*ಚಂದನ್ ಶೆಟ್ಟಿ ಹಾಗೂ ಆರ್ ಚಂದ್ರು ಅವರಿಂದ ಅನಾವರಣವಾಯಿತು "ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರದ "ಪೋಸ್ಟ್ ಕಾರ್ಡ್" ಹಾಡು* . *ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆದಿರುವ ಈ ಚಿತ್ರ ಸೆಪ್ಟೆಂಬರ್ 19ರಂದು ಬಿಡುಗಡೆ* . ಮೇಘಶ್ರೀ ರಾಜೇಶ್ ನಿರ್ಮಾಣದ, ಜೆ.ವಿ.ಆರ್ ದೀಪು ನಿರ್ದೇಶನದ ಹಾಗೂ "ಫ್ರೆಂಚ್ ಬಿರಿಯಾನಿ" ಖ್ಯಾತಿಯ ಮಹಾಂತೇಶ್ ಹಿರೇಮಠ ನಾಯಕನಾಗಿ ನಟಿಸಿರುವ ಗ್ರಾಮೀಣ ಸೊಗಡಿನ ಕಾಮಿಡಿ ಕಥಾಹಂದರ ಹೊಂದಿರುವ "ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರಕ್ಕಾಗಿ ವಿಕ್ರಮ್ ವಸಿಷ್ಠ ಅವರು ಬರೆದಿರುವ, ನಿತಿನ್ ರಾಜರಾಮ್ ಶಾಸ್ತ್ರಿ ಹಾಗೂ "ಜೋಗಿ" ಸುನಿತಾ ಅವರು ಹಾಡಿರುವ ಮತ್ತು ಪ್ರವೀಣ್ - ಪ್ರದೀಪ್ ಸಂಗೀತ ನೀಡಿರುವ "ಪೋಸ್ಟ್ ಕಾರ್ಡ್" ಹಾಡು ....
ಕಮಲ್ ಶ್ರೀದೇವಿ ಪ್ರೀ ರಿಲೀಸ್ ಇವೆಂಟ್ ಕಮಲ್ ಶ್ರೀದೇವಿ ಚಿತ್ರ ಇದೇ ವಾರ ಅಂದ್ರೆ 19ನೇ ತಾರೀಖು ರಾಜ್ಯಾದಾದ್ಯಂತ ಬಿಡುಗಡೆಯಾಗ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ನಗರದ ಮಂತ್ರಿಮಾಲ್ ನಲ್ಲಿ ಪ್ರೀ ರಿಲೀಸ್ ಇವೆಂಟ್ ಆಯೋಜಿಸಿತ್ತು. ಪ್ರೇಕ್ಷಕರ ನಡುವೆ ನಡೆದ ಈ ಕಾರ್ಯಕ್ರಮದಲ್ಲಿ ಇಡೀ ಕಮಲ್ ಶ್ರೀ ದೇವಿ ಚಿತ್ರತಂಡ ಭಾಗಿಯಾಗಿತ್ತು. ತರುಣ್ ಸುಧೀರ್ ರಿಂದ ಕಮಲ್ ಶ್ರೀದೇವಿ ಫಸ್ಟ್ ರಿವ್ಯೂ ರಾಗಿಣಿ ದ್ವಿವೇದಿಯಿಂದ ಭರವಸೆಯ ನುಡಿ ಈ ಚಿತ್ರಕ್ಕೆ ಶುಭ ಕೋರಲು ಮುಖ್ಯ ಅತಿಥಿಗಳಾಗಿ ನಿರ್ದೇಶಕ ನಿರ್ಮಾಪಕ ತರುಣ್ ಸುಧೀರ್ ಹಾಗೂ ರಾಗಿಣಿ ದ್ವಿವೇದಿ ಆಗಮಿಸಿದ್ದರು. ಹಾಗೇ ಚಿತ್ರವನ್ನ ಈಗಾಗ್ಲೇ ನೋಡಿರುವಾಗಿ, ಇದು ಅದ್ಭುತ ಕಥೆಯ ಎಳೆಯಾಗಿದ್ದು, ಸಿನಿಮಾ ಎಷ್ಟೇ ....
*ಬಿಡುಗಡೆಯಾಯಿತು ಶಶಾಂಕ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ "ಬ್ರ್ಯಾಟ್"(BRAT) ಚಿತ್ರದ "ಗಂಗಿ ಗಂಗಿ" ಹಾಡು.* . *ಬಾಳು ಬೆಳಗುಂದಿ ಸಾಹಿತ್ಯ ಹಾಗೂ ಗಾಯನಕ್ಕೆ ಅಭಿಮಾನಿಗಳು ಫಿದಾ* . ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ, ಜನಪ್ರಿಯ ನಟ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಹಾಗೂ ಮಂಜುನಾಥ್ ಕಂದಕೂರ್ ನಿರ್ಮಾಣದ "ಬ್ರ್ಯಾಟ್" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮೂಡಿಬರುತ್ತಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಎಲ್ಲರ ಗಮನ ಸೆಳೆದಿದೆ. ಪ್ರಸ್ತುತ ಈ ಚಿತ್ರದ ಮತ್ತೊಂದು ....
ಕಮಲ್ ಶ್ರೀದೇವಿ ಟ್ರೈಲರ್ ಬಿಡುಗಡೆ ಸೆಪ್ಟೆಂಬರ್ 19ರಿಂದ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ... ಒಂದು ವಿಭಿನ್ನ ಪೋಸ್ಟರ್ ಹಾಗೂ ಟೀಸರ್ ನಿಂದ ವಿಶಿಷ್ಟವಾಗಿ ಗಮನ ಸೆಳೆದಿದ್ದ ಕಮಲ್ ಶ್ರೀದೇವಿ ಚಿತ್ರತಂಡ ಇದೀಗ ಟ್ರೈಲರ್ ಬಿಡುಗಡೆ ಮಾಡಿದೆ. ಕಮಲ್ ಶ್ರೀದೇವಿ ಚಿತ್ರದ ಟ್ರೈಲರ್ ಪೋಸ್ಟರ್, ಟೀಸರ್ ಹಾಗೂ ಹಾಡು ಎಷ್ಟು ನಿರೀಕ್ಷೆ ಹುಟ್ಟಿಸಿದ್ವೋ ಅದಕ್ಕೆ ಹತ್ತಪಟ್ಟು ಹೆಚ್ಚು ಚಿತ್ರದ ಮೇಲೆ ಭರವಸೆ ಹುಟ್ಟಿಸಿದೆ.. ತಾಂತ್ರಿಕ ಗುಣಮಟ್ಟ, ಪಾತ್ರಗಳ ವಿಶೇಷ ಕಮಲ್ ಶ್ರೀದೇವಿ ಚಿತ್ರ ಉದ್ಯಮದಲ್ಲಿ ಸಂಚಲನ ಸೃಷ್ಟಿಸೋ ಸೂಚನೆ ಕೊಡ್ತಿದೆ. ಈಗಾಗ್ಲೇ ನಿಮಗೆಲ್ಲಾ ಗೊತ್ತಿರೋ ಕಮಲ್ ಶ್ರೀದೇವಿ ಶ್ರೀ ಎನ್ ಚಲುವರಾಯ ಸ್ವಾಮಿ ಅರ್ಪಿಸಿ, ಸ್ವರ್ಣಾಂಬಿಕ ....
ಚಾಮಯ್ಯ ಸನ್ ಆಫ್ ರಾಮಾಚಾರಿ ಟ್ರೇಲರ್ ಬಿಡುಗಡೆ ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರದ ಎರಡನೇ ಪ್ರಚಾರ ಸಲುವಾಗಿ ಟ್ರೇಲರ್ ಬಿಡುಗಡೆ ಸಮಾರಂಭವು ಎಸ್ಆರ್ವಿ ಚಿತ್ರಮಂದಿರ ಕಿಕ್ಕಿರಿದ ಜನಸಂದಣಿಯಲ್ಲಿ ಎರಡು ನಿಮಿಷದ ಟ್ರೇಲರ್ ಅನಾವರಣಗೊಂಡಿತು. ಜೋಳಿಗೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಪಲ್ಲಕ್ಕಿ ಬರವಣಿಗೆ, ನಿರ್ದೇಶನ ಮತ್ತು ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರಾಧಾಕೃಷ ಪಲ್ಲಕ್ಕಿ ಬಂಡವಾಳ ಹೂಡಿದ್ದು, ಗೌತಮ್ ಪಲ್ಲಕ್ಕಿ ಮತ್ತು ವಿ.ಗೋವಿಂದರಾಜು ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ‘ಕೋಟೆ ನಾಡಿನ ನಾಗರ ಹಾವು’ ಎಂಬ ಅಡಿಬರಹವಿದೆ. ಈ ....
*SWCL ಮೊದಲ ಆವೃತ್ತಿಯ ಚಾಂಪಿಯನ್ಸ್ ಮೋನಿಕಾ ಕಲ್ಲೂರಿ ಆರ್ಟ್ಸ್ ಒಡೆತನದ "ಟೀಮ್ ಮಂಜುಳ" ತಂಡದಿಂದ ವಿಜಯೋತ್ಸವ* . *ತಂಡದ ಸದಸ್ಯರಿಗೆ ಸ್ಮರಣಿಕೆ ನೀಡಿ ಸನ್ಮಾನಿಸಿದ ಮೋನಿಕಾ ಕಲ್ಲೂರಿ* . ಇತ್ತೀಚೆಗಷ್ಟೇ ದುಬೈನಲ್ಲಿ SWCL ಸ್ಯಾಂಡಲ್ ವುಡ್ ವುಮೆನ್ಸ್ ಕ್ರಿಕೆಟ್ ಲೀಗ್ ನ ಮೊದಲ ಆವೃತ್ತಿ ನಡೆದಿತ್ತು. ಮೋನಿಕಾ ಕಲ್ಲೂರಿ ಆರ್ಟ್ಸ್ ಒಡೆತನದ "ಟೀಮ್ ಮಂಜುಳಾ" ತಂಡ ಈ ಲೀಗ್ ನ ಚಾಂಪಿಯನ್ಸ್ ಆಗಿದ್ದರು. ವಿಜೇತ ತಂಡದ ಸದಸ್ಯರನ್ನು "ಟೀಮ್ ಮಂಜುಳಾ" ತಂಡದ ಒಡತಿ ಮೋನಿಕಾ ಕಲ್ಲೂರಿ ಅವರು ಇತ್ತೀಚೆಗೆ ಆತ್ಮಿಯವಾಗಿ ಸನ್ಮಾನಿಸಿ, ತಂಡದ ಸದಸ್ಯರ ಜೊತೆಗೆ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ತಂಡದ ರಾಯಭಾರಿ ನಟಿ ಅನು ಪ್ರಭಾಕರ್, ಕ್ಯಾಪ್ಟನ್ ಸಂಗೀತ ....
*ಟ್ರೇಲರ್ನಲ್ಲಿ ರೂಮ್ ಬಾಯ್..ಇದೇ 12ರಂದು ಲಿಖಿತ್ ಸೂರ್ಯ ಹೊಸ ಪ್ರಯತ್ನ ತೆರೆಗೆ ಎಂಟ್ರಿ* *ಲಿಖಿತ್ ಸೂರ್ಯ ನಟನೆಯ ರೂಮ್ ಬಾಯ್ ಟ್ರೇಲರ್ ಅನಾವರಣ..ಇದೇ 12ಕ್ಕೆ ಸಿನಿಮಾ ರಿಲೀಸ್* ಒಂದಷ್ಟು ಪ್ರತಿಭಾನ್ವಿತರ ಪರಿಶ್ರಮದಿಂದ ತಯಾರಾಗಿರುವ ’ರೂಮ್ ಬಾಯ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಕನ್ನಡದ ಖ್ಯಾತ ನಿರ್ದೇಶಕ ದಯಾಳ್ ಪದ್ಮನಾಭನ್ ಟ್ರೇಲರ್ ಅನಾವರಣ ಮಾಡಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನಿರ್ದೇಶಕ ದಯಾಳ್ ಪದ್ಮನಾಭನ್ ಸೇರಿದಂತೆ ಇಡೀ ಚಿತ್ರತಂಡ ಉಪಸ್ಥಿತರಿದ್ದರು. ನಿರ್ದೇಶಕ ದಯಾಳ್ ಪದ್ಮನಾಭನ್ ಮಾತನಾಡಿ, ನಾನು ಈಗಾಗಲೇ ಸಿನಿಮಾ ನೋಡಿದ್ದೇನೆ. ....
ರಾಮಾ ಅಂಡ್ ರಾಮು
ಟೀಸರ್ ಬಿಡುಗಡೆ;
ಪೌರಕಾರ್ಮಿಕರ ಸಮಸ್ಯೆ ಕುರಿತಾದ ಚಂದ್ರು ಓಬಯ್ಯ ನಟನೆ,
ನಿರ್ದೇಶನದ ಚಿತ್ರ
ಯೂ ಟರ್ನ್-2, ಕರಿಮಣಿ ಮಾಲೀಕ ಚಿತ್ರಗಳ ಖ್ಯಾತಿಯ ನಿರ್ದೇಶಕ ಚಂದ್ರು ಓಬಯ್ಯ ಇದೀಗ ಸಾಮಾಜಿಕ ಕಳಕಳಿ ಇರುವ ರಾಮಾ ಅಂಡ್ ರಾಮು ಚಿತ್ರವನ್ನು ನಿರ್ದೇಶನ ಮಾಡುವ ಜತೆಗೆ ನಿರ್ಮಾಣ ಕೂಡ ಮಾಡಿದ್ದಾರೆ. ಜತೆಗೆ ಚಿತ್ರದಲ್ಲಿ ಪೌರಕಾರ್ಮಿಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಚಿತ್ರದ ಟೀಸರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಟಿ ಇತ್ತೀಚೆಗೆ ನಡೆಯಿತು.
ಪೌರ ಕಾರ್ಮಿಕರ ದಿನ ನಿತ್ಯ ಎದುರಿಸುತ್ತಿರುವ ಸಮಸ್ಯೆಗಳು, ಈ ಹಂತದಲ್ಲಿ ನಾಗರೀಕರ ಪಾತ್ರದ ಬಗ್ಗೆ ಈ ಚಿತ್ರದಲ್ಲಿ ಹೇಳಲಾಗಿದೆ.
'ಸೆಪ್ಟೆಂಬರ್ 10' ಸೆ. 12ರಂದು ಬಿಡುಗದೆ ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ, ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಾಮಾಜಿಕ ಸಂದೇಶ ಇಟ್ಟುಕೊಂಡು ಶತ ಚಿತ್ರಗಳ ಸರದಾರ ಓಂ ಸಾಯಿಪ್ರಕಾಶ್ ಅವರು ಆಕ್ಷನ್ ಕಟ್ ಹೇಳಿರುವ ಚಿತ್ರ ’ಸೆಪ್ಟೆಂಬರ್ 10' ವಿಶ್ವ ಆತ್ಮಹತ್ಯೆ ತಡೆ ದಿನದ ಸಂದರ್ಭದಲ್ಲೇ ಬಿಡುಗಡೆಯಾಗಲಿದೆ. ಸೆ.12 ರಂದು ಈ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಸೆಪ್ಟೆಂಬರ್ 10 ಚಿತ್ರಕ್ಕೆ ಹಿಂದಿನಿಂದಲೂ ಬೆಂಬಲವಾಗಿ ನಿಂತಿರುವ ವೈದ್ಯ ಡಾ.ರಾಜು ಅವರು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದರು. ನಟ, ನಿರ್ಮಾಪಕ ಕಮಲ್ ಅವರು ಸೆಪ್ಟೆಂಬರ್ 10 ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿ ....
ಶಾರ್ಟ್ ಫಿಲಂ ಅಮೃತಾಂಜನ್, ಈಗ ಸಿನಿಮಾ ಆಗಿ ಪ್ರೇಕ್ಷಕರ ಮುಂದೆ.. ’ಅಮೃತ ಅಂಜನ’ ತಂದೆ ಮಗನ ಭಾಂಧವ್ಯದ ಕಥೆ.. ನಾಲ್ಕು ವರ್ಷಗಳ ಹಿಂದೆ ರಿಲೀಸಾಗಿ ಅತಿ ಹೆಚ್ಚು ವೀಕ್ಷಣೆಯಾಗಿ ಹೆಸರು ಮಾಡಿದ್ದ ಕಿರುಚಿತ್ರ ಅಮೃತಾಂಜನ್. ಜಯರಾಮ್ ಮೋಹಿತ್ (ಜೆ.ಆರ್.ಎಂ.) ಅವರ ನಿರ್ದೇಶನದ ಈ ಶಾರ್ಟ್ ಫಿಲಂ ಸೋಷಿಯಲ್ ಮೀಡಿಯಾದಲ್ಲಿ ಸಂಚಲನವನ್ನೇ ಸೃಷ್ಟಿಸಿತ್ತು. ಇದೀಗ ಅದೇ ಕಾನ್ಸೆಪ್ಟ್ ಇಟ್ಟುಕೊಂಡು ನಿರ್ದೇಶಕ ಜಯರಾಮ್ ಅವರು ’ಅಮೃತ- ಅಂಜನ’ ಎಂಬ ಚಲನಚಿತ್ರ ನಿರ್ದೇಶನ ಮಾಡಿದ್ದಾರೆ. ಆ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು ರಿಲೀಸ್ ಅನೌನ್ಸ್ ಮೆಂಟ್ ಗಾಗೇ ವಿಶೇಷ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಸುಧಾಕರ ಗೌಡ, ಗೌರವ್ ಶೆಟ್ಡಿ, ಕಾರ್ತೀಕ್ ರುವರಿ, ....
ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ ಸೆನ್ಸಾರ್ ಮಂಡಳಿ ನಿರ್ಲಕ್ಷ್ಯ ರವಿ ಶ್ರೀವತ್ಸ ಬೇಸರ ಡೆಡ್ಲಿ ಸೋಮ, ಮಾದೇಶ ಖ್ಯಾತಿಯ ರವಿ ಶ್ರೀವತ್ಸ ಅವರ ನಿರ್ಮಾಣ ಹಾಗೂ ನಿರ್ದೇಶನದ ’ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದ ಹಾಡು ಹಾಗೂ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ರಿಯಲ್ ಸ್ಟಾರ್ ಉಪೇಂದ್ರ ಅವರು ಟ್ರೈಲರ್ ಗೆ ಚಾಲನೆ ನೀಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ನಿರ್ಮಾಪಕ ಕೆ.ಮಂಜು, ಉಮೇಶ್ ಬಣಕಾರ್, ನ್ಯಾಯವಾದಿ ಟಿ.ಪ್ರಸನ್ನಕುಮಾರ್, ರಾಧಾಕೃಷ್ಣ ಅಡಿಗ, ಪ್ರವೀಣ್, ಉದಯ್, ಸೇತು ಮುಕುಂದನ್, ಥ್ರಿಲ್ಲರ್ ಮಂಜು ಹಾಗೂ ರವಿ ಶ್ರೀವತ್ಸ ಅವರ ಹಿತೈಶಿಗಳು ಹಾಗೂ ಸ್ನೇಹಿತರನೇಕರು ಹಾಜರಿದ್ದರು. ....
*'ಸೀಟ್ ಎಡ್ಜ್’ನಲ್ಲಿ ಕಂಡಿತು ಸಸ್ಪೆನ್ಸ್-ಥ್ರಿಲ್ಲರ್ ಝಲಕ್* *ಹೊರಬಂತು ’ವ್ಲಾಗ್-1 ದಿ ಲೂಪ್’ ಕಂಟೆಂಟ್ ವಿಡಿಯೋ* *ತೆರೆಗೆ ಬರಲು ತಯಾರಾಗುತ್ತಿದೆ ’ಸೀಟ್ ಎಡ್ಜ್’ ಚಿತ್ರ* ಯುವನಟ ಸಿದ್ಧು ಮೂಲಿಮನಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸಚಿತ್ರ ’ಸೀಟ್ ಎಡ್ಜ್’ ತೆರೆಗೆ ಬರಲು ತಯಾರಾಗುತ್ತಿದೆ. ಡಾರ್ಕ್ ಕಾಮಿಡಿಯ ಜೊತೆಗೆ ಹಾರರ್-ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬರುತ್ತಿರುವ ’ಸೀಟ್ ಎಡ್ಜ್’ ಸಿನಿಮಾದಲ್ಲಿ ನಾಯಕ ಸಿದ್ಧು ಮೂಲಿಮನಿ ಅವರಿಗೆ ರವೀಕ್ಷಾ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ, ರಘು ರಾಮನಕೊಪ್ಪ, ಗಿರೀಶ್ ಶಿವಣ್ಣ, ಮಿಮಿಕ್ರಿ ಗೋಪಿ, ಲಕ್ಷ್ಮಿ ....
*ಕಲಿಯುಗ ಕೃಷ್ಣನ ಮಿಡಲ್ ಕ್ಲಾಸ್ ರಾಮಾಯಣ* *ಮಿಡಲ್ ಕ್ಲಾಸ್ ರಾಮಾಯಣ ಟ್ರೇಲರ್ ನೋಡಿದ್ರೆ ನಕ್ಕು ನಕ್ಕು ಸುಸ್ತಾಗ್ತಿರಾ..!* ಸಿನಿಮಾ ಅಂದ್ರೆನೆ ಒಂದೊಳ್ಳೆ ಮನರಂಜನೆ. ಆ ಮನರಂಜನೆಗಾಗಿಯೇ ಸಿನಿಪ್ರೇಮಿಗಳು ಥಿಯೇಟರ್ ಹೋಗೋದು. ನೋವು, ಟೆನ್ಶನ್ ಎಲ್ಲಾ ಮರೆತು ಬರಬೇಕು ಅಂದ್ರೆ ಅಲ್ಲಿ ಬರಪೂರವಾದಂತ ನಗು ಇರಬೇಕು. ಅಂಥ ನಗು ಇರುವ ಸಿನಿಮಾವೊಂದು ರಿಲೀಸ್ ಗೆ ರೆಡಿಯಾಗಿದೆ. ಅದುವೆ ಮಿಡಲ್ ಕ್ಲಾಸ್ ರಾಮಾಯಣ. ಸೆಪ್ಟೆಂಬರ್ 12ಕ್ಕೆ ಸಿನಿಮಾ ರಿಲೀಸ್ ಆಗ್ತಾ ಇದೆ. ಈಗಷ್ಟೇ ಟ್ರೇಲರ್ ರಿಲೀಸ್ ಆಗಿದೆ. ಟ್ರೇಲರ್ ನಲ್ಲಂತೂ ಮಿಡಲ್ ಕ್ಲಾಸ್ ಮಂದಿಯ ಮದುವೆಯ ಅದೆಷ್ಟೋ ಸಂಕಷ್ಟಗಳನ್ನ ತೋರಿಸಿದ್ದಾರೆ. ಅಷ್ಟೇ ನಗು ಇದೆ. ಮೋಕ್ಷಿತಾ ಪೈ ಅಂತು ತಮ್ಮ ರಿಯಲ್ ಕಲರ್ ....
. *ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಿಂದ "ದೈವ" ಚಿತ್ರದ ಟೀಸರ್ ಬಿಡುಗಡೆ .* *ಮೂಲತಃ ಅಧ್ಯಾಪಕರಾಗಿದ್ದ MJ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಶಿಕ್ಷಕರ ದಿನದಂದೇ ಬಿಡುಗಡೆ.* ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಜಯಮ್ಮ ಪದ್ಮರಾಜ್ ನಿರ್ಮಿಸಿರುವ, ರಾಮಪ್ಪ ಸೋಮಪ್ಪ ಮೇಗಲಮನಿ, ಸೋಮಶೇಖರ್ ಜಿ ಪಟ್ಟಣಶೆಟ್ಟಿ ಅವರ ಸಹ ನಿರ್ಮಾಣವಿರುವ ಹಾಗೂ MJ ಅವರು ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ "ದೈವ" ಚಿತ್ರದ ಟೀಸರ್ ಶಿಕ್ಷಕರ ದಿನಾಚರಣೆಯ ದಿನದಂದು ಬಿಡುಗಡೆಯಾಯಿತು. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಾದ ಗುರು ದೇಶಪಾಂಡೆ, ಹರಿ ಸಂತೋಷ್, ಭರ್ಜರಿ ಚೇತನ್, ಜಡೇಶ್ ಕೆ ಹಂಪಿ ಹಾಗೂ ನಿರ್ದೇಶಕರ ಸಂಘದ ....
*ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ "ಕೊನಾರ್ಕ್" ಚಿತ್ರಕ್ಕೆ ಚಾಲನೆ* . *ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ಧನುಷ್ ಹಾಗೂ ಫಾಲ್ಗುಣಿ ಖನ್ನ ನಾಯಕ - ನಾಯಕಿ* . "ನಾನು ಮತ್ತು ಗುಂಡ" ಖ್ಯಾತಿಯ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ, ಮಾವಿನಮರ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಧನುಷ್ - ಫಾಲ್ಗುಣಿ ಖನ್ನ ನಾಯಕ - ನಾಯಕಿಯಾಗಿ ನಟಿಸುತ್ತಿರುವ "ಕೊನಾರ್ಕ್" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಾಗರಭಾವಿಯ ಶ್ರೀದುರ್ಗಪರಮೇಶ್ವರಿ ದೇವಸ್ಥಾನದಲ್ಲಿ ಆರಂಭವಾಯಿತು. ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಆರಂಭ ಫಲಕ ತೋರಿ "ಕೊನಾರ್ಕ್" ಚಿತ್ರಕ್ಕೆ ....
*"ಭೀಮ" ಖ್ಯಾತಿಯ ಪ್ರಿಯಾ ಅಭಿನಯದ "ಕುಂಭ ಸಂಭವ" ಚಿತ್ರದ ಟೀಸರ್ ಬಿಡುಗಡೆ* . *ಚಿತ್ರೀಕರಣr ಮುಗಿಸಿ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ ಟಿ.ಎನ್.ನಾಗೇಶ್ ನಿರ್ದೇಶನದ ಈ ಚಿತ್ರ* . "ಭೀಮ" ಚಿತ್ರದ ಗಿರಿಜಾ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ಪ್ರಿಯಾ ಅವರು ಟಿ.ಎನ್.ನಾಗೇಶ್ ನಿರ್ದೇಶನದ "ಕುಂಭ ಸಂಭವ" ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲೂ ಪೊಲೀಸ್ ಅಧಿಕಾರಿಯಾಗಿ ಪ್ರಿಯಾ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆ ಅದ್ದೂರಿಯಾಗಿ ನೆರವೇರಿತು. ಪರಿಪೂರ್ಣ ಸನಾತನ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಸಂಸ್ಥಾಪಕರಾದ ಗುರೂಜಿ ಡಾ. ಶ್ರೀ ಎ. ವಿ. ಶ್ರೀನಿವಾಸನ್ ....
*ಯುವ ರಾಜಕುಮಾರ್ ಅವರಿಂದ ಅನಾವರಣವಾಯಿತು "ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರದ ಟ್ರೇಲರ್* . *ಗ್ರಾಮೀಣಾ ಸೊಗಡಿನ ಈ ಕಾಮಿಡಿ ಕಥಾನಕ ಸೆಪ್ಟೆಂಬರ್ 19ರಂದು ಬಿಡುಗಡೆ* . ಮೇಘಶ್ರೀ ರಾಜೇಶ್ ನಿರ್ಮಾಣದ, ಜೆ.ವಿ.ಆರ್ ದೀಪು ನಿರ್ದೇಶನದ ಹಾಗೂ "ಫ್ರೆಂಚ್ ಬಿರಿಯಾನಿ" ಖ್ಯಾತಿಯ ಮಹಾಂತೇಶ್ ಹಿರೇಮಠ ನಾಯಕನಾಗಿ ನಟಿಸಿರುವ ಗ್ರಾಮೀಣ ಸೊಗಡಿನ ಕಾಮಿಡಿ ಕಥಾಹಂದರ ಹೊಂದಿರುವ "ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಯುವ ರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಮಸಾಲ ಜಯರಾಮ್, ಸುಬ್ರಹ್ಮಣ್ಯ, ರೂಪಾಲಿ,ನಿರ್ಮಾಪಕರಾದ ನವರಸನ್, ರಮೇಶ್, ಸುರೇಶ್, ನಟಿ ಕಾರುಣ್ಯ ರಾಮ್ ಹಾಗೂ ನಿರ್ದೇಶಕರಾದ ....
'ಸ್ವಾಮಿ’ ಎನ್ನುವ ಹಂತಕನ ಸಂಚು..! ಚಿತ್ರ: ರಿಪ್ಪನ್ ಸ್ವಾಮಿ ನಿರ್ದೇಶನ: ಕಿಶೋರ್ ಮೂಡುಬಿದಿರೆ ನಿರ್ಮಾಣ: ಪಂಚಾನನ ಫಿಲ್ಮ್ಸ್ ತಾರಾಗಣ: ವಿಜಯ ರಾಘವೇಂದ್ರ, ಅಶ್ವಿನಿ ಚಂದ್ರಶೇಖರ್ ಮೊದಲಾದವರು. ಸ್ವಾಮಿ ಎನ್ನುವ ಹೆಸರಿಗೂ ಈತನ ವರ್ತನೆಗೂ ಸಂಬಂಧವೇ ಇಲ್ಲ. ಯಾಕೆಂದರೆ ಅಷ್ಟೊಂದು ಕ್ರೌರ್ಯ ತುಂಬಿದ ಬದುಕು ರಿಪ್ಪನ್ ಸ್ವಾಮಿಯದು. ತನ್ನ ಸಾಕು ಹಂದಿಯನ್ನೇ ಮಾಂಸಕ್ಕಾಗಿ ಬಲಿಕೊಡುವ ಸಂದರ್ಭದಲ್ಲಿ ಗುಂಡು ಹೊಡೆದು ಕೊಲ್ಲುವಂಥ ವಿಚಿತ್ರ ಮನುಷ್ಯ. ಈತ ಉರಿಗಣ್ಣು ಬಿಟ್ಟು ಯಾರ ವಿರುದ್ಧ ಯಾವಾಗ ಸಿಡಿದು ನಿಲ್ಲುತ್ತಾನೆಂದೇ ಹೇಳಲಾಗದು. ಇಂಥ ರಿಪ್ಪನ್ ಸ್ವಾಮಿಗೆ ಒಬ್ಬಳು ಅಂದದ ಮಡದಿ ಇರುತ್ತಾಳೆ. ವೃತ್ತಿಯಲ್ಲಿ ಆಯುರ್ವೇದಿಕ್ ವೈದ್ಯೆ. ಈ ....
"ಜೈ" ಚಿತ್ರದ ಟೀಸರ್ ಲಾಂಚ್ ಮಾಡಿದ ರೋರಿಂಗ್ ಸ್ಟಾರ್ ಶ್ರೀಮುರಳಿ. ಗೌರಿ ಗಣೇಶ ಹಬ್ಬದ ವಿಶೇಷ ಸಂದರ್ಭದಲ್ಲಿ ಕರಾವಳಿ ಭಾಗದ ಪ್ರತಿಭೆ ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವಂತಹ ತುಳು ಹಾಗೂ ಕನ್ನಡ ಚಿತ್ರದ ಟೀಸರ್ ಬಿಡುಗಡೆ ಸಮಾರಂಭವನ್ನು ಆಯೋಜನೆ ಮಾಡಿದ್ದು , ವಿಶೇಷವಾಗಿ ಕರಾವಳಿ ಚಂಡೆ ವಾದ್ಯದ ಮೂಲಕ ರೋರಿಂಗ್ ಸ್ಟಾರ್ ಶ್ರೀ ಮುರಳಿಯನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಂಡು ದೀಪವನ್ನು ಬೆಳಗುವುದರ ಮೂಲಕ ಚಾಲನೆ ನೀಡಿದರು. ಇನ್ನು ವಿಶೇಷವಾಗಿ ಮೈಸೂರು ಮೂಲದ ರಾಪ್ ಗಾಯಕರು ಜೈ ಚಿತ್ರಕ್ಕೆ ಸೈ ಎಂಬ ಹಿಪಪ್ ರಾಪ್ ಸಾಂಗ್ ಮೂಲಕ ಗಮನ ಸೆಳೆದರು. ಇನ್ನು ಈ ಚಿತ್ರದ ಮುಖ್ಯ ಅತಿಥಿಯಾಗಿ ಆಗಮಿಸಿದ ನಟ ....
ಮನಸೆಳೆಯುವ ತಾಯಿ ಮಗನ ಸಾಂಗ್... ಇದೇ 29ರಂದು "ಅಂದೊಂದಿತ್ತು ಕಾಲ" ರಿಲೀಸ್. ಗೌರಿ ಗಣೇಶನಿಗೆ ಪೂಜೆ ಸಲ್ಲಿಸಿ ಪತ್ರಿಕಾಗೋಷ್ಠಿ ಆರಂಭಿಸಿದ ಚಿತ್ರತಂಡ. ಬಹಳಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿರುವ "ಅಂದೊಂದಿತ್ತು ಕಾಲ" ಚಿತ್ರದ ’ ಮಹಾರಾಜ ಹಾಗೆಂದು.. ಮನಸಾರೆ ಹಾರೈಸಿದೆ ನೀನಮ್ಮ’... ಎಂಬ ತಾಯಿ ಮಗನ ಬಾಂಧವ್ಯದ ಮನಮುಟ್ಟುವ ಹಾಡು ಇಂದು ಅಧಿಕೃತವಾಗಿ ಬಿಡುಗಡೆಗೊಂಡಿದೆ. ಕೆಜಿಎಫ್ ಖ್ಯಾತಿಯ ಕಿನ್ನಾಲ್ ರಾಜ್ ಸಾಹಿತ್ಯ ಬರೆದಿರುವ ಈ ಹಾಡನ್ನು ಸುನಿಲ್ ಕಶ್ಯಪ್ ಹಾಡಿದ್ದಾರೆ. ತಾಯಿ-ಮಗನ ಪ್ಯಾತೋ ಸಾಂಗ್ ಇದಾಗಿದ್ದು , ಮದರ್ ಆ್ಯಂತಮ್ ಎಂದೇ ಹೇಳಬಹುದು. ಈ ಚಿತ್ರದ ಪ್ರತಿಯೊಂದು ಹಾಡು ವಿಭಿನ್ನವಾಗಿ ಮೂಡಿ ಬಂದಿದ್ದು , ಈಗಾಗಲೇ ಎರಡು ....