'ಕರಿಕಾಡ’ ರಗಡ್ ಟ್ರೇಲರ್ ಬಿಡುಗಡೆ ರಿದ್ದಿ ಎಂಟರ್ ಟೈನ್ ಮೆಂಟ್ಸ್ ಅಡಿ ಕಾಡ ನಟರಾಜ್ ಕಥೆ ಬರೆದು ನಿರ್ಮಾಣ ಮಾಡಿರುವ ಚಿತ್ರ’ಕರಿಕಾಡ’. ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರೆವೇರಿತು. ತನ್ನ ಕಂಟೆಂಟ್, ಮೇಕಿಂಗ್ ಮೂಲಕವೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರಕ್ಕೆ ಕೆ.ವೆಂಕಟೇಶ್ ಚಿತ್ರಕಥೆ, ಸಂಭಾಷಣೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ತನ್ನ ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದ ’ಕರಿಕಾಡ’ ಚಿತ್ರದ ಟ್ರೇಲರ್ ಕೂಡ ಎಲ್ಲಾ ಕಡೆ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ. ’ಜಗತ್ತಿನಲ್ಲಿ ಯುದ್ಧ ಅಂತ ಶುರು ಆಗೋದು ಒಂದು ಹೆಣ್ಣಿಗೆ ಇನ್ನೊಂದು ಮಣ್ಣಿಗೆ’ ಎಂಬ ಡೈಲಾಗ್ ....
*ಕಟ್ಲೆ ಟ್ರೇಲರ್ ಮತ್ತು ಹಾಡು ಬಿಡುಗಡೆ* ಹಾಸ್ಯ ಕಲಾವಿದ *ಕೆಂಪೇಗೌಡ ಮೊದಲಬಾರಿ ನಾಯಕನಾಗಿ* ನಟಿಸಿರುವ *’ಕಟ್ಲೆ’* ಚಿತ್ರದ ಟ್ರೇಲರ್ ಮತ್ತು ಹಾಡು ಬಿಡುಗಡೆ ಸಮಾರಂಭ ಉತ್ಸವ್ ಲೆಗೆಸಿಯ ಕಿಕ್ಕಿರಿದ ಸಭಾಂಗಣದಲ್ಲಿ ನೆಡೆಯಿತು. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ನಾರಯಣ್, ಮಂಡ್ಯ ಶಾಸಕ ರವಿಕುಮಾರ್ಗೌಡ(ಗಾಣಿಗ), ಬಿಗ್ಬಾಸ್ ಪ್ರಥಮ್, ಕಾಕ್ರೋಚ್ ಸುಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದಕ್ಕೂ ಮುನ್ನ ಕಲಾವಿದರುಗಳು ತಂಡಕ್ಕೆ ಶುಭ ಹಾರೈಸಿದ ತುಣುಕುಗಳು ಬಿತ್ತರಗೊಂಡಿತು. *ಶ್ರೀವಿಧಾ ಅಭಿನಂದನ್ ಕತೆ,ಚಿತ್ರಕತೆ,ಸಂಭಾಷಣೆ ಬರೆದು ನಿರ್ದೇಶನ* ಮಾಡಿದ್ದಾರೆ. ಹೊಸಕೋಟೆ ಮೂಲದ *ಭರತ್ಗೌಡ* ಮಂಚೂಣಿ ....
*ಗಾದೆ ಮಾತು ಚಿತ್ರದ ಶೀರ್ಷಿಕೆ* ಸನಾತನ ಕಾಲದಿಂದಲೂ ಗಾದೆ ಎಂದಿಗೂ ಸುಳ್ಳಾಗಿಲ್ಲ. ಈ ಪೈಕಿ ಹೊಸಬರ ತಂಡವೊಂದು ’ವಿನಾಶ ಕಾಲೆ ವಿಪರೀತ ಬುದ್ದಿ’ ಗಾದೆಯಲ್ಲಿ ಬರುವ *’ವಿನಾಶ ಕಾಲೆ’* ಎಂಬ ಎರಡು ಪದಗಳನ್ನು ಚಿತ್ರದ ಶೀರ್ಷಿಕೆಗೆ ಬಳಸಿಕೊಂಡಿದೆ. ಗಣರಾಜ್ಯೋತ್ಸವ ದಿನದಂದು ರಾಜಾಜಿನಗರದ ಕೈಗಾರಿಕಾ ಕೇಂದ್ರದಲ್ಲಿರುವ ’ಮದ್ದುರಮ್ಮ ದೇವಿ ಮತ್ತು ಯಲ್ಲಮ್ಮ ದೇವಿ’ ಅಮ್ಮನ ಸನ್ನಿದಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಮಾಜಿ ಅಧ್ಯಕ್ಷರಾದ ಬಾ.ಮ.ಹರೀಶ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ಡಾಗ್ ಸತೀಶ್, ಮಲ್ಲಮ್ಮ, ಕರಿಬಸಪ್ಪ ಹಾಜರಿದ್ದರು. *ಶಕ್ತಿ ಫಿಲಿಂಸ್ ನಿರ್ಮಾಣದ* ....
ರಕ್ಕಸಪುರದೊಳ್ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ನಟ. ಕಿಚ್ಚ ಸುದೀಪ್ ಸಾಹಸ ನಿರ್ದೇಶಕ ಕೆ.ರವಿವರ್ಮ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ " ರಕ್ಕಸ ಪುರದೊಳ್ " ಚಿತ್ರ ಫೆಬ್ರವರಿ 6 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದ್ದು ಕಿಚ್ಚ ಸುದೀಪ್ ಸೇರಿದಂತೆ ಚಂದನವನ ನಿರ್ದೇಶಕರಿಂದ ಬೆಂಬಲ ವ್ಯಕ್ತವಾಗಿದೆ. ನಟ ರಾಜ್ ಬಿ ಶೆಟ್ಟಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ "ಚಿತ್ರವನ್ನು ನಿರ್ದೇಶಕ ಜೋಗಿ ಪ್ರೇಮ್ ಶಿಷ್ಯ ರವಿ ಸಾರಂಗ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರದ ಟ್ರೈಲರ್ ಅನ್ನು ಕಿಚ್ಚ ಸುದೀಪ್, ನಿರ್ದೇಶಕರಾದ ಪ್ರೇಮ್, ಎ.ಪಿ ಅರ್ಜುನ್ ಸೇರಿದಂತೆ ಹಲವು ಗಣ್ಯರು ಸಾಹಸ ನಿರ್ದೇಶಕ ರವಿವರ್ಮಾ ಅವರ ಚೊಚ್ಚಲ ನಿರ್ಮಾಣದ ....
*ಪ್ರಣಾಮ್ ಈಗ* "*ಎಂಜಿಆರ್* " ’ *ಟೈಟಲ್ ಲಾಂಚ್* *ಮಾಡಿದ ದೇವರಾಜ್* ಡೈನಾಮಿಕ್ ವೆಂಚರ್ಸ್ ಹಾಗೂ ಪುರಾತನ ಫಿಲಂ ಪ್ರೊಡಕ್ಷನ್ಸ್ ಸಹಯೋಗದಲ್ಲಿ ನೂತನ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಪ್ರಜ್ವಲ್ ದೇವರಾಜ್ ಈ ಚಿತ್ರದ ಮೂಲಕ ನಿರ್ಮಾಣಕ್ಕಿಳಿದಿದ್ದಾರೆ. "ಎಂಜಿಆರ್" ಎಂಬ ವಿಶೇಷ ಶೀರ್ಷಿಕೆ ಈ ಚಿತ್ರಕ್ಕಿದೆ. ಚಿತ್ರದ ನಾಯಕ ಪ್ರಣಾಮ್ ದೇವರಾಜ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಲಾಂಚ್ ಕಾರ್ಯಕ್ರಮ ಬುಧವಾರ ಸಂಜೆ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಹಿರಿಯನಟ ದೇವರಾಜ್ ಅವರು ಮಗನ ಚಿತ್ರಕ್ಕೆ ಶುಭ ಹಾರೈಸುತ್ತ ಇದೊಂದು ಸಂತಸದ ಕ್ಷಣ. ನಾನು ಚಿತ್ರರಂಗಕ್ಕೆ ಬಂದು 30 ವರ್ಷಗಳಾದ ಮೇಲೆ ....
*'ಇಂದಿರಾ’ ಚಿತ್ರದ ಶೀರ್ಷಿಕೆ ಅನಾವರಣ* *ಹೊರಬಂತು ’ಇಂದಿರಾ’ ಚಿತ್ರದ ಟೈಟಲ್ ಪೋಸ್ಟರ್ ಮತ್ತು ಟೀಸರ್* *’ಇಂದಿರಾ’ ಎಂಬ ಇಂದಿನ ತಲೆಮಾರಿನ ’ಜೆನ್ ಜ್ಹೀ’ ಸಿನಿಮಾ!* *ತೆರೆಗೆ ಬರುತ್ತಿದೆ ’ಜೆನ್ ಜ್ಹೀ’ ಕಥಾಹಂದರದ ಹೊಸಚಿತ್ರ* *ಸಸ್ಪೆನ್ಸ್-ಥ್ರಿಲ್ಲರ್ ಶೈಲಿಯಲ್ಲಿ ’ಇಂದಿರಾ’ ಮಹಿಳಾಪ್ರಧಾನ ಚಿತ್ರ* *’ಇಂದಿರಾ’ ಇದು ’ಗಾಂಧಿ’ ಕಥೆಯಲ್ಲ.., ’ಜೆನ್ ಜ್ಹೀ’ ಕಥೆ!* ಈಗ ಎನಿದ್ದರೂ ’ಜೆನ್ ಜ್ಹೀ’ (Gen-Z) ತಲೆಮಾರಿನ ಯುವಕರದ್ದೇ ಜಮಾನ. ಎಲ್ಲರ ಅಂಗೈಯಲ್ಲೂ ಸ್ಮಾರ್ಟ್ ಪೋನ್ಗಳು, ಎಲ್ಲರಿಗೂ ಇಂಟರ್ನೆಟ್ ಸಂಪರ್ಕ ಲಭ್ಯವಿದ್ದರೂ, ಅದನ್ನು ಅತಿಯಾಗಿ ....
"ಅಮೃತ ಅಂಜನ್" ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ಹಿರಿಯ ನಟಿ ಜಯಮಾಲಾ. ಇದೇ 30ರಂದು ರಾಜ್ಯದ್ಯಂತ ಯುವ ಪ್ರತಿಭೆಗಳ ಸಾರಥ್ಯದ "ಅಮೃತ ಅಂಜನ್" ಚಿತ್ರ ರಿಲೀಸ್. ಈಗಾಗಲೇ ಕಿರು ಚಿತ್ರದ ಮೂಲಕ ಸಂಪೂರ್ಣ ಮನೋರಂಜನೆ ನೀಡಿದಂತಹ " ಅಮೃತಾಂಜನ್" ಪ್ರೇಕ್ಷಕರ ಮನಸನ್ನ ಗೆದ್ದು ಮಿಲಿಯನ್ಸ್ ಗಟ್ಟಲೆ ವ್ಯೂಸನ್ನು ಪಡೆದುಕೊಂಡಿತ್ತು. ಆ ನಿಟ್ಟಿನಲ್ಲಿ ಯುವ ಪ್ರತಿಭೆಗಳ ತಂಡ ಸೇರಿಕೊಂಡು "ಅಮೃತ ಅಂಜನ್" ಎಂಬ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಿದ್ಧರಾಗಿದ್ದಾರೆ. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ನಗರದ ಜಿ ಟಿ ಮಾಲ್ ನಲ್ಲಿರುವ ಉತ್ಸವ್ ಲಗಸಿಯಲ್ಲಿ ಆಯೋಜನೆ ಮಾಡಿದ್ದು , ವಿಶೇಷವಾಗಿ ಮಾಜಿ ಎಂಎಲ್ಸಿ , ....
ಯುವ ಪ್ರತಿಭೆಗಳ "ಅಮೃತ ಅಂಜನ್" ಚಿತ್ರದ ಭಾವನಾತ್ಮಕ ಹಾಡು ಬಿಡುಗಡೆ. ಇದೇ 30ರಂದು "ಅಮೃತ ಅಂಜನ್" ಚಿತ್ರ ರಾಜ್ಯಾದ್ಯಂತ ಬಿಡುಗಡೆ. ಜೀವನದಲ್ಲಿ ಆಸಕ್ತಿ , ಗುರಿ , ಛಲ ಇದ್ದರೆ ಖಂಡಿತ ದಡ ಸೇರಬಹುದು ಎಂಬ ನಂಬಿಕೆಯೊಂದಿಗೆ ಯುವ ಪ್ರತಿಭೆಗಳ ಸೇರಿಕೊಂಡು ಅಮೃತಾಂಜನ್ ಎಂಬ ಶಾರ್ಟ್ ಫಿಲಂ ಮಾಡಿ ಎಲ್ಲರ ಗಮನ ಸೆಳೆದಿದ್ದರು , ಈಗ ಇದೇ ತಂಡ ಅಮೃತ ಅಂಜನ್ ಎನ್ನುವ ಸಿನಿಮಾ ಮೂಲಕ ಬೆಳ್ಳಿ ಪರದೆಗೆ ಬರಲು ಸಜ್ಜಾಗಿದ್ದಾರೆ. ಈ ಚಿತ್ರದ ಒಂದು ಮನಮುಟ್ಟುವ ಭಾವನಾತ್ಮಕ ಹಾಡೊಂದು ಬಿಡುಗಡೆ ಮಾಡಲು ಜಿಟಿ ಮಾಲ್ ನಲ್ಲಿರುವ ಉತ್ಸವ್ ಲಗೇಸಿಯಲ್ಲಿ ಆಯೋಜನೆ ಮಾಡುವುದರ ಜೊತೆಗೆ ಮಾಧ್ಯಮದೊಂದಿಗೆ ಚಿತ್ರದ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲು ತಂಡ ....
*'ಸೀಟ್ ಎಡ್ಜ್’ನಲ್ಲಿ ಸಸ್ಪೆನ್ಸ್-ಥ್ರಿಲ್ಲರ್ ಟ್ರೇಲರ್* *ಹೊರಬಂತು ’ವ್ಲಾಗ್-2 ದಿ ಲೂಪ್’ ಕಂಟೆಂಟ್ ವಿಡಿಯೋ* *ವ್ಲಾಗರ್ ಗಳಿಂದ ’ಸೀಟ್ ಎಡ್ಜ್’ ಚಿತ್ರದ ಟ್ರೇಲರ್ ಬಿಡುಗಡೆ* *ಇದೇ ಜ. 30ಕ್ಕೆ ’ಸೀಟ್ ಎಡ್ಜ್’ ಚಿತ್ರ ತೆರೆಗೆ* ’ಲವ್ ಯು ಮುದ್ದು’ ಚಿತ್ರದ ನಂತರ ಯುವನಟ ಸಿದ್ಧು ಮೂಲಿಮನಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸಚಿತ್ರ ’ಸೀಟ್ ಎಡ್ಜ್’ ತೆರೆಗೆ ಬರಲು ತಯಾರಾಗಿದೆ. ಇದೇ ಜನವರಿ 30ಕ್ಕೆ ’ಸೀಟ್ ಎಡ್ಜ್’ ಚಿತ್ರ ತೆರೆಗೆ ಬರಲಿದ್ದು, ಸದ್ಯ ಭರದಿಂದ ಚಿತ್ರದ ಪ್ರಚಾರ ಕಾರ್ಯ ನಡೆಸುತ್ತಿರುವ ಚಿತ್ರತಂಡ, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ. ಇನ್ನು ’ಸೀಟ್ ....
*ಹೊರಬಂತು ಸೈಕಾಲಜಿಕಲ್-ಥ್ರಿಲ್ಲರ್ ’ವಿಕಲ್ಪ’ ಟ್ರೇಲರ್* *ಹೊಸಬರ ಚಿತ್ರಕ್ಕೆ ಬೆನ್ನುತಟ್ಟಿದ ನಿರ್ದೇಶಕ ಜಯತೀರ್ಥ* *ಭ್ರಮೆ ಮತ್ತು ವಾಸ್ತವತೆಯ ನಡುವೆ ಹೊಸಬರ ಚಿತ್ರ* *ಇದೇ ಜನವರಿ 30ಕ್ಕೆ ’ವಿಕಲ್ಪ’ ಚಿತ್ರ ತೆರೆಗೆ* ಈಗಾಗಲೇ ತನ್ನ ಟೈಟಲ್, ಟೀಸರ್ ಮತ್ತು ಹಾಡುಗಳ ಮೂಲಕ ಚಂದನವನದಲ್ಲಿ ಒಂದಷ್ಟು ಸಿನಿಪ್ರಿಯರ ಮನ ಮತ್ತು ಗಮನ ಎರಡನ್ನೂ ಸೆಳೆದಿರುವ ’ವಿಕಲ್ಪ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ’ಪೋಸ್ಟ್ ಟ್ರಾಮಾಟಿಕ್ ಸ್ಟ್ರೆಸ್ ಡಿಸಾರ್ಡರ್’ (ಪಿಟಿಎಸ್ಡಿ) ಎಂಬ ಮಾನಸಿಕ ವ್ಯಾಧಿಯ ಎಳೆಯನ್ನು ಆಧಾರಿಸಿ ತೆರೆಗೆ ಬರುತ್ತಿರುವ ಸೈಕಾಲಜಿಕಲ್-ಥ್ರಿಲ್ಲರ್ ಕಥಾಹಂದರದ ಚಿತ್ರ ....
*ಅಮೃತಾಂಜನ್ ಶಾರ್ಟ್ ಮೂವಿ ಈಗ ಬಿಗ್ ಮೂವಿ* ಅಮೃತಾಂಜನ್ ಚಾಲೆಂಜಸ್ ಬಗ್ಗೆ ಡೈರೆಕ್ಟರ್ ಟಾಕ್ ಅಮೃತಾಂಜನ್ ಶಾರ್ಟ್ ಮೂವಿ ಎಲ್ಲರಿಗೂ ನೆನಪಿದ್ದೆ ಇದೆ. ನಕ್ಕು ನಕ್ಕು ಖುಷಿಯಾಗಿದ್ದರು. ಇದೀಗ ಅದೇ ತಂಡ ಸಿನಿಮಾವೊಂದನ್ನ ಮಾಡಿದೆ. ನಿರ್ದೇಶಕ ಜ್ಯೋತಿ ರಾವ್ ಮೋಹಿತ್ ಅನುಭವವನ್ನ ಹಂಚಿಕೊಂಡಿದ್ದಾರೆ. * ಅಮೃತಾಂಜನ್ ಹೆಸರಿನಲ್ಲೇ ಮೂವಿ ಮಾಡೋದಕ್ಕೆ ಕಾರಣ..? ಅಮೃತಾಂಜನ್ ಶಾರ್ಟ್ ಮೂವಿಗೂ ಅಮೃತಾಂಜನ್ ಸಿನಿಮಾಗೂ ಬಹಳ ವ್ಯತ್ಯಾಸವಿದೆ. ನಾನು ಇದಕ್ಕೂ ಮೊದಲು ಸೋಡಾಬುಡ್ಡಿ ಎಂಬ ಸಿನಿಮಾ ಮಾಡಿದ್ದೆ ಅದು ಸೋತು ಹೋಯ್ತು. ಆಮೇಲೆ ಕೆಲಸ ಇಲ್ಲದೆ ಇದ್ದಾಗ ಒಂದು ಶಾರ್ಟ್ ಮೂವಿ ಮಾಡಿದ್ದೆ, ಅದೇ ಅಮೃತಾಂಜನ್. ಇತಿಹಾಸದ ಥರನೇ ಆಗೋಯ್ತು. ಆಮೇಲೆ ಏನಾದ್ರು ....
ನಮ್ಮ ಸಮಾಜದಲ್ಲಿ ವಿವಾಹೇತರ ಸಂಬಂಧಗಳು ಹೆಚ್ಚುತ್ತಿರುವುದು ಚಿಂತನೀಯ ವಿಷಯವಾಗಿದೆ. ಇದರ ಹಿಂದೆ ಅನೇಕ ಸಾಮಾಜಿಕ-ಆರ್ಥಿಕ ಕಾರಣಗಳಿರಬಹುದು. ಕೆಲಸದ ಒತ್ತಡ, ಪತಿ-ಪತ್ನಿಯರು ಒಬ್ಬರಿಗೊಬ್ಬರು ಸಮರ್ಪಿಸುವ ಸಮಯದ ಕೊರತೆ, ಸಂವಾದದ ಇಲ್ಲವಾಗುವಿಕೆ ಮತ್ತು ದೀರ್ಘಕಾಲೀನ ವಿವಾಹದಲ್ಲಿ ಭಾವನಾತ್ಮಕ ಅಂತರ ಬೆಳೆಯುವುದು ಇವುಗಳಲ್ಲಿ ಮುಖ್ಯವಾದವು. ನಿಜ, ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳೊಂದಿಗೆ ಕಳೆಯುವ ಸಮಯ ಕುಟುಂಬದೊಂದಿಗೆ ಕಳೆಯುವ ಸಮಯಕ್ಕಿಂತ ಹೆಚ್ಚಾಗುತ್ತಿರುವುದು ಒಂದು ಪ್ರಮುಖ ಅಂಶವಾಗಿದೆ. ಆದರೆ, ಮೂಲ ಸಮಸ್ಯೆ ಸಮಯದ ಕೊರತೆ ಮಾತ್ರವಲ್ಲ, ಗುಣಮಟ್ಟದ ಸಮಯ ಮತ್ತು ಆತ್ಮೀಯ ಸಂವಾದದ ಕೊರತೆಯೂ ಹೌದು. ಒಂದು ಆರೋಗ್ಯಕರ ಸಂಬಂಧಕ್ಕೆ ಪ್ರೇಮ, ನಂಬಿಕೆ, ಜವಾಬ್ದಾರಿ, ಸಂವಾದ ....
*“ರಾಮ್ ರಹೀಮ್” ಚಿತ್ರದ ಶೋ ರೀಲ್ ಬಿಡುಗಡೆ ಮಾಡಿದ ನಮ್ ಋಷಿ* . "ಒಳಿತು ಮಾಡು ಮನುಸ. ನೀ ಇರೋದೆ ಮೂರು ದಿವಸ ಎಂಬ" ಹಾಡನ್ನು ಬರೆಯುವ ಮೂಲಕ ವಿಶ್ವದಾದ್ಯಂತ ಇರುವ ಕನ್ನಡಿಗರ ಮನ ಗೆದ್ದಿರುವ ನಮ್ ಋಷಿ, ಈಗ “ರಾಮ್ ರಹೀಮ್ " ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಫೆಬ್ರವರಿಯಲ್ಲಿ ತೆರೆಗೆ ತರಲು ಸಿದ್ದತೆ ನಡೆಸುತ್ತಿದ್ದಾರೆ. ಅದಕ್ಕೆ ಪೂರ್ವಭಾವಿಯಾಗಿ ಚಿತ್ರದ ಶೋ ರೀಲ್ ಬಿಡುಗಡೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನಮ್ ಋಷಿ ಮಾತನಾಡಿದರು. ಶೋ ರೀಲ್ ನಲ್ಲಿ "ಯಾರೂ ಸಿನಿಮಾ ನೋಡಬೇಡಿ" ಎಂದು ಹೇಳಿದ್ದೇನೆ. ಅದಕ್ಕೆ ಕಾರಣವೂ ಇದೆ. ಇದು ಯಾವುದೇ ಗಿಮಿಕ್ ಅಲ್ಲ. ಅದಕ್ಕೆ ಕಾರಣವನ್ನು ಬಿಡುಗಡೆಯ ದಿನ ....
*ಸ್ಯಾಂಡಲ್ ವುಡ್ ಗಣ್ಯರಿಂದ "ಮಹಾರಾಣಿ ಕ್ರಿಕೆಟ್ ಲೀಗ್ ಸೀಸನ್-1 MCL" ಸೆಲೆಬ್ರಿಟಿ ಮಹಿಳಾ ಕ್ರಿಕೆಟ್ ಟೂರ್ನಮೆಂಟ್ನ ಜೆರ್ಸಿ ಹಾಗೂ ಟ್ರೋಫಿ ಅನಾವರಣ* . ನಿರ್ಮಾಪಕ ಮಾಧವಾನಂದ ಅವರ ಕನ್ನಡ ಓಟಿಟಿ ಅರ್ಪಿಸುವ "ಮಹಾರಾಣಿ ಕ್ರಿಕೆಟ್ ಲೀಗ್ ಸೀಸನ್-1 MCL" ಸೆಲೆಬ್ರಿಟಿ ಮಹಿಳಾ ಕ್ರಿಕೆಟ್ ಟೂರ್ನಮೆಂಟ್ನ ಅಧಿಕೃತ ಜೆರ್ಸಿ, ಟ್ರೋಫಿ ಅನಾವರಣ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ ನಗರದ ದಿ ಸೋಡಾ ಫ್ಯಾಕ್ಟರಿಯಲ್ಲಿ ಅದ್ದೂರಿಯಾಗಿ ನೆರವೇರಿತು. ಸಾ ರಾ ಗೋವಿಂದು, ಬಿ ಆರ್ ಲಕ್ಷ್ಮಣರಾವ್, ಜೋಗಿ, ಭರಮಣ್ಣ ಉಪ್ಪಾರ್ (ಉಪ್ಪಾರ ಅಭಿವೃದ್ಧಿ ನಿಗಮ ಅಧ್ಯಕ್ಷರು ಕರ್ನಾಟಕ ಸರಕಾರ), ತಾರಾ ಅನುರಾಧ, ಸುಂದರರಾಜ್, ಎನ್ ಎಂ ಸುರೇಶ್, ಪ್ರವೀಣ್ ಕುಮಾರ್, ಭಾ.ಮ.ಹರೀಶ್, ವಿಕ್ರಮ್ ....
ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! * 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ ! ಕುಣಿಗಲ್ ನಗರದ ಇತಿಹಾಸದಲ್ಲೇ ಮೊಟ್ಡ ಮೊದಲ ಬಾರಿಗೆ ಬಿ.ಕೆ.ಬಿ.ಎಂ.ಎಸ್. ಮೈದಾನದಲ್ಲಿ ನೆರೆದಿದ್ದ 35 ಸಾವಿರ ಜನರ ಸಮ್ಮುಖದಲ್ಲಿ ’ಕುಣಿಗಲ್ ಉತ್ಸವ’ದ ಕೊನೇ ದಿನದ ಕಾರ್ಯಕ್ರಮ ನಡೆಯಿತು. ಸಿನಿಮಾ ಸೆಟ್ ವೈಭವವನ್ನೇ ಮೀರಿಸುವಂತೆ ಹಾಕಲಾಗಿದ್ದ ಬೃಹತ್ ಸೆಟ್ ನಲ್ಲಿ ಶಾಸಕ ಡಾ. ರಂಗನಾಥ್ ಅವರ ನೇತೃತ್ವದಲ್ಲಿ ಈ ವರ್ಣರಂಜಿತ ಸಮಾರಂಭ ನಡೆಯಿತು. 3 ದಿನಗಳ ಕಾಲ ನಡೆದ ಈ ಅದ್ದೂರಿ ಉತ್ಸವದ ಕೊನೆಯ ದಿನದ ಸಮಾರಂಭ ಕಿಚ್ಚ ಸುದೀಪ್, ಹಿರಿಯನಟಿ ಮಾಲಾಶ್ರೀ, ಅನು ಪ್ರಭಾಕರ್, ನೆನಪಿರಲಿ ಪ್ರೇಮ್, ಡಾಲಿ ಧನಂಜಯ್, ಜೈದ್ ಖಾನ್, ಆರಾಧನಾ ....
*’ಡಿಯರ್ ಹಸ್ಬೆಂಡ್’ ಟೈಟಲ್ ಬಿಡುಗಡೆ* *ಹೊರಬಂತು ‘ಡಿಯರ್ ಹಸ್ಬೆಂಡ್’ ಟೈಟಲ್ ಟೀಸರ್* *ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದ ಹೊಸಚಿತ್ರಕ್ಕೆ ಟೈಟಲ್ ಫಿಕ್ಸ್!* *ಹೊಸಚಿತ್ರಕ್ಕೆ ಕಿಚ್ಚ ಸುದೀಪ್ ಸಾಥ್* *ಸೂರಜ್-ಶರಣ್ಯಾ-ಪ್ರವೀಣ್ ಹೊಸ ರೊಮ್ಯಾಂಟಿಕ್ ಕ್ರೈಂ-ಥ್ರಿಲ್ಲರ್ ಕಹಾನಿ* ಬೆಂಗಳೂರು, ಜ. 11: ‘ಜಿ9 ಕಮ್ಯುನಿಕೇಶನ್ ಅ್ಯಂಡ್ ಮೀಡಿಯಾ’ ಹಾಗೂ ‘ನಿರಂತರ ಪ್ರೊಡಕ್ಷನ್ಸ್’ ಸಂಸ್ಥೆಯ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ, ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮತ್ತು ಟೈಟಲ್ ಟೀಸರ್ ಬಿಡುಗಡೆ ಸಮಾರಂಭ ಬೆಂಗಳೂರಿನ ‘ಫಿನಿಕ್ಸ್ ಮಾಲ್ ಆಫ್ ಏಷ್ಯಾ’ದಲ್ಲಿ ಅದ್ಧೂರಿಯಾಗಿ ....
*ಕೇವಲ 50 ರೂ.ನಿಂದ ಭಾರತಿ ಟೀಚರ್ ಏಳನೇ ತರಗತಿ ಚಿತ್ರ ವೀಕ್ಷಿಸಬಹುದು* *’ಭಾರತಿ ಟೀಚರ್ ಏಳನೇ ತರಗತಿ’* ಚಿತ್ರವನ್ನು ಕೇವಲ ಐವತ್ತು ರೂಪಾಯಿ ಟಿಕೆಟ್ ದರದಲ್ಲಿ ಸಿನಿಮಾ ನೋಡಬಹುದೆಂದು *ನಿರ್ಮಾಪಕ ರಾಘವೇಂದ್ರ ರೆಡ್ಡಿ* ಸಂಕ್ರಾಂತಿ ಹಬ್ಬಕ್ಕೆ ಉಡುಗೊರೆ ಅಂತ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಘೋಷಣೆ ಮಾಡಿದ್ದಾರೆ. ಇದು ಕರ್ನಾಟಕದಲ್ಲಿರುವ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಮಾತ್ರ ಅನ್ವಯವಾಗುತ್ತದೆ. ಸಿರಗುಪ್ಪ ಮೂಲದ ಉದ್ಯಮಿ ರಾಘವೇಂದ್ರ ರೆಡ್ಡಿ ಅವರು ಪೂಜ್ಯಾಯ ಫಿಲಂಸ್ ಅಡಿಯಲ್ಲಿ ಬಂಡವಾಳ ಹೂಡಿದ್ದಾರೆ. ಗುರುರಾಜ್ ರೆಡ್ಡಿ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ....
*ಹೊಸಚಿತ್ರಕ್ಕೆ ಆ್ಯಕ್ಷನ್ -ಕಟ್ ಹೇಳಲು ಗುರುರಾಜ ಕುಲಕರ್ಣಿ (ನಾಡಗೌಡ) ರೆಡಿ* *’ನಿರಂತರ ಪ್ರೊಡಕ್ಷನ್ಸ್’ ಮತ್ತು ‘ಜಿ9 ಕಮ್ಯುನಿಕೇಶನ್ ಅ್ಯಂಡ್ ಮೀಡಿಯಾ’ ಸಹಯೋಗದಲ್ಲಿ ಬಿಗ್ ಬಜೆಟ್ ಚಿತ್ರ* *ಜ. 11ಕ್ಕೆ ಕಿಚ್ಚ ಸುದೀಪ್ ಅವರಿಂದ ಹೊಸಚಿತ್ರದ ಶೀರ್ಷಿಕೆ ಅನಾವರಣ* ಬೆಂಗಳೂರು, ಜ. 7: ಕನ್ನಡ ಚಿತ್ರರಂಗದಲ್ಲಿ ‘ಲಾಸ್ಟ್ ಬಸ್’, ‘ಅಮೃತ್ ಅಪಾರ್ಟ್ಮೆಂಟ್’, ‘ದಿ ಜಡ್ಜ್ ಮೆಂಟ್’ ಮೊದಲಾದ ಸದಭಿರುಚಿ ಸಿನಿಮಾಗಳ ಮೂಲಕ ನಿರ್ಮಾಪಕ ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಗುರುರಾಜ ಕುಲಕರ್ಣಿ (ನಾಡಗೌಡ) ಈ ಬಾರಿ ಮತ್ತೊಂದು ವಿಭಿನ್ನ ಕಥೆಯನ್ನು ಪ್ರೇಕ್ಷಕರ ಮುಂದೆ ತರಲು ತೆರೆಮರೆಯಲ್ಲಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ....
ದೇವನೊಬ್ಬ ಜಾದೂಗಾರ ಟೀಸರ್ ಬಿಡುಗಡೆ, ಹೊಸ ತಂಡಕ್ಕೆ ಶ್ವೇತಾ ಶ್ರೀವಾಸ್ತವ್, ಹುಚ್ಚ ವೆಂಕಟ್, ಸಿಂಪಲ್ ಸುನಿ ಶುಭಾಶಯ ನಂಬಿಕೆ ಕಳೆದುಕೊಂಡಾಗ ನಮಗೆ ದೇವರ ನೆನಪಾಗುತ್ತದೆ ದೇವರು ನನ್ನ ಜೀವನದಲ್ಲಿ ಎಷ್ಟೆಲ್ಲ ಆಟ ಆಡಿದನಲ್ಲ ಎನಿಸಬಹುದು. ಆಗೆಲ್ಲ ನಾವು ದೇವನೊಬ್ಬ ಜಾದೂಗಾರ ಎಂದುಕೊಳ್ಳುತ್ತೇವೆ. ಈಗ ಖಟ್ವಾಂಗ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಇದೇ ಹೆಸರನ್ನಿಟ್ಟು ಸಿನಿಮಾ ಒಂದು ಬರುತ್ತಿದೆ. ಸೌದಿ ಅರೇಬಿಯಾದಲ್ಲಿ ಉದ್ಯಮಿಯಾಗಿರುವ ಬಾಲಕೃಷ್ಣ ಶೆಟ್ಟಿ ಈ ಚಿತ್ರದ ನಿರ್ಮಾಣ ಮಾಡಿದ್ದಾರೆ. ದೊಡ್ಡ ತಾರಾಬಳಗವಿರೋ ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನ ಉತ್ಸವ ಲೆಗಸಿಯಲ್ಲಿ ಅದ್ದೂರಿಯಾಗಿ ನಡೆಯಿತು. ಕನ್ನಡದ ಹೆಸರಾಂತ ....
*"ಅಮಲು" ಹಾಡಿನೊಂದಿಗೆ ಹೊಸವರ್ಷವನ್ನು ಸ್ವಾಗತಿಸಿದ ಯೋಗರಾಜ್ ಭಟ್* . *ಶರಣ್ ಗಾಯನಕ್ಕೆ ಫಿದಾ ಆದ ಅಭಿಮಾನಿಗಳು* . ನಿರ್ದೇಶನದ ಜೊತೆಗೆ ಯೋಗರಾಜ್ ಭಟ್ ಗೀತರಚನೆಕಾರರಾಗಿಯೂ ಜನಪ್ರಿಯರು. ಈವೆರಗೂ ಸಾಕಷ್ಟು ಸೂಪರ್ ಹಿಟ್ ಚಿತ್ರಗೀತೆಗಳನ್ನು ರಚಿಸಿ ಅವರು ಕನ್ನಡಿಗರ ಮನೆ ಮಾತಾಗಿದ್ದಾರೆ. ಪ್ರಸ್ತುತ "ಅಮಲು" ಎಂಬ ಹಾಡನ್ನು ಬರೆಯುವ ಮೂಲಕ ಯೋಗರಾಜ್ ಭಟ್ ಹೊಸವರ್ಷವನ್ನು ಸ್ವಾಗತಿಸಿದ್ದಾರೆ. ನಟ ಶರಣ್ ಈ ಹಾಡನ್ನು ಸುಮಧುರವಾಗಿ ಹಾಡಿದ್ದಾರೆ. ಚೇತನ್ - ಡ್ಯಾವಿ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಮಹದೇವಪ್ಪ ಆರ್ ಕನಕಪುರ ನಿರ್ಮಾಣ ಮಾಡಿದ್ದಾರೆ. ಪಂಚರಂಗಿ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಆಲ್ಬಂ ಹಾಡು ಅಧಿಕ ....