" *ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಗ್ರೀನ್" ಚಿತ್ರದ ಟ್ರೇಲರ್ ಅನಾವರಣ ** .
*ಸೈಕಲಾಜಿಕಲ್ ಮೈಂಡ್ ಬೆಂಡಿಂಗ್ ಕಥಾಹಂದರ ಹೊಂದಿರುವ ಈ ಚಿತ್ರ ಅಕ್ಟೋಬರ್ 23 ರಂದು ತೆರೆಗೆ* .
ಗುನಾದ್ಯ ಪ್ರೊಡಕ್ಷನ್ಸ್ ಅರ್ಪಿಸುವ,
ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ಹಾಗೂ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ. ವಿಕ್ಕಿ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿರುವ "ಗ್ರೀನ್" ಚಿತ್ರದ ಟ್ರೇಲರ್ ಅನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು "ಗ್ರೀನ್" ಕುರಿತು ಮಾತನಾಡಿದರು.
*'ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ಪಾತ್ರ ಪರಿಚಯ* *ಹೊರಬಂತು ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಕ್ಯಾರೆಕ್ಟರ್ ಟೀಸರ್* *ತೆರೆಮೇಲೆ ಮುಖ್ಯಮಂತ್ರಿಯಾಗಿ ಎಲ್. ಆರ್. ಶಿವರಾಮೇಗೌಡ ಪ್ರಮಾಣ ವಚನ!* *ಬೆಳ್ಳಿತೆರೆ ಮೇಲೆ ಮುಖ್ಯಮಂತ್ರಿಯಾದ ಖುಷಿಯಲ್ಲಿ ಮಂಡ್ಯದ ಮಾಜಿ ಸಂಸದ* *ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದತ್ತ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ* ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. ಇದೀಗ ಈ ಸಿನಿಮಾ ಸದ್ದಿಲ್ಲದೆ ತನ್ನ ಚಿತ್ರೀಕರಣವನ್ನು ಪೂರೈಸಿದೆ. ಸಿನಿಮಾದ ಹೆಸರೇ ಹೇಳುವಂತೆ, ....
ಪ್ರೇಮಿಗಳ ಗಮನಕ್ಕೆ ಟ್ರೈಲರ್ ಬಿಡುಗಡೆ ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ವಾಸಿಸುವ, ಅದರಲ್ಲೂ ಬೇರೆ ಊರುಗಳಿಂದ ಬಂದವರ ನಡುವೆ ಲಿವಿಂಗ್ ರಿಲೇಶನ್ಶಿಪ್ ಹೆಚ್ಚಾಗುತ್ತಿದೆ. ಬೆಂಗಳೂರಿನಂಥ ದೊಡ್ಡ ದೊಡ್ಡ ನಗರಗಳಲ್ಲಿ ವಾಸಿಸುವ ಐಟಿ, ಬಿಟಿ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಲ್ಲಿ ಇಂಥ ಸಂಬಂಧಗಳು ಕಂಡುಬರುತ್ತಿದೆ. ವಯಸ್ಸಿಗೆ ಬಂದ ಯುವಕ, ಯುವತಿಯರು ಮದುವೆಯಾಗದೆ ಒಂದೇ ಮನೆಯಲ್ಲಿ ವಾಸಿಸುವ ವ್ಯವಸ್ಥೆಯನ್ನು ಈ ರೀತಿ ಕರೆಯಲಾಗುತ್ತದೆ. ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಲಿವಿಂಗ್ ರಿಲೇಶನ್ಶಿಪ್ನಲ್ಲಿದ್ದ ಇಬ್ಬರು ಪ್ರೇಮಿಗಳ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರದ ಹೆಸರು ಪ್ರೇಮಿಗಳ ಗಮನಕ್ಕೆ. ....
ಹೊಸತನದ ಸುಳಿವಿನೊಂದಿಗೆ ಟೈಮ್ ಪಾಸ್ ಟ್ರೈಲರ್ ಬಿಡುಗಡೆ! ಜನಪ್ರಿಯ ಸಿನಿಮಾಗಳ ಅಲೆಯ ನಡುವೆಯೇ ಒಂದಷ್ಟು ಹೊಸತನ ಹೊಂದಿರುವ ಚಿತ್ರಗಳು ತಣ್ಣಗೆ ಪ್ರೇಕ್ಷಕರ ಮುಂದೆ ಬರಲು ಅಣಿಯಾಗುತ್ತಿವೆ. ಸದ್ಯದ ಮಟ್ಟಿಗೆ ಆ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಚಿತ್ರ ಟೈಮ್ ಪಾಸ್. ಕೆ. ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ, ಇದೇ ಅಕ್ಟೋಬರ್ ೧೭ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಈ ಹಿನ್ನೆಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯ ಮೂಲಕ ಚಿತ್ರತಂಡ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿದೆ. ನಿರ್ದೇಶಕ ಚೇತನ್ ಜೋಡಿದಾರ್, ನಿರ್ಮಾಪಕರು, ಕಲಾವಿದರು ಮತ್ತು ತಂತ್ರಜ್ಞಸರ ಸಮ್ಮುಖದಲ್ಲಿ ಈ ಟ್ರೈಲರ್ ಬಿಡುಗಡೆಗೊಂಡಿದೆ. ಇದೇ ಹೊತ್ತಿನಲ್ಲಿ ....
*ಹೃದಯ ಕಲಕುವ ಶರತ್ ಮತ್ತು ಶರಧಿ ಕಿರುಚಿತ್ರ* ವಿಶ್ವದಲ್ಲೇ ಮೊದಲು ಎನ್ನುವಂತೆ ರಿಯಲ್ ಅಂದ ದಂಪತಿಗಳು ರೀಲ್ದಲ್ಲಿ ನಾಯಕ, ನಾಯಕಿಯಾಗಿ ಅಭಿನಯಿಸಿರುವ *ಶರತ್ ಮತ್ತು ಶರಧಿ* ಕಿರುಚಿತ್ರದ ವಿಶೇಷ ಪ್ರದರ್ಶನವನ್ನು ಮಾಧ್ಯಮದವರಿಗೆ ಏರ್ಪಡಿಸಲಾಗಿತ್ತು. ’ಏಪ್ರಿಲ್ನ ಹಿಮಬಿಂದು’ ಚಿತ್ರದ ನಿರ್ದೇಶಕ *ಎಂ.ಜಗದೀಶ್ ಕತೆ ಬರೆದು ಆಕ್ಷನ್ ಕಟ್* ಹೇಳುವುದರ ಜತೆಗೆ ನಿರ್ಮಾಣದಲ್ಲಿ ಪಾಲುದಾರರು. ಟಾಕ್ಗುರು ಕ್ರಿಯೇಶನ್ಸ್ ಅಡಿಯಲ್ಲಿ *ಗಣೇಶ್.ಬಿ.ಎಂ. ಬಂಡವಾಳ* ಹೂಡಿದ್ದಾರೆ. ನಂತರ ಮಾತನಾಡಿದ ನಿರ್ದೇಶಕರು, ಒಂದು ಸನ್ನಿವೇಶದಲ್ಲಿ ನಾವು ಕರೆಂಟ್ ಬಿಲ್ ದುಡ್ಡು ಉಳಿಸಬಹುದು ಎಂಬ ಸಂಭಾಷಣೆ ಇತ್ತು. ಅಶ್ವಿನಿರವರು ಇದನ್ನು ....
ಜೋಡೆತ್ತು ಜತೆ ಬಂದ ಚಿಕ್ಕಣ್ಣ ಮೂರು ಭಾಷೆಯ ಬೃಹತ್ ಸಿನಿಮಾ! ತುತ್ತು, ಮುತ್ತು, ಕುತ್ತುಗಳ ರೋಚಕ ಪಯಣ..! ಚಿಕ್ಕಣ್ಣ ನಾಯಕ ನಟರಾಗಿರುವ ಹೊಸ ಸಿನಿಮಾಕ್ಕೆ ಜೋಡೆತ್ತು ಎಂದು ನಾಮಕರಣ ಮಾಡಲಾಗಿದೆ. ಸೋಮಶೇಖರ್ (ಕಟ್ಟಿಗೇನಹಳ್ಳಿ) ನಿರ್ಮಾಣದ, ಎಸ್.ಮಹೇಶ್ ಕುಮಾರ್ ನಿರ್ದೇಶನವಿರುವ ಈ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೇರವೇರಿದೆ. ಖ್ಯಾತ ನಿರ್ದೇಶಕ, ನಿರ್ಮಾಪಕ ಆರ್.ಚಂದ್ರು ಕ್ಯಾಮೆರಾ ಸ್ವಿಚ್ ಆನ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಸ್ಯಾಂಡಲ್ವುಡ್ ‘ಅಧ್ಯಕ್ಷ’ ಶರಣ್ ಆರಂಭ ಫಲಕ ತೋರಿಸಿ, ಟೈಟಲ್ ಟೀಸರ್ ಬಿಡುಗಡೆ ಮಾಡಿ ‘ಜೋಡೆತ್ತು’ ತಂಡಕ್ಕೆ ಶುಭ ಹಾರೈಸಿದರು. ಕಂದಾಯ ಸಚಿನ ಕೃಷ್ಣ ಬೈರೇಗೌಡ ಸಮಾರಂಭಕ್ಕೆ ಆಗಮಿಸಿ ‘ಜೋಡೆತ್ತು’ ಬಳಗದ ....
*"ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿ ನಟಿಸುತ್ತಿರುವ "ಉಗ್ರಾಯುಧಮ್" ಚಿತ್ರಕ್ಕೆ ಅದ್ದೂರಿ ಚಾಲನೆ.* . *ಜಯರಾಮ್ ದೇವಸಮುದ್ರ ನಿರ್ಮಾಣದ ಏಳು ಶತಮಾನಗಳ ಹಿಂದಿನ ಈ ಪಿರಿಯಾಡಿಕ್ ಡ್ರಾಮ ಕಥಾನಕಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ ಪುನೀತ್ ರುದ್ರನಾಗ್* . ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಪುನೀತ್ ರುದ್ರನಾಗ್ ಚೊಚ್ಚಲ ನಿರ್ದೇಶನದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿ ಅಭಿನಯಿಸುತ್ತಿರುವ "ಉಗ್ರಾಯುಧಮ್" ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಶ್ರೀಮುರಳಿ ಅವರ ತಂದೆ, ಹಿರಿಯ ನಿರ್ಮಾಪಕ ....
*ಶ್ರೀ ಮಾರಮ್ಮ ದೇವಿ ಸನ್ನಿದಿಯಲ್ಲಿ ಶ್ರೀಮತಿ ಸಿಂಧೂರ ಮುಹೂರ್ತ* ಆರ್ ಅಂಡ್ ಆರ್ ಎಂಟರ್ಪ್ರೈಸಸ್ ಅಡಿಯಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ *ಡಿ.ಎನ್.ನಾಗೀರೆಡ್ಡಿ ನಿರ್ಮಾಣ*, *ಆರ್.ಅನಂತರಾಜು ನಿರ್ದೇಶನ* ಮಾಡುತ್ತಿರುವ *ಶ್ರೀಮತಿ ಸಿಂಧೂರ* ಚಿತ್ರವು ವಿಜಯದಶಮಿ ಶುಭದಿನದಂದು ಶ್ರೀ ಮಾರಮ್ಮ ದೇವಿ ಸನ್ನಿದಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು. ನಿರ್ಮಾಪಕರ ಪತ್ನಿ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿದರು. *ನಾಯಕನಾಗಿ ವಿಜಯರಾಘವೇಂದ್ರ*, ಹಳ್ಳಿ ಹುಡುಗಿಯಾಗಿ *ಪ್ರಿಯಾಹೆಗಡೆ ನಾಯಕಿ* ರೇಷ್ಮಾ.ವಿ.ಗೌಡ ಉಪನಾಯಕಿ. ವಿಲನ್ಗಳಾಗಿ ಪ್ರಸನ್ನಬಾಗೀನ, ಗಣೇಶ್ರಾವ್ ಕೇಸರ್ಕರ್. ’ಕಾಂತಾರ’ದಲ್ಲಿ ತಾಯಿ ಪಾತ್ರ ನಿರ್ವಹಿಸಿದ್ದ ....
*ರಾಷ್ಟ್ರ ಪ್ರಶಸ್ತಿ ಚಿತ್ರ ಕಂದೀಲು ಸಂತಸದ ಮಾತುಗಳು* *ಕಂದೀಲು* ಚಿತ್ರವು 71ನೇ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರಿಂದ ನಿರ್ಮಾಪಕರು ಮತ್ತು ನಿರ್ದೇಶಕರು ಎಲ್ಲರಿಗೂ ಕೃತಜ್ಘತೆ ಹೇಳುವ ಸಲುವಾಗಿ ತಂಡದೊಂದಿಗೆ ಮಾಧ್ಯಮದ ಮುಂದೆ ಹಾಜರಿದ್ದು ತೆರೆಯ ಹಿಂದಿನ ಶ್ರಮವನ್ನು ನೆನಪು ಮಾಡಿಕೊಂಡರು. ಇದಕ್ಕೂ ಮುನ್ನ ಕಲಾವಿದರು, ತಂತ್ರಜ್ಘರಿಗೆ ಬೆಳ್ಳಿ ನಾಣ್ಯ ನೀಡಿ ಗೌರವಿಸಲಾಯಿತು. *ನಿರ್ದೇಶಕಿ ಯಶೋಧ ಕೊಟ್ಟುಕತ್ತಿರ* ಮಾತನಾಡಿ ಸಿನಿಮಾ ಶುರುವಾದಾಗಿನಿಂದ ಎಲ್ಲರೂ ಶ್ರಮವಹಿಸಿ ಕೆಲಸ ನಿರ್ವಹಿಸಿದ್ದಾರೆ. ನಾನು ಎಲ್ಲರನ್ನು ನೆನೆಸಿಕೊಂಡು ಪ್ರಶಸ್ತಿ ಸ್ವೀಕರಿಸಿದೆ. ಯಾವ ರೀತಿ ರಾಷ್ಟ್ರಪತಿಗಳಿಂದ ಪ್ರಶಸ್ತಿ ....
*'ದಿಲ್ಮಾರ್’ಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್..ಕೆಜಿಎಫ್ ನಿರ್ದೇಶಕರ ಚೊಚ್ಚಲ ಇದು* *ದಿಲ್ಮಾರ್ ಸಿನಿಮಾದ ಮೊದಲ ಹಾಡು ಅನಾವರಣ.. ಸಾಥ್ ಕೊಟ್ಟ ಶ್ರೀಮುರಳಿ* ಕೆಜಿಎಫ್ ಸಿನಿಮಾದ ಸಂಭಾಷಣೆಕಾರ ಚಂದ್ರಮೌಳಿ ನಿರ್ದೇಶನ ಮಾಡಿರುವ ಚೊಚ್ಚಲ ಸಿನಿಮಾ ದಿಲ್ಮಾರ್ ತೆರೆಗೆ ಬರಲು ಸಜ್ಜಾಗಿದೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆ ಕಾರ್ಯಕ್ರಮ ನಿನ್ನೆ ಎಂಎಂಬಿ ಲೆಗಸಿಯಲ್ಲಿ ನಡೆಯಿತು. ರೋರಿಂಗ್ ಸ್ಟಾರ್ ಶ್ರೀಮುರಳಿ ದಿಲ್ಮಾರ್ ಚಿತ್ರದ ನೀನಿಲ್ಲದೇ ಎಂಬ ಪ್ಯಾಥೋ ಗೀತೆಯನ್ನು ಅನಾವರಣ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಶ್ರೀಮುರಳಿ ಮಾತನಾಡಿ, ನಿರ್ಮಾಪಕರು ಒಳ್ಳೆ ಪ್ರಯತ್ನ ಮಾಡಿದ್ದಾರೆ. ....
*ಸಿಂಪಲ್ ಸುನಿ ನಿರ್ದೇಶನದ ಗತವೈಭವ ಬಿಡುಗಡೆಗೆ ರೆಡಿ..ನ.14ಕ್ಕೆ ದುಶ್ಯಂತ್-ಆಶಿಕಾ ಸಿನಿಮಾ ತೆರೆಗೆ ಎಂಟ್ರಿ* *ನವೆಂಬರ್ 14ಕ್ಕೆ ಬೆಳ್ಳಿತೆರೆಯಲ್ಲಿ ಸಿಂಪಲ್ ಸುನಿ ’ಗತವೈಭವ’* *ದುಶ್ಯಂತ್-ಆಶಿಕಾ ರಂಗನಾಥ್ ನಟನೆಯ ಗತವೈಭವ ನವೆಂಬರ್ 14ಕ್ಕೆ ರಿಲೀಸ್* ಸಿಂಪಲ್ ಸುನಿ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ಗತವೈಭವ ತೆರೆಗೆ ಬರಲು ಸಜ್ಜಾಗಿದೆ. ನವೆಂಬರ್ 14ರಂದು ಈ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಯುವ ಪ್ರತಿಭೆ ದುಶ್ಯಂತ್ ನಾಯಕನಾಗಿ, ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಗತವೈಭವ ಟೀಸರ್ ಅನಾವರಣ ಮಾಡುವ ಮೂಲಕ ಚಿತ್ರತಂಡ ಪ್ರಚಾರ ಕಾರ್ಯ ನಡೆಸಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಗತವೈಭವ ....
*ನವರಾತ್ರಿ ಸಂದರ್ಭದಲ್ಲಿ ಅನಾವರಣವಾಯಿತು "ಮಾರುತ" ಚಿತ್ರದ "ನಮ್ಮಮ್ಮ ಸವದತ್ತಿ ಎಲ್ಲಮ್ಮ ಹಾಡು..* *ಭಕ್ತಿಪ್ರಧಾನ ಈ ಹಾಡಿಗೆ ಉಧೋ ಉಧೋ ಎನ್ನುತ್ತಿದೆ ಕರುನಾಡು* ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದ ಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ ಚಿತ್ರ "ಮಾರುತ" ಚಿತ್ರಕ್ಕಾಗಿ ಎಸ್ ನಾರಾಯಣ್ ಅವರೆ ಬರೆದು ಸಂಗೀತ ಸಂಯೋಜಿಸಿರುವ "ನಮ್ಮಮ್ಮ ಸವದತ್ತಿ ಎಲ್ಲಮ್ಮ" ಎಂಬ ಹಾಡು ನವರಾತ್ರಿಯ ಸಂದರ್ಭದಲ್ಲಿ ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಯಿತು. ಅನನ್ಯ ಭಟ್ ಅವರ ಗಾಯನದಲ್ಲಿ ....
*"ಫ್ರಾಡ್ ಋಷಿ" ಬಗ್ಗೆ ನಮ್ ಋಷಿ ಮಾತು* . *ಚಿತ್ರದ ಎರಡನೇ ಹಾಡನ್ನು ಬಿಡುಗಡೆ ಮಾಡಿ ಹಾರೈಸಿದ ನಿರ್ಮಾಪಕ ಕೆ.ಮಂಜು* . ’ಒಳಿತು ಮಾಡು ಮನುಸ" ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ "ಫ್ರಾಡ್ ಋಷಿ" ಚಿತ್ರದ ಎರಡನೇ ಹಾಡು "ಇವನೇ ಇವನೇ ಫ್ರಾಡು ಋಷಿ" ಇತ್ತೀಚೆಗೆ ಬಿಡುಗಡೆಯಾಗಿದೆ. ನಮ್ ಋಷಿ ಬರೆದು ಶ್ರೀಗುರು ಸಂಗೀತ ನೀಡಿರುವ ಹಾಗೂ ಸೋಮಶೇಖರ್ ಅವರು ಹಾಡಿರುವ ಈ ಹಾಡನ್ನು ನಿರ್ಮಾಪಕ ಕೆ.ಮಂಜು ಬಿಡುಗಡೆ ಮಾಡಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಮ್ ಋಷಿ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದೆ. ಸಿನಿಮಾ ಮಾಡುವುದಕ್ಕೆ ದುಡ್ಡು ಬೇಕಾಗಿಲ್ಲ, ಒಳ್ಳೆಯ ತಂಡ ಬೇಕು. ಒಳ್ಳೆಯ ತಂಡವೆಂದರೆ, ....
*ವರ್ಣತರಂಗ ಮೂರು ಹಾಡುಗಳ ಬಿಡುಗಡೆ* *ವರ್ಣತರಂಗ* ಮೂರು ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಶ್ರೀ ಪಾಷನಾಮೂರ್ತಿ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಬೆಳ್ತಂಗಡಿ ಉದ್ಯಮಿ *ಬಿ.ಶಿವಕುಮಾರ್ ಬಂಡವಾಳ* ಹೂಡಿರುವುದು ಮೂರನೇ ಅನುಭವ. ಸೆಲ್ವರಾಜ್ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. *ತೀರ್ಥೆಶ್ ಕೊರಮೇರು ಕಥೆ ಬರೆದು ನಿರ್ದೇಶನ* ಮಾಡಿದ್ದಾರೆ. ಕೊನೆಯ ಮುಖವೆಂದು ಇಂಗ್ಲೀಷ್ದಲ್ಲಿ ಅಡಿಬರಹ ಇರಲಿದೆ. *ಎಸಿಪಿ ಪಾತ್ರದಲ್ಲಿ ತಿಲಕ್ ನಾಯಕ. ಜೀವಿತಾ ನಾಯಕಿ* ಪತ್ರಕತೆಯಾಗಿ ಸಾಕ್ಷಿ ಮೇಘನಾ ಉಪನಾಯಕಿ. ಹ್ಯಾಕರ್ ಅಗಿ ವರ್ಧನ್. ಉಳಿದಂತೆ ಹೇಮಂತ್, ರಮೇಶ್ ಪಂಡಿತ್, ....
ʻಗಾರ್ಡನ್ʼಗೆ ಅದ್ಧೂರಿ ಮುಹೂರ್ತ **** ಗಾರ್ಬೇಜ್ ಮಾಫಿಯಾ ಸುತ್ತ ಗಾರ್ಡನ್? **** ಟಕ್ಕರ್ ಮನೋಜ್ ಮೂರನೇ ಸಿನಿಮಾ ʻಗಾರ್ಡನ್ʼ ಶುರು **** ಆರ್ಯ ಮಹೇಶ್ ನಿರ್ದೇಶನದಲ್ಲಿ ಶುರುವಾಯ್ತು ʻಗಾರ್ಡನ್ʼ ನಮ್ಮ ನಗರಗಳು ಸ್ವಚ್ಛವಾಗಿ, ಸುಂದರವಾಗಿ ಮತ್ತು ಆರೋಗ್ಯಕರವಾಗಿರುವುದರ ಹಿಂದೆ ಅದೆಷ್ಟೋ ಶ್ರಮಿಕರ ಬೆವರು ಮತ್ತು ತ್ಯಾಗ ಅಡಗಿದೆ. ಸೂರ್ಯೋದಯಕ್ಕೂ ಮುನ್ನವೇ ಎದ್ದು, ಬೆಳಗಿನ ಚಳಿಯಲ್ಲಿ, ಮಧ್ಯಾಹ್ನದ ಕಡು ಬಿಸಿಲಿನಲ್ಲಿ, ಮಳೆಯಲ್ಲೂ ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಜೀವಗಳೆಂದರೆ, ಅವರು ಪೌರ ಕಾರ್ಮಿಕರು. ನಾವು ತಿಂದು ಬಿಸಾಡುವ ಕಸ, ಚರಂಡಿಯಲ್ಲಿ ತುಂಬಿದ ಕೊಳೆ, ಬೀದಿಗಳಲ್ಲಿ ಚೆಲ್ಲಾಪಿಲ್ಲಿಯಾಗಿರುವ ತ್ಯಾಜ್ಯ ಎಲ್ಲವನ್ನೂ ಇವರು ....
*ಕನ್ನಡ ಮಣ್ಣಿನ ಕಥೆಯನ್ನು ಇಡಿ ವಿಶ್ವಕ್ಕೆ ಕೊಂಡೊಯ್ಯುವ ಚಿತ್ರ ’ಕಾಂತಾರ ಅಧ್ಯಾಯ 1* ' *ಟ್ರೇಲರ್ ಮೂಲಕ ಜಾಲತಾಣದಲ್ಲಿ ಧೂಳೆಬ್ಬಿಸಿದೆ ಈ ಚಿತ್ರ* ಸದ್ಯ ಟ್ರೇಲರ್ ನಿಂದ ಇಡಿ ವಿಶ್ವದಲ್ಲಿ ಸದ್ದು ಮಾಡುತ್ತಿರುವ ಕನ್ನಡ ಚಿತ್ರವೆಂದರೆ ’ಕಾಂತಾರ-1'. ಟ್ರೇಲರ್ ಬಿಡುಗಡೆ ದಿನ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಡೆದಿದ್ದು, ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ಮಾತನಾಡಿ, ’ಕಾಂತಾರ’, ಪಂಚವಾರ್ಷಿಕ ಯೋಜನೆಯ ತರಹ ಐದು ವರ್ಷದ ದೊಡ್ಡ ಜರ್ನಿ ಎನ್ನಬಹುದು. ತುಂಬಾ ಕಷ್ಟಗಳನ್ನು ದಾಟಿ ರಿಲೀಸ್ ಹಂತಕ್ಕೆ ಬಂದಿದೆ. ಈ ಹಂತದಲ್ಲಿ ನನ್ನ ಮಡದಿ ಪ್ರಗತಿ ಎಷ್ಟು ದೇವರಿಗೆ ಹರಕೆ ಹೊತ್ತಿದ್ದಾಳೆ ಗೊತ್ತಿಲ್ಲ. ....
'ಮೋಡ ಮಳೆ ಮತ್ತು ಶೈಲ’ ಶೀರ್ಷಿಕೆ ಟೀಸರ್ ಬಿಡುಗಡೆ ಇದು ’ತಿಮ್ಮನ ಮೊಟ್ಟೆಗಳು’ ತಂಡದಿಂದ ತಯಾರಾದ ಮತ್ತೊಂದು ವಿಭಿನ್ನ ಕಂಟೆಂಟ್ ಸಿನಿಮಾ ಶ್ರೀಕೃಷ್ಣ ಪ್ರೊಡಕ್ಷನ್ ಬ್ಯಾನರ್ ನ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ನಿರ್ಮಾಣದಲ್ಲಿ ಎರಡನೇ ಪ್ರಯತ್ನವಾಗಿ ಸಿದ್ಧವಾಗುತ್ತಿರುವ ಚಿತ್ರ ’ಮೋಡ, ಮಳೆ ಮತ್ತು ಶೈಲ’. ವಿಭಿನ್ನ ಪ್ರಯತ್ನದ ’ತಿಮ್ಮನ ಮೊಟ್ಟೆಗಳು’ ಚಿತ್ರಕ್ಕಾಗಿ ಒಂದಾಗಿದ್ದ ನಿರ್ದೇಶಕ ರಕ್ಷಿತ ತೀರ್ಥಹಳ್ಳಿ ಹಾಗೂ ನಿರ್ಮಾಪಕ ಆದರ್ಶ ಅಯ್ಯಂಗಾರ್ ಇದೀಗ ಮತ್ತೆ ಒಂದಾಗಿ ’ಮೋಡ, ಮಳೆ ಮತ್ತು ಶೈಲ’ ಚಿತ್ರ ತಯಾರಿಸಿದ್ದಾರೆ. ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಮುಖ್ಯ ಪಾತ್ರದಲ್ಲಿ ಅಕ್ಷತ ಪಾಂಡವಪುರ ನಟಿಸಿದ್ದಾರೆ. ಗೋಪಾಲಕೃಷ್ಣ ....
*ಕಾಕ್ರೋಚ್ ಸುಧೀ ನಾಯಕನಾಗಿ ನಟಿಸುತ್ತಿರುವ "ಚೈಲ್ಡು" ಚಿತ್ರದ ಚಿತ್ರೀಕರಣ ಪ್ರಾರಂಭ* . ಕಮಲ ಫಿಲಂಸ್ ಲಾಂಛನದಲ್ಲಿ ಚಂದ್ರಶೇಖರ್ ಕೆ ಅವರು ನಿರ್ಮಿಸುತ್ತಿರುವ, "ಹಫ್ತಾ" ಚಿತ್ರದ ಖ್ಯಾತಿಯ ಪ್ರಕಾಶ್ ಹೆಬ್ಬಾಳ್ ನಿರ್ದೇಶಿಸುತ್ತಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಸೂರೆಗೊಂಡಿರುವ ಕಾಕ್ರೋಚ್ ಸುಧೀ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ "ಚೈಲ್ಡು". ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆಯನ್ನು ಸಮಾಜ ಸೇವಕರಾದ ಕಿರಣ್ ರೆಡ್ಡಿ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. "ಹಫ್ತಾ" ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಚಿತ್ರವಿದು. ಆಕ್ಷನ್, ಕಾಮಿಡಿ, ಸೆಂಟಿಮೆಂಟ್, ಲವ್ ....
"ಕರಾಸ್ತ್ರ" ಮಹಿಳೆಯರ ಸ್ವರಕ್ಷಣೆಯ ಅಸ್ತ್ರ ಇದೇ ಶುಕ್ರವಾರ ತೆರೆಗೆ ಈಗಿನ ಕಾಲದಲ್ಲಿ ಮಹಿಳೆಯರು ಎಂಥದೇ ಆಪತ್ತಿನ ಸಂದರ್ಭ ಎದುರಾದರೂ, ಹೇಗೆ ತಮ್ಮನ್ನು ತಾವು ಸ್ವಯಂರಕ್ಷಣೆ ಮಾಡಿಕೊಳ್ಳಬೇಕು ಎಂಬುದನ್ನು ಕರಾಸ್ತ್ರ ಚಿತ್ರದ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕ ನಾರಾಯಣ ಪೂಜಾರ. ಸೆ.26ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಬ್ಯಾನರ್ ಮೂಲಕ ನಾರಾಯಣ ಪೂಜಾರ್ ಅವರೇ ನಿರ್ಮಾಣ ಮಾಡುವ ಜತೆಗೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಮೋಟಿವೇಶನಲ್ ಸಾಂಗ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ....
'ದಕ್ಷಯಜ್ಞ’ ’ತರ್ಲೆ ವಿಲೇಜ್’ ಖ್ಯಾತಿಯನಿರ್ದೇಶಕರಿಂದ ಇನ್ನೊಂದು ಗ್ರಾಮೀಣ ಕಥೆ *ಕುಂಟೆಬಿಲ್ಲೆ* " *ಸೆಪ್ಟೆಂಬರ್ 26ಕ್ಕೆ ತೆರೆಗೆ* ಮತ್ತೊಂದು ಗ್ರಾಮೀಣ ಸೊಗಡಿನ ಕಥೆಯೊಂದನ್ನು ತೆರೆ ಮೇಲೆ ತರಲು ’ದಕ್ಷಯಜ್ಞ’, ’ತರ್ಲೆ ವಿಲೇಜ್’ ಖ್ಯಾತಿಯ ನಿರ್ದೇಶಕ ಜಿಬಿಎಸ್ ಸಿದ್ದೇಗೌಡ ಮುಂದಾಗಿದ್ದಾರೆ. ಸಿದ್ದೇಗೌಡ ಜಿ.ಬಿ.ಎಸ್. ಅವರು ಕುಂಟೆಬಿಲ್ಲೆಸಿನಿಮಾ ನಿರ್ದೇಶನ ಮಾಡಿದ್ದು . ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಭೋಜ್ ಪುರಿ ಸೇರಿದಂತೆ ಹಲವು ಭಾಷೆಗಳಲ್ಲಿ ಹತ್ತಕ್ಕೂ ಹೆಚ್ಚು ಚಿತ್ರ ಮಾಡಿರುವ ಮೇಘ ಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪೋಷಕ ಪಾತ್ರಗಳಲ್ಲಿ ,ಸುಚೇಂದ್ರ ....