*ಸಿಂಹದ ಮರಿ ದತ್ತು ಪಡೆದ ನಟ ವಸಿಷ್ಠ ಸಿಂಹ* *-ಅಪ್ಪನ ಹೆಸರಾದ ವಿಜಯ ನರಸಿಂಹ ಎಂದು ನಾಮಕರಣ* ಈಗಾಗಲೇ ಸ್ಯಾಂಡಲ್ವುಡ್ನಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವ ಕೆಲಸ ನಡೆಯುತ್ತಿದೆ. ದರ್ಶನ್, ಶಿವಣ್ಣ, ಸೃಜನ್ ಲೋಕೇಶ್, ಚಿಕ್ಕಣ್ಣ ಸೇರಿ ಸಾಕಷ್ಟು ನಟರು ಪ್ರಾಣಿ ಪಕ್ಷಿಗಳನ್ನು ದತ್ತು ಪಡೆದಿದ್ದಾರೆ. ಇದೀಗ ಆ ಸಾಲಿಗೆ ನಟ ವಸಿಷ್ಠ ಸಿಂಹ ಸಹ ಸೇರ್ಪಡೆಗೊಂಡಿದ್ದಾರೆ. ಆದರೆ, ಇನ್ನುಳಿದ ಕಲಾವಿದರಿಗಿಂತ ವಸಿಷ್ಠ ಭಿನ್ನ ಎನಿಸಿಕೊಂಡಿದ್ದಾರೆ. ಹೌದು, ವರ್ಷದ ಮೊದಲ ದಿನವೇ ಬನ್ನೇರುಘಟ್ಟ ರಾಷ್ಟ್ರೀಯ ಜೈವಿನ ಉದ್ಯಾನವನದಲ್ಲಿ ಎಂಟು ತಿಂಗಳ ಸಿಂಹದ ಮರಿಯನ್ನು ದತ್ತು ಪಡೆದಿದ್ದಾರೆ. ಆ ಪುಟಾಣಿ ಮರಿಗೆ ತಮ್ಮ ತಂದೆಯ ಹೆಸರಾದ ವಿಜಯ ನರಸಿಂಹ ಎಂದು ನಾಮಕರಣ ಮಾಡಿದ್ದಾರೆ. ....
ಎಂಆರ್ಹೋಯ್ತುಡಿಆರ್ಬಂತು
ಶೋಭರಾಜಣ್ಣ ನಿರ್ಮಾಣ, ನವನಾಯಕ ದೀಕ್ಷಿತ್, ರವಿಶ್ರೀವತ್ಸ ನಿರ್ದೇಶನದಲ್ಲಿ ಮುತ್ತಪ್ಪರೈಜೀವನಚರಿತ್ರೆಕುರಿತಾದ ‘ಎಂಆರ್’ ಚಿತ್ರದಅದ್ದೂರಿ ಫೋಟೋಶೂಟ್ ಮತ್ತು ಮಹೂರ್ತ ನಡೆದಿತ್ತು. ಇದರ ಬೆನ್ನಲ್ಲೆನಿರ್ಮಾಪಕಪದ್ಮನಾಬ ಇದೇ ಹೆಸರನಲ್ಲಿ ಸಿನಿಮಾ ಮಾಡುವುದಾಗಿ ಹೇಳಿಕೊಂಡಿದ್ದೆ.ಆದರೆಅವರು ಬಾಸ್ಕುಟುಂಬದವರಅನುಮತಿ ಪಡೆಯದೆಚಿತ್ರ ಮಾಡುತ್ತಿರುವುದಕ್ಕೆಆಕ್ಷೇಪಣೆ ವ್ಯಕ್ತಪಡಿಸಿದ್ದರು.ಇದರಿಂದಕಾರ್ಯಪ್ರವೃತ್ತರಾದ ರವಿಶ್ರೀವತ್ಸ ಸುದ್ದಿಗೋಷ್ಟಿಯಲ್ಲಿಇದರ ವಿಷಯಕ್ಕೆ ಸಂಬಂದಿಸಿದಂತೆ ಮಾಹಿತಿ ನೀಡಿದರು.
*ಯೂನೈಟೆಡ್ ಆಡಿಯೋಸ್ನಲ್ಲಿ ಧೂಳೆಬ್ಬಿಸುತ್ತಿದೆ ಚಂದನ್ ಶೆಟ್ಟಿ ಪಾರ್ಟಿ ಫ್ರೀಕ್ ಹಾಡು* ಯೂನೈಟೆಡ್ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ಮೂಡಿಬಂದ ಪಾರ್ಟಿ ಫ್ರೀಕ್ ಹಾಡು ಶನಿವಾರ ಯೂನೈಟೆಡ್ ಆಡಿಯೋಸ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಆಗಿದೆ. ಹಾಡಿನ ಬಗ್ಗೆ ಮಾಹಿತಿ ನೀಡುವ ಉದ್ದೇಶಕ್ಕೆ ಸುದ್ದಿಗೋಷ್ಟಿ ಕರೆದಿದ್ದ ತಂಡ, ಹಾಡಿನ ಹುಟ್ಟು ಮತ್ತು ಅದರ ಹಿನ್ನೆಲೆಯನ್ನು ಬಿಚ್ಚಿಟ್ಟಿತು. ಚೈತನ್ಯ ಲಕಂಸಾನಿ ಈ ಹಾಡಿಗೆ ಬಂಡವಾಳ ಹೂಡಿದ್ದಾರೆ. ಮೂಲತಃ ಆಂಧ್ರದವರಾದ ಚೈತನ್ಯ, ಸಿನಿಮಾ ಕ್ಷೇತ್ರದಲ್ಲಿ ನೆಲೆಯೂರಬೇಕೆಂದು ಯೂನೈಟೆಡ್ ಪ್ರೊಡಕ್ಷನ್ಸ್ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ. ಮೊದಲಾರ್ಥವಾಗಿ ಕನ್ನಡ ಮತ್ತು ತೆಲುಗಿನಲ್ಲಿ ಹೊಸ ವರ್ಷಾಚರಣೆಗೆ ಉಡುಗೊರೆ ....
*ಚಾಮುಂಡೇಶ್ವರಿ ಸ್ಟುಡಿಯೋಸ್ ಸಹಕಾರದೊಂದಿಗೆ ಸಿನಿಘಮಾ ಸಂಸ್ಥೆಯಿಂದ ಪ್ರತಿಭಾ ಸಂಪದ* *-ಆಡಿಷನ್ ಬಗ್ಗೆ ಮಾಹಿತಿ, ಸಿನಿಮಾಕ್ಷೇತ್ರ ಪ್ರವೇಶ ಬಯಸುವವರಿಗೆ ಬೃಹತ್ ವೇದಿಕೆ* ಸಿನಿಘಮಾ ಸಂಸ್ಥೆಯ ಚಾಮುಂಡೇಶ್ವರಿ ಸ್ಟುಡಿಯೋದ ಸಂಪೂರ್ಣ ಬೆಂಬಲ ಮತ್ತು ಸಹಕಾರದೊಂದಿಗೆ ರೂಪಿಸಿರುವ ಯೋಜನೆಯೇ ಪ್ರತಿಭಾ ಸಂಪದ. ಒಂದು ಚಿತ್ರ ನಿರ್ಮಾಣಕ್ಕೆ ಕಲಾವಿದರು, ತಂತ್ರಜ್ಷರು, ಸಂಸ್ಥೆಗಳು ಎಲ್ಲರೂ ಬೇಕು. ಈ ಎಲ್ಲ ವಲಯದಲ್ಲಿ ವಿನೂತನ ಪ್ರತಿಭೆಗಳನ್ನು ಗುರುತಿಸಿ ಶೋಧಿಸಿ, ಚಿತ್ರಜಗತ್ತಿಗೆ ಅವರನ್ನು ಪರಿಪಕ್ವವಾಗಿ ಪರಿಚಯಿಸುವ ಕಾರ್ಯಕ್ರಮವಿದು. ಸಿನಿಘಮಾ ಸಂಸ್ಥೆಯು 100 ಕಿರುಚಿತ್ರಗಳನ್ನು ನಿರ್ಮಿಸಲು ಯೋಜಿಸಿದೆ. ಅಲ್ಲಿನ ಪ್ರತಿಭೆಗಳನ್ನು ಬಳಸಿಕೊಂಡು ಆನಂತರದ ದಿನಗಳಲ್ಲಿ 10 ಸಿನಿಮಾ ....
*ಐರಾವನ್ ಸಿನಿಮಾ ಟೀಸರ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್* ಎಂಜಿಪಿ ಕ್ರಿಯೇಷನ್ಸ್ ಅರ್ಪಿಸುವ ನಿರಂತರ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ನಿರ್ಮಾಣವಾದ ಐರಾವನ್ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಮುಖ್ಯ ಅತಿಥಿಯಾಗಿ ಆಗಮಿಸಿ ಚಿತ್ರದ ಟೀಸರ್ ಬಿಡುಗಡೆ ಮಾಡಿ ತಂಡಕ್ಕೆ ಹಾರೈಸಿದರು. ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮೊದಲಿಗೆ ಮಾತನಾಡಿದ ನಟ ಜೆಕೆ ಸಿನಿಮಾರಂಗದ ಆರಂಭದ ದಿನಗಳನ್ನು ನೆನಪಿಸಿಕೊಂಡರು. ‘ನನ್ನನ್ನು ಸಿನಿಮಾರಂಗಕ್ಕೆ ಪರಿಚಯಿಸಿದ್ದು, ಜಾಕ್ ಮಂಜು ಅವರು ಡೆಡ್ಲಿ 2 ಚಿತ್ರದ ಮೂಲಕ. ಆ ಸಿನಿಮಾದಿಂದ ಸಿನಿಮಾ ಜರ್ನಿ ಶುರುವಾಯಿತು. ಬಳಿಕ ಮತ್ತೆ ದೂರವಾದೆ. ಆಗ ಕೆಂಪೇಗೌಡ ಚಿತ್ರದ ಮೂಲಕ ಮತ್ತೆ ಬಂದೆ. ಕ್ರಿಕೆಟ್ನಲ್ಲಿ ....
*ನಮ್ಮ ಫ್ಲೀಕ್ಸ್ ಓಟಿಟಿ ವೇದಿಕೆಯಲ್ಲಿ ಭೂಮಿಕಾ ಸಿನಿಮಾ ರಿಲೀಸ್* *-ಬೆಸ್ತರ ಹುಡುಗಿಯ ಕಥೆಯೇ ಚಿತ್ರದ ಜೀವಾಳ* *-ಇದೇ 25ಕ್ಕೆ ಸಿನಿಮಾ ಬಿಡುಗಡೆ* ಹೀರಾ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ತಯಾರಾದ ಭೂಮಿಕಾ ಸಿನಿಮಾ ಕನ್ನಡದ ಜತೆಗೆ ತುಳುವಿನಲ್ಲಿಯೂ ಸಿದ್ಧವಾಗಿ ಬಿಡುಗಡೆಗೆ ಬಂದಿದೆ. ಡಿ.25ರ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ನಮ್ಮ ಫ್ಲೀಕ್ಸ್ ಓಟಿಟಿ ಫ್ಲಾಟ್ಫಾರ್ಮ್ ನಲ್ಲಿ ಚಿತ್ರ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಬಿಡುಗಡೆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ತಂಡ ಮಾಧ್ಯಮದ ಮುಂದೆ ಬಂದಿತ್ತು. ವಿಶೇಷ ಏನೆಂದರೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಪಿಕೆಎಚ್ ದಾಸ್ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. 'ಇದು ನನ್ನ ಮೊದಲ ನಿರ್ದೇಶನದ ಸಿನಿಮಾ. ಮಂಗಳೂರು ಸುತ್ತ 28ದಿನ ....
ಶಕೀಲಾ ನೋಡ್ತಾರೆ ಎನ್ನುವ ನಂಬಿಕೆ ಇದೆ – ಇಂದ್ರಜಿತ್ ಲಂಕೇಶ್ ೯೦ರ ದಶಕದ ಹಾಟ್ ತಾರೆ ಅನಿಸಿಕೊಂಡಿದ್ದ ಶಕೀಲಾ ಅವರ ಬಯೋಪಿಕ್ ಚಿತ್ರ ‘ಶಕೀಲಾ’ ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ. ಬಿಡುಗಡೆಪೂರ್ವ ಸುದ್ದಿಗೋಷ್ಟಿಯಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾತನಾಡಿ ನಾವು ಬೆಕ್ಕಿಗೆ ಗಂಟೆ ಕಟ್ಟುವ ಕೆಲಸ ಮಾಡುತ್ತಿದ್ದೇವೆ. ಗೆದ್ರೆ ಟ್ರೆಂಡ್ ಸೆಟ್ಟರ್ ಆಗ್ತೀವಿ. ದಕ್ಷಿಣ ಭಾರತದ ನಟಿಯ ಬದುಕಿನ ಘಟನೆಗಳನ್ನು ತೋರಿಸಲಾಗಿದೆ. ಹಾಗಂತ ಎಲ್ಲಿಯೂ ವೈಭವಿಕರಿಸದೆ, ನೈಜ ಘಟನೆಯ ಒಂದಷ್ಟು ಅಂಶಗಳನ್ನು ಹೆಕ್ಕಿ ತೋರಿಸುವ ಪ್ರಯತ್ನ ಮಾಡಲಾಗಿದೆ. ವಿಶ್ವದಾದ್ಯಂತ ೨೦೦೦ ಪರದೆಗಳಲ್ಲಿ ....
*ರಾಜತಂತ್ರ ಚಿತ್ರದ ಟೀಸರ್ ಬಿಡುಗಡೆ ಮಾಡಿದ ಪುನೀತ್* *-ಜನವರಿ 1ಕ್ಕೆ ಚಿತ್ರಮಂದಿರಗಳಲ್ಲಿ ರಿಲೀಸ್* ಲಾಕ್ ಡೌನ್ ಸಡಿಲವಾಗುತ್ತಿದ್ದಂತೆ ಮುಹೂರ್ತ ಮುಗಿಸಿಕೊಂಡಿದ್ದ ರಾಜ್ಯ ಪ್ರಶಸ್ತಿ ವಿಜೇತ ರಾಘವೇಂದ್ರ ರಾಜಕುಮಾರ್ ನಟಿಸಿರುವ ರಾಜತಂತ್ರ ಸಿನಿಮಾ ಇದೀಗ ಬಿಡುಗಡೆಗೆ ದಿನಾಂಕ ಘೋಷಣೆ ಮಾಡಿಕೊಂಡಿದೆ. ಮೊದಲಾರ್ಥ ಶನಿವಾರ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜನೆ ಮಾಡಿತ್ತು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅತಿಥಿಯಾಗಿ ಆಗಮಿಸಿ ಟೀಸರ್ ಬಿಡುಗಡೆ ಮಾಡಿದರು. ಅದಕ್ಕೂ ಮೊದಲು ರಾಘಣ್ಣ ಅವರ ಕುಟುಂಬ ಮತ್ತು ಚಿತ್ರತಂಡ ವೇದಿಕೆ ಮೇಲೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಚಿತ್ರಕ್ಕೆ ಕಥೆ, ....
ಕೊಳಗ ಇಪ್ಪತ್ತು ವರ್ಷಗಳ ರೈತಹೋರಾಟದ ಕಥನ ಕನ್ನಡದಲ್ಲಿ ಈಗಾಗಲೇ ಸಾಕಷ್ಟು ರೈತ ಹೋರಾಟದ ಕಥನಗಳು ತೆರೆಮೇಲೆ ಮೂಡಿಬಂದಿವೆ. ಆ ಸಾಲಿಗೆ ಮತ್ತೊಂದು ಚಿತ್ರ ಹೊಸದಾಗಿ ಸೇರ್ಪಡೆಯಾಗುತ್ತಿದೆ. ಅದರ ಹೆಸರು ಕೊಳಗ. ನಾ.ಡಿಸೋಜಾ ಅವರ ಕಾದಂಬರಿ ಆಧರಿಸಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಪ್ರಸನ್ನ ಗೂರಲಕೆರೆ ಸಂಭಾಷಣೆ ರಚಿಸಿ ನಿರ್ದೇಶನ ಮಾಡುತ್ತಿದ್ದಾರೆ. ನಿರ್ದೇಶಕರ ಪತ್ನಿ ಶ್ರೀಮತಿ ನಿಶಿತಾಗೌಡ ಚಿತ್ರಕಥೆ ಹೆಣೆಯುವುದರ ಜೊತೆಗೆ ಚಿತ್ರದ ನಾಯಕಿಯಾಗೂ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಮುಹೂರ್ತ ಕಾರ್ಯಕ್ರಮ ಬೆಂಗಳೂರಿನ ರಾಜರಾಜೇಶ್ವರಿ ನಗರದ ಶ್ರೀ ನಿಮಿಶಾಂಭ ದೇವಸ್ಥಾನದಲ್ಲಿ ನೆರವೇರಿತು. ರೈತ ಹೋರಾಟಗಾರ ಕೋಡಿಹಳ್ಳಿ ....
*ಆಡಿಯೋ ಬಿಡುಗಡೆಗೆ ಮಾಡಿಕೊಂಡ ಖೇಲ್ ಚಿತ್ರತಂಡ* *-ಹೊಸಬರ ಹೊಸಸಾಹಸಕ್ಕೆ ಮುರಳಿ ಮೋಹನ್, ನಿರ್ದೇಶಕ ಶಿವಗಣೇಶ್ ಸಾಥ್* *-ಶೀಘ್ರದಲ್ಲಿ ಚಿತ್ರಮಂದಿರಕ್ಕೆ ಆಗಮಿಸುವ ಸುಳಿವು* ಸಿನಿಮಾ ಹೆಸರು ಖೇಲ್. ಶೀರ್ಷಿಕೆಗೆ ಸೂಕ್ತ ಎನಿಸುವಂತೆ ಇಲ್ಲಿ ಆಟವೇ ಪ್ರಧಾನ. ಹಾಗಂತ ಆ ಆಟ ಯಾವುದು? ಕಳ್ಳ ಯಾರು ಹೀರೋ ಯಾರು ಎಂಬುದನ್ನು ಸಿನಿಮಾದಲ್ಲಿಯೇ ನೋಡಿ ಎಂದು ಕುತೂಹಲಕ್ಕೆ ಒಗ್ಗರಣೆ ಹಾಕಿತು ಚಿತ್ರತಂಡ. ಅಂದಹಾಗೆ, ಯೋಗಿತ ಫಿಲಂ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ಸತೀಶ್ ಎಚ್ (ಮಾರ್ಕೇಟ್) ನಿರ್ಮಾಣ ಮಾಡಿರುವ ಖೇಲ್ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಹಾಡನ್ನು ಬಿಡುಗಡೆ ಮಾಡಿಕೊಂಡ ತಂಡ, ಬಿಡುಗಡೆಗೆ ನಾವು ಸಿದ್ಧರಿದ್ದೇವೆ ಎಂಬ ಮುನ್ಸೂಚನೆಯನ್ನು ನೀಡಿದೆ. ಈಗಾಗಲೇ ....
*ಲಾಕ್ಡೌನ್ ಬಳಿಕ 25 ದಿನಗಳನ್ನು ಪೂರೈಸಿದ ಮೊದಲ ಸಿನಿಮಾ ಆ್ಯಕ್ಟ್ 1978* *- ಸಾರ್ಥಕತೆಯ ನಗು ಬೀರಿದ ಚಿತ್ರತಂಡ* ಲಾಕ್ಡೌನ್ ಬಳಿಕ ಕನ್ನಡದ ಮೊದಲ ಹೊಸ ಸಿನಿಮಾ ಬಿಡುಗಡೆ ಆಗಿದ್ದು ಮಂಸೋರೆ ನಿರ್ದೇಶನದ ಆ್ಯಕ್ಟ್ 1978. ಇದೀಗ ಆ ಚಿತ್ರದ ರಾಜ್ಯದ ಹಲವೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, 25 ದಿನಗಳನ್ನು ಪೂರ್ಣಗೊಳಿಸಿ ಮುನ್ನುಗ್ಗುತ್ತಿದೆ. ಈ ಖುಷಿಯ ವಿಚಾರಕ್ಕೆ ಇಡೀ ತಂಡ ಮತ್ತೆ ಮಾಧ್ಯಮದ ಮುಂದೆ ಬಂದಿತ್ತು. ಕೊರೊನಾ ಸಮಯದಲ್ಲಿ ಆ 25 ದಿನ ಪೂರೈಸಿದ ಬಗೆಯನ್ನು ಚಿತ್ರತಂಡದವರು ಒಂದೊಂದಾಗಿ ಮಾಹಿತಿ ಹಂಚಿಕೊಂಡರು. ಡಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಆ್ಯಕ್ಟ್ 1978 ಸಿನಿಮಾವನ್ನು ದೇವರಾಜ್ ಆರ್ ಬಂಡವಾಳ ಹೂಡಿದ್ದು, ಮಂಸೋರೆ ನಿರ್ದೇಶನ ....
ಅಪ್ಪ ಮಗನ ಬಾಂದವ್ಯದ ಕಥನ ಮದ್ಯಪಾನ ಮಾಡಲು ಹಲವು ಕಾರಣಗಳು ಇರುತ್ತದೆ. ಬದುಕಿನಲ್ಲಿ ಎದುರಾಗುವ ಸಮಸ್ಯೆಗಳನ್ನು ಮರೆಯಲು ಕುಡಿತದ ದಾಸನಾಗುತ್ತಾರೆ. ಅಂಥದ್ದೇ ಮದ್ಯವ್ಯಸನಿಯ ಕತೆ ಹೊಂದಿರುವ ಚಿತ್ರ ‘ನಾನೊಂಥರ’. ತನ್ನದೆ ರೀತಿಯಲ್ಲಿ ಜೀವನ ಸಾಗಿಸುತ್ತಿದ್ದ ಆತನಿಗೆ ನಡೆದ ಒಂದು ಘಟನೆ ಕುಡುಕನಾಗುವಂತೆ ಮಾಡುತ್ತದೆ. ಅಂಥವನ ಬಾಳಿನಲ್ಲಿ ಹುಡುಗಿಯೊಬ್ಬಳು ಪ್ರವೇಶಿಸುತ್ತಾಳೆ. ಅವನ ಸಾಮಾಜಿಕ ಕಳಕಳಿ, ಸೇವಾ ಮನೋಭಾವ ನೋಡಿ ಪ್ರೀತಿ ಮಾಡುತ್ತಾಳೆ. ಕುಡಿತಕ್ಕೆ ಕಾರಣವೇನೆಂದು ಪತ್ತೆ ಹಚ್ಚಿ ಅವನನ್ನು ಮತ್ತೆ ಮೊದಲಿನಂತೆ ಮಾಡುತ್ತಾಳೆ. ಅವನ ಬದುಕನ್ನು ಒಳ್ಳೆ ದಾರಿಗೆ ತರುವಾಗ ಎದುರಾಗುವ ಅಡೆತಡೆಗಳು, ಜೊತೆಗೆ ತಂದೆ ಮಗನ ....
ಚಂದನವನದಲ್ಲಿ ಪ್ರಜ್ವಲ್ದೇವರಾಜ್ ಅಬ್ಬರ
ಪ್ರಜ್ವಲ್ದೇವರಾಜ್ ಸದ್ಯ ‘ಅಬ್ಬರ’ ಮಾಡುತ್ತಿದ್ದಾರೆ. ಹಾಗಂತ ಇವರ ಮೇಲೆ ಆರೋಪ ಮಾಡುವುದು ಸರಿ ಅನಿಸುವುದಿಲ್ಲ. ಏಕೆಂದರೆ ಇವರು ಇದೇ ಹೆಸರಿನ ಚಿತ್ರದಲ್ಲಿ ನಟಿಸುತ್ತಿದ್ದಾರೆ. ತಂದೆ-ಮಗನ ಬಾಂದವ್ಯ, ಮೂವರು ಹುಡುಗಿಯರೊಂದಿಗೆ ಪ್ರೀತಿಗಳ ಸಂಘರ್ಷ, ಖಳನೊಂದಿಗೆ ಸೇಡು ಕುರಿತಾದ ಕತೆಯಾಗಿದೆ. ಸಂಪೂರ್ಣ ಮನರಂಜನೆ, ಸಾಹಸ, ಹಾಸ್ಯ ಮತ್ತು ಕುಟುಂಬಸಮೇತ ನೋಡಬಹುದಾದ ಚಿತ್ರವಾಗಿರುವುದು ವಿಶೇಷ. ಸಾಹಿತಿ ಕೆ.ರಾಮನಾರಾಯಣ್ ಗ್ಯಾಪ್ ನಂತರ ಸಿನಿಮಾಗೆ ಕತೆ,ಚಿತ್ರಕತೆ,ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಹೊಸಬರ ವಿಡಿಯೋ ಆಲ್ಬಂ ಚಿತ್ರರಂಗಕ್ಕೆ ಬರಬೇಕು ಎಂಬ ಹೊಸ ಪ್ರತಿಭೆಗಳು ಮೊದಲು ಮುಖ ಮಾಡುವುದು ಕಿರುಚಿತ್ರ, ಆಲ್ಬಂಗಳತ್ತ. ತಮ್ಮ ಪ್ರತಿಭೆಯನ್ನು ಓರೆಗೆ ಹಚ್ಚಲು ಇವುಗಳು ಉತ್ತಮ ವೇದಿಕೆಯಾಗುತ್ತದೆ ಅಂಥ ನಂಬಿರುವವರು. ಇತ್ತೀಚೆಗೆ ಇದರ ಮೂಲಕವೆ ಗುರುತಿಸಿಕೊಂಡು, ಭರವಸೆ ಮೂಡಿಸಿ ಚಿತ್ರ ನಿರ್ದೇಶಕರಾಗುವ ಉದಾಹರಣೆಗಳು ಸಾಕಷ್ಟು ಸಿಗುತ್ತವೆ. ಈ ಸಾಲಿಗೆ ‘ಓ ಮೈ ಲವ್’ ವಿಡಿಯೋ ಹಾಡು ಸಿದ್ದಗೊಂಡಿದೆ. ಹಲವು ಚಿತ್ರಗಳಿಗೆ ಕೆಲಸ ಮಾಡಿರುವ ಜೀವನ್ಗಂಗಾಧರಯ್ಯ ಹಾಡಿಗೆ ಪರಿಕಲ್ಪನೆ,ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಡ್ಯಾಮಾ ಜ್ಯೂನಿಯರ್ಸ್ ಖ್ಯಾತಿಯ ತುಷಾರ್ಗೌಡ ನಾಯಕ. ಮಜಾಭಾರತ್ದಲ್ಲಿ ಕಾಣಿಸಿಕೊಂಡಿದ್ದ ....
ಪೈರಸಿ ಕಾಟ ಪುರುಸೋತ್ರಾಮನಿಗೂ ತಟ್ಟಿದೆ ಕಳೆದ ಶುಕ್ರವಾರ ರಿಲೀಸ್ ಆಗಿದ್ದ ಹಾಸ್ಯ ಚಿತ್ರ ‘ಪುರ್ಸೋತ್ ರಾಮ’ನಿಗೆ ಪೈರಸಿ ಕಾಟದಿಂದ ಗಳಿಕೆ ಕಡಿಮೆ ಆಗಿದೆ ಎಂದು ನಾಯಕಿ,ನಿರ್ಮಾಪಕಿ ಮಾನಸಾ ಮಾದ್ಯಮದ ಎದುರು ಬೇಸರ ವ್ಯಕ್ತಪಡಿಸಿದರು. ಸೋಮವಾರ ತುರ್ತು ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ ನಮ್ಮ ಚಿತ್ರವನ್ನು ಕಷ್ಟಪಟ್ಟು ಕೋವಿಡ್ ಸಮಯದಲ್ಲೂ ಬಿಡುಗಡೆ ಮಾಡಿದ್ದೇವೆ. ಆದರೆ ಚಿತ್ರಮಂದಿರದಲ್ಲಿ ದುರುಳನೊಬ್ಬ ರೆಕಾರ್ಡ್ ಮಾಡಿಕೊಂಡು ಯೂಟ್ಯೂಬ್, ಟೆಲಿಗ್ರಾಮ್ಗಳಲ್ಲಿ ಹರಿಯಬಿಟ್ಟಿದ್ದಾನೆ. ಇದರಿಂದ ಸುಮಾರು ೮೦೦೦ ಮಂದಿ ಡೌನ್ಲೋಡ್ ಮಾಡಿದ್ದಾರೆ. ಈ ಸಂಬಂದ ಸೈಬರ್ ಪೋಲೀಸ್ ಠಾಣೆಗೂ ದೂರು ದಾಖಲಿಸಲಾಗಿದೆ. ....
ಸೇತುಬಂದು ಸಾಹಸಿಗನ ಸಿನಿಮಾ ಪ್ರಪಂಚದಲ್ಲಿ ಕೆಲವರು ಮಾತ್ರ ಯಾವುದೇ ಅಪೇಕ್ಷೆ ಹೊಂದದೆ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಯಶಸ್ವಿಯಾದ ಉದಾಹರಣೆಗಳು ನಮ್ಮ ಕಣ್ಣ ಮುಂದಿದೆ. ಆ ಪೈಕಿ ಸುಳ್ಯಾದ ಗಿರೀಶ್ಭಾರದ್ವಾಜ್ ಒಬ್ಬರು. ಮಂಡ್ಯಾದಲ್ಲಿ ವಿದ್ಯಾಭ್ಯಾಸ ಮುಗಿಸಿ, ಬೆಂಗಳೂರಲ್ಲಿ ಉದ್ಯೋಗ ಮಾಡಿಕೊಂಡಿದ್ದ, ಇವರು ತೂಗು ಸೇತುವೆUಳು ನಿರ್ಮಾಣ ಮಾಡುವುದರ ಮೂಲಕ ಮನುಷ್ಯರ ಬದುಕು ಸಂಬಂದಗಳನ್ನು ಕಟ್ಟಿದವರು. ಇವರ ಸೇವೆಯನ್ನು ಪರಿಗಣಿಸಿದ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಕರ್ನಾಟಕ ಸೇರಿದಂತೆ ಭಾರತದಾದ್ಯಂತ ೧೩೯ ಸೇತುವೆಗಳನ್ನು ಕಟ್ಟಿ, ೨೪೦ ಹಳ್ಳಿಗಳಲ್ಲಿ ಸಂಪರ್ಕ ಕ್ರಾಂತಿಗೆ ನಾಂದಿಯಾಗಿ, ಮೂರು ....
ಸೆಟ್ಟೇರಿತು ಎಂಆರ್ ಚಿತ್ರ ‘ಎಂಆರ್’ ಅಂದರೆ ಮುತ್ತಪ್ಪರೈ ಬಯೋಪಿಕ್ ಕುರಿತಾದ ಚಿತ್ರದ ಫೋಟೋ ಶೂಟ್ ರಾಮನಗರದಲ್ಲಿ ಶ್ರೀಮಂತವಾಗಿ ನಡೆದಿತ್ತು. ಶುಕ್ರವಾರ ಬೆಸ್ಟ್ ಕ್ಲಬ್ದಲ್ಲಿ ಮಹೂರ್ತ ಆಚರಿಸಿಕೊಂಡಿದೆ. ನಿರ್ದೇಶಕ ರವಿಶ್ರೀವತ್ಸ ಮೂರು ವರ್ಷದ ನಂತರ ಕಮರ್ಷಿಯಲ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಂತರ ನಿರ್ದೇಶಕರು ಮಾದ್ಯಮದೊಂದಿಗೆ ಮಾತನಾಡಿ ಒಂದಷ್ಟು ಮಾಹಿತಿಗಳನ್ನು ತೆರೆದಿಟ್ಟರು. ಕಳೆದ ಇಪ್ಪತ್ತು ವರ್ಷಗಳಿಂದ ಹಲವರು ಸರ್ ಅವರ ಚಿತ್ರ ಮಾಡಬೇಕೆಂದು ಯೋಚಿಸಿದ್ದರು. ನಿರ್ಮಾಪಕರುಗಳಾದ ರಾಮು, ಧೀರಜ್ ಹಾಗೂ ದಿನೇಶ್ಬಾಬು ಸಾರಥ್ಯದಲ್ಲಿ ಉಪೇಂದ್ರ ನಟಿಸಲಿದ್ದಾರೆಂದು ಹೇಳಲಾಗಿತ್ತು. ಕಳೆದ ವರ್ಷ ....
*ಪೊಲೀಸ್ ವರ್ಸಸ್ ಪೊಲೀಸ್; ಶೀತಲ ಸಮರಕ್ಕೆ ಸಜ್ಜಾದ ವಸಿಷ್ಠ ಮತ್ತು ಕಿಶೋರ್* *ಮಲ್ಲೇಶ್ವರದ ಮಹಾಗಣಪತಿ ದೇವಸ್ಥಾನದಲ್ಲಿ ಮುಹೂರ್ತ: ಜನವರಿಯಲ್ಲಿ ಶೂಟಿಂಗ್* ವಸಿಷ್ಟ ಸಿಂಹ ಮತ್ತು ಕಿಶೋರ್ ಮುಖ್ಯ ಭೂಮಿಕೆ ನಿಭಾಯಿಸಲಿರುವ ಚಿತ್ರದ ಮುಹೂರ್ತ ಶುಭ ಶುಕ್ರವಾರ ಮಲ್ಲೇಶ್ವರದ ಮಹಾಗಣಪತಿ ದೇವಸ್ಥಾನದಲ್ಲಿ ನೆರವೇರಿದೆ. ಜನರತ್ನ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಇನ್ನೂ ಶೀರ್ಷಿಕೆ ಅಂತಿಮವಾದ ಈ ಚಿತ್ರವನ್ನು ವೃತ್ತಿಯಲ್ಲಿ ರಿಯಲ್ ಎಸ್ಟೆಟ್ ಉದ್ಯಮಿಯಾಗಿರುವ ಜನಾರ್ಧನ್ ಎಂಬುವವರು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಿರ್ಮಾಪಕ ಜರ್ನಾಧನ್ ಅವರ ಸಹೋದರಿ ಲತಾ ಶಿವಣ್ಣ ಆಗಮಿಸಿ ಕ್ಲಾಪ್ ಮಾಡಿದರೆ, ನಿರ್ಮಾಪಕರ ಪುತ್ರಿ ಸ್ವೀಕೃತಿ ಕ್ಯಾಮರಾಕ್ಕೆ ಚಾಲನೆ ....
*ಹಾಡಾಗಿ ಬಂದ ಡಿಯರ್ ಸತ್ಯ* *-ಪುನೀತ್ ರಾಜ್ಕುಮಾರ್, ವಿಜಯ ರಾಘವೇಂದ್ರ ಅವರಿಂದ ಆಡಿಯೋ ರಿಲೀಸ್* *-ಫೆಬ್ರವರಿ ಮಾರ್ಚ್ ಗೆ ಬಿಡುಗಡೆ ಸಾಧ್ಯತೆ* ಪರ್ಪಲ್ ರಾಕ್ ಎಂಟರ್ ಪ್ರೈಸಸ್ ಮತ್ತು ವಿಂಟರ್ ಬ್ರಿಡ್ಜ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಡಿಯರ್ ಸತ್ಯ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭ ಓರಾಯನ್ ಮಾಲ್ನಲ್ಲಿ ಶನಿವಾರ ನೆರವೇರಿತು. ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಮತ್ತು ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಅತಿಥಿಗಳಾಗಿ ಆಗಮಿಸಿ ಆಡಿಯೋ ಬಿಡುಗಡೆ ಮಾಡಿ ತಂಡಕ್ಕೆ ಶುಭಹಾರೈಸಿದರು. ಅಂದಹಾಗೆ p r e ಮ್ಯೂಸಿಕ್ ಚಿತ್ರದ ಹಾಡುಗಳನ್ನು ಹೊರತಂದಿದೆ. ಶಿವಗಣೇಶನ್ ನಿರ್ದೇಶನಲ್ಲಿ ಮೂಡಿಬಂದಿರುವ ಈ ಸಿನಿಮಾಕ್ಕೆ ಗಣೇಶ್ ಪಾಪಣ್ಣ, ....
ಎರಡು ಭಾಗದಲ್ಲಿ ಜಯರಾಜ್ ಚಿತ್ರ ೮೦-೯೦ರ ದಶಕದಲ್ಲಿ ಬೆಂಗಳೂರು ನಗರವನ್ನು ತನ್ನ ಮುಷ್ಟಿಯಲ್ಲಿ ಇಟ್ಟುಕೊಂಡಿದ್ದ ಜಯರಾಜ್ ಕುರಿತಾದ ಸಾಕಷ್ಟು ಚಿತ್ರಗಳು ತೆರೆಗೆ ಬಂದಿದೆ. ಬರುತ್ತಲೆ ಇದೆ. ಆ ಸಾಲಿಗೆ ‘ಜಾಂಟಿ ಸನ್ ಆಫ್ ಜಯರಾಜ್’ ಸಿನಿಮಾವು ಶುಕ್ರವಾರ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ವಸತಿ ಸಚಿವ ಸೋಮಣ್ಣ ಕ್ಯಾಮಾರ ಆನ್ ಮಾಡಿದರೆ, ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ಚಿತ್ರದಲ್ಲಿ ಜಯರಾಜ್ ಪುತ್ರ ನಾಯಕನಾಗಿ ಅಭಿನಯಿಸುತ್ತಿರುವುದು ವಿಶೇಷ. ಹಾಗಂತ ಅಪ್ಪನಾಗಿ ಕಾಣಿಸಿಕೊಳ್ಳುತ್ತಿಲ್ಲ. ಸಾಮಾನ್ಯ ಹುಡುಗನಾಗಿ ....