*ಬಲರಾಮನ ದಿನಗಳು ಚಿತ್ರದ* *"ಶುರು ಶುರು" ಹಾಡು ಬಿಡುಗಡೆ* " ಆ ದಿನಗಳು" ಚಿತ್ರದ ಭರ್ಜರಿ ಯಶಸ್ಸಿನ 18 ವರ್ಷಗಳ ನಂತರ ನಿರ್ದೇಶಕ ಕೆ. ಎಂ ಚೈತನ್ಯ ನಿರ್ದೇಶನ ಮಾಡಿರುವ "ಬಲರಾಮನ ದಿನಗಳು" ಚಿತ್ರದ "ಶುರು ಶುರು" ಹಾಡು ಬಿಡುಗಡೆಯಾಗಿದ್ದು ಗಮನ ಸೆಳೆದಿದೆ. ಪದ್ಮಾವತಿ ಜಯರಾಮ್ ಮತ್ತು ಶ್ರೇಯಸ್ ಬಂಡವಾಳ ಹೂಡಿರುವ ಚಿತ್ರದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕನಾಗಿ ಕಾಣಿಸಿಕೊಂಡಿದ್ದು ಇದು ವಿನೋದ್ ಅವರ 25 ನೇ ಚಿತ್ರ. ನಾಯಕಿಯಾಗಿ ಪ್ರಿಯಾ ಆನಂದ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಅವಿನಾಶ್ , ಅತುಲ್ ಕುಲಕರ್ಣಿ, ಆಶಿಶ್ ವಿದ್ಯಾರ್ಥಿ, ವಿನಯ್ ಗೌಡ ಸೇರಿದಂತೆ ಹಿರಿ- ಕಿರಿಯ ಕಲಾವಿದರ ದಂಡು ಚಿತ್ರದಲ್ಲಿದೆ. ಶುರು ಶುರು ಹಾಡಿಗೆ ....
(ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಪ್ರಕಟಣೆಗಾಗಿ) *ನಟ, ನಿರ್ಮಾಪಕ, ನಿರ್ದೇಶಕ ಕಮಲ್ ರಾಜ್ ಪಂಚ ಕೃತಿ ಲೋಕಾರ್ಪಣೆ* *ಕಮಲ್ ರಾಜ್ ಬರಹದ ಐದು ಪುಸ್ತಗಳ ಬಿಡುಗಡೆ* *ಪ್ರಕೃತಿ, ಮಾರುಕಟ್ಟೆ, ಸಂಬಂಧ, ಶಾಯರಿ, ಐತಿಹಾಸಿಕ ವಿಷಯಗಳ ಕುರಿತಾಗಿ ಕಮಲ್ ರಾಜ್ ಬರಹ* *ಚಿತ್ರರಂಗ ಮತ್ತು ವಿವಿಧ ಕ್ಷೇತ್ರಗಳ ಹಲವು ಗಣ್ಯರ ಸಮ್ಮುಖದಲ್ಲಿ ಕೃತಿಗಳ ಬಿಡುಗಡೆ* ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಟ, ನಿರ್ಮಾಪಕ, ನಿರ್ದೇಶಕ ಮತ್ತು ವಿತರಕರಾಗಿ ಗುರುತಿಸಿಕೊಂಡಿರುವ ಕಮಲ್ ರಾಜ್ (ಕಲೀಂ ಪಾಷ) ಸದಭಿರುಚಿಯ ಬರಹಗಾರರೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇಲ್ಲಿಯವರೆಗೆ ತಮ್ಮ ಸಿನಿಮಾಗಳಿಗೆ ಕಥೆ, ಚಿತ್ರಕಥೆ, ಸಾಹಿತ್ಯ ....
*ಬಹು ನಿರೀಕ್ಷಿತ ಮಲ್ಟಿಸ್ಟಾರರ್ "45" ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ.* . *ಇದೇ ಮೊದಲ ಬಾರಿಗೆ ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಟ್ರೇಲರ್ ಅನಾವರಣ* . *ಡಿಸೆಂಬರ್ 25 ರಂದು ಚಿತ್ರ ಭಾರತದಾದ್ಯಂತ ಅದ್ದೂರಿಯಾಗಿ ಬಿಡುಗಡೆ.* ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ....
*ನಿರ್ದೇಶಕ ಸಿಂಪಲ್ ಸುನಿ ’ದೇವರು ರುಜು ಮಾಡಿದನು’ ಚಿತ್ರದ ಪ್ರಮೋಷನಲ್ ಸಾಂಗ್ ಅನಾವರಣ* *ಸಿಂಪಲ್ ಸುನಿ ನಿರ್ದೇಶನದ ’ದೇವರು ರುಜು ಮಾಡಿದನು’ ಚಿತ್ರದ ಹ್ಯಾಪಿ ಬರ್ತಡೇ ಹಾಡಿಗೆ ಯುವನಟ ವಿರಾಜ್ ಭರ್ಜರಿ ಸ್ಟೆಪ್ಸ್* *ಹಾಡಿನಲ್ಲಿ ’ದೇವರು ರುಜು ಮಾಡಿದನು’..ಹ್ಯಾಪಿ ಬರ್ತಡೇ ಗೀತೆಗೆ ವಿರಾಜ್ ಬಿಂದಾಸ್ ಕುಣಿತ* ಗತವೈಭವ ಸಿನಿಮಾ ಸಕ್ಸಸ್ ಖುಷಿಯಲ್ಲೀಗ ನಿರ್ದೇಶಕ ಸಿಂಪಲ್ ಸುನಿ ದೇವರು ರುಜು ಮಾಡಿದನು ಚಿತ್ರ ಕೈಗೆತ್ತಿಗೊಂಡಿದ್ದಾರೆ. ಈ ಚಿತ್ರದ ಮೂಲಕ ರಂಗಭೂಮಿ ಕಲಾವಿದ ವಿರಾಜ್ ಹೀರೋ ಆಗಿ ಚಿತ್ರರಂಗ ಪ್ರವೇಶ ಮಾಡುತ್ತಿದ್ದಾರೆ. ಶೀರ್ಷಿಕೆ ಮೂಲಕ ಕುತೂಹಲ ಹೆಚ್ಚಿಸಿರುವ ದೇವರು ರುಜು ಮಾಡಿದನು ಸಿನಿಮಾದ ಪ್ರಮೋಷನಲ್ ....
*ಸೆಟ್ಟೇರಿದ ಕುಡುಕ ನನ್ಮಕ್ಳು* ಸದಭಿರುಚಿಯ *ನಿರ್ದೇಶಕ ಆಸ್ಕರ್ ಕೃಷ್ಣ* ಅವರ ಎಂಟನೇ ಹೊಸ ಚಿತ್ರ *ಕುಡುಕ ನನ್ಮಕ್ಳು* ಮುಹೂರ್ತ ಸಮಾರಂಭವು ಶ್ರೀ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ಚಿತ್ರ ಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಡಾ.ಬಿ.ಆರ್.ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷರಾದ ಪಿ.ಮೂರ್ತಿ ಕ್ಯಾಮಾರ ಸ್ವಿಚ್ ಆನ್ ಮಾಡುವುದರ ಮೂಲಕ ತಂಡಕ್ಕೆ ಶುಭ ಹಾರೈಸಿದರು. ಸುಂದರ ಸಮಯದಲ್ಲಿ ಹಿರಿಯ ಸಂಗೀತ ಸಂಯೋಜಕ,ನಟ ಹಾಗೂ ನಿರ್ದೇಶಕ ವಿ.ಮನೋಹರ್ ಹಾಜರಿದ್ದರು. ’ತುಂಬಾ ಒಳ್ಳೆಯವರು’ ಎಂಬ ಅಡಿಬರಹ ಇರಲಿದೆ. ಸಮಾನ ಸಿನಿಮಾ ಮೋಹಿಗಳಾದ ಅರುಣ ಶೆಟ್ಟಿ, ವೈಶಾಲಿ ಮುರಳೀಧರ್ ಕೊಟ್ಟೂರು, ಪಲ್ಲವಿ ....
*ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಹಾಗೂ ದಿ ನ್ಯೂ ಇಂಡಿಯನ್ ಟೈಮ್ಸ್ ನಿರ್ಮಾಣದಲ್ಲಿ ಅದ್ದೂರಿಯಾಗಿ ಮೂಡಿಬರಲಿದೆ "ರಾಯರ ದರ್ಶನ" ಆಲ್ಬಂ ಸಾಂಗ್* . *"ರಾಯರೆ ನನ್ನ ಉಸಿರು"* . *ಪತ್ರಿಕಾಗೋಷ್ಠಿಯಲ್ಲಿ ರಾಯರನ್ನು ನೆನೆದು ಭಾವುಕರಾದ ನಟ ಜಗ್ಗೇಶ್* ಕಲಿಯುಗದ ಕಾಮಧೇನು ಕಲ್ಪವೃಕ್ಷರೆಂದೆ ಖ್ಯಾತರಾದ ಮಂತ್ರಾಲಯ ಗುರು ಶ್ರೀರಾಘವೇಂದ್ರಸ್ವಾಮಿಗಳಿಗೆ ವಿಶ್ವದಾದ್ಯಂತ ಕೋಟ್ಯಾಂತರ ಭಕ್ತರಿದ್ದಾರೆ. ರಾಯರ ಕುರಿತು ಸಾಕಷ್ಟು ಭಕ್ತಿಗೀತೆಗಳು ಬಂದಿದೆ. ಆದರೆ ಈವರೆಗೂ ಯಾರು ಹೇಳದ ಹಾಗೂ ತೋರಿಸದ ರಾಯರ ಬಗ್ಗೆಗಿನ ಕೆಲವು ವಿಷಯಗಳನ್ನು "ರಾಯರ ದರ್ಶನ" ಆಲ್ಭಂನಲ್ಲಿ ತೋರಿಸಲಾಗುತ್ತಿದೆ. ಲಕ್ಷ್ಮೀ ಗಣೇಶ ....
2+ ಚಿತ್ರದ ’ನನಗೂ ನಿನಗೂ’ ಹಾಡು 34 ಭಾಷೆಗಳಲ್ಲಿ ಬಿಡುಗಡೆ ಸಂಗೀತ ನಿರ್ದೇಶಕ ಅಭಿಮನ್ ರಾಯ್ ಸಾಹಸ 'ಖುಷಿಯಾಗಿದೆ ಏಕೋ’, ’ಕಣ್ಣಲ್ಲೇ ನನ್ನ ಚಿತ್ರ ಬರೆದೋನು’ ಹೀಗೆ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಮೆಲೋಡಿ ಹಾಡುಗಳನ್ನು ನೀಡಿದ ಸಂಗೀತ ನಿರ್ದೇಶಕ ಅಭಿಮನ್ ರಾಯ್ ಇದೀಗ ಒಂದು ದಾಖಲೆಯ ಹೆಜ್ಜೆ ಇಟ್ಟಿದ್ದಾರೆ. ಹೌದು, ಅವರು 2+ ಎಂಬ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ಈ ಚಿತ್ರದ ಹಾಡೊಂದನ್ನು 34 ಭಾಷೆಗಳಲ್ಲಿ ಹೊರತಂದಿದ್ದಾರೆ. ಚಿತ್ರರಂಗದ ಇತಿಹಾಸದಲ್ಲೇ ಇಂಥದ್ದೊಂದು ಸಾಹಸವನ್ನು ಯಾರೊಬ್ಬರೂ ಸಹ ಮಾಡಿಲ್ಲ. ಒಟ್ಟು 34 ಭಾಷೆಯಲ್ಲಿ ಮೂಡಿಬಂದಿರುವ ’ನನಗೂ ನಿನಗೂ ನಡುವೆ’ ಎಂಬ ಸುಂದರ ಸಾಹಿತ್ಯವಿರುವ ಈ ಹಾಡಿಗೆ ಬಹುತೇಕ ....
*"ಲ್ಯಾಂಡ್ ಲಾರ್ಡ್ " ನಲ್ಲಿ ದುನಿಯಾ ವಿಜಯ್ - ರಾಜ್ ಬಿ ಶೆಟ್ಟಿ ಜುಗಲ್ ಬಂದಿ* . *"ದಿ ರೂಲರ್" ಟೀಸರ್ ಮೂಲಕ ರಾಜ್ ಬಿ ಶೆಟ್ಟಿ ಅವರ ಪಾತ್ರ ಪರಿಚಯ** ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ - ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್ ಅಭಿನಯದ ’ಲ್ಯಾಂಡ್ ಲಾರ್ಡ್’ ಚಿತ್ರದ ಸರ್ವೈವರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಜನಮನಸೂರೆಗೊಂಡಿದೆ. ಈಗ ಈ ಚಿತ್ರದ "ದಿ ರೂಲರ್" ಟೀಸರ್ ಬಿಡುಗಡೆಯಾಗಿದೆ. "ದಿ ರೂಲರ್" ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಅಭಿನಯಿಸಿದ್ದಾರೆ. ಇದು ರಾಜ್ ಬಿ ಶೆಟ್ಟಿ ಅವರ ಪಾತ್ರ ಪರಿಚಯದ ಟೀಸರ್ ಆಗಿದೆ. "ದಿ ರೂಲರ್" ....
*ಮಾರ್ಕ್ ಟ್ರೇಲರ್ ರಿಲೀಸ್...ಖಾಕಿಯಲ್ಲಿ ಖದರ್ ತೋರಿಸಿದ ಕಿಚ್ಚ* *ಆಕ್ಷನ್ ಪ್ಯಾಕ್ಡ್ ಮಾರ್ಕ್ ಟ್ರೇಲರ್ ಅನಾವರಣ...ಟ್ರೈಲರ್ನಲ್ಲಿ ಅಬ್ಬರಿಸಿದ ಕಿಚ್ಚ* ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ಮಾರ್ಕ್ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ಇಡೀ ತಂಡ ಭಾಗಿಯಾಗಿತ್ತು. ಟ್ರೇಲರ್ ಬಿಡುಗಡೆ ಬಳಿಕ ನಟ ಕಿಚ್ಚ ಸುದೀಪ್ ಮಾತನಾಡಿ, ವಿಜಯ್ ಹಾಗೂ ಚಂದ್ರು ಮಲಗಿಕೊಳ್ಳದೇ ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ. ನನ್ನ ಮಾತಿಗೆ ಧೃಡವಾಗಿ ನಿಂತಿದ್ದು ನನ್ನ ಇಡೀ ತಂಡ. ಟೆಕ್ನಿಕಲ್ ಟೀಂ ಹಾಗೂ ಇಡೀ ಕಲಾವಿದರು. ಡಿಸೆಂಬರ್ ನಲ್ಲಿ ....
ಖೈದಿ ಪ್ರೇಮಿ ಚಿತ್ರಕ್ಕೆ ಮುಹೂರ್ತ ಉತ್ತರ ಕರ್ನಾಟಕ ಭಾಗದ ಸಾಕಷ್ಟು ಪ್ರತಿಭೆಗಳು ಚಿತ್ರರಂಗಕ್ಕೆ ಬರುತ್ತಿದ್ದಾರೆ. ಇದೀಗ ರಾಯಚೂರು ಮೂಲದ ಯುವಕರ ತಂಡವೊಂದು ವಿಭಿನ್ನ ಕಾನ್ಸೆಪ್ಡ್ ಇಟ್ಟುಕೊಂಡು ಖೈದಿಪ್ರೇಮಿ ಎಂಬ ಚಿತ್ರ ಮಾಡಲು ಹೊರಟಿದೆ. ಮರುಜನ್ಮ ಮೂವೀಸ್ ನಿರ್ಮಾಣದ ಈ ಚಿತ್ರಕ್ಕೆ ವಂಶಿ ಎಡೆದೊರೆ (ಗಧಾರ) ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ರಚಿಸಿ ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕ, ನಿರ್ದೇಶಕ ಇಬ್ಬರೂ ರಾಯಚೂರಿನವರು ಎನ್ನುವುದು ವಿಶೇಷ. ಪ್ರೀತಿ, ಪ್ರೇಮದ ಜತೆ ಮಾನವೀಯತೆಗೆ ಹೆಚ್ಚು ಪ್ರಾಮುಖ್ಯತೆ ನೀಡಿ ಕಥಾಹಂದರ ಹೆಣೆದಿರುವ ಖೈದಿಪ್ರೇಮಿ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆಯಿತು. ಪ್ರಥಮ ದೃಶ್ಯಕ್ಕೆ ಥ್ರಿಲ್ಲರ್ ಮಂಜು ....
*ಟೀಸರ್ ನಲ್ಲೇ ಗಮನ ಸೆಳೆದ ಹೇಮಂತ್ ಕುಮಾರ್ ಅಭಿನಯದ "ಆಲ್ಫಾ #MEN LOVE VENGEANCE*. *L A ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರಕ್ಕೆ ವಿಜಯ್ ನಿರ್ದೇಶನ* . ಮಾಲೂರಿನ ಹೇಮಂತ್ ಕುಮಾರ್ "ಆಲ್ಫಾ #MEN LOVE VENGEANCE* ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. L A ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದ್ ಕುಮಾರ್ ಅವರು ನಿರ್ಮಿಸಿರುವ ಈ ಚಿತ್ರವನ್ನು " ಗೀತಾ" ಹಾಗೂ "ಗುರುದೇವ ಹೊಯ್ಸಳ" ಚಿತ್ರಗಳ ನಿರ್ದೇಶಕ ವಿಜಯ್ ನಿರ್ದೇಶಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಲಹರಿ ವೇಲು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ....
*ಸೂರಿ ಅಣ್ಣ ಚಿತ್ರದ ನೀ ’ನನ್ನ ದೇವತೆ’ ಸಾಂಗ್ ಬಿಡುಗಡೆ* ಈ ಹಿಂದೆ ಮಾರಿಗುಡ್ಡದ ಗಡ್ಡಧಾರಿಗಳು ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದ ಸಲಗ ಖ್ಯಾತಿಯ ಸೂರಿ ಅಣ್ಣ(ದಿನೇಶ್) ಇದೀಗ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರೂ ಸಹ ಸೂರಿ ಅಣ್ಣ. ನಾಯಕನಾಗಿ ನಟಿಸುವ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಹಾಡೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ನೀ ನನ್ನ ದೇವತೆ ಎಂಬ ಸುಂದರ ಸಾಹಿತ್ಯ ಒಳಗೊಂಡ ಈ ಗೀತೆಗೆ ಕೆ.ಎಂ.ಇಂದ್ರ ಸಂಗೀತ ಸಂಯೋಜನೆ ಮಾಡಿದ್ದಾರೆ. ವೇಲು ಅವರ ಲಹರಿ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ವೇದಿಕೆಯಲ್ಲಿ ನಾಯಕ, ನಿರ್ದೇಶಕ ಸೂರಿ ಅಣ್ಣ, ನಾಯಕಿ ....
*"ಕೊರಗಜ್ಜ" ಸಿನಿಮಾದ ಶ್ರೇಯ ಘೋಷಾಲ್ ಹಾಡಿನ ಸಾಹಿತ್ಯ ಬಿಡುಗಡೆ...!* *ಎರಡನೆಯ ಹಾಡು ಬಿಡುಗಡೆಗೆ ಕ್ಷಣಗಣನೆ..* ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ"ಕೊರಗಜ್ಜ" ಚಿತ್ರದ ಜೀ಼ ಮ್ಯೂಸಿಕ್ ಬಿಡುಗಡೆ ಗೊಳಿಸಿದ್ದ ಗುಳಿಗಾ...ಗುಳಿಗಾ...ಹಾಡು ದೇಶಾದ್ಯಂತ ಎಬ್ಬಿಸಿದ ಧೂಳು ಇನ್ನೂ ಹಾರಾಡುತ್ತಿರುವಂತೆಯೇ, ಈಗ ಶ್ರೇಯಾ ಘೋಷಾಲ್ ಜೊತೆ ಅರ್ಮಾನ್ ಮಲಿಕ್ ಹಾಡಿರುವ ಅತ್ಯಂತ ಸುಮಧುರ ಮತ್ತು "ರಿಚ್ ಪೊಯೆಟಿಕ್" ಸಾಲುಗಳುಳ್ಳ , ನಿರ್ದೇಶಕ ಸುಧೀರ್ ಅತ್ತಾವರ್ ಬರೆದಿರುವ ಹಾಡು ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ..! ಈ ನಡುವೆ ವಿಶೇಷ ವಿದ್ಯಮಾನವೆಂಬಂತೆ,ಸಾಹಿತ್ಯ ಅಕಾಡಮಿ ಪ್ರಶಸ್ತಿ ವಿಜೇತ ಕವಿ ಸುಧೀರ್ ಅತ್ತಾವರ್ ಬರೆದ ಈ ....
*ಡೆವಿಲ್ ಜೊತೆಗೆ ಕುಡುಕನ ಎಂಟ್ರಿ.. ಪಿಯೊಟ್ ರಿಲೀಸ್* *ಡೆವಿಲ್ ನೋಡಿ ಸೆಕೆಂಡ್ ಪಿಯೊಟ್ ನೋಡಿ : ಚಿತ್ರತಂಡ ಮನವಿ* ಪಿವಟ್ ಅಂತ ಯಾರನ್ನ ಕರೆಯುತ್ತಾರೆ ಅನ್ನೋದು ನಿಮಗೆಲ್ಲಾ ಗೊತ್ತಿರುವ ವಿಚಾರವೇ. ಕುಡಿಯುವುದಕ್ಕೆ ಸಮಯವೇ ಬೇಕಿಲ್ಲ. ಸದಾ ಕುಡಿಯುವುದರ ಕಡೆಗೆ ಗಮನ ಹರಿಸುವವರನ್ನ ಪಿಯೊಟ್ ಅಂತಾರೆ. ಈ ರೀತಿ ಕುಡಿಯುವುದರಿಂದ ಏನೆಲ್ಲಾ ಸಮಸ್ಯೆ ಆಗುತ್ತೆ, ಕುಡಿತ ಬಿಡುವುದಕ್ಕೆ ಮನಸ್ಸು ಮಾಡುದಾಗ ಎಷ್ಟೆಲ್ಲಾ ಕಷ್ಟವಾಗುತ್ತೆ ಎಂಬ ಸಂದೇಶವನ್ನಿತ್ತು ಪಿಯೊಟ್ ಸಿನಿಮಾ ಬರ್ತಾ ಇದೆ. ಇದೆ ಡಿಸೆಂಬರ್ 12ಕ್ಕೆ ರಿಲೀಸ್ ಆಗ್ತಾ ಇದೆ. ಇಡೀ ಚಿತ್ರತಂಡ ಮಾಧ್ಯಮದವರ ಮುಂದೆ ತಮ್ಮ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಡೆವಿಲ್ ನೋಡಿದ ಮೇಲೆ ....
*ಡಿಸೆಂಬರ್ 15 ರಂದು ಬಹು ನಿರೀಕ್ಷಿತ ಮಲ್ಟಿಸ್ಟಾರರ್ "45" ಚಿತ್ರದ ಟ್ರೇಲರ್ ಬಿಡುಗಡೆ* . *ಬೆಂಗಳೂರಿನಲ್ಲಿ ಅದ್ದೂರಿ ಇವೆಂಟ್. ಕರ್ನಾಟಕದ ಏಳು ಜಿಲ್ಲೆಗಳ ಚಿತ್ರಮಂದಿರದಲ್ಲಿ ಇವೆಂಟ್ ನ ನೇರ ಪ್ರಸಾರ* . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು ನಿರ್ಮಿಸಿರುವ ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ಮಲ್ಟಿಸ್ಟಾರರ್ “45” ಚಿತ್ರ ಡಿಸೆಂಬರ್ 25 ಕ್ರಿಸ್ಮಸ್ ದಿನದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಡಿಸೆಂಬರ್ 15 ರಂದು ....
*ಸದ್ದು ಮಾಡುತ್ತಿದೆ ’ಪದ್ಮಗಂಧಿ’* ಹಿರಿಯ ನಟ *ಕ.ಸುಚೇಂದ್ರ ಪ್ರಸಾದ ಚಿತ್ರಕಥೆ-ಸಂಭಾಷಣೆ ಜತೆಗೆ ನಿರ್ದೇಶನ* ಮಾಡಿರುವ *ಪದ್ಮಗಂಧಿ* ಚಿತ್ರದ ಕನ್ನಡ, ಸಂಸ್ಕ್ರತ ಮತ್ತು ಹಿಂದಿ ಭಾಷೆಯ ಟ್ರೇಲರ್ ಹಾಗೂ ಹಾಡುಗಳು ಬಿಡುಗಡೆಗೊಂಡು ಪ್ರಶಂಸೆಯ ಸುರಿಮಳೆಗಳು ಬರುತ್ತಿದೆ. ಮಾಜಿ ಎಂಎಲ್ಸಿ, ಅಂಕಣಕಾರ್ತಿ, ಸಂಸ್ಕ್ರತ ಭೂಮಿಕೆಯಲ್ಲಿ ನಾನಾ ದಿಕ್ಕಿನಲ್ಲಿ ಅಧ್ಯಯನ ನಡೆಸಿರುವ ನಿವೃತ ಪ್ರೊಫೆಸರ್ *ಎಸ್.ಆರ್.ಲೀಲಾ ರಚಸಿ, ನಿರ್ಮಾಣ* ಮಾಡಿರುವುದು ಹೊಸ ಅನುಭವ. ವಿದ್ಯಾರ್ಥಿಯಾಗಿ ಕು.ಮಹಾಪದ್ಮ, ಗುರುಮಾತೆ ಪಾತ್ರದಲ್ಲಿ ಉಡುಪಿಯ ಪರಿಪೂರ್ಣ ಚಂದ್ರಶೇಖರ್ ಇವರೊಂದಿಗೆ ರಿಯಲ್ದಲ್ಲಿ ಹೆಸರು ಮಾಡಿರುವ ಶತಾವಧಾನಿ ಡಾ.ಆರ್.ಗಣೇಶ್, ಡಾ.ಗೌರಿ ....
*ಡಿಸೆಂಬರ್ 11 ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ "ದಿ ಡೆವಿಲ್" ಚಿತ್ರ ರಾಜ್ಯಾದ್ಯಂತ ಅದ್ದೂರಿ ಬಿಡುಗಡೆ.* *ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾಹಿತಿ ನೀಡಿದ ಚಿತ್ರತಂಡ* ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ದಿ ಡೆವಿಲ್" ಚಿತ್ರ ಇದೇ ಡಿಸೆಂಬರ್ 11 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು "ದಿ ಡೆವಿಲ್" ಚಿತ್ರದ ....
ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಟೀಸರ್ ಬಿಡುಗಡೆ! ಕಾಮಿಡಿ ಶೋಗಳ ಮೂಲಕ ಪ್ರವರ್ಧಮಾನಕ್ಕೆ ಬಂದು, ಇದೀಗ ಬಿಗ್ ಬಾಸ್ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿರುವವರು ಗಿಲ್ಲಿ ನಟ. ಗಿಲ್ಲಿ ನಾಯಕನಾಗಿ ನಟಿಸಿರುವ ಸೂಪರ್ ಹಿಟ್ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ. ವಿಜಯಾನಂದ್ ನಿರ್ದೇಶನದ ಈ ಸಿನಿಮಾದ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈ ಕುರಿತಾದ ಪತ್ರಿಕಾಗೋಷ್ಠಿಯ ಮೂಲಕ ಚಿತ್ರತಂಡ ಒಟ್ಟಾರೆ ಸಿನಿಮಾದ ಬಗೆಗಿನ ಒಂದಷ್ಟು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದೆ. ಹೀಗೆ ಬಿಡುಗಡೆಗೊಂಡಿರುವ `ಸೂಪರ್ ಹಿಟ್’ ಟೀಸರ್ ಸು ಫ್ರಂ ಸೋ ನಂತರದಲ್ಲಿ ಮತ್ತೊಂದು ಮಟ್ಟದ ಕಾಮಿಡಿಯ ಮೂಲಕ ಸಂಚಲನ ಸೃಷ್ಟಿಸುವ ಲಕ್ಷಣಗಳು ದಟ್ಟವಾಗಿ ಕಾಣಿಸುತ್ತಿವೆ. ಸಿನಿಮಾವೊಂದು ....
*ಜನವರಿ 2 ರಂದು ರೂಪ ಅಯ್ಯರ್ ನಿರ್ದೇಶನದ ’ಆಜಾದ್ ಭಾರತ್’ ಚಿತ್ರ ದೇಶದಾದ್ಯಂತ ಬಿಡುಗಡೆ* . *ಇದು ಕನ್ನಡಗರಿಂದ ನಿರ್ಮಾಣವಾಗಿರುವ ದೇಶಪ್ರೇಮ ಸಾರುವ ಹಿಂದಿ ಚಿತ್ರ* . ನಟಿಯಾಗಿ, ನಿರ್ದೇಶಕಿಯಾಗಿ ಅಷ್ಟೇ ಅಲ್ಲದೆ ಸಮಾಜಮುಖಿ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿರುವ ರೂಪ ಅಯ್ಯರ್ ನಿರ್ದೇಶನದ "ಆಜಾದ್ ಭಾರತ್" ಹಿಂದಿ ಚಿತ್ರ ಜನವರಿ 2 ರಂದು ದೇಶದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ’ನೀರಾ ಆರ್ಯ’ ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆಯನ್ನು "ಆಜಾದ್ ಭಾರತ್" ಎಂದು ಬದಲಿಸಲಾಗಿದೆ. ಈ ಚಿತ್ರವನ್ನು ನೇತಾಜಿ ಸುಭಾಷ್ ಚಂದ್ರ ....
*ಸುಧೀಂದ್ರ ವೆಂಕಟೇಶ್ ನಿರ್ಮಾಣದ "ಫಸ್ಟ್ ಸ್ಯಾಲರಿ"ಗೆ ಪವನ್ ವೆಂಕಟೇಶ್ ನಿರ್ದೇಶನ* . *ಕಿರುಚಿತ್ರದ ಮೊದಲ ಪ್ರದರ್ಶನದಲ್ಲಿ ನಟಿ ಶ್ರುತಿ, ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿ* . ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ನಿರ್ಮಾಣ ಮಾಡಿರುವ, ಅವರ ಪುತ್ರ ಪವನ್ ವೆಂಕಟೇಶ್ ನಿರ್ದೇಶನ ಮಾಡಿರುವ "ಫಸ್ಟ್ ಸ್ಯಾಲರಿ" ಫಸ್ಟ್ ಶೋ ಇತ್ತೀಚೆಗೆ ನಡೆಯಿತು. ಮೊದಲ ಪ್ರದರ್ಶನದಲ್ಲಿ ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟಿ ಶೃತಿ ಹಾಗೂ ಗುರುಗಳಾದ ಕಮಲಾಕರ್ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ತಂಡದ ಸದಸ್ಯರು ಮಾತನಾಡಿದರು. ಡಿ.ವಿ.ಸುಧೀಂದ್ರ ....