ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ "ಪದವಿಪೂರ್ವ" ಚಿತ್ರಕ್ಕೆ ನಾಯಕಿಯಾಗಿ ’ಅಂಜಲಿ ಅನೀಶ್’ ಆಯ್ಕೆಯಾಗಿದ್ದು, ಇವರು ’ಬೆಂಗಳೂರು ಟೈಮ್ಸ್ ಫ್ರೆಶ್ ಫೇಸ್ ಆಫ್ ದಿ ಇಯರ್ 2020' ಸ್ಪರ್ಧೆಯಲ್ಲಿ ಗೆದ್ದು, ’ನ್ಯಾಷನಲ್ ಟೈಮ್ಸ್ ಫ್ರೆಶ್ ಫೇಸ್ ಆಫ್ ದಿ ಇಯರ್ 2020'ಯ ರನ್ನರ್ ಅಪ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಅಲ್ಲದೆ ಇವರು ಶಿಕಾಗೋದ ’ಸೆಕೆಂಡ್ ಸಿಟಿ’ ಆಕ್ಟಿಂಗ್ ಸ್ಕೂಲ್ ಹಾಗು ’ಅನುಪಮ್ ಖೇರ್’ ಆಕ್ಟಿಂಗ್ ಸ್ಕೂಲ್ನಲ್ಲಿ ನಟನೆಯ ತರಬೇತಿಯನ್ನು ಪಡೆದುಕೊಂಡಿದ್ದು ಕೆಲ ಬಾಲಿವುಡ್ ಮತ್ತು ಕನ್ನಡ ಸಿನಿಮಾಗಳಿಗೆ ಸಹಾಯಕ ನಿರ್ದೇಶಕಿಯಾಗಿಯೂ ಸಹ ಕೆಲಸ ಮಾಡಿದ್ದಾರೆ.
ನವೆಂಬರ್ ನಲ್ಲಿ ’ಸ್ಪೂಕಿ ಕಾಲೇಜ್’ ಆರಂಭ. 'ರಂಗಿತರಂಗ’, ’ಅವನೇ ಶ್ರೀ ಮನ್ನಾರಾಯಣ’ ನಿರ್ಮಾಪಕರಿಂದ ಮತ್ತೊಂದು ವಿಭಿನ್ನ ಚಿತ್ರ. 'ರಂಗಿತರಂಗ’ ಹಾಗೂ ’ಅವನೇ ಶ್ರೀಮನ್ನಾರಯಣ’ ಭರ್ಜರಿ ಯಶಸ್ಸು ಕಂಡ ಚಿತ್ರಗಳು. ಅಪಾರ ಜನ ಮೆಚ್ಚುಗೆಗೆ ಪಾತ್ರವಾಗಿದ್ದ ಈ ಚಿತ್ರಗಳನ್ನು ನಿರ್ಮಿಸಿದ್ದ ಹೆಚ್.ಕೆ.ಪ್ರಕಾಶ್ ಅವರು ’ಸ್ಪೂಕಿ ಕಾಲೇಜ್’ ಎಂಬ ಮತ್ತೊಂದು ವಿಭಿನ್ನ ಚಿತ್ರ ನಿರ್ಮಿಸುತ್ತಿದ್ದಾರೆ ತಮ್ಮದೇ ಆದ ಶ್ರೀದೇವಿ ಎಂಟರ್ ಟೈನರ್ ಸಂಸ್ಥೆ ಮೂಲಕ. ಈ ಚಿತ್ರದ ಚಿತ್ರೀಕರಣ ನವೆಂಬರ್ ಮೊದಲವಾರದಲ್ಲಿ ಧಾರವಾಡದ ೧೦೩ ವರ್ಷಗಳ ಇತಿಹಾಸವಿರುವ ಕಾಲೇಜೊಂದರಲ್ಲಿ ಆರಂಭವಾಗಲಿದೆ. ದ್ವಿತೀಯ ಹಂತದ ಚಿತ್ರವು ದಾಂಡೇಲಿ ದಟ್ಟ ಅರಣ್ಯ ಪ್ರದೇಶದಲ್ಲಿ ....
*ಪ್ಲಶ್ ಎಂಬುದು ವೆಡ್ಡಿಂಗ್ ಸೂಪರ್ ಮಾರ್ಕೇಟ್ ಥರ; ಸಂತೋಷಿ ಶ್ರೀಕರ್* *ಬೆಂಗಳೂರು*: ಹನಿಮೂನ್ ಎಕ್ಸ್ಪ್ರೆಸ್ ಮತ್ತು ತೆನಾಲಿ ರಾಮ ಸಿನಿಮಾ ಮೂಲಕ ಕನ್ನಡಕ್ಕೆ ಆಗಮಿಸಿದ್ದೆ. ಜಗ್ಗೇಶ್ ಅವರೊಂದಿಗೆ ಸ್ಕ್ರೀನ್ ಶೇರ್ ಮಾಡಿಕೊಂಡಿದ್ದೆ. ಇದೀಗ ಇದೇ ಕರ್ನಾಟಕದ ಬೆಂಗಳೂರಿನಲ್ಲಿ ಹೊಸ ಉದ್ಯಮ ಆರಂಭಿಸುತ್ತಿದ್ದೇನೆ. ಕಲಾವಿದರಿಗೆ ನಟನೆಯೊಂದೇ ಶಾಶ್ವತ ಅಲ್ಲ. ಅದರ ಜತೆಗೆ ಬೇರೆ ಕ್ಷೇತ್ರದತ್ತಲೂ ಗಮನಹರಿಸಬೇಕು. ಹಾಗಾಗಿ ಸೌಂದರ್ಯ ಕ್ಷೇತ್ರವನ್ನು ಆಯ್ದುಕೊಂಡು ಇದೀಗ ಪ್ಲಶ್ ಹೆಸರಿನ ಶಾಖೆಯನ್ನು ಬೆಂಗಳೂರಿನಲ್ಲಿ ತೆರೆದಿದ್ದೇನೆ. ವೆಡ್ಡಿಂಗ್ ಸೂಪರ್ ಮಾರ್ಕೆಟ್ ರೀತಿಯಲ್ಲಿ ಒಂದೇ ವೇದಿಕೆಯಲ್ಲಿ ಎಲ್ಲ ಸೇವೆಗಳು ಪ್ಲಶ್ ಅಡಿಯಲ್ಲಿ ಸಿಗಲಿವೆ ಎಂದು ನಟಿ ಸಂತೋಷಿ ....
ತ್ರಿಮೂರ್ತಿ ಸನ್ನಿಧಿಯಲ್ಲಿ ’ವಿಧಿಬರಹ’ ಆರಂಭ.
ನಾಡಹಬ್ಬ ದಸರಾ ಮೊದಲ ದಿನ ’ವಿಧಿಬರಹ’ ಚಿತ್ರದ ಮುಹೂರ್ತ ಸಮಾರಂಭ ಕನಕಪುರ ರಸ್ತೆಯಲ್ಲಿರುವ ತ್ರಿಮೂರ್ತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ನಿರ್ಮಾಪಕ ಮಂಜುನಾಥ್.ಈ ಅರಂಭ ಫಲಕ ತೋರಿದರು.
ಎಲ್ಲರ ಜೀವನದದಲ್ಲೂ ವಿಧಿ ಒಂದಲ್ಲ ಒಂದು ರೀತಿ ಆಟವಾಡುತ್ತದೆ ಎಂಬ ಕಥಾಹಂದರ ’ವಿಧಿಬರಹ’ ಚಿತ್ರದಲ್ಲಿದೆ.
ಡಿಸೆಂಬರ್ ೨೪ಕ್ಕೆ ಭೂಮಿಕಾ ಆಗಮನ
ನೈಜ ಘಟನೆ ಆಧರಿಸಿದ " ಡಿಸೆಂಬರ್-೨೪" ಚಿತ್ರಕ್ಕೆ ಎರಡನೇ ಹಂತದ ಚಿತ್ರೀಕರಣ ಸದ್ಯದಲ್ಲಿಯೇ ಆರಂಭವಾಗಲಿದೆ. ನಾಗರಾಜ್ ಎಂಜಿ ಗೌಡ ನಿರ್ದೇಶನ ಮಾಡುತ್ತಿರುವ ಹೊಸ ಚಿತ್ರಕ್ಕೆ ಎ.ದೇವು ಹಾಸನ್, ವಿ.ಬೆಟ್ಟೇಗೌಡ ಬಂಡವಾಳ ಹಾಕಿದ್ದಾರೆ. ಉಸಿರಾಟದ ಸಾಯುತ್ತಿರುವ ಮಕ್ಕಳನ್ನು ಉಳಿಸಿಕೊಳ್ಳಲು ವೈದ್ಯಕೀಯ ವಿದ್ಯಾರ್ಥಿಗಳು ಸಂಶೋಧನೆ ಮಾಡಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸುವ ಘಟನೆಯನ್ನು ಮುಂದಿಟ್ಟುಕೊಂಡು ಅದಕ್ಕೆ ಸಿನಿಮಾ ರೂಪ ನೀಡಲಾಗುತ್ತದೆ ಎನ್ನುತ್ತಾರೆ ನಿರ್ದೇಶಕ ನಾಗರಾಜ್ ಗೌಡ.
“ಕ್ರಿಟಿಕಲ್ ಕೀರ್ತನೆಗಳು” ಚಿತ್ರಕ್ಕೆ ನವೀನ್ ಸಜ್ಜು ಹಾಡಿದ ಹಾಡು ಬಿಡುಗಡೆ
ಕೇಸರಿ ಫಿಲಂ ಕ್ಯಾಪ್ಚರ್, ಲಾಂಛನದಲ್ಲಿ ಕುಮಾರ್ ಮತ್ತು ಸ್ನೇಹಿತರು ಸೇರಿ ನಿರ್ಮಿಸಿರುವ ‘ಕ್ರಿಟಿಕಲ್ ಕೀರ್ತನೆಗಳು’ ಚಿತ್ರಕ್ಕೆ ‘ಐಪಿಎಲ್ಲ್ಲು ಎತ್ಕೊಂಡೆ ಕಾಲು ಮುಂದೇನ್ ಮಾಡ್ಲಿ ಊರ್ ಬಿಡ್ಲ ಹೇಳು ಐಪಿಎಲ್ ನಮ್ಮೆಲ್ಲರ ಬಾಳು ಜೂಜಲ್ಲಿ ಬಿದ್ರೆ ಬಾಳೆಲ್ಲ ಗೋಳು” ಎಂಬ ಹಾಡು ಆನಂದ್ ಆಡಿಯೋ ಯೂಟ್ಯೂಬ್ನಲ್ಲಿ ಬಿಡುಗಡೆಗೊಂಡು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈ ಗೀತೆಯನ್ನು ನವೀನ್ ಸಜ್ಜು ಹಾಡಿದ್ದಾರೆ.
ಯುಎಫ್ಓ ಕ್ಯೂಬ್ಗೆ ಎರಡು ವರ್ಷ ಶುಲ್ಕ ಬೇಡ ಸರ್ಕಾರವು ಚಿತ್ರ ಪ್ರದರ್ಶಿಸಲು ಅನುಮತಿ ನೀಡಿದೆ. ಆದರೆ ಯುಎಫ್ಓ ಕ್ಯೂಬ್ಗೆ ವೆಚ್ಚ ಭರಿಸಲು ನಿರ್ಮಾಪಕರ ಬಳಿ ಹಣವಿಲ್ಲ. ಆದಕಾರಣ ಕ್ಯೂಬ್ ಸಂಸ್ಥೆಯವರು ಎರಡು ವರ್ಷಗಳ ಕಾಲ ನಿರ್ಮಾಪಕರ ಬಳಿ ಹಣ ಕೇಳಬಾರದು. ಈ ಮೂಲಕ ಚಿತ್ರ ಪ್ರದರ್ಶಿಸಲು ಅನುವು ಮಾಡಿಕೊಡಬೇಕು ಎಂದು ನಿನ್ನೆ ನಡೆದ ಸಭೆಯಲ್ಲಿ ನಿರ್ಮಾಪಕರು ಬೇಡಿಕೆ ಇಟ್ಟಿದಾರೆಂದು ಸಂಘದ ಅಧ್ಯಕ್ಷ ಪ್ರವೀಣ್ಕುಮಾರ್ ಸುದ್ದಿಗೋಷ್ಟಿಯಲ್ಲಿ ವಿಚಾರ ತಿಳಿಸಿದರು. ವಾಣಿಜ್ಯ ಮಂಡಳಿ ಮುಂದೆ ಸುಮಾರು ೨೮೦ ಚಿತ್ರಗಳು ಬಿಡುಗಡಗೆ ....
*ಇದೇ ಶುಕ್ರವಾರ ಚಿತ್ರಮಂದಿರದಲ್ಲಿ ಚಿರು ’ಶಿವಾರ್ಜುನ’* ಲಾಕ್ಡೌನ್ಗೆ ಕೆಲವೇ ದಿನಗಳ ಮುನ್ನ ಬಿಡುಗಡೆ ಆಗಿದ್ದ ಚಿರಂಜೀವಿ ಸರ್ಜಾ ನಾಯಕತ್ವದ ಶಿವಾರ್ಜುನ ಸಿನಿಮಾ ಇದೀಗ ಮರು ಬಿಡುಗಡೆಗೆ ಸಿದ್ಧವಾಗಿದೆ. ಅ.16ರರ ಶುಕ್ರವಾರ ರಾಜ್ಯಾದ್ಯಂತ 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಚಿರಂಜೀವಿಯನ್ನು ಮತ್ತೆ ಕಣ್ತುಂಬಿಕೊಳ್ಳಬಹುದು. ‘ಶಿವಾರ್ಜುನ’ ಸಿನಿಮಾ ಮರು ಬಿಡುಗಡೆ ನಿಮಿತ್ತ ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ಸುದ್ದಿಗೋಷ್ಠಿ ಕರೆದ ಇಡೀ ತಂಡ, ಮರುಬಿಡುಗಡೆಯ ರೂಪರೇಷೆ ಬಗ್ಗೆ ಮಾಹಿತಿ ನೀಡಿತು. ಮೊದಲಿಗೆ ಚಿತ್ರದ ನಿರ್ಮಾಪಕ ಶಿವಾರ್ಜುನ ಮಾತನಾಡಿ, ‘ಇದು ನಾನು ನಿರ್ಮಾಣ ಮಾಡಿದ ಮೊದಲ ಸಿನಿಮಾ. ಮಾ. 12ಕ್ಕೆ ಅದ್ಧೂರಿಯಾಗಿ ಬಿಡುಗಡೆ ಮಾಡಿ ಒಳ್ಳೇಯ ....
ಈ ವಾರ ಶಿವಾಜಿ ಸುರತ್ಕಲ್ ( ಕೇಸ್ ಆಫ್ ರಣಗಿರಿ ರಹಸ್ಯ) ಮರು ಬಿಡುಗಡೆ.
ಲಾಕ್ ಡೌನ್ ಆರಂಭಕ್ಕೂ ಕೆಲವು ದಿನಗಳ ಮುಂಚೆ ತೆರೆ ಕಂಡು, ಎಲ್ಲರ ಮನಸೂರೆಗೊಂಡ ಶಿವಾಜಿ ಸುರತ್ಕಲ್ ಚಿತ್ರ ಅಕ್ಟೋಬರ್ ೧೬ ರಂದು ಮರು ಬಿಡುಗಡೆಯಾಗುತ್ತಿದೆ.
*ಹಾಲಿವುಡ್ ಶೈಲಿಯಲ್ಲಿ ಸಿದ್ಧವಾಗಲಿದೆ ಸೂಪರ್ ಹೀರೋ ಪರಿಕಲ್ಪನೆಯ ಕನ್ನಡ ಸಿನಿಮಾ*
ಸ್ಯಾಂಡಲ್ವುಡ್ ಸಿನಿಮಾರಂಗ ಬದಲಾವಣೆಯ ಪರ್ವದತ್ತ ಸಾಗುತ್ತಿದೆ. ಹೊಸಬರ ನವನವೀನ ಪ್ರಯತ್ನಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದೇ ರೀತಿ ನಿರ್ದೇಶಕ ಮನೋಜ್ ಪಿ. ನಡಲುಮನೆ ಚೊಚ್ಚಲ ಚಿತ್ರದಲ್ಲಿಯೇ ಇಡೀ ಭಾರತದಲ್ಲಿಯೇ ಯಾರೂ ಮಾಡದ ಹೊಸ ಪರಿಕಲ್ಪನೆಯ ಸಿನಿಮಾದೊಂದಿಗೆ ಆಗಮಿಸುತ್ತಿದ್ದಾರೆ. ಅವರ ಈ ಸಾಹಸಕ್ಕೆ ಯೂ ಕೆ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಪೂಜಾ ವಸಂತ್ ಕುಮಾರ್ ಬಂಡವಾಳ ಹೂಡಿದ್ದಾರೆ.
ತಾಳಟ್ಟಿ ಚಿತ್ರ ಚಿತ್ರೀಕರಣ ಮುಕ್ತಾಯ ೭ಸ್ಟಾರ್ ಪ್ರೊಡಕ್ಷನ್ ಮತ್ತು ಸೃಜನ ಮೀಡಿಯಾ ಹೌಸ್ ನ ಸಹಕಾರದಲ್ಲಿ ಕಲ್ಪತರು ಕಂಬೈನ್ಸ್ ನಾ ಅಡಿ ಯಲ್ಲಿ ನಿರ್ಮಾಣ ವಾಗಿದ್ದು. ಹರ್ಶವರ್ಧನ್, ಹಯಾತ್ ಖಾನ್, ರಾಕೇಶ್.ಡಿ, ದಿಲೀಪ್ ಕುಮಾರ್. ಬಂಡವಾಳ ಹೊಡಿದ್ದು ಈ ಚಿತ್ರಕ್ಕೆ ಗಿಲ್ಲಿ ವೆಂಕಟೇಶ್ ನಿರ್ದೇಶನದ ಜವಾಬ್ದಾರಿ ಇದೆ. ಈ ಚಿತ್ರಕ್ಕೆ ಇಮ್ತಿಯಾಜ್ ಖಾನ್ ಹಾಗೂ ಅಶೋಕ್ ಹಣಗಿ ಕ್ಯಾಮರಾ ದ ಕೈ ಚಳ ಕ ವಿದ್ದು ರಕ್ಷಿತ್ ಜಿ ಮಲ್ಲಪ್ಪಾ ಸಂಕಲನ ಕಾರ್ಯ ನಿರ್ವಹಿಸಿದ್ದು ಅಭಿನಂದನ್ ಕಶ್ಯಪ್ ಸಂಗೀತ ಸಂಯೂಜನೆ ಮಾಡಿದ್ದಾರೆ. ಇನ್ನು ಮುಖ್ಯ ಭೂಮಿಕೆಯಲ್ಲಿ ನಾಯಕನಟನಾಗಿ ಯತೀಶ್, ನಾಯಕಿಯಾಗಿ ಪ್ರತಿಮಾ, ಹಯಾತ್ ಖಾನ್, ದೀಪಾ, ಬೇಬಿ ಕೃತಿನಟರಾಜ್, ....
ಚಿರು ಹುಟ್ಟುಹಬ್ಬಕ್ಕೆ ಕ್ಷತ್ರಿಯ ಚಿತ್ರದ ಟೀಸರ್ ಬಿಡುಗಡೆ ಶ್ರೀಮೂಕಾಂಬಿಕಾ ಕಂಬೈನ್ಸ್ ಲಾಂಛನದಲ್ಲಿ ಎ. ವೆಂಕಟೇಶ್ ಅವರ ನಿರ್ಮಾಣದ, ಅನಿಲ್ ಮಂಡ್ಯ ಅವರ ನಿರ್ದೇಶನದ ಕ್ಷತ್ರಿಯ ಚಿತ್ರದ ಟೀಸರ್ ಇದೇ ತಿಂಗಳ ೧೭ರಂದು ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಚಿರು ಸರ್ಜಾ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರಕ್ಕೆ ಈಗಾಗಲೇ ಶೇ.೯೦ರμ ಭಾಗದ ಚಿತ್ರೀಕರಣ ಮುಗಿದಿದ್ದು, ಈ ತಿಂಗಳ ಅಂತ್ಯದಲ್ಲಿ ಕೊನೆಯ ಹಂತದ ಚಿತ್ರೀಕರಣ ಸಹ ಪ್ರಾರಂಭವಾಗಲಿದೆ. ಸಮಾಜದ ಒಳಿತಿಗಾಗಿ ಹೋರಾಡುವ ಒಬ್ಬ ಆಧುನಿಕ ಕ್ಷತ್ರಿಯನ ಪಾತ್ರದಲ್ಲಿ ನಟ ಚಿರು ಸರ್ಜಾ ಅವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರದ ....
ಕೊಟ್ಟಿಗೆ ಹಾರದಲ್ಲಿ ಕಸ್ತೂರಿ ಮಹಲ್ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ. ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರ. ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಅಕ್ಟೋಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಶಾನ್ವಿ ಶ್ರೀವಾಸ್ತವ್, ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕ ದಿನೇಶ್ ಬಾಬು ....
ಚಂದನವನದ ಇತಿಹಾಸ ಒಳಗೊಂಡ ಚಲನಚಿತ್ರ ಭಂಡಾರ ೮೪ ವರ್ಷದ ಇತಿಹಾಸವಿರುವ ಕನ್ನಡ ಚಿತ್ರರಂಗದ ವಿವರಗಳು ಮುಂದಿನ ಪೀಳಿಗೆಗೆ ತಿಳಿಯುವಂತೆ ಮಾಡುವ ಸಲುವಾಗಿ ಕರ್ನಾಟಕ ಚಲನಚಿತ್ರ ಅಕಾಡೆಮಿಯು ‘ಚಲನಚಿತ್ರ ಭಂಡಾರ’ ಸ್ಥಾಪಿಸಲು ಯೋಜನೆ ಕೈಗೊಂಡಿದೆ. ಇದಕ್ಕಾಗಿ ಆರ್ಥಿಕ ನೆರವನ್ನು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರವನ್ನು ಕೋರಲಾಗಿತ್ತು. ಪ್ರಾಧಿಕಾರವು ಅಕಾಡೆಮಿ ಕೋರಿಕೆಗೆ ಸ್ಪಂದಿಸಿದ್ದು ಭಂಡಾರ ಸ್ಥಾಪನೆಗೆ ಒಂದು ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಇದೊಂದು ಅಕಾಡೆಮಿಯ ಬಹುದಿನದ ಕನಸು ಈಗ ನನಸಾಗುತ್ತಿದೆ ಎಂದು ಅಧ್ಯಕ್ಷ ಸುನಿಲ್ಪುರಾಣಿಕ್ ಸುದ್ದಿಗೋಷ್ಟಿಯಲ್ಲಿ ಸಂತಸ ಹಂಚಿಕೊಂಡಿದ್ದಾರೆ. ....
ಪ್ರೇಕ್ಷಕರ ಒತ್ತಾಯದ ಮೇರೆಗೆ ಲವ್ ಮಾಕ್ಟೈಲ್ ಮರುಬಿಡುಗಡೆ ಜನವರಿ ತಿಂಗಳಲ್ಲಿ ಬಿಡುಗಡೆಗೊಂಡ ‘ಲವ್ ಮಾಕ್ಟೇಲ್’ ಚಿತ್ರವು ಮೊದಲ ಎರಡು ವಾರಗಳು ಗಳಿಕೆಯಲ್ಲಿ ಕಡಿಮೆ ಬಂದಿತ್ತು. ವಿಚಲಿತರಾಗದ ನಾಯಕ,ನಿರ್ದೇಶಕ ಮತ್ತು ನಿರ್ಮಾಪಕ ಕೃಷ್ಣ ತಂಡದೊಂದಿಗೆ ಚಿತ್ರಮಂದಿರಗಳಿಗೆ ಭೇಟಿ ನೀಡಿರುವುದರ ಪರಿಣಾಮ ಸಿನಿಮಾವು ಒಂದು ಹಂತಕ್ಕೆ ನಿಂತುಕೊಂಡಿತ್ತು. ಮುಂದೆ ಯಶಸ್ವಿಯಾಗಿ ೫೦ದಿನ ಪೂರೈಸುತ್ತದೆ ಎಂದು ಆಶಾಭಾವನೆಯಲ್ಲಿ ಇದ್ದ ತಂಡಕ್ಕೆ ಕರೋನದಿಂದ ಎಲ್ಲವು ನಿರಾಸೆ ಆಯಿತು. ಕೊನೆಗೆ ಓಟಿಟಿದಲ್ಲಿ ಪ್ರಸಾರಗೊಂಡು ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನರು ....
ಕ್ಯಾನ್ಸರ್ ರೋಗಿಗಳಿಗೆ ಚಿತ್ರದ ಗಳಿಕೆ ಹಣ ೮೦ರ ದಶಕದಲ್ಲಿ ‘ಬೆಂಕಿಯ ಬಲೆ’ ಸಾಂಸರಿಕ ಸಿನಿಮಾ ತರೆಕಂಡು ಹಿಟ್ ಆಗಿತ್ತು. ಈಗ ಅದೇ ಹೆಸರಿನಲ್ಲಿ ಚಿತ್ರವೊಂದು ತೆರೆಗೆ ಬರಲು ಕಾರ್ಯನಿರತವಾಗಿದೆ. ಇದರಲ್ಲಿ ಹಲವು ವಿಶೇಷತೆಗಳು ಕೂಡಿದೆ. ಕತೆ,ಚಿತ್ರಕತೆ, ಸಾಹಿತ್ಯ, ನಿರ್ಮಾಪಕ,ನಿರ್ದೇಶನ ಮತ್ತು ನಾಯಕನಾಗಿ ನಟಿಸಿರುವ ಮೈಸೂರಿನ ಶಿವಾಜಿ ಹೇಳುವುದಿಷ್ಟು: ನನಗೆ ಯಾವುದೇ ರೀತಿಯ ಚಿತ್ರರಂಗದ ಅನುಭವವಿಲ್ಲ. ಸ್ಕ್ರಿಪ್ಟ್ ಬರೆದುಕೊಂಡಿಲ್ಲ. ಶೂಟಿಂಗ್ ಜಾಗಕ್ಕೆ ಹೋದಾಗ ಅಲ್ಲಿಯೇ ನಾನು ಈ ಡೈಲಾಗ್ ಹೇಳುತ್ತೇನೆ. ನೀವು ಇದನ್ನು ಹೇಳಿ ಎಂದು ....
ನಿವೃತ್ತ ಕ್ಯಾಪ್ಟನ್ ಆಗಿ ರಾಘವೇಂದ್ರ ರಾಜ್ಕುಮಾರ್ ರಾಘವೇಂದ್ರ ರಾಜ್ಕುಮಾರ್ ಅಭಿನಯದ ರಾಜತಂತ್ರ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ದುಷ್ಟಶಕ್ತಿಗಳನ್ನು ತನ್ನ ಬುದ್ಧಿಶಕ್ತಿ ಮತ್ತು ತಂತ್ರಗಾರಿಕೆಯಿಂದ ಮಣಿಸುವ ನಿವೃತ್ತ ಕ್ಯಾಪ್ಟನ್ ಆಗಿ ರಾಘವೇಂದ್ರ ರಾಜ್ಕುಮಾರ್ ಅವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ರಾಘವೇಂದ್ರ ರಾಜ್ಕುಮಾರ್ ಅಮ್ಮನಮನೆ ಚಿತ್ರದ ಅಭಿನಯಕ್ಕಾಗಿ ಶ್ರೇಷ್ಟನಟ ಪ್ರಶಸ್ತಿ ಪಡೆದಿದ್ದರು. ಈ ಚಿತ್ರಕ್ಕೆ ಛಾಯಾಗ್ರಾಹಕರಾಗಿದ್ದ ಪಿ.ವಿ.ಆರ್.ಸ್ವಾಮಿ ಈಗ ಕ್ಯಾಮರಾ ಹಿಡಿಯುವ ಜೊತೆಗೆ ಇದೇ ಮೊದಲಬಾರಿಗೆ ನಿರ್ದೇಶಕನ ಸ್ಥಾನವನ್ನು ಅಲಂಕರಿಸಿದ್ದಾರೆ. ಹಿರಿಯನಟ ರಾಘವೇಂದ್ರ ರಾಜ್ಕುಮಾರ್ ಅವರ ಜೊತೆಗೆ ....
ಲಂಕೇಶ್ ಆಡಿಯೋಬುಕ್ಸ್-ಲಂಕೇಶ್ ಆ್ಯಪ್ ಬಿಡುಗಡೆ ಪತ್ರಕರ್ತ ಹಾಗೂ ನಿರ್ದೇಶಕರೂ ಆದ ಇಂದ್ರಜಿತ್ ಲಂಕೇಶ್ ತಮ್ಮ ತಂದೆ ಲಂಕೇಶ್ ಅವರ ಕೃತಿಗಳು ಓದುಗರೆಲ್ಲರಿಗೂ ಸುಲಭವಾಗಿ ಸಿಗಲೆಂದು ಅವುಗಳನ್ನೆಲ್ಲ ಡಿಜಿಟಲ್ ರೂಪಕ್ಕೆ ತಂದಿದ್ದಾರೆ. ಅಂದರೆ ಲಂಕೇಶ್ ಅವರ ಪುಸ್ತಕಗಳನ್ನು ಇನ್ನುಮುಂದೆ ಮೊಬೈಲ್ ಅಥವಾ ಲ್ಯಾಪ್ಟ್ಯಾಪ್ಗಳ ಮೂಲಕವೂ ಓದಬಹುದಾಗಿದ್ದು, ಈ ಲಂಕೇಶ್ ಆಡಿಯೋಬುಕ್ಸ್ ಹಾಗೂ ಲಂಕೇಶ್ ಆ್ಯಪ್ನ ಬಿಡುಗಡೆ ಕಾರ್ಯಕ್ರಮ ಗಾಂಧಿಭವನದಲ್ಲಿ ನಡೆಯಿತು. ಇದರ ಜೊತೆಗೆ ಲಂಕೇಶ್ ಪತ್ರಿಕೆಯ 41ನೇ ವರ್ಷದ ವಿಶೇಷ ಸಂಚಿಕೆ ಸಹ ಬಿಡುಗಡೆಯಾಯಿತು. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಹಾಗೂ ಸಿದ್ದರಾಮೇಶ್ವರ ಮಹಾಸಂಸ್ಥಾನದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ....
ಭ್ರಮೆ ಆಡಿಯೋ ಬಿಡುಗಡೆ, ಬೈಕ್ ವಿಜೇತರ ಘೋಷಣೆ ರೇಣುಕಾಂಬ ಥಿಯೇಟರಿನಲ್ಲಿ ಭ್ರಮೆ ಚಿತ್ರದ ಹಾಡುಗಳ ಸಿಡಿ ಬಿಡುಗಡೆ ಹಾಗೂ ಮೊದಲ ಲಕ್ಕಿಡ್ರಾ ವಿಜೇತರ ಆಯ್ಕೆ ಕಾರ್ಯಕ್ರಮ ನಡೆಯಿತು. ಕುಂದಾಪುರದಲ್ಲಿ ನಡೆದ ನೈಜ ಘಟನೆಯೊಂದನ್ನು ಆಧಾರವಾಗಿಟ್ಟುಕೊಂಡು ನಿರ್ದೇಶಕ ಚರಣರಾಜ್ ಈ ಚಿತ್ರವನ್ನು ನಿರೂಪಿಸಿದ್ದಾರೆ. ಹಿರಿಯ ನಿರ್ದೇಶಕ ತಿಪಟೂರು ರಘು ಅವರ ಪುತ್ರ ನವೀನ್ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಚಿತ್ರದಲ್ಲಿ ಅಂಜನಾಗೌಡ ಹಾಗೂ ಇಶಾನಾ ನಾಯಕಿಯರ ಪಾತ್ರದಲ್ಲಿದ್ದಾರೆ. ಇದೊಂದು ಹಾರರ್ ಕಾಮಿಡಿ ಕಥೆಯ ಮೇಲೆ ನಡೆಯುವ ಸಬ್ಜೆಕ್ಟ್ ಆಗಿದ್ದು, ಚಿತ್ರಕ್ಕೆ ಚರಣರಾಜ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ನಾಯಕ ....
ಕನ್ನಡಾಭಿಮಾನಿ ಪಂಪನ ಮರ್ಡರ್ ಮಿಸ್ಟರಿ! ** ಮತ್ತೆ ಬಂದರು ನಾದಬ್ರಹ್ಮ ಹಂಸಲೇಖ * ಎಸ್ ಮಹೇಂದರ್ ನಿರ್ದೇಶನದ ಅಪರೂಪದ ಸಿನಿಮಾ ಪಂಪ * ಕನ್ನಡ ಸಾರಸ್ವತ ಬನದಲ್ಲರಳಿತ ರೋಚಕ ಪುಷ್ಪ - ಪಂಪ ತೀರಾ ಅಪರೂಪಕ್ಕೆ ಎನ್ನುವಂತೆ ಕನ್ನಡದಲ್ಲೊಂದು ಸಿನಿಮಾ ತಯಾರಾಗುತ್ತಿದೆ. ನಿಜಕ್ಕೂ ವಿಭಿನ್ನವಾದ ಕಥಾ ಹಂದರ ಮತ್ತು ನಿರೂಪಣೆ ಇದರಲ್ಲಿದೆ. ಕನ್ನಡಾಭಿಮಾನವನ್ನೇ ವ್ಯಕ್ತಿತ್ವವನ್ನಾಗಿಸಿಕೊಂಡ, ಆದಿ ಕವಿ ಪಂಪನ ಮತ್ತೊಂದು ಅವತಾರದಂಥಾ ಕಥಾನಾಯಕ. ಪಂಚಳ್ಳಿ ಪರಶಿವಮೂರ್ತಿ ....