*KA-18 ಇದು ಹಾರರ್,ಸೆಸ್ಪೆನ್ಸ್,ಥ್ರಿಲ್ಲರ್ ಸರಕು* ವಿನೂತನ ಶೀರ್ಷಿಕೆ *’KA-18’* ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಛಾಲೆಂಜಿಂಗ್ ಸ್ಟಾರ್ ದರ್ಶನ್ ಅಳಿಯ ನಟ ಮನೋಜ್ ಕ್ಯಾಮಾರ ಆನ್ ಮಾಡಿದರು. ಅಪ್ಪಾಜಿ ಪ್ರೊಡಕ್ಷನ್ಸ್ ಅಡಿಯಲ್ಲಿ ಹಿರೇಮಗಳೂರು ಮೂಲದ *ಎ.ಟಿ.ಎಂ.ಮಂಜು ನಿರ್ಮಾಣ ಮಾಡುವುದರ ಜತೆಗೆ ನಾಯಕನಾಗಿ* ಬಣ್ಣ ಹಚ್ಚುತ್ತಿರುವುದು ಹೊಸ ಅನುಭವ. *ಮೋಹನ್ ಚಿಕ್ಕಿ ಮೂರನೇ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್* ಹೇಳುತ್ತಿದ್ದಾರೆ. ಉತ್ತರಕಾಂಡದ *ಸೋನಿಯಾ ರಾವುತ್ ಸಹ ....
" *ಹುಲಿ ಬೀರ"ನ* *ಜಿಗ್ರಿದೋಸ್ತ್ ಹಾಡು* *ಯುವಕರನ್ನು ಹಳ್ಳಿಗಳಿಗೆ* *ಮರಳಿಸಿದ* *ಧೀರ* ಬಹುತೇಕ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಚಿತ್ರ ಹುಲಿಬೀರ. ಮದರಂಗಿ ಮಲ್ಲಿಕಾರ್ಜುನ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದ ’ಜಿಗ್ರಿ ದೋಸ್ತ್’ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಯರ್ರಾಬಿರ್ರಿ ಖ್ಯಾತಿಯ ನಟ ಅಂಜನ್ ಚಿತ್ರದ ನಾಯಕನಾಗಿ ನಟಿಸಿದ್ದು, ಚೈತ್ರ ತೋಟದ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಜಿಗ್ರಿ ದೋಸ್ತ ಹಾಡಿಗೆ ಮಾಳು, ಶಿವಾನಿ ದನಿಯಾಗಿದ್ದಾರೆ. ಉತ್ತರ ಕರ್ನಾಟಕದ ನೇಟಿವಿಟಿ, ನಾಯಕ, ನಾಯಕಿ, ನಿರ್ಮಾಪಕ, ನಿರ್ದೇಶಕ, ಹೀಗೆ ಅಲ್ಲಿನವರೇ ಸೇರಿ ಮಾಡಿರುವ ಅದೇ ಸೊಗಡಿನ ಚಿತ್ರಕ್ಕೆ ....
ಬಲರಾಮನ ದಿನಗಳು ಹಾಡು ಬಿಡುಗಡೆಯ ಕ್ಷಣಗಳು ಬಲರಾಮನ ದಿನಗಳು ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ಖ್ಯಾತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣ್ ಸಂಗೀತದಲ್ಲಿ ಆಲ್ ಓಕೆ ಹಾಡಿರುವ ಗೀತೆಯನ್ನು ಬಿಡುಗಡೆ ಮಾಡಲಾಗಿದೆ. ಸಿನಿಮಾದ ನಾಯಕ ನಟ ವಿನೋದ್ ಪ್ರಭಾಕರ್ ಅವರು, ಇಲ್ಲಿ ನಿಂತಿದ್ದೀನಿ ಅಂದರೆ ನಮ್ಮ ತಂದೆ ಟೈಗರ್ ಪ್ರಭಾಕರ್ ಅವರು ಕಾರಣ. ಬಲರಾಮ ಏನಿದೆಯೋ ಟೈಗರ್ ಪ್ರಭಾಕರ್ ಅವರು ಬಿಟ್ಟೋದ ಅಧ್ಯಾಯ ನಾನು. ಚಿತ್ರರಂಗದಲ್ಲಿ ಅವರ ಕನಸು ಬಹಳ ಇತ್ತು. ನಾನು ಚಿತ್ರರಂಗಕ್ಕೆ ಬಂದಾಗ ಬಹಳ ಎಡವಿದೆ. ನಾನು ಇದಕ್ಕೆ ದಾರಿತಪ್ಪಿದ ಮಗ ಅಂತ ಇಂಟರ್ವ್ಯೂನಲ್ಲಿ ಇದಕ್ಕೆ ಹೇಳಿದೆ. ಮತ್ತೆ ನಾನು ಯೂಟರ್ನ್ ಮಾಡಿಕೊಂಡು ಬಂದೆ. ಈಗ ಕಂಟೆಂಟೇ ಹೀರೋ, ....
*ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳಿಂದ ಅನಾವರಣವಾಯಿತು "ಪತ್ತೇದಾರಿ" ಚಿತ್ರದ ಪೋಸ್ಟರ್* . *ಶ್ರೀನಿವಾಸ್ ಜಯರಾಮ್ ನಿರ್ದೇಶನದ ಈ ಚಿತ್ರದ ಮೂಲಕ ಕಿಝಾರ್ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ.* . ಎ.ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮೊಹಮ್ಮದ್ ಅತೀಕ್ ನಿರ್ಮಾಣ ಮಾಡುತ್ತಿರುವ, ಶ್ರೀನಿವಾಸ್ ಜಯರಾಮ್ ರಚನೆ & ನಿರ್ದೇಶನದ ಹಾಗೂ ಕಿಝಾರ್ ಎಂಬ ನೂತನ ಪ್ರತಿಭೆ ನಾಯಕನಾಗಿ ನಟಿಸುತ್ತಿರುವ "ಪತ್ತೇದಾರಿ" ಚಿತ್ರದ ಪೋಸ್ಟರ್ ಅನಾವರಣ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನೆರವೇರಿತು. ಕಲಾವಿದರಾದ ಮಯೂರ್ ಪಟೇಲ್, "ಶಿಷ್ಯ" ದೀಪಕ್, ಕಾಕ್ರೋಜ್ ಸುಧೀ, ಚೆಲುವರಾಜ್, ಅರವಿಂದ್, ....
*ಮೋಡ ಕವಿದ ವಾತಾವರಣ ಸಿನಿಮಾದ ಹೀರೋ ಟೀಸರ್ ರಿಲೀಸ್... ವಿಭಿನ್ನ ಪ್ರೇಮ ಕಥೆಯೊಂದಿಗೆ ಬಂದ ಸಿಂಪಲ್* *ಮತ್ತೊಂದು ಫ್ರೆಶ್ ಪ್ರೇಮ ಕಥೆ ಹೊತ್ತು ಬಂದ ಸುನಿ...ಶಿಷ್ಯನಿಗಾಗಿ ಮೋಡ ಕವಿದ ವಾತಾವರಣ ಸೃಷ್ಟಿಸಿದ ಸಿಂಪಲ್ ಡೈರೆಕ್ಟರ್* ಒಂದು ಸರಳ ಪ್ರೇಮಕಥೆ ಸಿನಿಮಾ ಬಳಿಕ ನಿರ್ದೇಶಕ ಸಿಂಪಲ್ ಸುನಿಭತ್ತಳಿಕೆಯಿಂದ ಬರ್ತಿರುವ ಮತ್ತೊಂದು ಸೊಗಸಾದ ಪ್ರೇಮ ಕಥೆ ಮೋಡ ಕವಿದ ವಾತಾವರಣ. ಟೈಟಲ್ ನಿಂದ ಗಮನ ಸೆಳೆಯುತ್ತಿರುವ ಈ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 26ಕ್ಕೆ ಬಿಡುಗಡೆಯಾಗುತ್ತಿರುವ ಮೋಡ ಕವಿದ ವಾತಾವರಣ ಚಿತ್ರದ ಪ್ರಚಾರ ಕೆಲಸ ಜೋರಾಗಿದೆ. ಅದರ ಭಾಗವಾಗಿ ಚಿತ್ರದ ಹೀರೋ ಟೀಸರ್ ಬಿಡುಗಡೆ ಮಾಡಲಾಗಿದೆ. ನಿನ್ನೆ ....
*"ಗ್ರಾಮಾಯಣ"ದ "ಏನೇ ಹೇಳು ಕುಸುಮ" ಹಾಡಿಗೆ ಮೆಚ್ಚುಗೆಯ ಮಹಾಪೂರ* . *ವಿನಯ್ ರಾಜ್ ಕುಮಾರ್ ಅಭಿನಯದ ಈ ಚಿತ್ರ ಜುಲೈ 3 ರಂದು ಬಿಡುಗಡೆ.* . ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ರಚನೆ - ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ - ಮೇಘ ಶೆಟ್ಟಿ ನಾಯಕ - ನಾಯಕಿಯಾಗಿ ಅಭಿನಯಿಸಿರುವ "ಗ್ರಾಮಾಯಣ" ಚಿತ್ರದ "ಏನೇ ಹೇಳು ಕುಸುಮ" ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಲಹರಿ ವೇಲು ಈ ಹಾಡನ್ನು ಅನಾವರಣ ಮಾಡಿದರು. ಪ್ರಮೋದ್ ಮರವಂತೆ ಬರೆದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿರುವ ಈ ಹಾಡನ್ನು ನಿಹಾಲ್ ತವ್ರೊ ಹಾಗೂ ಸಾಕ್ಷಿ ಕಲ್ಲೂರ್ ಹಾಡಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಮೆಚ್ಚುಗೆಯ ಮಾಹಾಪೂರವೇ ....
ಲವ್ ಸೀಸನ್ಸ್: ಹಾಡುಗಳ ಗೆಲುವಿನ ಸಿಹಿ ಹಂಚಿಕೊಂಡ ಚಿತ್ರತಂಡ! ಇದೇ ಜುಲೈ 3ರಂದು ಕೃತ್ವಿಕ್ ನಿರ್ದೇಶನದ ಲವ್ ಸೀಸನ್ಸ್ ಚಿತ್ರ ರಾಜ್ಯಾದ್ಯಂತ ತೆರೆಕಾಣಲಿದೆ. ಬಿಡುಗಡೆಗಾಗಿ ತಯಾರಾಗುತ್ತಿರುವ ಚಿತ್ರತಂಡವೀಗ ಬಿಡುಗಡೆಗೊಂಡಿರುವ ಮೂರು ಹಾಡುಗಳಿಗೆ ಕೇಳುಗರ ಕಡೆಯಿಂದ ಸಿಗುತ್ತಿರೋ ಭರಪೂರ ಪ್ರತಿಕ್ರಿಯೆ ಕಂಡು ಖುಷಿಗೊಂಡಿದೆ. ಈ ಸಂಬಂಧವಾಗಿ ಪತ್ರಿಕಾಗೋಷ್ಠಿಯ ಮೂಲಕ ಹಾಡುಗಳ ಗೆಲುವಿನ ಸಿಹಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಸಂಗೀತ ನಿರ್ದೇಶಕರು, ಗಾಯಕ, ಗಾಯಕಿಯರು ಹಾಗೂ ಸಾಹಿತ್ಯ ಬರೆದವರ ಮೂಲಕವೇ ಈ ಗೆಲುವನ್ನು ಚಿತ್ರತಂಡ ಸಂಭ್ರಮಿಸಿದೆ. ಈ ಪ್ರತಿಕಾಗೋಷ್ಠಿಯಲ್ಲಿ ನಿರ್ಮಾಪಕರಾದ ಎನ್.ಆರ್ ಮಂಜುನಾಥ್ (ನೀಲೇರಿ), ನಿರ್ದೇಶಕ ಕೃತ್ವಿಕ್, ಹಿರಿಯ ಗೀತಸಾಹಿತಿ ....
*"ಕನಕರಾಜ" ಚಿತ್ರದ ಮೊದಲ ಹಾಡಿಗೆ ಕಲಾಭಿಮಾನಿಗಳು ಫಿದಾ.* *ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದೆ ಅನೂಪ್ ರೇವಣ್ಣ ಅಭಿನಯದ ಈ ಚಿತ್ರ* . ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ಅವರು ನಿರ್ಮಿಸಿರುವ, ಡಾ||ವಿ.ನಾಗೇಂದ್ರಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಸಂಗೀತ ಸಂಯೋಜನೆಯನ್ನೂ ಮಾಡಿರುವ, ಆರ್ ರವೀಂದ್ರ ನಿರ್ದೇಶಿಸಿರುವ ಹಾಗೂ ಎಚ್ ಎಂ ರೇವಣ್ಣ ಅವರ ಪುತ್ರ ಅನೂಪ್ ರೇವಣ್ಣ ನಾಯಕನಾಗಿ ನಟಿಸಿರುವ ‘ಕನಕರಾಜ’ ಚಿತ್ರದ ಮೊದಲ ಹಾಡು ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನೆರವೇರಿತು. ....
*"ನಾಗುಗೆ ವಧು ಬೇಕಾಗಿದೆ". ಹಾಡುಗಳು ಹಾಗೂ ಟ್ರೇಲರ್ ಚೆನ್ನಾಗಿದೆ* . ಪ್ರಸ್ತುತ ಹಳ್ಳಿಯಲ್ಲಾಗಲಿ ಅಥವಾ ನಗರಪ್ರದೇಶಗಳಲ್ಲಾಗಲಿ ಬಹುತೇಕ ಗಂಡು ಮಕ್ಕಳಿಗೆ ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಇದಕ್ಕೆ ಕಾರಣಗಳು ಹಲವಾರು. ಇಂತಹ ಪ್ರಸ್ತುತ ಪರಿಸ್ಥಿತಿಯನ್ನಿಟ್ಟುಕೊಂಡು ನಿರ್ದೇಶಕ ಆರ್ ಕೆ "ನಾಗೂಗೆ ವಧು ಬೇಕಾಗಿದೆ" ಎನ್ನುವ ಸಿನಿಮಾ ಮಾಡಿದ್ದಾರೆ. ಆರ್ ಕೆ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರ ಶ್ರೀಗುರು ರಾಘವೇಂದ್ರ ಕನ್ನಡ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿದೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಅನಾವರಣ, ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಕರ್ನಾಟಕ ಮಹಿಳಾ ಆಯೋಗದ ....
ಪಕ್ಕಾ ಎಂಟರ್ಟೈನ್ಮೆಂಟ್ ’ಗೋಲ್ಮಾಲ್ ಗ್ಯಾಂಗ್’ ಟೀಸರ್ ರಿಲೀಸ್ ಸಿನಿಮಾ ಅಂದ್ರೆನೆ ಮನರಂಜನೆ. ಆ ಮನರಂಜನೆಗಾಗಿಯೇ ಜನ ಕಾಯ್ತಾ ಇರುತ್ತಾರೆ. ನಕ್ಕು ಮನಸ್ಸನ್ನ ಕೂಲ್ ಆಗಿಸಿಕೊಳ್ಳುವಂತ ಸಿನಿಮಾವೊಂದು ಸಿದ್ಧವಾಗುತ್ತಿದೆ. ಅದರ ಹೆಸರೇ ಗೊಲ್ಮಾಲ್ ಗ್ಯಾಂಗ್. ಇದೀಗ ಒಂದೊಳ್ಳೆ ಟೀಸರ್ ರಿಲೀಸ್ ಆಗಿದ್ದು, ಸಿನಿಮಾದ ಮೇಲೆ ಭರವಸೆ ಮೂಡಿಸಿದೆ. ಶಾಂತ್ವು ಯೂನಿವರ್ಸಲ್ ಪಿಕ್ಚರ್ ಬ್ಯಾನರ್ ನಡಿ ಸತೀಶ್ ಚಂದ್ರ ಅವರು ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಶಿವಕುಮಾರ್ ಮಾತನ್ನಾಡುತ್ತಾ, ಈ ಸಿನಿಮಾಗೆ ನಿರ್ಮಾಪಕರು ಬಹಳಷ್ಟು ಹೆಲ್ಪ್ ಮಾಡಿದ್ದಾರೆ. ಪ್ರತಿಯೊಂದಕ್ಕೂ ಬೆನ್ನೆಲುಬಾಗಿ ನಿಂತವರು, ತಪ್ಪು ಮಾಡಿದಾಗ ತಿದ್ದಿದವರು. ಈ ಸಿನಿಮಾದಲ್ಲಿ ಏನಿಲ್ಲ ....
ದೊಡ್ಮನ್ಸ ಪವರ್ ಪ್ಯಾಕ್ಡ್ ಟ್ರೇಲರ್ ರಿಲೀಸ್
ವೇದಿಕ್ ಕಾಸ್ಮೋಸ್ ಬ್ಯಾನರ್ ಅಡಿಯಲ್ಲಿ , ಶರತ್ ಕೃಷ್ಣ ನಿರ್ದೇಶನದಲ್ಲಿ ಶರತ್ ಕೃಷ್ಣ ಮತ್ತು ರೇಷ್ಮಾ, ಶಿಲ್ಪಾ ಮುಖ್ಯ ಪಾತ್ರದಲ್ಲಿ ನಟಿಸಿರುವ "ದೊಡ್ಮನ್ಸ" ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಪಕ್ಕಾ ಆಕ್ಷನ್ ಪ್ಯಾಕ್ಡ್ ಸಿನಿಮಾ ಅನ್ನೋದನ್ನ ಈ ಟ್ರೇಲರ್ ತೋರಿಸಿಕೊಟ್ಟಿದೆ. ಹೀರೋ ಮಾಸ್ ಅವತಾರ, ಫೈಟ್ ಸೀನ್ ಗಳು ಟ್ರೇಲರ್ ನಲ್ಲಿಯೇ ಮಾಸ್ ಪ್ರಿಯರ ಗಮನ ಸೆಳೆದಿದೆ. ಇನ್ನು ಒಂದು ಇನ್ನೊಸೆಂಟ್ ಲವ್ ಕೂಡ ಅನಾವರಣವಾಗಿದೆ. ಸಿನಿಮಾ ಬಗ್ಗೆ ಒಂದೊಳ್ಳೆ ಭರವಸೆಯನ್ನ ಈ ಟ್ರೇಲರ್ ಮೂಡಿಸಿದೆ.
" *ಭಾಯ್ಸ್ ನೆವರ್* *ಕಾಂಪ್ರಮೈಸ್* " *ಟೀಸರ್ - ಬಾಯ್ಸ್* *ಆಂಥೆಮ್ ಬಿಡುಗಡೆ* ಈ ಹಿಂದೆ ಜಸ್ಟ್ ಮದ್ವೇಲಿ, ರಾಜಣ್ಣನ ಮಗ ಚಿತ್ರಗಳನ್ನು ನಿರ್ಮಿಸಿದ್ದ ಹರೀಶ್ ಜಲಗೆರೆ ಅವರು ಇದೀಗ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ’ಬಾಯ್ಸ್ ನೆವರ್ ಕಾಂಪ್ರಮೈಸ್’ಎಂಬ ಚಿತ್ರಕ್ಕೆ ಅವರೇ ಆಕ್ಷನ್ ಕಟ್ ಹೇಳಿದ್ದಾರೆ. ಹರೀಶ್ ಜಲಗೆರೆ ಅವರ ಹಿಂದಿನ ಎರಡೂ ಚಿತ್ರಗಳನ್ನು ನಿರ್ದೇಶಿಸಿದ್ದ ಕೋಲಾರ ಸೀನು ಅವರು ಹರೀಶ್ ಅವರ ಹೊಸ ಸಾಹಸಕ್ಕೆ ಜತೆಯಾಗಿದ್ದಾರೆ. ಹಾರರ್ ಕಾಮಿಡಿ ಕಥಾಹಂದರ ಒಳಗೊಂಡ ಈ ಚಿತ್ರದ ಟೀಸರ್ ಹಾಗೂ ಬಾಯ್ಸ್ ಆಂಥೆಮ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ವಿಶೇಷವಾಗಿ ಈ ಚಿತ್ರದಲ್ಲಿ ಸಾಮ್ರಾಟ್, ನಕ್ಷತ್ರ, ಸುಪ್ರಿತ್ ....
ಅಭಿನಯ ಸರಸ್ವತಿ ಶೃತಿ ಅವರ 175ನೇ ಸಿನಿಮಾ ಮುಹೂರ್ತ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ’ಮದರ್’ ಅಭಿನಯ ಸರಸ್ವತಿ ಶೃತಿ ಅವರ 175ನೇ ಸಿನಿಮಾಗೆ ಇಂದು ಮುಹೂರ್ತ ನೆರವೇರಿದೆ. ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮದರ್ ನೆರವೇರಿದೆ. ವಿನೋದ್ ಪ್ರಭಾಕರ್ ಅವರು ಮುಹೂರ್ತಕ್ಕೆ ಬಂದು ಶುಭ ಹಾರೈಸಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್ ಕ್ಲಾಪ್ ಮಾಡಿ ಹಾರೈಸಿದ್ದಾರೆ. ಇದೇ ವೇಳೆ ನಿರ್ದೇಶಕ ರಾಕೇಶ್ ಮಾತನ್ನಾಡಿ, ಮದರ್ ತುಂಬಾ ಪವರ್ ಫುಲ್ ಕಥೆ. ಮಂಡ್ಯದ ಅನಕ್ಷರಸ್ಥ ಮಹಿಳೆ ಸಂಸಾರ ಕಾಪಾಡುವುದಕ್ಕೆ ಹೋರಾಟ ಮಾಡುವ ಕಥೆಯೇ ಮದರ್. ಶೃತಿ ಅವರು ಅಳಿಸುವುದಿಲ್ಲ. ಇಲ್ಲಿ ಶೃತಿ ಅವರನ್ನು ಬೇರೆಯದ್ದೇ ರೀತಿಯಲ್ಲಿ ಕಾಣಬಹುದು. ರಗಡ್ ಲುಕ್ ನಲ್ಲಿ ಕಾಣಿಸ್ತಾರೆ. 35 ....
"ಊರಬ್ಬ"ದಲ್ಲಿ ಜಾತ್ರೆಯ ನೈಜದೃಶ್ಯ ಶಾಸಕ ರಂಗನಾಥ್ ರಿಂದ ಟ್ರೈಲರ್ ಬಿಡುಗಡೆ ಮಾಗಡಿ ತಾಲ್ಲೂಕಿನ ಸುಪ್ರಸಿದ್ದ ಉಜ್ಜಿನಿ ಚೌಡೇಶ್ವರಿ ಜಾತ್ರೆ, ಅದರ ಹಿನ್ನೆಲೆಯಲ್ಲಿ ನಡೆಯುವ ಕಥೆ ಇಟ್ಟುಕೊಂಡು ನಿರ್ದೇಶಕ ಲಕ್ಕಿ ಶಂಕರ್ "ಊರಬ್ಬ" ಎಂಬ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ. ಒನ್ಸ್ ಮೋರ್ ಕೌರವ ಖ್ಯಾತಿಯ ನರೇಶ್ ಗೌಡ, ತನಿಷಾ ಕುಪ್ಪಂಡ, ಪಾಯಲ್ ಚಂಗಪ್ಪ, ಸಿದ್ದು ಮೂಲಿಮನಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕುಣಿಗಲ್ ಶಾಸಕ ರಂಗನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಟ್ರೈಲರ್ ಲಾಚ್ ಮಾಡಿ ಶುಭ ಹಾರೈಸಿದರು. ಜಾತ್ರೆಯ ನೈಜ ದೃಶ್ಯಗಳನ್ನು ಎಂ.ಡಿ.ಶ್ರೀಧರ್, ಹೆಚ್.ವಾಸು, ....
ಬಲರಾಮನ ದಿನಗಳು "ಕ್ವಾಟರ್ರು" ಹಾಡಿಗೆ ತಾರಾ ಅನುರಾಧಾ ಚಾಲನೆ ಕೆಎಂ ಚೈತನ್ಯ ಅವರ ನಿರ್ದೇಶನದ, ಬಲರಾಮನ ದಿನಗಳು ಚಿತ್ರದ ರೇಟ್ರೋ ಶೈಲಿಯ ಕ್ವಾಟರ್ರು ಹಾಡನ್ನು ಹಿರಿಯನಟಿ ತಾರಾ ಅನುರಾಧಾ ಅವರು ಬಿಡುಗಡೆ ಮಾಡಿದರು. ಸಂತೋಷ್ ನಾರಾಯಣನ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರೋ ಈ ಹಾಡಿಗೆ ನಟಿ ವಂದಿತಾಗೌಡ ಹೆಜ್ಜೆ ಹಾಕಿದ್ದಾರೆ, ವಿನೋದ್ ಪ್ರಭಾಕರ್, ಪ್ರಿಯಾ ಆನಂದ್ ಅಭಿನಯದ ಈ ಚಿತ್ರವನ್ನು ಪದ್ಮಾವತಿ ಜಯರಾಮ್ ಹಾಗೂ ಶ್ರೇಯಸ್ ಅವರು ನಿರ್ಮಿಸಿದ್ದಾರೆ, ಈ ವೇಳೆ ನಟಿ ತಾರಾ ಮಾತನಾಡುತ್ತ ಈ ಪೆಪ್ಪಿ ಸಾಂಗ್ ತುಂಬಾ ಚನ್ನಾಗಿದೆ, ಶ್ರೇಯಸ್ ತುಂಬಾ ಪ್ಯಾಷನ್ ಇರೋ ನಿರ್ಮಾಪಕ. ಆತನಿಗೆ ವಿನೋದ್ ಕಂಡರೆ ತುಂಬಾ ಪ್ರೀತಿ, ಅಲ್ಲದೆ ಪದ್ಮಮ್ಮ ಕೂಡ ಒಳ್ಳೇ ....
*"ನಮ್ಮ ರೇಂಜ್ ರೋವರ್" ನಲ್ಲಿ ಸುಮಧುರ ಹಾಡುಗಳು* . ಸಿ.ಎಮ್.ಎಮ್ ಹಿಂದೂಸ್ತಾನ್ ಫಿಲಂಸ್ ಲಾಂಛನದಲ್ಲಿ ಡಾ||ಮೌಲಾ ಶರೀಫ್ ಸಿ.ಕೆ ನಿರ್ಮಿಸಿರುವ ಹಾಗೂ ಓ.ಎಸ್.ಆರ್ ಕುಮಾರ್ ನಿರ್ದೇಶಿಸಿರುವ "ನಮ್ಮ ರೇಂಜ್ ರೋವರ್" ಚಿತ್ರದ ಹಾಡುಗಳು ಹಾಗೂ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಕೂಡಲಸಂಗಮದ ಪೂಜ್ಯ ಶ್ರೀಸಂಗಮಾನಂದ ಸ್ವಾಮಿಗಳು, ಮಾಜಿ ಶಾಸಕರಾದ ರಾಜಣ್ಣ, ಉದ್ಯಮಿ ವೀರಭದ್ರಾಚಾರಿ, ನಟ ಸಂಪೂರ್ಣೇಶ್ ಬಾಬು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾದ ಕಿಶೋರ್ ಕುಮಾರ್, ನಿರ್ಮಾಪಕರ ಸಂಘದ ಕಾರ್ಯದರ್ಶಿ ರಮೇಶ್ ಯಾದವ್, ವಿತರಕರಾದ ರಮೇಶ್ ಬಾಬು ಹಾಗೂ ನಿರ್ಮಾಪಕರ ಸಂಘದ ಮಾಜಿ ....
*ಇವರೇ ನಮ್ಮ ಮಹಾನ್ ಕಿಲಾಡಿಗಳು* ಟ್ಯಾಲೆಂಟ್ ಎನ್ನುವುದು ಯಾರೊಬ್ಬರ ಸ್ವತ್ತು ಅಲ್ಲ. ಈ ಹಿಂದೆ ’ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಷೋ ಮೂಲಕ ಹಲವು ಪ್ರತಿಭೆಗಳು ಬೆಳಕಿಗೆ ಬಂದರು. ಆ ಸಾಲಿನಲ್ಲಿ ಮಿಂಚು, ಪ್ರವೀಣ್ ಗಸ್ತಿ ಗೋಕಾಕ್ ಮತ್ತು ಚಿದಂಬರ ಪೂಜಾರಿ ಕಣ್ಣ ಮುಂದೆ ಕಾಣುತ್ತಾರೆ. ಇವರುಗಳ ಬತ್ತಳಿಕೆಯಿಂದ *’ಮಹಾನ್ ಕಿಲಾಡಿ’* ಎಂಬ ರಿಯಾಲಿಟಿ ಷೋ ಶುರುವಾಗಿದೆ. ’ಟ್ಯಾಲೆಂಟ್ ನಿಮ್ಮದು ವೇದಿಕೆ ನಮ್ಮದು’ ಎಂಬ ಅಡಿಬರಹ ಇರಲಿದೆ. ಪ್ರಚಾರದ ಮೊದಲ ಹಂತವಾಗಿ ಪೋಸ್ಟರ್, ಟೈಟಲ್ ಸಾಂಗ್ ಮತ್ತು ಟ್ರೇಲರ್ ಬಿಡುಗಡೆ ಸಮಾರಂಭವು ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ವಿಧಾನ ಪರಿಷತ್ ಸದಸ್ಯರಾದ ಟಿ.ಶರವಣ, ....
*ಉತ್ತರ ಮತ್ತು ಅಭ್ಯಂಜನ ಟ್ರೇಲರ್ ಬಿಡುಗಡೆ* ಚಂದನವನದಲ್ಲಿ ಅಪರೂಪದಲ್ಲಿ ಅಪರೂಪ ಎನ್ನುವಂತೆ *’ಉತ್ತರ’* ಮತ್ತು *’ಅಭ್ಯಂಜನ’* ಚಿತ್ರಗಳ ಟ್ರೇಲರ್ ಲೋಕಾರ್ಪಣೆ ಸಮಾರಂಭವು ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಹಿರಿಯ ನಟ ಸುಂದರರಾಜ್ ಮತ್ತು ಡಾ.ರಾಜ್ ಕುಟುಂಬದ ಗೋವಿಂದರಾಜ್ ದಂಪತಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದರಲ್ಲಿ ಹಾಡುಗಳು ರಹಿತ ಹಲವು ವಿಶೇಷತೆಗಳು ಇರುವುದು ಕಾಕತಾಳೀಯವಾಗಿದೆ. *ಎರಡು ಸಿನಿಮಾಗಳ ನಿರ್ಮಾಪಕರು, ನಿರ್ದೇಶಕರು, ನಾಯಕ, ಸಿರಿ ಮ್ಯೂಸಿಕ್ ಟ್ರೇಲರ್ ಹಕ್ಕುಗಳನ್ನು ಖರೀದಿಸಿರುವುದು, ಪುರೋಹಿತ ಫಿಲಂಸ್ರವರು ಒಂದೇ ದಿನ ಬಿಡುಗಡೆ ಮಾಡುತ್ತಿರುವುದು, ಭಾರತೀಯ ....
*ಹೊಸಬರ ‘ಕ್ಷೇತ್ರಪಾಲ’ ಚಿತ್ರದ ಶೀರ್ಷಿಕೆ ಅನಾವರಣ* *ತೆರೆಗೆ ಬರಲು ತಯಾರಾಗುತ್ತಿದ್ದಾನೆ ‘ಕ್ಷೇತ್ರಪಾಲ’* *ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್ ಮತ್ತು ಮೋಶನ್ ಪೋಸ್ಟರ್* *ನ್ಯಾಯ, ಧರ್ಮದ ರಕ್ಷಣೆ ‘ಕ್ಷೇತ್ರಪಾಲ’ನ ಹೊಣೆ!* *ಹೊಸ ಪ್ರತಿಭೆಗಳ ಪ್ರಯತ್ನದಲ್ಲಿ ‘ಕ್ಷೇತ್ರಪಾಲ’ ತೆರೆಗೆ* ಕರ್ನಾಟಕದ ಕರಾವಳಿಯ ಸೊಗಡು, ಅಲ್ಲಿನ ವಿಚಾರ-ಆಚಾರ, ಆಚರಣೆಗಳ ಸುತ್ತ ಈಗಾಗಲೇ ಹಲವು ಸಿನಿಮಾಗಳು ತೆರೆಗೆ ಬಂದು ಯಶಸ್ವಿಯಾಗಿವೆ. ಈಗ ಕರಾವಳಿ ಸೊಗಡಿನ ಅಂಥದ್ದೇ ಮತ್ತೊಂದು ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಅಂದಹಾಗೆ, ಆ ಚಿತ್ರದ ಹೆಸರು ‘ಕ್ಷೇತ್ರಪಾಲ’. ಕರಾವಳಿಯ ಪ್ರತೀತಿಯಂತೆ, ಪ್ರತಿ ....
ನಿರ್ಮಾಪಕರ ಹುಟ್ಟುಹಬ್ಬದಲ್ಲಿ 'ಕಾಮನ್ ಮ್ಯಾನ್’ ಮೋಷನ್ ಫೋಸ್ಟರ್ ಒಬ್ಬ ಸಾಮಾನ್ಯ ಲಾಯರ್ ರಾಜ್ಯದ ಮುಖ್ಯಮಂತ್ರಿ ಹೇಗಾಗ್ತಾನೆ ಎಂದು ಹೇಳುವ ಚಿತ್ರ ಕಾಮನ್ ಮ್ಯಾನ್. ಸಮಾಜ ಸೇವಕ ಎನ್. ನರಸಿಂಹಮೂರ್ತಿ ಅವರು ಕಥೆ ಬರೆದು ಸುರಭಿ ಫಿಲಂಸ್ ಅಡಿ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ನಿರ್ಮಾಪಕರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಆಯೋಜಿಸಲಾಗಿತ್ತು. ಕೆರೆಬೇಟೆ ಖ್ಯಾತಿಯ ಗೌರೀಶಂಕರ್ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ವಿನಯ ಚಂದ್ರ ಅವರ ಸಂಗೀತ, ಜೆ.ಜಿ.ಕೃಷ್ಣ, ದೀಪಕ್ ಕುಮಾರ್ ಅವರ ಛಾಯಾಗ್ರಹಣ, ....