ* . ಪ್ರತಿಯೊಬ್ಬ ಮನುಷ್ಯನು ತಾನು ದೈಹಿಕವಾಗಿ ಆರೋಗ್ಯವಾಗಿರಬೇಕೆಂದು ಬಯಸುತ್ತಾನೆ. ಅದರಲ್ಲೂ ಸಿನಿಮಾದಲ್ಲಿ ನಟಿಸಬೇಕೆಂಬ ಆಸಕ್ತಿ ಇರುವವರಿಗಂತೂ ಫಿಸಿಕಲ್ ಫಿಟ್ನೆಸ್ ಬಹು ಮುಖ್ಯ. ಇದರ ಬಗ್ಗೆ ಸರಿಯಾದ ಶಿಕ್ಷಣ ನೀಡಲು ಬೆಂಗಳೂರಿನ ಹೃದಯ ಭಾಗವಾದ ಗಾಂಧಿ ಬಜಾರ್ ನಲ್ಲಿ "Combat warriors"* ಎಂಬ ಸಂಸ್ಥೆ ಆರಂಭವಾಗಿದೆ. ಇತ್ತೀಚೆಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥ ಗ್ರ್ಯಾಂಡ್ ಮಾಸ್ಟರ್ ಎಂ ಹೆಚ್ ಅಬೀದ್, ನಾನು ಈ ತನಕ ದೇಶ ಹಾಗೂ ....
ಅದ್ದೂರಿಯಾಗಿ ರಿಲೀಸ್ ಆಯ್ತು ’ಸರ್ವೈವರ್’ ಟ್ರೇಲರ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಹಾಲಿವುಡ್ ಶೈಲಿಯ ಈ ಕಿರುಚಿತ್ರ ಯುವ ಪ್ರತಿಭೆಗಳು ತಮ್ಮನ್ನು ಚಿತ್ರರಂಗಕ್ಕೆ ಪರಿಚಯ ಮಾಡಿಕೊಳ್ಳಲು ಉತ್ತಮ ವೇದಿಕೆಯಾಗಿ ಕಿರುಚಿತ್ರಗಳು ಹಾಗೂ ಅಲ್ಬಮ್ ಸಾಂಗ್ ಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇದೀಗ ಈ ಸಾಲಿಗೆ ಯುವ ಪ್ರತಿಭೆ ರಜತ್ ರಜನಿಕಾಂತ್ ಸೇರಿದ್ದಾರೆ. ಹೌದು ಸಿನಿಮಾ ಮಾಡುವ ಕನಸನ್ನು ಹೊತ್ತು ಇಂಡಸ್ಟ್ರಿಗೆ ಬಂದಿರುವ ಇವರು ಮೊದಲ ಪ್ರಯತ್ನವಾಗಿ ’ದ ಸರ್ವೈವರ್’ ಎಂಬ ಕಿರುಚಿತ್ರವನ್ನು ಸಿದ್ದಪಡಿಸಿದ್ದಾರೆ. ಈ ಚಿತ್ರಕ್ಕೆ ರಜತ್ ರಜನಿಕಾಂತ್ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಸಂಕಲನ, ನಿರ್ದೇಶನದ ಜೊತೆಗೆ ನಾಯಕರಾಗಿ ನಟಿಸಿದ್ದಾರೆ. ....
‘೪.೩೦–೬.೦೦ ಮುಹೂರ್ತ, ನಾಲ್ಕು ಜನ ಕಾಣಿಸ್ತಿಲ್ಲ’ ಮೇಲಿನ ವಾಕ್ಯ ಚಿತ್ರದ ಶೀರ್ಷಿಕೆಯಾಗಿದೆ. ಚಂದನವನದ ಹಿರಿಯ ನಿರ್ದೇಶಕರುಗಳಾದ ದೊರೆ-ಭಗsವಾನ್ ಇದ್ದಂತೆ ಕಾಲಿವುಡ್ನ ಶಿವರಾಜ್ ಮತ್ತು ಪೂವೈಸುರೇಶ್ ಜಂಟಿಯಾಗಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಾಲ್ಕು ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಿ.ಯೋಗರಾಜ್ ಅವರು ನೀಲಕಂಠ ಫಿಲಿಂಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ ಹೂಡುವ ಜತೆಗೆ ಛಾಯಾಗ್ರಹಣ-ಸಂಕಲನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಕೈಗಾರಿಕೋದ್ಯಮಿ ಹೂಸೂರು ಮೂಲದ ಮಹೇಂದ್ರನ್ ಸಹ ....
ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ ಕನ್ನಡ ಚಿತ್ರರಂಗದ ಮೊದಲ ಪ್ರಚಾರಕರ್ತರೆಂಬ ಬಿರುದಿಗೆ ಪಾತ್ರರಾಗಿದ್ದ ಡಿ.ವಿ.ಸುದೀಂದ್ರ ಹುಟ್ಟುಹಾಕಿದ್ದ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ೨೫ ವರ್ಷ ತುಂಬಿದ ಸಂದರ್ಭದಲ್ಲಿ, ತನಗೆ ಅನ್ನ ನೀಡಿದವರನ್ನು ಮರೆಯದೆ ಹಿರಿಯ ನಿರ್ಮಾಪಕರು ಹಾಗೂ ಅನುಭವಿ ಪತ್ರಕರ್ತರುಗಳಿಗೆ ಪ್ರಶಸ್ತಿ ಪುರಸ್ಕಾರಗಳನ್ನು ನೀಡಿ ಗೌರವಿಸುವ ಪರಿಪಾಠವನ್ನು ಆರಂಭಿಸಿದರು. ಅದು ಮುಂದುವರೆದು ಪ್ರತಿ ವರ್ಷ ನಡೆಯುತ್ತಾ ಬಂದಿದೆ. ಸದ್ಯ ಸುದೀಂದ್ರವೆಂಕಟೇಶ್ ಅಧೀನದಲ್ಲಿ ಸುನಿಲ್ ಹಾಗೂ ವಾಸು ....
*ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ಆದಿತ್ಯ ಅಭಿನಯದ "ಟೆರರ್"* . ಸಿಲ್ಕ್ ಮಂಜು ನಿರ್ಮಿಸುತ್ತಿರುವ, ರಂಜನ್ ಶಿವರಾಮ ಗೌಡ ನಿರ್ದೇಶನದ ಹಾಗೂ ಆದಿತ್ಯ ನಾಯಕರಾಗಿ ನಟಿಸುತ್ತಿರುವ "ಟೆರರ್" ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಿತು. ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಐ ಪಿ ಎಸ್ ಅಧಿಕಾರಿ ರವಿಕಾಂತೇಗೌಡ ಅವರು ಕ್ಯಾಮೆರಾ ಚಾಲನೆ ಮಾಡಿದರು. ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು, ಲಹರಿ ವೇಲು ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು. ನನ್ನ ಮೊದಲ ನಿರ್ದೇಶನದ ಚಿತ್ರ. ಹೊಸ ಮಾಫಿಯಾ ಸುತ್ತ ಕಥೆ ಇದೆ. ....
ಗಣರಾಜೋತ್ಸವ ಸಂಭ್ರಮಕ್ಕಾಗಿಯೇ ರಿಲೀಸ್ ಆಯ್ತು ‘ಪ್ರಜಾರಾಜ್ಯ’ ಟ್ರೇಲರ್ ‘ಆರ್ಥಿಕ ಸ್ವಾತಂತ್ರ್ಯಕ್ಕಾಗಿ ಹೋರಾಟ’ ಎಂಬ ಟ್ಯಾಗ್ ಲೈನ್ ಹೊಂದಿರುವ ‘ಪ್ರಜಾರಾಜ್ಯ’ ಚಿತ್ರ ಸದ್ಯ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ. ಪ್ರತಿಯೊಬ್ಬ ಭಾರತೀಯ ನೋಡಲೇ ಬೇಕಾದ ಸಿನಿಮಾ ಇದಾಗಿದೆ. ಯಾಕಂದ್ರೆ ಪ್ರಜೆಗಳು ಮನಸು ಮಾಡಿದ್ರೆ ಎನೆಲ್ಲಾ ಮಾಡಬಹುದು ಎಂಬ ಅಂಶದ ಮೇಲೆ ಈ ಸಿನಿಮಾ ಮಾಡಲಾಗಿದೆ. ಇದಕ್ಕೆ ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ ಸಾಕ್ಷಿ. ಗಣರಾಜೋತ್ಸವ ಸಂಭ್ರಮದಲ್ಲಿ ‘ಪ್ರಜಾರಾಜ್ಯ’ ಟ್ರೇಲರ್ ಬಿಡುಗಡೆ ಆಗಿರುವುದು ಕುತೂಹಲ ಹುಟ್ಟಿಸಿದೆ. ಸದ್ಯ ವಿಧಾನಸಭಾ ಚುನಾವಣೆಗೆ ರಾಜ್ಯ ಸಿದ್ದವಾಗುತ್ತಿದ್ದು, ಈ ಸಂದರ್ಭದಲ್ಲೇ ಸಿನಿಮಾ ಇದೇ ಫೆಬ್ರವರಿ 24ರಂದು ....
ನಟ ಭಯಂಕರ ಟ್ರೇಲರ್ ಬಿಡುಗಡೆ ಬಿಗ್ ಬಾಸ್ ವಿಜೇತ ಪ್ರಥಮ್ ನಾಯಕನಾಗಿ ನಟಿಸಿ ನಿರ್ದೇಶಿಸಿರುವ ‘ನಟ ಭಯಂಕರ’ ಚಿತ್ರದ ಟ್ರೇಲರ್ನ್ನು ಧ್ರುವಸರ್ಜಾ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಸ್ವಾರಸ್ಯ ಸಿನಿ ಕ್ರಿಯೇಶನ್ಸ್ ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ. ಉದಯ್.ಕೆ.ಮಹ್ತಾ ಕಥೆ ಇರಲಿದೆ. ಡಾ.ವಿ.ನಾಗೇಂದ್ರಪ್ರಸಾದ್, ನಾಗತ್ತಿಹಳ್ಳಿ ಚಂದ್ರಶೇಖರ್,ಬಹದ್ದೂರ್ಚೇತನ್, ಅರಸುಅಂತಾರೆ ಸಾಹಿತ್ಯಕ್ಕೆ ಪ್ರದ್ಯೋತನ್ ಸಂಗೀತ ಒದಗಿಸಿದ್ದಾರೆ. ತಾರಗಣದಲ್ಲಿ ಸಾಯಿಕುಮಾರ್, ಓಂಪ್ರಕಾಶ್ರಾವ್, ನಿಹಾರಿಕಾಶಣೈ, ಸುಷ್ಮತಾಜೋಷಿ, ಶೋಭರಾಜ್, ಕುರಿಪ್ರತಾಪ್, ಚಂದನಾರಾಘವೇಂದ್ರ, ಶಂಕರ್ಅಶ್ವಥ್, ....
ಸದ್ದು ಮಾಡುತ್ತಿದೆ ಸೈರನ್ ಹಾಡುಗಳು
ಗಾಯಕಿ ಮಂಗ್ಲಿ ಹಾಡಿರುವ ‘ಎಣ್ಣೆ ಹೊಡೆಯೋ ಟೈಮಲ್ಲಿ’ ಗೀತೆ ಬಿಡುಗಡೆಗೊಂಡು ಎಲ್ಲಡೆ ಸದ್ದು ಮಾಡುತ್ತಿದೆ. ಚಿನ್ಮಯ್ ಸಾಹಿತ್ಯದಲ್ಲಿ ಭಾರಧ್ವಜ್ ಸಂಗೀತ ಸಂಯೋಜಿಸಿದ್ದಾರೆ. ಮೊನ್ನೆ ನಡೆದ ಕಾರ್ಯಕ್ರಮದಲ್ಲಿ ಲಹರಿ ವೇಲು ಆಗಮಿಸಿ ತಂಡಕ್ಕೆ ಶುಭಹಾರೈಸಿದರು. ತನಿಖಾ ಜಾನರ್ ಕಥೆಯಲ್ಲಿ ಕೊಲೆಯ ಹಿನ್ನಲೆ ಬೇಧಿಸಿಕೊಂಡು ಹೊರಡುವ ಪೋಲೀಸ್ ಅಧಿಕಾರಿಯ ಸನ್ನಿವೇಶಗಳು ತುಂಬಾ ಕುತೂಹಲಕಾರಿಯಾಗಿ ಮೂಡಿಬಂದಿದೆ. ಪ್ರವೀರ್ಶೆಟ್ಟಿ ಪೋಲೀಸ್ ಅಧಿಕಾರಿಯಾಗಿ ನಾಯಕ, ಮಾಲಿವುಡ್ನ ಲಾಸ್ಯ ನಾಯಕಿಯಾಗಿ ಅವರೂ ಸಹ ಖಾಕಿಧಾರಣಿಯಾಗಿ ಕಾಣಿಸಿಕೊಂಡಿದ್ದಾರೆ.
ಕೆಂಡದ ಸೆರಗು ಟೀಸರ್ ಬಿಡುಗಡೆ
ರಾಕಿ ಸೋಮ್ಲಿ ಮೊದಲ ನಿರ್ದೇಶನದ ‘ಕೆಂಡದ ಸೆರಗು’ ಚಿತ್ರದ ಟೀಸರ್ ಬಿಡುಗಡೆಗೊಂಡಿತು. ಭೂಮಿಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿದ್ದು, ಮಾಲಾಶ್ರೀ ಪೋಲೀಸ್ ಆಯುಕ್ತರಾಗಿ ಕಾಣಿಸಿಕೊಂಡಿದ್ದಾರೆ. ಕಾದಂಬರಿ ಆಧಾರಿತ ಕಥೆಯಾಗಿದ್ದು, ಕುಸ್ತಿ ಸುತ್ತ ಸಾರಲಿದೆ. ಕೇವಲ ಕುಸ್ತಿ ಇರದೆ ಹೆಣ್ಣುಮಗಳ ನೋವಿನ ಸನ್ನಿವೇಶಗಳ ಜತೆಗೆ ಒಂದೊಳ್ಳೆ ಸಂದೇಶ ಇರಲಿದೆ.
ಫೆಬ್ರವರಿ ೩ರಂದು ತನುಜಾ ಹಾಜರ್ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರಭಟ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ತನುಜಾ’ ಚಿತ್ರವು ಫೆಬ್ರವರಿ ೩ರಂದು ತೆರೆಕಾಣಲಿದೆ. ಕೊರೋನಾ ವೇಳೆ ನಿಟ್ ಪರೀಕ್ಷೆ ಬರೆಯಲಾಗದೆ ಒದ್ದಾಡಿದ ಹುಡುಗಿಗೆ ಮುಖ್ಯಮಂತ್ರಿಗಳೇ ಕೇಂದ್ರದ ನೆರವು ಪಡೆದು ಪರೀಕ್ಷೆ ಬರೆಯಲು ಸಹಕರಿಸುವ ಕಥೆ ಇದಾಗಿದೆ. ಅಂದು ಸುದ್ದಿಯು ಕರ್ನಾಟಕ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಶಿವಮೊಗ್ಗ ಜಿಲ್ಲೆಯ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್ ಎಕ್ಸಾಂ ಬರೆದ ಅಂಶಗಳನ್ನು ತೆಗೆದುಕೊಂಡು ಸಿನಿಮಾ ರೂಪಕ್ಕೆ ....
*ಸುಂದರ ಹಾಡುಗಳಿಂದ ಪ್ರೇಕ್ಷಕರ ಗಮನ ಸೆಳೆದ ‘ಓ ಮನಸೇ’* ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಓ ಮನಸೇ’ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಯೂಟ್ಯೂಬ್ ನಲ್ಲೂ ಹಾಡುಗಳು ಟ್ರೆಂಡ್ ಕ್ರಿಯೇಟ್ ಮಾಡಿದೆ. ‘ಶ್ರೀ ಫ್ರೆಂಡ್ಸ್ ಮೂವಿ ಮೆಕರ್ಸ್’ ಲಾಂಛನದಲ್ಲಿ ಎಂ.ಎನ್ ಭೈರೆಗೌಡ, ಕೆ.ಹೆಚ್. ಧನಂಜಯ, ಕೆ.ವೆಂಕಟೇಶ್, ಸು.ಕಾ ರಾಮು, ಯುವರಾಜ್ ಕೆ.ಎ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ನಡೆದ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಾಪಕರು, ‘ಇದು ನಮ್ಮ ಬ್ಯಾನರ್ ನಲ್ಲಿ ನಿರ್ಮಿಸಿರುವ ಮೊದಲ ಸಿನಿಮಾ. ಮುಂದೆಯೂ ಜನರಿಗೆ ಸದಭಿರುಚಿ ಸಿನಿಮಾ ಕೊಡುವ ಉದ್ದೇಶದಿಂದ ....
*"ಡ್ಯಾಶ್" ಹಾಡಿನ ಮೂಲಕ ಕೋಟಿ ಜನರ ಮನಸೆಳೆದ "ಸೂತ್ರಧಾರಿ"* ಹೊಸ ವರ್ಷದ ಸಂಭ್ರಮಕ್ಕಾಗಿ ಡಿಸೆಂಬರ್ ಕೊನೆಯಲ್ಲಿ ’ಸೂತ್ರಧಾರಿ’ ಚಿತ್ರದ "ಡ್ಯಾಶ್" ’ ಹಾಡು ಬಿಡುಗಡೆಯಾಗಿತ್ತು. ಈ ಹಾಡಿಗೆ ಪ್ರೇಕ್ಷಕರಿಂದ ಅದ್ಭುತ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಡಿಮೆ ಸಮಯದಲ್ಲೇ ಈ ಹಾಡು 10 ಮಿಲಿಯನ್ ಗೂ ಅಧಿಕ ಬಾರಿ ವೀಕ್ಷಣೆ ಗೊಂಡು ದಾಖಲೆ ನಿರ್ಮಿಸಿದೆ. ಇತ್ತೀಚಿಗೆ ಕೇಕ್ ಕಟ್ ಮಾಡುವ ಮೂಲಕ ಚಿತ್ರತಂಡ ಸಂಭ್ರಮಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ ನವರಸನ್, ’ನನಗೆ ಈ ಸಂಭ್ರಮ ವಿಶೇಷ. ನಾನು ಇಷ್ಟು ದಿನ ಮಾಡಿರುವ ಸಿನಿಮಾಗಳ ಪೈಕಿ ಇಷ್ಟು ಒಳ್ಳೆಯ ರೆಸ್ಪಾನ್ಸ್ ಯಾವ ಹಾಡಿಗೂ ಸಿಕ್ಕಿಲ್ಲ. ನನ್ನ ಚಿತ್ರದಲ್ಲಿ ಹಿಟ್ ....
*ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು "ಲವ್ ಬರ್ಡ್ಸ್" ಚಿತ್ರದ ಸುಮಧುರ ಹಾಡು* . ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ "ಲವ್ ಬರ್ಡ್ಸ್" ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ನೀನೇ ದೊರೆತ ಮೇಲೆ" ಎಂಬ ಹಾಡು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಇತ್ತೀಚೆಗೆ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಮಾಸ್ತಿ ಮುಂತಾದವರು ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕೌಟುಂಬಿಕ ಚಿತ್ರಗಳು ಇತ್ತೀಚೆಗೆ ಬರುತ್ತಿರುವುದು ಸ್ವಲ್ಪ ಕಡಿಮೆ. ಆ ಸಮಯದಲ್ಲಿ ....
ಆರ್ಸಿ ಬ್ರದರ್ಸ್ ಟ್ರೈಲರ್, 26ಕ್ಕೆ ತೆರೆಗೆ ಸಹೋದರರಿಬ್ಬರ ನಡುವಿನ ಬಾಂಧವ್ಯದ ಕಥೆಯನ್ನು ಹಾಸ್ಯಮಯ ಘಟನೆಗಳನ್ನಿಟ್ಟುಕೊಂಡು ನಿರೂಪಿಸಿರುವ ಚಿತ್ರ ಆರ್ಸಿ ಬ್ರದರ್ಸ್. ತಬಲಾನಾಣಿ ಹಾಗೂ ಕುರಿಪ್ರತಾಪ್ ಅಣ್ಣ ತಮ್ಮನಾಗಿ ನಟಿಸಿರುವ ಈ ಚಿತ್ರಕ್ಕೆ ಪ್ರಕಾಶ್ಕುಮಾರ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ಕಟ್ ಹೇಳಿದ್ದಾರೆ. ಸಂಭ್ರಮಶ್ರೀ, ನಯನ (ಕಾಮಿಡಿ ಕಿಲಾಡಿಗಳು)ಹಾಗೂ ನೀತುರಾಯ್ ಚಿತ್ರದ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೈಲರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚಿಗೆ ನಡೆಯಿತು. ಮಣಿ ಶಶಾಂಕ್ ಈ ಚಿತ್ರದ ನಿರ್ಮಾಪಕರಾಗಿದ್ದು, ಶ್ರೀಮತಿ ಸಹನಾ ಗಿರೀಶ್ ಸಹ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ. ಈ ....