*ವಸಿಷ್ಠ ಸಿಂಹ ಅಭಿನಯದ ‘ಕಡಲ್ ಕೋಟೆ’ ಚಿತ್ರ ಪ್ರಾರಂಭ* ಶ್ರೀ ಕ್ಷೇತ್ರ ಗಣೇಶಪುರದ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ಅದ್ದೂರಿ ಚಾಲನೆ. ಜಾನಕಿ ಕಂಬೈನ್ಸ್ ಲಾಂಛನದಲ್ಲಿ ಧರ್ಮೇಂದ್ರ ನಿರ್ಮಿಸುತ್ತಿರುವ, ರಂಜಿತ್ ಕುಮಾರ್ ಗೌಡ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಮತ್ತು ವಸಿಷ್ಠ ಸಿಂಹ ನಾಯಕನಾಗಿ ಅಭಿನಯಿಸುತ್ತಿರುವ ‘ಕಡಲ್ ಕೋಟೆ’ ಚಿತ್ರದ ಮುಹೂರ್ತ ಇತ್ತೀಚೆಗೆ, ಸುರತ್ಕಲ್ನ ಶ್ರೀ ಕ್ಷೇತ್ರ ಗಣೇಶಪುರದ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ನಡೆಯಿತು. ಖ್ಯಾತ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಮಂಗಳೂರಿನ ಲೋಕಾಯುಕ್ತ ಎಸ್.ಪಿ ಯಾಗಿರುವ ಬಿ.ಪಿ. ದಿನೇಶ್ ....
ಬಿಡುಗಡೆಯಾಯ್ತು ಲವ್ಮಾಕ್ಟೇಲ್೩ ಚಿತ್ರದ ಟ್ರೈಲರ್! ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ ನಟಿಸಿರುವ ಚಿತ್ರ ಲವ್ ಮಾಕ್ಟೇಲ್೩. ಮಾರ್ಚ್ ೧೯ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಲವ್ ಮಾಕ್ಟೇಲ್ ಮೊದಲ ಆವೃತ್ತಿಯ ಟ್ರೈಲರ್ ಅನ್ನು ಕಿಚ್ಚಾ ಸುದೀಪ್ ಬಿಡುಗಡೆಗೊಳಿಸಿದ್ದರು. ಎರಡನೇ ಆವೃತ್ತಿಯ ಟ್ರೈಲರ್ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಕಡೆಯಿಂದ ಬಿಡುಗಡೆಗೊಂಡಿತ್ತು. ಆದರೆ, ಮೂರನೇ ಆವೃತ್ತಿಯ ಈ ಟ್ರೈಲರ್ ಅನ್ನು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಪುತ್ರಿ ಪರಿ ಬಿಡುಗಡೆಗೊಳಿಸಿರುವುದು ವಿಶೇಷ. ಈ ಟ್ರೈಲರ್ ಬಿಡುಗಡೆಯ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಹಾಗೂ ಈ ಚಿತ್ರಕ್ಕೊಂದು ಹಾಡನ್ನು ಬರೆದಿರುವ ಶಶಾಂಕ್ ಮತ್ತು ....
ಮಾರ್ಚ್ 19ರಂದು ಬಿಡುಗಡೆಗೊಳ್ಳಲಿದೆ ಲವ್ ಮಾಕ್ಟೇಲ್3!
ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗುತ್ತಲೇ, ಆ ದಿನಾಂಕದಂದು ಲವ್ ಮಾಕ್ಟೇಲ್3 ಚಿತ್ರವನ್ನು ಬಿಡುಗಡೆಗೊಳಿಸಲು ಡಾರ್ಲಿಂಗ್ ಕೃಷ್ಣ ಅಣಿಯಾಗಿದ್ದಾರೆ. ಯುಗಾದಿಯ ರಜೆ, ಅದರ ಬೆನ್ನಲ್ಲಿಯೇ ಶುರುವಾಗೋ ವೀಕೆಂಡ್ ಸೇರಿದಂತೆ ಮಾರ್ಚ್ 19 ಎಲ್ಲ ರೀತಿಯಿಂದಲೂ ಸಕಾರಾತ್ಮಕವಾಗಿರುವ ಮುಹೂರ್ತ. ಅಂಥಾ ದಿನಾಂಕದಂದು ಟಾಕ್ಸಿಕ್ ಬಿಡುಗಡೆಗೊಳ್ಳದಿದ್ದರೂ, ಅದೇ ದಿನ ಲವ್ ಮಾಕ್ಟೇಲ್ ಚಿತ್ರವನ್ನು ತೆರೆಗಾಣಿಸಲು ಕೆವಿಎನ್ ಸಂಸ್ಥೆ ತೀರ್ಮಾನಿಸಿದೆ.
*'ಪ್ರೇಮದ ಊರಲಿ’ ಟೀಸರ್ ರಿಲೀಸ್..ಇಬ್ಬರು ನಾಯಕಿಯರ ಜೊತೆ ಶ್ರೀರಾಮ್ ಯಾನ...* *ರಂಗಾಯಣ ರಘು-ಶ್ರೀರಾಮ್ ನಟನೆಯ ಪ್ರೇಮದ ಊರಲಿ ಟೀಸರ್ ರಿಲೀಸ್* ಈ ಹಿಂದೆ ಅಕ್ಷಿ ಸಿನಿಮಾ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ಮನೋಜ್ ಕುಮಾರ್ ಹೊಸ ಕಥೆಯೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ಮ್ಯೂಸಿಕ್ ಲವ್ ಸ್ಟೋರಿ ಕಥೆ ಹೇಳೋದಿಕ್ಕೆ ಹೊರಟಿದ್ದಾರೆ. ಈ ಸಿನಿಮಾಗೆ ಪ್ರೇಮದ ಊರಲಿ ಎಂಬ ಟೈಟಲ್ ಇಡಲಾಗಿದ್ದು, ನಿನ್ನೆ ಬೆಂಗಳೂರಿನ ಉತ್ಸವ್ ಲೆಗಸಿಯಲ್ಲಿ ಟೀಸರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಮಾತನಾಡಿದ ರಂಗಾಯಣ ರಘು, ತಪ್ಪುಗಳನ್ನು ಮಾಡ್ತಾ ಹೋಗಿ ಜೀವನ ಕಲಿಯುವ ಪಾತ್ರದಲ್ಲಿ ನಾನು ನಟಿಸಿದ್ದೇನೆ. ಶ್ರೀ ಮೊದಲು ಫೋನ್ ಮಾಡಿ ಹಳ್ಳಿ ಕಥೆ ಇದು ಹೇಳಿದರು. ....
*ಮಕ್ಕಳು ಮನಸ್ಸು ಮಾಡಿದರೆ ಏನನ್ನಾದರೂ ಮಾಡಬಲ್ಲರು* ಮಕ್ಕಳ ಚಿತ್ರ *’ಪಂಚ ರತ್ನಗಳು’* ಚಿತ್ರದ ಟ್ರೇಲರ್ ಮತ್ತು ಹಾಡುಗಳ ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಪ್ರದರ್ಶಕ ಮತ್ತು ವಿತರಕರಾಗಿರುವ *ಜಿ.ಆರ್.ನಾರಾಯಣ ಗೌಡ ಹೊಸ ಅನುಭವ ಎನ್ನುವಂತೆ ಶ್ರೀ ಕ್ಯಾಲಮ್ಮ ದೇವಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ* ಮಾಡಿದ್ದಾರೆ. ಒಂದಷ್ಟು ಚಿತ್ರಗಳಲ್ಲಿ ನಟನೆ ಮಾಡಿರುವ ಮೈಸೂರು ಮೂಲದ ಗಾಯಕ *ಗೌತಮ್.ಆರ್ ಚಿತ್ರಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ, ಮೂರು ಹಾಡುಗಳಿಗೆ ಸಾಹಿತ್ಯ ಬರೆದು ಎರಡನೇ ಬಾರಿ ನಿರ್ದೇಶನದ* ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ತಾರಾಗಣದಲ್ಲಿ ಚಿಣ್ಣರುಗಳಾದ ಪ್ರಥಮ್, ಯಶಸ್, ....
*'ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಕೇಂದ್ರ ಸಚಿವ ವಿ. ಸೋಮಣ್ಣ ಸಾಥ್* *ಕೇಂದ್ರ ಸಚಿವ ವಿ. ಸೋಮಣ್ಣ ಕೈ ಯಲ್ಲಿ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ರಿಲೀಸ್* *ಸಾಮಾಜಿಕ ಕಳಕಳಿಯ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಸಚಿವ ವಿ. ಸೋಮಣ್ಣ ಮೆಚ್ಚುಗೆ* *’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ* *ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದತ್ತ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ* ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. ಇದೀಗ ಈ ಸಿನಿಮಾ ಸದ್ದಿಲ್ಲದೆ ತನ್ನ ....
"ಕವಳ" ನೆತ್ತರಿನ ಕಥೆ .. ಈ ಚಿತ್ರಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ ರಾಧಾಕೃಷ್ಣ ಆರ್ಟ್ಸ್ ಹಾಗೂ ಡ್ರೀಮ್ ವರ್ಲ್ಡ್ ಸಿನಿಮಾಸ್ ಮೂಲಕ ಲೋಕೇಶ್ ಬಿ. ಹಾಗೂ ಅಡವಯ್ಯ ಪೂಜಾರ್ ಅವರ ನಿರ್ಮಾಣದ ಕವಳ ಚಿತ್ರದ ಮುಹೂರ್ತ ಸಮಾರಂಭ ನಗರದ ಕಾಡು ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಕವಳ ಚಿತ್ರಕ್ಕೆ ಚಾಲನೆ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಹಿಂದೆ ಆರ್.ಎಕ್ಸ್.ಸೂರಿ, ಭೈರಾದೇವಿ ಚಿತ್ರಗಳನ್ನು ನಿರ್ದೇಶಿಸಿದ್ದ ಶ್ರೀ ಜೈ ಅವರು ಈ ಚಿತ್ರದ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ....
: *ಅದ್ದೂರಿಯಾಗಿ ನಡಿತು ಸಿಂಹಪುರಿಯ ಸಿಂಹ ಚಿತ್ರದ ಟ್ರೈಲರ್ ಆಗಿ ಆಡಿಯೋ ಲಾಂಚ್*
ಇತ್ತೀಚಿಗೆ ಟೀಸರ್ ಹಾಗೂ ಒಂದು ಸಾಂಗ್ ಅನ್ನು ಬಿಡುಗಡೆ ಮಾಡಿ ಕುತೂಹಲ ಮೂಡಿಸಿದ ಚಿತ್ರ “ಸಿಂಹಪುರಿಯ ಸಿಂಹ “ ಒಂದು ರಹಸ್ಯ ಕಥೆಯೊಂದಿಗೆ ಬಿಡುಗಡೆ ಸಜ್ಜಾಗಿದೆ ಸಿಂಹಪುರಿಯ ಚಿತ್ರತಂಡ .ಚಿತ್ರದ ನಾಯಕ ನಟರಾಗಿ ಕೆ ವೈ ಮೂರ್ತಿಯವರು ಅಭಿನಯಿಸಿದ್ದು ,ನಾಯಕಿಯಾಗಿ ಸೌಜನ್ಯ ಅಭಿನಯಿಸಿದ್ದಾರೆ ಇನ್ನ ಚಿತ್ರದ ವಿಲನ್ಗಳಾಗಿ ಸುಧೀನ್ ಕುಮ್ಟ & ನಿಲೇಶ್ ಗೌಡ ಅಭಿನಯಿಸಿದ್ದು . ಸಹಕಲಾವಿದರಾಗಿ ಶಂಕರ್ ಭಟ್, ಉಮೇಶ್, ಬ್ಯಾಂಕ್ ಜನಾರ್ಧನ್, ಜೂನಿಯರ್ ದ್ವಾರಕೀಶ್ ,ಪದ್ಮ ವಸಂತಿ, ರೇಖಾದಾಸ್ ,ಪ್ರಸನ್ನ ಹಾಗೂ ಮುತ್ತುರಾಜ್ ಇನ್ನು ಹಲವು ಕಲಾವಿದರು ಅಭಿನಯಿಸಿದ್ದಾರೆ.
*ಫೆಬ್ರವರಿ 27 ರಂದು ಧನ್ವೀರ್ ಅಭಿನಯದ ಬಹು ನಿರೀಕ್ಷಿತ "ಹಯಗ್ರೀವ" ಚಿತ್ರ ತೆರೆಗೆ* . ಕೆ.ವಿ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಪದ್ಮ ಸಮೃದ್ಧಿ ಮಂಜುನಾಥ್ ನಿರ್ಮಿಸಿರುವ, ರಘುಕುಮಾರ್ ಓ.ಆರ್ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಹಯಗ್ರೀವ" ಚಿತ್ರ ಫೆಬ್ರವರಿ 27 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರರಂಗದ ಸದಸ್ಯರು ಮಾತನಾಡಿದರು. "ಹಯಗ್ರೀವ" ನಮ್ಮ ಸಂಸ್ಥೆಯ ಮೂರನೇ ಚಿತ್ರ ಎಂದು ....
*ಮಹಾ ಶಿವರಾತ್ರಿ ಸಂದರ್ಭದಲ್ಲಿ "ಸರ್ವಾಂತರ್ಯಾಮಿ”ಚಿತ್ರದ ಶಿವತಾಂಡವದ ಹಾಡು ಬಿಡುಗಡೆ* *ಶಿವನ ಹಾಡಿನ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ ಚಿತ್ರತಂಡ* . ರಂಗಭೂಮಿ ಹಿನ್ನೆಲೆ ಇರುವ ರಂಗಸ್ವಾಮಿ ಕಪಿನಿಪಾಳ್ಯ ನಿರ್ದೇಶನದ, ಹಿತ ಆರ್ ಗೌಡ ನಿರ್ಮಾಣದ “ಸರ್ವಾಂತರ್ಯಾಮಿ” ಎಲ್ಲರ ಕೈಯಲ್ಲೂ ನಾನೇ ಸ್ವಾಮಿ’ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಪೂರ್ಣಗೊಂಡಿದೆ. ಚಿತ್ರಕ್ಕೆ ನಿರ್ದೇಶಕ ಹಾಗು ಗೀತರಚನೆಕಾರ ಕೆ.ರಾಮ್ ನಾರಾಯಣ್ ಬೆನ್ನೆಲುಬಾಗಿ ನಿಂತಿದ್ದಾರೆ ಶಿವರಾತ್ರಿಯ ಹಿನ್ನೆಲೆಯಲ್ಲಿ ಶಿವನ ಬಗ್ಗೆ ನಿರ್ದೇಶಕ ರಂಗಸ್ವಾಮಿ ಅವರೆ ಬರೆದಿರುವ ಶಿವನ ಕುರಿತಾದ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಚಾರ ಕಾರ್ಯ ....
*ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ "ಶಿಖಂಡಿ"* . *ಪೋಲಾ ಪ್ರವೀಣ್ ಕುಮಾರ್ ನಿರ್ಮಾಣದ ಈ ಚಿತ್ರಕ್ಕೆ ಗುರುಮೂರ್ತಿ ವಿ ನಿರ್ದೇಶನ* . ಈ ಹಿಂದೆ ’ಮಾರಕಾಸ್ತ್ರ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಗುರುಮೂರ್ತಿ ವಿ, ಈಗ ವಿಭಿನ್ನ ಕಥಾಹಂದರ ಹೊಂದಿರುವ "ಶಿಖಂಡಿ" ಚಿತ್ರವನ್ನು ನಿರ್ದೇಶಿಸಿದ್ದಾರೆ. ಪೋಲಾ ಪ್ರವೀಣ್ ಕುಮಾರ್ ಅವರು ಪೋಲಾ ಮೂವೀಸ್ ಮೂಲಕ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮೋಷನ್ ಪೋಸ್ಟರ್ ಅನಾವರಣವಾಯಿತು. ನಿರ್ಮಾಪಕ ಸಂಜಯ್ ಗೌಡ ಹಾಗೂ ನಿರ್ದೇಶಕರಾದ ಜಡೇಶ್ ಕೆ ಹಂಪಿ, ನವೀನ್ ರೆಡ್ಡಿ "ಶಿಖಂಡಿ" ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ....
ದೇವಸಸ್ಯ ಚಿತ್ರೀಕರಣ ಮುಕ್ತಾಯ ಚಿತ್ರದಲ್ಲಿ ಸಿದ್ದಿ ಸಂಸ್ಕೃತಿಯ ಅನಾವರಣ ಸಿರ್ಸಿ ತಾಲ್ಲೂಕು ಸುತ್ತ ಮುತ್ತ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಸಿದ್ದಿ ಜನಾಂಗದ ಸಂಸ್ಕೃತಿ, ಆಚಾರ, ವಿಚಾರಗಳ ಕುರಿತು ನಿರ್ದೇಶಕ ಕಾರ್ತೀಕ್ ಭಟ್ ಕಥಾಹಂದರ ಹೆಣೆದಿರುವ ಚಿತ್ರ ದೇವಸಸ್ಯ. ಅಪರೂಪದ ಗಿಡವೊಂದರ ಸುತ್ತ ಈ ಚಿತ್ರಕಥೆ ಸಾಗಲಿದೆ. ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ಅನಂತ ಫಿಲಂಸ್ ಅಡಿ ಅನಂತಮೂರ್ತಿ ಎಂ.ಹೆಗಡೆ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಕಾರ್ತೀಕ್ ಭಟ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದ ಕೊನೆಯ ದಿನದ ಚಿತ್ರೀಕರಣ ಮಾಗಡಿ ರಸ್ತೆಯಲ್ಲಿರುವ ಪುಟ್ಟಣ್ಣ ....
*"ತಮ್ಮ ಸುಖಾಗಮನ ಬಯಸುವ". ಗೋಲ್ಡನ್ ಸ್ಟಾರ್ ಗಣೇಶ್, ರಾಮೇನಹಳ್ಳಿ ಜಗನ್ನಾಥ ಹಾಗೂ ವೈಷ್ಣವಿ ಫಿಲಂಸ್* . *ಮಹಾ ಶಿವರಾತ್ರಿಯ ಶುಭ ದಿನ ಆರಂಭವಾಯಿತು ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರ* . ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಸೆಳೆದಿರುವ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹಾಗೂ "ಹೊಂದಿಸಿ ಬರೆಯಿರಿ", "ತೀರ್ಥರೂಪ ತಂದೆಯವರಿಗೆ" ಅಂತಹ ಉತ್ತಮ ಚಿತ್ರಗಳ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ನೂತನ ಚಿತ್ರ "ತಮ್ಮ ....
*ಯುಗಳಗೀತೆಯ ಚಿತ್ರೀಕರಣದೊಂದಿಗೆ ಪ್ರಜ್ವಲ್ ದೇವರಾಜ್ ಅಭಿನಯದ "ಚೀತಾ" ಚಿತ್ರದ ಚಿತ್ರೀಕರಣ ಪೂರ್ಣ* * . *ಆರಂಭದಿಂದಲೂ ಕುತೂಹಲ ಮೂಡಿಸಿದೆ ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ* . ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ - ಮೇಘ ಶೆಟ್ಟಿ ನಾಯಕ - ನಾಯಕಿಯಾಗಿ ನಟಿಸಿರುವ "ಚೀತಾ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಾಕ್ಲೈನ್ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಮೇಘ ಶೆಟ್ಟಿ ಅಭಿನಯದಲ್ಲಿ ಮೂಡಿಬಂದ ಯುಗಳಗೀತೆಯೊಂದರ ಚಿತ್ರೀಕರಣದೊಂದಿಗೆ ....
ಬೆಳ್ಳಿತೆರೆ ಮೇಲೆ ರವಿ ಬೆಳಗೆರೆ ಅವರ ಭೀಮಾತೀರದ ಹಂತಕರು.. ಚಿತ್ರಕ್ಕೆ ನರೇಂದ್ರಬಾಬು ನಿರ್ದೇಶನ ಸಾರಥ್ಯ ತೊಂಭತ್ತರ ದಶಕದಲ್ಲಿ ಭೀಮಾತೀರದ ವಿಜಯಪುರ ಜಿಲ್ಲೆಯ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಘನಘೋರ ರಕ್ತಚರಿತ್ರೆಯನ್ನು ತೆರೆಯ ಮೇಲೆ ತರಲು ಹೊರಟಿದ್ದಾರೆ ನಿರ್ದೇಶಕ ನರೇಂದ್ರಬಾಬು. ಕಬಡ್ಡಿ ಬಾಬು ಎಂದೇ ಹೆಸರಾದ ಇವರು ಸಂತೆಯಲ್ಲಿ ನಿಂತ ಕಬೀರ, ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಮುಂತಾದ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದರು. ಭೀಮಾತೀರದ ಹಂತಕರು ಪತ್ರಕರ್ತ ರವಿ ಬೆಳಗೆರೆ ಅವರ ಮಹಾನ್ ಕೃತಿ. ಇದೇ ಪುಸ್ತಕವನ್ನಾಧರಿಸಿ ಬಾಬು ಈ ಚಿತ್ರವನ್ನು ಕಟ್ಟಿಕೊಡಲು ಹೊರಟಿದ್ದಾರೆ. ’ಭೀಮಾತೀರದ ಹಂತಕರು’ ಚಿತ್ರದ ಟೈಟಲ್ ....
*ಮತ್ತೆ ಮಳೆ ಹೊಯ್ಯುತ್ತಿದೆ ಹಾಡುಗಳು ಬಿಡುಗಡೆ* *’ಮತ್ತೆ ಮಳೆ ಹೊಯ್ಯುತ್ತಿದೆ’* ಸಿನಿಮಾದ ಎರಡು ಹಾಡುಗಳ ಬಿಡುಗಡೆ ಸಮಾರಂಭವು ಉತ್ಸವ್ ಲೆಗಸಿದಲ್ಲಿ ಅದ್ದೂರಿಯಾಗಿ ನಡೆಯಿತು. ’ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹವಿದೆ. ಮೂರು ದಶಕಗಳಿಂದ ಸಹಾಯಕ ಕಲಾ ನಿರ್ದೇಶಕರಾಗಿರುವ ಗಂಗಾಧರ್ ಶ್ರೀ ಗವಿರಂಗನಾಥ ಸ್ವಾಮಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಪತ್ನಿ *ಸುಮ ಹೆಸರಿನಲ್ಲಿ ಬಂಡವಾಳ* ಹೂಡುತ್ತಿದ್ದಾರೆ. ಶೃತಿ ಅನಿಲ್ಕುಮಾರ್ ಸಹ ನಿರ್ಮಾಪಕರು ಹಾಗೂ ಪ್ರಾಧ್ಯಾಪಕರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ *ಪರಮ್ಗುಬ್ಬಿ ನಿರ್ದೇಶನ* ಮಾಡಿದ್ದಾರೆ. ಚಿತ್ರಕಥೆ-ಸಂಭಾಷಣೆ-ಸಾಹಿತ್ಯ ಕಬ್ಬಡಿ ....
*ಶಿವನ ಮತ್ತೊಂದು ಹೆಸರೇ ತ್ರಿಕಾರಂ* *’ತ್ರಿಕಾರಂ’* ಚಿತ್ರದ ಮೊದಲ ಹಾಡು ವೈರಲ್ ಆಗಿದ್ದರಿಂದ ತಂಡಕ್ಕೆ ಸಂತಸ ತಂದಿತ್ತು. ಇದರ ಪ್ರೇರಣೆಯಿಂದಲೇ, ಈಗ ಪ್ರೇಮಿಗಳ ದಿನಾಚರಣೆ ಅಂಗವಾಗಿ, ಎರಡನೇ ಹಾಡಿನ ಬಿಡುಗಡೆ ಕಾರ್ಯಕ್ರಮ ಉತ್ಸವ್ ಲೆಗೆಸಿಯಲ್ಲಿ ಅದ್ದೂರಿಯಾಗಿ ನಡೆಯಿತು. ರಾಜಕೀಯ ಧುರೀಣ ರವೀಂದ್ರ ಮತ್ತು ನಟ ಶಿವರಾಜ್.ಕೆ.ಆರ್.ಪೇಟೆ ಹಾಗೂ ನಿರ್ದೇಶಕ ಖದರ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಪಿನ್2ಪಿನ್ ಮ್ಯೂಸಿಕ್ ಸಂಸ್ಥೆಯಿಂದ ಹೊರಬಂದಿರುವ ’ಸೀದಾ ನಿಂತರೂ ಲೋಕ ಯಾಕೆ ಉಲ್ಟ ಕಾಣ್ತದೆ’ ಸಾಲಿನ ಗೀತೆಗೆ ಕೇಶು-ಚೇತನ್ ಬರವಣಿಗೆ, ರಾಜೇಶ್ ಕೃಷ್ಣನ್ ಧ್ವನಿಗೆ, ವಿವೇಕ್ ಚಕ್ರವರ್ತಿ ....
*ದಿ ರೈಸ್ ಆಫ್ ಅಶೋಕ ಟ್ರೇಲರ್ ಅನಾವರಣ...ಸತೀಶ್ ನೀನಾಸಂ ಸಿನಿಮಾಗೆ ಚಂದನವನದ ತಾರೆಯರು ಸಾಥ್* *ದಿ ರೈಸ್ ಆಫ್ ಅಶೋಕ ಟ್ರೇಲರ್ ಬಿಡುಗಡೆ...ಸತೀಶ್ ನೀನಾಸಂ ಚಿತ್ರಕ್ಕೆ ಸ್ಯಾಂಡಲ್ ವುಡ್ ಸ್ಟಾರ್ಸ್ ಬೆಂಬಲ* *ಟ್ರೇಲರ್ ನಲ್ಲಿ ಕಿಚ್ಚು ಹಚ್ಚಿದ ಅಶೋಕ..ಇದೇ ತಿಂಗಳ 27ಕ್ಕೆ ಸತೀಶ್ ನೀನಾಸಂ ಸಿನಿಮಾ ರಿಲೀಸ್* ಸತೀಶ್ ನೀನಾಸಂ ಅಭಿನಯ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 27ರಂದು ಬಹು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ....
*ಉತ್ತರ ಕರ್ನಾಟಕ ಭಾಗದ ಮೊದಲ ವೆಬ್ ಸಿರೀಸ್ ರಾಕ್ಷಸ ಪ್ರೀಮಿಯರ್ ಶೋ.. ಕ್ರೈಮ್ ಸೈಕಲಾಜಿಕಲ್ ಸರಣಿ ಯಾವಾಗ, ಎಲ್ಲಿ ಸ್ಟ್ರೀಮಿಂಗ್?* *ನಾಳೆಯಿಂದ zee5ನಲ್ಲಿ ರಾಕ್ಷಸ ವೆಬ್ ಸಿರೀಸ್ ಸ್ಟ್ರೀಮಿಂಗ್..* ಪ್ರತಿಷ್ಟಿತ ಒಟಿಟಿಗಳಲ್ಲಿ ಒಂದಾದ zee5 ಕನ್ನಡದಲ್ಲಿ ವೆಬ್ ಸಿರೀಸ್ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಈಗಾಗಲೇ ಅಯ್ಯನ ಮನೆ, ಮಾರಿಗಲ್ಲು ಸೇರಿದಂತೆ ಹಲವು ವೆಬ್ ಸರಣಿಗಳನ್ನು ಪ್ರೇಕ್ಷಕರ ಮಡಿಲಿಗೆ ಹಾಕಿದೆ. ಇದೀಗ ಇದೇ ತಿಂಗಳ 20ರಿಂದ zee5ನಲ್ಲಿ ರಾಕ್ಷಸ ವೆಬ್ ಸಿರೀಸ್ ಪ್ರಸಾರವಾಗಲಿದೆ. ನಟ ವಿಜಯ್ ರಾಘವೇಂದ್ರ ಅವರ ಚೊಚ್ಚಲ ವೆಬ್ ಸರಣಿ ಇದಾಗಿದೆ. ಮಲಪ್ರಭಾ ನದಿ ತೀರದ ನಿಗೂಢ ಮೊಸಳೆ ದಾಳಿಗಳ ಸುತ್ತ ಈ ಕಥೆಯನ್ನು ಹೆಣೆಯಲಾಗಿದೆ. ....
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್ ಮಾರ್ಚ್ ತಿಂಗಳಲ್ಲಿ ತೆರೆಗೆ ಮೆಜೆಸ್ಟಿಕ್, 25 ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವೀ ಪ್ರದರ್ಶನ ಕಂಡ ಚಿತ್ರ. ಇದೀಗ ಅದೇ ಹೆಸರಿನ ಮತ್ತೊಂದು ಚಿತ್ರ ನಿರ್ಮಾಣವಾಗಿದ್ದು, ಆ ಚಿತ್ರದಲ್ಲೂ ಈಗಿನ ಮೆಜೆಸ್ಟಿಕ್ ಏರಿಯಾದಲ್ಲಿ ಏನೇನೆಲ್ಲ ವ್ಯವಹಾರಗಳು, ದಂದೆಗಳು ನಡೆಯುತ್ತವೆ ಎಂಬುದನ್ನು ರಿಯಲ್ಲಾಗಿ ತೆರೆಯ ಮೇಲೆ ತೋರಿಸುವ ಪ್ರಯತ್ನ ಮಾಡಲಾಗಿದೆ. ಈ ಚಿತ್ರಕ್ಕೆ ಮೆಜೆಸ್ಟಿಕ್- -2 ಎಂಬ ಟೈಟಲ್ ಇಡಲಾಗಿದ್ದು ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಬುಧವಾರ ನೆರವೇರಿದೆ. ಅಮ್ಮಾ ಎಂಟರ್ಪ್ರೈಸಸ್ ಮೂಲಕ ಚಿತ್ರದುರ್ಗದ ಹೆಚ್.ಆನಂದಪ್ಪ ಅವರು ಬಿಗ್ ಬಜೆಟ್ ನಲ್ಲಿ ನಿರ್ಮಿಸಿರುವ ಆ ....