Amrutanjana.Short Film News

Tuesday, January 13, 2026

  *ಅಮೃತಾಂಜನ್  ಶಾರ್ಟ್ ಮೂವಿ ಈಗ ಬಿಗ್ ಮೂವಿ*   ಅಮೃತಾಂಜನ್ ಚಾಲೆಂಜಸ್ ಬಗ್ಗೆ ಡೈರೆಕ್ಟರ್ ಟಾಕ್   ಅಮೃತಾಂಜನ್ ಶಾರ್ಟ್ ಮೂವಿ ಎಲ್ಲರಿಗೂ ನೆನಪಿದ್ದೆ ಇದೆ. ನಕ್ಕು ನಕ್ಕು ಖುಷಿಯಾಗಿದ್ದರು. ಇದೀಗ ಅದೇ ತಂಡ ಸಿನಿಮಾವೊಂದನ್ನ ಮಾಡಿದೆ. ನಿರ್ದೇಶಕ ಜ್ಯೋತಿ ರಾವ್ ಮೋಹಿತ್ ಅನುಭವವನ್ನ ಹಂಚಿಕೊಂಡಿದ್ದಾರೆ.   * ಅಮೃತಾಂಜನ್ ಹೆಸರಿನಲ್ಲೇ ಮೂವಿ ಮಾಡೋದಕ್ಕೆ ಕಾರಣ..?   ಅಮೃತಾಂಜನ್ ಶಾರ್ಟ್ ಮೂವಿಗೂ ಅಮೃತಾಂಜನ್ ಸಿನಿಮಾಗೂ ಬಹಳ ವ್ಯತ್ಯಾಸವಿದೆ. ನಾನು ಇದಕ್ಕೂ ಮೊದಲು ಸೋಡಾಬುಡ್ಡಿ ಎಂಬ ಸಿನಿಮಾ ಮಾಡಿದ್ದೆ ಅದು ಸೋತು ಹೋಯ್ತು. ಆಮೇಲೆ ಕೆಲಸ ಇಲ್ಲದೆ ಇದ್ದಾಗ ಒಂದು ಶಾರ್ಟ್ ಮೂವಿ ಮಾಡಿದ್ದೆ, ಅದೇ ಅಮೃತಾಂಜನ್. ಇತಿಹಾಸದ ಥರನೇ ಆಗೋಯ್ತು. ಆಮೇಲೆ ಏನಾದ್ರು ....

Read More...

Bayakegalu Beruridaga,News

Tuesday, January 13, 2026

  ನಮ್ಮ ಸಮಾಜದಲ್ಲಿ ವಿವಾಹೇತರ ಸಂಬಂಧಗಳು ಹೆಚ್ಚುತ್ತಿರುವುದು ಚಿಂತನೀಯ ವಿಷಯವಾಗಿದೆ. ಇದರ ಹಿಂದೆ ಅನೇಕ ಸಾಮಾಜಿಕ-ಆರ್ಥಿಕ ಕಾರಣಗಳಿರಬಹುದು. ಕೆಲಸದ ಒತ್ತಡ, ಪತಿ-ಪತ್ನಿಯರು ಒಬ್ಬರಿಗೊಬ್ಬರು ಸಮರ್ಪಿಸುವ ಸಮಯದ ಕೊರತೆ, ಸಂವಾದದ ಇಲ್ಲವಾಗುವಿಕೆ ಮತ್ತು ದೀರ್ಘಕಾಲೀನ ವಿವಾಹದಲ್ಲಿ ಭಾವನಾತ್ಮಕ ಅಂತರ ಬೆಳೆಯುವುದು ಇವುಗಳಲ್ಲಿ ಮುಖ್ಯವಾದವು. ನಿಜ, ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳೊಂದಿಗೆ ಕಳೆಯುವ ಸಮಯ ಕುಟುಂಬದೊಂದಿಗೆ ಕಳೆಯುವ ಸಮಯಕ್ಕಿಂತ ಹೆಚ್ಚಾಗುತ್ತಿರುವುದು ಒಂದು ಪ್ರಮುಖ ಅಂಶವಾಗಿದೆ. ಆದರೆ, ಮೂಲ ಸಮಸ್ಯೆ ಸಮಯದ ಕೊರತೆ ಮಾತ್ರವಲ್ಲ, ಗುಣಮಟ್ಟದ ಸಮಯ ಮತ್ತು ಆತ್ಮೀಯ ಸಂವಾದದ ಕೊರತೆಯೂ ಹೌದು.   ಒಂದು ಆರೋಗ್ಯಕರ ಸಂಬಂಧಕ್ಕೆ ಪ್ರೇಮ, ನಂಬಿಕೆ, ಜವಾಬ್ದಾರಿ, ಸಂವಾದ ....

Read More...

Ram Rahim.News

Thursday, January 08, 2026

  *“ರಾಮ್ ರಹೀಮ್” ಚಿತ್ರದ ಶೋ ರೀಲ್ ಬಿಡುಗಡೆ ಮಾಡಿದ ನಮ್ ಋಷಿ* .   "ಒಳಿತು ಮಾಡು ಮನುಸ. ನೀ ಇರೋದೆ ಮೂರು ದಿವಸ ಎಂಬ" ಹಾಡನ್ನು ಬರೆಯುವ ಮೂಲಕ‌ ವಿಶ್ವದಾದ್ಯಂತ ಇರುವ ಕನ್ನಡಿಗರ ಮನ ಗೆದ್ದಿರುವ ನಮ್ ಋಷಿ, ಈಗ “ರಾಮ್ ರಹೀಮ್ " ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ.  ಫೆಬ್ರವರಿಯಲ್ಲಿ ತೆರೆಗೆ ತರಲು ಸಿದ್ದತೆ ನಡೆಸುತ್ತಿದ್ದಾರೆ. ಅದಕ್ಕೆ ಪೂರ್ವಭಾವಿಯಾಗಿ ಚಿತ್ರದ ಶೋ‌ ರೀಲ್ ಬಿಡುಗಡೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನಮ್ ಋಷಿ ಮಾತನಾಡಿದರು.   ಶೋ ರೀಲ್ ನಲ್ಲಿ "ಯಾರೂ ಸಿನಿಮಾ ನೋಡಬೇಡಿ" ಎಂದು ಹೇಳಿದ್ದೇನೆ. ಅದಕ್ಕೆ ಕಾರಣವೂ ಇದೆ. ಇದು ಯಾವುದೇ ಗಿಮಿಕ್ ಅಲ್ಲ. ಅದಕ್ಕೆ ಕಾರಣವನ್ನು ಬಿಡುಗಡೆಯ ದಿನ ....

Read More...

MCL Season 1.News

Wednesday, January 07, 2026

  *ಸ್ಯಾಂಡಲ್ ವುಡ್ ಗಣ್ಯರಿಂದ "ಮಹಾರಾಣಿ ಕ್ರಿಕೆಟ್ ಲೀಗ್ ಸೀಸನ್-1 MCL"  ಸೆಲೆಬ್ರಿಟಿ ಮಹಿಳಾ ಕ್ರಿಕೆಟ್ ಟೂರ್ನಮೆಂಟ್‌ನ ಜೆರ್ಸಿ ಹಾಗೂ ಟ್ರೋಫಿ ಅನಾವರಣ* .   ನಿರ್ಮಾಪಕ ಮಾಧವಾನಂದ ಅವರ ಕನ್ನಡ ಓಟಿಟಿ ಅರ್ಪಿಸುವ "ಮಹಾರಾಣಿ ಕ್ರಿಕೆಟ್ ಲೀಗ್ ಸೀಸನ್-1 MCL" ಸೆಲೆಬ್ರಿಟಿ ಮಹಿಳಾ ಕ್ರಿಕೆಟ್ ಟೂರ್ನಮೆಂಟ್‌ನ ಅಧಿಕೃತ ಜೆರ್ಸಿ, ಟ್ರೋಫಿ ಅನಾವರಣ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ ನಗರದ ದಿ ಸೋಡಾ ಫ್ಯಾಕ್ಟರಿಯಲ್ಲಿ ಅದ್ದೂರಿಯಾಗಿ ನೆರವೇರಿತು.    ಸಾ ರಾ ಗೋವಿಂದು, ಬಿ ಆರ್ ಲಕ್ಷ್ಮಣರಾವ್, ಜೋಗಿ, ಭರಮಣ್ಣ ಉಪ್ಪಾರ್ (ಉಪ್ಪಾರ ಅಭಿವೃದ್ಧಿ ನಿಗಮ ಅಧ್ಯಕ್ಷರು ಕರ್ನಾಟಕ ಸರಕಾರ), ತಾರಾ ಅನುರಾಧ, ಸುಂದರರಾಜ್, ಎನ್ ಎಂ ಸುರೇಶ್, ಪ್ರವೀಣ್ ಕುಮಾರ್, ಭಾ.ಮ.ಹರೀಶ್, ವಿಕ್ರಮ್ ....

Read More...

Kunigal Utsava 2026.News

Sunday, January 11, 2026

  ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ !    * 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ  ನಡೆದ ಬೃಹತ್ ತಾರಾಮೇಳ !         ಕುಣಿಗಲ್ ನಗರದ ಇತಿಹಾಸದಲ್ಲೇ ಮೊಟ್ಡ ಮೊದಲ ಬಾರಿಗೆ ಬಿ.ಕೆ.ಬಿ.ಎಂ.ಎಸ್. ಮೈದಾನದಲ್ಲಿ ನೆರೆದಿದ್ದ 35 ಸಾವಿರ ಜನರ ಸಮ್ಮುಖದಲ್ಲಿ ’ಕುಣಿಗಲ್ ಉತ್ಸವ’ದ  ಕೊನೇ ದಿನದ ಕಾರ್ಯಕ್ರಮ ನಡೆಯಿತು. ಸಿನಿಮಾ ಸೆಟ್ ವೈಭವವನ್ನೇ ಮೀರಿಸುವಂತೆ ಹಾಕಲಾಗಿದ್ದ ಬೃಹತ್ ಸೆಟ್ ನಲ್ಲಿ ಶಾಸಕ‌ ಡಾ. ರಂಗನಾಥ್ ಅವರ ನೇತೃತ್ವದಲ್ಲಿ ಈ ವರ್ಣರಂಜಿತ ಸಮಾರಂಭ ನಡೆಯಿತು. 3 ದಿನಗಳ ಕಾಲ‌ ನಡೆದ ಈ ಅದ್ದೂರಿ ಉತ್ಸವದ ಕೊನೆಯ ದಿನದ ಸಮಾರಂಭ ಕಿಚ್ಚ ಸುದೀಪ್, ಹಿರಿಯನಟಿ ಮಾಲಾಶ್ರೀ, ಅನು ಪ್ರಭಾಕರ್, ನೆನಪಿರಲಿ ಪ್ರೇಮ್, ಡಾಲಿ ಧನಂಜಯ್, ಜೈದ್ ಖಾನ್, ಆರಾಧನಾ ....

Read More...

Dear Husband.Film News

Sunday, January 11, 2026

  *’ಡಿಯರ್ ಹಸ್ಬೆಂಡ್’ ಟೈಟಲ್ ಬಿಡುಗಡೆ*   *ಹೊರಬಂತು ‘ಡಿಯರ್ ಹಸ್ಬೆಂಡ್’ ಟೈಟಲ್ ಟೀಸರ್*   *ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದ ಹೊಸಚಿತ್ರಕ್ಕೆ ಟೈಟಲ್ ಫಿಕ್ಸ್!*   *ಹೊಸಚಿತ್ರಕ್ಕೆ ಕಿಚ್ಚ ಸುದೀಪ್ ಸಾಥ್*   *ಸೂರಜ್-ಶರಣ್ಯಾ-ಪ್ರವೀಣ್ ಹೊಸ ರೊಮ್ಯಾಂಟಿಕ್ ಕ್ರೈಂ-ಥ್ರಿಲ್ಲರ್ ಕಹಾನಿ*   ಬೆಂಗಳೂರು, ಜ. 11: ‘ಜಿ9 ಕಮ್ಯುನಿಕೇಶನ್ ಅ್ಯಂಡ್ ಮೀಡಿಯಾ’ ಹಾಗೂ ‘ನಿರಂತರ ಪ್ರೊಡಕ್ಷನ್ಸ್’ ಸಂಸ್ಥೆಯ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ, ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮತ್ತು ಟೈಟಲ್ ಟೀಸರ್ ಬಿಡುಗಡೆ ಸಮಾರಂಭ ಬೆಂಗಳೂರಿನ ‘ಫಿನಿಕ್ಸ್ ಮಾಲ್ ಆಫ್ ಏಷ್ಯಾ’ದಲ್ಲಿ ಅದ್ಧೂರಿಯಾಗಿ ....

Read More...

Bharathi Teacher.News

Monday, January 12, 2026

  *ಕೇವಲ 50 ರೂ.ನಿಂದ ಭಾರತಿ ಟೀಚರ್ ಏಳನೇ ತರಗತಿ ಚಿತ್ರ ವೀಕ್ಷಿಸಬಹುದು*           *’ಭಾರತಿ ಟೀಚರ್ ಏಳನೇ ತರಗತಿ’* ಚಿತ್ರವನ್ನು ಕೇವಲ ಐವತ್ತು ರೂಪಾಯಿ ಟಿಕೆಟ್ ದರದಲ್ಲಿ ಸಿನಿಮಾ ನೋಡಬಹುದೆಂದು *ನಿರ್ಮಾಪಕ ರಾಘವೇಂದ್ರ ರೆಡ್ಡಿ* ಸಂಕ್ರಾಂತಿ ಹಬ್ಬಕ್ಕೆ ಉಡುಗೊರೆ ಅಂತ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಘೋಷಣೆ ಮಾಡಿದ್ದಾರೆ. ಇದು ಕರ್ನಾಟಕದಲ್ಲಿರುವ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಮಾತ್ರ ಅನ್ವಯವಾಗುತ್ತದೆ.         ಸಿರಗುಪ್ಪ ಮೂಲದ ಉದ್ಯಮಿ ರಾಘವೇಂದ್ರ ರೆಡ್ಡಿ ಅವರು ಪೂಜ್ಯಾಯ ಫಿಲಂಸ್ ಅಡಿಯಲ್ಲಿ ಬಂಡವಾಳ ಹೂಡಿದ್ದಾರೆ. ಗುರುರಾಜ್ ರೆಡ್ಡಿ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ....

Read More...

Gururaj Kulkarni Dir.News

Thursday, January 08, 2026

  *ಹೊಸಚಿತ್ರಕ್ಕೆ ಆ್ಯಕ್ಷನ್ -ಕಟ್ ಹೇಳಲು ಗುರುರಾಜ ಕುಲಕರ್ಣಿ (ನಾಡಗೌಡ) ರೆಡಿ*   *’ನಿರಂತರ ಪ್ರೊಡಕ್ಷನ್ಸ್’ ಮತ್ತು ‘ಜಿ9 ಕಮ್ಯುನಿಕೇಶನ್ ಅ್ಯಂಡ್ ಮೀಡಿಯಾ’ ಸಹಯೋಗದಲ್ಲಿ ಬಿಗ್ ಬಜೆಟ್ ಚಿತ್ರ*   *ಜ. 11ಕ್ಕೆ ಕಿಚ್ಚ ಸುದೀಪ್ ಅವರಿಂದ ಹೊಸಚಿತ್ರದ ಶೀರ್ಷಿಕೆ ಅನಾವರಣ*       ಬೆಂಗಳೂರು, ಜ. 7: ಕನ್ನಡ ಚಿತ್ರರಂಗದಲ್ಲಿ ‘ಲಾಸ್ಟ್ ಬಸ್’,  ‘ಅಮೃತ್ ಅಪಾರ್ಟ್ಮೆಂಟ್’, ‘ದಿ ಜಡ್ಜ್ ಮೆಂಟ್’ ಮೊದಲಾದ ಸದಭಿರುಚಿ ಸಿನಿಮಾಗಳ ಮೂಲಕ ನಿರ್ಮಾಪಕ ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಗುರುರಾಜ ಕುಲಕರ್ಣಿ (ನಾಡಗೌಡ) ಈ ಬಾರಿ ಮತ್ತೊಂದು ವಿಭಿನ್ನ ಕಥೆಯನ್ನು ಪ್ರೇಕ್ಷಕರ ಮುಂದೆ ತರಲು ತೆರೆಮರೆಯಲ್ಲಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ....

Read More...

Devanobba Jaadugaara,News

Saturday, January 03, 2026

  ದೇವನೊಬ್ಬ ಜಾದೂಗಾರ ಟೀಸರ್ ಬಿಡುಗಡೆ, ಹೊಸ ತಂಡಕ್ಕೆ ಶ್ವೇತಾ ಶ್ರೀವಾಸ್ತವ್, ಹುಚ್ಚ ವೆಂಕಟ್, ಸಿಂಪಲ್ ಸುನಿ ಶುಭಾಶಯ         ನಂಬಿಕೆ ಕಳೆದುಕೊಂಡಾಗ ನಮಗೆ ದೇವರ ನೆನಪಾಗುತ್ತದೆ  ದೇವರು ನನ್ನ ಜೀವನದಲ್ಲಿ ಎಷ್ಟೆಲ್ಲ ಆಟ ಆಡಿದನಲ್ಲ ಎನಿಸಬಹುದು. ಆಗೆಲ್ಲ ನಾವು ದೇವನೊಬ್ಬ ಜಾದೂಗಾರ ಎಂದುಕೊಳ್ಳುತ್ತೇವೆ. ಈಗ ಖಟ್ವಾಂಗ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಇದೇ ಹೆಸರನ್ನಿಟ್ಟು ಸಿನಿಮಾ ಒಂದು ಬರುತ್ತಿದೆ. ಸೌದಿ ಅರೇಬಿಯಾದಲ್ಲಿ ಉದ್ಯಮಿಯಾಗಿರುವ ಬಾಲಕೃಷ್ಣ ಶೆಟ್ಟಿ ಈ ಚಿತ್ರದ ನಿರ್ಮಾಣ ಮಾಡಿದ್ದಾರೆ. ದೊಡ್ಡ ತಾರಾಬಳಗವಿರೋ ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನ ಉತ್ಸವ ಲೆಗಸಿಯಲ್ಲಿ ಅದ್ದೂರಿಯಾಗಿ ನಡೆಯಿತು. ಕನ್ನಡದ ಹೆಸರಾಂತ ....

Read More...

Amalu.Eride Song.News

Friday, January 02, 2026

  *"ಅಮಲು" ಹಾಡಿನೊಂದಿಗೆ ಹೊಸವರ್ಷವನ್ನು ಸ್ವಾಗತಿಸಿದ ಯೋಗರಾಜ್ ಭಟ್* .       *ಶರಣ್ ಗಾಯನಕ್ಕೆ ಫಿದಾ ಆದ ಅಭಿಮಾನಿಗಳು* .              ನಿರ್ದೇಶನದ ಜೊತೆಗೆ ಯೋಗರಾಜ್ ಭಟ್ ಗೀತರಚನೆಕಾರರಾಗಿಯೂ ಜನಪ್ರಿಯರು. ಈವೆರಗೂ ಸಾಕಷ್ಟು ಸೂಪರ್ ಹಿಟ್ ಚಿತ್ರಗೀತೆಗಳನ್ನು ರಚಿಸಿ ಅವರು ಕನ್ನಡಿಗರ ಮನೆ ಮಾತಾಗಿದ್ದಾರೆ. ಪ್ರಸ್ತುತ "ಅಮಲು" ಎಂಬ ಹಾಡನ್ನು ಬರೆಯುವ ಮೂಲಕ ಯೋಗರಾಜ್ ಭಟ್ ಹೊಸವರ್ಷವನ್ನು ಸ್ವಾಗತಿಸಿದ್ದಾರೆ. ನಟ ಶರಣ್ ಈ ಹಾಡನ್ನು ಸುಮಧುರವಾಗಿ ಹಾಡಿದ್ದಾರೆ. ಚೇತನ್ - ಡ್ಯಾವಿ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಮಹದೇವಪ್ಪ ಆರ್ ಕನಕಪುರ ನಿರ್ಮಾಣ ಮಾಡಿದ್ದಾರೆ. ಪಂಚರಂಗಿ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಆಲ್ಬಂ ಹಾಡು ಅಧಿಕ ....

Read More...

Vikalpa.Film News

Friday, January 02, 2026

        *ಹೊರಬಂತು ʼವಿಕಲ್ಪʼ ಟೀಸರ್‌*     *’ವಿಕಲ್ಪʼ; ವಾಸ್ತವ ಮತ್ತು ಭ್ರಮೆಯ ನಡುವಿನ ಹೊಸ ʼಚಿತ್ರʼಣ*     *’ವಿಕಲ್ಪʼ ಮೂಲಕ ನೋಡುಗರ ಮನಮುಟ್ಟುವ ʼಸಂಕಲ್ಪʼ*     *ಸುಪ್ತ ಮನಸ್ಸಿನ ಭಾವನೆಗೆ ಕನ್ನಡಿ ಹಿಡಿಯುವ ಪ್ರಯತ್ನ...*     ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಸೈಕಾಲಜಿಕಲ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ ʼವಿಕಲ್ಪʼ ಚಿತ್ರ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈಗಾಗಲೇ ʼವಿಕಲ್ಪʼ ಚಿತ್ರದ ಬಹುತೇಕ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಸದ್ಯ ಚಿತ್ರವನ್ನು ಸೆನ್ಸಾರ್‌ ಮುಂದೆ ತಂದಿದೆ. ಇದೇ ವೇಳೆ ನಿಧಾನವಾಗಿ ʼವಿಕಲ್ಪʼ ಚಿತ್ರದ ಪ್ರಚಾರ ಕಾರ್ಯಗಳಿಗೆ ....

Read More...

Koragajja.Film News

Wednesday, December 31, 2025

*ಹೊಸವರ್ಷದಲ್ಲಿ "ಕೊರಗಜ್ಜ" ಸಿನಿಮಾದ ಹಾಡುಗಳ ಪ್ರೀಮಿಯರ್. ರೀಲ್ಸ್ ಕಾಂಟೆಸ್ಟ್ ಗೆ  ಕೋಟಿ ರುಪಾಯಿಯಷ್ಟು ಬಹುಮಾನ ಘೋಷಣೆ*   ಇತ್ತೀಚೆಗೆ ಬಿಡುಗಡೆಗೊಂಡಿದ್ದ  ಸುಧೀರ್ ಅತ್ತಾವರ್ ರವರ 'ಕೊರಗಜ್ಜ’ ಸಿನಿಮಾದ ಹಾಡುಗಳನ್ನು  ಹೊಟೆಲ್ ಹಾಲಿಡೇ ಇನ್ ನಲ್ಲಿ‌‌ ನಡೆದ  ವರ್ಣ ರಂಜಿತ ಸಮಾರಂಭದಲ್ಲಿ ಬಿಗ್  ಎಫ್ ಎಮ್  92.7 ಮತ್ತು ಸುಮಾರು ಮುನ್ನೂರಕ್ಕೂ ಹೆಚ್ಚಿನ ಆಡಿಯೋ ಪ್ಲಾಟ್ ಫಾರ್ಮ್ ಗಳಲ್ಲಿ ಹೊಸವರ್ಷಾರಂಭದ ವರ್ಣರಂಜಿತ ಕಾರ್ಯಕ್ರಮದ ನಡುವೆ ನೆರೆದ ಗಣ್ಯರ ಮತ್ತು ಪತ್ರಕರ್ತರ ಸಮ್ಮುಖದಲ್ಲ "ಸಾಂಗ್ಸ್ ಪ್ರೀಮಿಯರ್" ಎನ್ನುವ ವಿನೂತನ ಕಾರ್ಯಕ್ರಮದ ಮುಖಾಂತರ  ಹರಿಬಿಡಲಾಯಿತು.    ದೇಶದ ಮೊದಲ ಪಾಪ್ ತಾರೆ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ....

Read More...

Father.Film News

Tuesday, December 30, 2025

  *ಅಖಾಡಕ್ಕೆ ಚಂದ್ರು ರೆಡಿ*    *"ಫಾದರ್" ಎಂಬ ಯೂತ್ಸ್ ಹಾರ್ಟ್‌ ಟಚಿಂಗ್‌ ಸಿನಿಮಾ*   ನಿರ್ದೇಶಕ ಆರ್. ಚಂದ್ರು ಅವರ ಮೇಲಿನ ಪ್ರೀತಿಗೆ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ಧರಾಮಯ್ಯ ನವರು ಆರ್.ಸಿ ಸ್ಟುಡಿಯೋಸ್ ಗೆ ಚಾಲನೆ ಕೊಟ್ಟು, "ಫಾದರ್‌" ಚಿತ್ರ ಅನಾವರಣ ಮಾಡಿಕೊಟ್ಟದ್ದು ಎಲ್ಲರಿಗೂ ಗೊತ್ತೇ ಇದೆ.   ಆರ್‌ ಸಿ ಸ್ಟುಡಿಯೋಸ್‌ ನ ’ಫಾದರ್’ ಚಿತ್ರ ಎಲ್ಲಾ ಕೆಲಸಗಳನ್ನು ಪೂರೈಸಿ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಇತ್ತೀಚೆಗೆ ನಗರದ 5 ಸ್ಟಾರ್‌ ಹೋಟೆಲ್‌ ನಲ್ಲಿ ’ಫಾದರ್’ ಸಿನಿಮಾದ ಥೀಮ್ ವಿಡಿಯೋ ಅದ್ಧೂರಿಯಾಗಿ ರಿಲೀಸ್ ಆಯಿತು. ಇದನ್ನು ಬಿಡುಗಡೆ ಮಾಡಿದ ಮುಖ್ಯ ಅತಿಥಿ, ಚಂದ್ರು ಅವರ ’ಫಾದರ್‌’. ಇದೊಂದು ಅಪರೂಪದ ....

Read More...

Maazar.Film News

Tuesday, December 30, 2025

 

*ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ "ಮಾಜರ್"* .

 

 *ಜನವರಿ 15 ಕ್ಕೆ ತೆರೆಗೆ ಬರಲಿದೆ ಡಾ||ಮುರುಗನಂದನ್ ನಿರ್ಮಾಣದ ಹಾಗೂ ಲೋಕಲ್ ಲೋಕಿ ನಿರ್ದೇಶನದ  ಈ ಚಿತ್ರ* .  

 

 ಸಂಗೀತ ಸಿನಿ ಹೌಸ್ ಲಾಂಛನದಲ್ಲಿ ಡಾ||ಮುರುಗನಂದನ್ ಎಮ್(ಪುಲಿಮುರುಗನ್) ಅವರು ನಿರ್ಮಿಸಿರುವ, ಲೋಕಲ್ ಲೋಕಿ ನಿರ್ದೇಶನದೊಂದಿಗೆ ಪ್ರಮುಖಪಾತ್ರದಲ್ಲೂ ನಟಿಸಿರುವ "ಮಾಜರ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಟ್ರೇಲರ್  ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.                

Read More...

Pyaar.Film News

Tuesday, December 30, 2025

  " *ಪ್ಯಾರ್"  ಒಂದೇ ಮಾತಲಿ* *ಹಾಡು ಹಿಟ್*  *ಖುಷಿ ಹಂಚಿಕೊಂಡ* *ಚಿತ್ರತಂಡ* ...      ಎಸ್.ಎಂ. ಪ್ರೊಡಕ್ಷನ್ಸ್ ಲಾಂಛನದಲ್ಲಿ  ಹೆಚ್. ಎಸ್. ನಾಗಶ್ರೀ ಅವರು ನಿರ್ಮಿಸಿರುವ ನೂತನ ಚಿತ್ರ ಪ್ಯಾರ್. ಈ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ನಾಯಕಿಯ ತಂದೆಯಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರಿಶ್ವಿನ್, ರಾಶಿಕಾ ಶೆಟ್ಟಿ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ಎಸ್. ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಅ್ಯಕ್ಷನ್ ಕಟ್ ಹೇಳಿದ್ದಾರೆ.      ಆ್ಯನ್ ಎಮೋಷನಲ್ ಜರ್ನಿ ಆಫ್ ಲವ್ ಎಂಬ ಅಡಿಬರಹ ಈ ಚಿತ್ರಕ್ಕಿದೆ. ಈಗಾಗಲೇ ರಿಲೀಸಾಗಿ, ಸಂಗೀತ ಪ್ರಿಯರ ಮನ ಗೆದ್ದಿರುವ  *’ಒಂದೇ ಮಾತಲಿ*ಹೇಳೋದಾದರೆ*  ’ ಎಂಬ  ಹಾಡಿನ ಸುಂದರ ....

Read More...

KPOP.Film News

Monday, December 29, 2025

  " ಕೆ ಪಾಪ್ " ಮೂಲಕ ಹೊಸ ಅಲೆ  ಸೃಷ್ಟಿಗೆ ಮುಂದಾದ ಹೊಸ ತಂಡ   ಕೊರಿಯನ್ ಪಾಪ್ ಸಂಸ್ಕೃತಿಯನ್ನು ಬಿಂಬಿಸುವ  "ಕೆ‌-ಪಾಪ್" ಮೂಲಕ ಹೊಸ ತಂಡ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿ ಮಾಡಲು ಮುಂದಾಗಿದೆ.   ಕೆ ಪಾಪ್ ಸಂಸ್ಕೃತಿ ಕರ್ನಾಟಕ, ಭಾರತ ಸೇರಿದಂತೆ ಜಗತ್ತಿನ ವಿವಿದ ದೇಶಗಳಲ್ಲಿ ಕೊರಿಯನ್‌ ಪಾಪ್  ಸಂಸ್ಕೃತಿ ಹೇಗೆಲ್ಲಾ ಪ್ರಭಾವ ಬೀರಿದೆ ಎನ್ನುವುದನ್ನು ತಿಳಿಸುವ ಪ್ರಯತ್ನ ಇದಾಗಿದೆ.ಇಂತಹದೊಂದು ವಿಷಯವನ್ನು ಮುಂದಿಟ್ಡುಕೊಂಡು ನಿರ್ದೇಶಕ ಕೆವಿನ್ ಲೂಕ್ ಮತ್ತವರ ತಂಡ ಹೊಸ ಫ್ಯಾಂಟಸಿ ಕಥೆಯನ್ನು ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಲು ಮುಂದಾಗಿದೆ.    ಶೀರ್ಷಿಕೆ ಅನಾವರಣ ಮಾಡುವ  ಪ್ರೋಮೋ‌ ಬಿಡುಗಡೆ ಮಾಡಿದೆ. ಬಳಿಕ ಚಿತ್ರತಂಡ ಮಾಹಿತಿ ....

Read More...

Laila's Sweet Dream.News

Saturday, December 27, 2025

  *ಸುರಾಮ್ ಮೂವೀಸ್ ನಿರ್ಮಾಣದ ನಾಲ್ಕನೇ ಚಿತ್ರ "LSD"*    *ಯುವಪ್ರತಿಭೆ ಶಕ್ತಿಪ್ರಸಾದ್ ನಿರ್ದೇಶನದ ಈ ಚಿತ್ರದ ಪ್ರಮುಖಪಾತ್ರದಲ್ಲಿ ಚೈತ್ರಾ ಜೆ ಆಚಾರ್ ನಟನೆ* .   ಸುರಾಮ್ ಮೂವೀಸ್ ಲಾಂಛನದಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸುತ್ತಿರುವ  ಹಾಗೂ ಶಕ್ತಿಪ್ರಸಾದ್ ನಿರ್ದೇಶನದಲ್ಲಿ ಚೈತ್ರಾ ಜೆ ಆಚಾರ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ "LSD"(ಲೈಲಾಸ್ ಸ್ವೀಟ್ ಡ್ರೀಮ್) ಚಿತ್ರದ ಟೈಟಲ್ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟೈಟಲ್ ಟೀಸರ್ ಬಹಳ ಕುತೂಹಲ ಮೂಡಿಸಿದೆ. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   "LSD",  ನಮ್ಮ ಸುರಾಮ್ ಮೂವೀಸ್ ನಿರ್ಮಾಣದ ನಾಲ್ಕನೇ ಚಿತ್ರ. "ನಿದ್ರಾದೇವಿ ನೆಕ್ಸ್ಟ್ ಡೋರ್" ನಮ್ಮ ಸಂಸ್ಥೆಯ ಮೊದಲ ....

Read More...

MARK.Film Success Meet

Saturday, December 27, 2025

  *ಕ್ರಿಸ್ಮಸ್ ರೇಸ್‌ನಲ್ಲಿ ಗೆದ್ದ ’ಮಾರ್ಕ್’..ಕಿಚ್ಚನ ಚಿತ್ರದ‌ ಮೊದಲ ವಾರದ ಕಲೆಕ್ಷನ್ ಎಷ್ಟು ಗೊತ್ತಾ?*     *ಕ್ರಿಸ್ಮಸ್ ಬ್ಲಾಕ್ ಬಸ್ಟರ್ ಆಗಿ ಹೊರ ಹೊಮ್ಮಿದ‌ ಮಾರ್ಕ್.. ಮೊದಲ ವಾರಾಂತ್ಯದಲ್ಲಿ ₹35 ಕೋಟಿ ಗಳಿಕೆ ಕಂಡ‌ ಕಿಚ್ಚನ ಸಿನಿಮಾ*   ಕಿಚ್ಚ ಸುದೀಪ್ ನಟನೆಯ ’ಮಾರ್ಕ್’ ಸಿನಿಮಾ ಕ್ರಿಸ್‌ಮಸ್ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಕ್ರಿಸ್ಮಸ್ ಗೆ‌ ಬಿಡುಗಡೆಯಾದ ಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಾರ್ಕ್ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆ‌ ಕಮಾಯಿ ಮಾಡಿದೆ.   ಮಾರ್ಕ್ ಸಿನಿಮಾ ಮೊದಲ ವಾರಾಂತ್ಯದಲ್ಲಿಯೇ‌ 35ಕೋಟಿ ಗಳಿಕೆ ಮಾಡಿದೆ. ವೀಕೆಂಡ್ ನಲ್ಲಿ ಮಾತ್ರವಲ್ಲದೆ ಸೋಮವಾರವೂ ....

Read More...

Surya.Film News

Wednesday, December 24, 2025

  ಉತ್ತರ ಕರ್ನಾಟಕ ಸೊಗಡಿನ "ಸೂರ್ಯ" ಟ್ರೈಲರ್ ಬಿಡುಗಡೆ..       ಉತ್ತರ ಕರ್ನಾಟಕ ಭಾಗದ ಸಾಕಷ್ಟು ನಿರ್ಮಾಪಕ, ನಿರ್ದೇಶಕರು ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅದೇರೀತಿ ಇದೀಗ ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರೂ ತಮ್ಮ ಕೊಡುಗೆ ನೀಡಲು ಅಣಿಯಾಗಿದ್ದಾರೆ.‌ ನಂದಿ ಸಿನಿಮಾಸ್ ಅಡಿಯಲ್ಲಿ ಅವರು "ಸೂರ್ಯ" ಎಂಬ ಮಾಸ್ ಲವ್ ಸ್ಟೋರಿ ಒಳಗೊಂಡ ಚಿತ್ರವನ್ನು ನಿರ್ಮಿಸಿದ್ದು, ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ಜನವರಿ 15 ರಂದು ತೆರೆಗೆ ತರಲಿದ್ದಾರೆ.      ಸ್ಲಂನಲ್ಲಿ ಬೆಳೆದ ಯುವಕನೊಬ್ಬ ತನ್ನ  ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲ ಹೋರಾಟ, ಸಾಹಸ ಮಾಡುತ್ತಾನೆ, ಆತನಿಗೆ ಯಾರೆಲ್ಲ ಸಹಾಯ ಮಾಡುತ್ತಾರೆ ಎಂಬುದನ್ನು ಈ ....

Read More...

Ragini Dwivedi.News

Monday, December 22, 2025

  ಚಿತ್ರರಂಗದಲ್ಲಿ ನಟಿ ರಾಗಿಣಿ ದ್ವಿವೇದಿ ಹದಿನೈದು ವರ್ಷ ಪೂರ್ಣ: ಏಳು ಬೀಳು ನೆನಪಿಸಿಕೊಂಡ ನಟಿ   ರಾಗಿಣಿ ದ್ವಿವೇದಿ ಕನ್ನಡ ಚಿತ್ರರಂಗದ ಪ್ರಮುಖ ನಾಯಕಿಯರಲ್ಲಿ ಒಬ್ಬರು. ತುಪ್ಪದ ಬೆಡಗಿ ಎಂದೇ ಖ್ಯಾತಿ ಪಡೆದವರು. ಜೊತೆಗೆ ಸೋಲು- ಗೆಲುವು, ಏಳು- ಬೀಳು, ನೋವು- ನಲಿವು ,ಅವಮಾನ - ಸನ್ಮಾನ, ಕನ್ನಡದ ಜೊತೆ ಜೊತೆಯಲ್ಲಿ ಪರಭಾಷೆಯಲ್ಲಿ ತಮ್ಮದೇ ಛಾಪು ಮೂಡಿಸಿದ ಪ್ರತಿಭಾನ್ವಿತ ನಟಿ. ಕನ್ನಡ ಚಿತ್ರರಂಗದಲ್ಲಿ 15 ವರ್ಷ ಪೂರ್ಣಗೊಳಿಸಿದ್ದಾರೆ.   ಮಾಡಲಿಂಗ್ ಮಾಡುತ್ತಿದ್ದ ಪಂಜಾಬಿ ಬೆಡಗಿ ರಾಗಿಣಿ ದ್ವಿವೇದಿ " ಹೋಳಿ" ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿ ಕಿಚ್ಚ ಸುದೀಪ್ ನಟನೆಯ " ವೀರ ಮದಕರಿ " ಚಿತ್ರದಿಂದ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದರು. ಬಿಡುಗಡೆಗೆ ....

Read More...
Copyright@2018 Chitralahari | All Rights Reserved. Photo Journalist K.S. Mokshendra,