Kona.Film News

Monday, October 27, 2025

  ಕೋಣನ ಧ್ಯಾನದಲ್ಲಿ ಕೋಮಲ್ - ತನಿಷಾ!   ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ ನಾಯಕಿ ಪಾತ್ರದ ಜತೆಯಲ್ಲೇ ನಿರ್ಮಾಪಕಿಯಾಗಿಯೂ ಗುರುತಿಸಿಕೊಳ್ಳುತ್ತಿರುವ ಚಿತ್ರವೇ ಕೋಣ. ತನಿಷಾ ಮತ್ತು ಚಿತ್ರದ ನಾಯಕ ಕೋಮಲ್ ಕುಮಾರ್ ಜತೆ ನಡೆಸಿದ ಮಾತುಕತೆಯಲ್ಲಿ ಈ‌ ಜೋಡಿ ಹಂಚಿಕೊಂಡ ವಿಶೇಷ ಮಾಹಿತಿಗಳು ಇಲ್ಲಿವೆ.   ನಟಿಯಾಗುವ ಕನಸು ಕಂಡಿದ್ದ ತನಿಷಾ ಕುಪ್ಪಂಡ ತಮಿಳು ಭಾಷೆಯಲ್ಲೂ ಅಭಿನಯಿಸಿದ್ದಾರೆ. ಇಂಥದೇ ಒಂದು ಸಂದರ್ಭದಲ್ಲಿ ಖುಷ್ಬೂ ನಟನೆಯೊಂದಿಗೆ ನಿರ್ಮಾಪಕಿಯಾಗಿಯೂ ಕಾರ್ಯನಿರ್ವಹಿಸುವುದನ್ನು ಕಣ್ಣಾರೆ ಕಾಣುವ ಅವಕಾಶ ಇವರಿಗೆ ದೊರಕಿತ್ತು. ಅಲ್ಲಿ ನಿರ್ಮಾಪಕಿಯಾಗಿ ಖುಷ್ಬೂಗೆ ದೊರಕಿದ ಸ್ಥಾನಮಾನ ಕಂಡ ಬಳಿಕ ತಾನು ಕೂಡ ನಿರ್ಮಾಪಕಿ ಆಗುವ‌ಕನಸು ಕಂಡರು.‌ ಇದೀಗ ಕೋಣ ....

Read More...

Appu.Kannada App.News

Saturday, October 25, 2025

  *ಅಪ್ಪು‌ ಫ್ಯಾನ್ ಡಮ್ ಆ್ಯಪ್ ಅನಾವರಣ ಮಾಡಿದ ಉಪಮುಖ್ಯಮಂತ್ರಿ‌‌ ಡಿಕೆ ಶಿವಕುಮಾರ್*   *ಅಪ್ಪು ಫ್ಯಾನ್ ಡಮ್ ಆ್ಯಪ್ ಲಾಂಚ್..ಡಿಕೆ ಶಿವಕುಮಾರ್ ಸಾಥ್*       ಖ್ಯಾತನಟ ದಿ.ಡಾ.ಪುನೀತ್ ರಾಜ್‍ಕುಮಾರ್ ಅವರು ನಮ್ಮನೆಲ್ಲ ಅಗಲಿ ಇದೇ ಅಕ್ಟೋಬರ್ 29ಕ್ಕೆ ನಾಲ್ಕು ವರ್ಷ ಕಳೆಯುತ್ತಿದೆ. ಈ ಸಂದರ್ಭದಲ್ಲಿ ಪುನೀತ್ ಅವರನ್ನು ಎಐ(ಕೃತಕ ಬುದ್ಧಿಮತ್ತೆ) ಮೂಲಕ ಅಭಿಮಾನಿಗಳಿಗೆ ತೋರಿಸುವ ಸ್ಟಾರ್ ಫ್ಯಾನ್​ಡಮ್ ಆ್ಯಪ್ (ಕನ್ನಡದ ಅಪ್ಪು ಪಿಆರ್​ಕೆ ಮೊಬೈಲ್ ಆ್ಯಪ್) ಅನ್ನು ಶನಿವಾರ ಖಾಸಗಿ ಹೋಟೆಲ್​ನಲ್ಲಿ ಡಿಸಿಎಂ ಡಿ.ಕೆ‌.ಶಿವಕುಮಾರ್ ಅನಾವರಣಗೊಳಿಸಿದ್ದಾರೆ.     ಈ ಸಂದರ್ಭದಲ್ಲಿ‌ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ಸ್ಟಾರ್ ....

Read More...

The Task.Film News

Sunday, October 26, 2025

  *ನಿರೀಕ್ಷೆ ಹೆಚ್ಚಿಸಿದ ’ದಿ ಟಾಸ್ಕ್’ ಟೀಸರ್...ನವೆಂಬರ್ 21ಕ್ಕೆ ರಾಘು ಶಿವಮೊಗ್ಗ ಮೂರನೇ ಪ್ರಯತ್ನ ತೆರೆಗೆ ಎಂಟ್ರಿ*     *ರಾಘು ಶಿವಮೊಗ್ಗ ನಿರ್ದೇಶನದ ಮೂರನೇ ಸಿನಿಮಾ ದಿ ಟಾಸ್ಕ್ ಟೀಸರ್ ಅನಾವರಣ*     ಬೆಳ್ಳಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿರುವ ರಾಘು ಶಿವಮೊಗ್ಗ ನಿರ್ದೇಶಿಸಿರುವ ಮೂರನೇ ಸಿನಿಮಾ ದಿ ಟಾಸ್ಕ್ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ನವೆಂಬರ್ 21ಕ್ಕೆ ತೆರೆಗೆ ಎಂಟ್ರಿ ಕೊಡಲಿರುವ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ನಿನ್ನೆ ಜಿಟಿ‌ ಮಾಲ್‌ನಲ್ಲಿ ಜರುಗಿದೆ. ಕಾರ್ಯಕ್ರಮದಲ್ಲಿ ADGP ಎಂ ಚಂದ್ರಶೇಖರ್, ಲಹರಿ ಸಂಸ್ಥೆಯ ಲಹರಿ ವೇಲು, ವಿಷ್ಣು ಸೇನೆಯ ವೀರಕಪುತ್ರ ಶ್ರೀನಿವಾಸ್ ,‌ ನಿರ್ದೇಶಕರಾದ ಪವನ್ ಒಡೆಯರ್, ಸಿಂಪಲ್ ಸುನಿ ಹಾಗೂ ....

Read More...

Haldwani.News

Saturday, October 25, 2025

  *ನಾದಬ್ರಹ್ಮ‌ ಹಂಸಲೇಖ ಅವರ ಐದನಿ ಎಂಟರ್ಟೈನ್ಮೆಂಟ್ ಸಂಸ್ಥೆಯ ಐದನಿ ಚಿನ್ನದ ಪದಕ್ಕೆ  ಪ್ರಾಗೈತಿಹಾಸಿಕ ತಜ್ಞ ಪ್ರೊ.ರವಿ ಕೋರಿಶೆಟ್ಟರ್ ಆಯ್ಕೆ*     *ಈ ಬಾರಿಗೆ ಐದನಿ ಚಿನ್ನದ ಪದಕ್ಕೆ ಪ್ರಾಗೈತಿಹಾಸಿಕ ತಜ್ಞ ಪ್ರೊ.ರವಿ ಕೋರಿಶೆಟ್ಟರ್ ಆಯ್ಕೆ..ಇದು ಹಂಸಲೇಖ ಸಂಸ್ಥೆಯ ಕಾಣಿಕೆ*     ನಾದಬ್ರಹ್ಮ ಹಂಸಲೇಖ ಅವರ ಐದನಿ ಎಂಟರ್ಟೈನ್ಮೆಂಟ್ ಸಂಸ್ಥೆಯೂ ಪ್ರತಿ ವರ್ಷ ಒಬ್ಬಬ್ಬೊ ಸಾಧಕರಿಗೆ ಜೀವಮಾನದ ಸಾಧನೆಗಾಗಿ ನೀಡುವ ’ಐದನಿ ಚಿನ್ನದ ಪದಕ’‌ ನೀಡಿ ಗೌರವುಸುತ್ತಾ ಬಂದಿದೆ. ಈ ಮೊದಲ ಗೌರವವನ್ನು  ಡಾ ಶಿವರಾಜ್ ಕುಮಾರ್ ಅವರಿಗೆ, ಎರಡನೆಯದಾಗಿ ಹಿರಿಯ ನಿರ್ದೇಶಕರಾದ ಶ್ರೀ ರಾಜೇಂದ್ರ ಸಿಂಗ್ ಬಾಬು ಅವರಿಗೆ ನೀಡಿತ್ತು. ಇದೀಗ ಮೂರನೆಯವರಾಗಿ ....

Read More...

Varna.Film News

Friday, October 24, 2025

  *ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಅರ್ಜುನ್ ಯೋಗಿ ನಟನೆಯ "ವರ್ಣ".*      ಈಗಾಗಲೇ ನಾಲ್ಕು ಚಿತ್ರಗಳಲ್ಲಿ ನಾಯಕನಾಗಿ ನಟಿಸಿರುವ, ಧಾರಾವಾಹಿಗಳಲ್ಲೂ ಅಭಿನಯಿಸಿರುವ ಅರ್ಜುನ್ ಯೋಗಿ ನಾಯಕನಾಗಿ ನಟಿಸಿರುವ, ದೇವ ಶರ್ಮ ನಿರ್ದೇಶಿಸಿರುವ ಹಾಗೂ ಮಲ್ಲಿನೇನಿ ನವೀನ್ ಚೌಧರಿ ನಿರ್ಮಿಸಿರುವ "ವರ್ಣ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ಮಾಪಕರ ಪುತ್ರ ವರ್ಷನ್ ಚೌಧರಿ ಟ್ರೇಲರ್ ಅನಾವರಣ ಮಾಡಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.    ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಹೇಳಿರುವ "ಕರ್ಮಣ್ಯೇವಾಧಿಕಾರಸ್ತೇ ಮಾಫಲೇಷು ಕದಾಚನ" ಎಂಬ ಮಾತೇ ಈ ಚಿತ್ರದ ಕಥೆಗೆ ಸ್ಪೂರ್ತಿ ಎಂದು ಮಾತನಾಡಿದ ನಿರ್ದೇಶಕ ದೇವ ಶರ್ಮ, ಮೊದಲು ಇದನ್ನು ಕಿರುಚಿತ್ರ ....

Read More...

Halka Don.Film News

Friday, October 24, 2025

  *ಸೆಟ್ಟೇರಿತು ’ಹಲ್ಕಾ ಡಾನ್’..ಕೆಪಿ‌ ಶ್ರೀಕಾಂತ್ ಹೊಸ ಸಿನಿಮಾಗೆ ಶಿವಣ್ಣ-ಕಿಚ್ಚ-ವಿಜಯ್ ಕುಮಾರ್ ರಚಿತಾ ರಾಮ್ ಸಾಥ್*     *ಬಂಡಿ ಮಹಾಕಾಳಿ ಸನ್ನಿಧಿಯಲ್ಲಿ ಹಲ್ಕಾ ಡಾನ್ ಮುಹೂರ್ತ...ಟಗರು-ಸಲಗ ನಿರ್ಮಾಪಕರ ಹೊಸ ಚಿತ್ರಕ್ಕೆ ಶಿವಣ್ಣ-ಸುದೀಪ್-ವಿಜಯ್ ಕುಮಾರ್-ರಚಿತಾ ರಾಮ್ ಶುಭ ಹಾರೈಕೆ*     ’ಟಗರು’, ’ಸಲಗ’ ಹಾಗೂ ’ಯುಐ’ ಚಿತ್ರಗಳನ್ನು ನಿರ್ಮಿಸಿರುವ ಕೆಪಿ ಶ್ರೀಕಾಂತ್ ಇದೀಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ವೀನಸ್ ಎಂಟರ್‌ಟೈನರ್ ಬ್ಯಾನರ್ ಅಡಿಯಲ್ಲಿ‌ ಮೂಡಿ ಬರ್ತಿರುವ ನಾಲ್ಕನೇ ಚಿತ್ರಕ್ಕೆ ಹಲ್ಕಾ ಡಾನ್ ಎಂಬ ಶೀರ್ಷಿಕೆ ಇಡಲಾಗಿದೆ. ಇಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆದಿದೆ. ....

Read More...

Bharti Talkies.News

Thursday, October 23, 2025

  *ಭಾರತಿ ಟೀಚರ್ ಏಳನೇ ತರಗತಿ ಹಾಡುಗಳ ಲೋಕಾರ್ಪಣೆ*           *ಭಾರತಿ ಟೀಚರ್ ಏಳನೇ ತರಗತಿ* ಚಿತ್ರದ ಡಾ.ವಿ.ನಾಗೇಂದ್ರ ಪ್ರಸಾದ್ ಒಡೆತನದ ’ಮ್ಯೂಸಿಕ್ ಬಜಾರ್’ ಹೊರತಂದಿರುವ ಐದು ಗೀತೆಗಳ ಬಿಡುಗಡೆ ಕಾರ್ಯಕ್ರಮ ನ್ಯಾಷನಲ್ ಕಾಲೇಜು, ಡಾ.ಹೆಚ್.ನರಸಿಂಹಯ್ಯ ಸಭಾಂಗಣದಲ್ಲಿ ಅದ್ದೂರಿಯಾಗಿ ಶಾಲಾ ಮಕ್ಕಳ ಸಮ್ಮುಖದಲ್ಲಿ ನಡೆದಿದ್ದು ವಿಶೇಷ. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ದಾವಣಗೆರೆ ಮೂಲದ ಡಾ.ವಿ.ವಿಜಯಲಕ್ಷೀ ಮತ್ತು ಉದ್ಯಮಿ ವೀರಕಪುತ್ರ ಶ್ರೀನಿವಾಸ್ ತಲಾ ಒಂದೊಂದು ಹಾಡುಗಳನ್ನು ಲೋಕಾರ್ಪಣೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಸಿರಗುಪ್ಪ ಮೂಲದ ಉದ್ಯಮಿ *ರಾಘವೇಂದ್ರ ರೆಡ್ಡಿ ಅವರು ಪೂಜ್ಯಾಯ ಫಿಲಂಸ್ ಅಡಿಯಲ್ಲಿ ನಿರ್ಮಾಣ* ಮಾಡುತ್ತಿರುವುದು ಹೊಸ ....

Read More...

Green.Film News

Tuesday, October 21, 2025

 

*ರಾಜ್ ವಿಜಯ್ ನಿರ್ದೇಶನದ "ಗ್ರೀನ್" ಚಿತ್ರ ಈ ವಾರ ತೆರೆಗೆ** .

 

 *ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್ ಮುಂತಾದವರು ಮುಖ್ಯಪಾತ್ರದಲ್ಲಿ ನಟನೆ* .

 

ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ವಿಭಿನ್ನ ಕಥಾಹಂದರ ಹೊಂದಿರುವ "ಗ್ರೀನ್" ಚಿತ್ರ ಈ ವಾರ ತೆರೆಗೆ ಬರುತ್ತಿದೆ. ನಿಶಾಂತ್ ಎನ್ ಎನ್ ಒಡೆತನದ ಗುನಾದ್ಯ ಪ್ರೊಡಕ್ಷನ್ಸ್ “ಗ್ರೀನ್” ಚಿತ್ರವನ್ನು ತೆರೆಗೆ ತರಲು ಬೆನ್ನೆಲುಬಾಗಿ ನಿಂತಿದೆ.

 

ಈಗಾಗಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳ ಜೊತೆಗೆ ಪ್ರಶಂಸೆಯನ್ನು ಈ ಚಿತ್ರ ಪಡೆದುಕೊಂಡಿದೆ.

Read More...

Bili Chukki Halli Hakki.News

Tuesday, October 21, 2025

  ಬಿಳಿಚುಕ್ಕಿ ಹಳ್ಳಿಹಕ್ಕಿ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದಿಷ್ಟು! ಮಹಿರಾ ಖ್ಯಾತಿಯ ಮಹೇಶ್ ಗೌಡ ನಿರ್ದೇಶನ, ನಿರ್ಮಾಣ ಮಾಡಿ ನಾಯಕನಾಗಿ ನಟಿಸಿರುವ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ’. ಈಗಾಗಲೇ ಹಾಡುಗಳು ಮತ್ತು ಟ್ರೈಲರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಈ ಚಿತ್ರ ಈ ವಾರ ಅಂದರೆ, ಅಕ್ಟೋಬರ್ ೨೪ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಬಿಡುಗಡೆಯ ಅಂಚಿನಲ್ಲಿರುವ ಈ ಸಿನಿಮಾದ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಭಿನ್ನ ಒಳನೋಟದ ಒಂದಷ್ಟು ಮಾತುಗಳನ್ನಾಡಿದ್ದಾರೆ. ತೊನ್ನೆಂಬ ಸಮಸ್ಯೆಯ ಭೂಮಿಕೆಯಲ್ಲಿರುವ, ಪಕ್ಕಾ ಮನೋರಂಜನಾತ್ಮಕ ಗುಣ ಹೊಂದಿರುವ ಈ ಸಿನಿಮಾ ಸಾರಥಿ ಮಹೇಶ್ ಗೌಡರನ್ನು ಮೆಚ್ಚಿಕೊಳ್ಳುತ್ತಲೇ, ಬಿಳಿಚುಕ್ಕಿ ಹಳ್ಳಿಹಕ್ಕಿಯನ್ನು ನೋಡಿ ....

Read More...

Film "4.30-6.News

Friday, October 17, 2025

  *ನೀಲಕಂಠ ಫಿಲಂಸ್ ಹಾಗೂ ಧರ್ಮಶ್ರೀ ಎಂಟರ್ ಪ್ರೈಸಸ್ ನಿರ್ಮಾಣದ ವಿಭಿನ್ನ ಶೀರ್ಷಿಕೆಯ  "4.30 - 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ" ಚಿತ್ರಕ್ಕೆ ಚಾಲನೆ*    *ನಾಯಕ ಎಂ.ಎನ್ ಸುಚಿತ್ ಹುಟ್ಟುಹಬ್ಬದ ದಿನವೇ ಚಿತ್ರ ಆರಂಭ* .    "4.30 ರಿಂದ 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ" ಎಂಬ ವಿಭಿನ್ನ ಶೀರ್ಷಿಕೆಯುಳ್ಳ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ರೇಣುಕಾಂಬ ಥಿಯೇಟರ್ ನಲ್ಲಿ ನೆರವೇರಿತು.  ನೀಲಕಂಠ ಫಿಲಂಸ್ ಹಾಗೂ ಧರ್ಮಶ್ರೀ ಎಂಟರ್ ಪ್ರೈಸಸ್ ಲಾಂಛನದಲ್ಲಿ ಧರ್ಮಶ್ರೀ ಮಂಜುನಾಥ್(ರಥಾವರ) ಹಾಗೂ D ಯೋಗರಾಜ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಪೂವೈ ಸುರೇಶ್ ಹಾಗೂ ಶಿವರಾಜ್ ನಿರ್ದೇಶಿಸುತ್ತಿದ್ದಾರೆ. ಧರ್ಮಶ್ರೀ ಮಂಜುನಾಥ್ ಅವರ ಪುತ್ರ ಎಂ.ಎನ್ ....

Read More...

Yaarigu Helbedi.News

Sunday, October 19, 2025

  *ಶೀರ್ಷಿಕೆ ಹಳೇದು ಕಥೆ ಹೊಸತು*          ಮೂರು ದಶಕಗಳ ಹಿಂದೆ *ಯಾರಿಗೂ ಹೇಳ್ಬೇಡಿ* ಚಿತ್ರವು ತೆರೆಕಂಡು ಹಿಟ್ ಆಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸದ್ದಿಲ್ಲದೆ ತೆರೆಗೆ ಬರಲು ಸಿದ್ದವಾಗಿದೆ. ಕಿಚ್ಚ ಸುದೀಪ್ ಈಗಾಗಲೇ ಟ್ರೇಲರ್ ಲೋಕಾರ್ಪಣೆಗೊಳಿಸಿ ಮೆಚ್ಚುಗೆಯ ಮಾತನಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಸುದ್ದಿ ಮಾಡುವ ಸಲುವಾಗಿ ಟ್ರೇಲರ್ ಬಿಡುಗಡೆ ಸಮಾರಂಭ ಮೊನ್ನೆಯಷ್ಟೇ ನಡೆಯಿತು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಮುಗಿಸಿರುವ ಹೈದರಬಾದ್‌ನ *ಹರೀಶ್ ಅಮ್ಮಿನೇನಿ ಕನ್ನಡ ಭಾಷೆಯ ಅಭಿಮಾನದ ಮೇಲೆ ಬಂಡವಾಳ* ಹೂಡಿದ್ದು, ಸುನಿಲ್‌ಕುಮಾರ್ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. *ಶಿವಗಣೇಶ್ ಆಕ್ಷನ್ ಕಟ್* ಹೇಳಿದ್ದಾರೆ.   ....

Read More...

DDD.Film News

Sunday, October 19, 2025

  *ಧೈರ್ಯಂ ಧರ್ಮಂ ದೇಶಂ ಇವು ಸಮಾಜದ ಅಂಗಗಳು*           ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ *DDD* ಚಿತ್ರದ ಟ್ರೇಲರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ ಕಾರ್ಯಕ್ರಮ ಎಸ್‌ಆರ್‌ವಿ ಪ್ರಿವ್ಯೂ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಹೊಸರುದಲ್ಲಿ ಸಗಟು ತರಕಾರಿ ವ್ಯಾಪಾರ ಮಾಡುತ್ತಿರುವ *ಕೆ.ಬಿ.ಮಂಜುನಾಥ್ ಸಿನಿಮಾಕ್ಕೆ ಕಥೆ,ನಿರ್ದೇಶನ ಅಲ್ಲದೆ ಕೆಬಿಎಂ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ* ಮಾಡಿದ್ದಾರೆ. ಮಹೇಶ್ ಹಾಗೂ ಚಂದ್ರಣ್ಣ ಸಹ ನಿರ್ಮಾಪಕರು.          ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಇಲ್ಲಿಯವರೆಗೆ ಎರಡು ಕಿರುಚಿತ್ರಗಳನ್ನು ಮಾಡಿದ್ದೇನೆ. ಇದು ನನಗೆ ಮೊದಲ ಹಿರಿತೆರೆಯ ಅನುಭವ. ಸಾಮಾನ್ಯ ಪ್ರಜೆಯಾದವನು ಧೈರ್ಯ ....

Read More...

Love Otp.Film News

Saturday, October 18, 2025

  ಅನೀಶ್ ತೇಜೇಶ್ಬರ್ ನಟನೆ, ನಿರ್ದೇಶನದ "ಲವ್ ಒಟಿಪಿ"  ನವೆಂಬರ್ 14 ರಂದು ತೆರೆಗೆ     ಕನ್ನಡ ಚಿತ್ರರಂಗದ ಭರವಸೆಯ ನಾಯಕ ನಟ ಅನೀಶ್ ತೇಜೇಶ್ವರ್ ನಾಯಕನಾಗಿ ನಟಿಸಿ ನಿರ್ದೇಶಿಸಿರುವ " ಲವ್ ಒಟಿಪಿ  ಚಿತ್ರದ ಟ್ರೈಲರ್‌ ಬಿಡುಗಡೆಯಾಗಿದ್ದು ಚಿತ್ರ ನವಂಬರ್ 14 ರಂದು ತೆರೆಗೆ ಬರಲು ಸಜ್ಜಾಗಿದೆ.   ತಂದೆ - ಮಗನ‌ ಸಂಬಂಧ, ಪ್ರೀತಿ, ಪ್ರೇಮ ಸೇರಿದಂತೆ ಕಮರ್ಷಿಯಲ್ ಅಂಶಗಳನ್ನು ಸೇರಿಸಿ ಚಿತ್ರವನ್ನು ತೆರೆಗೆ ತರಲು ಸಜ್ಜಾಗಿದೆ.  65 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.   ಲವ್ ಒಟಿಪಿ" ಚಿತ್ರದ ಮೂಲಕ  ತೆಲುಗು ಚಿತ್ರರಂಗಕ್ಕೂ ಪಾದಾರ್ಪಣೆ ಮಾಡಿದ್ದಾರೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ತಯಾರಾಗಿರುವ ಲವ್ ಒಟಿಪಿ ಚಿತ್ರ ನವಂಬರ್ 14 ರಂದು ತೆರೆಗೆ ....

Read More...

Dilmaar.Film News

Thursday, October 16, 2025

  *ಚಂದ್ರಮೌಳಿ-ರಾಮ್ ಹೊಸ ಸಾಹಸ ’ದಿಲ್ಮಾರ್’ಗೆ ಶಿವಣ್ಣ ಬೆಂಬಲ..ಇದೇ 24ರಂದು ಸಿನಿಮಾ ರಿಲೀಸ್*     *’ದಿಲ್ಮಾರ್’ಗೆ ಪ್ರೀ-ರಿಲೀಸ್ ಇವೆಂಟ್ ಗೆ ಶಿವಣ್ಣ ಮೆರುಗು..ರಾಮ್-ಚಂದ್ರಮೌಳಿ ಚಿತ್ರಕ್ಕೆ ದೊಡ್ಮನೆ‌ ದೊರೆ ಹಾರೈಕೆ*     *’ದಿಲ್ಮಾರ್’ಗೆ ಶಿವಣ್ಣ ಸಾಥ್..ಕೆಜಿಎಫ್ ಡೈಲಾಗ್ ರೈಟರ್ ಮೊದಲ ಚಿತ್ರ ಇದೇ 24ಕ್ಕೆ ರಿಲೀಸ್*     ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್ ಕೊಟ್ಟಿರುವ ದಿಲ್ಮಾರ್ ಸಿನಿಮಾಗೀಗ ದೊಡ್ಮನೆ ದೊರೆ ಶಿವಣ್ಣನ ಬೆಂಬಲ ಸಿಕ್ಕಿದೆ. ಇದೇ ತಿಂಗಳ 24ರಂದು ತೆರೆಗೆ ಬರ್ತಿರುವ ಕೆಜಿಎಫ್ ಡೈಲಾಗ್ ರೈಟರ್ ಚಂದ್ರಮೌಳಿಯವರ ಚೊಚ್ಚಲ ಸಿನಿಮಾಗೆ ಶಿವಣ್ಣ ಶುಭ ಹಾರೈಸಿದ್ದಾರೆ. ನಿನ್ನೆ ಬೆಂಗಳೂರಿನ ....

Read More...

Brat.Film News

Friday, October 17, 2025

  *ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು ಬಹು ನಿರೀಕ್ಷಿತ "ಬ್ರ್ಯಾಟ್"(BRAT) ಚಿತ್ರದ ಟ್ರೇಲರ್.* .        ಡಾಲ್ಫಿನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ " ಬ್ರ್ಯಾಟ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ "ಬ್ರ್ಯಾಟ್" ಚಿತ್ರದ ಟ್ರೇಲರ್ ಅನ್ನು ಅನಾವರಣ ಮಾಡಿದರು. ನಂತರ ಸುದೀಪ್ ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.   ಶಶಾಂಕ್ ಒಬ್ಬರು ಒಳ್ಳೆಯ ಕಥೆಗಾರ. ಅವರ ನಿರ್ದೇಶನದ ಚಿತ್ರ ಎಂದ ಮೇಲೆ ಚೆನ್ನಾಗಿರುತ್ತದೆ. ಹಾಗೆ ಡಾರ್ಲಿಂಗ್ ಕೃಷ್ಣ ಕೂಡ ಉತ್ತಮ ನಟ. ....

Read More...

Radheyaa.Film News

Saturday, October 18, 2025

  ಕುಂತೀಪುತ್ರ ’ರಾಧೇಯ’ ಚಿತ್ರದ ಟೀಸರ್ ಬಿಡುಗಡೆ            ನಟ, ನಿರ್ದೇಶಕ ಅಜೇಯ್ ರಾವ್ ಈಗ ರಾಧೇಯನಾಗಿದ್ದಾರೆ. ಹೌದು, ಅವರು  ಹೊಸ ಚಿತ್ರದ ಹೆಸರು ರಾಧೇಯ. ಒಂದಷ್ಟು ವರ್ಷಗಳಿಂದ ಕೆಲ ನಿರ್ದೇಶಕರ ಜತೆ ಕೆಲಸ ಮಾಡಿ ಅನುಭವ ಪಡೆದಿರುವ ವೇದಗುರು ಇದೇ ಮೊದಲಬಾರಿಗೆ ’ರಾಧೇಯ’ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ.  ಜೊತೆಗೆ ಕೀರ್ತಿ ಚಾಹ್ನಾ ಸಿನಿಮಾ ಕಾರ್ಖಾನೆ ಮೂಲಕ ನಿರ್ಮಾಣ ಸಹ ಮಾಡಿದ್ದಾರೆ. ಕೃಷ್ಣ ಅಜಯ್ ರಾವ್ ಹಾಗೂ ಸೋನಾಲ್ ಮಂತೆರೋ ನಾಯಕ-ನಾಯಕಿಯಾಗಿ ಅಭಿನಯಿಸಿರುವ ಈ ಚಿತ್ರದ ಟೀಸರ್  ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಈ  ಸಂದರ್ಭದಲ್ಲಿ ನಿರ್ದೇಶಕ ವೇದಗುರು ಮಾತನಾಡುತ್ತ  ಮಹಾಭಾರತದ ಕರ್ಣನ ಇನ್ನೊಂದು ಹೆಸರು ....

Read More...

Flirt.Film News

Sunday, October 19, 2025

  'ಫ್ಲರ್ಟ್’ ಚಿತ್ರದ ಟ್ರೈಲರ್  ಕಿಚ್ಚ ಸುದೀಪ್ ಬಿಡುಗಡೆ    ನಟ ಚಂದನ್ ಕುಮಾರ್ ಪ್ರಥಮ ನಿರ್ದೇಶನದ ಚಿತ್ರ      ಕನ್ನಡದ ಸುರಧ್ರೂಪಿ ನಟ ಚಂದನ್ ಕುಮಾರ್ ಫ್ಲರ್ಟ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳೋ ಜತೆಗೆ ಚಿತ್ರದ ನಾಯಕನಾಗೂ ನಟಿಸಿದ್ದಾರೆ. ಎವರೆಸ್ಟ್ ಪಿಕ್ಚರ್ಸ್ ಮೂಲಕ ನಿರ್ಮಾಣ ಸಹ ಮಾಡಿದ್ದಾರೆ.  ಎ ಪ್ಯೂರ್ ಡವ್ ಸ್ಟೋರಿ ಎಂಬ ಅಡಿಬರಹ ಫ್ಲರ್ಟ್ ಚಿತ್ರಕ್ಕಿದ್ದು, ನಿಮಿಕಾ ರತ್ನಾಕರ್, ಅಕ್ಷತಾ ಬೋಪಣ್ಣ  ನಾಯಕಿಯರಾಗಿ ನಟಿಸಿದ್ದಾರೆ.     ಈಗಾಗಲೇ ಬಿಡುಗಡೆಗೆ ಸಿದ್ದವಾಗಿರುವ  ಈ ಚಿತ್ರದ ನೀ ನನ್ನ ಜೀವ ಎಂಬ ಫ್ರೆಂಡ್ ಶಿಪ್ ಹಾಡನ್ನು ಇತ್ತೀಚೆಗೆ ರಿಲೀಸ್ ಮಾಡೋ ಮೂಲಕ ಪ್ರಚಾರಕ್ಕೆ ಚಾಲನೆ ನೀಡಲಾಗಿತ್ತು. ಚಂದನ್ ಆಪ್ತರಾದ ಕಿಚ್ಚ ....

Read More...

Digalu Pura.Film News

Friday, October 17, 2025

  'ದಿಗ್ಲುಪುರ’ ಸಾವಿನ ಊರಲ್ಲಿ      ಮುಹೂರ್ತದ ಸಂಭ್ರಮ   ಸ್ಕೇರಿ ಹಳ್ಳಿಯಲ್ಲಿ ಒಂದು ಪಯಣ...      ಕನ್ನಡದಲ್ಲಿ ಬ್ಲಾಕ್ ಮ್ಯಾಜಿಕ್ ಆಧಾರಿತ ಚಿತ್ರಗಳು ತೀರ ವಿರಳ. ದಶಕಗಳ ಹಿಂದೆ ಏಟು ಎದಿರೇಟು, ಇತ್ತೀಚಿನ ಕಟಕ ಅದ್ಭುತವಾದ ಮಾಟ ಮಂತ್ರದ ಕಾನ್ಸೆಪ್ಟ್ ಒಳಗೊಂಡ ಚಿತ್ರಗಳಾಗಿದ್ದವು. ಬಹಳ‌ ದಿನಗಳ ನಂತರ ಅಂಥದೇ ಎಳೆ ಇರುವ ಚಿತ್ರವೊಂದು ಸೆಟ್ಟೇರಿದೆ. ಅದರ ಹೆಸರು ದಿಗ್ಲುಪುರ. ಕಳೆದ ಶುಕ್ರವಾರ ಕಂಠೀರವ ಸ್ಟುಡಿಯೋದಲ್ಲಿ ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಮುಹೂರ್ತ ದೃಶ್ಯಕ್ಕೆ ಕ್ಲಾಪ್ ಮಾಡಿದರು. ದ ಡೆಡ್ ವಾಕ್ ಇನ್ ಸ್ಕೇರಿ ವಿಲೇಜ್ ಎಂಬ ಅಡಿಬರಹ ಇರೋ ಈ ಚಿತ್ರಕ್ಕೆ ಮನೋಜ್ಞ ಮನ್ವಂತರ ಕಥೆ, ಚಿತ್ರಕಥೆ ....

Read More...

Vrushabha.Film News

Wednesday, October 15, 2025

  'ವೃಷಭ’ ಟೈಟಲ್ ಸಮಸ್ಯೆ  ಮೂಲ ಕನ್ನಡ ಚಿತ್ರಕ್ಕೆ ಸಂಕಷ್ಟ : ಫಿಲಂ ಚೇಂಬರ್ ಬಗೆಹರಿಸಬೇಕಿದೆ..    ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಬಂದ ಮೇಲೆ ಇತ್ತೀಚಿನ ದಿನಗಳಲ್ಲಿ ಒಂದೇ ಹೆಸರಿನಲ್ಲಿ ಎರಡು ಚಿತ್ರಗಳು ತೆರೆ ಕಾಣುತ್ತಿರುವುದು ಮೂಲ ಕನ್ನಡದಲ್ಲಿ ಮಾಡಿದ ಸಿನಿಮಾಗಳಿಗೆ ಸಮಸ್ಯೆಯಾಗುತ್ತಿದೆ. ಬೇರೆ ಭಾಷೆಯವರು ರಿಲೀಸ್ ಹಂತದಲ್ಲಿ ಡಬ್ಬಿಂಗ್ ವರ್ಷನ್ ಗೆ  ಟೈಟಲ್ ಕೊಟ್ಟು ಬಿಡುಗಡೆ ಮಾಡುತ್ತಾರೆ. ಅದೇ ರೀತಿ ಯುವ ನಿರ್ದೇಶಕ ಉಮೇಶ್ ಹೆಬ್ಬಾಳ ಅವರು  ಕಳೆದ 2-3 ವರ್ಷಗಳಿಂದ ದೊಡ್ಡ ಮಟ್ಟದ  ಎಫರ್ಟ ಹಾಕಿ, ಕಷ್ಟಪಟ್ಟು ವೃಷಭ ಎಂಬ ಚಿತ್ರವನ್ನು ಮಾಡಿದ್ದಾರೆ. ಉಮೇಶ್ ಹೆಬ್ಬಾಳ ಅವರೇ ನಾಯಕನಾಗಿ ನಟಿಸಿ ಬಿಗ್ ಬಜೆಟ್ ನಲ್ಲಿ ಈ  ಚಿತ್ರ ನಿರ್ಮಾಣ ಸಹ ಮಾಡಿದ್ದಾರೆ.  ....

Read More...

Moda Kavida Vatavarana.News

Tuesday, October 14, 2025

  *ಸಿಂಪಲ್ ಸುನಿ ಸಾರಥ್ಯದ ’ಮೋಡ ಕವಿದ ವಾತಾವರಣ’  ಸಿನಿಮಾದ ಮೊದಲ ಹಾಡು ರಿಲೀಸ್*   *ನನ್ನೆದೆಯ ಹಾಡೊಂದನು ಎನ್ನುತ್ತಾ ಹೆಜ್ಜೆ ಹಾಕಿದ ಸಿಂಪಲ್ ಸುನಿ‌ ಶಿಷ್ಯ... ಮೋಡ ಕವಿದ ವಾತಾವರಣ ಚಿತ್ರದ ಫಸ್ಟ್ ಸಾಂಗ್ ರಿಲೀಸ್*...     ಹೊಸ ಪ್ರತಿಭೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿ ಗೆದ್ದಿರುವ  ನಿರ್ದೇಶಕ ಸಿಂಪಲ್ ಸುನಿ‌ ಈಗ ತಮ್ಮದೇ ಗರಡಿಯ ಹುಡ್ಗ ಶೀಲಮ್ ಅವರನ್ನು ಹೀರೋ ಆಗಿ ಲಾಂಚ್ ಮಾಡಿದ್ದಾರೆ. ಅದಕ್ಕಾಗಿ ಅವರು ಮೋಡ ಕವಿದ ವಾತಾವರಣವನ್ನೇ ಸೃಷ್ಟಿಸಿದ್ದಾರೆ. ಅರ್ಥಾತ್‌ ಸಿಂಪಲ್ ಸುನಿ ಹೊಸ ಸಿನಿಮಾ‌ ಮೋಡ ಕವಿದ ವಾತಾವರಣ.     ’ಮೋಡ ಕವಿದ ವಾತಾವರಣ’ ಸಿನಿಮಾದ ಹೀರೋ ಶೀಲಮ್ ನಿರ್ದೇಶಕ ಸಿಂಪಲ್ ಸುನಿಯೊಂದಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ....

Read More...
Copyright@2018 Chitralahari | All Rights Reserved. Photo Journalist K.S. Mokshendra,