*'ರಾಕಾ’ ಲುಕ್ ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?* ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ ಸರಣಿ ಸಿನಿಮಾಗಳ ಬಳಿಕ ಮತ್ತೊಂದು ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಬನ್ನಿ, ತಮಿಳು ನಿರ್ದೇಶಕ ಅಟ್ಲಿ ಜೊತೆ ಕೈ ಜೋಡಿಸಿದ್ದಾರೆ. ಒಂದಷ್ಟು ಸ್ಯಾಂಪಲ್ ಮೂಲಕ ಕುತೂಹಲ ಹೆಚ್ಚಿಸಿದ್ದ ರಾಕಾ ಸಿನಿಮಾದ ಫಸ್ಟ್ ಲುಕ್ ಅಲ್ಲು ಅರ್ಜುನ್ ಬರ್ತಡೇಗೆ ರಿವೀಲ್ ಮಾಡಲಾಗಿತ್ತು. ಅರ್ಧ ಮೃಗ, ಅರ್ಧ ಮನುಷ್ಯನ ಅವತಾರದಲ್ಲಿ ಸ್ಟೈಲಿಶ್ ಸ್ಟಾರ್ ಕಾಣಿಸಿಕೊಂಡಿದ್ದಾರೆ. ಅಲ್ಲು ಅರ್ಜುನ್ ರಾಕಾ ಪೋಸ್ಟರ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಲುಕ್ ಗಾಗಿ ಬನ್ನಿ ದಿನಕ್ಕೆ 3 ರಿಂದ 4 ಗಂಟೆ ಶ್ರಮ ಹಾಕಿದ್ದಾರೆ. ಇದು ಐಕಾನ್ ಸ್ಟಾರ್ ಗೆ ....
ಬಿಡುಗಡೆಯಾಯ್ತು ಲವ್ ಸೀಸನ್ಸ್ ಟೀಸರ್! ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೊಸಬರ ತಂಡದ ಆಗಮನವಾಗಿದೆ. ತಿಂಗಳ ಹಿಂದಷ್ಟೇ ಚಿತ್ರೀಕರಣ ಮುಗಿಸಿಕೊಂಡು ಒಂದಷ್ಟು ಸುದ್ದಿ ಮಾಡಿದ್ದ ಈ ಸಿನಿಮಾದ ಟೀಸರ್ ನ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಲವ್ ಸೀಸನ್ಸ್ ಆಂತರ್ಯದ ಬಗ್ಗೆ ಒಂದಷ್ಟು ಕುತೂಹಲಕರ ವಿಚಾರಗಳನ್ನು ಅನಾವರಣಗೊಳಿಸಿದೆ. ರಾಜೇಶ್ ನಟರಂಗ ಈ ಚಿತ್ರದ ಬಹುಮುಖ್ಯ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಈ ಬಗ್ಗೆ ಮಾತಾಡಿರುವ ರಾಜೇಶ್ ಅವರು, ನಿರ್ದೇಶಕರ ಕಸುಬುದಾರಿಕೆಯನ್ನು ಮೆಚ್ಚಿಕೊಳ್ಳುತ್ತಲೇ, ತಾನಿಲ್ಲಿ ಜವಾಬ್ದಾರಿಯುತ ತಂದೆಯ ಪಾತ್ರದಲ್ಲಿ ನಟಿಸಿರುವ ಸುಳಿವನ್ನು ಬಿಟ್ಟು ಕೊಟ್ಟರು. ಪ್ರೀತಿಯೆಂಬುದು ಯಾವ ಕಾಲಕ್ಕೂ ಹಳತಾಗದ ವಿಚಾರ. ಈ ....
"ಜಿನುಗೋ ಮಳೆ" ರೊಮ್ಯಾಂಟಿಕ್ ಆಲ್ಬಂ ಹಾಡು ಬಿಡುಗಡೆ.... ಯುನಿಕಾರ್ನ್ ಎಂಟರ್ ಟೈನ್ ಮೆಂಟ್ ಬ್ಯಾನರ್ ಮೂಲಕ ದೀಪ್ತಿ ಆಕಾಶ್ ಅವರು ನಿರ್ಮಿಸಿರುವ, ಬಿಗ್ ಬಾಸ್ ಖ್ಯಾತಿಯ ಧನುಷ್ ಗೌಡ ಹಾಗೂ ಸ್ಪಂದನಾ ಸೋಮಣ್ಣ ಅಭಿನಯದ ’ಜಿನುಗೋ ಮಳೆ’ ಎಂಬ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಆಕಾಶ್ ಅವರ ಕಾನ್ಸೆಪ್ಟ್ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡಿನ ಬಿಡುಗಡೆಯ ನಂತರ ನಾಯಕ ಧನುಷ್ ಗೌಡ ಮಾತನಾಡುತ್ತ ಪಿಆರ್ ಕೆ ಸಂಸ್ಥೆಯಡಿ ಕೆಲಸ ಮಾಡಬೇಕೆಂದು ನನಗೆ ಬಹಳ ದಿನಗಳಿಂದ ಆಸೆ ಇತ್ತು. ಅದು ಈ ಆಲ್ಬಂ ಹಾಡಿನ ಮೂಲಕ ನೆರವೇರಿದೆ. ಮೂಡಿಗೆರೆಯಲ್ಲಿ ೩ ದಿನಗಳ ಕಾಲ ಈ ಹಾಡನ್ನು ಶೂಟ್ ಮಾಡಿದ್ದೇವೆ. ಶೂಟಿಂಗ್ ....
*ಬೆಂಗಳೂರು ಇನ್: ರೋಚಕ ಮರ್ಡರ್ ಮಿಸ್ಟರಿ ಕಥೆಯ ಟ್ರೈಲರ್ ಬಿಡುಗಡೆ ಮಾಡಿದ ಅಹಿಂಸ ಚೇತನ್, ಏ.17ಕ್ಕೆ ಚಿತ್ರ ತೆರೆಗೆ* ಧರ್ಮ ಕೀರ್ತಿರಾಜ್ ಅಭಿನಯದ ಬೆಂಗಳೂರಿನಲ್ಲಿ ನಡೆಯುವ ರೋಚಕ ಮರ್ಡರ್ ಮಿಸ್ಟರಿ ಸಸ್ಪೆನ್ಸ್ ಥ್ರಿಲ್ಲರ್ ’ಬೆಂಗಳೂರು ಇನ್’ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ. ಇದೇ ತಿಂಗಳ 17ಕ್ಕೆ ಚಿತ್ರ ತೆರೆ ಕಾಣುತ್ತಿದ್ದು, ಬೆಂಗಳೂರಿನ ಮಾಗಡಿ ರಸ್ತೆಯ ಉತ್ಸವ್ ಲೆಗೆಸಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ "ಮೈನಾ" ಖ್ಯಾತಿಯ ಅಹಿಂಸಾ ಚೇತನ್ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದರು. ಒಬ್ಬ ಫುಡ್ ಡೆಲಿವರಿ ಏಜೆಂಟ್ ಸುತ್ತ ಕಥೆ ಹೆಣೆಯುವ ಈ ಚಿತ್ರ, ಆಧುನಿಕ ನಗರದ ಅಂಧಕಾರವನ್ನು ಬಯಲಿಗೆಳೆಯುವ ಪ್ರಯತ್ನದಲ್ಲಿದೆ. ಕಾರ್ತಿಕ್ ಕೆ. ಮೂರ್ತಿ ಅವರ ....
*ಐದು ಶಾಟ್ಗಳಲ್ಲಿ ಚಿತ್ರೀಕರಣವಾದ ವಿಶ್ವದ ಮೊದಲ ಚಿತ್ರ* ಮಹಿಳಾ ಪ್ರಧಾನ ಕಥೆಯನ್ನು ಹೊಂದಿರುವ *’ಅದಿತಿ’* ಚಿತ್ರಕ್ಕೆ ಮಿಲೆನಿಯಮ್ ಆಡ್ ಮೀಡಿಯಾ ಬ್ಯಾನರ್ ಅಡಿಯಲ್ಲಿ *ವ್ಯಾಲೆರಿನಾ ಮರಿಯ ರೋಜರ್ಸ್ ಮತ್ತು ನೆಲ್ಸನ್ ರೋಜರ್ಸ್.ಡಬ್ಲ್ಯೂ ಬಂಡವಾಳ* ಹೂಡಿದ್ದಾರೆ. ಲಿಬರ್ಟಿ ಎಂಬ ಅಡಿಬರಹ ಇರಲಿದೆ. *ನೆಲ್ಸನ್ ರೋಜರ್ಸ್.ಡಬ್ಲ್ಯೂ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್* ಹೇಳಿದ್ದಾರೆ. ಇವರೊಂದಿಗೆ ಸೋಲೋಮನ್.ಕೆ.ಜಾರ್ಜ್ ನಿರ್ದೇಶನದಲ್ಲಿ ಕೈ ಜೋಡಿಸಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಹಾಡುಗಳು, ಟೀಸರ್ ಬಿಡುಗಡೆ ಮತ್ತು ವೈ2ಕೆ ಮ್ಯೂಸಿಕ್ ಆಡಿಯೋ ಕಂಪೆನಿ ಲೋಗೋ ಅನಾವರಣ ಸಮಾರಂಭವು ಪಂಚತಾರಾ ಹೋಟೆಲ್ದಲ್ಲಿ ಅದ್ದೂರಿಯಾಗಿ ನಡೆಯಿತು. ’ಆ ....
ಸೀತಾ ರಾಮ ರಾಜು-ದರ್ಶನ ಸೇರಿ ಒಟ್ಟಿಗೆ ಮೂರು ಚಿತ್ರಗಳಿಗೆ ಚಾಲನೆ ಸೋಮವಾರ ಬೆಳಿಗ್ಗೆ ಗವಿಪುರದ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅರುಣಕುಮಾರ್ ಅವರ ಮಾಲೀಕತ್ವದ ಮ್ಯಾಟ್ರಿಕ್ ಮೂವೀ ಮೇಕರ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೂರು ಚಿತ್ರಗಳಿಗೆ ಒಟ್ಟಿಗೇ ಚಾಲನೆ ನೀಡಲಾಯಿತು. ಆ ಮೂರು ಚಿತ್ರಗಳು ಯಾವುವೆಂದರೆ ಕೀರ್ತಿ ಕೃಷ್ಣ ಅವರ ನಿರ್ದೇಶನದ ಸೀತಾ ರಾಮ ರಾಜು, ಸ್ವಸ್ತಿಕ್ ಅವರ ನಿದೇಶನದ ದರ್ಶನ ಹಾಗೂ ಕುಮಾರ್ ನಿರ್ದೇಶನದ ಇನ್ನೂ ಹೆಸರಿಡದ ಚಿತ್ರದ ಪ್ರಾರಂಭೋತ್ಸವ ನಡೆಯಿತು, ಸೀತಾರಾಮ ರಾಜು ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಕಾರ್ತೀಕ್ ಮಹೇಶ್ ನಾಯಕನಾಗಿದ್ದು, ನಾಯಕಿಯಾಗಿ ಪ್ರಿಯಾಂಕಾ ಕುಮಾರ್ ನಟಿಸುತ್ತಿದ್ದಾರೆ, ಉಳಿದಂತೆ ....
*ಏಪ್ರಿಲ್ 10 ರಂದು ಜಯರಾಮ್ ಕಾರ್ತಿಕ್(ಜೆ.ಕೆ) ಅಭಿನಯದ "ಕಾಡ" ಚಿತ್ರ ತೆರೆಗೆ* . ಹಿರಿತೆರೆ ಹಾಗೂ ಕಿರುತೆರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಜಯರಾಮ್ ಕಾರ್ತಿಕ್ (ಜೆ.ಕೆ) ನಾಯಕನಾಗಿ ನಟಿಸಿರುವ, ಅಮಿತ್ ಕುಮಾರ್ ಸಕ್ಸೇನ ನಿರ್ಮಾಣದ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ನಟ ವಿಶೃತ್ ನಾಯಕ್ ನಿರ್ದೇಶಿಸಿರುವ ಸೈಕೊ ಥ್ರಿಲ್ಲರ್ ಜಾನರ್ ನ "ಕಾಡ" ಚಿತ್ರ ಇದೇ ಏಪ್ರಿಲ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ....
*ಏಪ್ರಿಲ್ 15ಕ್ಕೆ ಟೊವಿನೋ ಥಾಮಸ್ - ಕಯಾದು ಲೋಹರ್ ಅಭಿನಯದ ‘ಪಳ್ಳಿ ಚಟ್ಟಂಬಿ’ ತೆರೆಗೆ* *ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಹಂಚಿಕೆ* . ಮಲಯಾಳಂ ನಟ ಟೊವಿನೋ ಥಾಮಸ್ ಹಾಗೂ ಕನ್ನಡದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಕಯಾದು ಲೋಹರ್ ಅಭಿನಯದ ‘ಪಳ್ಳಿ ಚಟ್ಟಂಬಿ’ ಸಿನಿಮಾ ಏಪ್ರಿಲ್ 15ರಂದು ತೆರೆಗೆ ಬರಲು ಸಿದ್ಧವಾಗಿದೆ. ಮಲಯಾಳಂ ಜೊತೆಗೆ ಕನ್ನಡದಲ್ಲೂ ಈ ಸಿನಿಮಾ ತೆರೆಗೆ ಬರುತ್ತಿರುವುದು ವಿಶೇಷ. ಇತ್ತೀಚೆಗೆ ಸಿನಿಮಾ ತಂಡ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಚಿತ್ರದ ಬಗ್ಗೆ ಮಾಹಿತಿ ನೀಡಿತು. ‘ಪಳ್ಳಿ ಚೆಟ್ಟಂಬಿ’ ಚಿತ್ರವನ್ನು ವರ್ಲ್ಡ್ ವೈಡ್ ಫಿಲಂಸ್, ಸಿ ಕ್ಯೂಬ್ ಬ್ರೋಸ್ ಎಂಟರ್ಟೇನ್ಮೆಂಟ್ ಅಡಿಯಲ್ಲಿ ನೌಫಲ, ಬ್ರಿಜೇಶ್, ಚಾಣುಕ್ಯ ....
*"ಸಂಕೀರ್ತನ"ದಲ್ಲಿ ವಿಜಯನಗರ ಸಾಮ್ರಾಜ್ಯದ ಸಂತರ ಹಾಗೂ ಹರಿದಾಸರ ಸಮಾಗಮ* .. *ಭಕ್ತಿಪ್ರಧಾನ ಈ ಚಿತ್ರ ಏಪ್ರಿಲ್ 17 ಕ್ಕೆ ತೆರೆಗೆ* ಕೆ. ಪದ್ಮಕಲಾ ಗುಂಡೂರಾವ್ ಹಾಗು ಸ್ನೇಹಿತರು ನಿರ್ಮಾಣ ಮಾಡಿರುವ, ಡಿ.ಎಸ್ ಮಂಜುನಾಥ್(ಕಲಾ ಗಂಗೋತ್ರಿ ಮಂಜು) ನಿರ್ದೇಶಿಸಿರುವ ಹಾಗೂ ಜೆ.ಎಂ.ಪ್ರಹ್ಲಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ "ಸಂಕೀರ್ತನ" ಚಿತ್ರದಲ್ಲಿ ವಿಜಯನಗರ ಸಾಮ್ರಾಜ್ಯದಲ್ಲಿದ್ದ ಶ್ರೇಷ್ಠ ಸಂತರ ಹಾಗೂ ಹರಿದಾಸರ ಬಗೆಗಿನ ಕಥಾಹಂದರವಿದೆ. ಭಕ್ತಿಪ್ರಧಾನ ಈ ಚಿತ್ರ ಏಪ್ರಿಲ್ 17 ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ನೀಡಿದರು. ....
*ಟ್ರೇಲರ್ ನಲ್ಲೇ ಗಮನ ಸೆಳೆದ "ಎಲ್ರ ಕಾಲೆಳಿಯತ್ತೆ ಕಾಲ’.* . *ಚಂದನ್ ಶೆಟ್ಟಿ ಅಭಿನಯದ ಹಾಗೂ ಸುಜಯ್ ಶಾಸ್ತ್ರಿ ನಿರ್ದೇಶನದ ಈ ಚಿತ್ರ ಏಪ್ರಿಲ್ 17 ರಂದು ಬಿಡುಗಡೆ* . ಸುಜಯ್ ಶಾಸ್ತ್ರಿ ನಿರ್ದೇಶನದ, ಗೋಕುಲ ಎಂಟರ್ಟೈನರ್ಸ್ ಲಾಂಛನದಲ್ಲಿ ಗೋವಿಂದರಾಜು ಅವರು ನಿರ್ಮಿಸಿರುವ ಹಾಗೂ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. 90 ರ ಕಾಲಘಟ್ಟದ ರೆಟ್ರೊ ಶೈಲಿಯ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಗೆ ಚಂದನ್ ಶೆಟ್ಟಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಏಪ್ರಿಲ್ 17 ರಂದು ಚಿತ್ರ ಬಿಡುಗಡೆಯಾಗುತ್ತಿದ್ದು, ಚಿತ್ರ ನೋಡಲು ಅಭಿಮಾನಿಗಳು ಕಾತುರದಿಂದ ....
*ಟ್ರೇಲರ್ ನಲ್ಲೇ ಮೋಡಿ ಮಾಡಿದ ‘ಟೆರರ್’ ಏಪ್ರಿಲ್ 10ರಂದು ತೆರೆಗೆ* . *ಕನ್ನಡ ಚಿತ್ರರಂಗದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರ ಸಮ್ಮುಖದಲ್ಲಿ ಟ್ರೇಲರ್ ಅನಾವರಣ* . ಸಿಲ್ಕ್ ಮಂಜು, ರವಿ ಹಾಗೂ ಸ್ಮಿತಾ ವಸಿಷ್ಠ ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ "ಟೆರರ್" ಚಿತ್ರ ಆರಂಭದಿಂದ ಸಾಕಷ್ಟು ಸದ್ದು ಮಾಡುತ್ತಿದೆ. ಹಾಡುಗಳು ಹಾಗೂ ಟೀಸರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು, ....
ಪೀಟರ್ ಏಪ್ರಿಲ್ 10ರಿಂದ ರಾಜ್ಯದಾದ್ಯಂತ ಬಿಡುಗಡೆ ಕೆ.ವಿ.ಎನ್ ಪ್ರೊಡಕ್ಷನ್ಸ್ ವಿತರಣೆಯಲ್ಲಿ ಪೀಟರ್ ರಿಲೀಸ್ ಲವ್ ಮಾಕ್ಟೇಲ್ ಬೆನ್ನಿಗೆ ಮತ್ತೊಂದು ಬ್ಯೂಟಿಫುಲ್ ಕಂಟೆಂಟ್ ಪೀಟರ್ ಸ್ಯಾಂಡ್ ವುಡ್ ನಲ್ಲಿ ಏಪ್ರಿಲ್ಗೆ ಭರವಸೆಯ ಸಿನಿಮಾ ಪೀಟರ್ ಪೀಟರ್.... ಸ್ಯಾಂಡಲ್ ವುಡ್ ಅಂಗಳದಲ್ಲಿ ಈ ಬಿರುಬೇಸಿಗೆಯಲ್ಲಿ ಕನ್ನಡ ಪ್ರೇಕ್ಷಕರ ಕಣ್ಮನಕ್ಕೆ ತಂಪೆರೆಯಲು ಬರ್ತಿರೋ ಮ್ಯೂಸಿಕಲ್ ಲವ್ ಮಿಸ್ಟರಿ. ....
ಇದು ಸಿಡಿದಿದ್ದ ಹೆಣ್ಣಿನ ಕಥೆ ‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ ನವೀನ್ ಮಹದೇವ ಮೊದಲ ಬಾರಿಗೆ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿ, ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿರುವ ‘ಮೃತ್ಯುದೇವತೆ’ ಚಿತ್ರದ ಕೆಲಸಗಳು ಸಂಪೂರ್ಣವಾಗಿ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ. ಅದಕ್ಕೂ ಮೊದಲು ಗುರುವಾರ ಸಂಜೆ ಉತ್ಸವ್ ಲೆಗಸಿ ಸಭಾಂಗಣದಲ್ಲಿ ಚಿತ್ರದ ‘ಕಾಳಿ’ ಮತ್ತು ‘ಮಹದೇವ’ ಹಾಡುಗಳಲ್ಲದೆ ಟ್ರೇಲರ್ ಸಹ ಬಿಡುಗಡೆಯಾಯಿತು. ಮಾಜಿ ಕೌನ್ಸಿಲರ್ ಮತ್ತು ಉದ್ಯಮಿ ಕೆ. ರಮೇಶ್ ಟ್ರೇಲರ್ ಬಿಡುಗಡೆ ಮಾಡಿದರೆ, ಉದ್ಯಮಿ ಹಾಗೂ ಸಮಾಜಸೇವಕರಾದ ಶ್ರೀನಿವಾಸ್ ಅವರು ‘ಮಹಾದೇವ’ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ....
*"NH 66" ನಲ್ಲಿ ಪ್ರಮೋದ್ ಶೆಟ್ಟಿ ಪ್ರಯಾಣ* . *ಮಂಜುನಾಥ್ ಟಿ.ಆರ್ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರದ ಪ್ರಮುಖಪಾತ್ರದಲ್ಲಿ ಶೃತಿ ಹರಿಹರನ್* . ರಾಯ ಫಿಲಂಸ್ ಲಾಂಛನದಲ್ಲಿ ಮಂಜುನಾಥ್ ಟಿ.ಆರ್ ನಿರ್ಮಿಸಿ, ನಿರ್ದೇಶಿಸುತ್ತಿರುವ ಹಾಗೂ ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್, ರಾಜೇಶ್ ನಟರಂಗ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಹಾಗೂ ಶೀರ್ಷಿಕೆ ಅನಾವರಣ ಸಮಾರಂಭ ರಾಜರಾಜೇಶ್ವರಿ ನಗರದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ನೆರವೇರಿತು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ "NH 66" ಎಂದು ಹೆಸರಿಡಲಾಗಿದೆ. ನಟ ಉಗ್ರಂ ....
*ಸಮಯದ ಮಹತ್ವ ಸಾರುವ ಚಂದನ್ ಶೆಟ್ಟಿ ಅಭಿನಯದ ಹಾಗೂ ಸುಜಯ್ ಶಾಸ್ತ್ರಿ ನಿರ್ದೇಶನದ "ಎಲ್ರ ಕಾಲೆಳಿಯತ್ತೆ ಕಾಲ’ ಚಿತ್ರ ಏಪ್ರಿಲ್ 17 ರಂದು ತೆರೆಗೆ"* . ಹಾಸ್ಯ ನಟನಾಗಿ ಎಲ್ಲರ ಗಮನ ಸೆಳೆದಿರುವ ಸುಜಯ್ ಶಾಸ್ತ್ರಿ ನಿರ್ದೇಶನದ, ಗೋಕುಲ ಎಂಟರ್ಟೈನರ್ಸ್ ಲಾಂಛನದಲ್ಲಿ ಗೋವಿಂದರಾಜು ಅವರು ನಿರ್ಮಿಸಿರುವ ಹಾಗೂ ಖ್ಯಾತ ಗಾಯಕ - ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರ ಏಪ್ರಿಲ್ 17 ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಪೂರ್ವದಲ್ಲಿ ಚಿತ್ರತಂಡ "ಮಾತು ಮಧುರ" ಎಂಬ ಹಾಡನ್ನು ಆನಂದ್ ಆಡಿಯೋ ಮೂಲಕ ಅನಾವರಣ ಮಾಡಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ....
ಲವ್ ಮಾಕ್ಟೇಲ್3 ಗೆಲುವಿನ ಸಂಭ್ರಮ! ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ, ನಾಯಕನಾಗಿ ನಟಿರುವ ಲವ್ ಮಾಕ್ಟೇಲ್೩ ಇದೀಗ ರಾಜ್ಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಈ ಖುಷಿಯನ್ನು ಹಂಚಿಕೊಳ್ಳುವ ಸಲುವಾಗಿ ಜಿಟಿ ಮಾಲ್ನ ಎಂಎಂಬಿ ಲೆಗೆಸಿಯಲ್ಲಿ ಚಿತ್ರತಂಡ ಸಕ್ಸಸ್ ಮೀಟ್ ಅನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಲವ್ ಮಾಕ್ಟೇಲ್ ಮೊದಲ ಆವೃತ್ತಿಯಿಂದ, ಲವ್ ಮಾಕ್ಟೇಲ್೩ ವರೆಗೆ ಡಾರ್ಲಿಂಗ್ ಕೃಷ್ಣ ದಂಪತಿಗೆ ಜೊತೆಯಾದವರೆಲ್ಲ ಹಾಜರಿದ್ದದ್ದು ವಿಶೇಷ. ಈ ಸಕ್ಸಸ್ ಮೀಟ್ನಲ್ಲಿ ಡಾರ್ಲಿಂಗ್ ಕೃಷ್ಣ ದಂಪತಿ ಸರಣಿ ಗೆಲುವಿಗೆ ಕಾರಣರಾದ ಚಿತ್ರತಂಡಕ್ಕೆ, ಪ್ರಚಾರ ಚಟುವಟಿಕೆಯಲ್ಲಿ ಭಾಗಿಯಾದವರಿಗೆ ಮತ್ತು ಸಮಸ್ತ ಪ್ರೇಕ್ಷಕರಿಗೆ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ಲವ್ ....
‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದ ಟೀಸರ್ ಬಿಡುಗಡೆ ಏಪ್ರಿಲ್ 10ರಂದು ರವಿ ಶ್ರೀವತ್ಸ ನಿರ್ದೇಶನದ ಚಿತ್ರ ತೆರೆಗೆ ರವಿ ಶ್ರೀವತ್ಸ ನಿರ್ದೇಶನದ ‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಲಿದೆ. ಚಿತ್ರವು ಏಪ್ರಿಲ್ 10ರಂದು ಬಿಡುಗಡೆಯಾಗುತ್ತಿದ್ದು, ಚಿತ್ರದ ಪ್ರಚಾರ ಕೆಲಸಗಳು ಶುರುವಾಗಿವೆ. ಚಿತ್ರವನ್ನು ಚಂದನ್ ಸುರೇಶ್ ರಾಜ್ಯಾದ್ಯಂತ ತಮ್ಮ ಚಂದನ್ ಫಿಲಂಸ್ ಸಂಸ್ಥೆಯ ಮೂಲಕ ಬಿಡುಗಡೆ ಮಾಡುತ್ತಿದ್ದಾರೆ. ಅದಕ್ಕೂ ಮೊದಲು ಶನಿವಾರ ಸಂಜೆ ಮಲ್ಲೇಶ್ವರದ ಎಸ್.ಆರ್.ವಿ ಪ್ರಿವ್ಯೂ ಥಿಯೇಟರ್ನಲ್ಲಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಹಿರಿಯ ವಿತರಕ ಸಂಜೀವ ಮೂರ್ತಿ ಟೀಸರ್ ಬಿಡುಗಡೆ ಮಾಡಿ ....
*ಏಪ್ರಿಲ್ 10ರಂದು "ಗೊಗ್ಗಯ್ಯ" ನ ಆಗಮನ* . *ಚಿಕ್ಕ ಮಕ್ಕಳಿಗೆ ಹೆದರಿಸುವ ಪದವೇ ಈಗ ಸಿನಿಮಾ ಶೀರ್ಷಿಕೆ** . ಸಾಮಾನ್ಯವಾಗಿ ಚಿಕ್ಕಮಕ್ಕಳು ಊಟ ಮಾಡದಿದ್ದರೆ, ತಾಯಿ ಹೇಳುವ ಪದವೇ ಊಟ ಮಾಡು ಕಂದ. ಇಲ್ಲದಿದ್ದರೆ "ಗೊಗ್ಗಯ್ಯ" ಬರುತ್ತಾನೆ ಅಂತ. ಈಗ "ಗೊಗ್ಗಯ್ಯ" ಎಂಬ ಶೀರ್ಷಿಕೆಯಲ್ಲೇ ಸಿನಿಮಾ ನಿರ್ಮಾಣವಾಗಿದ್ದು ತೆರೆಗೆ ಬರಲು ಸಿದ್ದವಾಗಿದೆ. ಚಿತ್ರ ಏಪ್ರಿಲ್ 10 ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ಈ ಚಿತ್ರದ ಹಾಡು ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಹಾಡು ಬಿಡುಗಡೆ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಸಾಕಷ್ಟು ಚಿತ್ರಗಳಿಗೆ ಸಹ ....
‘ *ರಾಮರಸ’ದಲ್ಲಿ "ಗುರು ಸಿದ್ದ" ಪಾತ್ರದಲ್ಲಿ ಪ್ರಜ್ವಲ್ ದೇವರಾಜ್* . *ರಾಮನವಮಿ ಸಂದರ್ಭದಲ್ಲಿ ಅವದೂತ ಶ್ರೀ ವಿನಯ್ ಗುರೂಜಿ ಅವರಿಂದ ಕ್ಯಾರೆಕ್ಟರ್ ಟೀಸರ್ ಅನಾವರಣ* . ಜಿ ಸಿನಿಮಾಸ್ ಮತ್ತು ಸೆವೆನ್ ಸ್ಟಾರ್ ಮೂವೀಸ್ ಜಂಟಿಯಾಗಿ ನಿರ್ಮಿಸುತ್ತಿರುವ ‘ರಾಮರಸ’ ಚಿತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟಿಸಿದ್ದಾರೆ. ಗುರು ದೇಶಪಾಂಡೆ ನಿರ್ಮಾಣದ ಹಾಗೂ ಬಿ.ಎಂ.ಗಿರಿರಾಜ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಗುರು ಸಿದ್ಧ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕರ್ನಾಟಕದ ಅಲೆಮಾರಿ ಪರಂಪರೆಯಾದ ’ಸುಡುಗಾಡು ಸಿದ್ಧ’ ಸಮುದಾಯದ ಹಿನ್ನೆಲೆಯನ್ನು ಈ ಪಾತ್ರ ಹೊಂದಿದೆ. ಇತ್ತೀಚೆಗೆ ರಾಮನವಮಿ ....
‘ಶ್ರೀಕೃಷ್ಣ’ ಚಿತ್ರದ ‘ಉಧೋ ಉಧೋ ಯಲ್ಲವ್ವ …’ ಲಿರಿಕಲ್ ಹಾಡು ಬಿಡುಗಡೆ ಶಂಕರ್ ರಾಜ ವರ್ಮ ಅಭಿನಯದ, ನಿರ್ದೇಶನದ, ನಿರ್ಮಾಣದ ಹೊಸ ಚಿತ್ರ ಈ ಹಿಂದೆ ‘ಬ್ರಹ್ಮರಾಕ್ಷಸ’ ಎಂಬ ಚಿತ್ರ ಮಾಡಿದ್ದ ಶಂಕರ್ ರಾಜ ವರ್ಮ, ಇದೀಗ ಸದ್ದಿಲ್ಲದೆ ‘ಶ್ರೀಕೃಷ್ಣ’ ಎಂಬ ಇನ್ನೊಂದು ಹೊಸ ಚಿತ್ರವನ್ನು ಮಾಡಿ ಮುಗಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಚಿತ್ರವು ಮೇ ತಿಂಗಳಲ್ಲಿ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ‘ಉಧೋ ಉಧೋ ಯಲ್ಲವ್ವ …’ ಎಂದು ಸಾಗುವ ಹಾಡಿಗೆ ಎಂ.ಎಸ್. ತ್ಯಾಗರಾಜ್ ಸಾಹಿತ್ಯ ಬರೆದು, ....