ಸಸ್ಪೆನ್ಸ್ , ಥ್ರಿಲ್ಲರ್ ಸಿನಿಮಾ "ಸೂತ್ರಧಾರಿ". ಮೇ ತಿಂಗಳ 9 ರಂದು ಬಿಡುಗಡೆ ಸಸ್ಪೆನ್ಸ್, ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ " ಸೂತ್ರದಾರಿ" ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ. ನಿರ್ಮಾಪಕರಾದ ಚೇತನ್, ಮುನೇಗೌಡ, ರಾಜೇಶ್ ಚಿತ್ರದ ಬಿಡುಗಡೆ ದಿನಾಂಕ ಪ್ರಕಟಿಸಿದರು. ಮೇ 9 ರಂದು ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ನಟ ,ನಿರ್ಮಾಪಕ ನವರಸನ್ ನಿರ್ಮಾಣ ದಲ್ಲಿ ಮೂಡಿ ಬಂದಿರುವ ಚಿತ್ರದಲ್ಲಿ ಕಿರಣ್ ಕುಮಾರ್ ಆಕ್ಷನ್ಕಟ್ ಹೇಳಿದ್ದು ರಾಪರ್ ಚಂದನ್ಶೆಟ್ಟಿ ನಾಯಕನಾಗಿ ಕಾಣಿಸಿಕೊಂಡಿರುವ ಚಿತ್ರ ಇದು. ನಾಯಕಿಯಾಗಿ ಅಪೂರ್ವ ಕಾಣಿಸಿಕೊಂಡಿದ್ದಾರೆ. ಹಾಡಿನಲ್ಲಿ ಸಂಜನಾ ಆನಂದ್ ಕಾಣಿಸಿಕೊಂಡಿದ್ದು ....
ಕಲ್ಕಿ ಅವತಾರದಲ್ಲಿ ಅರಿಂದಮ್ ಲಿರಿಕಲ್ ಹಾಡುಗಳ ಅನಾವರಣ ತನ್ನ ವಯಸಿಗೆ ಮೀರಿದಂಥ ನಡವಳಿಕೆ, ಬುದ್ದಿಶಕ್ತಿ ಹೊಂದಿದ ಯುವಕನೋರ್ವನ ಜೀವನದಲ್ಲಿ ದುಷ್ಟಶಕ್ತಿಗಳ ವಿರುದ್ದ ನಡೆಯುವ ಹೋರಾಟ ಹಾಗೂ ಪ್ರೀತಿ, ಪ್ರೇಮದ ಸುತ್ತ ನಡೆಯುವ ಘಟನೆಗಳೇ ಅರಿಂದಮ್. ಕಲ್ಕಿ ಅಗಸ್ತ್ಯ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದ ಎರಡು ಲಿರಿಕಲ್ ಹಾಡುಗಳ ಬಿಡುಗಡೆ ಹಾಗೂ ಪತ್ರಿಕಾಗೋಷ್ಟಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಚಿತ್ರದಲ್ಲಿ ನಾಯಕನಾಗೂ ಕಾಣಿಸಿಕೊಂಡಿರುವ ಕಲ್ಕಿ ಅಗಸ್ತ್ಯ ಮಾತನಾಡುತ್ತ ನಾನು ಮೂಲತಃ ಧಾರವಾಡದವನು. ಉತ್ಸಾಹಿ ಯುವಕರೆಲ್ಲ ಸೇರಿ ಒಂದು ಸದಭಿರುಚಿಯ ಸಿನಿಮಾ ಮಾಡಿದ್ದೇವೆ. ಕಾಳಿ ಎಂಬ ಯುವಕನ ....
ಮೆಜೆಸ್ಟಿಕ್-2 'ನಾಯಕ ನಾನೇ’ ಲಿರಿಕಲ್ ಸಾಂಗ್ ಬಿಡುಗಡೆ ಅಮ್ಮಾ ಎಂಟರ್ ಪ್ರೈಸಸ್ ಮೂಲಕ ಕೋಟೆನಾಡು ಚಿತ್ರದುರ್ಗದ ಹೆಚ್.ಆನಂದಪ್ಪ ಅವರು ಬಿಗ್ ಬಜೆಟ್ ನಲ್ಲಿ ನಿರ್ಮಿಸಿರುವ ಮೆಜೆಸ್ಟಿಕ್-2 ಚಿತ್ರದ ’ನಾಯಕ ನಾನೇ’ ಎಂಬ ಮೊದಲ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ಚಿತ್ರಕ್ಕೆ ರಾಮು ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಯುವನಟ ಭರತ್ ಕುಮಾರ್, ಸಂಹಿತಾ ವಿನ್ಯಾ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಅವರು ಸಾಂಗ್ ರಿಲೀಸ್ ಮಾಡಿ, ಈ ಟೈಟಲ್ ಅದ್ಭುತವಾಗಿದೆ. ಇದರಿಂದ ಲಾಂಚ್ ಆದವರು ಎತ್ತರಕ್ಕೆ ಹೋಗಿದ್ದಾರೆ. ಅದೇರೀತಿ ಶಿಲ್ಪಾ ಶ್ರೀನಿವಾಸ್ ಅವರ ಮಗ ಭರತ್ ಕೂಡ ....
ಧ್ರುವ 369 ಟೀಸರ್ದಲ್ಲಿ ಡಾ.ರಾಜ್ಕುಮಾರ್ ಮತ್ತು ಡಾ.ಪುನೀತ್ ರಾಜ್ಕುಮಾರ್ ವಿನೂತನ ಶೀರ್ಷಿಕೆ ಹೊಂದಿರುವ ’ಧ್ರುವ 369’ ಚಿತ್ರದ ಟೀಸರ್ನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಅನಾವರಣಗೊಳಿಸಿದರು. ನಂತರ ಮಾತನಾಡುತ್ತಾ ನಿರ್ದೇಶಕರ ಶ್ರಮ ಇದರಲ್ಲಿ ಕಂಡು ಬಂದಿದೆ. ಇಂತಹವರ ಹಾಜರಾತಿ ಪ್ರಸಕ್ತ ಚಿತ್ರರಂಗಕ್ಕೆ ಅವಶ್ಯಕವಾಗಿದೆ. ಭವಿಷ್ಯದಲ್ಲಿ ಇವರಿಗೆ ಒಳ್ಳೆ ಅವಕಾಶಗಳು ಸಿಗುವ ಲಕ್ಷಣಗಳು ಕಾಣಿಸುತ್ತಿದೆ. ಒಳ್ಳೆಯದಾಗಲಿ ಎಂದರು. ಸುಂದರ ಸಮಯದಲ್ಲಿ ಎನ್.ಎಂ.ಸುರೇಶ್, ನಟ ರಮೇಶ್ಭಟ್, ಮುಂತಾದವರು ಉಪಸ್ತಿತರಿದ್ದರು. ಆಧುನಿಕ ತಂತ್ರಜ್ಘಾನದಲ್ಲಿ ಸೃಷ್ಟಿಸಿರುವ 1.40 ನಿಮಿಷದ ....
*"ವಾಮನ" ಚಿತ್ರದ ತಾಯಿ - ಮಗನ ಬಾಂಧವ್ಯದ ಹಾಡಿಗೆ ಅಭಿಮಾನಿಗಳು ಫಿದಾ* . *ಚೇತನ್ ಗೌಡ ನಿರ್ಮಾಣದ, ಶಂಕರ್ ರಾಮನ್ ಎಸ್, ನಿರ್ದೇಶನದ ಹಾಗೂ ಧನ್ವೀರ್ ನಾಯಕನಟರಾಗಿ, ನಟಿಸಿರುವ ಈ ಚಿತ್ರ ಏಪ್ರಿಲ್ 10 ರಂದು ತೆರೆಗೆ* . "ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್" ಬ್ಯಾನರ್ ಅಡಿಯಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ, ಶಂಕರ್ ರಾಮನ್ ಎಸ್, ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ "ವಾಮನ" ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ "ಕಂದ ಕನಸ ರೂಪ" ಎಂಬ ತಾಯಿ - ಮಗನ ಬಾಂಧವ್ಯದ ಕುರಿತಾದ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಧರ್ಮಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಈ ಹಾಡನ್ನು ಬಿಡುಗಡೆ ಮಾಡಿ ....
"ಅವನಿರಬೇಕಿತ್ತು." ಚಿತ್ರದ ಒಹೋ ..ಹೃದಯ ಹಾಡು ಬಿಡುಗಡೆ. ಕನ್ನಡದಲ್ಲಿ ಹೊಸಹೊಸ ಕಂಟೆಂಟುಗಳೊಂದಿಗೆ ಹೊಸ ತಂಡ ಚಿತ್ರರಂಗದಲ್ಲಿ ಮೋಡಿ ಮಾಡುತ್ತಿದೆ. ಅದರ ಸಾಲಿಗೆ "ಅವನಿರಬೇಕಾಗಿತ್ತು" ಚಿತ್ರ ತಂಡ ಹೊಸ ಸೇರ್ಪಡರಯಾಗಿದೆ. ಅಂದಕಾಲಿತ್ತಲೇ.. ಇಂದ ಕಾಲಿತ್ತಲೇ ಹಾಡಿನ ಬಳಿಕ ಚಿತ್ರದ "ಓಹೋ..ಹೃದಯ " ಹಾಡು ಬಿಡುಗಡೆಯಾಗಿದೆ. ಅರ್ಪಾಜ್ ಉಳ್ಳಾಳ್ ಹಾಗು ಅನುರಾಧ ಭಟ್ ಹಾಡಿರುವ ಹಾಡಿನಲ್ಲಿ ಭರತ್ ಹಾಗು ಸೌಮ್ಯ ಜಾನ್ ಕಾಣಿಸಿಕೊಂಡಿದ್ದಾರೆ. ಲೋಕಿ ತಪಸ್ಯ ಸಂಗೀತ ನೀಡಿದ್ದಾರೆ. ಅಶೋಕ್ ಸಾಮ್ರಾಟ್ ಆಕ್ಷನ್ ಕಟ್ ಹೇಳಿದ್ದಾರೆ. ಮುರುಳಿ ಬಿಟಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಹಾಡು ಬಿಡುಗಡೆ ಬಳಿಕ ಮಾತಿಗಿಳಿದ ನಿರ್ದೇಶಕ ಅಶೋಕ್ ....
*ಯೋಗರಾಜ್ ಭಟ್ ಜೊತೆ ಮೋಹಕ ತಾರೆ ರಮ್ಯಾ ಸಿನಿಮಾ* *ಮನದ ಕಡಲು ಚಿತ್ರದ ಹಾಡನ್ನ ಬಿಡುಗಡೆ ಮಾಡಿದ ರಮ್ಯಾ* ಮೋಹಕ ತಾರೆ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕರುನಾಡ ಪ್ರೇಕ್ಷಕ ವಲಯದಲ್ಲಿದೆ. ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಕಂಗೋಳಿಸೋದು ಫೈನಲ್ ಆಗಿತ್ತು ; ಆದ್ರೆ ಸ್ಪಷ್ಟ ಉತ್ತರ ಸಿಗ್ಲಿಲ್ಲ. ಈಗ ವಿಚಾರವೆನೆಂದ್ರೆ ’ಮನದ ಕಡಲು’ ಡೈರೆಕ್ಟರ್ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಮೋಹಕ ತಾರೆ ಮಿನುಗಿ ಮಿಂಚೋದು ಪಕ್ಕಾ ಆದ್ರೂ ಅಚ್ಚರಿಯಿಲ್ಲ. ಹಿಂದೆ ’ರಂಗ SSLC' ಸಿನಿಮಾದಲ್ಲಿ ಭಟ್ಟರ ನಿರ್ದೇಶನದಲ್ಲಿ ಕಿಚ್ಚ ಸುದೀಪ್ - ರಮ್ಯಾ ಅದ್ಭುತ ಅಭಿನಯ ಮಾಡಿದ್ರು. ಈಗ ಮತ್ತೊಮ್ಮೆ ರಮ್ಯಾ-ಯೋಗರಾಜ್ ಭಟ್ ಕಾಂಬಿನೇಷನ್ ....
*IIFA 2025 ಬಾಲಿವುಡ್ ನ ಅತೀ ದೊಡ್ಡ ಪ್ರಶಸ್ತಿ ಸಮಾರಂಭದ ಗ್ರೀನ್ ಕಾರ್ಪೆಟ್ ನಲ್ಲಿ ಮಿಂಚಿದ ಕನ್ನಡದ ನಟಿ ಹಾಗೂ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ* . *ಕನ್ನಡದ ನಟಿಗೆ ಬಾಲಿವುಡ್ ನಿಂದಲೂ ಬರುತ್ತಿದೆ ಆಫರ್* . "ವಿಷ್ಣು ಸರ್ಕಲ್", "ಮೆಜೆಸ್ಟಿಕ್ ೨" ಸೇರಿದಂತೆ ಅನೇಕ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಹಾಗೂ ಮಾಡಲಿಂಗ್ ಕ್ಷೇತ್ರದಲ್ಲೂ ತನ್ನದೇ ಆದ ಚಾಪು ಮೂಡಿಸಿರುವ ನಟಿ ಸಂಹಿತಾ ವಿನ್ಯಾ ಇತ್ತೀಚೆಗೆ ರಾಜಸ್ಥಾನದ ಜೈಪುರದಲ್ಲಿ ನಡೆದ ಬಾಲಿವುಡ್ ಅತೀ ದೊಡ್ಡ ಪ್ರಶಸ್ತಿ ಸಮಾರಂಭ "IIFA 2025" ನಲ್ಲಿ ಅತಿಥಿಯಾಗಿ ಭಾಗಿಯಾಗಿದ್ದಾರೆ. ಖ್ಯಾತ ವಸ್ತ್ರ ವಿನ್ಯಾಸಕ ಫಾರೆವರ್ ನವೀನ್ ಕುಮಾರ್ ಅವರು ಸಿದ್ದಪಡಿಸಿದ ವಿನೂತನ ಉಡುಗೆಯಲ್ಲಿ ಸಂಹಿತಾ ವಿನ್ಯಾ IIFA 2025 ....
*ನೂತನ ಪ್ರತಿಭೆಗಳ ಸಮಾಗಮದಲ್ಲಿ ಮೂಡಿಬರುತ್ತಿದೆ "ಉಜ್ಜಯಿನಿ ಮಹಾಕಾಲ"* *ಹರಿಪ್ರಸಾದ್ ಎಂ.ಬಿ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ವಿನಯ್ ನಾಯಕ* . ದ್ವಾದಶ ಜ್ಯೋತಿರ್ಲಿಂಗಗಳಲ್ಲಿ "ಉಜ್ಜಯಿನಿ ಮಹಾಕಾಲ" ಕೂಡ ಒಂದು. ಈಗ ಅದೇ ಶೀರ್ಷಿಕೆಯಲ್ಲಿ ಕನ್ನಡ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಹರಿಪ್ರಸಾದ್ ಎಂ ಮಂಡ್ಯ ನಿರ್ಮಾಣ - ನಿರ್ದೇಶನದಲ್ಲಿ ವಿನಯ್ ನಾಯಕನಾಗಿ ನಟಿಸುತ್ತಿರುವ "ಉಜ್ಜಯಿನಿ ಮಹಕಾಲ" ಪೌರಾಣಿಕ ಚಿತ್ರವಲ್ಲ. ಹೊಸತಂಡದ ಸಮಾಗಮದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಇತ್ತೀಚೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು ಬಿಡುಗಡೆ ಮಾಡಿದರು. ....
* ರಿಲೀಸ್ಗೆ ರೆಡಿಯಾಗಿದೆ ’ನಾರಾಯಣ ನಾರಾಯಣ’ ಸಿನಿಮಾ *ರಿಲೀಸ್ಗೂ ಮೊದಲೇ ನಾರಾಯಣ ನಾರಾಯಣ ಸಿನಿಮಾದ ತುಳು ರೈಟ್ಸ್ ಮಾರಾಟ* * ಮಜಾ ಟಾಕಿಸ್ ಪವನ್ ಕುಮಾರ್ ನಟನೆಯ ನಾರಾಯಣ ನಾರಾಯಣ ಚಿತ್ರದ ಟ್ರೈಲರ್ ರಿಲೀಸ್* * ನಾರಾಯಣ ನಾರಾಯಣ ಟ್ರೈಲರ್ ನೋಡಿ ಚಿತ್ರಾಭಿಮಾನಿಗಳು ಹೇಳಿದ್ದೇನು? * ರಿಲೀಸ್ಗೂ ಮೊದಲೇ ನಾರಾಯಣ ನಾರಾಯಣ ಸಿನಿಮಾದ ತುಳು ರೈಟ್ಸ್ ಮಾರಾಟ ನಾರಾಯಣ ನಾರಾಯಣ, ಸ್ಯಾಂಡಲ್ವುಡ್ ನಲ್ಲಿ ರಿಲೀಸ್ಗೆ ತಯಾರಿ ಮಾಡಿಕೊಳ್ಳುತ್ತಿರುವ ಹೊಸಬರ ಸಿನಿಮಾ. ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಹೊಸ ಪ್ರತಿಭೆಗಳಿಗೇನು ಕಮ್ಮಿ ಇಲ್ಲ. ಅನೇಕ ಕಲಾವಿದರು ತಂತ್ರಜ್ಞರು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇದೀಗ ನಾರಾಯಣ ....
ಟ್ರೇಲರ್ ನಲ್ಲೇ ಮೋಡಿಮಾಡಿದ ಕಾಗೆಯೇ ನಾಯಕನಾಗಿರುವ “ರಾವೆನ್” ಚಿತ್ರ ಕನ್ನಡದಲ್ಲಿ ವಿವಿಧ ಪ್ರಾಣಿ ಹಾಗೂ ಪಕ್ಷಿಗಳನ್ನು ಕೇಂದ್ರವಾಗಿಟ್ಟಿಕೊಂಡು ನಿರ್ಮಾಣವಾಗಿರುವ ಸಾಕಷ್ಟು ಚಿತ್ರಗಳು ಬಂದಿದೆ. ಆದರೆ ಆತ್ಮ ಸಿನಿಮಾಸ್ ಹಾಗೂ ವಿಶ್ವ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಬಿಕ್ ಮೊಗವೀರ್ ಮತ್ತು ವಿಶ್ವನಾಥ್ ಜಿಪಿ ಅವರು ನಿರ್ಮಿಸಿರುವ ಹಾಗೂ ವೇದ್ ನಿರ್ದೇಶನದ “ರಾವೆನ್” ಚಿತ್ರದಲ್ಲಿ ಕಾಗೆಯೇ ಪ್ರಮುಖ ಪಾತ್ರಧಾರಿ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ರಾವೆನ್” ....
*"ಠಾಣೆ" ಚಿತ್ರದಿಂದ ಬಂತು ಸುಂದರ ಹಾಡು* . *ನಟ ರಿಷಿ, ಪೊಲೀಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಹಾಗೂ ಡಿ.ಎಸ್ ಮ್ಯಾಕ್ಸ್ ದಯಾನಂದ್ ಅವರಿಂದ ಹಾಡಿನ ಅನಾವರಣ* . ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ,"ಠಾಣೆ" ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ "ಬಾಳಿನಲ್ಲಿ ಭರವಸೆಯ ಬೆಳಕು" ಎಂಬ ಅರ್ಥಗರ್ಭಿತ ಹಾಡು ಇತ್ತೀಚೆಗೆ ಅನಾವರಣವಾಯಿತು. ಮಾನಸ ಹೊಳ್ಳ ಸಂಗೀತ ಸಂಯೋಜಿಸಿ, ಜ್ಞಾನ, ಅನುಷ್ಕ, ಜನ್ಯ ಆದರ್ಶ್ ಹಾಗೂ ಮೌಲ್ಯ ಅಚಿಂತ್ಯ ಎಂಬ ಬಾಲ ಪ್ರತಿಭೆಗಳು ಹಾಡಿರುವ ....
ಮರುಸೃಷ್ಟಿಯಲ್ಲಿ ನಾಗರಹಾವು 70 ದಶಕದಲ್ಲಿ ಬಿಡುಗಡೆಗೊಂಡು ಸೂಪರ್ ಹಿಟ್ ಆಗಿದ್ದ ’ನಾಗರ ಹಾವು’ ಇದೇ ಶೀರ್ಷಿಕೆಯಲ್ಲಿ ಎರಡು ಬಾರಿ ಸಿನಿಮಾಗಳು ಬಂದಿದ್ದರೂ ಕಥೆ ಬೇರೆಯದೆ ಆಗಿತ್ತು. ಆದರೆ ಈಗ ಪಾತ್ರಧಾರಿಗಳ ಹೆಸರನ್ನು ಬಳಸಿಕೊಂಡಿರುವ ’ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರವೊಂದು ಸದ್ದಿಲ್ಲದೆ ಮುಗಿಸಿಕೊಂಡಿದೆ. ಪ್ರಚಾರದ ಮೊದಲ ಹಂತವಾಗಿ ಎಸ್ಆರ್ವಿ ಚಿತ್ರಮಂದಿರ ಕಿಕ್ಕಿರಿದ ಜನಸಂದಣಿಯಲ್ಲಿ ಎರಡು ನಿಮಿಷದ ಟ್ರೇಲರ್ ಅನಾವರಣಗೊಂಡಿತು. ಜೋಳಿಗೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಪಲ್ಲಕ್ಕಿ ಬರವಣಿಗೆ, ನಿರ್ದೇಶನ ಮತ್ತು ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರಾಧಾಕೃಷ ಪಲ್ಲಕ್ಕಿ ಬಂಡವಾಳ ಹೂಡಿದ್ದು, ಗೌತಮ್ ....
*"ಮರಳಿ ಮನಸಾಗಿದೆ" ಹಾಡುಗಳ ದಿಬ್ಬಣ ಶುರುವಾಗಿದೆ* . *ಮನುಕುಲದ ಮೌಲ್ಯಗಳನ್ನು ಸಾರುವ ಈ ಚಿತ್ರದ ಮೊದಲ ಹಾಡು ಶಾಸಕ ಅಶ್ವಥ್ ನಾರಾಯಣ ಅವರಿಂದ ಅನಾವರಣ* . ಬೆನಕ ಟಾಕೀಸ್ ಲಾಂಛನದಲ್ಲಿ ಮುದೇಗೌಡ್ರು ನವೀನ್ ಕುಮಾರ್ ಆರ್ ಓ ಹಾಗೂ ತೆಲಿಗಿ ಮಲ್ಲಿಕಾರ್ಜುನಪ್ಪ ನಿರ್ಮಿಸಿರುವ, ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ನಟಿಸಿರುವ "ಮರಳಿ ಮನಸಾಗಿದೆ" ಚಿತ್ರದ ಮೊದಲ ಹಾಡನ್ನು ಶಾಸಕ ಆಶ್ವಥ್ ನಾರಾಯಣ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಿನು ಮನಸು ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು A2 MUSIC ಮೂಲಕ ಬಿಡುಗಡೆಯಾಗಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮತನಾಡಿದರು. ....
ಹೃದಯಗೀತೆ ಸುಮಧುರ ದೃಶ್ಯ ಗೀತೆಗಳ ಗುಚ್ಚ ಪ್ರತಿಭೆ ಅನ್ನುವುದು ಯೊರೊಬ್ಬರ ಸ್ವತ್ತು ಅಲ್ಲ. ಯಾರಿಗೆ ಬೇಕಾದರೂ ಸರಸ್ವತಿ ಒಲಿಯಬಲ್ಲಳು. ಆ ಸಾಲಿಗೆ ಪ್ರೀತಿ ಅಶೋಕ ಸೇರ್ಪಡೆಯಾಗುತ್ತಾರೆ. ವೃತ್ತಿಯಲ್ಲಿ ಹಿರಿಯ ದಂತ ವೈದ್ಯೆ. ಪ್ರವೃತ್ತಿಯಲ್ಲಿ ಸಾಹಿತಿ ಮತ್ತು ಗಾಯಕಿ. ಮೊನ್ನೆಯಷ್ಟೇ ಇವರ ಬತ್ತಳಿಕೆಯಿಂದ ಮೂಡಿಬಂದಿರುವ ನಾಲ್ಕು ಹಾಡುಗಳ ’ಹೃದಯ ಗೀತೆ’ ವಿಡಿಯೋ ಆಲ್ಬಂ ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಆರ್.ಎಸ್.ಗಣೇಶ್ ನಾರಾಯಣನ್ ಸಂಗೀತ ಸಂಯೋಜಿಸಿ ಒಂದರೆಡು ಗೀತೆಯಲ್ಲಿ ಕಾಣಿಸಿಕೊಂಡು ಧ್ವನಿಯಾಗಿದ್ದಾರೆ. ಶತ ಚಿತ್ರಗಳ ನಿರ್ದೇಶಕ ಸಾಯಿಪ್ರಕಾಶ್, ಸಾಹಿತಿ,ನಿರ್ದೇಶಕ, ಸಂಗೀತ ಸಂಯೋಜಕ ....
ಪೈರೆಸಿ ಮೇಲೆ ಸರ್ಕಾರ ನಟ್ಟು ಬೋಲ್ಟು ಟೈಟ್ ಮಾಡುವುದು ಸೂಕ್ತ - ಲಹರಿವೇಲು ಕ್ಯಾಚಿ ಟೈಟಲ್ ಹೊಂದಿರುವ ’ಡೆಡ್ಲಿ ಲವರ್ಸ್’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ನಾಗೇಂದ್ರ ಕಥೆ,ಚಿತ್ರಕಥೆ,ಸಂಭಾಷಣೆ,ಸಂಕಲನ, ನಿರ್ದೇಶನ ಜತೆಗೆ ಅನಘ ಎಂಟರ್ ಪ್ರೈಸಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಗೃಹ ಮಂತ್ರಿ ಪಾತ್ರ ನಿರ್ವಹಿಸಿರುವ ಲಹರಿವೇಲು ಕಾಯಾಕ್ರಮಕ್ಕೆ ಚಾಲನೆ ನೀಡಿದರು. ಅಖಿಲ್ ಕುಮಾರ್ ನಾಯಕನಾಗಿ ಮೂರನೇ ಅವಕಾಶ. ನವಪ್ರತಿಭೆ ತನುಪ್ರಸಾದ್ ನಾಯಕಿ. ಎಸಿಪಿಯಾಗಿ ಪ್ರೇಮಾಗೌಡ, ತಂದೆಯಾಗಿ ಭಾಸ್ಕರ್, ದುರಳನಾಗಿ ವಿನೋಧ್, ಎ.ಆರ್.ಲೋಕೇಶ್ ಮುಂತಾದವರು ನಟಿಸಿದ್ದಾರೆ. ಸಂಗೀತ ಲಯಕೋಕಿಲ, ....
" ಕಿರಿಕ್ " ಟ್ರೈಲರ್ ಬಿಡುಗಡೆ ಮಾಡಿದ ಸಚಿವ ಚೆಲುವರಾಯಸ್ವಾಮಿ ನಾಗತಿಹಳ್ಳಿ ಗಂಗಾಧರಗೌಡ ಅವರ ನಿರ್ದೇಶನದ, ರವಿ ಶೆಟ್ಟಿ, ಪೂಜಾ ರಾಮಚಂದ್ರ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ’ಕಿರಿಕ್’ ಚಲನಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಗುರುವಾರ ಸಂಜೆ ಕಲಾವಿದರ ಸಂಘದಲ್ಲಿ ನೆರವೇರಿತು. ಸಚಿವ ಎನ್. ಚೆಲುವರಾಯಸ್ವಾಮಿ ಅವರು ಕಿರಿಕ್ ಚಿತ್ರದ ಟ್ರೈಲರ್ ರಿಲೀಸ್ ಮಾಡಿದರೆ, ಸಾಹಿತಿ ನಾಗೇಂದ್ರ ಪ್ರಸಾದ್, ನಟ ಚೇತನ್ ಹಾಗೂ ಚೆಲುವರಾಯಸ್ವಾಮಿ ಅವರ ಪುತ್ರ ಸಚಿನ್ ೩ ಲಿರಿಕಲ್ ಹಾಡುಗಳನ್ನು ಬಿಡುಗಡೆಗೊಳಿಸಿದರು. ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಕೆಲಸ ಮಾಡುವ ನಾಯಕ, ಸದಾ ಕಿರಿಕ್ ಮಾಡೋ ನಾಯಕಿ ಇಬ್ಬರ ಮಧ್ಯೆ ಕಿರಿಕ್, ....
ನಾನ್ ಪೋಲಿ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ ಸ್ನೇಹ, ಪ್ರೀತಿ ಹಾಗೂ ತಾಯಿ ಸೆಂಟಿಮಂಟ್ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರ ನಾನ್ ಪೋಲಿ. ಯಶವಂತ್, ಹರೀಶ್, ನಾಯಕಿ ದಿಶಾ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ನಾಯಕ ಯಶವಂತ್ ಎಂ. ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗುತ್ತಿರುವ ಈ ಚಿತ್ರದ ಲಿರಿಕಲ್ ಹಾಡಿನ ಬಿಡುಗಡೆ ಸಮಾರಂಭ ಬಸವೇಶ್ವರ ನಗರದ ಡಾ.ರಾಜ್ಕುಮಾರ್ ಕಲಾಭವನದಲ್ಲಿ ನೆರವೇರಿತು, ಚೇತನ್ ಅವರ ಸಾಹಿತ್ಯ ಹಾಗೂ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ’ಯಾರೇ ನೀ ಯಾರೇ’ ಎಂದು ....
"ಪ್ಯಾರ್" ಕ್ರೇಜಿ ಸ್ಟಾರ್ ಹೊಸ ಚಿತ್ರ ಭಾವುಕ ತಂದೆಯಾಗಿ ರವಿಚಂದ್ರನ್ ಎಸ್.ಎಂ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್. ಎಸ್. ನಾಗಶ್ರೀ ಅವರು ನಿರ್ಮಾಣ ಮಾಡುತ್ತಿರುವ ನೂತನ ಚಿತ್ರದ ಟೈಟಲ್ ಅನಾವರಣ ಸಮಾರಂಭ ನಡೆಯಿತು. ಈ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರೇ ’ಪ್ಯಾರ್’ ಎಂಬ ನೂತನ ಶೀರ್ಷಿಕೆ ಯನ್ನು ಲಾಂಚ್ ಮಾಡಿದರು. ಈ ಚಿತ್ರದಲ್ಲಿ ಭರತ್, ರಾಶಿಕಾ ಶೆಟ್ಟಿ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಎಸ್. ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಅ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಆ್ಯನ್ ಎಮೋಷನಕ್ ಜರ್ನಿ ಆಫ್ ಲವ್ ಎಂಬ ಅಡಿಬರಹ ಈ ಚಿತ್ರಕ್ಕಿದೆ. ನಟ ....
ಅಮರಾವತಿ ಪೋಲಿಸ್ ಸ್ಟೇಷನ್ ಚಿತ್ರದ ಟೀಸರ್ ಬಿಡುಗಡೆ ಕಡಲ ತೀರದ ಕಾಲ್ಪನಿಕ ಅಮರಾವತಿ ಎಂಬ ಊರಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ, ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ ಚಿತ್ರ "ಅಮರಾವತಿ ಪೊಲೀಸ್ ಸ್ಟೇಷನ್". ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ಎರಡು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಚಲನಚಿತ್ರ ಕಲಾವಿದರ ಸಂಘದ ಆವರಣದಲ್ಲಿ ನಡೆಯಿತು. ಸುಮಾರು 800ಕ್ಕೂ ಹೆಚ್ಚು ಚಿತ್ರಗಳಿಗೆ ಪ್ರಚಾರ ಕಾರ್ಯ ನಿರ್ವಹಿಸಿರುವ ಕನ್ನಡ ಚಿತ್ರರಂಗದ ಹಿರಿಯ ಪ್ರಚಾರ ....