ಅನೀಶ್ ತೇಜೇಶ್ಬರ್ ನಟನೆ, ನಿರ್ದೇಶನದ "ಲವ್ ಒಟಿಪಿ" ನವೆಂಬರ್ 14 ರಂದು ತೆರೆಗೆ ಕನ್ನಡ ಚಿತ್ರರಂಗದ ಭರವಸೆಯ ನಾಯಕ ನಟ ಅನೀಶ್ ತೇಜೇಶ್ವರ್ ನಾಯಕನಾಗಿ ನಟಿಸಿ ನಿರ್ದೇಶಿಸಿರುವ " ಲವ್ ಒಟಿಪಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಚಿತ್ರ ನವಂಬರ್ 14 ರಂದು ತೆರೆಗೆ ಬರಲು ಸಜ್ಜಾಗಿದೆ. ತಂದೆ - ಮಗನ ಸಂಬಂಧ, ಪ್ರೀತಿ, ಪ್ರೇಮ ಸೇರಿದಂತೆ ಕಮರ್ಷಿಯಲ್ ಅಂಶಗಳನ್ನು ಸೇರಿಸಿ ಚಿತ್ರವನ್ನು ತೆರೆಗೆ ತರಲು ಸಜ್ಜಾಗಿದೆ. 65 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಲವ್ ಒಟಿಪಿ" ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೂ ಪಾದಾರ್ಪಣೆ ಮಾಡಿದ್ದಾರೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ತಯಾರಾಗಿರುವ ಲವ್ ಒಟಿಪಿ ಚಿತ್ರ ನವಂಬರ್ 14 ರಂದು ತೆರೆಗೆ ....
*ಚಂದ್ರಮೌಳಿ-ರಾಮ್ ಹೊಸ ಸಾಹಸ ’ದಿಲ್ಮಾರ್’ಗೆ ಶಿವಣ್ಣ ಬೆಂಬಲ..ಇದೇ 24ರಂದು ಸಿನಿಮಾ ರಿಲೀಸ್* *’ದಿಲ್ಮಾರ್’ಗೆ ಪ್ರೀ-ರಿಲೀಸ್ ಇವೆಂಟ್ ಗೆ ಶಿವಣ್ಣ ಮೆರುಗು..ರಾಮ್-ಚಂದ್ರಮೌಳಿ ಚಿತ್ರಕ್ಕೆ ದೊಡ್ಮನೆ ದೊರೆ ಹಾರೈಕೆ* *’ದಿಲ್ಮಾರ್’ಗೆ ಶಿವಣ್ಣ ಸಾಥ್..ಕೆಜಿಎಫ್ ಡೈಲಾಗ್ ರೈಟರ್ ಮೊದಲ ಚಿತ್ರ ಇದೇ 24ಕ್ಕೆ ರಿಲೀಸ್* ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್ ಕೊಟ್ಟಿರುವ ದಿಲ್ಮಾರ್ ಸಿನಿಮಾಗೀಗ ದೊಡ್ಮನೆ ದೊರೆ ಶಿವಣ್ಣನ ಬೆಂಬಲ ಸಿಕ್ಕಿದೆ. ಇದೇ ತಿಂಗಳ 24ರಂದು ತೆರೆಗೆ ಬರ್ತಿರುವ ಕೆಜಿಎಫ್ ಡೈಲಾಗ್ ರೈಟರ್ ಚಂದ್ರಮೌಳಿಯವರ ಚೊಚ್ಚಲ ಸಿನಿಮಾಗೆ ಶಿವಣ್ಣ ಶುಭ ಹಾರೈಸಿದ್ದಾರೆ. ನಿನ್ನೆ ಬೆಂಗಳೂರಿನ ....
*ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು ಬಹು ನಿರೀಕ್ಷಿತ "ಬ್ರ್ಯಾಟ್"(BRAT) ಚಿತ್ರದ ಟ್ರೇಲರ್.* . ಡಾಲ್ಫಿನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ " ಬ್ರ್ಯಾಟ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ "ಬ್ರ್ಯಾಟ್" ಚಿತ್ರದ ಟ್ರೇಲರ್ ಅನ್ನು ಅನಾವರಣ ಮಾಡಿದರು. ನಂತರ ಸುದೀಪ್ ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ಶಶಾಂಕ್ ಒಬ್ಬರು ಒಳ್ಳೆಯ ಕಥೆಗಾರ. ಅವರ ನಿರ್ದೇಶನದ ಚಿತ್ರ ಎಂದ ಮೇಲೆ ಚೆನ್ನಾಗಿರುತ್ತದೆ. ಹಾಗೆ ಡಾರ್ಲಿಂಗ್ ಕೃಷ್ಣ ಕೂಡ ಉತ್ತಮ ನಟ. ....
ಕುಂತೀಪುತ್ರ ’ರಾಧೇಯ’ ಚಿತ್ರದ ಟೀಸರ್ ಬಿಡುಗಡೆ ನಟ, ನಿರ್ದೇಶಕ ಅಜೇಯ್ ರಾವ್ ಈಗ ರಾಧೇಯನಾಗಿದ್ದಾರೆ. ಹೌದು, ಅವರು ಹೊಸ ಚಿತ್ರದ ಹೆಸರು ರಾಧೇಯ. ಒಂದಷ್ಟು ವರ್ಷಗಳಿಂದ ಕೆಲ ನಿರ್ದೇಶಕರ ಜತೆ ಕೆಲಸ ಮಾಡಿ ಅನುಭವ ಪಡೆದಿರುವ ವೇದಗುರು ಇದೇ ಮೊದಲಬಾರಿಗೆ ’ರಾಧೇಯ’ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಜೊತೆಗೆ ಕೀರ್ತಿ ಚಾಹ್ನಾ ಸಿನಿಮಾ ಕಾರ್ಖಾನೆ ಮೂಲಕ ನಿರ್ಮಾಣ ಸಹ ಮಾಡಿದ್ದಾರೆ. ಕೃಷ್ಣ ಅಜಯ್ ರಾವ್ ಹಾಗೂ ಸೋನಾಲ್ ಮಂತೆರೋ ನಾಯಕ-ನಾಯಕಿಯಾಗಿ ಅಭಿನಯಿಸಿರುವ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ನಿರ್ದೇಶಕ ವೇದಗುರು ಮಾತನಾಡುತ್ತ ಮಹಾಭಾರತದ ಕರ್ಣನ ಇನ್ನೊಂದು ಹೆಸರು ....
'ಫ್ಲರ್ಟ್’ ಚಿತ್ರದ ಟ್ರೈಲರ್ ಕಿಚ್ಚ ಸುದೀಪ್ ಬಿಡುಗಡೆ ನಟ ಚಂದನ್ ಕುಮಾರ್ ಪ್ರಥಮ ನಿರ್ದೇಶನದ ಚಿತ್ರ ಕನ್ನಡದ ಸುರಧ್ರೂಪಿ ನಟ ಚಂದನ್ ಕುಮಾರ್ ಫ್ಲರ್ಟ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳೋ ಜತೆಗೆ ಚಿತ್ರದ ನಾಯಕನಾಗೂ ನಟಿಸಿದ್ದಾರೆ. ಎವರೆಸ್ಟ್ ಪಿಕ್ಚರ್ಸ್ ಮೂಲಕ ನಿರ್ಮಾಣ ಸಹ ಮಾಡಿದ್ದಾರೆ. ಎ ಪ್ಯೂರ್ ಡವ್ ಸ್ಟೋರಿ ಎಂಬ ಅಡಿಬರಹ ಫ್ಲರ್ಟ್ ಚಿತ್ರಕ್ಕಿದ್ದು, ನಿಮಿಕಾ ರತ್ನಾಕರ್, ಅಕ್ಷತಾ ಬೋಪಣ್ಣ ನಾಯಕಿಯರಾಗಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ನೀ ನನ್ನ ಜೀವ ಎಂಬ ಫ್ರೆಂಡ್ ಶಿಪ್ ಹಾಡನ್ನು ಇತ್ತೀಚೆಗೆ ರಿಲೀಸ್ ಮಾಡೋ ಮೂಲಕ ಪ್ರಚಾರಕ್ಕೆ ಚಾಲನೆ ನೀಡಲಾಗಿತ್ತು. ಚಂದನ್ ಆಪ್ತರಾದ ಕಿಚ್ಚ ....
'ದಿಗ್ಲುಪುರ’ ಸಾವಿನ ಊರಲ್ಲಿ ಮುಹೂರ್ತದ ಸಂಭ್ರಮ ಸ್ಕೇರಿ ಹಳ್ಳಿಯಲ್ಲಿ ಒಂದು ಪಯಣ... ಕನ್ನಡದಲ್ಲಿ ಬ್ಲಾಕ್ ಮ್ಯಾಜಿಕ್ ಆಧಾರಿತ ಚಿತ್ರಗಳು ತೀರ ವಿರಳ. ದಶಕಗಳ ಹಿಂದೆ ಏಟು ಎದಿರೇಟು, ಇತ್ತೀಚಿನ ಕಟಕ ಅದ್ಭುತವಾದ ಮಾಟ ಮಂತ್ರದ ಕಾನ್ಸೆಪ್ಟ್ ಒಳಗೊಂಡ ಚಿತ್ರಗಳಾಗಿದ್ದವು. ಬಹಳ ದಿನಗಳ ನಂತರ ಅಂಥದೇ ಎಳೆ ಇರುವ ಚಿತ್ರವೊಂದು ಸೆಟ್ಟೇರಿದೆ. ಅದರ ಹೆಸರು ದಿಗ್ಲುಪುರ. ಕಳೆದ ಶುಕ್ರವಾರ ಕಂಠೀರವ ಸ್ಟುಡಿಯೋದಲ್ಲಿ ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಮುಹೂರ್ತ ದೃಶ್ಯಕ್ಕೆ ಕ್ಲಾಪ್ ಮಾಡಿದರು. ದ ಡೆಡ್ ವಾಕ್ ಇನ್ ಸ್ಕೇರಿ ವಿಲೇಜ್ ಎಂಬ ಅಡಿಬರಹ ಇರೋ ಈ ಚಿತ್ರಕ್ಕೆ ಮನೋಜ್ಞ ಮನ್ವಂತರ ಕಥೆ, ಚಿತ್ರಕಥೆ ....
'ವೃಷಭ’ ಟೈಟಲ್ ಸಮಸ್ಯೆ ಮೂಲ ಕನ್ನಡ ಚಿತ್ರಕ್ಕೆ ಸಂಕಷ್ಟ : ಫಿಲಂ ಚೇಂಬರ್ ಬಗೆಹರಿಸಬೇಕಿದೆ.. ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಬಂದ ಮೇಲೆ ಇತ್ತೀಚಿನ ದಿನಗಳಲ್ಲಿ ಒಂದೇ ಹೆಸರಿನಲ್ಲಿ ಎರಡು ಚಿತ್ರಗಳು ತೆರೆ ಕಾಣುತ್ತಿರುವುದು ಮೂಲ ಕನ್ನಡದಲ್ಲಿ ಮಾಡಿದ ಸಿನಿಮಾಗಳಿಗೆ ಸಮಸ್ಯೆಯಾಗುತ್ತಿದೆ. ಬೇರೆ ಭಾಷೆಯವರು ರಿಲೀಸ್ ಹಂತದಲ್ಲಿ ಡಬ್ಬಿಂಗ್ ವರ್ಷನ್ ಗೆ ಟೈಟಲ್ ಕೊಟ್ಟು ಬಿಡುಗಡೆ ಮಾಡುತ್ತಾರೆ. ಅದೇ ರೀತಿ ಯುವ ನಿರ್ದೇಶಕ ಉಮೇಶ್ ಹೆಬ್ಬಾಳ ಅವರು ಕಳೆದ 2-3 ವರ್ಷಗಳಿಂದ ದೊಡ್ಡ ಮಟ್ಟದ ಎಫರ್ಟ ಹಾಕಿ, ಕಷ್ಟಪಟ್ಟು ವೃಷಭ ಎಂಬ ಚಿತ್ರವನ್ನು ಮಾಡಿದ್ದಾರೆ. ಉಮೇಶ್ ಹೆಬ್ಬಾಳ ಅವರೇ ನಾಯಕನಾಗಿ ನಟಿಸಿ ಬಿಗ್ ಬಜೆಟ್ ನಲ್ಲಿ ಈ ಚಿತ್ರ ನಿರ್ಮಾಣ ಸಹ ಮಾಡಿದ್ದಾರೆ. ....
*ಸಿಂಪಲ್ ಸುನಿ ಸಾರಥ್ಯದ ’ಮೋಡ ಕವಿದ ವಾತಾವರಣ’ ಸಿನಿಮಾದ ಮೊದಲ ಹಾಡು ರಿಲೀಸ್* *ನನ್ನೆದೆಯ ಹಾಡೊಂದನು ಎನ್ನುತ್ತಾ ಹೆಜ್ಜೆ ಹಾಕಿದ ಸಿಂಪಲ್ ಸುನಿ ಶಿಷ್ಯ... ಮೋಡ ಕವಿದ ವಾತಾವರಣ ಚಿತ್ರದ ಫಸ್ಟ್ ಸಾಂಗ್ ರಿಲೀಸ್*... ಹೊಸ ಪ್ರತಿಭೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ ಈಗ ತಮ್ಮದೇ ಗರಡಿಯ ಹುಡ್ಗ ಶೀಲಮ್ ಅವರನ್ನು ಹೀರೋ ಆಗಿ ಲಾಂಚ್ ಮಾಡಿದ್ದಾರೆ. ಅದಕ್ಕಾಗಿ ಅವರು ಮೋಡ ಕವಿದ ವಾತಾವರಣವನ್ನೇ ಸೃಷ್ಟಿಸಿದ್ದಾರೆ. ಅರ್ಥಾತ್ ಸಿಂಪಲ್ ಸುನಿ ಹೊಸ ಸಿನಿಮಾ ಮೋಡ ಕವಿದ ವಾತಾವರಣ. ’ಮೋಡ ಕವಿದ ವಾತಾವರಣ’ ಸಿನಿಮಾದ ಹೀರೋ ಶೀಲಮ್ ನಿರ್ದೇಶಕ ಸಿಂಪಲ್ ಸುನಿಯೊಂದಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ....
*ಅದ್ವಿತಿ ಹಿಂದೆ `ಲವ್ ಯು’ ಹಾಡುತ್ತಾ ಓಡಾಡಿದ ರೂಪೇಶ್ ಶೆಟ್ಟಿ* ಕರಾವಳಿ ಭಾಗದ ಪ್ರತಿಭೆ ಹಾಗೂ ಬಿಗ್ಬಾಸ್ ಖ್ಯಾತಿಯ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ತುಳು ಹಾಗೂ ಕನ್ನಡದ `ಜೈ’ ಸಿನಿಮಾದ ಲವ್ ಎಂಬ ಹಾಡು ರಿಲೀಸ್ ಆಗಿದೆ. ಇದು ಪ್ಯೂರ್ ಲವ್ ಸಾಂಗ್ ಆಗಿರೋದ್ರಿಂದ ನಿಜವಾದ ಪ್ರೇಮಿಗಳು ಹಾಡನ್ನ ಬಿಡುಗಡೆ ಮಾಡಿದ್ದಾರೆ. ಗುರುಕಿರಣ್ ದಂಪತಿ, ನಿರಂಜನ್ ದೇಶಪಾಂಡೆ ದಂಪತಿ, ವಿನಯ್ ಗೌಡ ದಂಪತಿ, ರೂಪೇಶ್ ರಾಜಣ್ಣ ದಂಪತಿ, ಆರ್ಯವರ್ಧನ್ ಗುರೂಜಿ ದಂಪತಿಯಿಂದ ಹಾಡು ರಿಲೀಸ್ ಆಗಿದೆ. ಲವ್ ಯೂ ಅನ್ನೋ ಹಾಡನ್ನ ಫೈನಲ್ ಮಾಡುವುದಕ್ಕೇನೆ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. 5 ವರ್ಷನ್ ಕೇಳಿದ ಮೇಲೂ 6ನೇ ವರ್ಷನ್ ಫೈನಲ್ ಮಾಡಲಾಗಿತ್ತು. ಮತ್ತೆ ಮತ್ತೆ ....
*ನವೆಂಬರ್ 14 ರಂದು ಮಕ್ಕಳ ದಿನಾಚರಣೆಯ ದಿನ ತೆರೆಗೆ ಬರಲಿದೆ "ಪಾಠಶಾಲಾ"* . ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ ಬಾಲ್ಯ ಸೇರಿದಂತೆ ಸೂಕ್ಷ್ಮ ವಿಚಾರಗಳ ಕುರಿತಾದ ಕಥಾಹಂದರ ಹೊಂದಿರುವ "ಪಾಠಶಾಲಾ" ಚಿತ್ರ ನವೆಂಬರ್ 14 ರಂದು ತೆರೆಗೆ ಬರಲು ಸಜ್ಜಾಗಿದೆ. ಇತ್ತೀಚೆಗೆ ಚಿತ್ರದ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಚಿತ್ರತಂಡದವರು "ಪಾಠಶಾಲಾ" ಕುರಿತು ಮಾತನಾಡಿದರು. "ಪಾಠಶಾಲಾ" ಎನ್ನುವ ಹೆಸರು ಇದೆ ಎಂದ ಮಾತ್ರಕ್ಕೆ ಇದು ಮಕ್ಕಳ ಚಿತ್ರ ಅಲ್ಲ ಎಂದು ಮಾತನಾಡಿದ ನಿರ್ದೇಶಕ ಹೆದ್ದೂರು ಮಂಜುನಾಥ ಶೆಟ್ಟಿ, ಈಗಿನ ಶಿಕ್ಷಣ 80 ರ ದಶಕದಲ್ಲಿ ಇದ್ದ ಹಾಗೆ ಇಲ್ಲ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ದೊಡ್ಡ ಅಂತರ ಇದೆ. ಈ ....
*ಬೆಂಗಳೂರಿನಲ್ಲಿ ತಮಿಳಿನ ಡೀಸೆಲ್ ಸಿನಿಮಾ ಪ್ರಚಾರ.. ಇದೇ ದೀಪಾವಳಿ ಹಬ್ಬಕ್ಕೆ ಚಿತ್ರ ರಿಲೀಸ್* ತಮಿಳಿನ ಆಕ್ಷನ್ ಥ್ರಿಲ್ಲರ್ ಸಿನಿಮಾ ಡೀಸೆಲ್ ಬಿಡುಗಡೆಗೆ ಸಜ್ಜಾಗಿದೆ. ಇದೇ ದೀಪಾವಳಿ ಹಬ್ಬಕ್ಕೆ ಬೆಳ್ಳಿತೆರೆಯಲ್ಲಿ ಈ ಚಿತ್ರ ಧಮಾಕ ಸೃಷ್ಟಿಸಲಿದೆ. ಕನ್ನಡದಲ್ಲಿಯೂ ಡಿಸೇಲ್ ಸಿನಿಮಾ ತೆರೆಗೆ ಬರ್ತಿದೆ. ಹೀಗಾಗಿ ಚಿತ್ರತಂಡ ನಿನ್ನೆ ಬೆಂಗಳೂರಿನಲ್ಲಿ ಪ್ರಚಾರ ನಡೆಸಿದೆ. ಎಂಎಂಬಿ ಲೆಗಸಿಯಲ್ಲಿ ಚಿತ್ರದ ಸುದ್ದಿ ಗೋಷ್ಟಿ ನಡೆಯಿತು. ಈ ವೇಳೆ ನಿರ್ದೇಶಕ ಷಣ್ಮುಗಂ ಮುತ್ತುಸಾಮಿ, ನಾಯಕ ಹರೀಶ್ ಕಲ್ಯಾಣ್ ಹಾಗೂ ನಾಯಕಿ ಅತುಲ್ಯ ರವಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು. ನಿರ್ದೇಶಕ ಷಣ್ಮುಗಂ ಮುತ್ತುಸ್ವಾಮಿ ಮಾತನಾಡಿ, ....
*"ಫ್ರಾಡ್ ಋಷಿ" ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡಿದ ನಮ್ ಋಷಿ* . *ಹಾಡು ಬಿಡುಗಡೆ ಮಾಡಿ ಹಾರೈಸಿದ ಡಾ||ವಿ.ನಾಗೇಂದ್ರಪ್ರಸಾದ್* . "ಒಳಿತು ಮಾಡು ಮನುಸ" ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ "ಫ್ರಾಡ್ ಋಷಿ" ಚಿತ್ರದ ಮೂರನೇ ಹಾಡು "ನೀ ಹೆಜ್ಜೆ ಇಟ್ಟ ಕಡೆಯಲ್ಲೆಲ್ಲ ಗೆಜ್ಜೆನಾದ" ಎಂಬ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಡಾ||ವಿ.ನಾಗೇಂದ್ರಪ್ರಸಾದ್ ಅವರು ನಮ್ ಋಷಿ ಬರೆದಿರುವ ರಾಜೇಶ್ ಕೃಷ್ಣನ್ ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿದರು. ಹಾಡು ಬಿಡುಗಡೆ ನಂತರ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಹಲವು ವರ್ಷಗಳಿಂದ ಋಷಿ ಅವರನ್ನು ಬಲ್ಲೆ. ಅವರ "ಒಳಿತು ಮಾಡು ಮನುಸ" ಹಾಡು ....
"ಬೀದಿ ಬದುಕು" ಟೀಸರ್ ಬಿಡುಗಡೆ: ಚಿಂದಿ ಆಯುವ ಮಹಿಳೆಯ ಬದುಕು ಬವಣೆಯ ಕಥೆ.. ಬಹುತೇಕ ಭಕ್ತಿಪ್ರಧಾನ ಚಿತ್ರಗಳಿಗೆ ಹೆಸರಾದ ಪುರುಷೋತ್ತಮ್ ಓಂಕಾರ್, ಇದೀಗ ಹೊಟ್ಟೆ ಪಾಡಿಗಾಗಿ ಚಿಂದಿ ಆಯುವ ಮಹಿಳೆಯ ಜೀವನದ ಕಥೆ ಹೇಳಹೊರಟಿದ್ದಾರೆ. ರಸ್ತೆ ಬದಿಯಲ್ಲಿ ಚಿಂದಿ ಆಯುತ್ತ ಜೀವನ ಸಾಗಿಸುವ ಮಹಿಳೆಯೊಬ್ಬಳ ಜೀವನ, ತನ್ನ ಪುಟ್ಟ ಮಗನಿಗಾಗಿ ಆಕೆ ಪಡುವ ಕಷ್ಟ ಇದನ್ನೆಲ್ಲ ಮನಮುಟ್ಟುವ ಹಾಗೆ ತೆರೆಮೇಲೆ ತೆರದಿಡುವ ಆ ಚಿತ್ರದ ಹೆಸರು ಬೀದಿ ಬದುಕು. ನಟಿ ರೇಖಾ ಸಾಗರ್(ರೆಖಾರಾಣಿ) ಈ ಚಿತ್ರದ ನಾಯಕಿಯಾಗಿದ್ದು, ಜತೆಗೆ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕಿಯೂ ಆಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ....
*ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ತೆರೆಗೆ ಬರಲಿದೆ ಬಹು ನಿರೀಕ್ಷಿತ ಚಿತ್ರ "ಕೊರಗಜ್ಜ"* . ಸುಧೀರ್ ಅತ್ತಾವರ್ ನಿರ್ದೇಶನದ ಹಾಗೂ ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹು ನಿರೀಕ್ಷಿತ, ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ಅಡಿಯ "ಕೊರಗಜ್ಜ" ಚಿತ್ರದ ಫಸ್ಟ್ ಲುಕ್ ಟೀಸರ್ ಹಾಗೂ ತ್ರಿಡಿ ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ದಕ್ಷಿಣ ಕನ್ನಡದ ವಾದ್ಯ ಹಿಮ್ಮೇಳ ಹಾಗೂ ಉಡುಪಿಯ ಮಹಿಳಾ ತಂಡದವರ ಹುಲಿ ನೃತ್ಯದ ಮೆರವಣಿಗೆಯಲ್ಲಿ ಸಾಗಿಬಂದ "ಕೊರಗಜ್ಜ" ನ ಎರಡು ಕಟೌಟ್ ಗಳು ಡೊಳ್ಳು,ಕೊಂಬು-ಕಹಳೆ, ಕೊಳಲು, ತಾಸೆ,ತಾಳಗಳ ವಾದ್ಯಮೇಳದ ಹಿನ್ನೆಯಲ್ಲಿ ಹುಲಿವೇಶದ ....
ಶ್ರೀಮುರುಳಿ ಸಮ್ಮುಖದಲ್ಲಿ `ಬಿಳಿಚುಕ್ಕಿ ಹಳ್ಳಿಹಕ್ಕಿ’ ಟ್ರೈಲರ್ ಬಿಡುಗಡೆ! ಮಹಿರಾ ಖ್ಯಾತಿಯ ಮಹೇಶ್ ಗೌಡ ನಿರ್ಮಾಣ, ನಿರ್ದೇಶನ ಮಾಡಿ ನಟಿಸಿರುವ, ರೋರಿಂಗ್ ಸ್ಟಾರ್ ಶ್ರೀಮುರುಳಿ ಅರ್ಪಿಸುವ `ಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರ ಅಕ್ಟೋಬರ್ ೨೪ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಈಗಾಗಲೇ ಹಾಡುಗಳ ಮೂಲಕ ಗಮನ ಸೆಳೆದಿರುವ ಈ ಸಿನಿಮಾದ ಟ್ರೈಲರ್ ಅನ್ನು ರೋರಿಂಗ್ ಸ್ಟಾರ್ ಶ್ರೀಮುರುಳಿ ಬಿಡುಗಡೆಗೊಳಿಸಿದ್ದಾರೆ. ಒಂದಿಡೀ ಸಿನಿಮಾದ ಅಂತಃಸತ್ವವನ್ನು ಆಳವಾಗಿ ಗ್ರಹಿಸಿಕೊಂಡು ಚಿತ್ರತಂಡದ ಶ್ರಮವನ್ನು ಮೆಚ್ಚಿಕೊಂಡಿದ್ದಾರೆ. ಭಾರತೀಯ ಸಿನಿಮಾ ರಂಗದಲ್ಲೇ ಮೊದಲೆಂಬಂಥಾ ಕಥಾ ಹಂದರ ಹೊಂದಿರುವ ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರಕ್ಕೆ ಶುಭ ಕೋರಿದ್ದಾರೆ. ಅತ್ಯಂತ ....
*ಜೈ ಗದಾ ಕೇಸರಿ ಟೀಸರ್ ಮತ್ತು ಹಾಡುಗಳು* *ಜೈ ಗದಾ ಕೇಸರಿ* ಚಿತ್ರದ ಟೀಸರ್ ಮತ್ತು ಹಾಡುಗಳ ಬಿಡುಗಡೆ ಸಮಾರಂಭ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು, ಕರ್ನಾಟಕ ನಿರ್ಮಾಪಕ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್,ಉಜ್ಜಲ್ ರಘು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿ.ಬಿ.ಮೂವೀ ಕ್ರಿಯೇಶನ್ಸ್ ಅಡಿಯಲ್ಲಿ ಕೊಪ್ಪಳ ಮೂಲದ ಉದ್ಯಮಿ *ಬಸವರಾಜ್ ಭಜಂತ್ರಿ ಕಲಾವಿದರನ್ನು ಉಳಿಸುವ ಸಲುವಾಗಿ ಹಾಗೂ ಕನ್ನಡ ನಾಡಿಗೆ ಹೆಮ್ಮೆ ತರಬೇಕೆಂಬ ಅಭಿಲಾಷೆಯಿಂದ ಬಂಡವಾಳ ಹೂಡಿದ್ದಾರೆ*. ಯತೀಶ್ಕುಮಾರ್.ವಿ ಮತ್ತು ಮಂಜು ಹೊಸಪೇಟೆ ಜಂಟಿಯಾಗಿ ಸಿನಿಮಾಕ್ಕೆ ....
*ಅನೂಪ್ ರೇವಣ್ಣ ಈಗ "ಕನಕರಾಜ".* *ಇದು ಸಿ.ಎಂ ಅಭಿಮಾನಿಯ ಕಥೆ* . ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ಅವರು ನಿರ್ಮಿಸುತ್ತಿರುವ, ಡಾ||ವಿ.ನಾಗೇಂದ್ರಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಸಂಗೀತ ಸಂಯೋಜನೆಯನ್ನೂ ಮಾಡುತ್ತಿರುವ, ವಿ.ಎಂ.ರಾಜು ಮತ್ತು ನೀಲ್ ಕೆಂಗಾಪುರ ಜಂಟಿಯಾಗಿ ನಿರ್ದೇಶಿಸುತ್ತಿರುವ ಹಾಗೂ ಎಚ್ ಎಂ ರೇವಣ್ಣ ಅವರ ಪುತ್ರ ಅನೂಪ್ ರೇವಣ್ಣ ನಾಯಕನಾಗಿ ನಟಿಸುತ್ತಿರುವ ‘ಕನಕರಾಜ’ ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿ ಲೇಔಟ್ ನ ಪ್ರಸನ್ನ ಶ್ರೀವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ....
*'ದಿಲ್ಮಾರ್’ ಟ್ರೇಲರ್ ರಿಲೀಸ್..ಹೊಸಬರಿಗೆ ಧ್ರುವ ಸರ್ಜಾ ಸಾಥ್* *ಕೆಜಿಎಫ್ ಡೈಲಾಗ್ ರೈಟರ್ ಚಂದ್ರಮೌಳಿ ಹೊಸ ಕನಸು ’ದಿಲ್ಮಾರ್’ ಗೆ ಧ್ರುವ ಸರ್ಜಾ ಬೆಂಬಲ* *ದಿಲ್ಮಾರ್ ಟ್ರೇಲರ್ ರಿಲೀಸ್ ಮಾಡಿದ ಧ್ರುವ ಸರ್ಜಾ..ಇದೇ ತಿಂಗಳ 24ಕ್ಕೆ ಸಿನಿಮಾ ತೆರೆಗೆ ಎಂಟ್ರಿ* ’ಕೆಜಿಎಫ್’ ಸಿನಿಮಾದಲ್ಲಿ ಡೈಲಾಗ್ಗಳಿಂದಲೇ ಜಾದು ಮಾಡಿದ್ದ ರೈಟರ್ ಚಂದ್ರಮೌಳಿ ದಿಲ್ಮಾರ್ ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಅವರ ಮೊದಲ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 24ಕ್ಕೆ ದಿಲ್ಮಾರ್ ತೆರೆಗೆ ಎಂಟ್ರಿ ಕೊಡುತ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಆಕ್ಷನ್ ....
*ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ "ಚತುಷ್ಪಥ"* . ರೂಪ ಬಾಯಿ ಹಾಗೂ ಕೃಷ್ಣೋಜಿ ರಾವ್ ಅವರು ನಿರ್ಮಿಸಿರುವ ಹಾಗೂ ಕೃಷ್ಣೋಜಿ ರಾವ್ ಅವರೆ ನಿರ್ದೇಶಿಸಿರುವ ಹಾಗೂ ಮಿಲನ ನಾಗರಾಜ್, ಜಗನ್, ಕಿರಣ್ ರಾಜ್ , ಶಿಲ್ಪ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ " ಚತುಷ್ಪಥ " ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ವಿಭಿನ್ನ ಕಂಟೆಂಟ್ ವುಳ್ಳ ಈ ಚಿತ್ರ ಟ್ರೇಲರ್ ನಲ್ಲೇ ನೋಡುಗರ ಗಮನ ಸೆಳೆದಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. "ಚತುಷ್ಪಥ" ಎಂದರೆ ನಾಲ್ಕು ದಾರಿಗಳು. ಹೆದ್ದಾರಿಗಳಲ್ಲಿ ನಾವು ಇದನ್ನು ನೋಡಬಹುದು. ಆದರೆ ನಮ್ಮ ಚಿತ್ರದಲ್ಲಿ ಬಡ ಜನರ ವರ್ಗ, ಮಧ್ಯಮ ವರ್ಗ, ಶ್ರೀಮಂತರ ವರ್ಗ ಹಾಗೂ ಕಾನೂನು ....
*"ಮಹಾಲಯ" ಚಿತ್ರಕ್ಕೆ ಶ್ರೀಮುರಳಿ ಚಾಲನೆ* ಪರ್ಪಲ್ ರಾಕ್ ಸ್ಟುಡಿಯೋಸ್ ಮೂಲಕ ಯತೀಶ್ ವೆಂಕಟೇಶ್ ಹಾಗೂ ಗಣೇಶ್ ಪಾಪಣ್ಣ ಸೇರಿ ನಿರ್ಮಿಸುತ್ತಿರುವ, ಡಾ||ಸೂರಿ(ಬಘೀರ) ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿರುವ "ಮಹಾಲಯ" ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೋಹನ್ ಮಾಯಣ್ಣ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ಮೊದಲ ದೃಶ್ಯಕ್ಕೆ ರೋರಿಂಗ್ ಸ್ಟಾರ್ ಶ್ರೀಮುರುಳಿ ಆರಂಭ ಫಲಕ ತೋರಿಸುವ ಮೂಲಕ ಚಾಲನೆ ನೀಡಿ, ಚಿತ್ರಕ್ಕೆ ಶುಭ ಕೋರಿದರು. ನಂತರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಗಣೇಶ್ ಪಾಪಣ್ಣ, ಇದು ನಮ್ಮ ಪರ್ಪಲ್ ರಾಕ್ ಸಂಸ್ಥೆಯ ಐದನೇ ಚಿತ್ರ. ....