*ಮತ್ತೆ ಒಂದಾದ ’ಪ್ರೇಮಂ’ ಜೋಡಿ..ನಿವಿನ್ ಪೌಲಿ 50ನೇ ಸಿನಿಮಾ ’ವಿಜಯಂ’*
*ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್*
ಮಲಯಾಳಂ ಸಿನಿಮಾ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಘೋಷಣೆ ಕೊನೆಗೂ ಹೊರ ಬಿದ್ದಿದೆ. 12 ವರ್ಷಗಳ ನಂತರ, ಬ್ಲಾಕ್ಬಸ್ಟರ್ ಜೋಡಿ ಎನಿಸಿಕೊಂಡಿರುವ ನಟ ನಿವಿನ್ ಪೌಲಿ ಮತ್ತು ನಿರ್ದೇಶಕ ಆಲ್ಫೋನ್ಸ್ ಪುತ್ರೇನ್ ಅವರ "ವಿಜಯಂ" ಎಂಬ ಹೊಸ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ನೇರಂ ಮತ್ತು ಪ್ರೇಮಂ ಚಿತ್ರದ ಅದ್ಭುತ ಯಶಸ್ಸಿನ ನಂತರ, ಈ ಜೋಡಿ ಮತ್ತೊಮ್ಮೆ ರೋಮಾಂಚಕಾರಿ ಪ್ರಾಜೆಕ್ಟ್ ಗೆ ಕೈಜೋಡಿಸಿದ್ದಾರೆ.
*ಟ್ರೇಲರ್ ನಲ್ಲಿ "ಸರ್ವಾಂತರ್ಯಾಮಿ”* . ರಂಗಭೂಮಿ ಹಿನ್ನೆಲೆ ಇರುವ ರಂಗಸ್ವಾಮಿ ಕಪನಿಪಾಳ್ಯ ನಿರ್ದೇಶನದ, ಹಿತ ಆರ್ ಗೌಡ ನಿರ್ಮಾಣದ “ಸರ್ವಾಂತರ್ಯಾಮಿ” ಎಲ್ಲರ ಕೈಯಲ್ಲೂ ನಾನೇ ಸ್ವಾಮಿ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟ್ರೇಲರ್ ಕುತೂಹಲ ಮೂಡಿಸಿದ್ದು, ಚಿತ್ರ ಜುಲೈ 17 ರಂದು ತೆರೆಗೆ ಬರಲಿದೆ. ಈ ಚಿತ್ರಕ್ಕೆ ನಿರ್ದೇಶಕ ಹಾಗು ಗೀತರಚನೆಕಾರ ಕೆ.ರಾಮ್ ನಾರಾಯಣ್ ಬೆನ್ನೆಲುಬಾಗಿ ನಿಂತಿದ್ದಾರೆ. ಟ್ರೇಲರ್ ಅನಾವರಣ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಿರ್ದೇಶಕ ಹಾಗೂ ನಟ ರಂಗಸ್ವಾಮಿ ಕಪನಿಪಾಳ್ಯ ಕಪನಿಪಾಳ್ಯ ಮಾತನಾಡಿ, "ಸರ್ವಾಂತರ್ಯಾಮಿ", ಸಾಮಾಜಿಕ ಕಳಕಳಿಯುಳ್ಳ ಚಿತ್ರ. ಮೊಬೈಲ್ ನಿಂದ ಆಗುತ್ತಿರುವ ....
*ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ "ರಕ್ಕಿ" ಚಿತ್ರದ ಟ್ರೇಲರ್ ಅನಾವರಣ* ಅಶ್ವಿನಿ ಪುನೀತ್ ರಾಜಕುಮಾರ್ ಅವರ ಆಶೀರ್ವಾದದೊಂದಿಗೆ, ಎಸ್ ಎನ್ ಆರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಾಲಿಗ್ರಾಮ ಸುರೇಶ್ ಅವರು ನಿರ್ಮಿಸಿರುವ, ವೆಂಕಟ್ ಭಾರದ್ವಾಜ್ ನಿರ್ದೇಶನದಲ್ಲಿ ರಕ್ಕಿ ನಾಯಕನಾಗಿ ನಟಿಸಿರುವ "ರಕ್ಕಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಪಿ.ಆರ್.ಕೆ ಆಡಿಯೋದಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಈ ಟ್ರೇಲರ್ ಲಭ್ಯವಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. . ಜರ್ಮನಿಯಲ್ಲಿ ಹಲವು ವರ್ಷಗಳಿಂದ ನೆಲೆಸಿರುವ ಸಾಲಿಗ್ರಾಮ ....
*ದುನಿಯಾ ವಿಜಯ್ ಹಾಗೂ ನಾಗರಾಜ್ ವಸ್ತಾರೆ ಅವರಿಂದ "ಗ್ರಾಮಾಯಣ"ದ ಟ್ರೇಲರ್ ಅನಾವರಣ.* . *ಜುಲೈ 3 ರಂದು ತೆರೆಗೆ ಬರಲಿದೆ ವಿನಯ್ ರಾಜ್ ಕುಮಾರ್ ಅಭಿನಯದ ಈ ಚಿತ್ರ.* . ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ರಚನೆ - ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ - ಮೇಘ ಶೆಟ್ಟಿ ನಾಯಕ - ನಾಯಕಿಯಾಗಿ ಅಭಿನಯಿಸಿರುವ "ಗ್ರಾಮಾಯಣ" ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ದುನಿಯಾ ವಿಜಯ್ ಹಾಗೂ ನಟಿ ಅಪರ್ಣ ಅವರ ಪತಿ ನಾಗರಾಜ್ ವಸ್ತಾರೆ ಅವರಿಂದ "ಗ್ರಾಮಾಯಣ"ದ ಟ್ರೇಲರ್ ಅನಾವರಣವಾಯಿತು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ....
'ಅಪರಾಧಿ ನಾನಲ್ಲ’ ಸಿನಿಮಾದ ಟ್ರೇಲರ್ ರಿಲೀಸ್.. ಜುಲೈ 3ಕ್ಕೆ ರಿಲೀಸ್ ಮೂವರು ಕೈದಿಗಳು ಜೈಲಿನಲ್ಲಿ ಇರ್ತಾರೆ. ಅವರು ಹೇಗೆ ಹೊರಗೆ ಬರ್ತಾರೆ ಅನ್ನೋದೆ ಕಥೆ. ಸದ್ಯ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಒಂದು ಕೊಲೆ ಸುತ್ತ ಒಂದಷ್ಟು ರೋಚಕ ವಿಚಾರಗಳು ಸಾಗುತ್ತವೆ. SLV ಕಲರ್ಸ್ ಅನುಗ್ರಹ ಫಿಲ್ಸ್ಮ್ ಬ್ಯಾನರ್ ನಲ್ಲಿ ಅಜಿತ್ ಚೌಟಾ ದೇವಸ್ಯ ನಿರ್ಮಾಣದಲ್ಲಿ ಯಶಂತ್ ಕಲ್ಲಡ್ಕ ನಿರ್ದೇಶನ ಮಾಡಿದ್ದಾರೆ. ವಿಕ್ರಂ ದೇವಾಡಿಗ ಮತ್ತು ಸಂದೀಪ್ ಶೆಟ್ಟಿ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿದ್ದಾರೆ. ನಿರ್ದೇಶಕ ಯಶಂತ್ ಕಲ್ಲಡ್ಕ, ಚೆನ್ನಾಗಿ ಸಿನಿಮಾ ಮಾಡಿದ್ದೀವಿ. ಅಪರಾಧಿ ನಾನಲ್ಲ ಅನ್ನೋ ಟೈಟಲ್ ಯಾಕೆ ಅಂದ್ರೆ ಜೈಲಿನಲ್ಲಿ ಎಷ್ಟೋ ಜನ ಇರ್ತಾರೆ. ಆದರೆ ....
ಲವ್ 2 ಲಸ್ಸಿ ಮೋಷನ್ ಪೋಸ್ಟರ್ ಅಂಡ್ ಸಾಂಗ್ ರಿಲೀಸ್ RKB ಫಿಲ್ಮ್ಸ್ ನ ಭಾರತಿ ಶ್ರೀನಿವಾಸ್ ರಾಜ್ ನಿರ್ಮಾಣ ಮಾಡಿರುವ, ಹರಿಪ್ರಾಣ ನಿರ್ದೇಶನ ಮಾಡಿರುವ ಲವ್ 2 ಲಸ್ಸಿ ಸಿನಿಮಾದ ಹಾಡು ಹಾಗೂ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ನಿರ್ದೇಶಕ ಹರಿಪ್ರಾಣ ಅವರಿಗೆ ಸುಮಾರು 18 ಸಿನಿಮಾಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. ಪುತ್ತೂರು, ಸುಳ್ಯ ಕಡೆಗೆ ಶೂಟ್ ಮಾಡಲಾಗಿದೆ. ಜೀವಿತ ಮತ್ತು ಆರ್ಯನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜಗನ್, ತಾರಾ, ವೈಷ್ಣವಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಒರಟ ಶ್ರೀ ಅವರು ಸಾಂಗ್ ರಿಲೀಸ್ ಮಾಡಿ ಮಾತನ್ನಾಡಿ, ಒಂದು ಹೊಸ ತಂಡ. ನಾವೂ ಕೂಡ ಅದನ್ನೆಲ್ಲಾ ಎದುರಿಸಿನೇ ಬಂದಿದ್ದೀವಿ. ನಿರ್ದೇಶಕನಿಗೆ ಮೊದಲ ....
*ಮಂತ್ರಾಲಯದಲ್ಲಿ ಅದ್ದೂರಿಯಾಗಿ ಅನಾವರಣವಾಯಿತು ’ರಾಯರ ದರ್ಶನ’ ಅಲ್ಬಮ್ ಸಾಂಗ್* *ಈ ವರ್ಷದ ಟಿ.ಎನ್.ಐ.ಟಿ ಮೊದಲ ಮೀಡಿಯಾ ಅವಾರ್ಡ್ ಶ್ರೀಸುಬುಧೇಂದ್ರ ತೀರ್ಥರಿಗೆ ಪ್ರದಾನ* . ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಸಹಯೋಗದಲ್ಲಿ ದಿ ನ್ಯೂ ಇಂಡಿಯನ್ ಟೈಮ್ಸ್ ಅಕಾಡೆಮಿ ಅರ್ಪಿಸುವ ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ ಸಮಾರಂಭ ಇತ್ತೀಚೆಗೆ ಮಂತ್ರಾಲಯದಲ್ಲಿ ನಡೆದ ಅದ್ದೂರಿ ನೆರವೇರಿತು. ಈ ಹಾಡನ್ನು ಮಂತ್ರಾಲಯದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಬಿಡುಗಡೆ ಮಾಡಿ ಅನುಗ್ರಹ ಸಂದೇಶ ನೀಡಿದರು. ಜಾತ್ಯತೀತವಾಗಿ ಎಲ್ಲಾ ರಾಯರ ಭಕ್ತರ ಸಹಕಾರದಿಂದ "ರಾಯರ ದರ್ಶನ" ಆಲ್ಬಂ ಸಾಂಗ್ ಬಹಳ ಚೆನ್ನಾಗಿ ಮೂಡಿಬಂದಿದೆ. ರಘು ಭಟ್ ನಿರ್ದೇಶನದಲ್ಲಿ ....
*ಟ್ರೇಲರ್ ಹಾಗೂ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿರುವ ಬಹು ನಿರೀಕ್ಷಿತ "ನಾಗಬಂಧಂ" ಚಿತ್ರ ಜುಲೈ 03ರಂದು ಬಿಡುಗಡೆ* *ಅಭಿಷೇಕ್ ನಾಮ ನಿರ್ದೇಶನದ ಈ ಚಿತ್ರಕ್ಕೆ ವಿರಾಟ್ ಕರ್ಣ ನಾಯಕ - ಕನ್ನಡದ ಹುಡುಗಿ ನಭಾ ನಟೇಶ್ ನಾಯಕಿ* . ಅಭಿಷೇಕ್ ನಾಮ ನಿರ್ದೇಶನದ ಅತ್ಯಂತ ಮಹತ್ವಾಕಾಂಕ್ಷೆಯ ಪ್ಯಾನ್ ಇಂಡಿಯಾ ಚಿತ್ರವಾದ ‘ನಾಗಬಂಧಂ’, ಜುಲೈ 03ರಂದು ಜಗತ್ತಿನಾದ್ಯಂತ ಬಿಡುಗಡೆಗೆ ಸಜ್ಜಾಗಿದೆ. ಅದಕ್ಕೂ ಮೊದಲು ಚಿತ್ರದ ಪ್ರಚಾರದ ಕೆಲಸಗಳು ಶುರುವಾಗಿದ್ದು, ಚಿತ್ರತಂಡ ಬೆಂಗಳೂರಿನಲ್ಲಿ ಇತ್ತೀಚೆಗೆ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಾಯಕ ವಿರಾಟ್ ಕರ್ಣ, ನಾಯಕಿ ನಭಾ ನಟೇಶ್, ಕಲಾವಿದರಾದ ಗರುಡ ರಾಮ್, ಭಜರಂಗಿ ಪ್ರಸನ್ನ, ವಿನಯ್ ಬಿದ್ದಪ್ಪ ಮುಂತಾದವರು ....
*ಬಿ.ಕೆ.ಶ್ರೀನಿವಾಸ್ (ಬೆಂ.ಕೋ.ಶ್ರೀ) "ಜೀವನಯಾನ" ಪುಸ್ತಕ ಬಿಡುಗಡೆ* ಬುಧವಾರ ಗಾಂಧಿ ಭವನದಲ್ಲಿ ನಿರ್ಮಾಪಕ ಬಿ.ಕೆ.ಶ್ರೀನಿವಾಸ್(ಬೆಂ.ಕೊ.ಶ್ರೀ) ಅವರ ಸಿನಿಮಾ, ವ್ಯಾಪಾರ, ಹೋರಾಟ, ಅಜೇಯ ಮನೋಬಲದ ಯಶೋಗಾಥೆಯನ್ನೊಳಗೊಂಡ ’ಬಿ.ಕೆ.ಶ್ರೀನಿವಾಸ ಒಂದು ಅಸಾಮಾನ್ಯ ಜೀವನಯಾನ’ ಪುಸ್ತಕದ ಬಿಡುಗಡೆ ಸಮಾರಂಭ ನಡೆಯಿತು. ನೊಣವಿನಕೆರೆ ಕಾಡು ಸಿದ್ದೇಶ್ವರ ಮಠದ ಶ್ರೀಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮಿಗಳು ಪುಸ್ತಕನ್ನು ಲೋಕಾರ್ಪಣೆ ಮಾಡಿದರು. ವೇದಿಕೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರುಗಳಾದ ಕೆ.ವಿ.ಚಂದ್ರಶೇಖರ್, ಸಾ.ರಾ.ಗೋವಿಂದು, ಪತ್ರಕರ್ತ ಜೋಗಿ, ಬಿಗ್ ಬಾಸ್ ಖ್ಯಾತಿಯ ಜಾಹ್ನವಿ ಹಾಗೂ ಇತರ ಗಣ್ಯರುಗಳು ....
ಲವ್ ಸೀಸನ್ಸ್: ಮುಕುಂದ ರಾಮಸ್ವಾಮಿ ಬರ್ತ್ಡೇಗೆ ಟ್ರೈಲರ್ ಉಡುಗೊರೆ! ಎನ್.ಆರ್ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ, ಕೃತ್ವಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಲವ್ ಸೀಸನ್ಸ್ ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಈ ಚಿತ್ರದ ಮೂಲಕ ನಾಯಕನಾಗಿ ಆಗಮಿಸುತ್ತಿರುವ ಮುಕುಂದ ರಾಮಸ್ವಾಮಿ ಹುಟ್ಟುಹಬ್ಬಕ್ಕೆ ಉಡುಗೊರೆ ಎಂಬಂತೆ ಈ ಟ್ರೈಲರ್ ಪ್ರೇಕ್ಷಕರ ಮುಂದೆ ಬಂದಿದೆ. ಈ ಕುರಿತಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಂಡ್ಯ ರಮೇಶ್, ಜಯತೀರ್ಥ, ಎನ್.ಆರ್ ಮಂಜುನಾಥ (ನೀಲೇರಿ) ಮುಕುಂದ ರಾಮಸ್ವಾಮಿ, ಸಂಗೀತಾ ಅನಿಲ್, ದಿಯಾ ಕೀರ್ತಿ, ಶ್ವೇತಾ ಕೊಗ್ಲೂರು, ಚಂದನಾ ಗೌಡ, ಚೇತನ್ ದುರ್ಗ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಡ್ಯ ರಮೇಶ್ ಹಾಗೂ ....
ಸುಂದರ್ ರಾಜ್ ’ಚಾರ್ಜ್ ಶೀಟ್’ ಟೀಸರ್ ಲಾಂಚ್ ಕನ್ನಡ ಖ್ಯಾತ ಪೋಷಕ ನಟ ಸುಂದರ್ ರಾಜ್ ನಟನೆಯ 250ನೇ ಚಿತ್ರ ಚಾರ್ಜ್ ಶೀಟ್. ಇದರ ಟೀಸರ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಜಯಮಾಲ ಲಾಂಚ್ ಮಾಡಿ ಶುಭಕೋರಿದ್ದಾರೆ. ಚಾರ್ಜ್ ಶೀಟ್ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವರ್ಸಜಾ, "ಈ ಚಿತ್ರದ ಸಾಂಗ್ ನೋಡಿದ ತಕ್ಷಣ ಸಿನಿಮಾ ನೋಡಬೇಕು ಅನಿಸುತ್ತದೆ. ಅಂಕಲ್ (ಸುಂದರ್ರಾಜ್) ಅವರ ಬಾಂಡಿಲಾಂಗ್ವೆಜ್ ನನಗೆ ಗೊತ್ತು. ಅವರು ಏನನ್ನೂ ಗ್ರಾಂಟೆಡ್ ಆಗಿ ತಗೊಳ್ಳಲ್ಲ. ಈ ಇಂಡಸ್ಟ್ರಿಯಲ್ಲಿ ಉಳಿಯಬೇಕೆಂದರೆ ಒಂದೇ ದಾರಿ ಅದು ಟ್ಯಾಲೆಂಟ್. ಅದು ಇರುವುದಕ್ಕೆನೇ ....
*KA-18 ಇದು ಹಾರರ್,ಸೆಸ್ಪೆನ್ಸ್,ಥ್ರಿಲ್ಲರ್ ಸರಕು* ವಿನೂತನ ಶೀರ್ಷಿಕೆ *’KA-18’* ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಛಾಲೆಂಜಿಂಗ್ ಸ್ಟಾರ್ ದರ್ಶನ್ ಅಳಿಯ ನಟ ಮನೋಜ್ ಕ್ಯಾಮಾರ ಆನ್ ಮಾಡಿದರು. ಅಪ್ಪಾಜಿ ಪ್ರೊಡಕ್ಷನ್ಸ್ ಅಡಿಯಲ್ಲಿ ಹಿರೇಮಗಳೂರು ಮೂಲದ *ಎ.ಟಿ.ಎಂ.ಮಂಜು ನಿರ್ಮಾಣ ಮಾಡುವುದರ ಜತೆಗೆ ನಾಯಕನಾಗಿ* ಬಣ್ಣ ಹಚ್ಚುತ್ತಿರುವುದು ಹೊಸ ಅನುಭವ. *ಮೋಹನ್ ಚಿಕ್ಕಿ ಮೂರನೇ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್* ಹೇಳುತ್ತಿದ್ದಾರೆ. ಉತ್ತರಕಾಂಡದ *ಸೋನಿಯಾ ರಾವುತ್ ಸಹ ....
" *ಹುಲಿ ಬೀರ"ನ* *ಜಿಗ್ರಿದೋಸ್ತ್ ಹಾಡು* *ಯುವಕರನ್ನು ಹಳ್ಳಿಗಳಿಗೆ* *ಮರಳಿಸಿದ* *ಧೀರ* ಬಹುತೇಕ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಚಿತ್ರ ಹುಲಿಬೀರ. ಮದರಂಗಿ ಮಲ್ಲಿಕಾರ್ಜುನ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದ ’ಜಿಗ್ರಿ ದೋಸ್ತ್’ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಯರ್ರಾಬಿರ್ರಿ ಖ್ಯಾತಿಯ ನಟ ಅಂಜನ್ ಚಿತ್ರದ ನಾಯಕನಾಗಿ ನಟಿಸಿದ್ದು, ಚೈತ್ರ ತೋಟದ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಜಿಗ್ರಿ ದೋಸ್ತ ಹಾಡಿಗೆ ಮಾಳು, ಶಿವಾನಿ ದನಿಯಾಗಿದ್ದಾರೆ. ಉತ್ತರ ಕರ್ನಾಟಕದ ನೇಟಿವಿಟಿ, ನಾಯಕ, ನಾಯಕಿ, ನಿರ್ಮಾಪಕ, ನಿರ್ದೇಶಕ, ಹೀಗೆ ಅಲ್ಲಿನವರೇ ಸೇರಿ ಮಾಡಿರುವ ಅದೇ ಸೊಗಡಿನ ಚಿತ್ರಕ್ಕೆ ....
ಬಲರಾಮನ ದಿನಗಳು ಹಾಡು ಬಿಡುಗಡೆಯ ಕ್ಷಣಗಳು ಬಲರಾಮನ ದಿನಗಳು ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ಖ್ಯಾತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣ್ ಸಂಗೀತದಲ್ಲಿ ಆಲ್ ಓಕೆ ಹಾಡಿರುವ ಗೀತೆಯನ್ನು ಬಿಡುಗಡೆ ಮಾಡಲಾಗಿದೆ. ಸಿನಿಮಾದ ನಾಯಕ ನಟ ವಿನೋದ್ ಪ್ರಭಾಕರ್ ಅವರು, ಇಲ್ಲಿ ನಿಂತಿದ್ದೀನಿ ಅಂದರೆ ನಮ್ಮ ತಂದೆ ಟೈಗರ್ ಪ್ರಭಾಕರ್ ಅವರು ಕಾರಣ. ಬಲರಾಮ ಏನಿದೆಯೋ ಟೈಗರ್ ಪ್ರಭಾಕರ್ ಅವರು ಬಿಟ್ಟೋದ ಅಧ್ಯಾಯ ನಾನು. ಚಿತ್ರರಂಗದಲ್ಲಿ ಅವರ ಕನಸು ಬಹಳ ಇತ್ತು. ನಾನು ಚಿತ್ರರಂಗಕ್ಕೆ ಬಂದಾಗ ಬಹಳ ಎಡವಿದೆ. ನಾನು ಇದಕ್ಕೆ ದಾರಿತಪ್ಪಿದ ಮಗ ಅಂತ ಇಂಟರ್ವ್ಯೂನಲ್ಲಿ ಇದಕ್ಕೆ ಹೇಳಿದೆ. ಮತ್ತೆ ನಾನು ಯೂಟರ್ನ್ ಮಾಡಿಕೊಂಡು ಬಂದೆ. ಈಗ ಕಂಟೆಂಟೇ ಹೀರೋ, ....
*ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳಿಂದ ಅನಾವರಣವಾಯಿತು "ಪತ್ತೇದಾರಿ" ಚಿತ್ರದ ಪೋಸ್ಟರ್* . *ಶ್ರೀನಿವಾಸ್ ಜಯರಾಮ್ ನಿರ್ದೇಶನದ ಈ ಚಿತ್ರದ ಮೂಲಕ ಕಿಝಾರ್ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ.* . ಎ.ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮೊಹಮ್ಮದ್ ಅತೀಕ್ ನಿರ್ಮಾಣ ಮಾಡುತ್ತಿರುವ, ಶ್ರೀನಿವಾಸ್ ಜಯರಾಮ್ ರಚನೆ & ನಿರ್ದೇಶನದ ಹಾಗೂ ಕಿಝಾರ್ ಎಂಬ ನೂತನ ಪ್ರತಿಭೆ ನಾಯಕನಾಗಿ ನಟಿಸುತ್ತಿರುವ "ಪತ್ತೇದಾರಿ" ಚಿತ್ರದ ಪೋಸ್ಟರ್ ಅನಾವರಣ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನೆರವೇರಿತು. ಕಲಾವಿದರಾದ ಮಯೂರ್ ಪಟೇಲ್, "ಶಿಷ್ಯ" ದೀಪಕ್, ಕಾಕ್ರೋಜ್ ಸುಧೀ, ಚೆಲುವರಾಜ್, ಅರವಿಂದ್, ....
*ಮೋಡ ಕವಿದ ವಾತಾವರಣ ಸಿನಿಮಾದ ಹೀರೋ ಟೀಸರ್ ರಿಲೀಸ್... ವಿಭಿನ್ನ ಪ್ರೇಮ ಕಥೆಯೊಂದಿಗೆ ಬಂದ ಸಿಂಪಲ್* *ಮತ್ತೊಂದು ಫ್ರೆಶ್ ಪ್ರೇಮ ಕಥೆ ಹೊತ್ತು ಬಂದ ಸುನಿ...ಶಿಷ್ಯನಿಗಾಗಿ ಮೋಡ ಕವಿದ ವಾತಾವರಣ ಸೃಷ್ಟಿಸಿದ ಸಿಂಪಲ್ ಡೈರೆಕ್ಟರ್* ಒಂದು ಸರಳ ಪ್ರೇಮಕಥೆ ಸಿನಿಮಾ ಬಳಿಕ ನಿರ್ದೇಶಕ ಸಿಂಪಲ್ ಸುನಿಭತ್ತಳಿಕೆಯಿಂದ ಬರ್ತಿರುವ ಮತ್ತೊಂದು ಸೊಗಸಾದ ಪ್ರೇಮ ಕಥೆ ಮೋಡ ಕವಿದ ವಾತಾವರಣ. ಟೈಟಲ್ ನಿಂದ ಗಮನ ಸೆಳೆಯುತ್ತಿರುವ ಈ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 26ಕ್ಕೆ ಬಿಡುಗಡೆಯಾಗುತ್ತಿರುವ ಮೋಡ ಕವಿದ ವಾತಾವರಣ ಚಿತ್ರದ ಪ್ರಚಾರ ಕೆಲಸ ಜೋರಾಗಿದೆ. ಅದರ ಭಾಗವಾಗಿ ಚಿತ್ರದ ಹೀರೋ ಟೀಸರ್ ಬಿಡುಗಡೆ ಮಾಡಲಾಗಿದೆ. ನಿನ್ನೆ ....
*"ಗ್ರಾಮಾಯಣ"ದ "ಏನೇ ಹೇಳು ಕುಸುಮ" ಹಾಡಿಗೆ ಮೆಚ್ಚುಗೆಯ ಮಹಾಪೂರ* . *ವಿನಯ್ ರಾಜ್ ಕುಮಾರ್ ಅಭಿನಯದ ಈ ಚಿತ್ರ ಜುಲೈ 3 ರಂದು ಬಿಡುಗಡೆ.* . ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ರಚನೆ - ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ - ಮೇಘ ಶೆಟ್ಟಿ ನಾಯಕ - ನಾಯಕಿಯಾಗಿ ಅಭಿನಯಿಸಿರುವ "ಗ್ರಾಮಾಯಣ" ಚಿತ್ರದ "ಏನೇ ಹೇಳು ಕುಸುಮ" ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಲಹರಿ ವೇಲು ಈ ಹಾಡನ್ನು ಅನಾವರಣ ಮಾಡಿದರು. ಪ್ರಮೋದ್ ಮರವಂತೆ ಬರೆದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿರುವ ಈ ಹಾಡನ್ನು ನಿಹಾಲ್ ತವ್ರೊ ಹಾಗೂ ಸಾಕ್ಷಿ ಕಲ್ಲೂರ್ ಹಾಡಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಮೆಚ್ಚುಗೆಯ ಮಾಹಾಪೂರವೇ ....
ಲವ್ ಸೀಸನ್ಸ್: ಹಾಡುಗಳ ಗೆಲುವಿನ ಸಿಹಿ ಹಂಚಿಕೊಂಡ ಚಿತ್ರತಂಡ! ಇದೇ ಜುಲೈ 3ರಂದು ಕೃತ್ವಿಕ್ ನಿರ್ದೇಶನದ ಲವ್ ಸೀಸನ್ಸ್ ಚಿತ್ರ ರಾಜ್ಯಾದ್ಯಂತ ತೆರೆಕಾಣಲಿದೆ. ಬಿಡುಗಡೆಗಾಗಿ ತಯಾರಾಗುತ್ತಿರುವ ಚಿತ್ರತಂಡವೀಗ ಬಿಡುಗಡೆಗೊಂಡಿರುವ ಮೂರು ಹಾಡುಗಳಿಗೆ ಕೇಳುಗರ ಕಡೆಯಿಂದ ಸಿಗುತ್ತಿರೋ ಭರಪೂರ ಪ್ರತಿಕ್ರಿಯೆ ಕಂಡು ಖುಷಿಗೊಂಡಿದೆ. ಈ ಸಂಬಂಧವಾಗಿ ಪತ್ರಿಕಾಗೋಷ್ಠಿಯ ಮೂಲಕ ಹಾಡುಗಳ ಗೆಲುವಿನ ಸಿಹಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಸಂಗೀತ ನಿರ್ದೇಶಕರು, ಗಾಯಕ, ಗಾಯಕಿಯರು ಹಾಗೂ ಸಾಹಿತ್ಯ ಬರೆದವರ ಮೂಲಕವೇ ಈ ಗೆಲುವನ್ನು ಚಿತ್ರತಂಡ ಸಂಭ್ರಮಿಸಿದೆ. ಈ ಪ್ರತಿಕಾಗೋಷ್ಠಿಯಲ್ಲಿ ನಿರ್ಮಾಪಕರಾದ ಎನ್.ಆರ್ ಮಂಜುನಾಥ್ (ನೀಲೇರಿ), ನಿರ್ದೇಶಕ ಕೃತ್ವಿಕ್, ಹಿರಿಯ ಗೀತಸಾಹಿತಿ ....
*"ಕನಕರಾಜ" ಚಿತ್ರದ ಮೊದಲ ಹಾಡಿಗೆ ಕಲಾಭಿಮಾನಿಗಳು ಫಿದಾ.* *ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದೆ ಅನೂಪ್ ರೇವಣ್ಣ ಅಭಿನಯದ ಈ ಚಿತ್ರ* . ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ಅವರು ನಿರ್ಮಿಸಿರುವ, ಡಾ||ವಿ.ನಾಗೇಂದ್ರಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಸಂಗೀತ ಸಂಯೋಜನೆಯನ್ನೂ ಮಾಡಿರುವ, ಆರ್ ರವೀಂದ್ರ ನಿರ್ದೇಶಿಸಿರುವ ಹಾಗೂ ಎಚ್ ಎಂ ರೇವಣ್ಣ ಅವರ ಪುತ್ರ ಅನೂಪ್ ರೇವಣ್ಣ ನಾಯಕನಾಗಿ ನಟಿಸಿರುವ ‘ಕನಕರಾಜ’ ಚಿತ್ರದ ಮೊದಲ ಹಾಡು ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನೆರವೇರಿತು. ....
*"ನಾಗುಗೆ ವಧು ಬೇಕಾಗಿದೆ". ಹಾಡುಗಳು ಹಾಗೂ ಟ್ರೇಲರ್ ಚೆನ್ನಾಗಿದೆ* . ಪ್ರಸ್ತುತ ಹಳ್ಳಿಯಲ್ಲಾಗಲಿ ಅಥವಾ ನಗರಪ್ರದೇಶಗಳಲ್ಲಾಗಲಿ ಬಹುತೇಕ ಗಂಡು ಮಕ್ಕಳಿಗೆ ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಇದಕ್ಕೆ ಕಾರಣಗಳು ಹಲವಾರು. ಇಂತಹ ಪ್ರಸ್ತುತ ಪರಿಸ್ಥಿತಿಯನ್ನಿಟ್ಟುಕೊಂಡು ನಿರ್ದೇಶಕ ಆರ್ ಕೆ "ನಾಗೂಗೆ ವಧು ಬೇಕಾಗಿದೆ" ಎನ್ನುವ ಸಿನಿಮಾ ಮಾಡಿದ್ದಾರೆ. ಆರ್ ಕೆ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರ ಶ್ರೀಗುರು ರಾಘವೇಂದ್ರ ಕನ್ನಡ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿದೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಅನಾವರಣ, ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಕರ್ನಾಟಕ ಮಹಿಳಾ ಆಯೋಗದ ....