*ಮಂಗಳೂರಿನಲ್ಲಿ ಭವ್ಯತೆಗೆ* *’ಜ಼ೀ ಮ್ಯೂಸಿಕ್’ ಸಾಕ್ಷಿಯಾಯ್ತು ಕೊರಗಜ್ಜ" ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭ* ವೈಶಿಷ್ಟ್ಯ ಪೂರ್ಣ ಆಡಿಯೋ ಬಿಡುಗಡೆ ಸಮಾರಂಭಕ್ಕೆ ದೇಶಾದ್ಯಂತದ ಪತ್ರಕರ್ತರಿಂದ ಪ್ರಶಂಸೆಗಳ ಸುರಿಮಳೆ: ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಸಿನಿಮಾದ ಆಡಿಯೋ ಹಕ್ಕುಗಳನ್ನು ಜೀ಼ ಮ್ಯೂಸಿಕ್ ತನ್ನದಾಗಿಸಿಕೊಳ್ಳುವ ಮುಖಾಂತರ , ತ್ರಿವಿಕ್ರಮ ಸಾಪಲ್ಯ ನಿರ್ಮಾಣದ ಸಕ್ಸಸ್ ಫಿಲ್ಮ್ಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ಅಡಿಯಲ್ಲಿನ ’ಕೊರಗಜ್ಜ’ ಸಿನಿಮಾ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಇತ್ತೀಚಿನ ವರ್ಷಗಳಲ್ಲಿ ಯಾವುದೇ ಕನ್ನಡ ಸಿನಿಮಾಗಳ ಆಡಿಯೋ ರೈಟ್ಸ್ ಗಳನ್ನು ಕೊಂಡುಕೊಳ್ಳುವಲ್ಲಿ ಹಿಂದೇಟು ....
*ಟಾಕಿಂಗ್ ಸ್ಟಾರ್ ಅಭಿನಯದ "GST" ಟ್ರೇಲರ್ ಗೆ ಆಕ್ಷನ್ ಕಟ್ ಹೇಳಿದ ರಿಯಲ್ ಸ್ಟಾರ್* *ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ಮೊದಲ ನಿರ್ದೇಶನದ ಈ ಚಿತ್ರ ನವೆಂಬರ್ 28 ರಂದು ತೆರೆಗೆ* . ಖ್ಯಾತ ನಟ ಸೃಜನ್ ಲೋಕೇಶ್ ನಟನಾಗಿ, ನಿರ್ಮಾಪಕನಾಗಿ ಜನಪ್ರಿಯ. ಈಗ "GST" ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಾಣ ಮಾಡಿದ್ದಾರೆ. ಹಿರಿಯ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಅರ್ಪಿಸುತ್ತಿದ್ದಾರೆ. ಚಿತ್ರ ಇದೇ ತಿಂಗಳ 28ರಂದು ತೆರೆಗೆ ಬರುತ್ತಿದೆ. ಅದಕ್ಕೆ ಪೂರ್ವಭಾವಿಯಾಗಿ ಟ್ರೇಲರ್ ಬಿಡುಗಡೆಯಾಗಿದೆ. ರಿಯಲ್ ಸ್ಟಾರ್ ಉಪೇಂದ್ರ ಟ್ರೇಲರ್ ತಮ್ಮದೇ ಆದ ....
*ವಿಭಿನ್ನ ಶೀರ್ಷಿಕೆ ರುಧ* ಮಹಿಳಾ ಪ್ರಧಾನ *ರುಧ* ಸಿನಿಮಾದ ಮುಹೂರ್ತ ಸಮಾರಂಭವು ಸಂಜಯ್ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿಯಲ್ಲಿ ನಡೆಯಿತು. ಪ್ರಥಮ ದೃಶ್ಯಕ್ಕೆ ನಟಿ ಅನುಪ್ರಭಾಕರ್ ಮತ್ತು ರಘುಮುಖರ್ಜಿ ಕ್ಲಾಪ್ ಮಾಡಿ ಶುಭ ಹಾರೈಸಿದರು. ಕನಕಪುರ ಮೂಲದ ಉದ್ಯಮಿ *ಪುಟ್ಟರಾಜು ಅವರು ಕೆಪಿಜಿ ವಿಷನ್ಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ* ಹೂಡುತ್ತಿರುವುದು ಮಾಡುತ್ತಿರುವುದು ಹೊಸ ಅನುಭವ. ಹಲವು ನಿರ್ದೇಶಕ ಬಳಿ ಕೆಲಸ ಮಾಡಿ, ’ಐತಲಕ್ಕಡಿ’ ಕಂತುಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿದ್ದ *ಶರತ್ ಶಿಡ್ಲಘಟ್ಟ ಸಿನಿಮಾಕ್ಕೆ ಕಥೆ ಬರೆದು ನಿರ್ದೇಶನ* ಮಾಡುತ್ತಿದ್ದಾರೆ. ಪೇದೆಯಾಗಿ ವರಲಕ್ಷೀ, ....
*ಹೊಸಬರ 1979 ಪೋಸ್ಟರ್ ಬಿಡುಗಡೆ* ಹೊಸ ಪ್ರತಿಭೆಗಳೇ ಸೇರಿಕೊಂಡು ಸಿದ್ದಪಡಿಸಿರುವ *1979* ಚಿತ್ರದ ಪೋಸ್ಟರ್ನ್ನು ’ಆ ದಿನಗಳು’ ಖ್ಯಾತಿಯ ಚೇತನ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಕ್ರೀಡಾಪಟು, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಡಾ.ಬಿ.ಎಂ.ಶ್ರೀನಿವಾಸ್, ಬೀರಮಾನಹಳ್ಳಿ ಇವರು ಅಪ್ಪನ ಸ್ಮರಣಾರ್ಥ ಸಲುವಾಗಿ ಮನಂ ಮೂವೀ ಮೇಕರ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಕಥೆ,ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶನ ಮಾಡಿರುವುದು ಪುಷ್ಪರಾಜ್. ಎಲ್ಲೂ ಕೇಳಿರದ ಕಥೆ ಎಂದು ಇಂಗ್ಲೀಷ್ದಲ್ಲಿ ಅಡಿಬರಹ ಇರಲಿದೆ. ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅಜ್ಜು, ಪ್ರಾಣ್ವಿ, sಸುಜಿತ್, ಅಮೃತ ಇವರುಗಳು ಯೌವ್ವನ ಹಾಗೂ ಮುಪ್ಪಿನವರೆಗೂ ....
*ಸಿಂಪಲ್ ಸುನಿ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್..ಇದೇ 14ರಂದು ’ಗತವೈಭವ’ ರಿಲೀಸ್* *ಸಿಂಪಲ್ ಸುನಿ ಗತವೈಭವಕ್ಕೆ ಕಿಚ್ಚ ಸುದೀಪ್ ಬೆಂಬಲ..ಇದೇ 14ಕ್ಕೆ ದುಷ್ಯಂತ್ ಆಶಿಕಾ ಚಿತ್ರ ರಿಲೀಸ್* *ಗತವೈಭವ ಸೃಷ್ಟಿಸಲು ಹೊರಟ ಸುನಿಗೆ ಕಿಚ್ಚ ಸಾಥ್...ಟ್ರೇಲರ್ ಬಿಡುಗಡೆ ಮಾಡಿ ಹೇಳಿದ್ದೇನು ಅಭಿನಯ ಚಕ್ರವರ್ತಿ?* ನಿರ್ದೇಶಕ ಸಿಂಪಲ್ ಸುನಿ ಅವರ ಸಿನಿಕರಿಯರ್ ನ ವಿಭಿನ್ನ ಚಿತ್ರ ಎನಿಸಿಕೊಂಡಿರುವ ಗತವೈಭವ ತನ್ನ ಕಂಟೆಂಟ್ ಮೂಲಕ ಈಗಾಗಲೇ ನಿರೀಕ್ಷೆ ಹೆಚ್ಚು ಮಾಡಿದೆ. ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಹುಟ್ಟುಹಾಕಿರುವ ಗತವೈಭವಕ್ಕೆ ಕಿಚ್ಚ ಸುದೀಪ್ ಬೆಂಬಲ ಸಿಕ್ಕಿದೆ. ನಿನ್ನೆ ಬೆಂಗಳೂರಿನ ಖಾಸಗಿ ಮಾಲ್ ನಲ್ಲಿ ಗತವೈಭವ ....
*ಇನಿಯನ ಆತ್ಮ ಟ್ರೇಲರ್ ಮತ್ತು ಹಾಡು ಬಿಡುಗಡೆ* ಕೋಲಾರ ಮೂಲದ ಹೊಸ ಪ್ರತಿಭೆಗಳೇ ಸೇರಿಕೊಂಡು ಸಿದ್ದಪಡಿಸಿರುವ *ಇನಿಯನ ಆತ್ಮ* ಚಿತ್ರದ ಟ್ರೇಲರ್ ಮತ್ತು ಹಾಡುಗಳನ್ನು ಉದ್ಯಮಿ ಪುಂಡರೀಕ ಮೂರ್ತಿ ಲೋಕಾರ್ಪಣೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಶ್ರೀ ವಿನಾಯಕ ವೆಂಕಟೇಶ್ವರ ಫಿಲಂಸ್ ಅಡಿಯಲ್ಲಿ *ಬಿ.ಕಲಾವತಿ ನಿರ್ಮಾಣ* ಮಾಡಿದ್ದಾರೆ. *ಕಥೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಹಾಗೂ ನಿರ್ದೇಶನದ ಜವಬ್ದಾರಿಯನ್ನು ನರೇಶ್ ಸಿದ್ದಘಟ್ಟ* ವಹಿಸಿಕೊಂಡಿದ್ದಾರೆ. ನಂತರ ಮಾತನಾಡಿದ ನಿರ್ದೇಶಕರು, ಏಳು ಜನ ಯುವ ತಂಡದವರು ಪ್ರವಾಸಕ್ಕೆಂದು ದೂರದ ಸ್ಥಳಕ್ಕೆ ಹೋಗುತ್ತಾರೆ. ಅಲ್ಲಿ ಇವರನ್ನೆ ಗುರಿಯಾಗಿಸಿಕೊಂಡು ಒಂದಷ್ಟು ಘಟನೆಗಳು ನಡೆಯುವುದು ....
ಬೆಂಗಳೂರಿಗೆ ಜೈ ಚಿತ್ರಕ್ಕೆ ಜೈ ಎನ್ನಲು ಬಂದ ಬಾಲಿವುಡ್ ನ ಹಿರಿಯ ನಟ ಸುನೀಲ್ ಶೆಟ್ಟಿ ಜೈ ಚಿತ್ರದ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ಸುನೀಲ್ ಶೆಟ್ಟಿಗೆ ಭರ್ಜರಿ ಸ್ವಾಗತ. ಬೆಂಗಳೂರಿನ ಮಂತ್ರಿ ಮಾಲ್ ಗೆ ಜೈ ಚಿತ್ರದ ಪ್ರಚಾರಕ್ಕಾಗಿ ಬಂದ ಬಾಲಿವುಡ್ ನಟ ಸುನೀಲ್ ಶೆಟ್ಟಿಗೆ ಮಂಗಳೂರಿನ ಸಂಸ್ಕೃತಿಯ ಮಂಗಳ ವಾದ್ಯಗಳೊಂದಿಗೆ ಸ್ವಾಗತಿಸಿದ ಚಿತ್ರ ತಂಡ. ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಹಾಗೂ ಅಭಿನಯಿಸಿರುವ ಜೈ ಚಿತ್ರ ಬಿಡುಗಡೆಗೆ ಸಿದ್ಧವಾಗುತ್ತಿದ್ದಂತೆ ಅದರ ಪ್ರಚಾರ ಕಾರ್ಯ ಕೂಡ ಭರದಿಂದ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಕೆಲವು ಸೆಲೆಬ್ರಿಟಿಗಳ ಜೋಡಿಗಳನ್ನು ಕರೆಸಿ ಪ್ರೇಮ ಗೀತೆಯನ್ನು ಬಿಡುಗಡೆಗೊಳಿಸಿದ್ದರು. ....
*ಲವ್ ಕೇಸ್ ಚಿತ್ರದ ಮುಹೂರ್ತ*
ಶ್ರೀ ಬಂಡೆ ಮಹಾಕಾಳಿಸನ್ನಿಧಿಯಲ್ಲಿ ಲವ್ ಕೇಸ್ ಚಿತ್ರಕ್ಕೆ ಚಾಲನೆ
ಎಂ.ಬಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ಮೋಹನ್ ಬಾಬು ನಿರ್ಮಾಣದಲ್ಲಿ ಜೈಶ್ ನಿರ್ದೇಶನದಲ್ಲಿ ಲವ್ ಕೇಸ್ ಸಿನಿಮಾದ ಮುಹೂರ್ತ ಇಂದು ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿದೆ.
ಶ್ರೀನಗರ ಕಿಟ್ಟಿ, ಟಗರು ಪಲ್ಯ ನಾಗಭೂಷಣ್ , ಸಾಯಿಕುಮಾರ್, ಸುಧಾರಾಣಿ, ಪ್ರಮೋದ್ ಶೆಟ್ಟಿ, ಜೀ ಕನ್ನಡ ಮಹಾನಟಿ ಖ್ಯಾತಿಯ ವಂಶಿ , ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖ್ಯಾತಿಯ ರಂಜನ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ತಿದ್ದಾರೆ.
*ಕೊರಗಜ್ಜ ಚಿತ್ರದ ಕ್ರೇಜ್ ಗೆ ಮಾನ್ಯ ಗೃಹ ಸಚಿವರಿಂದ ಶ್ಲಾಘನೆ: ಚಿತ್ರದ ಯಶಸ್ಸಿಗೆ ಶುಭಹಾರೈಸಿದ ಡಾII ಜಿ ಪರಮೇಶ್ವರ್* *ರಾಷ್ಟ್ರೀಯ ಮಟ್ಟದ ಪತ್ರಕರ್ತರ ಸಮ್ಮುಖದಲ್ಲಿ ನಡೆಯಲಿದೆಯೇ ಟ್ರೇಲರ್ ಲಾಂಚ್?* `` ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ, ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಸಿನಿಮಾ ಹುಟ್ಟಿಸುತ್ತಿರುವ ಕ್ರೇಜ್ ಅಷ್ಟಿಷ್ಟಲ್ಲ. ಚಿತ್ರದ ಧನಾತ್ಮಕ ಜನಪ್ರಿಯತೆಯ ಬಗ್ಗೆ ರಾಜ್ಯದ ಗೃಹ ಸಚಿವರು ಹರ್ಷ ವ್ಯಕ್ತಪಡಿಸಿ, ನಶಿಸಿ ಹೋಗುತ್ತಿರುವ ನಮ್ಮ ಪುರಾತನ ಸಂಸ್ಕ್ರತಿ ಹಾಗೂ ಕಲೆಯನ್ನು "ಕೊರಗಜ್ಜ" ರೀತಿಯ ಸಿನಿಮಾಗಳು ಎತ್ತಿಹಿಡಿಯುತ್ತಿರುವುದು ಸಂತೋಷ ನೀಡುತ್ತಿದೆ. ಈ ರೀತಿಯ ಚಿತ್ರಗಳು ಹೆಚ್ಚು ಹೆಚ್ಚು ಮೂಡಿಬರಲಿ ಎಂದು ಆಶಿಸಿ, ....
*ಟ್ರೆಂಡಿಂಗ್ ನಲ್ಲಿ "45" ಚಿತ್ರದ "AFRO ಟಪಾಂಗ" ಪ್ರಮೋಷನ್ ಸಾಂಗ್.* . *ಬಿಡುಗಡೆಯಾದ ಮೂರೇ ದಿನಗಳಲ್ಲಿ 12 ಮಿಲಿಯನ್ ವೀಕ್ಷಣೆ* . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ "AFRO ಟಪಾಂಗ" ಪ್ರಮೋಷನ್ ಸಾಂಗ್ ಇತ್ತೀಚೆಗಷ್ಟೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿತ್ತು. ಅನಾವರಣವಾದ ಮೂರೇ ದಿನಗಳಲ್ಲಿ ಈ ಹಾಡು 12 ಮಿಲಿಯನ್ ವೀಕ್ಷಣೆಯಾಗಿ ಜನಪ್ರಿಯವಾಗಿದೆ. ....
*ನವೆಂಬರ್ 21ಕ್ಕೆ ಆಕ್ಷನ್ ಥ್ರಿಲ್ಲರ್ ಮಫ್ತಿ ಪೊಲೀಸ್ ರಿಲೀಸ್*
*ಅರ್ಜುನ್ ಸರ್ಜಾ-ಐಶ್ವರ್ಯ ರಾಜೇಶ್ ನಟನೆಯ ಮಫ್ತಿ ಪೊಲೀಸ್ ನವೆಂಬರ್ 21ಕ್ಕೆ ಬಿಡುಗಡೆ*
ಬಹು ನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ಮಫ್ತಿ ಪೊಲೀಸ್ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ 21ಕ್ಕೆ ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ. ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಹಾಗೂ ಐಶ್ವರ್ಯ ರಾಜೇಶ್ ಮಫ್ತಿ ಪೊಲೀಸ್ ಸಿನಿಮಾದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.
ದಿನೇಶ್ ಲೆಟ್ಚುಮನನ್ ನಿರ್ದೇಶನದ ಚೊಚ್ಚಲ ಚಿತ್ರ ಇದಾಗಿದೆ. ಜಿ.ಎಸ್. ಆರ್ಟ್ಸ್ ನಿರ್ಮಿಸಿರುವ ಈ ಚಿತ್ರವನ್ನು ನಿರ್ಮಾಪಕ ಜಿ. ಅರುಲ್ ಕುಮಾರ್ ಪ್ರಸ್ತುತಪಡಿಸಿದ್ದಾರೆ.
*ಟ್ರೇಲರ್ ನಲ್ಲೇ ಜವಾರಿ ಪವರ್ ತೋರಿಸಿ...ಮೋಡಿ ಮಾಡಿದ ಉತ್ತರ ಕರ್ನಾಟಕದ "ಉಡಾಳ" ನವೆಂಬರ್ 14 ರಂದು ತೆರೆಗೆ ಬರಲಿದ್ದಾನೆ* . *"ಉಡಾಳ" ನಿಗೆ ಸಾಥ್ ನೀಡಿದ ನಿಶ್ವಿಕಾ ನಾಯ್ಡು ಹಾಗೂ ನವೀನ್ ಶಂಕರ್* ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸಿರುವ, ಅಮೋಲ್ ಪಾಟೀಲ್ ನಿರ್ದೇಶನದ ಹಾಗೂ "ಪದವಿಪೂರ್ವ" ಖ್ಯಾತಿಯ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ "ಉಡಾಳ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹೆಸರಾಂತ ಕಲಾವಿದರಾದ ನವೀನ್ ಶಂಕರ್ ಹಾಗೂ ನಿಶ್ವಿಕಾ ನಾಯ್ಡು ಟ್ರೇಲರ್ ಅನಾವರಣ ಮಾಡಿ ಚಿತ್ರಕ್ಕೆ ಶುಭ ಕೋರಿದರು. ಮಾಜಿ ಸಚಿವರಾದ ಆಂಜನೇಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ....
*"ಬ್ರ್ಯಾಟ್"(BRAT)ಗೆ ಗೆಲುವಿನ ಹ್ಯಾಟ್ ತೊಡಿಸಿದ ಕಲಾಭಿಮಾನಿಗಳು.* . *ಯಶಸ್ಸಿನ ಹಾದಿಯಲ್ಲಿ ಡಾರ್ಲಿಂಗ್ ಕೃಷ್ಣ ಅಭಿನಯದ ಚಿತ್ರ* . ಕನ್ನಡ ಚಿತ್ರರಂಗದಲ್ಲೀಗ ಒಂದರಹಿಂದೆ ಒಂದರಂತೆ ಯಶಸ್ವಿ ಚಿತ್ರಗಳು ಬರುತ್ತಿದೆ. ಈಗ ಆ ಸಾಲಿಗೆ ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ "ಬ್ರ್ಯಾಟ್" ಚಿತ್ರ ಕೂಡ ಸೇರಿದೆ. ಕಳೆದವಾರ ತೆರೆಕಂಡ ಈ ಚಿತ್ರ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಯಶಸ್ಸಿನ ಋಷಿಯನ್ನು ಹಂಚಿಕೊಂಡರು. ನಮ್ಮ ನಿರೀಕ್ಷೆಗೂ ಮೀರಿ ಜನ ಈ ಚಿತ್ರವನ್ನು ....
*ಆ್ಯಕ್ಷನ್, ಡ್ರಾಮಾ ’ಉಗ್ರ ತಾಂಡವ’ ಟೀಸರ್ ಬಿಡುಗಡೆ* *ಮಲೆನಾಡ ಸೊಗಡಿನ ಚಿತ್ರ ನಿರ್ಮಿಸುತ್ತಿದ್ದಾರೆ ಸಮಾಜ ಸೇವಕ, ಡಾ||ಎನ್. ನರಸಿಂಹಮೂರ್ತಿ* ಸಮಾಜ ಸೇವಕ, ರಿಯಲ್ ಎಸ್ಟೇಟ್ ಉದ್ಯಮಿ ಡಾ|| ಎನ್. ನರಸಿಂಹಮೂರ್ತಿ ಸುರಭಿ ಫಿಲಂಸ್ ಬ್ಯಾನರ್ ನಲ್ಲಿ ’ಉಗ್ರ ತಾಂಡವ’ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆ ಆಗಿದೆ. ಗೌತಮ ಸೂರ್ಯ ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕನಾಗಿ ಚಿರಂತ ನಟಿಸುತ್ತಿದ್ದಾರೆ. ಮಲೆನಾಡ ಸೊಗಡಿನಲ್ಲಿ ತಯಾರಾಗುತ್ತಿರುವ ಈ ಸಿನಿಮಾದ ಶೂಟಿಂಗ್ ಇನ್ನಷ್ಟೇ ಶುರುವಾಗಬೇಕಾಗಿದೆ. ಕರಾವಳಿಯಲ್ಲಿ ನಡೆಯುವ ರಾಜಕೀಯ, ಮಾಫಿಯಾ ಹಾಗೂ ಜಮೀನ್ದಾರ-ಕಾರ್ಮಿಕರ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ. ಟೀಸರ್ ....
*ರಜನಿಕಾಂತ್ 173ನೇ ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಕಮಲ್ ಹಾಸನ್*
*ತಲೈವಾ-173 ಸಿನಿಮಾಗಾಗಿ ಒಂದಾದ ರಜನಿಕಾಂತ್-ಕಮಲ್ ಹಾಸನ್...*
ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಉಳಗನಾಯಗನ್ ಕಮಲ್ ಹಾಸನ್ ಸಿನಿಪ್ರೇಮಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ 173ನೇ ಸಿನಿಮಾ ಘೋಷಣೆಯಾಗಿದೆ. ಈ ಚಿತ್ರಕ್ಕೆ ಕಮಲ್ ಹಾಸನ್ ನಿರ್ಮಾಣ ಮಾಡುತ್ತಿದ್ದಾರೆ.
ಕಮಲ್ ಹಾಸನ್ ತಮ್ಮದೇ ನಿರ್ಮಾಣ ಸಂಸ್ಥೆಯಾದ ರಾಜ್ ಕಮಲ್ ಫಿಲ್ಮ್ ಇಂಟರ್ನ್ಯಾಷನಲ್ ಕಂಪನಿ ಮೂಲಕ ರಜನಿಕಾಂತ್ ಚಿತ್ರ ನಿರ್ಮಾಣ ಮಾಡಲಿದ್ದಾರೆ.
*ರಾಘು ಶಿವಮೊಗ್ಗ ನಿರ್ದೇಶನದ ’ದಿ ಟಾಸ್ಕ್’ಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಾಥ್* *ಹೊಸ ಪ್ರತಿಭೆಗಳ ’ದಿ ಟಾಸ್ಕ್’ಗೆ ಧ್ರುವ ಸರ್ಜಾ ಬೆಂಬಲ* ದಿ ಟಾಸ್ಕ್ ಸಿನಿಮಾ ಟೈಟಲ್ ಹಾಗೂ ಟೀಸರ್ ಮೂಲಕ ಕುತೂಹಲ ಹೆಚ್ಚಿಸಿದೆ. ನವೆಂಬರ್ 21ಕ್ಕೆ ತೆರೆಗೆ ಬರ್ತಿರುವ ಈ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಕಲಾವಿದರ ಸಂಘದಲ್ಲಿ ನಡೆಯಿತು. ಧ್ರುವ ಸರ್ಜಾ ವಿಶೇಷ ಅತಿಥಿಯಾಗಿ ಆಗಮಿಸಿ ಸಾಗುವ ದಾರಿಯ ತುಂಬಾ ಎಂಬ ಸೇಮಿ ರ್ಯಾಪ್ ಗೀತೆಯನ್ನು ಬಿಡುಗಡೆ ಮಾಡಿದರು. ಹಾಡು ಬಿಡುಗಡೆ ಬಳಿಕ ಧ್ರುವ ಸರ್ಜಾ, ಸಾಂಗ್ ತುಂಬಾ ಪ್ರಾಮಿಸಿಂಗ್ ಆಗಿದೆ. ಸ್ಯಾಂಡಿ ಸರ್ ಯೂನಿಕ್ ಆಗಿ ಮ್ಯೂಸಿಕ್ ಕೊಟ್ಟಿದ್ದಾರೆ. ಎಲ್ಲರಿಗೂ ಈ ಹಾಡು ....
*ಪ್ರೇಮಂ ಮಧುರಂ ಪ್ರೇಮಂ ಅಮರಂ* ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ *ಪ್ರೇಮಂ ಮಧುರಂ* ಚಿತ್ರದ ಟ್ರೇಲರ್ ಮತ್ತು ಹಾಡುಗಳ ಬಿಡುಗಡೆ ಸಮಾರಂಭವು ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ರೂಬಿ ಕ್ರಿಯೇಶನ್ಸ್ ಅಡಿಯಲ್ಲಿ *ಅರಗೊಂಡ ಶೇಖರ್ರೆಡ್ಡಿ ನಿರ್ಮಾಣ* ಮಾಡಿದ್ದಾರೆ. *ಗಾಂಧಿ.ಎ.ಬಿ ಸಿನಿಮಾಕ್ಕೆ ಕಥೆ, ನಿರ್ದೇಶನ ಜತೆಗೆ ನಾಯಕನಾಗಿ* ಅಭಿನಯಿಸಿದ್ದಾರೆ. *ನಾಯಕಿಯರಾದ ಐಶ್ವರ್ಯ ದಿನೇಶ್, ಅನುಷಾ ಜೈನ್* ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡರು. ತಾರಾಗಣದಲ್ಲಿ ಸಿಹಿಕಹಿಚಂದ್ರು, ರಾಜೇಶ್ವರಿ, ಲಪಂಗ್ರಾಜ, ಅನೂಪ್ ಅಗಸ್ತ್ಯ ಮುಂತಾದವರು ನಟಿಸಿದ್ದಾರೆ. ಮೂರು ಹಾಡುಗಳಿಗೆ ವಿಶಾಲ್ ಆಲಾಪ ಸಂಗೀತ ....
*ಮೈ ನೇಮ್ ಈಸ್ ಕೆಡಿ ಟ್ರೇಲರ್ ಬಿಡುಗಡೆ* ’ಇಂತಿ ನಿಮ್ಮ ಭೈರಾ’ ತಂಡದ ಎರಡನೇ ಪ್ರಯತ್ನ ಎನ್ನುವಂತೆ *ಮೈ ನೇಮ್ ಈಸ್ ಕೆಡಿ* ಚಿತ್ರದ ಟ್ರೇಲರ್ನ್ನು ಫಿಲಿಂ ಛೇಂಬರ್ ಮಾಜಿ ಅಧ್ಯಕ್ಷ ಬಾ.ಮ.ಹರೀಶ್, ಮಹಾರಾಣಿ ಕಾಲೇಜು ಉಪಕುಲಪತಿ ಶಿವಶಂಕರಪ್ಪ ಮತ್ತು ನಿರ್ದೇಶಕ ಟಿ.ಶಿ.ವೆಂಕಟೇಶ್ ಬಿಡುಗಡೆ ಮಾಡಿ ನಿರ್ಮಾಪಕರ ಸಾಧನೆಯನ್ನು ಕೊಂಡಾಡಿ ತಂಡಕ್ಕೆ ಶುಭ ಹಾರೈಸಿದರು. ಎಸ್ಎಸ್ಕೆಬಿ ಪ್ರೊಡಕ್ಷನ್ ಅಡಿಯಲ್ಲಿ *ವೆಂಕಟೇಶ್.ಡಿ ನಿರ್ಮಾಣ* ಮಾಡಿದ್ದಾರೆ. ಕುಮಾರ್.ಡಿ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. *ಕೆ.ಜೆ.ಚಿಕ್ಕು ಆಕ್ಷನ್ ಕಟ್* ಹೇಳಿದ್ದಾರೆ. ನಿರ್ದೇಶಕರು ಹೇಳುವಂತೆ ಇದೊಂದು ಕಾಮಿಡಿ, ಡ್ರಾಮಾ ಸನ್ನಿವೇಶಗಳನ್ನು ....
*ಬಹು ನಿರೀಕ್ಷಿತ ಮಲ್ಟಿಸ್ಟಾರರ್ "45" ಚಿತ್ರದ "AFRO ಟಪಾಂಗ" ಪ್ರಮೋಷನ್ ಸಾಂಗ್ ಬಿಡುಗಡೆ.* . *ಉಗಾಂಡ ದೇಶದ ಜಿಟೊ ಕಿಡ್ಸ್ ಜೊತೆಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್* . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರಸ್ತುತ "45" ಚಿತ್ರದ "AFRO ಟಪಾಂಗ" ಅದ್ದೂರಿ ....
*ದುನಿಯಾ ವಿಜಯ್ - ರಚಿತರಾಮ್ ಅಭಿನಯದ ಬಹು ನಿರೀಕ್ಷಿತ "ಲ್ಯಾಂಡ್ ಲಾರ್ಡ್" ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.* *ಕನ್ನಡ ರಾಜ್ಯೋತ್ಸವದಂದು ಬಿಡುಗಡೆಯಾಯಿತು ಜಡೇಶ್ ಕೆ ಹಂಪಿ ನಿರ್ದೇಶನದ ಹಾಗೂ ಸಾರಥಿ ಫಿಲಂಸ್ ನಿರ್ಮಾಣದ ಈ ಚಿತ್ರದ ದಿ ಸರ್ವೈವರ್ ಟೀಸರ್* . ನಾಡಿನೆಲ್ಲೆಡೆ ರಾಜ್ಯೋತ್ಸವದ ಸಂಭ್ರಮ. ಈ ಶುಭದಿನದಂದು ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ - ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್ ಅಭಿನಯದ ’ಲ್ಯಾಂಡ್ ಲಾರ್ಡ್’ ಚಿತ್ರದ ಸರ್ವೈವರ್ ಟೀಸರ್ ಬಿಡುಗಡೆ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನೆರವೇರಿತು. ಟೀಸರ್ ಮೂಲಕ ಚಿತ್ರತಂಡ ಬಿಡುಗಡೆಯ ....