*ಝೀ ಮ್ಯೂಜಿಕ್ ನಿಂದ* *"ಕೊರಗಜ್ಜ" ಚಿತ್ರದ "ಗುಳಿಗ...ಗುಳಿಗ..."ಹಾಡಿನ ಭೋರ್ಗರೆತ....ಅಬ್ಬರ... ಇಂದಿನಿಂದ!!* ಜೀ಼ ಮ್ಯೂಜಿಕ್ ಇಂದಿನಿಂದ , ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿಯ ಅತ್ಯಂತ ನಿರೀಕ್ಷೆಯ "ಕೊರಗಜ್ಜ" ಚಿತ್ರದಲ್ಲಿ ಮೂಡಿ ಬರುವ ಕರಾವಳಿಯ ಉಗ್ರಭಯಂಕರ,ರಕ್ತ ದಾಹದ ದೈವ "ಗುಳಿಗ" ನ ಕುರಿತಾದ ಹಾಡನ್ನು ಜನಮನ್ನಣೆಯ "ಮರಳಿ ಮರೆಯಾಗಿ..." ಯಂತಹ ಗೀತೆಯ ಸಾಹಿತಿ- ನಿರ್ದೇಶಕ,ಸುಧೀರ್ ಅತ್ತಾವರ್ ರವರೇ ಬರೆದಿರುವ "ಗುಳಿಗ.,.ಗುಳಿಗ...ಗುಳಿಗ...ಗುಳಿಗ...ಗುಳಿಗ...ಗುಳಿಗ...ಘೋರ ಗುಳಿಗಾ...!" ಎನ್ನುವ ರ್ ಯಾಪ್ ಮಿಶ್ರಿತ ಹಾಡು ಇಂದು ಎಲ್ಲೆಡೆ ಭೋರ್ಗರೆಯಲಿದೆ...! ದಕ್ಷಿಣ ಭಾರತದ ಖ್ಯಾತ ಸಂಗೀತಗಾರ ....
ಮಕ್ಕಳ ರಕ್ಷಣೆಗೆ ಪೋಷಕರ 'ರುದ್ರ ಅವತಾರ’ ಪಾತ್ರ ಪರಿಚಯಿಸುವ ಮೋಷನ್ ಪೋಸ್ಟರ್ ಸುಪ್ರೀಂ ಹೀರೋ ಶಶಿಕುಮಾರ್ -ತಾರಾ ಜೋಡಿಯ 26ನೇ ಚಿತ್ರ . ಸವಾದ್ ಮಂಗಳೂರು ನಿರ್ದೇಶನದ ರುದ್ರ ಅವತಾರ ಚಿತ್ರದ ಮೂಲಕ ಹಿರಿಯನಟ ಶಶಿಕುಮಾರ್ ಅವರು ಬಹಳ ದಿನಗಳ ಬಳಿಕ ಚಿತ್ರರಂಗಕ್ಕೆ ಮರಳಿದ್ದಾರೆ, ರುದ್ರ ಅವತಾರ ಚಿತ್ರದಲ್ಲಿ ಅವರು ಒಬ್ಬ ಜವಾಬ್ದಾರಿಯುತ ತಂದೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸವಾದ್ ಮಂಗಳೂರು ಈ ಚಿತ್ರದ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದು, ಪ್ರೇಮ್ ಜಿ ಪ್ರೊಡಕ್ಷನ್ಸ್ ಮೂಲಕ ದಾಂಡೇಲಿಯ ಉದ್ಯಮಿ ಡಾ.ಪ್ರೇಮಾನಂದ್ ವಿ ಗವಸ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ....
*'ಆಂಧ್ರ ಕಿಂಗ್ ತಾಲೂಕ’ ಟ್ರೇಲರ್ ರಿಲೀಸ್..ಸೂಪರ್ ಸ್ಟಾರ್ ಸೂರ್ಯ ಕುಮಾರ್ ಆಗಿ ಉಪೇಂದ್ರ ಮಿಂಚು* *ಬೆಂಗಳೂರಿನಲ್ಲಿ ಆಂಧ್ರ ಕಿಂಗ್ ತಾಲೂಕ ಪ್ರಚಾರ..ಟ್ರೇಲರ್ ಬಿಡುಗಡೆ ಮಾಡಿದ ಚಿತ್ರತಂಡ* ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ನಟಿಸಿರುವ ತೆಲುಗು ಸಿನಿಮಾ ‘ಆಂಧ್ರ ಕಿಂಗ್ ತಾಲೂಕ’ ಟ್ರೈಲರ್ ಬಿಡುಗಡೆ ಆಗಿದೆ. ನಿನ್ನೆ ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಟ್ರೇಲರ್ ರಿಲೀಸ್ ಕಾರ್ಯಕ್ರಮ ನಡೆಯಿತು. ಸಿನಿಮಾನಲ್ಲಿ ತೆಲುಗು ನಟ ರಾಮ್ ಪೋತಿನೇನಿ ಮತ್ತು ಉಪೇಂದ್ರ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಭಾಗ್ಯಶ್ರೀ ಬೋರ್ಸೆ ಸಾಥ್ ಕೊಟ್ಟಿದ್ದಾರೆ. ಉಪೇಂದ್ರ ಮಾತನಾಡಿ, ಎಲ್ಲಾ ಸಿನಿಮಾ ಮಾಡೋದಿಕ್ಕೆ ಒಂದೊಂದು ಕಾರಣ ....
*"Congratulations ಬ್ರದರ್" ತಂಡಕ್ಕೆ ಶುಭ ಹಾರೈಸಿದ ಡಾರ್ಲಿಂಗ್ ಕೃಷ್ಣ* . *ಹೊಸತಂಡದ ಹೊಸಪ್ರಯತ್ನ ನವೆಂಬರ್ 21ಕ್ಕೆ ತೆರೆಗೆ* . ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ "Congratulations ಬ್ರದರ್". ಈಗ ಈ ಜನಪ್ರಿಯ ಡೈಲಾಗ್ ಸಿನಿಮಾ ಶೀರ್ಷಿಕೆಯಾಗಿರುವುದು ಎಲ್ಲರಿಗೂ ತಿಳಿದ ಸಂಗತಿ. ಕಲ್ಲೂರ್ ಸಿನಿಮಾಸ್, ಪೆನ್ ಎನ್ ಪೇಪರ್ ಸ್ಟುಡಿಯೋಸ್ ಹಾಗೂ ಸ್ಕ್ರೀನ್ ಫಸ್ಟ್ ಪ್ರೊಡಕ್ಷನ್ ಲಾಂಛನದಲ್ಲಿ ಪ್ರಶಾಂತ್ ಕಲ್ಲೂರ್ ಅವರು ನಿರ್ಮಿಸಿರುವ, ಪ್ರತಾಪ್ ಗಂಧರ್ವ ನಿರ್ದೇಶನದ, ಹೆಸರಾಂತ ನಿರ್ದೇಶಕ ಹರಿ ಸಂತೋಷ್ ಕಥೆ ಬರೆದು ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಿರುವ ಹಾಗೂ ಯುವ ನಟ ರಕ್ಷಿತ್ ನಾಗ್ ನಾಯಕನಾಗಿ ಹಾಗೂ ಸಂಜನ್ ದಾಸ್ ....
*ಸೆಟ್ಟೇರಿತು ಧ್ರುವ ಸರ್ಜಾ 7ನೇ ಸಿನಿಮಾ.. ಕ್ರಿಮಿನಲ್ ನಲ್ಲಿ ಧ್ರುವಗೆ ರಚಿತಾ ರಾಮ್ ಜೋಡಿ* *ಧ್ರುವ ಸರ್ಜಾ ಹೊಸ ಸಿನಿಮಾ ’ಕ್ರಿಮಿನಲ್’ಗೆ ಮುಹೂರ್ತದ ಸಂಭ್ರಮ..ಆಕ್ಷನ್ ಪ್ರಿನ್ಸ್ ಗೆ ರಚಿತಾ ರಾಮ್ ಜೋಡಿ* *ಸೆಟ್ಟೇರಿತು ಉತ್ತರ ಕರ್ನಾಟಕದ ಕಥೆಯ ’ಕ್ರಿಮಿನಲ್’ಸಿನಿಮಾ..ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಹೊಸ ಚಿತ್ರ* ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹೊಸ ಸಿನಿಮಾ ನಿನ್ನೆ ಅದ್ಧೂರಿಯಾಗಿ ಸೆಟ್ಟೇರಿದೆ. ಬೆಂಗಳೂರಿನ ಬಸವನಗುಡಿಯ ಅನ್ನಪೂರ್ಣ ನವ ಮಂತ್ರಾಲಯ ಮಂದಿರದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಇದು ಧ್ರುವ ಅವರ ಏಳನೇ ಚಿತ್ರವಾಗಿದ್ದು, ನಾಯಕಿಯಾಗಿ ರಚಿತಾ ರಾಮ್ ಸಾಥ್ ಕೊಡುತ್ತಿದ್ದಾರೆ. ಉತ್ತರ ಕರ್ನಾಟಕದ ....
ಸೋಷಿಯಲ್ ಮೀಡಿಯಾ ಕ್ರೈಂ ಸುತ್ತ ಇವನೇ ಶ್ರೀನಿವಾಸ ಚಿತ್ರದ ಫಸ್ಟ್ ಲುಕ್ ಶಿವಣ್ಣ ಬಿಡುಗಡೆ ಇವನೇ ಶ್ರೀನಿವಾಸನಿಗೆ ವಿಷ್ ಮಾಡಿದ ಹ್ಯಾಟ್ರಿಕ್ ಹೀರೋ ಶ್ರೀನಿವಾಸ ಸರಣಿಯಲ್ಲಿ ಹಲವಾರು ಚಲನಚಿತ್ರಗಳು ತೆರೆಕಂಡಿವೆ. ’ಇವನೇ ಶ್ರೀನಿವಾಸ’ ಅದಕ್ಕೆ ಹೊಸ ಸೇರ್ಪಡೆ. ಪ್ರತಿಭೆ, ಆಸಕ್ತಿ ಇದ್ದರೆ ಎಲ್ಲರೂ ಚಿತ್ರ ಮಾಡಬಹುದು ಎನ್ನುವುದಕ್ಕೆ ಈ ಚಿತ್ರವೇ ಸಾಕ್ಷಿ. ಬಿಬಿಎಂಪಿ ಯಲ್ಲಿ ಆಟೋ ಡ್ರೈವರ್ ಅಂದರೆ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ಪ್ರತಾಪ್ ಗೆ ಮೊದಲಿಂದಲೂ ಅಭಿನಯ ಎಂದರೆ ಅತೀವ ಆಸಕ್ತಿ. ಮನೆಯವರೆಲ್ಲರ ಸಹಕಾರದಿಂದ ತೆರೆಮೇಲೆ ನಾಯಕನಾಗಿ ಕಾಣಿಸಿಕೊಳ್ಳಬೇಕೆಂಬ ಆಸೆಯನ್ನು ಈಡೇರಿಸಿಕೊಂಡಿದ್ದಾರೆ. ಇವನೇ ಶ್ರೀನಿವಾಸನಾಗಿ ....
ಸೈಕಲಾಜಿಕಲ್ ಥ್ರಿಲ್ಲರ್ "ಫೆಬ್ರವರಿ 30" ಚಿತ್ರದ ಟೀಸರ್ ಬಿಡುಗಡೆ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರ "ಫೆಬ್ರವರಿ 30". ಮೈಸೂರು ಮೂಲದ ಪ್ರಶಾಂತ್ ಎಂ.ಎಲ್.ಅವರ ನಿರ್ದೇಶನದ ಈ ಚಿತ್ರಕ್ಕೆ ಶಂಕರ ಮೂವೀಸ್ ಇಂಟರ್ ನ್ಯಾಷನಲ್ ಮೂಲಕ ಜೋಸೆಫ್ ಬೇಬಿ ಅವರು ಬಂಡವಾಳ ಹೂಡಿದ್ದಾರೆ. ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಅಭಿಷೇಕ್, ಸಾಹಿತ್ಯಶೆಟ್ಟಿ, ಅಕ್ಷಯ್, ಮನೋಜ್, ಶಿವಕುಮಾರ್ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಪಿ.ಎಂ. ಉನ್ನಿಕೃಷ್ಣನ್ ಅವರ ಛಾಯಾಗ್ರಹಣ, ಲಿಜಿನ್ ಪಂಬೋ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ನಿರ್ದೇಶಕ ಪ್ರಶಾಂತ್ ಮಾತನಾಡುತ್ತ ನಾನು ಐಟಿಯಲ್ಲಿ ವರ್ಕ್ ....
*ಭಾರತಿ ಟೀಚರ್ ಏಳನೇ ತರಗತಿ ಟ್ರೇಲರ್ ಲೋಕಾರ್ಪಣೆ* *ಭಾರತಿ ಟೀಚರ್ ಏಳನೇ ತರಗತಿ* ಚಿತ್ರದ ’ಬಾ ಬಾ ಕನ್ನಡಿಗ’, ’ಎಳೆ ಜೀವ’ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಸಮಾರಂಭವು ಮೊದಲಿಗೆ ಪತ್ರಕರ್ತರ ಸಂವಾದದೊಂದಿಗೆ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕೆಎಸ್ಎಸ್ಎ ಸಂಘದ ಅಧ್ಯಕ್ಷ ಎನ್.ಸಿ.ಪ್ರಕಾಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಆ ನಂತರ ವೀರಲೋಕ ಪ್ರಕಾಶನ ಸಂಸ್ಥೆ ಜಯನಗರದ ಶಾಲಿನಿ ಮೈದಾನದಲ್ಲಿ ನಡೆಸುತ್ತಿದ್ದ ಪುಸ್ತಕ ಸಂತೆಯ ವೇದಿಕೆಯಲ್ಲಿ ಶಿಕ್ಷಣ ಮಂತ್ರಿಗಳಾದ ಮಧುಬಂಗಾರಪ್ಪನವರ ಹಾರೈಕೆಗಳೊಂದಿಗೆ ಲೋಕಾರ್ಪಣೆಗೊಂಡಿತು. ಸಚಿವರು ಆಸಕ್ತಿಯಿಂದ ಕಥೆ ಕೇಳಿ ಶಿಕ್ಷಣದ ಪ್ರಾಮುಖ್ಯತೆ ಬಗ್ಗೆ ....
*ಸನ್NXT ದಲ್ಲಿ ’ಎಕ್ಕ’ ಸ್ಟ್ರೀಮಿಂಗ್ ಆಗುತ್ತಿದೆ* ಜುಲೈ ತಿಂಗಳಲ್ಲಿ ತೆರೆ ಕಂಡಿದ್ದ *ಎಕ್ಕ* ಚಿತ್ರದಲ್ಲಿ ಯುವರಾಜ್ಕುಮಾರ್, ಸಂಜನಾ ಆನಂದ್, ಸಂಪದ ಹುಲಿವಾನ, ಅತುಲ್ ಕುಲಕರ್ಣೀ ಅಭಿನಯಿಸಿದ್ದು ಹಿಟ್ ಆಗಿತ್ತು. ಕೆಆರ್ಜಿ ಸ್ಟುಡಿಯೋಸ್, ಜಯಣ್ಣ ಫಿಲಂಸ್ ಮತ್ತು ಪಿಆರ್ಕೆ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡಿದ್ದು, ರೋಹಿತ್ ಪದಕಿ ಆಕ್ಷನ್ ಕಟ್ ಹೇಳಿದ್ದರು. ಅದರಲ್ಲೂ ಚರಣ್ರಾಜ್ ಸಂಗೀತ ಸಂಯೋಜನೆಯಲ್ಲಿ ’ಬ್ಯಾಂಗಲ್ ಬಂಗಾರಿ’ ಹಾಡು ವೈರಲ್ ಆಗಿ ಸದ್ದು ಮಾಡಿತ್ತು. ಈಗ ಸಿನಿಮಾ ನೋಡದೆ ಇರುವವರಿಗೆ ಸುವರ್ಣಾವಕಾಶ ಸಿಕ್ಕಿದೆ. ದಕ್ಷಿಣ ಭಾರತದ ಪ್ರಮುಖ OTT ಪ್ಲಾಟ್ಫಾರ್ಮ್ ಆಗಿರುವ ಸನ್NXTದಲ್ಲಿ ’ಎಕ್ಕ’ ಸಿನಿಮಾವು ....
*ಅಣ್ಣಾವ್ರ ಹಾಡು ಚಿತ್ರದ ಶೀರ್ಷಿಕೆ* ’ಅಪ್ಪು’ ಚಿತ್ರದಲ್ಲಿ ಡಾ.ರಾಜ್ಕುಮಾರ್ ಹಾಡಿರುವ ’ವಿಧಿ ಎಂಥ ಘೋರ, ಪ್ರೇಮಿಗಳು ದೂರ ದೂರ’ ಸಾಂಗ್ ಹಿಟ್ ಆಗಿತ್ತು. ಈಗ ಅದೇ ಹೆಸರಿನಲ್ಲಿ *ವಿಧಿ* ಎನ್ನುವ ಸಿನಿಮಾವೊಂದು ಬಿಡುಗಡೆ ಹಂತಕ್ಕೆ ಬಂದಿದೆ. ಮೊನ್ನೆಯಷ್ಟೇ ಸಿರಿ ಮ್ಯೂಸಿಕ್ ಹೊರತಂದಿರುವ ಎರಡು ಹಾಡುಗಳ ಲೋಕಾರ್ಪಣೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಮೊಳಕಾಲ್ಮೂರು ಮೂಲದ *ಅನಸೂಯಮ್ಮ ಮತ್ತು ಟಿ.ಆನಂದ ದಂಪತಿಗಳು ಮಗನ ಸಲುವಾಗಿ ಸೆವೆನ್ ಸ್ಟಾರ್ಸ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣ* ಮಾಡಿರುವುದು ಹೊಸ ಅನುಭವ. ’ಚಕ್ರಾದಿಪತಿ’ ನಿರ್ದೇಶನ ಮಾಡಿರುವ *ಮಲಿಯಣ್ಣ.ಹೆಚ್ ರಚಿಸಿ ಆಕ್ಷನ್ ಕಟ್* ....
*ಮಂಗಳೂರಿನಲ್ಲಿ ಭವ್ಯತೆಗೆ* *’ಜ಼ೀ ಮ್ಯೂಸಿಕ್’ ಸಾಕ್ಷಿಯಾಯ್ತು ಕೊರಗಜ್ಜ" ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭ* ವೈಶಿಷ್ಟ್ಯ ಪೂರ್ಣ ಆಡಿಯೋ ಬಿಡುಗಡೆ ಸಮಾರಂಭಕ್ಕೆ ದೇಶಾದ್ಯಂತದ ಪತ್ರಕರ್ತರಿಂದ ಪ್ರಶಂಸೆಗಳ ಸುರಿಮಳೆ: ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಸಿನಿಮಾದ ಆಡಿಯೋ ಹಕ್ಕುಗಳನ್ನು ಜೀ಼ ಮ್ಯೂಸಿಕ್ ತನ್ನದಾಗಿಸಿಕೊಳ್ಳುವ ಮುಖಾಂತರ , ತ್ರಿವಿಕ್ರಮ ಸಾಪಲ್ಯ ನಿರ್ಮಾಣದ ಸಕ್ಸಸ್ ಫಿಲ್ಮ್ಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ಅಡಿಯಲ್ಲಿನ ’ಕೊರಗಜ್ಜ’ ಸಿನಿಮಾ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಇತ್ತೀಚಿನ ವರ್ಷಗಳಲ್ಲಿ ಯಾವುದೇ ಕನ್ನಡ ಸಿನಿಮಾಗಳ ಆಡಿಯೋ ರೈಟ್ಸ್ ಗಳನ್ನು ಕೊಂಡುಕೊಳ್ಳುವಲ್ಲಿ ಹಿಂದೇಟು ....
*ಟಾಕಿಂಗ್ ಸ್ಟಾರ್ ಅಭಿನಯದ "GST" ಟ್ರೇಲರ್ ಗೆ ಆಕ್ಷನ್ ಕಟ್ ಹೇಳಿದ ರಿಯಲ್ ಸ್ಟಾರ್* *ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ಮೊದಲ ನಿರ್ದೇಶನದ ಈ ಚಿತ್ರ ನವೆಂಬರ್ 28 ರಂದು ತೆರೆಗೆ* . ಖ್ಯಾತ ನಟ ಸೃಜನ್ ಲೋಕೇಶ್ ನಟನಾಗಿ, ನಿರ್ಮಾಪಕನಾಗಿ ಜನಪ್ರಿಯ. ಈಗ "GST" ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಾಣ ಮಾಡಿದ್ದಾರೆ. ಹಿರಿಯ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಅರ್ಪಿಸುತ್ತಿದ್ದಾರೆ. ಚಿತ್ರ ಇದೇ ತಿಂಗಳ 28ರಂದು ತೆರೆಗೆ ಬರುತ್ತಿದೆ. ಅದಕ್ಕೆ ಪೂರ್ವಭಾವಿಯಾಗಿ ಟ್ರೇಲರ್ ಬಿಡುಗಡೆಯಾಗಿದೆ. ರಿಯಲ್ ಸ್ಟಾರ್ ಉಪೇಂದ್ರ ಟ್ರೇಲರ್ ತಮ್ಮದೇ ಆದ ....
*ವಿಭಿನ್ನ ಶೀರ್ಷಿಕೆ ರುಧ* ಮಹಿಳಾ ಪ್ರಧಾನ *ರುಧ* ಸಿನಿಮಾದ ಮುಹೂರ್ತ ಸಮಾರಂಭವು ಸಂಜಯ್ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿಯಲ್ಲಿ ನಡೆಯಿತು. ಪ್ರಥಮ ದೃಶ್ಯಕ್ಕೆ ನಟಿ ಅನುಪ್ರಭಾಕರ್ ಮತ್ತು ರಘುಮುಖರ್ಜಿ ಕ್ಲಾಪ್ ಮಾಡಿ ಶುಭ ಹಾರೈಸಿದರು. ಕನಕಪುರ ಮೂಲದ ಉದ್ಯಮಿ *ಪುಟ್ಟರಾಜು ಅವರು ಕೆಪಿಜಿ ವಿಷನ್ಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ* ಹೂಡುತ್ತಿರುವುದು ಮಾಡುತ್ತಿರುವುದು ಹೊಸ ಅನುಭವ. ಹಲವು ನಿರ್ದೇಶಕ ಬಳಿ ಕೆಲಸ ಮಾಡಿ, ’ಐತಲಕ್ಕಡಿ’ ಕಂತುಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿದ್ದ *ಶರತ್ ಶಿಡ್ಲಘಟ್ಟ ಸಿನಿಮಾಕ್ಕೆ ಕಥೆ ಬರೆದು ನಿರ್ದೇಶನ* ಮಾಡುತ್ತಿದ್ದಾರೆ. ಪೇದೆಯಾಗಿ ವರಲಕ್ಷೀ, ....
*ಹೊಸಬರ 1979 ಪೋಸ್ಟರ್ ಬಿಡುಗಡೆ* ಹೊಸ ಪ್ರತಿಭೆಗಳೇ ಸೇರಿಕೊಂಡು ಸಿದ್ದಪಡಿಸಿರುವ *1979* ಚಿತ್ರದ ಪೋಸ್ಟರ್ನ್ನು ’ಆ ದಿನಗಳು’ ಖ್ಯಾತಿಯ ಚೇತನ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಕ್ರೀಡಾಪಟು, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಡಾ.ಬಿ.ಎಂ.ಶ್ರೀನಿವಾಸ್, ಬೀರಮಾನಹಳ್ಳಿ ಇವರು ಅಪ್ಪನ ಸ್ಮರಣಾರ್ಥ ಸಲುವಾಗಿ ಮನಂ ಮೂವೀ ಮೇಕರ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಕಥೆ,ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶನ ಮಾಡಿರುವುದು ಪುಷ್ಪರಾಜ್. ಎಲ್ಲೂ ಕೇಳಿರದ ಕಥೆ ಎಂದು ಇಂಗ್ಲೀಷ್ದಲ್ಲಿ ಅಡಿಬರಹ ಇರಲಿದೆ. ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅಜ್ಜು, ಪ್ರಾಣ್ವಿ, sಸುಜಿತ್, ಅಮೃತ ಇವರುಗಳು ಯೌವ್ವನ ಹಾಗೂ ಮುಪ್ಪಿನವರೆಗೂ ....
*ಸಿಂಪಲ್ ಸುನಿ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್..ಇದೇ 14ರಂದು ’ಗತವೈಭವ’ ರಿಲೀಸ್* *ಸಿಂಪಲ್ ಸುನಿ ಗತವೈಭವಕ್ಕೆ ಕಿಚ್ಚ ಸುದೀಪ್ ಬೆಂಬಲ..ಇದೇ 14ಕ್ಕೆ ದುಷ್ಯಂತ್ ಆಶಿಕಾ ಚಿತ್ರ ರಿಲೀಸ್* *ಗತವೈಭವ ಸೃಷ್ಟಿಸಲು ಹೊರಟ ಸುನಿಗೆ ಕಿಚ್ಚ ಸಾಥ್...ಟ್ರೇಲರ್ ಬಿಡುಗಡೆ ಮಾಡಿ ಹೇಳಿದ್ದೇನು ಅಭಿನಯ ಚಕ್ರವರ್ತಿ?* ನಿರ್ದೇಶಕ ಸಿಂಪಲ್ ಸುನಿ ಅವರ ಸಿನಿಕರಿಯರ್ ನ ವಿಭಿನ್ನ ಚಿತ್ರ ಎನಿಸಿಕೊಂಡಿರುವ ಗತವೈಭವ ತನ್ನ ಕಂಟೆಂಟ್ ಮೂಲಕ ಈಗಾಗಲೇ ನಿರೀಕ್ಷೆ ಹೆಚ್ಚು ಮಾಡಿದೆ. ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಹುಟ್ಟುಹಾಕಿರುವ ಗತವೈಭವಕ್ಕೆ ಕಿಚ್ಚ ಸುದೀಪ್ ಬೆಂಬಲ ಸಿಕ್ಕಿದೆ. ನಿನ್ನೆ ಬೆಂಗಳೂರಿನ ಖಾಸಗಿ ಮಾಲ್ ನಲ್ಲಿ ಗತವೈಭವ ....
*ಇನಿಯನ ಆತ್ಮ ಟ್ರೇಲರ್ ಮತ್ತು ಹಾಡು ಬಿಡುಗಡೆ* ಕೋಲಾರ ಮೂಲದ ಹೊಸ ಪ್ರತಿಭೆಗಳೇ ಸೇರಿಕೊಂಡು ಸಿದ್ದಪಡಿಸಿರುವ *ಇನಿಯನ ಆತ್ಮ* ಚಿತ್ರದ ಟ್ರೇಲರ್ ಮತ್ತು ಹಾಡುಗಳನ್ನು ಉದ್ಯಮಿ ಪುಂಡರೀಕ ಮೂರ್ತಿ ಲೋಕಾರ್ಪಣೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಶ್ರೀ ವಿನಾಯಕ ವೆಂಕಟೇಶ್ವರ ಫಿಲಂಸ್ ಅಡಿಯಲ್ಲಿ *ಬಿ.ಕಲಾವತಿ ನಿರ್ಮಾಣ* ಮಾಡಿದ್ದಾರೆ. *ಕಥೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಹಾಗೂ ನಿರ್ದೇಶನದ ಜವಬ್ದಾರಿಯನ್ನು ನರೇಶ್ ಸಿದ್ದಘಟ್ಟ* ವಹಿಸಿಕೊಂಡಿದ್ದಾರೆ. ನಂತರ ಮಾತನಾಡಿದ ನಿರ್ದೇಶಕರು, ಏಳು ಜನ ಯುವ ತಂಡದವರು ಪ್ರವಾಸಕ್ಕೆಂದು ದೂರದ ಸ್ಥಳಕ್ಕೆ ಹೋಗುತ್ತಾರೆ. ಅಲ್ಲಿ ಇವರನ್ನೆ ಗುರಿಯಾಗಿಸಿಕೊಂಡು ಒಂದಷ್ಟು ಘಟನೆಗಳು ನಡೆಯುವುದು ....
ಬೆಂಗಳೂರಿಗೆ ಜೈ ಚಿತ್ರಕ್ಕೆ ಜೈ ಎನ್ನಲು ಬಂದ ಬಾಲಿವುಡ್ ನ ಹಿರಿಯ ನಟ ಸುನೀಲ್ ಶೆಟ್ಟಿ ಜೈ ಚಿತ್ರದ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ಸುನೀಲ್ ಶೆಟ್ಟಿಗೆ ಭರ್ಜರಿ ಸ್ವಾಗತ. ಬೆಂಗಳೂರಿನ ಮಂತ್ರಿ ಮಾಲ್ ಗೆ ಜೈ ಚಿತ್ರದ ಪ್ರಚಾರಕ್ಕಾಗಿ ಬಂದ ಬಾಲಿವುಡ್ ನಟ ಸುನೀಲ್ ಶೆಟ್ಟಿಗೆ ಮಂಗಳೂರಿನ ಸಂಸ್ಕೃತಿಯ ಮಂಗಳ ವಾದ್ಯಗಳೊಂದಿಗೆ ಸ್ವಾಗತಿಸಿದ ಚಿತ್ರ ತಂಡ. ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಹಾಗೂ ಅಭಿನಯಿಸಿರುವ ಜೈ ಚಿತ್ರ ಬಿಡುಗಡೆಗೆ ಸಿದ್ಧವಾಗುತ್ತಿದ್ದಂತೆ ಅದರ ಪ್ರಚಾರ ಕಾರ್ಯ ಕೂಡ ಭರದಿಂದ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಕೆಲವು ಸೆಲೆಬ್ರಿಟಿಗಳ ಜೋಡಿಗಳನ್ನು ಕರೆಸಿ ಪ್ರೇಮ ಗೀತೆಯನ್ನು ಬಿಡುಗಡೆಗೊಳಿಸಿದ್ದರು. ....
*ಲವ್ ಕೇಸ್ ಚಿತ್ರದ ಮುಹೂರ್ತ*
ಶ್ರೀ ಬಂಡೆ ಮಹಾಕಾಳಿಸನ್ನಿಧಿಯಲ್ಲಿ ಲವ್ ಕೇಸ್ ಚಿತ್ರಕ್ಕೆ ಚಾಲನೆ
ಎಂ.ಬಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ಮೋಹನ್ ಬಾಬು ನಿರ್ಮಾಣದಲ್ಲಿ ಜೈಶ್ ನಿರ್ದೇಶನದಲ್ಲಿ ಲವ್ ಕೇಸ್ ಸಿನಿಮಾದ ಮುಹೂರ್ತ ಇಂದು ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿದೆ.
ಶ್ರೀನಗರ ಕಿಟ್ಟಿ, ಟಗರು ಪಲ್ಯ ನಾಗಭೂಷಣ್ , ಸಾಯಿಕುಮಾರ್, ಸುಧಾರಾಣಿ, ಪ್ರಮೋದ್ ಶೆಟ್ಟಿ, ಜೀ ಕನ್ನಡ ಮಹಾನಟಿ ಖ್ಯಾತಿಯ ವಂಶಿ , ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖ್ಯಾತಿಯ ರಂಜನ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ತಿದ್ದಾರೆ.
*ಕೊರಗಜ್ಜ ಚಿತ್ರದ ಕ್ರೇಜ್ ಗೆ ಮಾನ್ಯ ಗೃಹ ಸಚಿವರಿಂದ ಶ್ಲಾಘನೆ: ಚಿತ್ರದ ಯಶಸ್ಸಿಗೆ ಶುಭಹಾರೈಸಿದ ಡಾII ಜಿ ಪರಮೇಶ್ವರ್* *ರಾಷ್ಟ್ರೀಯ ಮಟ್ಟದ ಪತ್ರಕರ್ತರ ಸಮ್ಮುಖದಲ್ಲಿ ನಡೆಯಲಿದೆಯೇ ಟ್ರೇಲರ್ ಲಾಂಚ್?* `` ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ, ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಸಿನಿಮಾ ಹುಟ್ಟಿಸುತ್ತಿರುವ ಕ್ರೇಜ್ ಅಷ್ಟಿಷ್ಟಲ್ಲ. ಚಿತ್ರದ ಧನಾತ್ಮಕ ಜನಪ್ರಿಯತೆಯ ಬಗ್ಗೆ ರಾಜ್ಯದ ಗೃಹ ಸಚಿವರು ಹರ್ಷ ವ್ಯಕ್ತಪಡಿಸಿ, ನಶಿಸಿ ಹೋಗುತ್ತಿರುವ ನಮ್ಮ ಪುರಾತನ ಸಂಸ್ಕ್ರತಿ ಹಾಗೂ ಕಲೆಯನ್ನು "ಕೊರಗಜ್ಜ" ರೀತಿಯ ಸಿನಿಮಾಗಳು ಎತ್ತಿಹಿಡಿಯುತ್ತಿರುವುದು ಸಂತೋಷ ನೀಡುತ್ತಿದೆ. ಈ ರೀತಿಯ ಚಿತ್ರಗಳು ಹೆಚ್ಚು ಹೆಚ್ಚು ಮೂಡಿಬರಲಿ ಎಂದು ಆಶಿಸಿ, ....
*ಟ್ರೆಂಡಿಂಗ್ ನಲ್ಲಿ "45" ಚಿತ್ರದ "AFRO ಟಪಾಂಗ" ಪ್ರಮೋಷನ್ ಸಾಂಗ್.* . *ಬಿಡುಗಡೆಯಾದ ಮೂರೇ ದಿನಗಳಲ್ಲಿ 12 ಮಿಲಿಯನ್ ವೀಕ್ಷಣೆ* . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ "AFRO ಟಪಾಂಗ" ಪ್ರಮೋಷನ್ ಸಾಂಗ್ ಇತ್ತೀಚೆಗಷ್ಟೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿತ್ತು. ಅನಾವರಣವಾದ ಮೂರೇ ದಿನಗಳಲ್ಲಿ ಈ ಹಾಡು 12 ಮಿಲಿಯನ್ ವೀಕ್ಷಣೆಯಾಗಿ ಜನಪ್ರಿಯವಾಗಿದೆ. ....