*ಬಹು ನಿರೀಕ್ಷಿತ ಮಲ್ಟಿಸ್ಟಾರರ್ "45" ಚಿತ್ರದ "AFRO ಟಪಾಂಗ" ಪ್ರಮೋಷನ್ ಸಾಂಗ್ ಬಿಡುಗಡೆ.* . *ಉಗಾಂಡ ದೇಶದ ಜಿಟೊ ಕಿಡ್ಸ್ ಜೊತೆಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್* . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರಸ್ತುತ "45" ಚಿತ್ರದ "AFRO ಟಪಾಂಗ" ಅದ್ದೂರಿ ....
*ದುನಿಯಾ ವಿಜಯ್ - ರಚಿತರಾಮ್ ಅಭಿನಯದ ಬಹು ನಿರೀಕ್ಷಿತ "ಲ್ಯಾಂಡ್ ಲಾರ್ಡ್" ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.* *ಕನ್ನಡ ರಾಜ್ಯೋತ್ಸವದಂದು ಬಿಡುಗಡೆಯಾಯಿತು ಜಡೇಶ್ ಕೆ ಹಂಪಿ ನಿರ್ದೇಶನದ ಹಾಗೂ ಸಾರಥಿ ಫಿಲಂಸ್ ನಿರ್ಮಾಣದ ಈ ಚಿತ್ರದ ದಿ ಸರ್ವೈವರ್ ಟೀಸರ್* . ನಾಡಿನೆಲ್ಲೆಡೆ ರಾಜ್ಯೋತ್ಸವದ ಸಂಭ್ರಮ. ಈ ಶುಭದಿನದಂದು ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ - ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್ ಅಭಿನಯದ ’ಲ್ಯಾಂಡ್ ಲಾರ್ಡ್’ ಚಿತ್ರದ ಸರ್ವೈವರ್ ಟೀಸರ್ ಬಿಡುಗಡೆ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನೆರವೇರಿತು. ಟೀಸರ್ ಮೂಲಕ ಚಿತ್ರತಂಡ ಬಿಡುಗಡೆಯ ....
*ತನುಷ್ ಶಿವಣ್ಣ ಅಭಿನಯದ "ಬಾಸ್" ಚಿತ್ರಕ್ಕೆ ಚಿತ್ರೀಕರಣ ಪೂರ್ಣ* . ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ, ವಿ.ಲವ ನಿರ್ದೇಶನದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ "ಬಾಸ್" ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. "ಬಾಸ್", ಕ್ರೈಮ್ ಥ್ರಿಲ್ಲರ್ ಆಧಾರಿತ ಚಿತ್ರ. ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆದಿದೆ. ಕೆಲವೇ ದಿನಗಳಲ್ಲಿ ಟೀಸರ್ ಬಿಡುಗಡೆಯಾಗಲಿದೆ. ಡಿಸೆಂಬರ್ ನಲ್ಲಿ ತೆರೆಗೆ ತರುವ ಪ್ರಯತ್ನ ....
ರಘು ಕೋವಿ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ಮೋಷನ್ ಪೋಸ್ಟರ್ ರಿಲೀಸ್ ರೂಬಿ ಸಿನಿಮಾದ ಟೈಟಲ್ ಮೋಷನ್ ಪೋಸ್ಟರ್ ಅನಾವರಣ... ಇದು ರಘು ಕೋವಿ ಚೊಚ್ಚಲ ಪ್ರಯತ್ನ ರಾಜ್ಯ ಪ್ರಶಸ್ತಿ ವಿಜೇತ ಬರಹಗಾರ ರಘು ಕೋವಿ ಅವರು ’ರೂಬಿ’ ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಅವರ ಚೊಚ್ಚಲ ಸಿನಿಮಾದ ಟೈಟಲ್ ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬರಹಗಾರ ಹಾಗೂ ನಿರ್ದೇಶಕ ಚಂದ್ರಚೂಡ್ ಸೇರಿದಂತೆ ಇಡೀ ತಂಡ ಭಾಗಿಯಾಗಿತ್ತು. ಟೈಟಲ್ ಮೋಷನ್ ಪೋಸ್ಟರ್ ಬಿಡುಗಡೆ ಬಳಿಕ ಬರಹಗಾರ ಹಾಗೂ ನಿರ್ದೇಶಕ ಚಂದ್ರಚೂಡ್ ಮಾತನಾಡಿ, ರೂಬಿ ಕಥೆ ಹಾಗೂ ಚಿತ್ರತಂಡ ಚೆನ್ನಾಗಿದೆ. ....
ರೋಣ ಚಿತ್ರದ ಟ್ರೈಲರ್ ಮೆಚ್ಚಿದ ಸಿ.ಎಂ ಸಿದ್ದರಾಮಯ್ಯ ಚಿತ್ರತಂಡಕ್ಕೆ ಶುಭಾಶಯ ನವೆಂಬರ್ 7ಕ್ಕೆ ರಾಜ್ಯದಾದ್ಯಂತ ಬಿಡುಗಡೆ *"ರೋಣ" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ. ಪ್ರಭಾಕರ್.* "ನವಂಬರ್ 7ರಂದು ರಂಗಭೂಮಿ ಪ್ರತಿಭೆಗಳ ಸಾರಥ್ಯದಲ್ಲಿ ಸಿದ್ಧವಾಗಿರುವ ರೋಣ ಚಿತ್ರ ಅದ್ದೂರಿಯಾಗಿ ಬಿಡುಗಡೆ". ಬೆಳ್ಳಿ ಪರದೆ ಮೇಲೆ ಯುವ ಪ್ರತಿಭೆಗಳ ವಿಭಿನ್ನ ಕಥಾನಕ ರೋಣ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ನಗರದ ಜಿಟಿ ಮಾಲ್ ನಲ್ಲಿರುವ ಉತ್ಸವ್ ಲೆಗಸಿಯಲ್ಲಿ ಆಯೋಜನೆಗೊಂಡಿದ್ದು , ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ಪ್ರಭಾಕರ್ ರವರು ಆಗಮಿಸಿ ....
*ನಿಷಿದ್ಧ ಪಾಲಿಸಿದರೆ ಬದುಕು ಸುಖಮಯ* ಹೊಸ ಪ್ರತಿಭೆಗಳ *ನಿಷಿದ್ಧ* ಚಿತ್ರವು ತೆರೆಗೆ ಬರಲು ಅಣಿಯಾಗಿದೆ. ಪ್ರಚಾರದ ಕೊನೆ ಹಂತವಾಗಿ ಟ್ರೇಲರ್ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಶ್ರೀ ಅಂಜನಿ ತನಯ ಮೂವೀಸ್ ಬ್ಯಾನರ್ ಅಡಿಯಲ್ಲಿ ಕೂರ್ಗ್ ಮೂಲದ ಉದ್ಯಮಿ *ಸಿ.ಬಿ.ಬೋಪಯ್ಯ (ಜಗನ್) ಬಂಡವಾಳ* ಹೂಡಿದ್ದಾರೆ. ಹಲವು ನಿರ್ದೇಶಕರ ಬಳಿ ಕೆಲಸ ಕಲಿತಿರುವ *ಸುಸಮಯ ದಿನೇಶ್ ಬರವಣಿಗೆ ಮತ್ತು ಆಕ್ಷನ್ ಕಟ್* ಹೇಳಿದ್ದಾರೆ. ನಾಯಕ ಅಂಜನ್ತಮ್ಮಯ್ಯನನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವ ಯುವತಿಯರಾಗಿ ಶ್ವೇತಾಪೂಜಾರಿ ಮತ್ತು ಶೃತಿರಮೇಶ್ ನಟಿಸಿದ್ದಾರೆ. ಹೀರೋಗೆ ಮಾರ್ಗದರ್ಶನ ನೀಡುವ ಪಾತ್ರದಲ್ಲಿ ....
*ಸಾಲಗಾರರ ಸಹಕಾರ ಸಂಘದ ಮೊದಲ ಹಾಡು ಬಿಡುಗಡೆ* *ಸಾಲಗಾರರ ಸಹಕಾರ ಸಂಘ* ಚಿತ್ರಕ್ಕೆ ಸ್ಯಾಂಡಲ್ವುಡ್ ಅಧ್ಯಕ್ಷ ಶರಣ್ ಕಂಠದಾನ, ಎಂ.ಎಸ್.ತ್ಯಾಗರಾಜ್ ಬರವಣಿಗೆ ಮತ್ತು ರಾಗ ಒದಗಿಸಿರುವ ಶೀರ್ಷಿಕೆ ಗೀತೆಯ ಅನಾವರಣ ಸಮಾರಂಭವು ಕಿಕ್ಕಿರಿದ ಎಂಎಂಬಿ ಲೆಗೆಸಿ ಹಾಲ್ದಲ್ಲಿ ಅದ್ದೂರಿಯಾಗಿ ನಡೆಯಿತು. ಜ್ಯೋತಿಷ್ ವಿದ್ವಾನ್ ಡಾ.ಶ್ರೀಧರ್ ಗುರೂಜಿ ಮತ್ತು ನಟಿ ಬೃಂದಾಆಚಾರ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಸ್ಎನ್ಎಲ್ಎನ್ಎಸ್ ಎಂಟರ್ಟೈನರ್ಸ್ ಹಾಗೂ ಹವಿಶ್ ಸಿನಿ ಕ್ರಿಯೇಶನ್ಸ್ ಅಡಿಯಲ್ಲಿ *ಕುಮರೇಶ್.ಎ ಮತ್ತು ಸುನೀಲ್ಕುಮಾರ್ (ಪಟ್ಟಣಗೆರೆ) ಜಂಟಿಯಾಗಿ ನಿರ್ಮಾಣ* ಮಾಡಿದ್ದಾರೆ. ರಾಜಣ್ಣ ಪುಟ್ಟೇನಹಳ್ಳಿ, ಚಂದ್ರು ಶಿರಾಳಕೊಪ್ಪ ಸಹ ....
*ನಿರೀಕ್ಷೆ ಹೆಚ್ಚಿಸಿದ ಲವ್ ಯು ಮುದ್ದು ಟ್ರೇಲರ್.. ನವೆಂಬರ್ 7ಕ್ಕೆ ಕೆಮಿಸ್ಟ್ರಿ ಆಫ್ ಕರಿಯಪ್ಪ ನಿರ್ದೇಶಕರ ಹೊಸ ಚಿತ್ರ* *ಕುತೂಹಲ ಹೆಚ್ಚಿಸಿದ ಲವ್ ಯು ಮುದ್ದು ಟ್ರೇಲರ್..ಇದು ಕೆಮಿಸ್ಟ್ರಿ ಆಫ್ ಕರಿಯಪ್ಪ ನಿರ್ದೇಶಕರ ಹೊಸ ಪ್ರಯತ್ನ* ಪ್ರೀತಿಯನ್ನು ಪಡೆದುಕೊಳ್ಳುವ ಶಕ್ತಿ ಇಲ್ಲದೇ ಇದ್ರೆ ಪ್ರೀತಿ ಮಾಡಬಾರದು ಎಂಬ ಎಳೆಯನ್ನು ಇಟ್ಕೊಂಡು ಬರ್ತಿರುವ ಸಿನಿಮಾ ಲವ್ ಯು ಮುದ್ದು. ಕೆಮಿಸ್ಟ್ರಿ ಆಫ್ ಕರಿಯಪ್ಪ ನಿರ್ದೇಶಕ ಕುಮಾರ್ ಅವರ ಹೊಸ ಪ್ರಯತ್ನದ ಈ ಚಿತ್ರವೀಗ ಬಿಡುಗಡೆಗೆ ಸಜ್ಜಾಗಿದೆ. ನವೆಂಬರ್ 7ರಂದು ಲವ್ ಯು ಮುದ್ದು ಸಿನಿಮಾ ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಭರದಿಂದ ಸಾಗಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಟ್ರೇಲರ್ ....
ಕೋಣನ ಧ್ಯಾನದಲ್ಲಿ ಕೋಮಲ್ - ತನಿಷಾ! ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ ನಾಯಕಿ ಪಾತ್ರದ ಜತೆಯಲ್ಲೇ ನಿರ್ಮಾಪಕಿಯಾಗಿಯೂ ಗುರುತಿಸಿಕೊಳ್ಳುತ್ತಿರುವ ಚಿತ್ರವೇ ಕೋಣ. ತನಿಷಾ ಮತ್ತು ಚಿತ್ರದ ನಾಯಕ ಕೋಮಲ್ ಕುಮಾರ್ ಜತೆ ನಡೆಸಿದ ಮಾತುಕತೆಯಲ್ಲಿ ಈ ಜೋಡಿ ಹಂಚಿಕೊಂಡ ವಿಶೇಷ ಮಾಹಿತಿಗಳು ಇಲ್ಲಿವೆ. ನಟಿಯಾಗುವ ಕನಸು ಕಂಡಿದ್ದ ತನಿಷಾ ಕುಪ್ಪಂಡ ತಮಿಳು ಭಾಷೆಯಲ್ಲೂ ಅಭಿನಯಿಸಿದ್ದಾರೆ. ಇಂಥದೇ ಒಂದು ಸಂದರ್ಭದಲ್ಲಿ ಖುಷ್ಬೂ ನಟನೆಯೊಂದಿಗೆ ನಿರ್ಮಾಪಕಿಯಾಗಿಯೂ ಕಾರ್ಯನಿರ್ವಹಿಸುವುದನ್ನು ಕಣ್ಣಾರೆ ಕಾಣುವ ಅವಕಾಶ ಇವರಿಗೆ ದೊರಕಿತ್ತು. ಅಲ್ಲಿ ನಿರ್ಮಾಪಕಿಯಾಗಿ ಖುಷ್ಬೂಗೆ ದೊರಕಿದ ಸ್ಥಾನಮಾನ ಕಂಡ ಬಳಿಕ ತಾನು ಕೂಡ ನಿರ್ಮಾಪಕಿ ಆಗುವಕನಸು ಕಂಡರು. ಇದೀಗ ಕೋಣ ....
*ಅಪ್ಪು ಫ್ಯಾನ್ ಡಮ್ ಆ್ಯಪ್ ಅನಾವರಣ ಮಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್* *ಅಪ್ಪು ಫ್ಯಾನ್ ಡಮ್ ಆ್ಯಪ್ ಲಾಂಚ್..ಡಿಕೆ ಶಿವಕುಮಾರ್ ಸಾಥ್* ಖ್ಯಾತನಟ ದಿ.ಡಾ.ಪುನೀತ್ ರಾಜ್ಕುಮಾರ್ ಅವರು ನಮ್ಮನೆಲ್ಲ ಅಗಲಿ ಇದೇ ಅಕ್ಟೋಬರ್ 29ಕ್ಕೆ ನಾಲ್ಕು ವರ್ಷ ಕಳೆಯುತ್ತಿದೆ. ಈ ಸಂದರ್ಭದಲ್ಲಿ ಪುನೀತ್ ಅವರನ್ನು ಎಐ(ಕೃತಕ ಬುದ್ಧಿಮತ್ತೆ) ಮೂಲಕ ಅಭಿಮಾನಿಗಳಿಗೆ ತೋರಿಸುವ ಸ್ಟಾರ್ ಫ್ಯಾನ್ಡಮ್ ಆ್ಯಪ್ (ಕನ್ನಡದ ಅಪ್ಪು ಪಿಆರ್ಕೆ ಮೊಬೈಲ್ ಆ್ಯಪ್) ಅನ್ನು ಶನಿವಾರ ಖಾಸಗಿ ಹೋಟೆಲ್ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅನಾವರಣಗೊಳಿಸಿದ್ದಾರೆ. ಈ ಸಂದರ್ಭದಲ್ಲಿನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ಸ್ಟಾರ್ ....
*ನಿರೀಕ್ಷೆ ಹೆಚ್ಚಿಸಿದ ’ದಿ ಟಾಸ್ಕ್’ ಟೀಸರ್...ನವೆಂಬರ್ 21ಕ್ಕೆ ರಾಘು ಶಿವಮೊಗ್ಗ ಮೂರನೇ ಪ್ರಯತ್ನ ತೆರೆಗೆ ಎಂಟ್ರಿ* *ರಾಘು ಶಿವಮೊಗ್ಗ ನಿರ್ದೇಶನದ ಮೂರನೇ ಸಿನಿಮಾ ದಿ ಟಾಸ್ಕ್ ಟೀಸರ್ ಅನಾವರಣ* ಬೆಳ್ಳಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿರುವ ರಾಘು ಶಿವಮೊಗ್ಗ ನಿರ್ದೇಶಿಸಿರುವ ಮೂರನೇ ಸಿನಿಮಾ ದಿ ಟಾಸ್ಕ್ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ನವೆಂಬರ್ 21ಕ್ಕೆ ತೆರೆಗೆ ಎಂಟ್ರಿ ಕೊಡಲಿರುವ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ನಿನ್ನೆ ಜಿಟಿ ಮಾಲ್ನಲ್ಲಿ ಜರುಗಿದೆ. ಕಾರ್ಯಕ್ರಮದಲ್ಲಿ ADGP ಎಂ ಚಂದ್ರಶೇಖರ್, ಲಹರಿ ಸಂಸ್ಥೆಯ ಲಹರಿ ವೇಲು, ವಿಷ್ಣು ಸೇನೆಯ ವೀರಕಪುತ್ರ ಶ್ರೀನಿವಾಸ್ , ನಿರ್ದೇಶಕರಾದ ಪವನ್ ಒಡೆಯರ್, ಸಿಂಪಲ್ ಸುನಿ ಹಾಗೂ ....
*ನಾದಬ್ರಹ್ಮ ಹಂಸಲೇಖ ಅವರ ಐದನಿ ಎಂಟರ್ಟೈನ್ಮೆಂಟ್ ಸಂಸ್ಥೆಯ ಐದನಿ ಚಿನ್ನದ ಪದಕ್ಕೆ ಪ್ರಾಗೈತಿಹಾಸಿಕ ತಜ್ಞ ಪ್ರೊ.ರವಿ ಕೋರಿಶೆಟ್ಟರ್ ಆಯ್ಕೆ* *ಈ ಬಾರಿಗೆ ಐದನಿ ಚಿನ್ನದ ಪದಕ್ಕೆ ಪ್ರಾಗೈತಿಹಾಸಿಕ ತಜ್ಞ ಪ್ರೊ.ರವಿ ಕೋರಿಶೆಟ್ಟರ್ ಆಯ್ಕೆ..ಇದು ಹಂಸಲೇಖ ಸಂಸ್ಥೆಯ ಕಾಣಿಕೆ* ನಾದಬ್ರಹ್ಮ ಹಂಸಲೇಖ ಅವರ ಐದನಿ ಎಂಟರ್ಟೈನ್ಮೆಂಟ್ ಸಂಸ್ಥೆಯೂ ಪ್ರತಿ ವರ್ಷ ಒಬ್ಬಬ್ಬೊ ಸಾಧಕರಿಗೆ ಜೀವಮಾನದ ಸಾಧನೆಗಾಗಿ ನೀಡುವ ’ಐದನಿ ಚಿನ್ನದ ಪದಕ’ ನೀಡಿ ಗೌರವುಸುತ್ತಾ ಬಂದಿದೆ. ಈ ಮೊದಲ ಗೌರವವನ್ನು ಡಾ ಶಿವರಾಜ್ ಕುಮಾರ್ ಅವರಿಗೆ, ಎರಡನೆಯದಾಗಿ ಹಿರಿಯ ನಿರ್ದೇಶಕರಾದ ಶ್ರೀ ರಾಜೇಂದ್ರ ಸಿಂಗ್ ಬಾಬು ಅವರಿಗೆ ನೀಡಿತ್ತು. ಇದೀಗ ಮೂರನೆಯವರಾಗಿ ....
*ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಅರ್ಜುನ್ ಯೋಗಿ ನಟನೆಯ "ವರ್ಣ".* ಈಗಾಗಲೇ ನಾಲ್ಕು ಚಿತ್ರಗಳಲ್ಲಿ ನಾಯಕನಾಗಿ ನಟಿಸಿರುವ, ಧಾರಾವಾಹಿಗಳಲ್ಲೂ ಅಭಿನಯಿಸಿರುವ ಅರ್ಜುನ್ ಯೋಗಿ ನಾಯಕನಾಗಿ ನಟಿಸಿರುವ, ದೇವ ಶರ್ಮ ನಿರ್ದೇಶಿಸಿರುವ ಹಾಗೂ ಮಲ್ಲಿನೇನಿ ನವೀನ್ ಚೌಧರಿ ನಿರ್ಮಿಸಿರುವ "ವರ್ಣ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ಮಾಪಕರ ಪುತ್ರ ವರ್ಷನ್ ಚೌಧರಿ ಟ್ರೇಲರ್ ಅನಾವರಣ ಮಾಡಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಹೇಳಿರುವ "ಕರ್ಮಣ್ಯೇವಾಧಿಕಾರಸ್ತೇ ಮಾಫಲೇಷು ಕದಾಚನ" ಎಂಬ ಮಾತೇ ಈ ಚಿತ್ರದ ಕಥೆಗೆ ಸ್ಪೂರ್ತಿ ಎಂದು ಮಾತನಾಡಿದ ನಿರ್ದೇಶಕ ದೇವ ಶರ್ಮ, ಮೊದಲು ಇದನ್ನು ಕಿರುಚಿತ್ರ ....
*ಸೆಟ್ಟೇರಿತು ’ಹಲ್ಕಾ ಡಾನ್’..ಕೆಪಿ ಶ್ರೀಕಾಂತ್ ಹೊಸ ಸಿನಿಮಾಗೆ ಶಿವಣ್ಣ-ಕಿಚ್ಚ-ವಿಜಯ್ ಕುಮಾರ್ ರಚಿತಾ ರಾಮ್ ಸಾಥ್* *ಬಂಡಿ ಮಹಾಕಾಳಿ ಸನ್ನಿಧಿಯಲ್ಲಿ ಹಲ್ಕಾ ಡಾನ್ ಮುಹೂರ್ತ...ಟಗರು-ಸಲಗ ನಿರ್ಮಾಪಕರ ಹೊಸ ಚಿತ್ರಕ್ಕೆ ಶಿವಣ್ಣ-ಸುದೀಪ್-ವಿಜಯ್ ಕುಮಾರ್-ರಚಿತಾ ರಾಮ್ ಶುಭ ಹಾರೈಕೆ* ’ಟಗರು’, ’ಸಲಗ’ ಹಾಗೂ ’ಯುಐ’ ಚಿತ್ರಗಳನ್ನು ನಿರ್ಮಿಸಿರುವ ಕೆಪಿ ಶ್ರೀಕಾಂತ್ ಇದೀಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ವೀನಸ್ ಎಂಟರ್ಟೈನರ್ ಬ್ಯಾನರ್ ಅಡಿಯಲ್ಲಿ ಮೂಡಿ ಬರ್ತಿರುವ ನಾಲ್ಕನೇ ಚಿತ್ರಕ್ಕೆ ಹಲ್ಕಾ ಡಾನ್ ಎಂಬ ಶೀರ್ಷಿಕೆ ಇಡಲಾಗಿದೆ. ಇಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆದಿದೆ. ....
*ಭಾರತಿ ಟೀಚರ್ ಏಳನೇ ತರಗತಿ ಹಾಡುಗಳ ಲೋಕಾರ್ಪಣೆ* *ಭಾರತಿ ಟೀಚರ್ ಏಳನೇ ತರಗತಿ* ಚಿತ್ರದ ಡಾ.ವಿ.ನಾಗೇಂದ್ರ ಪ್ರಸಾದ್ ಒಡೆತನದ ’ಮ್ಯೂಸಿಕ್ ಬಜಾರ್’ ಹೊರತಂದಿರುವ ಐದು ಗೀತೆಗಳ ಬಿಡುಗಡೆ ಕಾರ್ಯಕ್ರಮ ನ್ಯಾಷನಲ್ ಕಾಲೇಜು, ಡಾ.ಹೆಚ್.ನರಸಿಂಹಯ್ಯ ಸಭಾಂಗಣದಲ್ಲಿ ಅದ್ದೂರಿಯಾಗಿ ಶಾಲಾ ಮಕ್ಕಳ ಸಮ್ಮುಖದಲ್ಲಿ ನಡೆದಿದ್ದು ವಿಶೇಷ. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ದಾವಣಗೆರೆ ಮೂಲದ ಡಾ.ವಿ.ವಿಜಯಲಕ್ಷೀ ಮತ್ತು ಉದ್ಯಮಿ ವೀರಕಪುತ್ರ ಶ್ರೀನಿವಾಸ್ ತಲಾ ಒಂದೊಂದು ಹಾಡುಗಳನ್ನು ಲೋಕಾರ್ಪಣೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಸಿರಗುಪ್ಪ ಮೂಲದ ಉದ್ಯಮಿ *ರಾಘವೇಂದ್ರ ರೆಡ್ಡಿ ಅವರು ಪೂಜ್ಯಾಯ ಫಿಲಂಸ್ ಅಡಿಯಲ್ಲಿ ನಿರ್ಮಾಣ* ಮಾಡುತ್ತಿರುವುದು ಹೊಸ ....
*ರಾಜ್ ವಿಜಯ್ ನಿರ್ದೇಶನದ "ಗ್ರೀನ್" ಚಿತ್ರ ಈ ವಾರ ತೆರೆಗೆ** .
*ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್ ಮುಂತಾದವರು ಮುಖ್ಯಪಾತ್ರದಲ್ಲಿ ನಟನೆ* .
ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ವಿಭಿನ್ನ ಕಥಾಹಂದರ ಹೊಂದಿರುವ "ಗ್ರೀನ್" ಚಿತ್ರ ಈ ವಾರ ತೆರೆಗೆ ಬರುತ್ತಿದೆ. ನಿಶಾಂತ್ ಎನ್ ಎನ್ ಒಡೆತನದ ಗುನಾದ್ಯ ಪ್ರೊಡಕ್ಷನ್ಸ್ “ಗ್ರೀನ್” ಚಿತ್ರವನ್ನು ತೆರೆಗೆ ತರಲು ಬೆನ್ನೆಲುಬಾಗಿ ನಿಂತಿದೆ.
ಈಗಾಗಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳ ಜೊತೆಗೆ ಪ್ರಶಂಸೆಯನ್ನು ಈ ಚಿತ್ರ ಪಡೆದುಕೊಂಡಿದೆ.
ಬಿಳಿಚುಕ್ಕಿ ಹಳ್ಳಿಹಕ್ಕಿ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದಿಷ್ಟು! ಮಹಿರಾ ಖ್ಯಾತಿಯ ಮಹೇಶ್ ಗೌಡ ನಿರ್ದೇಶನ, ನಿರ್ಮಾಣ ಮಾಡಿ ನಾಯಕನಾಗಿ ನಟಿಸಿರುವ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ’. ಈಗಾಗಲೇ ಹಾಡುಗಳು ಮತ್ತು ಟ್ರೈಲರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಈ ಚಿತ್ರ ಈ ವಾರ ಅಂದರೆ, ಅಕ್ಟೋಬರ್ ೨೪ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಬಿಡುಗಡೆಯ ಅಂಚಿನಲ್ಲಿರುವ ಈ ಸಿನಿಮಾದ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಭಿನ್ನ ಒಳನೋಟದ ಒಂದಷ್ಟು ಮಾತುಗಳನ್ನಾಡಿದ್ದಾರೆ. ತೊನ್ನೆಂಬ ಸಮಸ್ಯೆಯ ಭೂಮಿಕೆಯಲ್ಲಿರುವ, ಪಕ್ಕಾ ಮನೋರಂಜನಾತ್ಮಕ ಗುಣ ಹೊಂದಿರುವ ಈ ಸಿನಿಮಾ ಸಾರಥಿ ಮಹೇಶ್ ಗೌಡರನ್ನು ಮೆಚ್ಚಿಕೊಳ್ಳುತ್ತಲೇ, ಬಿಳಿಚುಕ್ಕಿ ಹಳ್ಳಿಹಕ್ಕಿಯನ್ನು ನೋಡಿ ....
*ನೀಲಕಂಠ ಫಿಲಂಸ್ ಹಾಗೂ ಧರ್ಮಶ್ರೀ ಎಂಟರ್ ಪ್ರೈಸಸ್ ನಿರ್ಮಾಣದ ವಿಭಿನ್ನ ಶೀರ್ಷಿಕೆಯ "4.30 - 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ" ಚಿತ್ರಕ್ಕೆ ಚಾಲನೆ* *ನಾಯಕ ಎಂ.ಎನ್ ಸುಚಿತ್ ಹುಟ್ಟುಹಬ್ಬದ ದಿನವೇ ಚಿತ್ರ ಆರಂಭ* . "4.30 ರಿಂದ 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ" ಎಂಬ ವಿಭಿನ್ನ ಶೀರ್ಷಿಕೆಯುಳ್ಳ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ರೇಣುಕಾಂಬ ಥಿಯೇಟರ್ ನಲ್ಲಿ ನೆರವೇರಿತು. ನೀಲಕಂಠ ಫಿಲಂಸ್ ಹಾಗೂ ಧರ್ಮಶ್ರೀ ಎಂಟರ್ ಪ್ರೈಸಸ್ ಲಾಂಛನದಲ್ಲಿ ಧರ್ಮಶ್ರೀ ಮಂಜುನಾಥ್(ರಥಾವರ) ಹಾಗೂ D ಯೋಗರಾಜ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಪೂವೈ ಸುರೇಶ್ ಹಾಗೂ ಶಿವರಾಜ್ ನಿರ್ದೇಶಿಸುತ್ತಿದ್ದಾರೆ. ಧರ್ಮಶ್ರೀ ಮಂಜುನಾಥ್ ಅವರ ಪುತ್ರ ಎಂ.ಎನ್ ....
*ಶೀರ್ಷಿಕೆ ಹಳೇದು ಕಥೆ ಹೊಸತು* ಮೂರು ದಶಕಗಳ ಹಿಂದೆ *ಯಾರಿಗೂ ಹೇಳ್ಬೇಡಿ* ಚಿತ್ರವು ತೆರೆಕಂಡು ಹಿಟ್ ಆಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸದ್ದಿಲ್ಲದೆ ತೆರೆಗೆ ಬರಲು ಸಿದ್ದವಾಗಿದೆ. ಕಿಚ್ಚ ಸುದೀಪ್ ಈಗಾಗಲೇ ಟ್ರೇಲರ್ ಲೋಕಾರ್ಪಣೆಗೊಳಿಸಿ ಮೆಚ್ಚುಗೆಯ ಮಾತನಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಸುದ್ದಿ ಮಾಡುವ ಸಲುವಾಗಿ ಟ್ರೇಲರ್ ಬಿಡುಗಡೆ ಸಮಾರಂಭ ಮೊನ್ನೆಯಷ್ಟೇ ನಡೆಯಿತು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಮುಗಿಸಿರುವ ಹೈದರಬಾದ್ನ *ಹರೀಶ್ ಅಮ್ಮಿನೇನಿ ಕನ್ನಡ ಭಾಷೆಯ ಅಭಿಮಾನದ ಮೇಲೆ ಬಂಡವಾಳ* ಹೂಡಿದ್ದು, ಸುನಿಲ್ಕುಮಾರ್ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. *ಶಿವಗಣೇಶ್ ಆಕ್ಷನ್ ಕಟ್* ಹೇಳಿದ್ದಾರೆ. ....
*ಧೈರ್ಯಂ ಧರ್ಮಂ ದೇಶಂ ಇವು ಸಮಾಜದ ಅಂಗಗಳು* ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ *DDD* ಚಿತ್ರದ ಟ್ರೇಲರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ ಕಾರ್ಯಕ್ರಮ ಎಸ್ಆರ್ವಿ ಪ್ರಿವ್ಯೂ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಹೊಸರುದಲ್ಲಿ ಸಗಟು ತರಕಾರಿ ವ್ಯಾಪಾರ ಮಾಡುತ್ತಿರುವ *ಕೆ.ಬಿ.ಮಂಜುನಾಥ್ ಸಿನಿಮಾಕ್ಕೆ ಕಥೆ,ನಿರ್ದೇಶನ ಅಲ್ಲದೆ ಕೆಬಿಎಂ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ* ಮಾಡಿದ್ದಾರೆ. ಮಹೇಶ್ ಹಾಗೂ ಚಂದ್ರಣ್ಣ ಸಹ ನಿರ್ಮಾಪಕರು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಇಲ್ಲಿಯವರೆಗೆ ಎರಡು ಕಿರುಚಿತ್ರಗಳನ್ನು ಮಾಡಿದ್ದೇನೆ. ಇದು ನನಗೆ ಮೊದಲ ಹಿರಿತೆರೆಯ ಅನುಭವ. ಸಾಮಾನ್ಯ ಪ್ರಜೆಯಾದವನು ಧೈರ್ಯ ....