ಇನ್ನೂ ಹೆಸರಿಡಿದ ನೂತನ ಚಿತ್ರದಲ್ಲಿ ವಸಿಷ್ಠ ಸಿಂಹ ನಾಯಕ.
ಮಾಸಾಂತ್ಯಕ್ಕೆ ಚಾಲನೆ.
ಲಾಕ್ ಡೌನ್ ಮುಗಿದ ಮೇಲೆ ಚಂದನವನದಲ್ಲಿ ಹೊಸ ಚಿತ್ರಗಳು ಒಂದರಿಂದ ಒಂದು ಆರಂಭವಾಗುತ್ತಿರುವುದು ಉತ್ತಮ ಬೆಳವಣಿಗೆ.
ಇದೇ ಸಾಲಿನಲ್ಲಿ ವಸಿಷ್ಠ ಸಿಂಹ ಅಭಿನಯದ ನೂತನ ಚಿತ್ರವೊಂದು ಇದೇ ತಿಂಗಳ ಕೊನೆಯಲ್ಲಿ ಆರಂಭಾವಗಲಿದೆ.
ಚಿತ್ರದ ಶೀರ್ಷಿಕೆ ಗೌಪ್ಯವಾಗಿಟಿರುವ ಚಿತ್ರತಂಡ ಮಾಸಾಂತ್ಯಕ್ಕೆ ಮುಹೂರ್ತ ನಡೆಸಿ, ಚಿತ್ರದ ಶೀರ್ಷಿಕೆ ಅನಾವರಣಗೊಳಿಸುವುದಾಗಿ ತಿಳಿಸಿದೆ.
ದಸರಾ ಹಬ್ಬಕ್ಕೆ ’ದಮಯಂತಿ’ ಮರು ಬಿಡುಗಡೆ.
ರಾಧಿಕಾ ಕುಮಾರಸ್ವಾಮಿ ಅಭಿನಯದ ’ದಮಯಂತಿ’ ಚಿತ್ರ ಕಳೆದ ವರ್ಷ ಬಿಡುಗಡೆಯಾಗಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು.
ಕೊರೋನ ಹಾವಳಿಯಿಂದ ಕೆಲವು ತಿಂಗಳ ಕಾಲ ಚಿತ್ರಮಂದಿರಗಳ ಬಾಗಿಲು ಮುಚ್ಚಿತ್ತು. ಈಗ ಸರ್ಕಾರ ಕೆಲವು ನಿಯಮಗಳನ್ನು ಪಾಲಿಸಿ ಚಿತ್ರಮಂದಿರ ತೆರೆಯಲು ಅನುಮತಿ ನೀಡಿದೆ.
ಹಲವಾರು ಅಡೆತಡೆಗಳನ್ನು ಎದುರಿಸಿ ಕಾಣದಂತೆ ಮಾಯವಾದನು ಸಿನಿಮಾ 50 ನೆಯ ದಿನದತ್ತ ಮುಖ ಮಾಡಿದೆ. ಸಿನಿಮಾ ರಿಲೀಸದ ಆದ ಮೊದಲ ವಾರ ಉತ್ತಮ ಪ್ರತಿಕ್ರಿಯೆ ಬಂದರು ಎರಡನೇ ವಾರ ಸಿನಿಮಾ ಥಿಯೇಟರ್ ಗಳ ಸಂಖ್ಯೆ ಕುಸಿಯಿತು. ಆದರೆ ಮೂರನೇ ವಾರ ಥಿಯೇಟರ್ಗಳಲ್ಲಿ ತನ್ನ ಗುಣಮಟ್ಟದಿಂದ ಗಟ್ಟಿಯಾಗಿ ನೆಲೆಯೂರಿತು. ಪ್ರದರ್ಶನ ಸಂಖ್ಯೆ ಹಾಗು ಥಿಯೇಟರ್ಗಳ ಸಂಖ್ಯೆ ಏರಿಸಿಕೊಂಡ ಸಿನಿಮಾ ಮತ್ತೆ ಲಾಕ್ಡೌನ್ನಿಂದಾಗಿ ಚಿತ್ರದ ಓಟಕ್ಕೆ ತಡೆ ಬಿತ್ತು. ನಿಲ್ಲುವ ಮುನ್ನ ವೀಕೆಂಡ್ಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿತ್ತು.
ಮೈಸೂರಿನಲ್ಲಿ ’ಪೆಟ್ರೋಮ್ಯಾಕ್ಸ್’
ಮೈಸೂರಿನಲ್ಲಿ ಈಗ ವಿಶ್ವವಿಖ್ಯಾತ ದಸರಾ ಸಡಗರ. ಈ ನಾಡಹಬ್ಬದ ಶುಭ ಸಂದರ್ಭದಲ್ಲಿ ’ಪೆಟ್ರೋಮ್ಯಾಕ್ಸ್’ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಆರಂಭವಾಗಿದೆ. 15 ದಿನಗಳ ಕಾಲ ಮೈಸೂರಿನಲ್ಲೇ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.
1980 ರಲ್ಲಿ ಪ್ರಿಯಾಂಕ ಉಪೇಂದ್ರ
ತಮ್ಮ ಅಮೋಘ ಅಭಿನಯದ ಮೂಲಕ ಮನೆಮಾತಾಗಿರುವ ಪ್ರಿಯಾಂಕ ಉಪೇಂದ್ರ ಅಭಿನಯದ 1980 ಎಂಬ ಶೀರ್ಷಿಕೆಯ ಚಿತ್ರ ಇದೇ ಅಕ್ಟೋಬರ್ 28 ರಿಂದ ಆರಂಭವಾಗಲಿದೆ.
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಬಹುತೇಕ ಚಿತ್ರೀಕರಣ ಕೊಡಗಿನ ಸುಂದರ ಪರಿಸರದಲ್ಲಿ ನಡೆಯಲಿದೆ.
ಕಲಾವಿದರ ಫಸ್ಟ್ ಲುಕ್ ಅನಾವರಣಗೊಳಿಸಿದ ಗಮನಂ
ಸುಜನಾ ರಾವ್ ಅವರ ಚೊಚ್ಚಲ ನಿರ್ದೇಶನದಲ್ಲಿ ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಭಾರತದ ಐದು ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗಿರುವ ಸಿನಿಮಾ ಗಮನಂ.‘ ಅಲಿ ಮತ್ತು ಜಾರಾ ಪಾತ್ರಗಳನ್ನು ನಿರ್ವಹಿಸಿರುವ ಶಿವ ಕಂದುಕುರಿ ಮತ್ತು ಪ್ರಿಯಾಂಕಾರ ಫಸ್ಟ್ ಲುಕ್ ಇಂದು ಬಿಡುಗಡೆಯಾಗಿದೆ. ಜರ್ಸಿ ಧರಿಸಿದ ಕ್ರೀಡಾಪಟುವಾಗಿ ಶಿವ ಕಾಣಿಸಿಕೊಂಡರೆ, ಮುಸ್ಲಿಂ ಸಾಂಪ್ರದಾಯಿಕ ಉಡುಗೆಯಲ್ಲಿ ಪ್ರಿಯಾಂಕಾ ಕಂಗೊಳಿಸುತ್ತಿದ್ದಾರೆ.
ಮಲೆಯಾಳಂ ನಲ್ಲಿ ’ಕಾಲಚಕ್ರ’ ವಸಿಷ್ಠ ಎನ್ ಸಿಂಹ ನಾಯಕರಾಗಿ ಅಭಿನಯಿಸಿರುವ ’ಕಾಲಚಕ್ರ’ ಚಿತ್ರ ಮಲೆಯಾಳಂನಲ್ಲೂ ನಿರ್ಮಾಣವಾಗುತ್ತಿದೆ. ’ಕಾಲಚಕ್ರ’ ಚಿತ್ರದ ರಿಮೇಕ್ ಹಕ್ಕು ಮಲೆಯಾಳಂ ಭಾಷೆಗೆ ಮಾರಾಟವಾಗುತ್ತಿದೆ. ಮಲೆಯಾಳಂ ಚಿತ್ರರಂಗದ ಖ್ಯಾತ ನಿರ್ಮಾಪಕರೊಬ್ಬರು ’ಕಾಲಚಕ್ರ’ ಚಿತ್ರದ ಕಥೆ ಇಷ್ಟಪಟ್ಟು ಮಲೆಯಾಳಂ ನಲ್ಲಿ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಮಲೆಯಾಳಂ ನಲ್ಲಿ ಚಿತ್ರ ನಿರ್ಮಿಸುತ್ತಿರುವ ಸಂಸ್ಥೆ ಯಾವುದು? ಯಾವಾಗ ಪ್ರಾರಂಭವಾಗುತ್ತದೆ? ಯಾರು ಅಭಿನಯಿಸುತ್ತಾರೆ ಎಂಬ ಮಾಹಿತಿ ಸದ್ಯದಲ್ಲೇ ಹೊರಬೀಳಲಿದೆ. ಅಕ್ಟೋಬರ್ 19ರಂದು ವಸಿಷ್ಠ ಸಿಂಹ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ನಟಿಸಿರುವ ಚಿತ್ರದ ರಿಮೇಕ್ ....
'ಶಂಭೋ ಶಿವ ಶಂಕರ’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ.
ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ ’ಶಂಭೋ ಶಿವ ಶಂಕರ’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಹತ್ತು ದಿನಗಳ ಕಾಲ ಚಿತ್ರೀಕರಣ ನಡೆದಿದೆ. ನಾಯಕರಾದ ಅಭಯ್ ಪುನೀತ್, ರೋಹಿತ್, ರಕ್ಷಕ್, ನಾಯಕಿ ಸೋನಾಲ್ ಮಂತೆರೊ ಹಾಗೂ ಜೋಗಿ ನಾಗರಾಜ್ ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ನವೆಂಬರ್ ೧ ರಿಂದ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ. ಮಾತಿನ ಭಾಗದೊಂದಿಗೆ ಹಾಡು ಹಾಗೂ ಸಾಹಸ ಸನ್ನಿವೇಶದ ಚಿತ್ರೀಕರಣ ದ್ವಿತೀಯ ಹಂತದಲ್ಲಿ ನಡೆಯಲಿದೆ.
ನಮ್ಮ ‘ಗೋಧ್ರಾ’ ಚಲನಚಿತ್ರಕ್ಕೆ ಮಾಧ್ಯಮದ ಪ್ರತಿಯೊಬ್ಬರೂ ನೀಡಿದ ಬೆಂಬಲ ಮತ್ತು ಸಹಕಾರವನ್ನು ನಮ್ಮ ತಂಡವು ಕೃತಜ್ಞತೆಯಿಂದ ನೆನಪಿಸಿಕೊಳ್ಳುತ್ತದೆ. ಈಗಿನ ಕೊರೊನಾ ಸಮಯದಲ್ಲಂತೂ, ನೀವು ನಮ್ಮ ಬೆಂಬಲದ ಬೆನ್ನೆಲುಬಾಗಿರುತ್ತೀರಿ ಎಂಬ ನಂಬಿಕೆ ಕೂಡ ನಮ್ಮದು. ಈಗ ಕೋವಿಡ್ ಅನ್ಲಾಕ್ ಪ್ರಕ್ರಿಯೆಯು ಜಾರಿಯಲ್ಲಿರುವುದರಿಂದ ಮತ್ತು ಥಿಯೇಟರ್ ಪ್ರಾರಂಭಿಸಲು ಅನುಮತಿ ನೀಡಿರುವುದರಿಂದ ನಮ್ಮ ಚಲನಚಿತ್ರದ ಚಟುವಟಿಕೆಗಳನ್ನು ಪುನರಾರಂಭಿಸಲು ನಾವು ನಿರ್ಧರಿಸಿದ್ದೇವೆ. ನಾವು ಇತ್ತೀಚೆಗೆ ನಮ್ಮ ಸಿನಿಮಾವನ್ನು ಸಿಬಿಎಫ್ಸಿ (ಸೆನ್ಸಾರ್ ಮಂಡಳಿ) ಯಿಂದ ಪ್ರಮಾಣೀಕರಣಕ್ಕಾಗಿ ಅರ್ಜಿ ಸಲ್ಲಿಸಿದ್ದೇವೆ. ಮಂಡಳಿಯ ಸದಸ್ಯರು ನಮ್ಮ ಚಲನಚಿತ್ರವನ್ನು ವೀಕ್ಷಿಸಿದರು ಮತ್ತು ....
ನವೆಂಬರ್ ನಲ್ಲಿ ಆಕ್ಟ್ 1978 ತೆರೆಗೆ ಮುಕ್ಕಾಲು ವರ್ಷವನ್ನು ಕೊರೊನಾ ವೈರಸ್ ಹುರಿದು ಮುಕ್ಕಿದೆ. ಜಗತ್ತು ತಲ್ಲಣಗೊಂಡಿದೆ. ಲಾಕ್ ಮತು ್ತ ಅನ್ ಲಾಕ್ ನಡುವಿನ ಸರ್ಕಸ್ ಇನ್ನೂ ನಡೆಯುತ್ತಲೇ ಇದೆ. ಈ ಆತಂಕವನ್ನು ಕೊಂಚ ಬದುಕಿಟು ್ಟ, ಬದುಕು ಸಾಗುತ್ತಿದೆ. ನಾವೂ ಸಾಗಬೇಕಿದೆ. ಕೊರೊನಾದಿಂದಾಗಿ ಸಿನಿಮಾ ರಂಗ ಕೂಡ ತನ್ನ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸಿತ್ತು. ಈಗ ಒಂದೊಂದೆ ಸಿನೆಮಾ ಕೆಲಸಗಳು ಶುರುವಾಗಿವೆ. ಥಿಯೇಟರ್ ಬಾಗಿಲು ತೆರೆದಿವೆ. ಇತ್ತೀಚೆಗಷ್ಟೇ ನಮ್ಮ ಆಕ್ಟ್ 1978 ಸಿನೆಮಾ ಸೆನ್ಸಾರ್ ಮಂಡಳಿಯಿಂದ ಯಾವುದೇ ಕಟ್ ಇಲ್ಲದೇ `ಯು’ ಪ್ರಮಾಣ ಪತ್ರ ಪಡೆದಿದ್ದು, ಇದನ್ನು ಬಿಡುಗಡೆ ಮಾಡುವ ಬಗ್ಗೆ ಸಾಕಷ್ಟು ಚರ್ಚೆ ಮಾಡಿದೆವು. ಒಟ್ಟಾರೆ ನಮ್ಮ ತಂಡ ಹಾಗೂ ನಿರ್ಮಾಪಕರ ....
ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ "ಪದವಿಪೂರ್ವ" ಚಿತ್ರದ ಮೂಲಕ ಮತ್ತೊಬ್ಬ ನಾಯಕಿಯಾಗಿ ಮಂಗಳೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ’ಆಳ್ವಾಸ್ ಕಾಲೇಜ್’ನ ಇಂಜಿನಿಯರಿಂಗ್ ವಿದ್ಯಾರ್ಥಿನಿ ’ಯಶಾ ಶಿವಕುಮಾರ್’ " ಕನ್ನಡ ಚಿತ್ರರಂಗವನ್ನು ಪ್ರವೇಶಿಸಲು ಸಜ್ಜಾಗಿದ್ದಾಳೆ. 2019 ವರ್ಷದಲ್ಲಿ ’ಫ್ಯಾಶನ್ ಎಬಿಸಿಡಿ’ ಸಂಸ್ಥೆ ಆಯೋಜಿಸಿದ್ದ "ಮಿಸ್ ಬೆಂಗಳೂರು 2019 " "ಮಿಸ್ ಕರ್ನಾಟಕ ಇಂಟರ್ನ್ಯಾಷನಲ್ 2019" ಹಾಗೂ ಮುಂಬೈನಲ್ಲಿ ನಡೆದ "ಮಿಸ್ ಗ್ಲೋರಿ ಆಫ್ ಗ್ಯಾಲಕ್ಸಿ 2019" ಸ್ಪರ್ಧೆಗಳಲ್ಲಿ ಭಾಗವಹಿಸಿ ಗೆಲ್ಲುವ ಮೂಲಕ ಅನೇಕ ಫ್ಯಾಶನ್ ಕಿರೀಟಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾಳೆ. ಈಕೆ ....
*ಫ್ಯಾಂಟಸಿ ಪ್ರಪಂಚದೊಳಗೊಂದು ವಿಸ್ಮಯ ಕಥೆ* ಹೊಸಬರ ಹೊಸ ಹೊಸ ಆವಿಷ್ಕಾರಗಳು ಸ್ಯಾಂಡಲ್ವುಡ್ನಲ್ಲಿ ಸೃಷ್ಟಿಯಾಗುತ್ತಿವೆ. ಕಾಲ್ಪನಿಕ ಕಥೆಗಳನ್ನು ಹೆಣೆದು, ಅದಕ್ಕೆ ಫ್ಯಾಂಟಸಿ ಸ್ಪರ್ಶ ಕೊಡುವ ಕೆಲಸ ನಡೆಯುತ್ತಿದೆ. ಇದೀಗ ಅಂಥದ್ದೇ ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾವೊಂದು ಚಂದನವನದಲ್ಲಿ ಸಿದ್ಧವಾಗಿದೆ. ಆ ಚಿತ್ರದ ಹೆಸರು ‘ಫ್ಯಾಂಟಸಿ’. ಪವನ್ ಡ್ರೀಮ್ ಫಿಲಂಸ್ ಲಾಂಛನದಲ್ಲಿ ಸಿದ್ಧವಾಗಿರುವ ‘ಫ್ಯಾಂಟಸಿ’ ಚಿತ್ರಕ್ಕೆ ಸ್ವತಃ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜತೆಗೆ ನಿರ್ಮಾಣವನ್ನೂ ಮಾಡಿದ್ದಾರೆ ಪವನ್ ಕುಮಾರ್ ಆರ್. ನಿರ್ದೇಶಕರ ತಂದೆ ತಾಯಿಯವರಾದ ಎಂ. ಮಹಾದೇವಿ, ಟಿ. ರಂಗಸ್ವಾಮಿ ಸಹ- ನಿರ್ಮಾಪಕರಾಗಿದ್ದಾರೆ. ಶೀರ್ಷಿಕೆಗೆ ....
ಪ್ರಯೋಗ್ ಸ್ಟುಡಿಯೋ ಸಂಸ್ಥೆಯ ಓನ್ಲಿ ಕನ್ನಡ (Only ಕನ್ನಡ ) ಕನ್ನಡದ ಓ.ಟಿ.ಟಿ. ಸಧ್ಯದಲ್ಲೆ ನಾಡಿನ ಜನರ ಮುಂದೆ ತರಲು ಸನ್ನದ್ಧರಾಗಿದ್ದಾರೆ ಶ್ರೀ ಪ್ರದೀಪ್ ಮುಳ್ಳೂರು ಹಾಗು ಶ್ರೀಮತಿ ರಜನಿ ಪ್ರದೀಪ್. ಕನ್ನಡದ ಸಿನಿಮಾ ಹಾಗೂ ಕನ್ನಡದ ಕಲಾವಿದರಿಗೆ ಆರ್ಥಿಕ ಅನುಕೂಲಗಳನ್ನು, ಅವಕಾಶಗಳನ್ನು ಒದಗಿಸುವ ಮೂಲಕ ಕನ್ನಡ ರಾಜ್ಯೋತ್ಸವ ನವೆಂಬರ್ ೧ರಿಂದ ಕನ್ನಡಕ್ಕಾಗಿ ಕನ್ನಡದ ಕಲಾವಿದರಿಗೆ ಕನ್ನಡದ ಕಲಾರಸಿಕರ ಮನ ಮನೆಗಳಲ್ಲಿ ರಂಜಿಸಲು ಸಿದ್ದರಾಗುತ್ತಿದ್ದಾರೆ. ಕನ್ನಡದ ಸಿನಿಮಾ,ನಾಟಕ ಸಂಗೀತ ಸಾಹಿತ್ಯ ಹಾಗೂ ಕರುನಾಡಿನ ಎಲ್ಲಾ ಕಲಾಪ್ರಕಾರಗಳನ್ನು ಹಳ್ಳಿಯಿಂದ ದಿಲ್ಲಿವರೆಗೆ, ದೇಶದ ಹಾಗೂ ವಿದೇಶದ ಎಲ್ಲಾ ಕನ್ನಡ ಪ್ರೇಮಿಗಳಿಗೆ ಕನ್ನಡದ ಕಂಪನ್ನು ಮತ್ತೆ ಪಸರಿಸಲು ....
ನವೆಂಬರ್ ನಲ್ಲಿ ’ಮುಖವಾಡ ಇಲ್ಲದವನು 84' ಚಿತ್ರ ಬಿಡುಗಡೆ.
ಕೆಲವು ಚಿತ್ರಗಳ ಶೀರ್ಷಿಕೆ ಕೇಳಿದರೆ ಆ ಚಿತ್ರ ನೋಡಬೇಕೆಂಬ ಕುತೂಹಲ ಹುಟ್ಟಿಸುತ್ತದೆ. ಆ ಸಾಲಿಗೆ ಸೇರ್ಪಡೆಯಾಗಲಿದೆ ’ಮುಖವಾಡ ಇಲ್ಲದವನು 84' ಚಿತ್ರ.
ಸಸ್ಪೆನ್ಸ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಸೆನ್ಸಾರ್ ಕೂಡ ಮುಗಿದಿದೆ. ನವೆಂಬರ್ ನಲ್ಲಿ ತೆರೆಗೆ ಬರಲಿದೆ.
'ಒಬ್ಬ ಮನುಷ್ಯ ತಾನು ಹುಟ್ಟಿದಾಗಿನಿಂದ ಸಾಯುವ ತನಕ ಯಾವಯಾವ ರೀತಿ ಮುಖವಾಡ ಹಾಕುತ್ತಾನೆ’ ಎನ್ನುವುದೇ ಚಿತ್ರದ ಕಥಾಹಂದರ.
ತೆರೆಗೆ ಬರಲು ಸಂಪೂರ್ಣ ಸಿದ್ದವಾಗಿರುವ ಈ ಚಿತ್ರದ ಹಾಡು ಹಾಗೂ ಟ್ರೇಲರ್ ಸಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.
ಜಿ-9 ಕಮ್ಯುನಿಕೆಷನ್ ಮೀಡಿಯಾ ಆಂಡ್ ಎಂಟರಟೆನಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಅಮೃತ್ ಅಪಾರ್ಟ್ಮಮೆಂಟ್ಸ್” ಪೋಸ್ಟ್ ಪ್ರೊಡಕ್ಷನ್ ಕೆಲಸಗಳನೆಲ್ಲಾ ಮುಗಿಸಿಕೊಂಡು, ಸೆನ್ಸಾರ್ ಮನೆಗೆ ತಲುಪಿದೆ. ಸಿನೆಮಾ ತಂಡ ತಮ್ಮ ಸರದಿಗಾಗಿ ಕಾಯುತ್ತಿದ್ದಾರೆ. ಗುರುರಾಜ ಕುಲಕರ್ಣಿ (ನಾಡಗೌಡ) ರಚಿಸಿ ನಿರ್ಮಿಸಿ ನಿರ್ದೇಶಿಸಿರುವ ಈ ಚಿತ್ರದಲ್ಲಿ ತಾರಕ ಪೊನ್ನಪ್ಪ, ಊರ್ವಶಿ ಗೋವರ್ಧನ ನಾಯಕ ನಾಯಕಿಯಾಗಿ ನಟಿಸಿದ್ದಾರೆ. ವಿಶಿಷ್ಟ ನಟನೆಗೆ ಹೆಸರಾಗಿರುವ ರಾಜ್ಯ ಪ್ರಶಸ್ತಿ ವಿಜೇತ, ಬಾಲಾಜಿ ಮನೋಹರ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಹುಮುಖ ಪ್ರತಿಭೆಯ ಸಂಪತ ಕುಮಾರ ತಮ್ಮ ಎಂದಿನ ನೈಜ ನಟನೆಯಿಂದ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮಾನಸಾ ಜೋಷಿ ಪೋಲಿಸ್ ....
'ಬಡವ ರಾಸ್ಕಲ್’ ಚಿತ್ರೀಕರಣ ಪೂರ್ಣ. ಕಾರ್ಮಿಕರಿಗೆ ಉಡುಗೊರೆ ನೀಡಿ ಕುಂಬಳಕಾಯಿ ಒಡೆದ ಡಾಲಿ. ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ ’ಬಡವ ರಾಸ್ಕಲ್’ ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ. ಬೆಂಗಳೂರು, ಮೈಸೂರು ಹಾಗೂ ಪಾಂಡವಪುರದಲ್ಲಿ ಚಿತ್ರೀಕರಣ ನಡೆದಿದೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಚಿತ್ರಗಳು ನಿರ್ಮಾಣವಾಗುತ್ತದೆ. ಆದರೆ ಚಿತ್ರಕ್ಕಾಗಿ ದುಡಿದವರನ್ನು ನೆನಪಿಸಿಕೊಳ್ಳುವುದು ವಿರಳ. ಆದರೆ ’ಬಡವ ರಾಸ್ಕಲ್’ ಚಿತ್ರದ ನಿರ್ಮಾಪಕರೂ ಆಗಿರುವ ಡಾಲಿ ಧನಂಜಯ ಅವರು ಚಿತ್ರೀಕರಣದ ಕೊನೆಯ ದಿವಸ ಚಿತ್ರಕ್ಕಾಗಿ ದುಡಿದ ನೂರಕ್ಕೂ ಹೆಚ್ಚು ಕಾರ್ಮಿಕರಿಗೆ ದಿನಬಳಕೆಯ ವಸ್ತುಗಳಾದ ಕುಕ್ಕರ್, ತವ, ಹಾಟ್ ವಾಟರ್ ಬಾಟಲ್ ಮುಂತಾದ ....
‘ಯೆಲ್ಲೋ ಗ್ಯಾಂಗ್ಸ್’ ವಿಭಿನ್ನ ಸ್ಟುಡಿಯೊಸ್ ನಿರ್ಮಾಣದಲ್ಲಿ ರವೀಂದ್ರ ಪರಮೇಶ್ವರಪ್ಪ ಅವರ ರಚನೆ ಮತ್ತು ನಿರ್ದೇಶನವಿರುವ ಕ್ರೈಂ-ಥ್ರಿಲ್ಲರ್ ಕನ್ನಡ ಚಲನಚಿತ್ರ. ಎರಡು ಹಂತಗಳಲ್ಲಿ ಒಟ್ಟು ೩೫ ದಿನಗಳ ಕಾಲ ನಡೆದ ಚಿತ್ರೀಕರಣವು ಸಂಪೂರ್ಣವಾಗಿ ಬೆಂಗಳೂರಿನಲ್ಲಿ ನಡೆದಿದೆ. ಛಾಯಾಗ್ರಹಣವನ್ನು ಸುಜ್ಞಾನ್ ಅವರು ನಿರ್ವಹಿಸಿದ್ದಾರೆ. ಚಿತ್ರಕ್ಕೆ ರೋಹಿತ್ ಸೋವರ್ ಅವರ ಸಂಗೀತ, ಸುರೇಶ್ ಆರ್ಮುಗಂ ಅವರ ಸಂಕಲನ ಮತ್ತು ಪ್ರವೀಣ್ ಕುಮಾರ್ ಜಿ ಅವರ ಸಂಭಾಷಣೆ ಇದೆ. ಮನೋಜ್ ಪಿ, ಜಿ.ಎಂ.ಆರ್ ಕುಮಾರ್ (ಕೆವಿಜಿ) ಹಾಗೂ ಜೆ.ಎನ್.ವಿ, ಶಿವಮೊಗ್ಗ ಶಾಲೆಯ ಮಾಜಿ ವಿದ್ಯಾರ್ಥಿಗಳು ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ. ತಾರಾಗಣದಲ್ಲಿ ಬಲರಾಜ್ವಾಡಿ, ನಾಟ್ಯ ರಂಗ, ನವೀನ್ ದೇವಯ್ಯ, ಅರ್ಚನಾ ಕೊಟ್ಟಿಗೆ, ಸತ್ಯ ....
ಅಂದು ಬಾಲ ನಟಿ ಕೀರ್ತನ ಇಂದು ಐ.ಎ.ಎಸ್. ಅಧಿಕಾರಿ ಕೀರ್ತನ. IAS ಪರೀಕ್ಷೆಯಲ್ಲಿ 167ನೇ ಟಾಪರ್ ಆಗಿ ಉತ್ತೀರ್ಣರಾಗಿದ್ದಾರೆ. ಕಲೆ ಅನ್ನೋದು ಎಲ್ಲರನ್ನೂ ಕೈ ಬೀಸಿ ಕರೆಯುತ್ತೆ ಆದರೆ ಕೆಲವರನ್ನು ಮಾತ್ರ ಆರಿಸಿಕೊಳ್ಳುತ್ತದೆ ಎನ್ನುವುದು ನಾನ್ನುಡಿ ಹಾಗೂ ಹಳೆಯ ಮಾತು. ಇದು ನಿಜ ಕೂಡ ಆದರೆ ಅದೆಷ್ಟೋ ಜನ ಕಲೆಯ ಬರ ಸೆಳೆತಕ್ಕೆ ಸೂಜಿಗಲ್ಲಿನಂತೆ ಆಕರ್ಷಿತರಾಗಿ ಅದನ್ನು ಮೈಗೂಡಿಸಿಕೊಂಡು ತಲೆಯ ಮೇಲೆ ಹೊತ್ತು ಮೆರೆಸಿ ಉತ್ತುಂಗದ ಮಜಲನ್ನು ಏರಿದವರು ಇದ್ದಾರೆ, ಹಾಗೆಯೇ ಬಣ್ಣದ ಲೋಕದ ಪಾತರಗಿತ್ತಿಯಂತ ಆಸೆಯ ಕಡಲಿಗೆ ಧುಮುಕಿ ಈಜಲಾಗದೇ ಮುಳುಗಿ ಮತ್ತೆ ಮೇಲೇಳದವರು ಇದ್ದಾರೆ!. ಹಾಗೆಯೇ ಬಾಲ ಕಲಾವಿದರು ಸಿನಿಮಾಲೋಕಕ್ಕೆ ಕಾಲಿಟ್ಟು ಅಲ್ಲಿನ ಆಕರ್ಷಣೆಗೆ ....
ಅಮ್ಮಾ ಟಾಕೀಸ್ ಬಾಗಲಕೋಟೆ ಲಾಂಛನದಲ್ಲಿ, ರತ್ನಮಾಲಾ ಬಾದರದಿನ್ನಿ ನಿರ್ಮಾಣದಲ್ಲಿ ತಯಾರಾಗುತ್ತಿರುವ ಹಾಸ್ಯ ನಟ *ಬಿರಾದಾರ್ ಮುಖ್ಯ ಭೂಮಿಕೆಯ* *ನೈಂಟಿ ಹೊಡಿ ಮನೀಗ್ ನಡಿ* ಚಿತ್ರದ *ಟೈಟಲ್ ಸಾಂಗ್* ಚಿತ್ರೀಕರಣವು ಇತ್ತೀಚೆಗೆ ಬೆಂಗಳೂರಿನ *ಎಚ್ ಎಮ್ ಟಿ* ಯಲ್ಲಿ ನೆರವೇರಿತು. ಕಿರಣ್ ಶಂಕರ್ ಸಂಗೀತದ ಈ ಹಾಡಿಗೆ ಸಾಹಿತ್ಯ ಚತುರ ಡಾ// ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಧ್ವನಿಯಾಗಿದ್ದಾರೆ. ಇನ್ನು ಚುಟು-ಚುಟು ಖ್ಯಾತಿಯ ಭೂಷಣ್ ಕೊರಿಯೋಗ್ರಫಿ ಮಾಡಿದ್ದು, ಕೃಷ್ಣ ನಾಯ್ಕರ್ ಛಾಯಾಗ್ರಹಣ ಮಾಡಿದ್ದಾರೆ. ಉಮೇಶ್ ಬಾದರದಿನ್ನಿ ಮತ್ತು ನಾಗರಾಜ್ ಅರೆಹೊಳೆ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು ಟೈಟಲ್ ....
ವಸಿಷ್ಠ ಸಿಂಹ ಅಭಿನಯದ ’ಕಾಲಚಕ್ರ’ ಚಿತ್ರದ ವಿಭಿನ್ನ ಟೀಸರ್ ಗೆ ಭರ್ಜರಿ ಪ್ರಶಂಸೆ.
ವಸಿಷ್ಠ ಎನ್ ಸಿಂಹ ನಾಯಕರಾಗಿ ನಾಲ್ಕು ಪಾತ್ರಗಳಲ್ಲಿ ನಟಿಸಿರುವ ’ಕಾಲಚಕ್ರ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಪ್ರಶಂಸೆ ವ್ಯಕ್ತವಾಗಿದೆ.
ರಶ್ಮಿ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ’ಕಾಲಚಕ್ರ’ ಚಿತ್ರದ ವಿಭಿನ್ನ ಟೀಸರ್ ಅಪಾರ ಮೆಚ್ಚುಗೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ , ವಸಿಷ್ಠ ಸಿಂಹ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ.
ಈ ಹಿಂದೆ ಕಿಚ್ಚ ಸುದೀಪ ಅವರು ಚಿತ್ರದ ಟೀಸರ್ ಬಿಡುಗಡೆ ಮಾಡಿ ಪ್ರಶಂಸೆ ಮಾತುಗಳಾಡಿದ್ದರು.