*ಆಯೋಗ್ಯ-2 ಮೂರನೇ ಹಾಡು ರಿಲೀಸ್* *ಆಗಸ್ಟ್ 7 ರಂದು ರಾಜ್ಯಾದ್ಯಂತ ಬಿಡುಗಡೆ* ಸತೀಶ್ ನೀನಾಸಂ, ರಚಿತಾ ರಾಮ್ ಜೋಡಿಯ ‘ಅಯೋಗ್ಯ 2’ ಚಿತ್ರದ ಮೂರನೇ ಹಾಡು ಅನಾವರಣಗೊಂಡಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ’ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಹಾಗೂ ಅಣ್ಣಾ ಬಂದ್ರೆ ಜೋಶ್ ಬತ್ತದೆ ಎಂಬ ಹಾಡುಗಳಿಗೆ ಸಖತ್ ರೆಸ್ಪಾನ್ಸ್ ಪಡೆದುಕೊಂಡಿದ್ದ ಚಿತ್ರತಂಡ, ಇದೀಗ ’ಹುಡ್ಗೀರ್ ಡೇಂಜರಸ್’ ಎಂಬ ಹಾಡನ್ನು ರಿಲೀಸ್ ಮಾಡಿದೆ. ಮಹೇಶ್ ಕುಮಾರ್ ನಿರ್ದೇಶವಿರುವ ಈ ಚಿತ್ರ ಆಗಸ್ಟ್ 7 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿರುವ ಈ ಹಾಡಿಗೆ ’ಬಹದ್ದೂರ್’ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದಾರೆ. ವಿಜಯ ಪ್ರಕಾಶ್ ....
*ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ನಟನೆಯ ರಾಮಾಯಣ ಚಿತ್ರದಿಂದ ಬಿಗ್ ಅಪ್ಡೇಟ್* *ಜುಲೈ 24ರಂದು ನಮಿತ್ ಮಲ್ಹೋತ್ರಾ ನಿರ್ಮಾಣದ ‘ರಾಮಾಯಣ’ ಚಿತ್ರದ ಪ್ಯಾನ್ ವರ್ಲ್ಡ್ ಟ್ರೇಲರ್ ಬಿಡುಗಡೆ* ನವದೆಹಲಿಯಲ್ಲಿ ಜುಲೈ 18 ರಂದು ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ, ಭಾರತದ ಅಪ್ರತಿಮ ಸಾಂಸ್ಕೃತಿಕ ಪರಂಪರೆಯಾದ ರಾಮಾಯಣವನ್ನು ಜಾಗತಿಕ ವೇದಿಕೆಗೆ ಪರಿಚಯಿಸುವ ಐತಿಹಾಸಿಕ ಪ್ರಯಾಣಕ್ಕೆ ವಿಧ್ಯುಕ್ತ ಚಾಲನೆ ನೀಡಲಾಗಿದೆ. ಈ ಪಯಣದ ಆರಂಭವನ್ನು ’ಪ್ರಥಮ ಸಂಕಲ್ಪ’ ಎಂದು ಕರೆಯಲಾಗಿದ್ದು, ಇದು ಭಾರತೀಯ ಸಂಪ್ರದಾಯದಂತೆ ಮಹತ್ಕಾರ್ಯವೊಂದಕ್ಕೆ ಕೈಹಾಕುವ ಮುನ್ನ ಕೈಗೊಳ್ಳುವ ದೃಢ ನಿರ್ಧಾರವಾಗಿದೆ. ಜುಲೈ 24 ರಂದು ನಡೆಯಲಿರುವ ಈ ಚಿತ್ರದ ಜಾಗತಿಕ ....
*ತೆರೆಗೆ ಸಿದ್ದ ಶ್ರೀಮತಿ ಸಿಂಧೂರ* ಆರ್ ಅಂಡ್ ಆರ್ ಎಂಟರ್ಪ್ರೈಸಸ್ ಅಡಿಯಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ *ಡಿ.ಎನ್.ನಾಗೀರೆಡ್ಡಿ ಕಥೆ-ನಿರ್ಮಾಣ,* *ಆರ್.ಅನಂತರಾಜು ಚಿತ್ರಕಥೆ ಮತ್ತು ನಿರ್ದೇಶನ,* ವಿಜಯರಾಘವೇಂದ್ರ ಅಭಿನಯಿಸಿರುವ *’ಶ್ರೀಮತಿ ಸಿಂಧೂರ’* ಚಿತ್ರವು ತೆರೆಗೆ ಬರಲು ಸಜ್ಜಾಗಿದೆ. ಇದರನ್ವಯ ಪ್ರಚಾರದ ಕೊನೆ ಹಂತವಾಗಿ ಪ್ರಿ ರಿಲೀಸ್ ಇವೆಂಟ್ ಎಸ್ಆರ್ವಿ ಪ್ರಿವ್ಯೂ ಟಾಕೀಸ್ದಲ್ಲಿ ಅದ್ದೂರಿಯಾಗಿ ನಡೆಯಿತು. *ನಾಯಕ ವಿಜಯ ರಾಘವೇಂದ್ರ* ಮಾತನಾಡಿ, ಆಂಜನೇಯನ ಸಾಂಗ್ ಸಿನಿಮಾದ ಹೈಲೈಟ್ ಆಗಿದ್ದು ಕೈಲಾಶ್ಖೇರ್ ಹಾಡಿರುವುದು ವಿಶೇಷ. ಹುಡುಗಿಯೊಬ್ಬಳು ಮದುವೆ ಆದರೆ ಶ್ರೀಮತಿ ಆಗುತ್ತಾಳೆ. ಸಿಂಧೂರ ....
ದಿಲ್ದಾರ್ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ! ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ಚಿತ್ರ `ದಿಲ್ದಾರ್’. ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈಗಾಗಲೇ ಮಾಸ್ ಪಾತ್ರಗಳ ಮೂಲಕ ಗಮನ ಸೆಳೆದಿರುವ ಶ್ರೇಯಸ್ ಮಂಜು, ಈ ಚಿತ್ರದಲ್ಲಿ ಮತ್ತೊಂದೊಂದು ಹಂತದ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವೊಂದು ಈ ಮೂಲಕ ಜಾಹೀರಾಗಿದೆ. ಏನ್ಸಿಯಂಟ್ ಮೂವೀಸ್ ಬ್ಯಾನರಿನಡಿಯಲ್ಲಿ ಆರ್. ಸಂತೋಷ್ ಕುಮಾರ್ (ಎಸ್ವಿಟಿ) ನಿರ್ಮಾಣ ಮಾಡಿರುವ ದಿಲ್ದಾರ್ ಚಿತ್ರವೀಗ ಚಿತ್ರೀಕರಣವನ್ನೆಲ್ಲ ಮುಗಿಸಿಕೊಂಡು ಬಿಡುಗಡೆಯ ಹೊಸ್ತಿಲಲ್ಲಿದೆ. ಈ ಹಂತದಲ್ಲಿ ಫಸ್ಟ್ ಲುಕ್ ಟೀಸರ್ ಮೂಲಕ ....
ಮ್ಯಾರೇಜ್ ಪಾರ್ಟಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ! ಯುವ ನಿರ್ದೇಶಕ ಚಯನ್ ಶೆಟ್ಟಿ ನಿರ್ದೇಶನ ಹಾಗೂ ಶ್ರೀ ವಾರಾಹಿ ಫಿಲಂಸ್ ಬ್ಯಾನರಿನಡಿಯಲ್ಲಿ ಸಂತೋಷ್ ವಿ ನಿರ್ಮಾಣ ಮಾಡಿರುವ `ಮ್ಯಾರೇಜ್ ಪಾರ್ಟಿ’ ಚಿತ್ರವೀಗ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಸನಿಹದಲ್ಲಿದೆ. ಇದೇ ಹೊತ್ತಿನಲ್ಲಿ ಚಿತ್ರತಂಡ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆ. ಸಿನಿಮಾದ ಆಂತರ್ಯವನ್ನು ತೆರೆದಿಡುವಂತೆ ಕಾಣಿಸುವ ಈ ಪೋಸ್ಟರ್ ಮೂಲಕ ಮ್ಯಾರೇಜ್ ಪಾರ್ಟಿ ಪ್ರೇಕ್ಷಕರನ್ನು ಸೆಳೆದುಕೊಳ್ಳುತ್ತಿದೆ. ಈ ಹಿಂದೆ ಬಿಗ್ ಬಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ್ದ ಅಧಿಪತ್ರ ಚಿತ್ರವನ್ನು ನಿರ್ದೇಶನ ಮಾಡಿದ್ದವರು ಚಯನ್ ಶೆಟ್ಟಿ. ಆ ಚಿತ್ರಕ್ಕೆ ಪ್ರೇಕ್ಷಕರ ಕಡೆಯಿಂದ ಸಕಾರಾತ್ಮಕ ....
‘ನಾರಿ’ ಚಿತ್ರಕ್ಕೆ ಅದ್ದೂರಿ ಚಾಲನೆ ಕುಬೇರ್ ಕೆ. ಇಂಪೂ ನಿರ್ದೇಶನದ, ರವಿ ಕಲ್ಯಾಣ್ ನಾಯಕನಾಗಿ ನಟಿಸುತ್ತಿರುವ ಚಿತ್ರ ಆರ್.ಕೆ. ಗೋಲ್ಡನ್ ಮೂವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮುನಿರಾಜು ಮತ್ತು ರೋಜಮ್ಮ ನಿರ್ಮಿಸುತ್ತಿರುವ ‘ನಾರಿ’ ಚಿತ್ರದ ಮುಹೂರ್ತ ಸಮಾರಂಭ ಸೋಮವಾಗ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ನೆರವೇರಿತು. ಈ ಚಿತ್ರದ ಮೂಲಕ ರವಿ ಕಲ್ಯಾಣ್ ನಾಯಕನಾಗಿ ಪದಾರ್ಪಣೆ ಮಾಡುತ್ತಿದ್ದು, ಕುಬೇರ್ ಕೆ. ಇಂಪೂ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸುಮಾರು 10 ಚಿತ್ರಗಳಲ್ಲಿ ಖಳನಾಯಕನಾಗಿ ಅಭಿನಯಿಸಿರುವ ರವಿ ಕಲ್ಯಾಣ್, ಈ ಚಿತ್ರದ ಮೂಲಕ ಹೀರೋ ಆಗಿದ್ದಾರೆ. ಅವರ ತಂದೆ-ತಾಯಿ ಈ ಚಿತ್ರದ ....
ಕನ್ನಡದ ಮೇರು ಸಾಹಿತಿ ಡಾ. ವಿ. ನಾಗೇಂದ್ರ ಪ್ರಸಾದ್ ಅವರ 50ನೇ ಜನ್ಮವರ್ಷಾಚರಣೆ ಅಂಗವಾಗಿ “ಕವಿರತ್ನ ಸಾರ್ಥಕ ಸುವರ್ಣ” ಕಾರ್ಯಕ್ರಮವನ್ನು 2026ರ ಜುಲೈ 19ರಂದು ಬೆಳಿಗ್ಗೆ 10.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಬೆಂಗಳೂರಿನಲ್ಲಿ ಅತ್ಯಂತ ವೈಭವದಿಂದ ಆಯೋಜಿಸಿದ್ದೇವೆ.
ಅವರ ಜನ್ಮದ 50ನೇ ವರ್ಷವನ್ನು ನೆಪವಾಗಿಸಿಕೊಂಡು, ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗಕ್ಕೆ ಅವರು ನೀಡಿರುವ ಅಪಾರ ಕೊಡುಗೆಯನ್ನು ಗೌರವಿಸುವುದು ಹಾಗೂ ಅವರು ರಚಿಸಿರುವ 3,000ಕ್ಕೂ ಹೆಚ್ಚು ಹಾಡುಗಳ ಸಂಭ್ರಮವನ್ನು ಆಚರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
*ರುಕ್ಮಿಣಿ ರಾಧಾಕೃಷ್ಣ* *2 ಹಾಡುಗಳ ಬಿಡುಗಡೆ* ಉಮೇಶ್ ಫಿಲಂಸ್ ಲಾಂಛನದಲ್ಲಿ ಎನ್. ಹನುಮಂತರಾಜು, ಎನ್.ಹೆಚ್.ಉಮೇಶ್ ನಿರ್ಮಿಸುತ್ತಿರುವ ’ *ರುಕ್ಮಿಣಿ* *ರಾಧಾಕೃಷ್ಣ* ’ ಚಿತ್ರಕ್ಕೆ ಪ್ರಾಣ್ ಸುವರ್ಣ ಆಕ್ಷನ್ ಕಟ್ ಹೇಳಿದ್ದಾರೆ. ಸುನಾದ್ ಗೌತಂ ಅವರ ಸಂಗೀತ ನಿರ್ದೇಶನವಿರುವ ೨ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು. ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ಕುಮಾರ್, ಪಾರು ಖ್ಯಾತಿಯ ಮೋಕ್ಷಿತಾ ಪೈ, ರಿಯಾ ಸಚ್ ದೇವ್ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆಡಿಯೋ ರಿಲೀಸ್ ಮಾಡಿದ ಲಹರಿ ವೇಲು ಮಾತನಾಡುತ್ತ ಈ ಚಿತ್ರದಲ್ಲಿ ೫ ಸುಂದರ ಹಾಡುಗಳಿದ್ದು, ಅವುಗಳನ್ನು ಅಷ್ಟೇ ಅದ್ಭುತವಾಗಿ ಪಿಚ್ಚರೈಜೇಷನ್ ಮಾಡಿದ್ದಾರೆ. ನಾನು ಕೂಡ ಬಹಳ ನಿರೀಕ್ಷೆ ....
*ಎಜೆ ಶೆಟ್ಟಿ ನಿರ್ದೇಶನದಲ್ಲಿ ’ಭೂರಮೆ’ ವಿಡಿಯೋ ಸಾಂಗ್...ಹೊಸಬರಿಗೆ ಸಾಥ್ ಕೊಟ್ಟ ಸ್ಟಾರ್ ಡೈರೆಕ್ಟರ್ಸ್* *’ಭೂರಮೆ’ ವಿಡಿಯೋ ಸಾಂಗ್ ರಿಲೀಸ್...ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?* ಕಿಸ್, ಕಬ್ಜ ಹಾಗೂ ಬಘೀರ ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಭೂರಮೆ ಎಂಬ ಚೆಂದದ ಹಾಡಿನ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಎಜೆ ಶೆಟ್ಟಿ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಿಸಿರುವ ಚೊಚ್ಚಲ ಆಲ್ಬಂ ಸಾಂಗ್ ಭೂರಮೆ. ಯುವ ಪ್ರತಿಭೆಗಳಾದ ಅರ್ಥವ ವಿಶ್ವನಾಥ್ ಹಾಗೂ ಸುಷ್ಮಿತಾ ಶೆಟ್ಟಿ ನಟನೆಯ ಈ ಸಾಂಗ್ ಬಿಡುಗಡೆ ಕಾರ್ಯಕ್ರಮ AMBಯಲ್ಲಿ ನಿನ್ನೆ ಜರುಗಿತು. ಸ್ಯಾಂಡಲ್ ವುಡ್ ಸ್ಟಾರ್ ಡೈರೆಕ್ಟರ್ಸ್ ಗಳಾದ ಎಪಿ ಅರ್ಜುನ್, ಚೇತನ್ ಕುಮಾರ್ ಹಾಗೂ ....
*ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿದೆ "ರಾ.. ರಾ.. RX"* . *ಅದ್ದೂರಿಯಾಗಿ ಆರಂಭವಾಯಿತು ಯತಿರಾಜ್ ನಿರ್ದೇಶನದ ಹಾಗೂ ಕಾರ್ತೀಕೇಯ ಎಂಟರ್ ಪ್ರೈಸಸ್ ನಿರ್ಮಾಣದ ಈ ಚಿತ್ರ* . ಪತ್ರಕರ್ತ, ಕಲಾವಿದ ಹಾಗೂ ನಿರ್ದೇಶಕ ಯತಿರಾಜ್ ನಿರ್ದೇಶನದ ಮತ್ತು ಕಾರ್ತಿಕೇಯ ಎಂಟರ್ ಪ್ರೈಸಸ್ ಲಾಂಛನದಲ್ಲಿ ವೃದ್ಧಿ ಸುನೀಲ್, ಚೇತನ್ ಟಿ.ಆರ್ ಹಾಗೂ ಚಂದ್ರಶೇಖರ್ ಎಸ್ ಎಂ ನಿರ್ಮಿಸುತ್ತಿರುವ "ರಾ.. ರಾ..RX" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಹಿರಿಯ ಛಾಯಾಗ್ರಾಹಕ ಕೆ.ಎನ್ ನಾಗೇಶ್ ಕುಮಾರ್, ಪತ್ರಕರ್ತ ವಿ.ಸಿ.ಎನ್ ಮಂಜು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ....
*ಪ್ಯಾನ್ ಇಂಡಿಯಾ ’ಪ್ಯಾರಾಡಾಕ್ಸ್’ ಚಿತ್ರಕ್ಕೆ ಮುಹೂರ್ತ* *ಕ್ಯಾಪ್ಟನ್ ಕಿಶೋರ್ ನಿರ್ದೇಶನದ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಹನ್ಸಿಕಾ ಮೊಟ್ವಾನಿ, ಸೋನು ಸೋದ್ ಅಭಿನಯ* ನೃತ್ಯ ನಿರ್ದೇಶಕರಾಗಿ ಹೆಸರು ಮಾಡಿರುವ ಕ್ಯಾಪ್ಟನ್ ಕಿಶೋರ್ ಈಗ ಮೊದಲ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಹೌದು, ಅವರು ’ಪ್ಯಾರಾಡಾಕ್ಸ್’ ಎಂಬ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಚಿತ್ರವಾಗಿದ್ದು, ಪ್ರಮುಖ ಪಾತ್ರದಲ್ಲಿ ಬಹು ಭಾಷಾ ನಟಿ ಹನ್ಸಿಕಾ ಮೊಟ್ವಾನಿ ಅಭಿನಯ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಮುದ್ದಿನಪಾಳ್ಯದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ....
*ಜುಲೈ 17 ರಂದು ಚಿತ್ರಮಂದಿರಗಳಲ್ಲಿ "ಫಾದರ್ಸ್ ಡೇ"* .. *ಚಿತ್ರ ಬಿಡುಗಡೆಗೂ ಮುನ್ನ ಪ್ರಮೋಷನ್ ಸಾಂಗ್ ಬಿಡುಗಡೆ ಮಾಡಿದ ಚಿತ್ರತಂಡ* . ELEVEN ELEMENTS ಸಂಸ್ಥೆ ಲಾಂಛನದಲ್ಲಿ ರಾಜಾರಾಮ್ ರಾಜೇಂದ್ರನ್ ನಿರ್ಮಾಣದ ಜೊತೆಗೆ ನಿರ್ದೇಶನವನ್ನೂ ಮಾಡಿರುವ ಚಿತ್ರ "ಫಾದರ್ಸ್ ಡೇ". ತಂದೆ - ಮಗನ ಬಾಂಧವ್ಯ ಸಾರುವ ಈ ಚಿತ್ರ ಇದೇ ಜುಲೈ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದೊಂದು ಕನ್ನಡದ ಮೊದಲ ಬೈಕ್ ರೈಡರ್ ಚಿತ್ರವಾಗಿದೆ. ಚಿತ್ರ ಬಿಡುಗಡೆಗೂ ಪೂರ್ವದಲ್ಲಿ ALL OK ಸಾರಥ್ಯದಲ್ಲಿ ಮೂಡಿಬಂದಿರುವ ಪ್ರಮೋಷನ್ ಸಾಂಗ್ ಅನ್ನು ಚಿತ್ರತಂಡ ಅನಾವರಣ ಮಾಡಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ....
*ಆಕ್ಷನ್ ಪ್ಯಾಕ್ಡ್ ಪರಾಕ್ ಟೀಸರ್ ಬಿಡುಗಡೆ..ರಗಡ್ ಅವತಾರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ* *ಪರಾಕ್ ಮಾಸ್ ಟೀಸರ್ ರಿಲೀಸ್..ಆಕ್ಷನ್ ಅವತಾರ ತಾಳಿದ ಶ್ರೀಮುರಳಿ* *ಶ್ರೀಮುರಳಿ ಪರಾಕ್ ಮಾಸ್ ಟೀಸರ್ ಅನಾವರಣ* ರೋರಿಂಗ್ ಸ್ಟಾರ್ ಶ್ರೀಮುರಳಿ ಭತ್ತಳಿಕೆಯಿಂದ ಬರ್ತಿರುವ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಪರಾಕ್. ಸಿನಿಮೋತ್ಸವ ಇರುವ ಹೊಸ ತಂಡ ಸೇರಿಕೊಂಡು ಮಾಡುತ್ತಿರುವ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಆ ನಿರೀಕ್ಷೆಗೆ ತಕ್ಕಂತೆ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದೆ. ಇಂದು ಬೆಂಗಳೂರಿನ ಖಾಸಗಿ ಮಾಲ್ ನಲ್ಲಿ ಟೀಸರ್ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಿರ್ದೇಶಕ ಹಾಲೇಶ್ ....
ಹ್ಯಾಟ್ರಿಕ್ ಹೀರೋ ಜನ್ಮದಿನದ ಧಮಾಕಾ: ಶಿವಣ್ಣನ ಅಭಿಮಾನಿಗಳಿಗೆ ‘ಆರೋಗ್ಯ ಭಾಗ್ಯ’ದ ಜೊತೆ 4 ಹೊಸ ಚಿತ್ರಗಳ ಭರ್ಜರಿ ಅಪ್ಡೇಟ್! ‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಸಿನಿಪ್ರೇಕ್ಷಕರಿಗೆ ಅಭೂತಪೂರ್ವ ಕೊಡುಗೆಗಳ ಮಹಾಪೂರವೇ ಹರಿದುಬಂದಿದೆ. ಒಂದು ಕಡೆ ಜನಸಾಮಾನ್ಯರ ಆರೋಗ್ಯ ಭದ್ರತೆಗಾಗಿ ವಿಶೇಷ ಹೆಲ್ತ್ ಕಾರ್ಡ್ ಬಿಡುಗಡೆಯಾಗಿದ್ದರೆ, ಇನ್ನೊಂದೆಡೆ ಶಿವಣ್ಣ ನಟನೆಯ ಬಹುನಿರೀಕ್ಷಿತ ಸಿನಿಮಾಗಳ ಟೀಸರ್, ಪೋಸ್ಟರ್ ಹಾಗೂ ಪ್ರೋಮೋಗಳು ರಿಲೀಸ್ ಆಗಿ ಧೂಳೆಬ್ಬಿಸುತ್ತಿವೆ. 1. ವಿ.ಎಸ್.ಎಚ್. ಆಸ್ಪತ್ರೆಯಿಂದ ‘ಹ್ಯಾಟ್ರಿಕ್ ಹೀರೋ ಫ್ಯಾಮಿಲಿ ಹೆಲ್ತ್ ಕಾರ್ಡ್’ ಲೋಕಾರ್ಪಣೆ ಬೆಂಗಳೂರಿನ ....
*ಸಂಗೀತ ಪ್ರಪಂಚದಲ್ಲಿ ವಿಜಯ್ ಪ್ರಕಾಶ್ ಹೊಸ ಹೆಜ್ಜೆ* *ವಿಜಯ್ ಪ್ರಕಾಶ್ ಕಲ್ಚರಲ್ ಕ್ಲಬ್, ದ್ವಾರ್ ಸ್ಟುಡಿಯೋಸ್ ಮತ್ತು ದ್ವಾರ್ ಮ್ಯೂಸಿಕ್ ಪ್ರಾರಂಭ* ಸಿನಿಮಾ, ಶಾಸ್ತ್ರೀಯ ಸಂಗೀತ ಸೇರಿದಂತೆ ಹಲವು ಪ್ರಕಾರಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ಅಂತಾರಾಷ್ಟ್ರೀಯ ಖ್ಯಾತಿಯ ಗಾಯಕ ಹಾಗೂ ಹೆಮ್ಮೆಯ ಕನ್ನಡಿಗ ವಿಜಯ್ ಪ್ರಕಾಶ್ ಹೊಸ ಹೆಜ್ಜೆ ಇಟ್ಟಿದ್ದಾರೆ. ಇಷ್ಟು ವರ್ಷಗಳ ತಮ್ಮ ಅನುಭವ, ಶ್ರಮ ಮತ್ತು ಹಣವನ್ನು ಧಾರೆ ಎರೆದು ವಿಜಯ್ ಪ್ರಕಾಶ್ ಕಲ್ಚರಲ್ ಕ್ಲಬ್, ದ್ವಾರ್ ಸ್ಟುಡಿಯೋಸ್ ಮತ್ತು ದ್ವಾರ್ ಮ್ಯೂಸಿಕ್ ಎಂಬ ಹೊಸ ಸಂಸ್ಥೆಗಳನ್ನು ಪ್ರಾರಂಭಿಸಿದ್ದಾರೆ. ಕೆರೆಯ ನೀರನು ಕೆರೆಗೆ ಚೆಲ್ಲಿ ಎನ್ನುವಂತೆ, ಸಂಗೀತದಲ್ಲಿ ಪಡೆದಿದನ್ನು ....
*ಟೀಸರ್ ನಲ್ಲೇ ಮೋಡಿ ಮಾಡಿದ "ಪಿನಾಕ"* . *ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಅವರ ಹೊಸ ಲುಕ್ ಗೆ ಫಿದಾ ಆದ ಅಭಿಮಾನಿಗಳು* . ಭಾರತೀಯ ಚಿತ್ರರಂಗಕ್ಕೆ ಸದಭಿರುಚಿಯ ಚಿತ್ರಗಳನ್ನು ನೀಡುತ್ತಾ ಬಂದಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ಹೆಸರಾಂತ ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಟನ್ ಸ್ಟಾರ್ ಗಣೇಶ್ ಅಭಿನಯದ ‘ಪಿನಾಕ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಖಾಸಗಿ ಶಾಲೆಯೊಂದರಲ್ಲಿ ಸಾವಿರಾರು ಮಕ್ಕಳೊಂದಿಗೆ ಗಣೇಶ್ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದರೊಟ್ಟಿಗೆ " ಪಿನಾಕ" ಚಿತ್ರದ ....
*"ಕರ್ಣಾಟಬಲಂ ಅಜೇಯಂ" ಚಿತ್ರಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಡಿ.ಕೆ.ಶಿವಕುಮಾರ್ ಅವರಿಂದ ಹಾಗೂ "ಸೈನಿಕ 2" ಚಿತ್ರಕ್ಕೆ ಕೇಂದ್ರ ಸಚಿವ ಶ್ರೀವಿ.ಸೋಮಣ್ಣ ಅವರಿಂದ ಅದ್ದೂರಿ ಚಾಲನೆ* . *ಪಿ.ಎಂ.ಜಿ ಫಿಲಂ ಫ್ಯಾಕ್ಟರಿ ನಿರ್ಮಾಣದ ಈ ಚಿತ್ರಗಳ ಮೂಲಕ ಶಾಸಕ ಸಿ.ಪಿ.ಯೋಗೀಶ್ವರ್ ಪುತ್ರ ಧ್ಯಾನ್ ಯೋಗೀಶ್ವರ್ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ. ಈ ಎರಡು ಚಿತ್ರಗಳಲ್ಲೂ 25 ವರ್ಷಗಳ ನಂತರ ಸಿ.ಪಿ.ಯೋಗೀಶ್ವರ್ ನಟನೆ* . 40 ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ಹಾಗೂ 25 ವರ್ಷಗಳ ಹಿಂದೆ "ಸೈನಿಕ" ಎಂಬ ಜನಪ್ರಿಯ ಚಿತ್ರದ ಮೂಲಕ ....
*"ಅಪ್ಪು ಕಪ್ ಸೀಸನ್ 4" ಗೆ ಅದ್ದೂರಿ ಚಾಲನೆ** . ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ "ಅಪ್ಪು ಕಪ್"(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಮೂರು ಸೀಸನ್ ಅದ್ದೂರಿಯಾಗಿ ನಡೆದಿದೆ. ಇದೇ ಜುಲೈ 24, 25, 26 ರಂದು ಲೀಗ್ ಪಂದ್ಯಗಳು ನಡೆಯಲಿದೆ. " ಇತ್ತೀಚೆಗೆ "ಅಪ್ಪು ಕಪ್ ಸೀಸನ್ 4" ಉದ್ಘಾಟನೆ ಹಾಗೂ ಟೀಮ್ ಆಕ್ಷನ್ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿದ್ದ ಕೆ.ವಿ.ಪ್ರಭಾಕರ್, ವಿಧಾನ ಪರಿಷತ್ ಸದಸ್ಯರು ಹಾಗೂ ಸಾಯಿಗೋಲ್ಡ್ ಪ್ಯಾಲೆಸ್ ಮಾಲೀಕರಾದ ಟಿ.ಎ ಶರವಣ ಹಾಗೂ ಕನ್ನಡಪರ ಹೋರಾಟಗಾರರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದು ....
" *ಬಾಯ್ಸ್ ನೆವರ್* *ಕಾಂಪ್ರಮೈಸ್* " *ಚಿತ್ರದ ಟ್ರೈಲರ್ ಬಿಡುಗಡೆ* ಜಸ್ಟ್ ಮದ್ವೇಲಿ, ರಾಜಣ್ಣನ ಮಗ ಚಿತ್ರಗಳ ನಿರ್ಮಾಪಕ ಹರೀಶ್ ಜಲಗೆರೆ ಪ್ರಥಮಬಾರಿಗೆ ನಿರ್ದೇಶನ ಮಾಡಿರುವ ಚಿತ್ರ ’ಬಾಯ್ಸ್ ನೆವರ್ ಕಾಂಪ್ರಮೈಸ್’ *ಜುಲೈ* *10ರಂದು ರಾಜ್ಯಾದ್ಯಂತ* *ತೆರೆಗೆ ಬರಲಿರುವ ಈ* ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು. ಮಾರಿ ಗೋಲ್ಡ್ ಸ್ಡುಡಿಯೋಸ್ ಮೂಲಕ ಉಜ್ವಲ ನಾಗರಾಜ ಜಗದಾಳೆ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕೋಲಾರ ಸೀನು ಚಿತ್ರದ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚಿತ್ರತಂಡ ಒಂದಷ್ಡು ಮಾಹಿತಿಗಳನ್ನು ಹಂಚಿಕೊಂಡಿತು. ಹಾರರ್ ಕಾಮಿಡಿ ಕಥಾಹಂದರ ಒಳಗೊಂಡ ....
666 ಆಪರೇಷನ್ ಡ್ರೀಮ್ ಥಿಯೇಟರ್ ಟೀಸರ್ ಬಿಡುಗಡೆ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಮೂಡಿ ಬರುತ್ತಿರುವ ಬಹು ನಿರೀಕ್ಷಿತ ಸಿನಿಮಾ ’666 ಆಪರೇಷನ್ ಡ್ರೀಮ್ ಥಿಯೇಟರ್’. ಪೋಸ್ಟರ್ , ಡೈರೆಕ್ಟರ್ ಹಾಗೂ ತಾರಾಬಳಗದ ಮೂಲಕವೇ ಈ ಚಿತ್ರ ಕುತೂಹಲ ಹೆಚ್ಚಿಸಿದೆ. ಶಿವರಾಜ್ಕುಮಾರ್ ಹಾಗೂ ಧನಂಜಯ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಒರೈಯನ್ ಮಾಲ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಇಡೀ ಚಿತ್ರತಂಡ ಭಾಗಿಯಾಗಿತ್ತು. ಈ ವೇಳೆ ಶಿವರಾಜ್ ಕುಮಾರ್ ಮಾತನಾಡಿ, ಹೇಮಂತ್ ವರ್ಡರ್ ಫುಲ್ ಡೈರೆಕ್ಟರ್. ವೈಶಾಖ್ ನನ್ನ ಅಭಿಮಾನಿ. ಈಗ ಅವರು ನನ್ನ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧನಂಜಯ್ ಅವರ ಜೊತೆ ....