Love 2 Lassi.Film News

Saturday, June 27, 2026

  ಲವ್ 2 ಲಸ್ಸಿ ಮೋಷನ್ ಪೋಸ್ಟರ್ ಅಂಡ್ ಸಾಂಗ್ ರಿಲೀಸ್   RKB ಫಿಲ್ಮ್ಸ್ ನ ಭಾರತಿ ಶ್ರೀನಿವಾಸ್ ರಾಜ್ ನಿರ್ಮಾಣ ಮಾಡಿರುವ, ಹರಿಪ್ರಾಣ ನಿರ್ದೇಶನ ಮಾಡಿರುವ ಲವ್ 2 ಲಸ್ಸಿ ಸಿನಿಮಾದ ಹಾಡು ಹಾಗೂ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ‌.   ನಿರ್ದೇಶಕ ಹರಿಪ್ರಾಣ ಅವರಿಗೆ ಸುಮಾರು 18 ಸಿನಿಮಾಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. ಪುತ್ತೂರು, ಸುಳ್ಯ ಕಡೆಗೆ ಶೂಟ್ ಮಾಡಲಾಗಿದೆ. ಜೀವಿತ ಮತ್ತು ಆರ್ಯನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜಗನ್, ತಾರಾ, ವೈಷ್ಣವಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.       ಒರಟ ಶ್ರೀ ಅವರು ಸಾಂಗ್ ರಿಲೀಸ್ ಮಾಡಿ ಮಾತನ್ನಾಡಿ, ಒಂದು ಹೊಸ ತಂಡ. ನಾವೂ ಕೂಡ ಅದನ್ನೆಲ್ಲಾ ಎದುರಿಸಿನೇ ಬಂದಿದ್ದೀವಿ. ನಿರ್ದೇಶಕನಿಗೆ ಮೊದಲ ....

Read More...

Rayara Darshana.News

Friday, June 26, 2026

  *ಮಂತ್ರಾಲಯದಲ್ಲಿ ಅದ್ದೂರಿಯಾಗಿ ಅನಾವರಣವಾಯಿತು ’ರಾಯರ ದರ್ಶನ’ ಅಲ್ಬಮ್ ಸಾಂಗ್*    *ಈ ವರ್ಷದ ಟಿ.ಎನ್.ಐ.ಟಿ ಮೊದಲ ಮೀಡಿಯಾ ಅವಾರ್ಡ್ ಶ್ರೀಸುಬುಧೇಂದ್ರ ತೀರ್ಥರಿಗೆ ಪ್ರದಾನ* .   ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಸಹಯೋಗದಲ್ಲಿ ದಿ ನ್ಯೂ ಇಂಡಿಯನ್ ಟೈಮ್ಸ್ ಅಕಾಡೆಮಿ ಅರ್ಪಿಸುವ ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ ಸಮಾರಂಭ ಇತ್ತೀಚೆಗೆ ಮಂತ್ರಾಲಯದಲ್ಲಿ ನಡೆದ ಅದ್ದೂರಿ ನೆರವೇರಿತು. ಈ ಹಾಡನ್ನು ಮಂತ್ರಾಲಯದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಬಿಡುಗಡೆ ಮಾಡಿ ಅನುಗ್ರಹ ಸಂದೇಶ ನೀಡಿದರು.    ಜಾತ್ಯತೀತವಾಗಿ ಎಲ್ಲಾ ರಾಯರ ಭಕ್ತರ ಸಹಕಾರದಿಂದ "ರಾಯರ ದರ್ಶನ" ಆಲ್ಬಂ ಸಾಂಗ್ ಬಹಳ ಚೆನ್ನಾಗಿ ಮೂಡಿಬಂದಿದೆ. ರಘು ಭಟ್ ನಿರ್ದೇಶನದಲ್ಲಿ ....

Read More...

Nagabandham.News

Wednesday, June 24, 2026

  *ಟ್ರೇಲರ್ ಹಾಗೂ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿರುವ ಬಹು ನಿರೀಕ್ಷಿತ "ನಾಗಬಂಧಂ" ಚಿತ್ರ ಜುಲೈ 03ರಂದು ಬಿಡುಗಡೆ*    *ಅಭಿಷೇಕ್‍ ನಾಮ ನಿರ್ದೇಶನದ ಈ ಚಿತ್ರಕ್ಕೆ ವಿರಾಟ್ ಕರ್ಣ ನಾಯಕ - ಕನ್ನಡದ ಹುಡುಗಿ ನಭಾ ನಟೇಶ್ ನಾಯಕಿ* .   ಅಭಿಷೇಕ್ ನಾಮ ನಿರ್ದೇಶನದ ಅತ್ಯಂತ ಮಹತ್ವಾಕಾಂಕ್ಷೆಯ ಪ್ಯಾನ್ ಇಂಡಿಯಾ ಚಿತ್ರವಾದ ‘ನಾಗಬಂಧಂ’, ಜುಲೈ 03ರಂದು ಜಗತ್ತಿನಾದ್ಯಂತ ಬಿಡುಗಡೆಗೆ ಸಜ್ಜಾಗಿದೆ. ಅದಕ್ಕೂ ಮೊದಲು ಚಿತ್ರದ ಪ್ರಚಾರದ ಕೆಲಸಗಳು ಶುರುವಾಗಿದ್ದು, ಚಿತ್ರತಂಡ ಬೆಂಗಳೂರಿನಲ್ಲಿ ಇತ್ತೀಚೆಗೆ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಾಯಕ ವಿರಾಟ್ ಕರ್ಣ, ನಾಯಕಿ ನಭಾ‌ ನಟೇಶ್‌, ಕಲಾವಿದರಾದ ಗರುಡ ರಾಮ್, ಭಜರಂಗಿ ಪ್ರಸನ್ನ, ವಿನಯ್ ಬಿದ್ದಪ್ಪ ಮುಂತಾದವರು ....

Read More...

Jeevana Yana.News

Wednesday, June 24, 2026

  *ಬಿ.ಕೆ.ಶ್ರೀನಿವಾಸ್ (ಬೆಂ.ಕೋ.ಶ್ರೀ) "ಜೀವನಯಾನ" ಪುಸ್ತಕ ಬಿಡುಗಡೆ*   ಬುಧವಾರ  ಗಾಂಧಿ ಭವನದಲ್ಲಿ  ನಿರ್ಮಾಪಕ ಬಿ.ಕೆ.ಶ್ರೀನಿವಾಸ್(ಬೆಂ.ಕೊ.ಶ್ರೀ) ಅವರ ಸಿನಿಮಾ, ವ್ಯಾಪಾರ, ಹೋರಾಟ, ಅಜೇಯ ಮನೋಬಲದ ಯಶೋಗಾಥೆಯನ್ನೊಳಗೊಂಡ ’ಬಿ.ಕೆ.ಶ್ರೀನಿವಾಸ ಒಂದು ಅಸಾಮಾನ್ಯ ಜೀವನಯಾನ’ ಪುಸ್ತಕದ ಬಿಡುಗಡೆ ಸಮಾರಂಭ ನಡೆಯಿತು. ನೊಣವಿನಕೆರೆ ಕಾಡು ಸಿದ್ದೇಶ್ವರ ಮಠದ ಶ್ರೀಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮಿಗಳು ಪುಸ್ತಕನ್ನು ಲೋಕಾರ್ಪಣೆ ಮಾಡಿದರು. ವೇದಿಕೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರುಗಳಾದ  ಕೆ.ವಿ.ಚಂದ್ರಶೇಖರ್,  ಸಾ.ರಾ.ಗೋವಿಂದು, ಪತ್ರಕರ್ತ ಜೋಗಿ, ಬಿಗ್ ಬಾಸ್ ಖ್ಯಾತಿಯ  ಜಾಹ್ನವಿ ಹಾಗೂ ಇತರ ಗಣ್ಯರುಗಳು ....

Read More...

Love Seasons.Film News

Wednesday, June 24, 2026

  ಲವ್ ಸೀಸನ್ಸ್: ಮುಕುಂದ ರಾಮಸ್ವಾಮಿ ಬರ್ತ್‌ಡೇಗೆ ಟ್ರೈಲರ್ ಉಡುಗೊರೆ! ಎನ್.ಆರ್ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ, ಕೃತ್ವಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಲವ್ ಸೀಸನ್ಸ್ ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಈ ಚಿತ್ರದ ಮೂಲಕ ನಾಯಕನಾಗಿ ಆಗಮಿಸುತ್ತಿರುವ ಮುಕುಂದ ರಾಮಸ್ವಾಮಿ ಹುಟ್ಟುಹಬ್ಬಕ್ಕೆ ಉಡುಗೊರೆ ಎಂಬಂತೆ ಈ ಟ್ರೈಲರ್ ಪ್ರೇಕ್ಷಕರ ಮುಂದೆ ಬಂದಿದೆ. ಈ ಕುರಿತಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಂಡ್ಯ ರಮೇಶ್, ಜಯತೀರ್ಥ, ಎನ್.ಆರ್ ಮಂಜುನಾಥ (ನೀಲೇರಿ) ಮುಕುಂದ ರಾಮಸ್ವಾಮಿ, ಸಂಗೀತಾ ಅನಿಲ್, ದಿಯಾ ಕೀರ್ತಿ, ಶ್ವೇತಾ ಕೊಗ್ಲೂರು, ಚಂದನಾ ಗೌಡ, ಚೇತನ್ ದುರ್ಗ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಡ್ಯ ರಮೇಶ್ ಹಾಗೂ ....

Read More...

Chargesheet.Film News

Monday, June 22, 2026

  ಸುಂದರ್ ರಾಜ್ ’ಚಾರ್ಜ್ ಶೀಟ್’ ಟೀಸರ್ ಲಾಂಚ್     ಕನ್ನಡ ಖ್ಯಾತ ಪೋಷಕ‌ ನಟ ಸುಂದರ್ ರಾಜ್ ನಟನೆಯ 250ನೇ ಚಿತ್ರ ಚಾರ್ಜ್ ಶೀಟ್. ಇದರ ಟೀಸರ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಜಯಮಾಲ ಲಾಂಚ್ ಮಾಡಿ ಶುಭಕೋರಿದ್ದಾರೆ.     ಚಾರ್ಜ್ ಶೀಟ್ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮಕ್ಕೆ ‌ವಿಶೇಷ ಅತಿಥಿಯಾಗಿ ಆಗಮಿಸಿದ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವರ್ಸಜಾ, "ಈ ಚಿತ್ರದ ಸಾಂಗ್‌ ನೋಡಿದ ತಕ್ಷಣ ಸಿನಿಮಾ ನೋಡಬೇಕು ಅನಿಸುತ್ತದೆ. ಅಂಕಲ್‌ (ಸುಂದರ್‌ರಾಜ್) ಅವರ ಬಾಂಡಿಲಾಂಗ್ವೆಜ್‌ ನನಗೆ ಗೊತ್ತು. ಅವರು ಏನನ್ನೂ ಗ್ರಾಂಟೆಡ್‌ ಆಗಿ ತಗೊಳ್ಳಲ್ಲ. ಈ ಇಂಡಸ್ಟ್ರಿಯಲ್ಲಿ ಉಳಿಯಬೇಕೆಂದರೆ ಒಂದೇ ದಾರಿ ಅದು ಟ್ಯಾಲೆಂಟ್‌. ಅದು ಇರುವುದಕ್ಕೆನೇ ....

Read More...

KA-18.Film News

Saturday, June 20, 2026

  *KA-18 ಇದು ಹಾರರ್,ಸೆಸ್ಪೆನ್ಸ್,ಥ್ರಿಲ್ಲರ್ ಸರಕು*         ವಿನೂತನ ಶೀರ್ಷಿಕೆ *’KA-18’* ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಛಾಲೆಂಜಿಂಗ್ ಸ್ಟಾರ್ ದರ್ಶನ್ ಅಳಿಯ ನಟ ಮನೋಜ್ ಕ್ಯಾಮಾರ ಆನ್ ಮಾಡಿದರು. ಅಪ್ಪಾಜಿ ಪ್ರೊಡಕ್ಷನ್ಸ್ ಅಡಿಯಲ್ಲಿ ಹಿರೇಮಗಳೂರು ಮೂಲದ *ಎ.ಟಿ.ಎಂ.ಮಂಜು ನಿರ್ಮಾಣ ಮಾಡುವುದರ ಜತೆಗೆ ನಾಯಕನಾಗಿ* ಬಣ್ಣ ಹಚ್ಚುತ್ತಿರುವುದು ಹೊಸ ಅನುಭವ. *ಮೋಹನ್ ಚಿಕ್ಕಿ ಮೂರನೇ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್* ಹೇಳುತ್ತಿದ್ದಾರೆ. ಉತ್ತರಕಾಂಡದ *ಸೋನಿಯಾ ರಾವುತ್ ಸಹ ....

Read More...

Hulibeera.Film News

Thursday, June 18, 2026

  " *ಹುಲಿ ಬೀರ"ನ* *ಜಿಗ್ರಿದೋಸ್ತ್ ಹಾಡು*    *ಯುವಕರನ್ನು ಹಳ್ಳಿಗಳಿಗೆ* *ಮರಳಿಸಿದ* *ಧೀರ*    ಬಹುತೇಕ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಚಿತ್ರ ಹುಲಿಬೀರ. ಮದರಂಗಿ ಮಲ್ಲಿಕಾರ್ಜುನ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದ ’ಜಿಗ್ರಿ ದೋಸ್ತ್’ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.  ಯರ್ರಾಬಿರ್ರಿ ಖ್ಯಾತಿಯ ನಟ ಅಂಜನ್ ಚಿತ್ರದ ನಾಯಕನಾಗಿ ನಟಿಸಿದ್ದು, ಚೈತ್ರ ತೋಟದ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಜಿಗ್ರಿ ದೋಸ್ತ ಹಾಡಿಗೆ  ಮಾಳು, ಶಿವಾನಿ ದನಿಯಾಗಿದ್ದಾರೆ.   ಉತ್ತರ ಕರ್ನಾಟಕದ ನೇಟಿವಿಟಿ, ನಾಯಕ, ನಾಯಕಿ, ನಿರ್ಮಾಪಕ, ನಿರ್ದೇಶಕ, ಹೀಗೆ ಅಲ್ಲಿನವರೇ ಸೇರಿ ಮಾಡಿರುವ ಅದೇ ಸೊಗಡಿನ ಚಿತ್ರಕ್ಕೆ ....

Read More...

Balaramana Dinagalu.News

Wednesday, June 17, 2026

  ಬಲರಾಮನ ದಿನಗಳು ಹಾಡು ಬಿಡುಗಡೆಯ ಕ್ಷಣಗಳು   ಬಲರಾಮನ ದಿನಗಳು ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ಖ್ಯಾತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣ್ ಸಂಗೀತದಲ್ಲಿ ಆಲ್ ಓಕೆ ಹಾಡಿರುವ ಗೀತೆಯನ್ನು ಬಿಡುಗಡೆ  ಮಾಡಲಾಗಿದೆ.     ಸಿನಿಮಾದ ನಾಯಕ ನಟ ವಿನೋದ್‌ ಪ್ರಭಾಕರ್‌ ಅವರು, ಇಲ್ಲಿ ನಿಂತಿದ್ದೀನಿ ಅಂದರೆ ನಮ್ಮ ತಂದೆ ಟೈಗರ್‌ ಪ್ರಭಾಕರ್‌ ಅವರು ಕಾರಣ. ಬಲರಾಮ ಏನಿದೆಯೋ ಟೈಗರ್‌ ಪ್ರಭಾಕರ್‌ ಅವರು ಬಿಟ್ಟೋದ ಅಧ್ಯಾಯ ನಾನು. ಚಿತ್ರರಂಗದಲ್ಲಿ ಅವರ ಕನಸು ಬಹಳ ಇತ್ತು. ನಾನು ಚಿತ್ರರಂಗಕ್ಕೆ ಬಂದಾಗ ಬಹಳ ಎಡವಿದೆ. ನಾನು ಇದಕ್ಕೆ ದಾರಿತಪ್ಪಿದ ಮಗ ಅಂತ ಇಂಟರ್‌ವ್ಯೂನಲ್ಲಿ ಇದಕ್ಕೆ ಹೇಳಿದೆ. ಮತ್ತೆ ನಾನು ಯೂಟರ್ನ್‌ ಮಾಡಿಕೊಂಡು ಬಂದೆ. ಈಗ ಕಂಟೆಂಟೇ ಹೀರೋ, ....

Read More...

Pattedari.Film News

Wednesday, June 17, 2026

  *ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳಿಂದ ಅನಾವರಣವಾಯಿತು  "ಪತ್ತೇದಾರಿ" ಚಿತ್ರದ ಪೋಸ್ಟರ್* .    *ಶ್ರೀನಿವಾಸ್ ಜಯರಾಮ್ ನಿರ್ದೇಶನದ ಈ ಚಿತ್ರದ ಮೂಲಕ ಕಿಝಾರ್ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ.* .                      ಎ.ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮೊಹಮ್ಮದ್ ಅತೀಕ್ ನಿರ್ಮಾಣ ಮಾಡುತ್ತಿರುವ, ಶ್ರೀನಿವಾಸ್ ಜಯರಾಮ್ ರಚನೆ & ನಿರ್ದೇಶನದ ಹಾಗೂ ಕಿಝಾರ್ ಎಂಬ ನೂತನ ಪ್ರತಿಭೆ ನಾಯಕನಾಗಿ ನಟಿಸುತ್ತಿರುವ "ಪತ್ತೇದಾರಿ" ಚಿತ್ರದ ಪೋಸ್ಟರ್ ಅನಾವರಣ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನೆರವೇರಿತು. ಕಲಾವಿದರಾದ ಮಯೂರ್ ಪಟೇಲ್, "ಶಿಷ್ಯ" ದೀಪಕ್, ಕಾಕ್ರೋಜ್ ಸುಧೀ, ಚೆಲುವರಾಜ್, ಅರವಿಂದ್, ....

Read More...

Mode Kavida Vaatavarana.News

Tuesday, June 16, 2026

  *ಮೋಡ ಕವಿದ ವಾತಾವರಣ ಸಿನಿಮಾದ ಹೀರೋ ಟೀಸರ್ ರಿಲೀಸ್... ವಿಭಿನ್ನ ಪ್ರೇಮ ಕಥೆಯೊಂದಿಗೆ ಬಂದ ಸಿಂಪಲ್*     *ಮತ್ತೊಂದು ಫ್ರೆಶ್ ಪ್ರೇಮ ಕಥೆ ಹೊತ್ತು ಬಂದ ಸುನಿ...ಶಿಷ್ಯನಿಗಾಗಿ ಮೋಡ ಕವಿದ ವಾತಾವರಣ ಸೃಷ್ಟಿಸಿದ ಸಿಂಪಲ್ ಡೈರೆಕ್ಟರ್*     ಒಂದು ಸರಳ ಪ್ರೇಮಕಥೆ ಸಿನಿಮಾ ಬಳಿಕ ನಿರ್ದೇಶಕ ಸಿಂಪಲ್ ಸುನಿಭತ್ತಳಿಕೆಯಿಂದ ಬರ್ತಿರುವ ಮತ್ತೊಂದು ಸೊಗಸಾದ ಪ್ರೇಮ ಕಥೆ ಮೋಡ ಕವಿದ ವಾತಾವರಣ.  ಟೈಟಲ್ ನಿಂದ ಗಮನ ಸೆಳೆಯುತ್ತಿರುವ ಈ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 26ಕ್ಕೆ ಬಿಡುಗಡೆಯಾಗುತ್ತಿರುವ ಮೋಡ ಕವಿದ ವಾತಾವರಣ ಚಿತ್ರದ ಪ್ರಚಾರ ಕೆಲಸ ಜೋರಾಗಿದೆ. ಅದರ ಭಾಗವಾಗಿ ಚಿತ್ರದ ಹೀರೋ ಟೀಸರ್ ಬಿಡುಗಡೆ ಮಾಡಲಾಗಿದೆ.   ನಿನ್ನೆ ....

Read More...

Graamaayana.Film News

Monday, June 15, 2026

  *"ಗ್ರಾಮಾಯಣ"ದ "ಏನೇ ಹೇಳು ಕುಸುಮ" ಹಾಡಿಗೆ ಮೆಚ್ಚುಗೆಯ ಮಹಾಪೂರ* .    *ವಿನಯ್ ರಾಜ್ ಕುಮಾರ್ ಅಭಿನಯದ ಈ ಚಿತ್ರ ಜುಲೈ 3 ರಂದು ಬಿಡುಗಡೆ.* .                      ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ರಚನೆ - ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ - ಮೇಘ ಶೆಟ್ಟಿ ನಾಯಕ - ನಾಯಕಿಯಾಗಿ ಅಭಿನಯಿಸಿರುವ "ಗ್ರಾಮಾಯಣ" ಚಿತ್ರದ "ಏನೇ ಹೇಳು ಕುಸುಮ" ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಲಹರಿ ವೇಲು ಈ ಹಾಡನ್ನು ಅನಾವರಣ ಮಾಡಿದರು. ಪ್ರಮೋದ್ ಮರವಂತೆ ಬರೆದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿರುವ ಈ ಹಾಡನ್ನು ನಿಹಾಲ್ ತವ್ರೊ ಹಾಗೂ ಸಾಕ್ಷಿ ಕಲ್ಲೂರ್ ಹಾಡಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಮೆಚ್ಚುಗೆಯ ಮಾಹಾಪೂರವೇ ....

Read More...

Love Seasons.Film News

Monday, June 15, 2026

  ಲವ್ ಸೀಸನ್ಸ್: ಹಾಡುಗಳ ಗೆಲುವಿನ ಸಿಹಿ ಹಂಚಿಕೊಂಡ ಚಿತ್ರತಂಡ! ಇದೇ ಜುಲೈ 3ರಂದು ಕೃತ್ವಿಕ್ ನಿರ್ದೇಶನದ ಲವ್ ಸೀಸನ್ಸ್ ಚಿತ್ರ ರಾಜ್ಯಾದ್ಯಂತ ತೆರೆಕಾಣಲಿದೆ. ಬಿಡುಗಡೆಗಾಗಿ ತಯಾರಾಗುತ್ತಿರುವ ಚಿತ್ರತಂಡವೀಗ ಬಿಡುಗಡೆಗೊಂಡಿರುವ ಮೂರು ಹಾಡುಗಳಿಗೆ ಕೇಳುಗರ ಕಡೆಯಿಂದ ಸಿಗುತ್ತಿರೋ ಭರಪೂರ ಪ್ರತಿಕ್ರಿಯೆ ಕಂಡು ಖುಷಿಗೊಂಡಿದೆ. ಈ ಸಂಬಂಧವಾಗಿ ಪತ್ರಿಕಾಗೋಷ್ಠಿಯ ಮೂಲಕ ಹಾಡುಗಳ ಗೆಲುವಿನ ಸಿಹಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಸಂಗೀತ ನಿರ್ದೇಶಕರು, ಗಾಯಕ, ಗಾಯಕಿಯರು ಹಾಗೂ ಸಾಹಿತ್ಯ ಬರೆದವರ ಮೂಲಕವೇ ಈ ಗೆಲುವನ್ನು ಚಿತ್ರತಂಡ ಸಂಭ್ರಮಿಸಿದೆ.   ಈ ಪ್ರತಿಕಾಗೋಷ್ಠಿಯಲ್ಲಿ ನಿರ್ಮಾಪಕರಾದ ಎನ್.ಆರ್ ಮಂಜುನಾಥ್ (ನೀಲೇರಿ), ನಿರ್ದೇಶಕ ಕೃತ್ವಿಕ್, ಹಿರಿಯ ಗೀತಸಾಹಿತಿ ....

Read More...

Kanakaraj.Film News

Saturday, June 13, 2026

  *"ಕನಕರಾಜ" ಚಿತ್ರದ ಮೊದಲ ಹಾಡಿಗೆ ಕಲಾಭಿಮಾನಿಗಳು ಫಿದಾ.*                          *ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದೆ ಅನೂಪ್ ರೇವಣ್ಣ ಅಭಿನಯದ ಈ ಚಿತ್ರ* .   ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ಅವರು ನಿರ್ಮಿಸಿರುವ, ಡಾ||ವಿ.ನಾಗೇಂದ್ರಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಸಂಗೀತ ಸಂಯೋಜನೆಯನ್ನೂ ಮಾಡಿರುವ, ಆರ್ ರವೀಂದ್ರ  ನಿರ್ದೇಶಿಸಿರುವ ಹಾಗೂ ಎಚ್ ಎಂ ರೇವಣ್ಣ ಅವರ ಪುತ್ರ ಅನೂಪ್‍ ರೇವಣ್ಣ ನಾಯಕನಾಗಿ ನಟಿಸಿರುವ  ‘ಕನಕರಾಜ’ ಚಿತ್ರದ ಮೊದಲ ಹಾಡು ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ  ಅದ್ದೂರಿಯಾಗಿ ನೆರವೇರಿತು. ....

Read More...

Naaguge Vadhu Bekaagide.News

Wednesday, June 10, 2026

  *"ನಾಗುಗೆ ವಧು ಬೇಕಾಗಿದೆ". ಹಾಡುಗಳು ಹಾಗೂ ಟ್ರೇಲರ್ ಚೆನ್ನಾಗಿದೆ* .    ಪ್ರಸ್ತುತ ಹಳ್ಳಿಯಲ್ಲಾಗಲಿ ಅಥವಾ ನಗರಪ್ರದೇಶಗಳಲ್ಲಾಗಲಿ ಬಹುತೇಕ ಗಂಡು ಮಕ್ಕಳಿಗೆ ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಇದಕ್ಕೆ ಕಾರಣಗಳು ಹಲವಾರು. ಇಂತಹ ಪ್ರಸ್ತುತ ಪರಿಸ್ಥಿತಿಯನ್ನಿಟ್ಟುಕೊಂಡು ನಿರ್ದೇಶಕ ಆರ್ ಕೆ "ನಾಗೂಗೆ ವಧು ಬೇಕಾಗಿದೆ" ಎನ್ನುವ ಸಿನಿಮಾ‌ ಮಾಡಿದ್ದಾರೆ. ಆರ್ ಕೆ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರ ಶ್ರೀಗುರು ರಾಘವೇಂದ್ರ ಕನ್ನಡ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿದೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಅನಾವರಣ, ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಕರ್ನಾಟಕ ಮಹಿಳಾ ಆಯೋಗದ ....

Read More...

Golmaal Gang.Film News

Wednesday, June 10, 2026

  ಪಕ್ಕಾ ಎಂಟರ್ಟೈನ್ಮೆಂಟ್ ’ಗೋಲ್ಮಾಲ್ ಗ್ಯಾಂಗ್’ ಟೀಸರ್ ರಿಲೀಸ್     ಸಿನಿಮಾ ಅಂದ್ರೆನೆ ಮನರಂಜನೆ. ಆ ಮನರಂಜನೆಗಾಗಿಯೇ ಜನ ಕಾಯ್ತಾ ಇರುತ್ತಾರೆ. ನಕ್ಕು ಮನಸ್ಸನ್ನ ಕೂಲ್ ಆಗಿಸಿಕೊಳ್ಳುವಂತ ಸಿನಿಮಾವೊಂದು ಸಿದ್ಧವಾಗುತ್ತಿದೆ. ಅದರ ಹೆಸರೇ ಗೊಲ್ಮಾಲ್ ಗ್ಯಾಂಗ್. ಇದೀಗ ಒಂದೊಳ್ಳೆ ಟೀಸರ್ ರಿಲೀಸ್ ಆಗಿದ್ದು, ಸಿನಿಮಾದ ಮೇಲೆ ಭರವಸೆ ಮೂಡಿಸಿದೆ. ಶಾಂತ್ವು ಯೂನಿವರ್ಸಲ್ ಪಿಕ್ಚರ್ ಬ್ಯಾನರ್ ನಡಿ ಸತೀಶ್ ಚಂದ್ರ ಅವರು ನಿರ್ಮಾಣ ಮಾಡಿದ್ದಾರೆ.     ನಿರ್ದೇಶಕ ಶಿವಕುಮಾರ್ ಮಾತನ್ನಾಡುತ್ತಾ, ಈ ಸಿನಿಮಾಗೆ ನಿರ್ಮಾಪಕರು ಬಹಳಷ್ಟು ಹೆಲ್ಪ್ ಮಾಡಿದ್ದಾರೆ. ಪ್ರತಿಯೊಂದಕ್ಕೂ ಬೆನ್ನೆಲುಬಾಗಿ ನಿಂತವರು, ತಪ್ಪು ಮಾಡಿದಾಗ ತಿದ್ದಿದವರು. ಈ ಸಿನಿಮಾದಲ್ಲಿ ಏನಿಲ್ಲ ....

Read More...

Dodmansa.Film News

Wednesday, June 10, 2026

 

ದೊಡ್ಮನ್ಸ ಪವರ್ ಪ್ಯಾಕ್ಡ್ ಟ್ರೇಲರ್ ರಿಲೀಸ್

 

 

ವೇದಿಕ್ ಕಾಸ್ಮೋಸ್ ಬ್ಯಾನರ್ ಅಡಿಯಲ್ಲಿ , ಶರತ್ ಕೃಷ್ಣ ನಿರ್ದೇಶನದಲ್ಲಿ  ಶರತ್ ಕೃಷ್ಣ ಮತ್ತು  ರೇಷ್ಮಾ, ಶಿಲ್ಪಾ ಮುಖ್ಯ ಪಾತ್ರದಲ್ಲಿ ನಟಿಸಿರುವ  "ದೊಡ್ಮನ್ಸ" ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಪಕ್ಕಾ ಆಕ್ಷನ್ ಪ್ಯಾಕ್ಡ್ ಸಿನಿಮಾ ಅನ್ನೋದನ್ನ ಈ ಟ್ರೇಲರ್ ತೋರಿಸಿಕೊಟ್ಟಿದೆ. ಹೀರೋ ಮಾಸ್ ಅವತಾರ, ಫೈಟ್ ಸೀನ್ ಗಳು ಟ್ರೇಲರ್ ನಲ್ಲಿಯೇ ಮಾಸ್ ಪ್ರಿಯರ ಗಮನ ಸೆಳೆದಿದೆ. ಇನ್ನು ಒಂದು ಇನ್ನೊಸೆಂಟ್ ಲವ್ ಕೂಡ ಅನಾವರಣವಾಗಿದೆ. ಸಿನಿಮಾ ಬಗ್ಗೆ ಒಂದೊಳ್ಳೆ ಭರವಸೆಯನ್ನ ಈ ಟ್ರೇಲರ್ ಮೂಡಿಸಿದೆ.

Read More...

Boys Never Compromise.News

Wednesday, June 10, 2026

  " *ಭಾಯ್ಸ್ ನೆವರ್* *ಕಾಂಪ್ರಮೈಸ್* "  *ಟೀಸರ್ - ಬಾಯ್ಸ್* *ಆಂಥೆಮ್ ಬಿಡುಗಡೆ*       ಈ ಹಿಂದೆ ಜಸ್ಟ್ ಮದ್ವೇಲಿ, ರಾಜಣ್ಣನ ಮಗ ಚಿತ್ರಗಳನ್ನು ನಿರ್ಮಿಸಿದ್ದ ಹರೀಶ್ ಜಲಗೆರೆ ಅವರು  ಇದೀಗ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ’ಬಾಯ್ಸ್ ನೆವರ್ ಕಾಂಪ್ರಮೈಸ್’ಎಂಬ ಚಿತ್ರಕ್ಕೆ ಅವರೇ ಆಕ್ಷನ್ ಕಟ್ ಹೇಳಿದ್ದಾರೆ.    ಹರೀಶ್ ಜಲಗೆರೆ  ಅವರ ಹಿಂದಿನ ಎರಡೂ ಚಿತ್ರಗಳನ್ನು ನಿರ್ದೇಶಿಸಿದ್ದ ಕೋಲಾರ ಸೀನು ಅವರು  ಹರೀಶ್ ಅವರ ಹೊಸ ಸಾಹಸಕ್ಕೆ ಜತೆಯಾಗಿದ್ದಾರೆ.  ಹಾರರ್ ಕಾಮಿಡಿ ಕಥಾಹಂದರ ಒಳಗೊಂಡ ಈ ಚಿತ್ರದ ಟೀಸರ್ ಹಾಗೂ ಬಾಯ್ಸ್ ಆಂಥೆಮ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.     ವಿಶೇಷವಾಗಿ ಈ ಚಿತ್ರದಲ್ಲಿ ಸಾಮ್ರಾಟ್, ನಕ್ಷತ್ರ, ಸುಪ್ರಿತ್ ....

Read More...

Mother.Film News

Wednesday, June 10, 2026

  ಅಭಿನಯ ಸರಸ್ವತಿ ಶೃತಿ ಅವರ 175ನೇ ಸಿನಿಮಾ ಮುಹೂರ್ತ     ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ’ಮದರ್’     ಅಭಿನಯ ಸರಸ್ವತಿ ಶೃತಿ ಅವರ 175ನೇ ಸಿನಿಮಾಗೆ ಇಂದು ಮುಹೂರ್ತ ನೆರವೇರಿದೆ. ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮದರ್ ನೆರವೇರಿದೆ. ವಿನೋದ್ ಪ್ರಭಾಕರ್ ಅವರು ಮುಹೂರ್ತಕ್ಕೆ ಬಂದು ಶುಭ ಹಾರೈಸಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್ ಕ್ಲಾಪ್ ಮಾಡಿ ಹಾರೈಸಿದ್ದಾರೆ.   ಇದೇ ವೇಳೆ ನಿರ್ದೇಶಕ ರಾಕೇಶ್ ಮಾತನ್ನಾಡಿ, ಮದರ್ ತುಂಬಾ ಪವರ್ ಫುಲ್ ಕಥೆ. ಮಂಡ್ಯದ ಅನಕ್ಷರಸ್ಥ ಮಹಿಳೆ ಸಂಸಾರ ಕಾಪಾಡುವುದಕ್ಕೆ ಹೋರಾಟ ಮಾಡುವ ಕಥೆಯೇ ಮದರ್. ಶೃತಿ ಅವರು ಅಳಿಸುವುದಿಲ್ಲ. ಇಲ್ಲಿ ಶೃತಿ ಅವರನ್ನು ಬೇರೆಯದ್ದೇ ರೀತಿಯಲ್ಲಿ ಕಾಣಬಹುದು. ರಗಡ್ ಲುಕ್ ನಲ್ಲಿ ಕಾಣಿಸ್ತಾರೆ. 35 ....

Read More...

Urabba.Film News

Tuesday, June 09, 2026

  "ಊರಬ್ಬ"ದಲ್ಲಿ ಜಾತ್ರೆಯ ನೈಜದೃಶ್ಯ ಶಾಸಕ ರಂಗನಾಥ್ ರಿಂದ  ಟ್ರೈಲರ್ ಬಿಡುಗಡೆ        ಮಾಗಡಿ ತಾಲ್ಲೂಕಿನ ಸುಪ್ರಸಿದ್ದ ಉಜ್ಜಿನಿ ಚೌಡೇಶ್ವರಿ ಜಾತ್ರೆ, ಅದರ ಹಿನ್ನೆಲೆಯಲ್ಲಿ ನಡೆಯುವ ಕಥೆ ಇಟ್ಟುಕೊಂಡು ನಿರ್ದೇಶಕ ಲಕ್ಕಿ ಶಂಕರ್  "ಊರಬ್ಬ" ಎಂಬ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ. ಒನ್ಸ್ ಮೋರ್ ಕೌರವ ಖ್ಯಾತಿಯ ನರೇಶ್ ಗೌಡ, ತನಿಷಾ ಕುಪ್ಪಂಡ, ಪಾಯಲ್ ಚಂಗಪ್ಪ, ಸಿದ್ದು ಮೂಲಿಮನಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕುಣಿಗಲ್ ಶಾಸಕ ರಂಗನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಟ್ರೈಲರ್ ಲಾಚ್ ಮಾಡಿ ಶುಭ ಹಾರೈಸಿದರು.     ಜಾತ್ರೆಯ ನೈಜ ದೃಶ್ಯಗಳನ್ನು ಎಂ.ಡಿ.ಶ್ರೀಧರ್, ಹೆಚ್.ವಾಸು, ....

Read More...
Copyright@2018 Chitralahari | All Rights Reserved. Photo Journalist K.S. Mokshendra,