Athma.Film News

Saturday, February 10, 2024

  ಆತ್ಮ ಟ್ರೇಲರ್ ಬಿಡುಗಡೆ            ಹಾರರ್, ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವ ’ಆತ್ಮ’ ಚಿತ್ರದ ಟ್ರೇಲರನ್ನು ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ವಿರಾಜ್ ಫಿಲಿಂ ರೆರ್ಕಾಡಿಂಗ್ ಸ್ಟುಡಿಯೋ ಮಾಲೀಕ ಯುವ ಪ್ರತಿಭೆ ಅನಿಲ್.ಸಿ.ಆರ್ ಕಥೆ, ನಿರ್ಮಾಣ ಮಾಡುವುದರ ಜತೆಗೆ ನಾಯಕರಾಗಿ ಅಭಿನಯಿಸಿರುವುದು  ಎರಡನೇ ಅನುಭವ. ಮುನೆಗೌಡಕಿತ್ತಗನೂರು ಸಹ ನಿರ್ಮಾಪಕರಾಗಿ ಗುರಿತಿಸಿಕೊಂಡಿದ್ದಾರೆ. ’ಅಚಲ’ ’ಓಂ ಶಾಂತಿ ಓಂ’ ಮತ್ತು ’ಅಸ್ಥಿರ’ ಚಿತ್ರಗಳಿಗೆ ಆಕ್ಷನ್ ಹೇಳಿರುವ ಎಸ್.ಆರ್.ಪ್ರಮೋದ್ ನಿರ್ದೇಶನ ಮಾಡಿದ್ದಾರೆ.         ಪ್ರಾರಂಭದಿಂದ ಅಂತ್ಯದವರೆಗೂ ಕುತೂಹಲ ....

32

Read More...

Shabbash.Film News

Friday, February 09, 2024

  ಶಭ್ಬಾಷ್‍ ಮೊದಲ ಹಂತದ ಚಿತ್ರೀಕರಣ ಮುಕ್ತಾಯ!    ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಮುಹೂರ್ತ ಕಂಡಿದ್ದ `ಶಭ್ಬಾಷ್’ ಚಿತ್ರ ಅತ್ಯಂತ ವೇಗವಾಗಿ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡಿದೆ. ಈಗಾಗಲೇ ಸಾಕಷ್ಟು ವರ್ಷಗಳ ಕಾಲ ಚಿತ್ರರಂಗದಲ್ಲಿ ಕಾರ್ಯನಿರ್ವಹಿಸಿರುವ ರುದ್ರಶಿವ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಸಾಂಗವಾಗಿ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡು, ಅದರ ಬಗೆಗಿನ ಒಂದಷ್ಟು ಕುತೂಹಲಕರ ವಿವರಗಳನ್ನು ಹಂಚಿಕೊಂಡಿದೆ. ರುದ್ರಶಿವ ಯೋಜನೆಯಂತೆ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಏಳು ದಿನಗಳ ಚಿತ್ರೀಕರಣ ಮುಗಿಸಿಕೊಂಡು, ಚನ್ನಗಿರಿಯ ಶಾಂತಿಸಾಗರದ ಪ್ರದೇಶದಲ್ಲಿ ಚಿತ್ರೀಕರಣ ನಡೆಸಿದ್ದಾರೆ. ಅಲ್ಲಿನ ಪೌರಾಣಿಕ, ಐತಿಹಾಸಿಕ ಸ್ಥಳಗಳಲ್ಲಿ ....

57

Read More...

Kailasa.Film News

Friday, February 09, 2024

  ಕಿಕ್ಕೇರಿಸೋ ಶೈಲಿಯ `ಕೈಲಾಸ’ ಟ್ರಾನ್ಸ್ ಸಾಂಗ್! ಈ ಹಿಂದೆ ತಾರಕಾಸುರ ಚಿತ್ರದ ಮೂಲಕ ಅಬ್ಬರದ ಎಂಟ್ರಿ ಕೊಟ್ಟಿದ್ದವರು ರವಿ. ಇದೀಗ ಅವರು ಕೈಲಾಸ ಎಂಬ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ನಾಗ್ ವೆಂಕಟ್ ನಿರ್ದೇಶನದ ಕೈಲಾಸ ಚಿತ್ರಕ್ಕೆ ಕಾಸಿದ್ರೆ ಎಂಬ ಅಡಿ ಬರಹವಿದೆ. ಈಗಾಗಲೇ ಟೀಸರ್ ಮೂಲಕ ಝಲಕ್ಕುಗಳನ್ನು ಅನಾವರಣಗೊಳಿಸಿದ್ದ ಚಿತ್ರತಂಡವೀಗ ಕನ್ನಡದ ಮಟ್ಟಿಗೆ ಹೊಸತೆನ್ನಿಸುವಂಥಾ ಟ್ರಾನ್ಸ್ ಸಾಂಗ್ ವೊಪಂದನ್ನು ಬಿಡುಗಡೆಗೊಳಿಸಿದೆ. ದೃಷ್ಯಗಳ ಮೂಲಕವೇ ಕಿಕ್ಕೇರಿಸೋ ಶೈಲಿಯ ಈ ಟ್ರಾನ್ಸ್ ವೀಡಿಯೋ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ನೋಡುಗರ ಕಡೆಯಿಂದ ಮೆಚ್ಚುಗೆಯನ್ನೂ ಪಡೆದುಕೊಳ್ಳುತ್ತಿದೆ. ಈ ಸಿನಿಮಾದ ....

59

Read More...

Vishnu Priya.Film News

Friday, February 09, 2024

  ವಿಷ್ಣುಪ್ರಿಯನ ರೊಮ್ಯಾಂಟಿಕ್ ಹಾಡಿಗೆ ಪ್ರೇಕ್ಷಕರು ಫಿದಾ! ತೊಂಬತ್ತರ ದಶಕದ ಸಮ್ಮೋಹಕ ಪ್ರೇಮ ಕಥಾನಕ ಹೊಂದಿರುವ ಚಿತ್ರ `ವಿಷ್ಣುಪ್ರಿಯ’. ಈ ಹಿಂದೆ ಪಡ್ಡೆಹುಲಿಯಾಗಿ ಭರವಸೆ ಮೂಡಿಸಿದ್ದ ಶ್ರೇಯಸ್ ಮಂಜು ವಿಷ್ಣುಪ್ರಿಯನಾಗಿ, ವಿಶಿಷ್ಟವಾದ ಪಾತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಈ ಚಿತ್ರದ ಚೆಂದದ ಹಾಡೊಂದು ವಾರಗಳ ಹಿಂದೆ ಬಿಡುಗಡೆಗೊಂಡಿತ್ತು. ಇದೀಗ ದಿನದಿಂದ ದಿನಕ್ಕೆ ಆ ಹಾಡು ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಕೇಳಿದಾಕ್ಷಣವೇ ಪ್ರೇಮದೂರಿಗೆ ಕೈ ಹಿಡಿದು ಕರೆದೊಯ್ಯುವ ಛಾತಿ ಹೊಂದಿರುವ ಆ ಪ್ರೇಮಗೀತೆ ಹೆಚ್ಚೆಚ್ಚು ವೀಕ್ಷಣೆ ಪಡೆದುಕೊಳ್ಳುತ್ತಾ, ಮೆಚ್ಚುಗೆ ಗಳಿಸುತ್ತಾ ಮುಂದುವರೆಯುತ್ತಿದೆ. ಚಿಗುರು ಚಿಗುರು ಸಮಯ ಹಿತವಾದ ....

56

Read More...

Saramsha.Film News

Friday, February 09, 2024

  ಸಾರಾಂಶ: ತೀರದಾಚೆ ತೆರೆದುಕೊಂಡ ಲಿರಿಕಲ್ ವೀಡಿಯೋ ಸಾಂಗ್!  ತೀರಾ ಅಪರೂಪವೆಂಬಂಥಾ ಭಾವವೊಂದನ್ನು ಕೇಳುಗರೆಲ್ಲರಲ್ಲಿ ಮೂಡಿಸುವ ನಿಟ್ಟಿನಲ್ಲಿ `ಸಾರಾಂಶ’ ಚಿತ್ರದ ಹಾಡುಗಳು ಈಗಾಗಲೇ ಗೆದ್ದಿವೆ. ಇಂಥಾ ಹಾಡಿನ ಮೂಲಕವೇ ಒಂದಿಡೀ ಸಿನಿಮಾದ ಆಂತರ್ಯದ ಬಗ್ಗೆ ಕುತೂಹಲವೂ ಮೂಡಿಕೊಂಡಿದೆ. ಮೆಲುವಾಗಿ ತೇಲಿ ಬಂದು ನಾನಾ ಭಾವನೆಗಳನ್ನು ಮೊಗೆದು ತಂದು ಮನಸಿಗೆ ತುಂಬುವ ಶೈಲಿಯಲ್ಲಿ ಸಂಗೀತ ನಿರ್ದೇಶಕ ಉದಿತ್ ಹರಿತಾಸ್ ಅಕ್ಷರಶಃ ಮೋಡಿ ಮಾಡಿದ್ದಾರೆ. ಇದೀಗ ನಿರ್ದೇಶಕ ಸೂರ್ಯ ವಸಿಷ್ಠ ಹಾಗೂ ಉದಿತ್ ಸಹಯೋಗದ ಮತ್ತೊಂದು ಮೆಲೋಡಿಯಸ್ ಹಾಡು ಬಿಡುಗಡೆಗೊಂಡಿದೆ. ತೀರದಾಚೆಗೆ ಹಾರಿ ಹೋಗುವಾಸೆ ಅಂತ ಶುರುವಾಗುವ ಈ ಹಾಡು ಸಾಹಿತ್ಯ ಸಂಗೀತದ ಹದವಾದ ಸಂಯೋಗದೊಂದಿಗೆ ಹೊಸಾ ....

49

Read More...

Pranayam.News

Wednesday, February 07, 2024

  ಈವಾರ ತೆರೆಯ ಮೇಲೆ ಮಾಸ್   ಲವ್ ಸ್ಟೋರಿ "ಪ್ರಣಯಂ"     ಬಿಚ್ಚುಗತ್ತಿ ಖ್ಯಾತಿಯ ನಟ ರಾಜವರ್ಧನ್, ನೈನಾ ಗಂಗೂಲಿ ನಟಿಸಿರುವ, ಮಾಸ್ ಪ್ರೇಮಕಥೆ‌ ಯೊಂದನ್ನು ಹೇಳುವ  "ಪ್ರಣಯಂ"  ಚಿತ್ರ ಈವಾರ ರಾಜ್ಯಾದ್ಯಂತ‌ ಬಿಡುಗಡೆಯಾಗುತ್ತಿದೆ. ಪಲ್ಲಕ್ಕಿ, ಪಾರಿಜಾತದಂಥ‌ ನವಿರು ಪ್ರೇಮ ಕಥೆಗಳನ್ನು ನೀಡಿದ  ಪರಮೇಶ್ ಅವರ ಬ್ಯಾನರ್ ನಲ್ಲಿ ಮೂಡಿಬಂದಿರುವ  ಮತ್ತೊಂದು  ಇನ್ ಟೆನ್ಸ್ ಲವ್ ಸ್ಟೋರಿ ಪ್ರಣಯಂ ಚಿತ್ರದಲ್ಲಿದೆ.    ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ  ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಬಿಚ್ಚುಗತ್ತಿ ಖ್ಯಾತಿಯ  ನಟ ....

68

Read More...

Sanju.Film News

Saturday, February 03, 2024

  *ಕನ್ನಡ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಅನಾವರಣವಾಯಿತು  "ಸಂಜು" ಚಿತ್ರದ ಸುಮಧುರ ಹಾಡುಗಳು* .   ಪತ್ರಕರ್ತನಾಗಿ ನಂತರ ನಟನಾಗಿ ಈಗ ನಿರ್ದೇಶಕನಾಗಿಯೂ ಜನಪ್ರಿಯರಾಗಿರುವ ಯತಿರಾಜ್ ನಿರ್ದೇಶನದ "ಸಂಜು" ಚಿತ್ರದ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ದೇಶಕರಾದ ಯೋಗರಾಜ್ ಭಟ್, ಮಠ ಗುರುಪ್ರಸಾದ್, ಗುರು ದೇಶಪಾಂಡೆ, ರವಿ.ಆರ್.ಗರಣಿ, ಪಿ.ಮೂರ್ತಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ’ಸಂಜು" ಚಿತ್ರಕ್ಕೆ ಶುಭ ಕೋರಿದರು. ವಿಜಯ್ ಹರಿತ್ಸ ಸಂಗೀತ ನೀಡಿರುವ ಈ ಚಿತ್ರದ ....

45

Read More...

Kali Kudukaru.News

Saturday, February 03, 2024

  "ಕಲಿ ಕುಡುಕರು" ಚಿತ್ರದ  ಟ್ರೈಲರ್ ಬಿಡುಗಡೆ     ಎ.ಎಂ ಕ್ರಿಯೇಷನ್ ಬ್ಯಾನರ್ ಅಡಿ  ಮಹೇಶ್ ಎನ್ ನಿರ್ಮಾಣ ಮಾಡಿ ಕರಣ್ ಸವ್ಯಸಾಚಿ ಆಕ್ಷನ್ ಕಟ್ ಹೇಳಿರುವ  "  ಕಲಿ ಕುಡುಕರು"  ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಒಬ್ಬ ಆಟೋ ಡ್ರೈವರ್,  ಇನ್ನೊಬ್ಬ ಉಂಡಾಡಿ ಗುಂಡ,ಮತ್ತೊಬ್ಬ ರಿಯಲ್ ಎಸ್ಟೇಟ್ ಬ್ರೋಕರ್ ,ಇದರ ಜೊತೆಗೆ ಇನ್ನೊಬ್ಬ ಅನಾಥ ನಿರುದ್ಯೋಗಿ ಹೀಗೆ ನಾಲ್ಕು ನಾಯಕರು ಮತ್ತು ಮತ್ತೊಬ್ಬನ ಸುತ್ತ  ಸಾಗುವ ಕಥೆ ಚಿತ್ರ ಒಳಗೊಂಡಿದೆ. ತಮ್ಮ ಕುಟುಂಬದಲ್ಲಿ ಆಗುವ ಅನಾಹುತಗಳಿಗೆ ಸಮಸ್ಯೆಗಳಿಗೆ ಒಳಗಾಗಿ ಕುಡಿತಕ್ಕೆ ದಾಸರಾಗುತ್ತಾರೆ ,ಕುಡಿತವೇ ಇವರ ಜೀವನಾಗುವಷ್ಡರ ಮಟ್ಟಿಗೆ ಚಟವಾಗಿಸಿಕೊಂಡವರು. ನಿರುದ್ಯೋಗಿ ಯುವಕನನ್ನು ಆಗರ್ಭ ಯುವತಿಯನ್ನು ....

43

Read More...

For Regn.Film News

Saturday, February 03, 2024

  *ಪೃಥ್ವಿ ಅಂಬಾರ್ ಹಾಗೂ ಮಿಲನಾ ನಾಗರಾಜ್ ಡ್ಯುಯೇಟ್...ಫಾರ್ ರಿಜಿಸ್ಟ್ರೇಷನ್ ಮತ್ತೊಂದು ಹಾಡು ರಿಲೀಸ್...*   *ಕದ್ದು ಕದ್ದು ಎಂದು ಹಾಡಿದ ಪೃಥ್ವಿ...’ಫಾರ್ ರಿಜಿಸ್ಟ್ರೇಷನ್’ನಿಂದ ಬಂತು ಮತ್ತೊಂದು ಹಾಡು*     *ಫೆ.23ಕ್ಕೆ ಫಾರ್ ರಿಜಿಸ್ಟ್ರೇಷನ್...ಪೃಥ್ವಿ ಹಾಗೂ ಮಿಲನಾ ಜೋಡಿಯ ಸಿನಿಮಾ*   "ಫಾರ್​ ರಿಜಿಸ್ಟ್ರೇಷನ್”​ ಸ್ಯಾಂಡಲ್​ವುಡ್​ನಲ್ಲಿ ನಾನಾ ವಿಚಾರಗಳಿಂದ ಸದ್ದು ಮಾಡುತ್ತಿರುವ ಹೊಸ ಸಿನಿಮಾ. ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್‌ ನಟಿಸಿರುವ ಈ ಚಿತ್ರದ ಕದ್ದ ಕದ್ದ ಹಾಡನ್ನು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಬಿಡುಗಡೆ ಮಾಡಲಾಯಿತು. ನಿರ್ದೇಶಕ ಕಂ ನಟರಾಗಿರುವ ಡಾರ್ಲಿಂಗ್ ಕೃಷ್ಣ ಸಾಂಗ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ....

41

Read More...

Appa I Love You.News

Wednesday, January 31, 2024

ಅಪ್ಪನ ಬೆಲೆ ತಿಳಿಯಲು ಚಿತ್ರ ನೋಡಬೇಕು       ‘ಅಪ್ಪ ಐ ಲವ್ ಯು’ ಚಿತ್ರದ ಟ್ರೇಲರ್‌ನ್ನು ಅಭಿಷೇಕ್‌ಅಂಬರೀಷ್ ಬಿಡುಗಡೆ ಮಾಡಿದರು. ನಂತರ ಮಾತನಾಡಿ ಅಪ್ಪ ಅಗಲಿದಾಗ ನನಗೆ ಇಪ್ಪತ್ತಾರು ವರ್ಷ. ಅವರು ಎಲ್ಲರನ್ನು ಮಾತಾಡಿಸುವಂತೆ ನನ್ನನ್ನೂ ಬೈದೇ ಮಾತನಾಡಿಸುತ್ತಿದ್ದರು. ಆದರೆ ಅವರ ಪ್ರೀತಿ, ಪಟ್ಟ ಕಷ್ಟಗಳ ಅರಿವಾದಾಗ ಅವರೇ ಜೊತೆಯಲ್ಲಿ ಇರಲಿಲ್ಲ. ಎಲ್ಲರಲ್ಲಿ ನನ್ನದೊಂದು ಮನವಿ. ಅಪ್ಪ ಜೊತೆಗಿರುವಾಗಲೇ ಅವರಿಗೊಂದು ಮೆಚ್ಚುಗೆ ಕೊಡಿ ಎಂದರು.       ಮುಖ್ಯ ಪಾತ್ರದಲ್ಲಿ ನಟಿಸಿರುವ ನೆನಪಿರಲಿ ಪ್ರೇಮ್ ಹೇಳುವಂತೆ ಸಿನಿಮಾರಂಗದಲ್ಲಿ ೨೨ ವರ್ಷ ಪೂರೈಸಲು ಸಾಧ್ಯವಾಗಿದ್ದು ನಮ್ಮ ತಂದೆಯಿಂದ. ಅಂದು ....

63

Read More...

Karataka Damanaka.News

Monday, January 29, 2024

 ಹೊರಬಂತು ಕುತಂತ್ರಿ ನರಿಗಳ ಗೀತೆ       ರಾಕ್‌ಲೈನ್‌ವೆಂಕಟೇಶ್ ನಿರ್ಮಾಣ, ಶಿವರಾಜ್‌ಕುಮಾರ್, ಪ್ರಭುದೇವ ಅಭಿನಯದ ‘ಕರಟಕ ದಮನಕ’ ಚಿತ್ರದ ಮೊದಲ ಹಾಡು ವಿಭಿನ್ನ ಆಡಿಯೋ ಮೂಲಕ ಅಂಬರೀಷ್ ಅವರಿಂದ ಬಿಡುಗಡೆಗೊಳಿಸಿದ್ದು ವಿಶೇಷವಾಗಿತ್ತು. ಯೋಗರಾಜಭಟ್ ಸಾಹಿತ್ಯದಲ್ಲಿ, ಹರಿಕೃಷ್ಣ ಸಂಗೀತ, ಶಂಕರ್‌ಮಹದೇವನ್ ಹಾಡಿದ್ದಾರೆ.        ನಿರ್ದೇಶಕರು ಹೇಳುವಂತೆ ದೀಪಾವಳಿ ಸಂದರ್ಭದಲ್ಲಿ  ಪಟಾಕಿ ಸದ್ದುಗಳ ನಡುವೆ ಸಿದ್ದಪಡಿಸಲಾಗಿತ್ತು. ಸಿನಿಮಾದ ಬಗ್ಗೆ ಎರಡು ಹಿಂಟ್ ಕೊಡಬಹುದು. ಒಂದು ಊರು ಮತ್ತು ನೀರು. ಇಡೀ ಚಿತ್ರವು ಉತ್ತರ ಕರ್ನಾಟಕ ಬ್ಯಾಕ್ ಡ್ರಾಪ್‌ದಲ್ಲಿ ಸಾಗುತ್ತದೆ. ಬಹಳ ಸಮಯದ ಕಾಲ ನೆನಪಿನಲ್ಲಿರುವ ....

41

Read More...

Nimika Ratnakar.News

Friday, February 02, 2024

  ಹಂಪಿ ಉತ್ಸವದಲ್ಲಿ ನೃತ್ಯ ಪ್ರದರ್ಶನ ನೀಡಲಿದ್ದಾರೆ ನಿಮಿಕಾ ರತ್ನಾಕರ್! ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸ್ಮರಿಸಿಕೊಳ್ಳುವ ಈ ವರ್ಷದ ಹಂಪಿ ಉತ್ಸವಕ್ಕೆ ರಾಜ್ಯ ಸರ್ಕಾರ ಮುಹೂರ್ತ ನಿಗಧಿ ಮಾಡಿದೆ. ಇದೇ ತಿಂಗಳ 4ರಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ಸಿಗಲಿದೆ. ನಾನಾ ಪ್ರಕಾರಗಳ ಕಲಾ ಪ್ರದರ್ಶನ, ಥರ ಥರದ ಕಾರ್ಯಕ್ರಮಗಳು ಈ ಉತ್ಸವದ ಪ್ರಧಾನ ಆಕರ್ಷಣೆ. ಇಷ್ಟೂ ವರ್ಷಗಳಲ್ಲಿ ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಉತ್ಸವದಲ್ಲಿ ಭಾಗಿಯಾಗಿ ಮೆರುಗು ನೀಡಿದ್ದಾರೆ. ಈ ಬಾರಿ ಅಂಥಾದ್ದೊಂದು ಸುವರ್ಣಾವಕಾಶ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್ ಅವರಿಗೆ ಲಭಿಸಿದೆ! ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಶೇಕ್ ಇಟ್ ಪುಷ್ಪವತಿ ಎಂಬ ಹಾಡಿಗೆ ಹೆಜ್ಜೆ ಹಾಕುವ ....

71

Read More...

Production No-1.News

Friday, February 02, 2024

  *ಹೇಮಂತ್ ರಾವ್ ಜೊತೆ ಹ್ಯಾಟ್ರಿಕ್ ಹೀರೋ ಸಿನಿಮಾ...ಸಪ್ತ ಡೈರೆಕ್ಟರ್ ಗೆ ಶಿವಣ್ಣ ಜೈ*     *ಶಿವಣ್ಣನಿಗೆ ಸಪ್ತ ಸಾಗರದಾಚೆ ಎಲ್ಲೋ ಡೈರೆಕ್ಟರ್ ಆಕ್ಷನ್ ಕಟ್...*     *ಸೆಂಚೂರಿ ಸ್ಟಾರ್ ಗೆ ಸಪ್ತ ಸಾಗರದಾಚೆ ಎಲ್ಲೋ ಡೈರೆಕ್ಟರ್ ಆಕ್ಷನ್ ಕಟ್...ಐದನೇ ಸಿನಿಮಾಗೆ ಹೇಮಂತ್ ರಾವ್ ರೆಡಿ*     ಪ್ರಯೋಗಾತ್ಮಕ ಸಿನಿಮಾಗಳನ್ನು ಪ್ರೇಕ್ಷಕರ ಎದುರು ತಂದು ನಿಲ್ಲಿಸುವ ನಿರ್ದೇಶಕ ಸಾಲಿನಲ್ಲಿ ಪ್ರಮುಖರು ಹೇಮಂತ್ ಎಂ ರಾವ್. ಮನು ಸುರಭಿ ಹಾಗೂ ಪ್ರಿಯಾಳ ಪ್ರೇಮಕಥೆ ಹೇಳಿ ಗೆದಿದ್ದ ಸಪ್ತ ಸಾಗರದಾಚೆ ಎಲ್ಲೋ ಸಾರಥಿ ಹೇಮಂತ್ ಈಗ ಹ್ಯಾಟ್ರಿಕ್ ಹೀರೋ ಜೊತೆ ಕೈ ಜೋಡಿಸಿದ್ದಾರೆ.  ’ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ’ಕವಲುದಾರಿ’ ಈಗ ಸಪ್ತ ಸಾಗರದಾಚೆ ಎಲ್ಲೋ ಮೂಲಕ ....

42

Read More...

Udaala.Film News

Thursday, February 01, 2024

  *ಪೃಥ್ವಿ ಶಾಮನೂರು ಈಗ ಉತ್ತರ ಕರ್ನಾಟಕದ "ಉಡಾಳ"* .    *ಶೀರ್ಷಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದ ಡಾಲಿ ಧನಂಜಯ* .   ಎರಡು ವರ್ಷಗಳ ಹಿಂದೆ " ಪದವಿಪೂರ್ವ " ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪೃಥ್ವಿ ಶಾಮನೂರು ಅಭಿನಯದ ನೂತನ ಚಿತ್ರದ ಶೀರ್ಷಿಕೆಯನ್ನು ನಟ ರಾಕ್ಷಸ ಡಾಲಿ  ಧನಂಜಯ ಬಿಡುಗಡೆ ಮಾಡಿದರು. ಈ ಚಿತ್ರಕ್ಕೆ "ಉಡಾಳ" ಎಂದು ಹೆಸರಿಡಲಾಗಿದೆ. ಯೋಗರಾಜ್ ಭಟ್ ಹಾಗೂ ರವಿ ಶಾಮನೂರು ನಿರ್ಮಾಣದ ಈ ಚಿತ್ರವನ್ನು ಯೋಗರಾಜ್ ಭಟ್ ಅವರ ಶಿಷ್ಯ ಅಮೋಲ್ ಪಾಟೀಲ್ ನಿರ್ದೇಶನ ಮಾಡುತ್ತಿದ್ದಾರೆ. ಪೃಥ್ವಿ ಅವರಿಗೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್ ಅಭಿನಯಿಸುತ್ತಿದ್ದಾರೆ.   ಮೊದಲು ಯೋಗರಾಜ್ ಭಟ್ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ....

91

Read More...

Mandya Haida.News

Wednesday, January 31, 2024

  ಮಂಡ್ಯಹೈದನ ಮಾಸ್ ಟ್ರೈಲರ್   ಬಿಗ್‌ಬಾಸ್ ಕಾರ್ತೀಕ್‌ ಮಹೇಶ್- ಮಂಡ್ಯ ಶಾಸಕ ರವಿಕುಮಾರ್‌ಗೌಡ, ಪುಟ್ಟರಾಜು ಬಿಡುಗಡೆ      ಮಂಡ್ಯ ಭಾಗದ ಕಥೆಗಳು ಯಾವತ್ತೂ ಸೌಂಡ್ ಮಾಡುತ್ತಲೇ ಬಂದಿವೆ.  ಅದೇರೀತಿ ಈಗ ಮತ್ತೊಂದು ಚಿತ್ರ ಸುದ್ದಿಯಲ್ಲಿದೆ. ಆ ಚಿತ್ರದ ಹೆಸರೇ  ಮಂಡ್ಯಹೈದ. ಅಭಯ್ ಚಂದ್ರಶೇಖರ್ ನಾಯಕನಾಗಿ ನಟಿಸಿರುವ ಮಂಡ್ಯ ಗ್ರಾಮೀಣ ಶೈಲಿಯ ಸಾಹಸಮಯ ಪ್ರೇಮಕಥೆ  ಇರುವ  ಈ ಚಿತ್ರ ಇದೇ ತಿಂಗಳ  ೧೬ರಂದು ರಾಜ್ಯಾದ್ಯಂತ  ಬಿಡುಗಡೆಯಾಗಲಿದೆ. ಈ ಚಿತ್ರದ ಟ್ರೈಲರ್  ಬಿಡುಗಡೆ ಕಾರ್ಯಕ್ರಮ  ಬುಧವಾರ ಸಂಜೆ ಎಸ್.ಆರ್.ವಿ. ಥಿಯೇಟರಿನಲ್ಲಿ  ನೆರವೇರಿತು. ಈ ವರ್ಷದ ಬಿಗ್‌ಬಾಸ್ ವಿಜೇತ ಕಾರ್ತೀಕ್ ಮಹೇಶ್, ಮಂಡ್ಯ ಶಾಸಕ ರವಿಕುಮಾರ್‌ಗೌಡ ಹಾಗೂ ನಿರ್ಮಾಪಕ  ....

61

Read More...

Dheera Samrat.News

Wednesday, January 31, 2024

ಧೀರಸಾಮ್ರಾಟ್‌ಗೆ ಪ್ರಜ್ವಲ್ ದೇವರಾಜ್ ಸಾಥ್        ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ‘ಧೀರಸಾಮ್ರಾಟ್’ ಚಿತ್ರಕ್ಕೆ ತನ್ವಿ ಪ್ರೊಡಕ್ಷನ್ ಹೌಸ್ ಮುಖಾಂತರ ಗುಲ್ಬರ್ಗಾದ ಗುರುಬಂಡಿ ನಿರ್ಮಾಣ ಮಾಡಿರುವುದು ಎರಡನೇ ಅನುಭವ. ಈಗಾಗಲೇ ಎರಡು ಹಾಡುಗಳು ಬಿಡುಗಡೆಗೊಂಡಿದ್ದು, ವೈರಲ್ ಆಗಿ ಸದ್ದು ಮಾಡುತ್ತಿದೆ. ಮೊನ್ನೆ ನಡೆದ ಸಮಾರಂಭದಲ್ಲಿ ಪ್ರಜ್ವಲ್‌ದೇವರಾಜ್ ಬಿಡುಗಡೆ ಮಾಡಿ ತಂಡಕ್ಕೆ ಶುಭಹಾರೈಸಿದ್ದಾರೆ.  ಈ ಸಂದರ್ಭದಲ್ಲಿ ನಾಯಕ ರಾಕೇಶ್‌ಬಿರದಾರ್, ನಾಯಕಿ ಅದ್ವಿತಿಶೆಟ್ಟಿ, ನಾಗೇಂದ್ರಅರಸು, ಯತಿರಾಜ್, ರವೀಂದ್ರನಾಥ್, ಇಂಚರ, ಸಂಕಲ್ಪ್‌ಪಾಟೀಲ್, ಹರೀಶ್‌ಅರಸು, ಸಾಹಸ ಸಂಯೋಜಕ ಕೌರವ ....

233

Read More...

Saramsha.Film News

Wednesday, January 31, 2024

  ಬಿಡುಗಡೆಯಾಯ್ತು ಪ್ರೇಕ್ಷಕರನ್ನು ಬೆರಗಾಗಿಸುವಂಥ `ಸಾರಾಂಶ’ ಟ್ರೈಲರ್!  ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಹಾಡುಗಳ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಆ ಮೂಲಕ ಸಿನಿಮಾ ಮೇಲೆ ಮೂಡಿಕೊಂಡಿದ್ದ ಕುತೂಹಲ ತಣಿಸುವಂತೆ ಇದೀಗ ಟ್ರೈಲರ್ ಬಿಡುಗಡೆಗೊಂಡಿದೆ. ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ, ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಸಾರಾಂಶ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದ್ದಾರೆ. ಈ ಟ್ರೈಲರ್ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಾ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಅಂದಹಾಗೆ, ಈ ಚಿತ್ರ ಇದೇ ಫೆಬ್ರವರಿ 15ರಂದು ತೆರೆಗಾಣಲಿದೆ. `ಸಾರಾಂಶ’ದ ಬಗೆಗಿನ ಒಂದಷ್ಟು ವಿಚಾರಗಳನ್ನು ....

68

Read More...

Juni.Film News

Monday, January 29, 2024

  *ಟ್ರೇಲರ್ ನಲ್ಲಿ  ಜೂನಿ…ಫೆಬ್ರವರಿ 9ಕ್ಕೆ ತೆರೆಗೆ ಬರ್ತಿದೆ ಪೃಥ್ವಿ ಅಂಬಾರ್ ಸಿನಿಮಾ..*   ಪೃಥ್ವಿ ಅಂಬಾರ್ ಒಂದರ ಹಿಂದೊಂದು ವಿಶಿಷ್ಠ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅವರ ಹೊಸ ಸಿನಿಮಾವೊಂದು ಈಗ ಬಿಡುಗಡೆಗೆ ಸಿದ್ಧವಾಗಿದೆ. ಆ ಸಿನಿಮಾವೇ ’ಜೂನಿ’. ಟೈಟಲ್ನಿಂದಲೇ ಗಮನ ಸೆಳೆಯುತ್ತಿರುವ ಈ ಚಿತ್ರದ ಟ್ರೇಲರ್, ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಬಿಡುಗಡೆ ಮಾಡಲಾಗಿದೆ. ಈ ವೇಳೆ ಚಿತ್ರತಂಡ ಮಾಧ್ಯಮದರೊಂದಿಗೆ ಮಾಹಿತಿ ಹಂಚಿಕೊಂಡಿದೆ.   ನಾಯಕ ಪೃಥ್ವಿ ಅಂಬಾರ್ ಮಾತನಾಡಿ, ವೈಭವ್ ಎಷ್ಟು ಕ್ಲಾರಿಟಿಯಾಗಿ ಮಾತನಾಡಿದರೋ, ಅಷ್ಟೇ ಕ್ಲಾರಿಟಿಯಾಗಿ ಸಿನಿಮಾ ಮಾಡಿದ್ದಾರೆ. ವಯಸ್ಸಿನಲ್ಲಿ ನನಗಿಂತ ಚಿಕ್ಕವರು. ....

39

Read More...

Almaaree E Baduku.News

Monday, January 29, 2024

  *ವಿಭಿನ್ನ ಕಥಾಹಂದರ ಹೊಂದಿರುವ "ಅಲೆಮಾರಿ ಈ ಬದುಕು" ಚಿತ್ರ ಫೆಬ್ರವರಿ 16 ರಂದು ತೆರೆಗೆ* .   ದಿವ್ಯಕುಮಾರ್ H N ನಿರ್ಮಾಣದ ಹಾಗೂ ಸಿದ್ದು ಸಿ ಕಟ್ಟಿಮನಿ ನಿರ್ದೇಶನದ "ಅಲೆಮಾರಿ ಈ ಬದುಕು" ಚಿತ್ರ ಫೆಬ್ರವರಿ 16 ರಂದು ತೆರೆಗೆ ಬರುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಇತ್ತೀಚಿಗೆ ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳು ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಟ ಹಾಗೂ ಸಮಾಜಿಕ ಹೋರಾಟಗಾರ ಚೇತನ್ ಅಹಿಂಸ ಹಾಗೂ ಪರಿಸರ ಪ್ರೇಮಿ ಪ್ರಕೃತಿ ಪ್ರಸನ್ನ ಮುಖ್ಯ ಅತಿಥಿಗಳಾಗಿ ಆಗಮಿಸಿ ಟೀಸರ್, ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿ ....

215

Read More...

Ladies Bar.Film News

Monday, January 29, 2024

  *ಧರ್ಮ ಕೀರ್ತಿರಾಜ್ ಅವರಿಂದ ಅನಾವರಣವಾಯಿತು "ಲೇಡಿಸ್ ಬಾರ್"  ಚಿತ್ರದ ಟ್ರೇಲರ್* .          ಡಿ.ಎಂ.ಸಿ. ಪ್ರೊಡಕ್ಷನ್ಸ್ ಮೂಲಕ  ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ "ಲೇಡಿಸ್‌ಬಾರ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.  ನಟ ಧರ್ಮ ಕೀರ್ತಿರಾಜ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಟ್ರೇಲರ್  ಬಿಡುಗಡೆ ಮಾಡಿದರು. ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಾಗೂ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.      ಈ ಸಂದರ್ಭದಲ್ಲಿ ಮಾತನಾಡಿದ ನಟ ಧರ್ಮ ಕೀರ್ತಿರಾಜ್, ಟ್ರೇಲರ್ ....

60

Read More...
Copyright@2018 Chitralahari | All Rights Reserved. Photo Journalist K.S. Mokshendra,