*ಎಜೆ ಶೆಟ್ಟಿ ನಿರ್ದೇಶನದಲ್ಲಿ ’ಭೂರಮೆ’ ವಿಡಿಯೋ ಸಾಂಗ್...ಹೊಸಬರಿಗೆ ಸಾಥ್ ಕೊಟ್ಟ ಸ್ಟಾರ್ ಡೈರೆಕ್ಟರ್ಸ್* *’ಭೂರಮೆ’ ವಿಡಿಯೋ ಸಾಂಗ್ ರಿಲೀಸ್...ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?* ಕಿಸ್, ಕಬ್ಜ ಹಾಗೂ ಬಘೀರ ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಭೂರಮೆ ಎಂಬ ಚೆಂದದ ಹಾಡಿನ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಎಜೆ ಶೆಟ್ಟಿ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಿಸಿರುವ ಚೊಚ್ಚಲ ಆಲ್ಬಂ ಸಾಂಗ್ ಭೂರಮೆ. ಯುವ ಪ್ರತಿಭೆಗಳಾದ ಅರ್ಥವ ವಿಶ್ವನಾಥ್ ಹಾಗೂ ಸುಷ್ಮಿತಾ ಶೆಟ್ಟಿ ನಟನೆಯ ಈ ಸಾಂಗ್ ಬಿಡುಗಡೆ ಕಾರ್ಯಕ್ರಮ AMBಯಲ್ಲಿ ನಿನ್ನೆ ಜರುಗಿತು. ಸ್ಯಾಂಡಲ್ ವುಡ್ ಸ್ಟಾರ್ ಡೈರೆಕ್ಟರ್ಸ್ ಗಳಾದ ಎಪಿ ಅರ್ಜುನ್, ಚೇತನ್ ಕುಮಾರ್ ಹಾಗೂ ....
*ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿದೆ "ರಾ.. ರಾ.. RX"* . *ಅದ್ದೂರಿಯಾಗಿ ಆರಂಭವಾಯಿತು ಯತಿರಾಜ್ ನಿರ್ದೇಶನದ ಹಾಗೂ ಕಾರ್ತೀಕೇಯ ಎಂಟರ್ ಪ್ರೈಸಸ್ ನಿರ್ಮಾಣದ ಈ ಚಿತ್ರ* . ಪತ್ರಕರ್ತ, ಕಲಾವಿದ ಹಾಗೂ ನಿರ್ದೇಶಕ ಯತಿರಾಜ್ ನಿರ್ದೇಶನದ ಮತ್ತು ಕಾರ್ತಿಕೇಯ ಎಂಟರ್ ಪ್ರೈಸಸ್ ಲಾಂಛನದಲ್ಲಿ ವೃದ್ಧಿ ಸುನೀಲ್, ಚೇತನ್ ಟಿ.ಆರ್ ಹಾಗೂ ಚಂದ್ರಶೇಖರ್ ಎಸ್ ಎಂ ನಿರ್ಮಿಸುತ್ತಿರುವ "ರಾ.. ರಾ..RX" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಹಿರಿಯ ಛಾಯಾಗ್ರಾಹಕ ಕೆ.ಎನ್ ನಾಗೇಶ್ ಕುಮಾರ್, ಪತ್ರಕರ್ತ ವಿ.ಸಿ.ಎನ್ ಮಂಜು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ....
*ಪ್ಯಾನ್ ಇಂಡಿಯಾ ’ಪ್ಯಾರಾಡಾಕ್ಸ್’ ಚಿತ್ರಕ್ಕೆ ಮುಹೂರ್ತ* *ಕ್ಯಾಪ್ಟನ್ ಕಿಶೋರ್ ನಿರ್ದೇಶನದ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಹನ್ಸಿಕಾ ಮೊಟ್ವಾನಿ, ಸೋನು ಸೋದ್ ಅಭಿನಯ* ನೃತ್ಯ ನಿರ್ದೇಶಕರಾಗಿ ಹೆಸರು ಮಾಡಿರುವ ಕ್ಯಾಪ್ಟನ್ ಕಿಶೋರ್ ಈಗ ಮೊದಲ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಹೌದು, ಅವರು ’ಪ್ಯಾರಾಡಾಕ್ಸ್’ ಎಂಬ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಚಿತ್ರವಾಗಿದ್ದು, ಪ್ರಮುಖ ಪಾತ್ರದಲ್ಲಿ ಬಹು ಭಾಷಾ ನಟಿ ಹನ್ಸಿಕಾ ಮೊಟ್ವಾನಿ ಅಭಿನಯ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಮುದ್ದಿನಪಾಳ್ಯದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ....
*ಜುಲೈ 17 ರಂದು ಚಿತ್ರಮಂದಿರಗಳಲ್ಲಿ "ಫಾದರ್ಸ್ ಡೇ"* .. *ಚಿತ್ರ ಬಿಡುಗಡೆಗೂ ಮುನ್ನ ಪ್ರಮೋಷನ್ ಸಾಂಗ್ ಬಿಡುಗಡೆ ಮಾಡಿದ ಚಿತ್ರತಂಡ* . ELEVEN ELEMENTS ಸಂಸ್ಥೆ ಲಾಂಛನದಲ್ಲಿ ರಾಜಾರಾಮ್ ರಾಜೇಂದ್ರನ್ ನಿರ್ಮಾಣದ ಜೊತೆಗೆ ನಿರ್ದೇಶನವನ್ನೂ ಮಾಡಿರುವ ಚಿತ್ರ "ಫಾದರ್ಸ್ ಡೇ". ತಂದೆ - ಮಗನ ಬಾಂಧವ್ಯ ಸಾರುವ ಈ ಚಿತ್ರ ಇದೇ ಜುಲೈ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದೊಂದು ಕನ್ನಡದ ಮೊದಲ ಬೈಕ್ ರೈಡರ್ ಚಿತ್ರವಾಗಿದೆ. ಚಿತ್ರ ಬಿಡುಗಡೆಗೂ ಪೂರ್ವದಲ್ಲಿ ALL OK ಸಾರಥ್ಯದಲ್ಲಿ ಮೂಡಿಬಂದಿರುವ ಪ್ರಮೋಷನ್ ಸಾಂಗ್ ಅನ್ನು ಚಿತ್ರತಂಡ ಅನಾವರಣ ಮಾಡಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ....
*ಆಕ್ಷನ್ ಪ್ಯಾಕ್ಡ್ ಪರಾಕ್ ಟೀಸರ್ ಬಿಡುಗಡೆ..ರಗಡ್ ಅವತಾರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ* *ಪರಾಕ್ ಮಾಸ್ ಟೀಸರ್ ರಿಲೀಸ್..ಆಕ್ಷನ್ ಅವತಾರ ತಾಳಿದ ಶ್ರೀಮುರಳಿ* *ಶ್ರೀಮುರಳಿ ಪರಾಕ್ ಮಾಸ್ ಟೀಸರ್ ಅನಾವರಣ* ರೋರಿಂಗ್ ಸ್ಟಾರ್ ಶ್ರೀಮುರಳಿ ಭತ್ತಳಿಕೆಯಿಂದ ಬರ್ತಿರುವ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಪರಾಕ್. ಸಿನಿಮೋತ್ಸವ ಇರುವ ಹೊಸ ತಂಡ ಸೇರಿಕೊಂಡು ಮಾಡುತ್ತಿರುವ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಆ ನಿರೀಕ್ಷೆಗೆ ತಕ್ಕಂತೆ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದೆ. ಇಂದು ಬೆಂಗಳೂರಿನ ಖಾಸಗಿ ಮಾಲ್ ನಲ್ಲಿ ಟೀಸರ್ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಿರ್ದೇಶಕ ಹಾಲೇಶ್ ....
ಹ್ಯಾಟ್ರಿಕ್ ಹೀರೋ ಜನ್ಮದಿನದ ಧಮಾಕಾ: ಶಿವಣ್ಣನ ಅಭಿಮಾನಿಗಳಿಗೆ ‘ಆರೋಗ್ಯ ಭಾಗ್ಯ’ದ ಜೊತೆ 4 ಹೊಸ ಚಿತ್ರಗಳ ಭರ್ಜರಿ ಅಪ್ಡೇಟ್! ‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಸಿನಿಪ್ರೇಕ್ಷಕರಿಗೆ ಅಭೂತಪೂರ್ವ ಕೊಡುಗೆಗಳ ಮಹಾಪೂರವೇ ಹರಿದುಬಂದಿದೆ. ಒಂದು ಕಡೆ ಜನಸಾಮಾನ್ಯರ ಆರೋಗ್ಯ ಭದ್ರತೆಗಾಗಿ ವಿಶೇಷ ಹೆಲ್ತ್ ಕಾರ್ಡ್ ಬಿಡುಗಡೆಯಾಗಿದ್ದರೆ, ಇನ್ನೊಂದೆಡೆ ಶಿವಣ್ಣ ನಟನೆಯ ಬಹುನಿರೀಕ್ಷಿತ ಸಿನಿಮಾಗಳ ಟೀಸರ್, ಪೋಸ್ಟರ್ ಹಾಗೂ ಪ್ರೋಮೋಗಳು ರಿಲೀಸ್ ಆಗಿ ಧೂಳೆಬ್ಬಿಸುತ್ತಿವೆ. 1. ವಿ.ಎಸ್.ಎಚ್. ಆಸ್ಪತ್ರೆಯಿಂದ ‘ಹ್ಯಾಟ್ರಿಕ್ ಹೀರೋ ಫ್ಯಾಮಿಲಿ ಹೆಲ್ತ್ ಕಾರ್ಡ್’ ಲೋಕಾರ್ಪಣೆ ಬೆಂಗಳೂರಿನ ....
*ಸಂಗೀತ ಪ್ರಪಂಚದಲ್ಲಿ ವಿಜಯ್ ಪ್ರಕಾಶ್ ಹೊಸ ಹೆಜ್ಜೆ* *ವಿಜಯ್ ಪ್ರಕಾಶ್ ಕಲ್ಚರಲ್ ಕ್ಲಬ್, ದ್ವಾರ್ ಸ್ಟುಡಿಯೋಸ್ ಮತ್ತು ದ್ವಾರ್ ಮ್ಯೂಸಿಕ್ ಪ್ರಾರಂಭ* ಸಿನಿಮಾ, ಶಾಸ್ತ್ರೀಯ ಸಂಗೀತ ಸೇರಿದಂತೆ ಹಲವು ಪ್ರಕಾರಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ಅಂತಾರಾಷ್ಟ್ರೀಯ ಖ್ಯಾತಿಯ ಗಾಯಕ ಹಾಗೂ ಹೆಮ್ಮೆಯ ಕನ್ನಡಿಗ ವಿಜಯ್ ಪ್ರಕಾಶ್ ಹೊಸ ಹೆಜ್ಜೆ ಇಟ್ಟಿದ್ದಾರೆ. ಇಷ್ಟು ವರ್ಷಗಳ ತಮ್ಮ ಅನುಭವ, ಶ್ರಮ ಮತ್ತು ಹಣವನ್ನು ಧಾರೆ ಎರೆದು ವಿಜಯ್ ಪ್ರಕಾಶ್ ಕಲ್ಚರಲ್ ಕ್ಲಬ್, ದ್ವಾರ್ ಸ್ಟುಡಿಯೋಸ್ ಮತ್ತು ದ್ವಾರ್ ಮ್ಯೂಸಿಕ್ ಎಂಬ ಹೊಸ ಸಂಸ್ಥೆಗಳನ್ನು ಪ್ರಾರಂಭಿಸಿದ್ದಾರೆ. ಕೆರೆಯ ನೀರನು ಕೆರೆಗೆ ಚೆಲ್ಲಿ ಎನ್ನುವಂತೆ, ಸಂಗೀತದಲ್ಲಿ ಪಡೆದಿದನ್ನು ....
*ಟೀಸರ್ ನಲ್ಲೇ ಮೋಡಿ ಮಾಡಿದ "ಪಿನಾಕ"* . *ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಅವರ ಹೊಸ ಲುಕ್ ಗೆ ಫಿದಾ ಆದ ಅಭಿಮಾನಿಗಳು* . ಭಾರತೀಯ ಚಿತ್ರರಂಗಕ್ಕೆ ಸದಭಿರುಚಿಯ ಚಿತ್ರಗಳನ್ನು ನೀಡುತ್ತಾ ಬಂದಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ಹೆಸರಾಂತ ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಟನ್ ಸ್ಟಾರ್ ಗಣೇಶ್ ಅಭಿನಯದ ‘ಪಿನಾಕ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಖಾಸಗಿ ಶಾಲೆಯೊಂದರಲ್ಲಿ ಸಾವಿರಾರು ಮಕ್ಕಳೊಂದಿಗೆ ಗಣೇಶ್ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದರೊಟ್ಟಿಗೆ " ಪಿನಾಕ" ಚಿತ್ರದ ....
*"ಕರ್ಣಾಟಬಲಂ ಅಜೇಯಂ" ಚಿತ್ರಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಡಿ.ಕೆ.ಶಿವಕುಮಾರ್ ಅವರಿಂದ ಹಾಗೂ "ಸೈನಿಕ 2" ಚಿತ್ರಕ್ಕೆ ಕೇಂದ್ರ ಸಚಿವ ಶ್ರೀವಿ.ಸೋಮಣ್ಣ ಅವರಿಂದ ಅದ್ದೂರಿ ಚಾಲನೆ* . *ಪಿ.ಎಂ.ಜಿ ಫಿಲಂ ಫ್ಯಾಕ್ಟರಿ ನಿರ್ಮಾಣದ ಈ ಚಿತ್ರಗಳ ಮೂಲಕ ಶಾಸಕ ಸಿ.ಪಿ.ಯೋಗೀಶ್ವರ್ ಪುತ್ರ ಧ್ಯಾನ್ ಯೋಗೀಶ್ವರ್ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ. ಈ ಎರಡು ಚಿತ್ರಗಳಲ್ಲೂ 25 ವರ್ಷಗಳ ನಂತರ ಸಿ.ಪಿ.ಯೋಗೀಶ್ವರ್ ನಟನೆ* . 40 ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ಹಾಗೂ 25 ವರ್ಷಗಳ ಹಿಂದೆ "ಸೈನಿಕ" ಎಂಬ ಜನಪ್ರಿಯ ಚಿತ್ರದ ಮೂಲಕ ....
*"ಅಪ್ಪು ಕಪ್ ಸೀಸನ್ 4" ಗೆ ಅದ್ದೂರಿ ಚಾಲನೆ** . ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ "ಅಪ್ಪು ಕಪ್"(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಮೂರು ಸೀಸನ್ ಅದ್ದೂರಿಯಾಗಿ ನಡೆದಿದೆ. ಇದೇ ಜುಲೈ 24, 25, 26 ರಂದು ಲೀಗ್ ಪಂದ್ಯಗಳು ನಡೆಯಲಿದೆ. " ಇತ್ತೀಚೆಗೆ "ಅಪ್ಪು ಕಪ್ ಸೀಸನ್ 4" ಉದ್ಘಾಟನೆ ಹಾಗೂ ಟೀಮ್ ಆಕ್ಷನ್ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿದ್ದ ಕೆ.ವಿ.ಪ್ರಭಾಕರ್, ವಿಧಾನ ಪರಿಷತ್ ಸದಸ್ಯರು ಹಾಗೂ ಸಾಯಿಗೋಲ್ಡ್ ಪ್ಯಾಲೆಸ್ ಮಾಲೀಕರಾದ ಟಿ.ಎ ಶರವಣ ಹಾಗೂ ಕನ್ನಡಪರ ಹೋರಾಟಗಾರರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದು ....
" *ಬಾಯ್ಸ್ ನೆವರ್* *ಕಾಂಪ್ರಮೈಸ್* " *ಚಿತ್ರದ ಟ್ರೈಲರ್ ಬಿಡುಗಡೆ* ಜಸ್ಟ್ ಮದ್ವೇಲಿ, ರಾಜಣ್ಣನ ಮಗ ಚಿತ್ರಗಳ ನಿರ್ಮಾಪಕ ಹರೀಶ್ ಜಲಗೆರೆ ಪ್ರಥಮಬಾರಿಗೆ ನಿರ್ದೇಶನ ಮಾಡಿರುವ ಚಿತ್ರ ’ಬಾಯ್ಸ್ ನೆವರ್ ಕಾಂಪ್ರಮೈಸ್’ *ಜುಲೈ* *10ರಂದು ರಾಜ್ಯಾದ್ಯಂತ* *ತೆರೆಗೆ ಬರಲಿರುವ ಈ* ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು. ಮಾರಿ ಗೋಲ್ಡ್ ಸ್ಡುಡಿಯೋಸ್ ಮೂಲಕ ಉಜ್ವಲ ನಾಗರಾಜ ಜಗದಾಳೆ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕೋಲಾರ ಸೀನು ಚಿತ್ರದ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚಿತ್ರತಂಡ ಒಂದಷ್ಡು ಮಾಹಿತಿಗಳನ್ನು ಹಂಚಿಕೊಂಡಿತು. ಹಾರರ್ ಕಾಮಿಡಿ ಕಥಾಹಂದರ ಒಳಗೊಂಡ ....
666 ಆಪರೇಷನ್ ಡ್ರೀಮ್ ಥಿಯೇಟರ್ ಟೀಸರ್ ಬಿಡುಗಡೆ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಮೂಡಿ ಬರುತ್ತಿರುವ ಬಹು ನಿರೀಕ್ಷಿತ ಸಿನಿಮಾ ’666 ಆಪರೇಷನ್ ಡ್ರೀಮ್ ಥಿಯೇಟರ್’. ಪೋಸ್ಟರ್ , ಡೈರೆಕ್ಟರ್ ಹಾಗೂ ತಾರಾಬಳಗದ ಮೂಲಕವೇ ಈ ಚಿತ್ರ ಕುತೂಹಲ ಹೆಚ್ಚಿಸಿದೆ. ಶಿವರಾಜ್ಕುಮಾರ್ ಹಾಗೂ ಧನಂಜಯ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಒರೈಯನ್ ಮಾಲ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಇಡೀ ಚಿತ್ರತಂಡ ಭಾಗಿಯಾಗಿತ್ತು. ಈ ವೇಳೆ ಶಿವರಾಜ್ ಕುಮಾರ್ ಮಾತನಾಡಿ, ಹೇಮಂತ್ ವರ್ಡರ್ ಫುಲ್ ಡೈರೆಕ್ಟರ್. ವೈಶಾಖ್ ನನ್ನ ಅಭಿಮಾನಿ. ಈಗ ಅವರು ನನ್ನ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧನಂಜಯ್ ಅವರ ಜೊತೆ ....
*ನಾಗತಿಹಳ್ಳಿ ಚಂದ್ರಶೇಖರ ನಿರ್ದೇಶನದಲ್ಲಿ ಮೂವತ್ತು ವರ್ಷಗಳ ನಂತರ ಮತ್ತೆ "ಅಮೇರಿಕಾ ಅಮೇರಿಕಾ"* .. *ಶೀರ್ಷಿಕೆ ಅದೇ. ಆದರೆ ಕಥೆ ಹೊಸತು* . 90 ರ ದಶಕದಲ್ಲಿ ಭರ್ಜರಿ ಯಶಸ್ಸು ಕಂಡ ಚಿತ್ರ "ಅಮೇರಿಕಾ ಅಮೇರಿಕಾ". ನಾಗತಿಹಳ್ಳಿ ಚಂದ್ರಶೇಖರ ಆ ಚಿತ್ರವನ್ನು ನಿರ್ದೇಶಿಸಿದ್ದರು. ಈಗ ಅದೇ ಶೀರ್ಷಿಕೆಯಲ್ಲಿ "ಅಮೇರಿಕಾ ಅಮೇರಿಕಾ ೨" ಎಂಬ ಹೊಸಚಿತ್ರ ನಿರ್ಮಾಣವಾಗಿದೆ. ನಾಗತಿಹಳ್ಳಿ ಚಂದ್ರಶೇಖರ ಅವರೆ ಈ ಹೊಸಚಿತ್ರವನ್ನೂ ನಿರ್ದೇಶಿಸಿದ್ದಾರೆ. ನಿರೂಪ್ ಭಂಡಾರಿ, ಸಾನ್ವಿ ಶ್ರೀವಾಸ್ತವ್ ಹಾಗೂ ಪೃಥ್ವಿ ಅಂಬರ್ ಈ ಚಿತ್ರದ ಮುಖ್ಯಪಾತ್ರಗಳಲ್ಲಿ ನಟಿಸಿದ್ದಾರೆ. ಈ ನೂತನ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನೆರವೇರಿತು. ನಂತರ ....
*— ‘ಕಲ್ಯಾಣಿ’ ಚಿತ್ರದ ಶೀರ್ಷಿಕೆ ಮತ್ತು ಮೋಶನ್ ಪೋಸ್ಟರ್ ಬಿಡುಗಡೆ ಪತ್ರಿಕಾಗೋಷ್ಟಿಯ ಸುದ್ದಿ—* (‘Kalyani’ Cinema Title and Motion poster release Press meet News) *ಹೊರಬಂತು ‘ಕಲ್ಯಾಣಿ’ ಮೋಶನ್ ಪೋಸ್ಟರ್* *’ಕಲ್ಯಾಣಿ’ ಚಿತ್ರದ ಶೀರ್ಷಿಕೆ ಅನಾವರಣ* *ಬಿ. ಎಂ. ಗಿರಿರಾಜ ಹೇಳುತ್ತಿರುವ ‘ಕಲ್ಯಾಣಿ’ ಕಥೆ* *ಉತ್ತರ ಧ್ರುವದಿಂದ ದಕ್ಷಿಣ ಧ್ರುವಕೆ ‘ಕಲ್ಯಾಣಿ’ ಯಾನ* *ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ ‘ಕಲ್ಯಾಣಿ’ ಚಿತ್ರ* ಕನ್ನಡ ಚಿತ್ರರಂಗದಲ್ಲಿ ‘ಜಟ್ಟ’, ‘ಮೈತ್ರಿ’ ಮೊದಲಾದ ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಬಿ. ಎಂ. ಗಿರಿರಾಜ ಈ ಬಾರಿ ‘ಕಲ್ಯಾಣಿ’ ಎಂಬ ಮತ್ತೊಂದು ....
'ಬ್ಯೂಟಿ’ ಟ್ರೈಲರ್ ಬಿಡುಗಡೆ; ಮಹಿಳಾ ಪ್ರಧಾನ ಕಥೆಯ ಮೇಲೆ ಹೆಚ್ಚಿದ ನಿರೀಕ್ಷೆ ಪತ್ರಕರ್ತರ ದಿನಾಚರಣೆಯ ಪ್ರಯುಕ್ತ ಪತ್ರಿಕೆ ಯ ಮುಖ್ಯಸ್ಥರಾದ ಭಾಷಾ ಟ್ರೈಲರ್ ಬಿಡುಗಡೆ ಮಾಡಿದರು ಬೆಂಗಳೂರು: ಮಹಿಳಾ ಪ್ರಧಾನ ಕಥಾಹಂದರವನ್ನು ಒಳಗೊಂಡಿರುವ ’ಬ್ಯೂಟಿ’ ಚಿತ್ರದ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಸಿನಿಪ್ರಿಯರಲ್ಲಿ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಮಹಿಳೆಯರ ಗೌರವ, ಆತ್ಮವಿಶ್ವಾಸ ಹಾಗೂ ಸಾಮಾಜಿಕ ಜವಾಬ್ದಾರಿಯಂತಹ ಅಂಶಗಳನ್ನು ಮನರಂಜನೆಯೊಂದಿಗೆ ತೆರೆಗೆ ತರುವ ಪ್ರಯತ್ನವನ್ನು ಚಿತ್ರತಂಡ ಮಾಡಿದೆ. ಕಲ್ಪವೃಕ್ಷ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ, ಪಿ. ಮುರಳಿ ಕೃಷ್ಣ ಅರ್ಪಿಸುತ್ತಿರುವ ಈ ಚಿತ್ರಕ್ಕೆ ರಾಜಾ ರವಿ ....
ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ! `ಒರಟ’, `ಕೋರ’ದಂಥಾ ಸಿನಿಮಾಗಳ ಮೂಲಕ ಭಿನ್ನ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಒರಟ ಶ್ರೀ ನಿರ್ದೇಶನದ ಬಹುನಿರೀಕ್ಷಿತ ಚಿತ್ರ `ಶಬರಿ’. ಇದೀಗ ಪತ್ರಿಕಾಗೋಷ್ಠಿಯ ಮೂಲಕ ಈ ಸಿನಿಮಾದ ಟೀಸರ್ ಅನ್ನು ಲಹರಿ ವೇಲು ಬಿಡುಗಡೆಗೊಳಿಸಿದ್ದಾರೆ. ಒರಟ ಶ್ರೀ ಸೇರಿದಂತೆ ಚಿತ್ರತಂಡ ಈ ಸಂದರ್ಭದಲ್ಲಿ ಹಾಜರಿದ್ದು ಶಬರಿಯ ಬಗೆಗಿನ ಒಂದಷ್ಟು ಆಸಕ್ತಿಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಟೀಸರ್ ಬಿಡುಗಡೆಯ ವೇದಿಕೆಯಲ್ಲಿ ಲಹರಿ ಸಂಸ್ಥೆಯ ಮುಖ್ಯಸ್ಥರಾದ ಲಹರಿ ವೇಲು, ರಾಷ್ಟ್ರ ಪ್ರಶಸ್ತಿ ವಿಜೇತ ತಲೆದಂಡ ಚಿತ್ರದ ನಿರ್ದೇಶಕರಾದ ಪ್ರವೀಣ್ ಕೃಪಾಕರ್ ಮತ್ತು ಕಾಮನ್ ಮ್ಯಾನ್ ಚಿತ್ರದ ನಿರ್ಮಾಪಕ ನರಸಿಂಹ ಮೂರ್ತಿ ಮುಖ್ಯ ....
*ಮತ್ತೆ ಒಂದಾದ ’ಪ್ರೇಮಂ’ ಜೋಡಿ..ನಿವಿನ್ ಪೌಲಿ 50ನೇ ಸಿನಿಮಾ ’ವಿಜಯಂ’*
*ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್*
ಮಲಯಾಳಂ ಸಿನಿಮಾ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಘೋಷಣೆ ಕೊನೆಗೂ ಹೊರ ಬಿದ್ದಿದೆ. 12 ವರ್ಷಗಳ ನಂತರ, ಬ್ಲಾಕ್ಬಸ್ಟರ್ ಜೋಡಿ ಎನಿಸಿಕೊಂಡಿರುವ ನಟ ನಿವಿನ್ ಪೌಲಿ ಮತ್ತು ನಿರ್ದೇಶಕ ಆಲ್ಫೋನ್ಸ್ ಪುತ್ರೇನ್ ಅವರ "ವಿಜಯಂ" ಎಂಬ ಹೊಸ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ನೇರಂ ಮತ್ತು ಪ್ರೇಮಂ ಚಿತ್ರದ ಅದ್ಭುತ ಯಶಸ್ಸಿನ ನಂತರ, ಈ ಜೋಡಿ ಮತ್ತೊಮ್ಮೆ ರೋಮಾಂಚಕಾರಿ ಪ್ರಾಜೆಕ್ಟ್ ಗೆ ಕೈಜೋಡಿಸಿದ್ದಾರೆ.
*ಟ್ರೇಲರ್ ನಲ್ಲಿ "ಸರ್ವಾಂತರ್ಯಾಮಿ”* . ರಂಗಭೂಮಿ ಹಿನ್ನೆಲೆ ಇರುವ ರಂಗಸ್ವಾಮಿ ಕಪನಿಪಾಳ್ಯ ನಿರ್ದೇಶನದ, ಹಿತ ಆರ್ ಗೌಡ ನಿರ್ಮಾಣದ “ಸರ್ವಾಂತರ್ಯಾಮಿ” ಎಲ್ಲರ ಕೈಯಲ್ಲೂ ನಾನೇ ಸ್ವಾಮಿ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟ್ರೇಲರ್ ಕುತೂಹಲ ಮೂಡಿಸಿದ್ದು, ಚಿತ್ರ ಜುಲೈ 17 ರಂದು ತೆರೆಗೆ ಬರಲಿದೆ. ಈ ಚಿತ್ರಕ್ಕೆ ನಿರ್ದೇಶಕ ಹಾಗು ಗೀತರಚನೆಕಾರ ಕೆ.ರಾಮ್ ನಾರಾಯಣ್ ಬೆನ್ನೆಲುಬಾಗಿ ನಿಂತಿದ್ದಾರೆ. ಟ್ರೇಲರ್ ಅನಾವರಣ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಿರ್ದೇಶಕ ಹಾಗೂ ನಟ ರಂಗಸ್ವಾಮಿ ಕಪನಿಪಾಳ್ಯ ಕಪನಿಪಾಳ್ಯ ಮಾತನಾಡಿ, "ಸರ್ವಾಂತರ್ಯಾಮಿ", ಸಾಮಾಜಿಕ ಕಳಕಳಿಯುಳ್ಳ ಚಿತ್ರ. ಮೊಬೈಲ್ ನಿಂದ ಆಗುತ್ತಿರುವ ....
*ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ "ರಕ್ಕಿ" ಚಿತ್ರದ ಟ್ರೇಲರ್ ಅನಾವರಣ* ಅಶ್ವಿನಿ ಪುನೀತ್ ರಾಜಕುಮಾರ್ ಅವರ ಆಶೀರ್ವಾದದೊಂದಿಗೆ, ಎಸ್ ಎನ್ ಆರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಾಲಿಗ್ರಾಮ ಸುರೇಶ್ ಅವರು ನಿರ್ಮಿಸಿರುವ, ವೆಂಕಟ್ ಭಾರದ್ವಾಜ್ ನಿರ್ದೇಶನದಲ್ಲಿ ರಕ್ಕಿ ನಾಯಕನಾಗಿ ನಟಿಸಿರುವ "ರಕ್ಕಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಪಿ.ಆರ್.ಕೆ ಆಡಿಯೋದಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಈ ಟ್ರೇಲರ್ ಲಭ್ಯವಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. . ಜರ್ಮನಿಯಲ್ಲಿ ಹಲವು ವರ್ಷಗಳಿಂದ ನೆಲೆಸಿರುವ ಸಾಲಿಗ್ರಾಮ ....
*ದುನಿಯಾ ವಿಜಯ್ ಹಾಗೂ ನಾಗರಾಜ್ ವಸ್ತಾರೆ ಅವರಿಂದ "ಗ್ರಾಮಾಯಣ"ದ ಟ್ರೇಲರ್ ಅನಾವರಣ.* . *ಜುಲೈ 3 ರಂದು ತೆರೆಗೆ ಬರಲಿದೆ ವಿನಯ್ ರಾಜ್ ಕುಮಾರ್ ಅಭಿನಯದ ಈ ಚಿತ್ರ.* . ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ರಚನೆ - ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ - ಮೇಘ ಶೆಟ್ಟಿ ನಾಯಕ - ನಾಯಕಿಯಾಗಿ ಅಭಿನಯಿಸಿರುವ "ಗ್ರಾಮಾಯಣ" ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ದುನಿಯಾ ವಿಜಯ್ ಹಾಗೂ ನಟಿ ಅಪರ್ಣ ಅವರ ಪತಿ ನಾಗರಾಜ್ ವಸ್ತಾರೆ ಅವರಿಂದ "ಗ್ರಾಮಾಯಣ"ದ ಟ್ರೇಲರ್ ಅನಾವರಣವಾಯಿತು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ....