First Night with Devva.News

Wednesday, July 02, 2025

  *ಪ್ರಥಮ್ ಅಭಿನಯದ "ಫಸ್ಟ್ ನೈಟ್ ವಿತ್ ದೆವ್ವ" ಚಿತ್ರದಿಂದ ರೊಮ್ಯಾಂಟಿಕ್ ಹಾಡು ಬಿಡುಗಡೆ* .    *ಸದ್ಯದಲ್ಲೇ ತೆರೆಗೆ ಬರಲಿದೆ ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ ಹಾಗೂ ನಿರ್ದೇಶನದ ಈ ಚಿತ್ರ* .   "ಬಿಗ್ ಬಾಸ್" ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ, ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ "ಫಸ್ಟ್ ನೈಟ್ ವಿತ್ ದೆವ್ವ" ಚಿತ್ರದ "ತುಂಟ ಮನದ ಮಾಯೆ ನೀನು" ಎಂಬ ರೊಮ್ಯಾಂಟಿಕ್ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಯಿತು. ಕನ್ನಡದ ಮೊದಲ ಪತ್ರಿಕಾ ಪ್ರಚಾರಕರ್ತ ಡಿ.ವಿ.ಸುಧೀಂದ್ರ ನೇತೃತ್ವದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ಹಾಗೂ ಸುನೀಲ್ ಸುಧೀಂದ್ರ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ....

Read More...

Phenix.Film News

Tuesday, July 01, 2025

  ಆಕ್ಷನ್ ಥ್ರಿಲ್ಲರ್  "ಫೀನಿಕ್ಸ್" ಟೀಸರ್ ಬಿಡುಗಡೆ      'ಫೀನಿಕ್ಸ್’ ಗ್ರೀಕ್ ಮೂಲದ ಒಂದು ಕಾಲ್ಪನಿಕ ಪಕ್ಷಿ. ಅದು ಭಸ್ಮವಾದರೂ ಮತ್ತೆ ಎದ್ದು ಬರುತ್ತೆ ಎಂದು ಹೇಳುತ್ತಾರೆ. ಅಂಥದೇ ಕಂಟೆಂಟ್  ಇಟ್ಟುಕೊಂಡು ತಯಾರಾದ ಚಿತ್ರ ಫೀನಿಕ್ಸ್.  ಮೋಸ ಹೋಗುವವರಿದ್ದ ಹಾಗೆ ಮೋಸ ಮಾಡುವವರೂ ಇರುತ್ತಾರೆ, ಅದರಲ್ಲೂ‌ ಮೋಸಗಾರರೇ ಜಾಸ್ತಿ ಎಂಬ ವಿಷಯದ ಮೇಲೆ  ಫೀನಿಕ್ಸ್ ಚಿತ್ರ ತಯಾರಾಗಿದೆ. ಹೊಸೂರು ವೆಂಕಟ್ ಅವರ ಕಥೆ, ಚಿತ್ರಕಥೆ, ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರದ ಆಡಿಯೋ, ಟೀಸರ್ ಬಿಡುಗಡೆ ಸಮಾರಂಭ ಚಲನಚಿತ್ರ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ಗೋಕುಲ್ ಕೃಷ್ಣ ಫಿಲಂಸ್ ಲಾಂಛನದಲ್ಲಿ ಹೊಸೂರಿನ ಶ್ರೀನಿವಾಸ್‌ ಸಿ. ಅವರು ಈ ಚಿತ್ರವನ್ನು ....

Read More...

Sangeeta Bar& Restaurant(SBR),News

Tuesday, July 01, 2025

    *ಕೋಮಲ್ ಹೊಸಚಿತ್ರಕ್ಕೆ ಟೈಟಲ್ ಫಿಕ್ಸ್*   *ಮತ್ತೊಂದು ಕಾಮಿಡಿ ಕಮಾಲ್ ಮಾಡಲು ಕೋಮಲ್ ರೆಡಿ*   *’ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಮುಂದೆ ಕೋಮಲ್*   ನಟ ಕೋಮಲ್ ಕುಮಾರ್ ಸದ್ದಿಲ್ಲದೆ ಹೊಸಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ತಯಾರಾಗಿದ್ದಾರೆ. ಹೌದು, ಕೋಮಲ್ ಕುಮಾರ್ ನಾಯಕನಾಗಿ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಎಂದು ಹೆಸರಿಡಲಾಗಿದ್ದು, ಇದೀಗ ಈ ಸಿನಿಮಾದ ಟೈಟಲ್ ಪೋಸ್ಟರ್ ಪ್ರೋಮೋ ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದೆ. ಈ ಹಿಂದೆ ‘ಕತ್ತಲೆ ಕೋಣೆ’, ‘ಇನಾಂದಾರ್’, ‘ಗುಂಮ್ಟಿ’ ಚಿತ್ರಗಳನ್ನು ನಿರ್ದೇಶಿಸಿದ್ದ ಯುವ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ‘ಸಂಗೀತ ಬಾರ್ ಅಂಡ್ ....

Read More...

O My India.Film News

Sunday, June 29, 2025

  *ಭಾರತದ ಹಿರಿಮೆ ಸಾರುವ ಓ ಮೈ ಇಂಡಿಯಾ*          ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ *ಓ ಮೈ ಇಂಡಿಯಾ* ಚಿತ್ರದ ಹಾಡು ಮತ್ತು ಟ್ರೇಲರ್ ಬಿಡುಗಡೆ ಸಮಾರಂಭವು ಶ್ರೀ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ನಟ ಎಂ.ಎಸ್.ಉಮೇಶ್, ಸಮಾಜ ಸೇವಕ ಮಹೇಂದ್ರಮುನ್ನೋತ್ ಮತ್ತು ನಿರ್ಮಾಪಕ ಡಾ.ಲಯನ್.ಎಸ್.ವೆಂಕಟೇಶ್  ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.          ಸಾನ್ವಿಶ್ರೀಯಾ ಪ್ರೊಡಕ್ಷನ್ಸ್ ಅಡಿಯಲ್ಲಿ ಹಾಸನದ *ರಮ್ಯಾಲೋಕೇಶ್ ನಿರ್ಮಾಣ* ಮಾಡಿದ್ದಾರೆ. ಹಿರಿಯ ಪತ್ರಕರ್ತ *ಜಿ.ಎನ್.ಕೃಷ್ಣಮೂರ್ತಿ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ ಕಟ್* ಹೇಳಿದ್ದಾರೆ. *ರತನ್‌ದೇವ್ ನಾಯಕ*. ....

Read More...

The Rise Of Ashoka.News

Sunday, June 29, 2025

  *ಡಬ್ಬಿಂಗ್ ಮುಗಿಸಿದ ’ದಿ ರೈಸ್ ಆಫ್ ಅಶೋಕ’..ಶೀಘ್ರದಲ್ಲೇ ತೆರೆಗೆ ಅಭಿನಯ ಚತುರ ಸತೀಶ್  ಹೊಸ  ಸಿನಿಮಾ*       *ಸತೀಶ್ ನೀನಾಸಂ ನಟನೆಯ ದಿ ರೈಸ್ ಆಫ್ ಅಶೋಕ ಡಬ್ಬಿಂಗ್ ಮುಕ್ತಾಯ*     ಅಭಿನಯ ಚತುರ ಸತೀಶ್ ನೀನಾಸಂ ಹೊಸ ಅವತಾರವೆತ್ತಿರುವ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ. ಈಗಾಗಲೇ ಒಂದಷ್ಟು ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರವೀಗ ಡಬ್ಬಿಂಗ್ ಮುಗಿಸಿದೆ. ಬೆಂಗಳೂರಿನ ಆಕಾಶ್ ಸ್ಟುಡಿಯೋದಲ್ಲಿ ಚಿತ್ರದ ನಾಯಕ ಸತೀಶ್ ಹಾಗೂ ನಾಯಕಿ ಸಪ್ತಮಿ ಗೌಡ ತಮ್ಮ ಪಾತ್ರಗಳಿಗೆ ಮಾತು ಪೊಣಿಸಿದ್ದಾರೆ.       ಡಬ್ಬಿಂಗ್ ಪೂರ್ಣಗೊಂಡ ಬಳಿಕ ಮಾಧ್ಯಮದವರೊಂದಿಗೆ ನಟ ಸತೀಶ್ ನೀನಾಸಂ ಮಾತನಾಡಿ, ದಿ ರೈಸ್ ಆಫ್ ಅಶೋಕ ಸಿನಿಮಾದ ....

Read More...

Andondittu Kaala.News

Friday, June 27, 2025

  "ಅಂದೊಂದಿತ್ತು ಕಾಲ" ಚಿತ್ರದ ಎರಡನೇ ಹಾಡು  ’ಅರೇರೇ ಯಾರೋ ಇವಳು..’ ಬಿಡುಗಡೆ ಮಾಡಿದ ಶಾಲಾ ವಿದ್ಯಾರ್ಥಿಗಳು.       ಈಗಾಗಲೇ  ಸಿನಿಪ್ರಿಯರ ಮನಸ್ಸನ್ನ ಗೆದ್ದಿರುವಂತಹ "ಅಂದೊಂದಿತ್ತು ಕಾಲ" ಚಿತ್ರದ  ’ಮುಂಗಾರು ಮಳೆಯಲ್ಲಿ ...’ ಎಂಬ ಹಾಡು ಸೂಪರ್ ಹಿಟ್ ಆಗಿದ್ದು , ಯೂಟ್ಯೂಬ್ ನಲ್ಲಿ 36.4 ಮಿಲಿಯನ್ ವೀವ್ಸ್ ಆಗಿದೆ. ಹಾಗೆಯೇ ಈ ಸಾಂಗ್ ನ ರೀಲ್ಸ್  ಬಹಳಷ್ಟು ಅಭಿಮಾನಿಗಳು ಮಾಡಿ ಅಪ್ಲೋಡ್ ಕೂಡ ಮಾಡಿದ್ದಾರೆ. ಇದು ಇಡೀ ಚಿತ್ರತಂಡದ ಸಂಭ್ರಮವನ್ನು ಹೆಚ್ಚು ಮಾಡಿದ್ದು, ಚಿತ್ರ ಯಶಸ್ವಿ ಆಗುವ ನಿರೀಕ್ಷೆಯಲ್ಲಿದ್ದಾರೆ. ಈಗ ತಮ್ಮ ಚಿತ್ರದ ಎರಡನೇ ಹಾಡನ್ನು ರಿಲೀಸ್ ಮಾಡುವುದರ ಜೊತೆಗೆ ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಿತ್ತು ಚಿತ್ರತಂಡ. ವೇದಿಕೆಯ ....

Read More...

Capital City.News

Friday, June 27, 2025

  *ಜುಲೈ 4 ರಂದು ರಾಜೀವ್ ರೆಡ್ಡಿ ಅಭಿನಯದ "ಕ್ಯಾಪಿಟಲ್ ಸಿಟಿ" ಚಿತ್ರ ಬಿಡುಗಡೆ.* .      *ಆರ್ ಅನಂತರಾಜು ನಿರ್ದೇಶನದ ಈ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ರವಿಶಂಕರ್*    "ಇನಿಫಿನಿಟಿ ಕ್ರಿಯೇಷನ್ಸ್" ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, "ಅಪ್ಪು‌ ಪಪ್ಪು", " ಮಸ್ತ್ ಮಜಾ ಮಾಡಿ", "ನಂದ"  ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ "ಜಿಂದಗಿ" ಚಿತ್ರದ ನಂತರ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ "ಕ್ಯಾಪಿಟಲ್ ಸಿಟಿ" ಚಿತ್ರ‌ ಇದೇ ಜುಲೈ 4 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ....

Read More...

Rangitaranga.News

Thursday, June 26, 2025

  *"ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ*    2015ರ ಜುಲೈ 3 ರಂದು ತೆರೆಕಂಡು, ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಎಚ್.ಕೆ. ಪ್ರಕಾಶ್ ನಿರ್ಮಾಣದ, ಅನೂಪ್ ಭಂಡಾರಿ ನಿರ್ದೇಶನದ ಬ್ಲಾಕ್‌ಬಸ್ಟರ್ ಚಲನಚಿತ್ರ ’ರಂಗಿತರಂಗ’, ಈಗ ಹತ್ತು ವರ್ಷಗಳ ನಂತರ ಮತ್ತೆ ತೆರೆಗೆ ಬರಲು ಸಜ್ಜಾಗಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ, ಚಿತ್ರತಂಡದ ಸದಸ್ಯರು ತಮ್ಮ ಅನುಭವಗಳನ್ನು ಹಂಚಿಕೊಂಡು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.    *ನಿರ್ಮಾಪಕ ಎಚ್.ಕೆ. ಪ್ರಕಾಶ್: "ಹತ್ತು ವರ್ಷಗಳ ನಂತರವೂ ’ರಂಗಿತರಂಗ’ ಪ್ರಕಾಶ್ ಎಂದೇ ಗುರುತಿಸುತ್ತಾರೆ!"*   "ನಾನು ನಿರೂಪ್ ನಟಿಸಿದ್ದ ....

Read More...

Thipparallili Thimmanna Dr.News

Thursday, June 26, 2025

  ಹಾಡಿನ ಸಾಲು ಚಿತ್ರದ ಶೀರ್ಷಿಕೆ          ಟಿ.ಪಿಕೈಲಾಸಂ ಸಾಹಿತ್ಯ, ಮೈಸೂರು ಅನಂತಸ್ವಾಮಿ ಗಾಯನ ಮತ್ತು ಸಂಗೀತದ ’ತಿಪ್ಪಾರಳಿ ಬಲುದೂರ’ ಜಾನಪದ ಹಾಡಿನ ಪದವನ್ನು ಬಳಸಿಕೊಂಡು *ತಿಪ್ಪಾರಳ್ಳೀಲಿ ತಿಮ್ಮಣ್ಣ ಡಾಕ್ಟ್ರು* ಸಿನಿಮಾ ಸಿದ್ದಗೊಂಡಿದೆ. ಪ್ರಚಾರದ ಮೊದಲ ಹಂತವಾಗಿ ಸಿನಿಮಾದ ಟ್ರೇಲರ್ ಮತ್ತು ಹಾಡಿನ ಬಿಡುಗಡೆ ಸಮಾರಂಭ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಬೆಳಗಾವಿ ಮೂಲದ ಉದ್ಯಮಿ *ಗಿರೀಶ ಪ್ರಕಾಶ ಭಸ್ಮೇ ನಾಯಕನಾಗಿ ನಟಿಸುವ ಜತೆಗೆ ಶ್ರೀ ದಾನಮ್ಮ ದೇವಿ ಫಿಲಂಸ್ ಲಾಂಛನದಲ್ಲಿ ಬಂಡವಾಳ ಹೂಡಿದ್ದಾರೆ* ನಾಲ್ಕು ದಶಕಗಳ ಕಾಲ ಸಹ ನಿರ್ದೇಶನ-ಸಹಾಯಕ ನಿರ್ದೇಶಕರಾಗಿ ಕನ್ನಡ, ಹಿಂದಿ, ತೆಲುಗು ಸಿನಿಮಾಗಳಲ್ಲಿ ಕೆಲಸ ಮಾಡಿರುವ *ಕೆ.ಮೋಹನ್ ....

Read More...

Tayavva.Film News

Wednesday, June 25, 2025

    *’ತಾಯವ್ವ’ ಮುಖದಲ್ಲಿ ಗೆಲುವಿನ ನಗು*   *ಸದ್ದಿಲ್ಲದೆ ಯಶಸ್ವಿ 25 ದಿನ ಪೂರೈಸಿದ ‘ತಾಯವ್ವ’*   *ಚಿತ್ರರಂಗದ ಗಣ್ಯರ ಜೊತೆ ಯಶಸ್ಸಿನ ಖುಷಿ ಹಂಚಿಕೊಂಡ ‘ತಾಯವ್ವ’ ಬಳಗ*   ಬೆಂಗಳೂರು: ಇದೇ 2025ರ ಮೇ ತಿಂಗಳ 30 ರಂದು ಕನ್ನಡದಲ್ಲಿ ತೆರೆಕಂಡ ‘ತಾಯವ್ವ’ ಚಿತ್ರ ಯಶಸ್ವಿಯಾಗಿ 25 ದಿನಗಳ ಪ್ರದರ್ಶನವನ್ನು ಪೂರೈಸಿದೆ. ‘ಅಮರ ಫಿಲಂಸ್’ ಬ್ಯಾನರಿನಲ್ಲಿ ಗೀತಪ್ರಿಯಾ ನಿರ್ಮಿಸಿ, ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ‘ತಾಯವ್ವ’ ಮಹಿಳಾ ಪ್ರದಾನ ಕಥಾಹಂದರವನ್ನು ಹೊಂದಿದ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಗ್ರಾಮೀಣ ಭಾಗದ ಸೂಲಗಿತ್ತಿ ಮಹಿಳೆಯ ಬದುಕನ್ನು ಅನಾವರಣ ಮಾಡಲಾಗಿದೆ.   ಸದ್ಯ ಬಿಡುಗಡೆಯಾಗಿರುವ ‘ತಾಯವ್ವ’ ಚಿತ್ರಕ್ಕೆ ....

Read More...

Timmana Mottegalu.Reviews

Friday, June 27, 2025

ಚಿತ್ರ: ತಿಮ್ಮನ ಮೊಟ್ಟೆಗಳು**** ನಿರ್ದೇಶನ: ರಕ್ಷಿತ್‌ತೀರ್ಥಹಳ್ಳಿ ನಿರ್ಮಾಪಕ: ಆದರ್ಶ್ ಅಯ್ಯಂಗಾರ್ ತಾರಾಗಣ: ಕೇಶವ್ ಗುತ್ತಳಿಕೆ, ಸುಚೇಂದ್ರಪ್ರಸಾದ್, ಶೃಂಗೇರಿ ರಾಮಣ್ಣ, ರಘು, ಆಶಿಕಾಸೋಮಶೇಖರ್, ಪ್ರಗತಿ, ವಿನಯ್ ಕಣಿವೆ   ಕಾಡಿನ ಕಥನ ತಿಮ್ಮನ ಮೊಟ್ಟೆಗಳು        ಮುಂದುವರೆಯುತ್ತಿರುವ ತಂತ್ರಜ್ಞಾನ, ಮತ್ತೋಂದು ಕಡೆ ಜನರ ಮೂಡ ನಂಬಿಕೆಗಳು. ಇದರ ಮಧ್ಯೆ ಪ್ರಾಣಿ-ಪಕ್ಷಿಗಳು, ಪ್ರಕೃತಿ ....

Read More...

X&Y.Film Reviews

Thursday, June 26, 2025

ಚಿತ್ರ: ಎಕ್ಸ್ ಅಂಡ್ ವೈ**** ನಿರ್ಮಾಣ: ಸತ್ಯ ಪಿಕ್ಚರ‍್ಸ್ ನಿರ್ದೇಶನ ಮತ್ತು ನಟನೆ: ಸತ್ಯಪ್ರಕಾಶ್ ಕಲಾವಿದರು: ಅಥರ್ವಪ್ರಕಾಶ್, ಬೃಂದಾ, ವೀಣಾಸುಂದರ್ ಮುಂತಾದವರು   ಬದುಕಲ್ಲಿ ದುಖ: ಬೇಡ ನಗು ಇರಲಿ        ಆತ್ಮವೊಂದು ನಾಲ್ಕು ದಿನದ ಪ್ಯಾಕೇಜ್‌ನಲ್ಲಿ ಭೂಮಿಗೆ ಬಂದಾಗ ಅಲ್ಲಿ ನಡೆಯುವ ಘಟನೆಗಳನ್ನು ‘ಎಕ್ಸ್ ಅಂಡ್ ವೈ’ ಚಿತ್ರದಲ್ಲಿ ನವಿರಾಗಿ ತೋರಿಸಲಾಗಿದೆ. ಆತ್ಮ ಹಾಗೂ ಮನುಷ್ಯನ ವಿವಿಧ ಮುಖಗಳ ಮಜಲುಗಳನ್ನು ಪರಿಚಯಿಸಲಾಗಿದೆ. ....

Read More...

Test

Sunday, June 29, 2025

Test Description

Read More...

Lakshya.Film News

Wednesday, June 25, 2025

    *ಹೊರಬಂತು ‘ಲಕ್ಷ್ಯ’ ಟ್ರೇಲರ್ ಮತ್ತು ಹಾಡುಗಳು*   *ಉತ್ತರ ಕರ್ನಾಟಕದ ಪ್ರತಿಭೆಗಳ ಮತ್ತೊಂದು ಚಿತ್ರ ತೆರೆಗೆ ಸಿದ್ದ*   *ಮಕ್ಕಳ ಚಿತ್ರವಾಗಿ ತೆರೆಗೆ ಬರುತ್ತಿದೆ 90ರ ದಶಕದ ಕಥೆ*   ಬಹುತೇಕ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಮಕ್ಕಳ ಚಿತ್ರ ‘ಲಕ್ಷ್ಯ’ ತೆರೆಗೆ ಬರಲು ಸಿದ್ದವಾಗಿದೆ. ಈಗಾಗಲೇ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ‘ಲಕ್ಷ್ಯ’ ಚಿತ್ರತಂಡ, ಇತ್ತೀಚೆಗೆ ಚಿತ್ರದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.   1990ರ ದಶಕದಲ್ಲಿ ಉತ್ತರ ಕರ್ನಾಟಕದಲ್ಲಿ ನಡೆದ ನೈಜ ಘಟನೆಯನ್ನು ಸ್ಫೂರ್ತಿಯಾಗಿ ತೆಗೆದುಕೊಂಡು ತಯಾರಾದ ....

32

Read More...

Jungle Mangal.News

Tuesday, June 24, 2025

  *ನಮ್ಮ ಚಿತ್ರಕ್ಕೆ ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ "ಜಂಗಲ್ ಮಂಗಲ್".* .    *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಯಶ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರ ಜುಲೈ 4 ರಂದು ತೆರೆಗೆ‌*                            ನಾನು ಮೊದಲು ಇಬ್ಬರು ಖ್ಯಾತ ನಿರ್ದೇಶಕರಿಗೆ ಧನ್ಯವಾದ ಹೇಳಬೇಕು ಎಂದು ಮಾತನಾಡಿದ "ಜಂಗಲ್ ಮಂಗಲ್" ಚಿತ್ರದ ನಿರ್ದೇಶಕ ರಕ್ಷಿತ್ ಕುಮಾರ್, ನಮ್ಮ ಚಿತ್ರದ ಟ್ರೇಲರ್ ನೋಡಿದ ಯೋಗರಾಜ್ ಭಟ್ ಅವರು ಈ ಚಿತ್ರಕ್ಕೆ "ಜಂಗಲ್ ಮಂಗಲ್" ಎಂದು ಹೆಸರಿಡಿ ಎಂದರು. ಚಿತ್ರ ಮೆಚ್ಚಿಕೊಂಡ ಮತ್ತೊಬ್ಬ ನಿರ್ದೇಶಕ ಸಿಂಪಲ್ ಸುನಿ ತಮ್ಮ ಸುನಿ ಸಿನಿಮಾಸ್ ಬ್ಯಾನರ್ ಮೂಲಕ ....

23

Read More...

Ondu Sundara Devvada Kathe.News

Monday, June 23, 2025

  ಒಂದು ಸುಂದರ ದೆವ್ವದ ಕಥೆ ಚಿತ್ರಕ್ಕೆ ಲೀಲಾವತಿ ದೇಗುಲದಲ್ಲಿ ಚಾಲನೆ        ಆರ್ಯ ಫಿಲಂಸ್ ಲಾಂಛನದಲ್ಲಿ ಆರ್. ಲಕ್ಷ್ಮಿ ನಾರಾಯಣಗೌಡ್ರು  ನಿರ್ಮಿಸುತ್ತಿರುವ, ನೃತ್ಯ ಸಂಯೋಜಕ ಎಂ.ಆರ್. ಕಪಿಲ್ ಅವರು  ನಿರ್ದೇಶಿಸುತ್ತಿರುವ  ಒಂದು ಸುಂದರ ದೆವ್ವದ ಕಥೆ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಭೈರನಹಳ್ಳಿ ಬಳಿ ಇರುವ  ಹಿರಿಯನಟಿ ಲೀಲಾವತಿ ಅವರ ಸ್ಮಾರಕದ ಮುಂದೆ ನೆರವೇರಿತು. ಚಿತ್ರದ ಮುಹೂರ್ತ ದೃಶ್ಯಕ್ಕೆ ನಟ ವಿನೋದ್ ರಾಜ್ ಅವರು ಕ್ಲಾಪ್ ಮಾಡಿದರು. ಫಿಲಂ ಚೆಂಬರ್ ಅಧ್ಯಕ್ಷ ನರಸಿಂಹಲು, ವೆಂಕಟೇಶ್ , ಬಾಮ ಹರೀಶ್, ನಟ ಪ್ರಥಮ್ ಹಾಗೂ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.       ಈಗಾಗಲೇ ದಾಸರಹಳ್ಳಿ, ಹಸಿವು, ದೇವದೂತದಂಥ ವಿಭಿನ್ನ ಚಿತ್ರಗಳನ್ನು  ....

34

Read More...

Metro.Film News

Tuesday, June 24, 2025

 

*'ಮೆಟ್ರೋ...ಇನ್ ದಿನೋ’ ಚಲನಚಿತ್ರ ತಂಡದಿಂದ ಬೆಂಗಳೂರಿನಲ್ಲಿ ಪ್ರಚಾರ*

 

ಅನುರಾಗ್ ಬಸು ನಿರ್ದೇಶನದ ಬಹು ನಿರೀಕ್ಷಿತ ಚಲನಚಿತ್ರ ‘ಮೆಟ್ರೋ...ಇನ್ ದಿನೋ’ ತಂಡವು ಜೂನ್ 24 ರಂದು ಬೆಂಗಳೂರಿಗೆ ಆಗಮಿಸಿತ್ತು. ಆದಿತ್ಯ ರಾಯ್ ಕಪೂರ್ ಮತ್ತು ಸಾರಾ ಅಲಿ ಖಾನ್, ಪ್ರೀತಮ್, ಗಾಯಕ ಶಶ್ವತ್ ಸಿಂಗ್ ಅವರು ಈ ಪ್ರಚಾರದಲ್ಲಿ ಭಾಗವಹಿಸಿದ್ದರು.

28

Read More...

OK.Film News

Monday, June 23, 2025

  ಹಂಸಲೇಖ ನಿರ್ದೇಶನದ ‘ಓಕೆ’ ಸಿನಿಮಾಗೆ ರವಿಚಂದ್ರನ್ ಹಾರೈಕೆ; ಕಥೆಗಳಲ್ಲಿ ಕನ್ನಡದ DNA ಇದ್ರೆ ಜನ ಚಿತ್ರ ನೋಡ್ತಾರೆ ಎಂದ ನಾದಬ್ರಹ್ಮ   ಕನ್ನಡ ಚಿತ್ರರಂಗದ ದಿಗ್ಗಜರೊಬ್ಬರಲ್ಲಿ ಒಬ್ಬರು ಹಂಸಲೇಖ. ಸಂಗೀತ ನಿರ್ದೇಶಕರಾಗಿ, ಚಿತ್ರ ಸಾಹಿತಿಯಾಗಿ ಗೆದ್ದಿರುವ ಹಂಸಲೇಖ ಈಗ ಡೈರೆಕ್ಟರ್‌ ಕ್ಯಾಪ್‌ ತೊಟ್ಟಿದ್ದಾರೆ. ಹಂಸಲೇಖ ಈಗ ಡೈರೆಕ್ಟರ್‌ ಕುರ್ಚಿ ಅಲಂಕರಿಸಿದ್ದು, ‘ಓಕೆ’  ಎಂಬ ಚಿತ್ರ ನಿರ್ದೇಶನಕ್ಕೆ ಇಳಿದಿದ್ದಾರೆ. ‘ಓಕೆ’ ಚಿತ್ರದ ಲಾಂಚ್‌ ಹಾಗೂ ಸುದ್ದಿಗೋಷ್ಠಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕ್ರೇಜಿಸ್ಟಾರ್‌ ರವಿಚಂದ್ರನ್‌ ವಿಶೇಷ ಅತಿಥಿಯಾಗಿ ಹಂಸಲೇಖ ಸಿನಿಮಾಗೆ ಸಾಥ್‌ ಕೊಟ್ಟರು.   ಬಳಿಕ ....

35

Read More...

Bharavase.Film News

Thursday, June 19, 2025

  *ಭರವಸೆಯೇ ಬದುಕಿನ ಹೊಸಬೆಳಕು*          ಮನ ಸೆಳೆಯುವ ಶೀರ್ಷಿಕೆ *ಭರವಸೆ* ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಉಚ್ಚ ನ್ಯಾಯಲಯದ ವಕೀಲರು, ಸರ್ಕಾರಿ ಅಧಿಕಾರಿಗಳು, ರಾಜಕೀಯ ಧುರೀಣರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ’ಪ್ರೀತ್ಸೋ  ಹೃದಯಕ್ಕೆ’ ಎಂಬ ಕ್ಯಾಚಿ ಅಡಬರಹ ಇರಲಿದೆ. ಆರ್.ಆರ್.ಮೂವೀ ಮೇಕರ‍್ಸ್ ಅಡಿಯಲ್ಲಿ ಶಿವಮೊಗ್ಗದ ಕಂಟ್ರಾಕ್ಟರ್, ಉದ್ಯಮಿ ನಾಗರಾಜ್ ಅವರು ಪತ್ನಿ ಲಕ್ಷೀನಾಗರಾಜ್ ಹೆಸರಿನಲ್ಲಿ ನಿರ್ಮಾಣ ಮಾಡಿರುವುದು ಹೊಸ ಅನುಭವ. ಮುತ್ತು ಗಂಗೂರ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿ ನಿರ್ದೇಶನ  ಮಾಡಿದ್ದಾರೆ.   ....

26

Read More...

Appu Cup Season 3.News

Saturday, June 21, 2025

  *ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ "ಅಪ್ಪು ಕಪ್ ಸೀಸನ್ 3" ಗೆ  ಅದ್ದೂರಿ ಚಾಲನೆ* .      ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ  "ಅಪ್ಪು ಕಪ್"(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಎರಡು ಸೀಸನ್ ಅದ್ದೂರಿಯಾಗಿ ನಡೆದಿದೆ. ಜುಲೈನಲ್ಲಿ " ಅಪ್ಪು ಕಪ್ ಸೀಸನ್ 3" ಲೀಗ್ ಪಂದ್ಯಗಳು ಆರಂಭವಾಗಲಿದೆ.  ಇತ್ತೀಚೆಗೆ "ಅಪ್ಪು ಕಪ್ ಸೀಸನ್ 3" ಉದ್ಘಾಟನೆ ಹಾಗೂ ಟೀಮ್ ಆಕ್ಷನ್ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಅಶ್ವಿನಿ ಪುನೀತ್ ರಾಜಕುಮಾರ್, ವಿಧಾನ ಪರಿಷತ್ ಸದಸ್ಯರಾದ ಸರವಣ, ಕನ್ನಡಪರ ಹೋರಾಟಗಾರರಾದ ಸಾ.ರಾ.ಗೋವಿಂದು ಹಾಗೂ ಶಾಸಕರಾದ ರಾಜು ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ....

34

Read More...
Copyright@2018 Chitralahari | All Rights Reserved. Photo Journalist K.S. Mokshendra,