ದೇವನೊಬ್ಬ ಜಾದೂಗಾರ ಟೀಸರ್ ಬಿಡುಗಡೆ, ಹೊಸ ತಂಡಕ್ಕೆ ಶ್ವೇತಾ ಶ್ರೀವಾಸ್ತವ್, ಹುಚ್ಚ ವೆಂಕಟ್, ಸಿಂಪಲ್ ಸುನಿ ಶುಭಾಶಯ ನಂಬಿಕೆ ಕಳೆದುಕೊಂಡಾಗ ನಮಗೆ ದೇವರ ನೆನಪಾಗುತ್ತದೆ ದೇವರು ನನ್ನ ಜೀವನದಲ್ಲಿ ಎಷ್ಟೆಲ್ಲ ಆಟ ಆಡಿದನಲ್ಲ ಎನಿಸಬಹುದು. ಆಗೆಲ್ಲ ನಾವು ದೇವನೊಬ್ಬ ಜಾದೂಗಾರ ಎಂದುಕೊಳ್ಳುತ್ತೇವೆ. ಈಗ ಖಟ್ವಾಂಗ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಇದೇ ಹೆಸರನ್ನಿಟ್ಟು ಸಿನಿಮಾ ಒಂದು ಬರುತ್ತಿದೆ. ಸೌದಿ ಅರೇಬಿಯಾದಲ್ಲಿ ಉದ್ಯಮಿಯಾಗಿರುವ ಬಾಲಕೃಷ್ಣ ಶೆಟ್ಟಿ ಈ ಚಿತ್ರದ ನಿರ್ಮಾಣ ಮಾಡಿದ್ದಾರೆ. ದೊಡ್ಡ ತಾರಾಬಳಗವಿರೋ ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನ ಉತ್ಸವ ಲೆಗಸಿಯಲ್ಲಿ ಅದ್ದೂರಿಯಾಗಿ ನಡೆಯಿತು. ಕನ್ನಡದ ಹೆಸರಾಂತ ....
*"ಅಮಲು" ಹಾಡಿನೊಂದಿಗೆ ಹೊಸವರ್ಷವನ್ನು ಸ್ವಾಗತಿಸಿದ ಯೋಗರಾಜ್ ಭಟ್* . *ಶರಣ್ ಗಾಯನಕ್ಕೆ ಫಿದಾ ಆದ ಅಭಿಮಾನಿಗಳು* . ನಿರ್ದೇಶನದ ಜೊತೆಗೆ ಯೋಗರಾಜ್ ಭಟ್ ಗೀತರಚನೆಕಾರರಾಗಿಯೂ ಜನಪ್ರಿಯರು. ಈವೆರಗೂ ಸಾಕಷ್ಟು ಸೂಪರ್ ಹಿಟ್ ಚಿತ್ರಗೀತೆಗಳನ್ನು ರಚಿಸಿ ಅವರು ಕನ್ನಡಿಗರ ಮನೆ ಮಾತಾಗಿದ್ದಾರೆ. ಪ್ರಸ್ತುತ "ಅಮಲು" ಎಂಬ ಹಾಡನ್ನು ಬರೆಯುವ ಮೂಲಕ ಯೋಗರಾಜ್ ಭಟ್ ಹೊಸವರ್ಷವನ್ನು ಸ್ವಾಗತಿಸಿದ್ದಾರೆ. ನಟ ಶರಣ್ ಈ ಹಾಡನ್ನು ಸುಮಧುರವಾಗಿ ಹಾಡಿದ್ದಾರೆ. ಚೇತನ್ - ಡ್ಯಾವಿ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಮಹದೇವಪ್ಪ ಆರ್ ಕನಕಪುರ ನಿರ್ಮಾಣ ಮಾಡಿದ್ದಾರೆ. ಪಂಚರಂಗಿ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಆಲ್ಬಂ ಹಾಡು ಅಧಿಕ ....
*ಹೊರಬಂತು ʼವಿಕಲ್ಪʼ ಟೀಸರ್* *’ವಿಕಲ್ಪʼ; ವಾಸ್ತವ ಮತ್ತು ಭ್ರಮೆಯ ನಡುವಿನ ಹೊಸ ʼಚಿತ್ರʼಣ* *’ವಿಕಲ್ಪʼ ಮೂಲಕ ನೋಡುಗರ ಮನಮುಟ್ಟುವ ʼಸಂಕಲ್ಪʼ* *ಸುಪ್ತ ಮನಸ್ಸಿನ ಭಾವನೆಗೆ ಕನ್ನಡಿ ಹಿಡಿಯುವ ಪ್ರಯತ್ನ...* ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಸೈಕಾಲಜಿಕಲ್-ಥ್ರಿಲ್ಲರ್ ಕಥಾಹಂದರ ಹೊಂದಿರುವ ʼವಿಕಲ್ಪʼ ಚಿತ್ರ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈಗಾಗಲೇ ʼವಿಕಲ್ಪʼ ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಸದ್ಯ ಚಿತ್ರವನ್ನು ಸೆನ್ಸಾರ್ ಮುಂದೆ ತಂದಿದೆ. ಇದೇ ವೇಳೆ ನಿಧಾನವಾಗಿ ʼವಿಕಲ್ಪʼ ಚಿತ್ರದ ಪ್ರಚಾರ ಕಾರ್ಯಗಳಿಗೆ ....
*ಹೊಸವರ್ಷದಲ್ಲಿ "ಕೊರಗಜ್ಜ" ಸಿನಿಮಾದ ಹಾಡುಗಳ ಪ್ರೀಮಿಯರ್. ರೀಲ್ಸ್ ಕಾಂಟೆಸ್ಟ್ ಗೆ ಕೋಟಿ ರುಪಾಯಿಯಷ್ಟು ಬಹುಮಾನ ಘೋಷಣೆ* ಇತ್ತೀಚೆಗೆ ಬಿಡುಗಡೆಗೊಂಡಿದ್ದ ಸುಧೀರ್ ಅತ್ತಾವರ್ ರವರ 'ಕೊರಗಜ್ಜ’ ಸಿನಿಮಾದ ಹಾಡುಗಳನ್ನು ಹೊಟೆಲ್ ಹಾಲಿಡೇ ಇನ್ ನಲ್ಲಿ ನಡೆದ ವರ್ಣ ರಂಜಿತ ಸಮಾರಂಭದಲ್ಲಿ ಬಿಗ್ ಎಫ್ ಎಮ್ 92.7 ಮತ್ತು ಸುಮಾರು ಮುನ್ನೂರಕ್ಕೂ ಹೆಚ್ಚಿನ ಆಡಿಯೋ ಪ್ಲಾಟ್ ಫಾರ್ಮ್ ಗಳಲ್ಲಿ ಹೊಸವರ್ಷಾರಂಭದ ವರ್ಣರಂಜಿತ ಕಾರ್ಯಕ್ರಮದ ನಡುವೆ ನೆರೆದ ಗಣ್ಯರ ಮತ್ತು ಪತ್ರಕರ್ತರ ಸಮ್ಮುಖದಲ್ಲ "ಸಾಂಗ್ಸ್ ಪ್ರೀಮಿಯರ್" ಎನ್ನುವ ವಿನೂತನ ಕಾರ್ಯಕ್ರಮದ ಮುಖಾಂತರ ಹರಿಬಿಡಲಾಯಿತು. ದೇಶದ ಮೊದಲ ಪಾಪ್ ತಾರೆ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ....
*ಅಖಾಡಕ್ಕೆ ಚಂದ್ರು ರೆಡಿ* *"ಫಾದರ್" ಎಂಬ ಯೂತ್ಸ್ ಹಾರ್ಟ್ ಟಚಿಂಗ್ ಸಿನಿಮಾ* ನಿರ್ದೇಶಕ ಆರ್. ಚಂದ್ರು ಅವರ ಮೇಲಿನ ಪ್ರೀತಿಗೆ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ಧರಾಮಯ್ಯ ನವರು ಆರ್.ಸಿ ಸ್ಟುಡಿಯೋಸ್ ಗೆ ಚಾಲನೆ ಕೊಟ್ಟು, "ಫಾದರ್" ಚಿತ್ರ ಅನಾವರಣ ಮಾಡಿಕೊಟ್ಟದ್ದು ಎಲ್ಲರಿಗೂ ಗೊತ್ತೇ ಇದೆ. ಆರ್ ಸಿ ಸ್ಟುಡಿಯೋಸ್ ನ ’ಫಾದರ್’ ಚಿತ್ರ ಎಲ್ಲಾ ಕೆಲಸಗಳನ್ನು ಪೂರೈಸಿ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಇತ್ತೀಚೆಗೆ ನಗರದ 5 ಸ್ಟಾರ್ ಹೋಟೆಲ್ ನಲ್ಲಿ ’ಫಾದರ್’ ಸಿನಿಮಾದ ಥೀಮ್ ವಿಡಿಯೋ ಅದ್ಧೂರಿಯಾಗಿ ರಿಲೀಸ್ ಆಯಿತು. ಇದನ್ನು ಬಿಡುಗಡೆ ಮಾಡಿದ ಮುಖ್ಯ ಅತಿಥಿ, ಚಂದ್ರು ಅವರ ’ಫಾದರ್’. ಇದೊಂದು ಅಪರೂಪದ ....
*ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ "ಮಾಜರ್"* .
*ಜನವರಿ 15 ಕ್ಕೆ ತೆರೆಗೆ ಬರಲಿದೆ ಡಾ||ಮುರುಗನಂದನ್ ನಿರ್ಮಾಣದ ಹಾಗೂ ಲೋಕಲ್ ಲೋಕಿ ನಿರ್ದೇಶನದ ಈ ಚಿತ್ರ* .
ಸಂಗೀತ ಸಿನಿ ಹೌಸ್ ಲಾಂಛನದಲ್ಲಿ ಡಾ||ಮುರುಗನಂದನ್ ಎಮ್(ಪುಲಿಮುರುಗನ್) ಅವರು ನಿರ್ಮಿಸಿರುವ, ಲೋಕಲ್ ಲೋಕಿ ನಿರ್ದೇಶನದೊಂದಿಗೆ ಪ್ರಮುಖಪಾತ್ರದಲ್ಲೂ ನಟಿಸಿರುವ "ಮಾಜರ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
" *ಪ್ಯಾರ್" ಒಂದೇ ಮಾತಲಿ* *ಹಾಡು ಹಿಟ್* *ಖುಷಿ ಹಂಚಿಕೊಂಡ* *ಚಿತ್ರತಂಡ* ... ಎಸ್.ಎಂ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್. ಎಸ್. ನಾಗಶ್ರೀ ಅವರು ನಿರ್ಮಿಸಿರುವ ನೂತನ ಚಿತ್ರ ಪ್ಯಾರ್. ಈ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ನಾಯಕಿಯ ತಂದೆಯಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರಿಶ್ವಿನ್, ರಾಶಿಕಾ ಶೆಟ್ಟಿ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ಎಸ್. ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಅ್ಯಕ್ಷನ್ ಕಟ್ ಹೇಳಿದ್ದಾರೆ. ಆ್ಯನ್ ಎಮೋಷನಲ್ ಜರ್ನಿ ಆಫ್ ಲವ್ ಎಂಬ ಅಡಿಬರಹ ಈ ಚಿತ್ರಕ್ಕಿದೆ. ಈಗಾಗಲೇ ರಿಲೀಸಾಗಿ, ಸಂಗೀತ ಪ್ರಿಯರ ಮನ ಗೆದ್ದಿರುವ *’ಒಂದೇ ಮಾತಲಿ*ಹೇಳೋದಾದರೆ* ’ ಎಂಬ ಹಾಡಿನ ಸುಂದರ ....
" ಕೆ ಪಾಪ್ " ಮೂಲಕ ಹೊಸ ಅಲೆ ಸೃಷ್ಟಿಗೆ ಮುಂದಾದ ಹೊಸ ತಂಡ ಕೊರಿಯನ್ ಪಾಪ್ ಸಂಸ್ಕೃತಿಯನ್ನು ಬಿಂಬಿಸುವ "ಕೆ-ಪಾಪ್" ಮೂಲಕ ಹೊಸ ತಂಡ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿ ಮಾಡಲು ಮುಂದಾಗಿದೆ. ಕೆ ಪಾಪ್ ಸಂಸ್ಕೃತಿ ಕರ್ನಾಟಕ, ಭಾರತ ಸೇರಿದಂತೆ ಜಗತ್ತಿನ ವಿವಿದ ದೇಶಗಳಲ್ಲಿ ಕೊರಿಯನ್ ಪಾಪ್ ಸಂಸ್ಕೃತಿ ಹೇಗೆಲ್ಲಾ ಪ್ರಭಾವ ಬೀರಿದೆ ಎನ್ನುವುದನ್ನು ತಿಳಿಸುವ ಪ್ರಯತ್ನ ಇದಾಗಿದೆ.ಇಂತಹದೊಂದು ವಿಷಯವನ್ನು ಮುಂದಿಟ್ಡುಕೊಂಡು ನಿರ್ದೇಶಕ ಕೆವಿನ್ ಲೂಕ್ ಮತ್ತವರ ತಂಡ ಹೊಸ ಫ್ಯಾಂಟಸಿ ಕಥೆಯನ್ನು ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಲು ಮುಂದಾಗಿದೆ. ಶೀರ್ಷಿಕೆ ಅನಾವರಣ ಮಾಡುವ ಪ್ರೋಮೋ ಬಿಡುಗಡೆ ಮಾಡಿದೆ. ಬಳಿಕ ಚಿತ್ರತಂಡ ಮಾಹಿತಿ ....
*ಸುರಾಮ್ ಮೂವೀಸ್ ನಿರ್ಮಾಣದ ನಾಲ್ಕನೇ ಚಿತ್ರ "LSD"* *ಯುವಪ್ರತಿಭೆ ಶಕ್ತಿಪ್ರಸಾದ್ ನಿರ್ದೇಶನದ ಈ ಚಿತ್ರದ ಪ್ರಮುಖಪಾತ್ರದಲ್ಲಿ ಚೈತ್ರಾ ಜೆ ಆಚಾರ್ ನಟನೆ* . ಸುರಾಮ್ ಮೂವೀಸ್ ಲಾಂಛನದಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಶಕ್ತಿಪ್ರಸಾದ್ ನಿರ್ದೇಶನದಲ್ಲಿ ಚೈತ್ರಾ ಜೆ ಆಚಾರ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ "LSD"(ಲೈಲಾಸ್ ಸ್ವೀಟ್ ಡ್ರೀಮ್) ಚಿತ್ರದ ಟೈಟಲ್ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟೈಟಲ್ ಟೀಸರ್ ಬಹಳ ಕುತೂಹಲ ಮೂಡಿಸಿದೆ. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. "LSD", ನಮ್ಮ ಸುರಾಮ್ ಮೂವೀಸ್ ನಿರ್ಮಾಣದ ನಾಲ್ಕನೇ ಚಿತ್ರ. "ನಿದ್ರಾದೇವಿ ನೆಕ್ಸ್ಟ್ ಡೋರ್" ನಮ್ಮ ಸಂಸ್ಥೆಯ ಮೊದಲ ....
*ಕ್ರಿಸ್ಮಸ್ ರೇಸ್ನಲ್ಲಿ ಗೆದ್ದ ’ಮಾರ್ಕ್’..ಕಿಚ್ಚನ ಚಿತ್ರದ ಮೊದಲ ವಾರದ ಕಲೆಕ್ಷನ್ ಎಷ್ಟು ಗೊತ್ತಾ?* *ಕ್ರಿಸ್ಮಸ್ ಬ್ಲಾಕ್ ಬಸ್ಟರ್ ಆಗಿ ಹೊರ ಹೊಮ್ಮಿದ ಮಾರ್ಕ್.. ಮೊದಲ ವಾರಾಂತ್ಯದಲ್ಲಿ ₹35 ಕೋಟಿ ಗಳಿಕೆ ಕಂಡ ಕಿಚ್ಚನ ಸಿನಿಮಾ* ಕಿಚ್ಚ ಸುದೀಪ್ ನಟನೆಯ ’ಮಾರ್ಕ್’ ಸಿನಿಮಾ ಕ್ರಿಸ್ಮಸ್ ಬ್ಲಾಕ್ಬಸ್ಟರ್ಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಕ್ರಿಸ್ಮಸ್ ಗೆ ಬಿಡುಗಡೆಯಾದ ಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಾರ್ಕ್ ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಒಳ್ಳೆ ಕಮಾಯಿ ಮಾಡಿದೆ. ಮಾರ್ಕ್ ಸಿನಿಮಾ ಮೊದಲ ವಾರಾಂತ್ಯದಲ್ಲಿಯೇ 35ಕೋಟಿ ಗಳಿಕೆ ಮಾಡಿದೆ. ವೀಕೆಂಡ್ ನಲ್ಲಿ ಮಾತ್ರವಲ್ಲದೆ ಸೋಮವಾರವೂ ....
ಉತ್ತರ ಕರ್ನಾಟಕ ಸೊಗಡಿನ "ಸೂರ್ಯ" ಟ್ರೈಲರ್ ಬಿಡುಗಡೆ.. ಉತ್ತರ ಕರ್ನಾಟಕ ಭಾಗದ ಸಾಕಷ್ಟು ನಿರ್ಮಾಪಕ, ನಿರ್ದೇಶಕರು ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅದೇರೀತಿ ಇದೀಗ ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರೂ ತಮ್ಮ ಕೊಡುಗೆ ನೀಡಲು ಅಣಿಯಾಗಿದ್ದಾರೆ. ನಂದಿ ಸಿನಿಮಾಸ್ ಅಡಿಯಲ್ಲಿ ಅವರು "ಸೂರ್ಯ" ಎಂಬ ಮಾಸ್ ಲವ್ ಸ್ಟೋರಿ ಒಳಗೊಂಡ ಚಿತ್ರವನ್ನು ನಿರ್ಮಿಸಿದ್ದು, ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ಜನವರಿ 15 ರಂದು ತೆರೆಗೆ ತರಲಿದ್ದಾರೆ. ಸ್ಲಂನಲ್ಲಿ ಬೆಳೆದ ಯುವಕನೊಬ್ಬ ತನ್ನ ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲ ಹೋರಾಟ, ಸಾಹಸ ಮಾಡುತ್ತಾನೆ, ಆತನಿಗೆ ಯಾರೆಲ್ಲ ಸಹಾಯ ಮಾಡುತ್ತಾರೆ ಎಂಬುದನ್ನು ಈ ....
ಚಿತ್ರರಂಗದಲ್ಲಿ ನಟಿ ರಾಗಿಣಿ ದ್ವಿವೇದಿ ಹದಿನೈದು ವರ್ಷ ಪೂರ್ಣ: ಏಳು ಬೀಳು ನೆನಪಿಸಿಕೊಂಡ ನಟಿ ರಾಗಿಣಿ ದ್ವಿವೇದಿ ಕನ್ನಡ ಚಿತ್ರರಂಗದ ಪ್ರಮುಖ ನಾಯಕಿಯರಲ್ಲಿ ಒಬ್ಬರು. ತುಪ್ಪದ ಬೆಡಗಿ ಎಂದೇ ಖ್ಯಾತಿ ಪಡೆದವರು. ಜೊತೆಗೆ ಸೋಲು- ಗೆಲುವು, ಏಳು- ಬೀಳು, ನೋವು- ನಲಿವು ,ಅವಮಾನ - ಸನ್ಮಾನ, ಕನ್ನಡದ ಜೊತೆ ಜೊತೆಯಲ್ಲಿ ಪರಭಾಷೆಯಲ್ಲಿ ತಮ್ಮದೇ ಛಾಪು ಮೂಡಿಸಿದ ಪ್ರತಿಭಾನ್ವಿತ ನಟಿ. ಕನ್ನಡ ಚಿತ್ರರಂಗದಲ್ಲಿ 15 ವರ್ಷ ಪೂರ್ಣಗೊಳಿಸಿದ್ದಾರೆ. ಮಾಡಲಿಂಗ್ ಮಾಡುತ್ತಿದ್ದ ಪಂಜಾಬಿ ಬೆಡಗಿ ರಾಗಿಣಿ ದ್ವಿವೇದಿ " ಹೋಳಿ" ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿ ಕಿಚ್ಚ ಸುದೀಪ್ ನಟನೆಯ " ವೀರ ಮದಕರಿ " ಚಿತ್ರದಿಂದ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದರು. ಬಿಡುಗಡೆಗೆ ....
*ಇದೇ ಶುಕ್ರವಾರ ಜಗನ್ಮಾತೆ ಅಕ್ಕಮಹಾದೇವಿ* ಭರತ್ ಸಿನಿ ಕ್ರಿಯೇಶನ್ಸ್ ಲಾಂಛನದಲ್ಲಿ ಸಿದ್ದವಾಗಿರುವ *’ಶ್ರೀ ಜಗನ್ಮಾತೆ ಅಕ್ಕಮಹಾದೇವಿ’* ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿಯು ಯಾವುದೇ ದೃಶ್ಯಕ್ಕೆ ಆಕ್ಷೇಪ ವ್ಯಕ್ತ್ತಪಡಿಸಿದೆ ಕ್ಲೀನ್ ’ಯು’ ಪ್ರಮಾಣಪತ್ರ ನೀಡಿದೆ. ’ಮನಸುಗಳ ಮಾತು ಮಧುರ, ಡಾ.ಅಂಬೇಡ್ಕರ್, ಗಂಗಾಕಾವೇರಿ, ಕಲ್ಯಾಣಕುವರ’ ಚಿತ್ರಗಳನ್ನು ನಿರ್ದೇಶನ ಮಾಡಿರುವ ಹಿರಿಯ ತಂತ್ರಜ್ಘ *ವಿಷ್ಣುಕಾಂತ್.ಬಿ.ಜೆ ನಿರ್ಮಾಣ, ಆಕ್ಷನ್ ಕಟ್ ಹೇಳುವ ಜತೆಗೆ ಮಹತ್ವದ ಪಾತ್ರಕ್ಕೆ* ಬಣ್ಣ ಹಚ್ಚಿದ್ದಾರೆ. ಸುಮಾರು 900 ವರ್ಷಗಳ ಹಿಂದೆ ನಡೆದ ಅಕ್ಕಮಹಾದೇವಿ ಕಥೆಯನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಶ್ರೀ ಬಸವಣ್ಣ ಮತ್ತು ಅಕ್ಕಮಹಾದೇವಿ ಬರೆದಿರುವ 21 ....
*ಬಲರಾಮನ ದಿನಗಳು ಚಿತ್ರದ* *"ಶುರು ಶುರು" ಹಾಡು ಬಿಡುಗಡೆ* " ಆ ದಿನಗಳು" ಚಿತ್ರದ ಭರ್ಜರಿ ಯಶಸ್ಸಿನ 18 ವರ್ಷಗಳ ನಂತರ ನಿರ್ದೇಶಕ ಕೆ. ಎಂ ಚೈತನ್ಯ ನಿರ್ದೇಶನ ಮಾಡಿರುವ "ಬಲರಾಮನ ದಿನಗಳು" ಚಿತ್ರದ "ಶುರು ಶುರು" ಹಾಡು ಬಿಡುಗಡೆಯಾಗಿದ್ದು ಗಮನ ಸೆಳೆದಿದೆ. ಪದ್ಮಾವತಿ ಜಯರಾಮ್ ಮತ್ತು ಶ್ರೇಯಸ್ ಬಂಡವಾಳ ಹೂಡಿರುವ ಚಿತ್ರದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕನಾಗಿ ಕಾಣಿಸಿಕೊಂಡಿದ್ದು ಇದು ವಿನೋದ್ ಅವರ 25 ನೇ ಚಿತ್ರ. ನಾಯಕಿಯಾಗಿ ಪ್ರಿಯಾ ಆನಂದ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಅವಿನಾಶ್ , ಅತುಲ್ ಕುಲಕರ್ಣಿ, ಆಶಿಶ್ ವಿದ್ಯಾರ್ಥಿ, ವಿನಯ್ ಗೌಡ ಸೇರಿದಂತೆ ಹಿರಿ- ಕಿರಿಯ ಕಲಾವಿದರ ದಂಡು ಚಿತ್ರದಲ್ಲಿದೆ. ಶುರು ಶುರು ಹಾಡಿಗೆ ....
(ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಪ್ರಕಟಣೆಗಾಗಿ) *ನಟ, ನಿರ್ಮಾಪಕ, ನಿರ್ದೇಶಕ ಕಮಲ್ ರಾಜ್ ಪಂಚ ಕೃತಿ ಲೋಕಾರ್ಪಣೆ* *ಕಮಲ್ ರಾಜ್ ಬರಹದ ಐದು ಪುಸ್ತಗಳ ಬಿಡುಗಡೆ* *ಪ್ರಕೃತಿ, ಮಾರುಕಟ್ಟೆ, ಸಂಬಂಧ, ಶಾಯರಿ, ಐತಿಹಾಸಿಕ ವಿಷಯಗಳ ಕುರಿತಾಗಿ ಕಮಲ್ ರಾಜ್ ಬರಹ* *ಚಿತ್ರರಂಗ ಮತ್ತು ವಿವಿಧ ಕ್ಷೇತ್ರಗಳ ಹಲವು ಗಣ್ಯರ ಸಮ್ಮುಖದಲ್ಲಿ ಕೃತಿಗಳ ಬಿಡುಗಡೆ* ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಟ, ನಿರ್ಮಾಪಕ, ನಿರ್ದೇಶಕ ಮತ್ತು ವಿತರಕರಾಗಿ ಗುರುತಿಸಿಕೊಂಡಿರುವ ಕಮಲ್ ರಾಜ್ (ಕಲೀಂ ಪಾಷ) ಸದಭಿರುಚಿಯ ಬರಹಗಾರರೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇಲ್ಲಿಯವರೆಗೆ ತಮ್ಮ ಸಿನಿಮಾಗಳಿಗೆ ಕಥೆ, ಚಿತ್ರಕಥೆ, ಸಾಹಿತ್ಯ ....
*ಬಹು ನಿರೀಕ್ಷಿತ ಮಲ್ಟಿಸ್ಟಾರರ್ "45" ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ.* . *ಇದೇ ಮೊದಲ ಬಾರಿಗೆ ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಟ್ರೇಲರ್ ಅನಾವರಣ* . *ಡಿಸೆಂಬರ್ 25 ರಂದು ಚಿತ್ರ ಭಾರತದಾದ್ಯಂತ ಅದ್ದೂರಿಯಾಗಿ ಬಿಡುಗಡೆ.* ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ....
*ನಿರ್ದೇಶಕ ಸಿಂಪಲ್ ಸುನಿ ’ದೇವರು ರುಜು ಮಾಡಿದನು’ ಚಿತ್ರದ ಪ್ರಮೋಷನಲ್ ಸಾಂಗ್ ಅನಾವರಣ* *ಸಿಂಪಲ್ ಸುನಿ ನಿರ್ದೇಶನದ ’ದೇವರು ರುಜು ಮಾಡಿದನು’ ಚಿತ್ರದ ಹ್ಯಾಪಿ ಬರ್ತಡೇ ಹಾಡಿಗೆ ಯುವನಟ ವಿರಾಜ್ ಭರ್ಜರಿ ಸ್ಟೆಪ್ಸ್* *ಹಾಡಿನಲ್ಲಿ ’ದೇವರು ರುಜು ಮಾಡಿದನು’..ಹ್ಯಾಪಿ ಬರ್ತಡೇ ಗೀತೆಗೆ ವಿರಾಜ್ ಬಿಂದಾಸ್ ಕುಣಿತ* ಗತವೈಭವ ಸಿನಿಮಾ ಸಕ್ಸಸ್ ಖುಷಿಯಲ್ಲೀಗ ನಿರ್ದೇಶಕ ಸಿಂಪಲ್ ಸುನಿ ದೇವರು ರುಜು ಮಾಡಿದನು ಚಿತ್ರ ಕೈಗೆತ್ತಿಗೊಂಡಿದ್ದಾರೆ. ಈ ಚಿತ್ರದ ಮೂಲಕ ರಂಗಭೂಮಿ ಕಲಾವಿದ ವಿರಾಜ್ ಹೀರೋ ಆಗಿ ಚಿತ್ರರಂಗ ಪ್ರವೇಶ ಮಾಡುತ್ತಿದ್ದಾರೆ. ಶೀರ್ಷಿಕೆ ಮೂಲಕ ಕುತೂಹಲ ಹೆಚ್ಚಿಸಿರುವ ದೇವರು ರುಜು ಮಾಡಿದನು ಸಿನಿಮಾದ ಪ್ರಮೋಷನಲ್ ....
*ಸೆಟ್ಟೇರಿದ ಕುಡುಕ ನನ್ಮಕ್ಳು* ಸದಭಿರುಚಿಯ *ನಿರ್ದೇಶಕ ಆಸ್ಕರ್ ಕೃಷ್ಣ* ಅವರ ಎಂಟನೇ ಹೊಸ ಚಿತ್ರ *ಕುಡುಕ ನನ್ಮಕ್ಳು* ಮುಹೂರ್ತ ಸಮಾರಂಭವು ಶ್ರೀ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ಚಿತ್ರ ಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಡಾ.ಬಿ.ಆರ್.ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷರಾದ ಪಿ.ಮೂರ್ತಿ ಕ್ಯಾಮಾರ ಸ್ವಿಚ್ ಆನ್ ಮಾಡುವುದರ ಮೂಲಕ ತಂಡಕ್ಕೆ ಶುಭ ಹಾರೈಸಿದರು. ಸುಂದರ ಸಮಯದಲ್ಲಿ ಹಿರಿಯ ಸಂಗೀತ ಸಂಯೋಜಕ,ನಟ ಹಾಗೂ ನಿರ್ದೇಶಕ ವಿ.ಮನೋಹರ್ ಹಾಜರಿದ್ದರು. ’ತುಂಬಾ ಒಳ್ಳೆಯವರು’ ಎಂಬ ಅಡಿಬರಹ ಇರಲಿದೆ. ಸಮಾನ ಸಿನಿಮಾ ಮೋಹಿಗಳಾದ ಅರುಣ ಶೆಟ್ಟಿ, ವೈಶಾಲಿ ಮುರಳೀಧರ್ ಕೊಟ್ಟೂರು, ಪಲ್ಲವಿ ....
*ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಹಾಗೂ ದಿ ನ್ಯೂ ಇಂಡಿಯನ್ ಟೈಮ್ಸ್ ನಿರ್ಮಾಣದಲ್ಲಿ ಅದ್ದೂರಿಯಾಗಿ ಮೂಡಿಬರಲಿದೆ "ರಾಯರ ದರ್ಶನ" ಆಲ್ಬಂ ಸಾಂಗ್* . *"ರಾಯರೆ ನನ್ನ ಉಸಿರು"* . *ಪತ್ರಿಕಾಗೋಷ್ಠಿಯಲ್ಲಿ ರಾಯರನ್ನು ನೆನೆದು ಭಾವುಕರಾದ ನಟ ಜಗ್ಗೇಶ್* ಕಲಿಯುಗದ ಕಾಮಧೇನು ಕಲ್ಪವೃಕ್ಷರೆಂದೆ ಖ್ಯಾತರಾದ ಮಂತ್ರಾಲಯ ಗುರು ಶ್ರೀರಾಘವೇಂದ್ರಸ್ವಾಮಿಗಳಿಗೆ ವಿಶ್ವದಾದ್ಯಂತ ಕೋಟ್ಯಾಂತರ ಭಕ್ತರಿದ್ದಾರೆ. ರಾಯರ ಕುರಿತು ಸಾಕಷ್ಟು ಭಕ್ತಿಗೀತೆಗಳು ಬಂದಿದೆ. ಆದರೆ ಈವರೆಗೂ ಯಾರು ಹೇಳದ ಹಾಗೂ ತೋರಿಸದ ರಾಯರ ಬಗ್ಗೆಗಿನ ಕೆಲವು ವಿಷಯಗಳನ್ನು "ರಾಯರ ದರ್ಶನ" ಆಲ್ಭಂನಲ್ಲಿ ತೋರಿಸಲಾಗುತ್ತಿದೆ. ಲಕ್ಷ್ಮೀ ಗಣೇಶ ....
2+ ಚಿತ್ರದ ’ನನಗೂ ನಿನಗೂ’ ಹಾಡು 34 ಭಾಷೆಗಳಲ್ಲಿ ಬಿಡುಗಡೆ ಸಂಗೀತ ನಿರ್ದೇಶಕ ಅಭಿಮನ್ ರಾಯ್ ಸಾಹಸ 'ಖುಷಿಯಾಗಿದೆ ಏಕೋ’, ’ಕಣ್ಣಲ್ಲೇ ನನ್ನ ಚಿತ್ರ ಬರೆದೋನು’ ಹೀಗೆ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಮೆಲೋಡಿ ಹಾಡುಗಳನ್ನು ನೀಡಿದ ಸಂಗೀತ ನಿರ್ದೇಶಕ ಅಭಿಮನ್ ರಾಯ್ ಇದೀಗ ಒಂದು ದಾಖಲೆಯ ಹೆಜ್ಜೆ ಇಟ್ಟಿದ್ದಾರೆ. ಹೌದು, ಅವರು 2+ ಎಂಬ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ಈ ಚಿತ್ರದ ಹಾಡೊಂದನ್ನು 34 ಭಾಷೆಗಳಲ್ಲಿ ಹೊರತಂದಿದ್ದಾರೆ. ಚಿತ್ರರಂಗದ ಇತಿಹಾಸದಲ್ಲೇ ಇಂಥದ್ದೊಂದು ಸಾಹಸವನ್ನು ಯಾರೊಬ್ಬರೂ ಸಹ ಮಾಡಿಲ್ಲ. ಒಟ್ಟು 34 ಭಾಷೆಯಲ್ಲಿ ಮೂಡಿಬಂದಿರುವ ’ನನಗೂ ನಿನಗೂ ನಡುವೆ’ ಎಂಬ ಸುಂದರ ಸಾಹಿತ್ಯವಿರುವ ಈ ಹಾಡಿಗೆ ಬಹುತೇಕ ....