ಉಗ್ರಾವತಾರ ಹಾಡುಗಳ ಲೋಕಾರ್ಪಣೆ ಎಸ್ಜಿಎಸ್ ಕ್ರಿಯೇಶನ್ಸ್ ಅಡಿಯಲ್ಲಿ, ಎಸ್.ಜಿ.ಸತೀಶ್ ನಿರ್ಮಾಣ, ಗುರುಮೂರ್ತಿ ರಚನೆ ಮತ್ತು ನಿರ್ದೇಶನದ ’ಉಗ್ರಾವತಾರ’ ಚಿತ್ರದ ನಾಯಕಿ ಪರಿಚಯದ ಹಾಡಿನ ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಪ್ರಿಯಾಂಕಉಪೇಂದ್ರ ಹೇಳುವಂತೆ ಸಮಾಜದಲ್ಲಿ ಹೆಣ್ಣಿಗೆ ಶೋಷಣೆ ನಡೆಯುತ್ತಲೇ ಇದೆ. ಹೆಣ್ಣು ಮಕ್ಕಳು ಸುರಕ್ಷಿತವಾಗಿ ಇರಲು ಸಾಧ್ಯವಾಗುತ್ತಿಲ್ಲ. ಇವರುಗಳ ಧ್ವನಿಯಾಗಿ ಪೋಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದೇನೆ. ಸಮಾಜದಲ್ಲಿ ನಡೆಯತಕ್ಕಂತ ಅನ್ಯಾಯಗಳನ್ನು ತಡೆಗಟ್ಟುವಲ್ಲಿ ಪ್ರಯತ್ನ ಮಾಡಿರುತ್ತೇನೆ. ನಿರ್ದೇಶಕರು ಹೇಳಿದಂತೆ ತೆರೆ ಮೇಲೆ ....
ದೀಪಾವಳಿಗೆ ’ನಾ ನಿನ್ನ ಬಿಡಲಾರೆ’ ತಂಡದಿಂದ Soul of ನಾನಿನ್ನ ಬಿಡಲಾರೆ ಬಿಡುಗಡೆ ------ ಗುರುವಾರವೇ ರಿಲೀಸ್ ಆಯ್ತು ನಾ ನಿನ್ನ ಬಿಡಲಾರೆ ಚಿತ್ರದ ಮೈರೊಮಾಂಚನಗೊಳಿಸೋ ರಾಯರ ಶ್ಲೋಕ ------ ಅಂದು ಬಿಡೆನು ನಿನ್ನಪಾದ... ಇಂದು ಗುರು ಸಾರ್ವಭೌಮಂ ಗುರು ರಾಘವೇಂದ್ರಂ ಶ್ಲೋಕ ------- ದೀಪಾವಳಿ ಸಂಭ್ರಮದ ಈ ಹೊತ್ತಲ್ಲಿ ಈ ಗುರುವಾರ ನಾ ನಿನ್ನ ಬಿಡಲಾರೆ ಚಿತ್ರತಂಡದಿಂದ Soul of ನಾನಿನ್ನ ಬಿಡಲಾರೆ ಅನ್ನೋ ಒಂದು ಅದ್ಭುತ ಡಿವೈನ್ ಮ್ಯೂಸಿಕಲ್ ವಿಡಿಯೋ A2 ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದೆ.. ಮೊನ್ನೆಯಷ್ಟೇ ನಾವು ನವೆಂಬರ್ 29ಕ್ಕೆ ಪ್ರೇಕ್ಷಕರೆದುರಿಗೆ ಬರ್ತಿದ್ದೀವಿ ಅಂತ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದ ಚಿತ್ರತಂಡ, ....
"ಮೂರು ಕಾಸಿನ ಕುದುರೆ" ಬಿಡುಗಡೆಗೂ ಮುನ್ನ. ಓಟಿಟಿಗೆ ಈಗಿನ ಕಾಲದಲ್ಲಿ ಒಂದು ಸಿನಿಮಾ ನಿರ್ಮಾಣ ಮಾಡೋದು ಎಷ್ಟು ಕಷ್ಟವೋ ಅದಕ್ಕಿಂತ ಕಷ್ಟಕರವಾದ್ದು ಅದನ್ನು ರಿಲೀಸ್ ಮಾಡಿ ಜನರಿಗೆ ತಲುಪಿಸೋದು. ಹೀಗೇ ಅದೆಷ್ಟೋ ಚಿತ್ರತಂಡಗಳು ಸಿನಿಮಾ ನಿರ್ಮಿಸಿದ್ದರೂ ರಿಲೀಸ್ ಮಾಡಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಅದೇರೀತಿ ಕರ್ತೃ ಗಿರೀಶ್ ಎಂಬ ಯುವಪ್ರತಿಭೆಯ ನಿರ್ದೇಶನದ ಚಿತ್ರ ಮೂರು ಕಾಸಿನಕುದುರೆ ರೆಡಿಯಾಗಿ ೨ ವರ್ಷವಾದರೂ ವಿತರಕರು ಸಿಗದೆ ರಿಲೀಸ್ ಮಾಡಲಾಗಿಲ್ಲ. ಆದರೆ ಅಮೆಜಾನ್ ಪ್ರೈಂ ಸಂಸ್ಥೆಯವರು ಚಿತ್ರವನ್ನು ನೋಡಿ ಕಂಟೆಂಟ್ ಇಷ್ಟಪಟ್ಟು ತಂಡದ ಜತೆ ಕೈಜೋಡಿಸಿದ್ದಾರೆ. ಕಳೆದ ವಾರವಷ್ಟೇ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುತ್ತಿರುವ ....
ಅವಧೂತನ ಸಮ್ಮುಖದಲ್ಲಿ ಎಲ್ಲಿಗೆ ಪಯಣ ಯಾವುದೋ ದಾರಿ ಚಿತ್ರತಂಡ! ಅರ್ಜುನ್ ಗುರೂಜಿ ಆಶೀರ್ವಾದ ಪಡೆದ ಅಭಿಮನ್ಯು! ಅಭಿಮನ್ಯು ಕಾಶೀನಾಥ್ ಅಭಿನಯದ `ಎಲ್ಲಿಗೆ ಪಯಣ ಯಾವುದೋ ದಾರಿ’ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ಯಶಸ್ವೀ ಪ್ರದರ್ಶನ ಕಾಣುತ್ತಿರುವ ಖುಷಿ ಚಿತ್ರತಂಡದಲ್ಲಿದೆ. ಇದೇ ಹೊತ್ತಿನಲ್ಲಿ ಅಭಿಮನ್ಯು ಕಾಶೀನಾಥ್ ಚಿತ್ರತಂಡದೊಂದಿಗೆ ಮೈಸೂರಿನ ಅವಧೂತ ಅರ್ಜುನ್ ಗುರೂಜಿಯನ್ನು ಭೇಟಿಯಾಗಿದ್ದಾರೆ. ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. ಅರ್ಜುನ್ ಗುರೂಜಿ ಅಭಿಮನ್ಯು ಸೇರಿದಂತೆ ಒಂದಿಡೀ ಚಿತ್ರತಂಡಕ್ಕೆ ಒಳಿತಾಗಲಿ, ಈ ಸಿನಿಮಾ ಇನ್ನಷ್ಟು ಯಶ ಕಾಣಲೆಂದು ಆಶೀರ್ವಾದ ಮಾಡಿದ್ದಾರೆ. ಅವಧೂತ ಅರ್ಜುನ್ ಗುರೂಜಿ ಅವರ ನಿವಾಸಕ್ಕೆ ಚಿತ್ರತಂಡದೊಂದಿಗೆ ....
ಸದ್ದು ಮಾಡುತ್ತಿದೆ ತಾರಕೇಶ್ವರ ಟ್ರೇಲರ್ ಭಕ್ತಿ ಪ್ರಧಾನ ’ತಾರಕೇಶ್ವರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ವೇದಾಂತ ಆಚಾರ್ಯ ಶ್ರೀ ಮಂಜುನಾಥ ಭಾರತಿ ಸ್ವಾಮಿಗಳು ಮೊದಲ ಟ್ರೇಲರ್, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಎರಡನೇ ಟ್ರೇಲರನ್ನು ಬಿಡುಗಡೆ ಮಾಡಿ ತಂಡಕ್ಕೆ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ಕೆ ವಿಶ್ವನಾಥ್, ಅಂಬೇಡ್ಕರ್ ಸೇನೆಯ ಅಧ್ಯಕ್ಷ ಮೂರ್ತಿ, ಕನ್ನಡ ಸಂಘದ ಅಧ್ಯಕ್ಷ ಬಸವರಾಜ ಪಡುಕೋಟೆ ಮುಂತಾದ ಗಣ್ಯರುಗಳು ಉಪಸ್ತಿತರಿದ್ದರು. ’ಅಸುರ ಕುಲತಿಲಕ’ ಅಂತ ಅಡಿಬರಹದಲ್ಲಿ ಹೇಳಲಾಗಿದೆ. ....
*ಕುತೂಹಲ ಮೂಡಿಸಿದೆ "U 235" ಚಿತ್ರದ ಟ್ರೇಲರ್* .
*ಮುಖ್ಯಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್ ನಟನೆ* .
ಕನ್ನಡ ಚಿತ್ರರಂಗದಲ್ಲಿ ಹೊಸತಂಡದಿಂದ ಹೊಸ ಪ್ರಯೋಗಾತ್ಮಕ ಚಿತ್ರಗಳು ಬರುತ್ತಿರುತ್ತದೆ. ಆ ಸಾಲಿಗೆ ಬಹುತೇಕ ಹೊಸಬರೆ ಸೇರಿ ಮಾಡಿರುವ "U 235" ಚಿತ್ರ ಸೇರಿದೆ. ಡೈನಾಮಿಕ್ ಸ್ಟಾರ್ ದೇವರಾಜ್ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ನವೆಂಬರ್ 8 ರಂದು ತೆರೆಗೆ ಬರಲಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಮಾತನಾಡಿದರು.
*ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು MMB legacy ಯ ದ್ವಿತೀಯ ವಾರ್ಷಿಕೋತ್ಸವ* . *ನವರಸನ್ ಕನಸಿನ ಕೂಸಿಗೆ ಎರಡನೇ ಹುಟ್ಟುಹಬ್ಬ* . ನಿರ್ಮಾಪಕ, ನಿರ್ದೇಶಕ, ನಟ ಹಾಗೂ ಪ್ರಸ್ತುತ ಇವೆಂಟ್ ಮ್ಯಾನೇಜ್ಮೆಂಟ್ ಮೂಲಕ ಚಿತ್ರರಂಗದ ಎಲ್ಲರ ಮನ ಗೆದ್ದಿರುವ ನವರಸನ್, ಕಳೆದ ಎರಡು ವರ್ಷಗಳ ಹಿಂದೆ ಚಿತ್ರಗಳ ಪ್ರಮೋಷನ್ ಗೆ ಅನುಕೂಲವಾಗುವಂತಹ MMB legacy ಎಂಬ ಸುಸಜ್ಜಿತ ಸಭಾಂಗಣ ಆರಂಭಿಸಿದ್ದರು. ಎರಡು ವರ್ಷಗಳಲ್ಲಿ 300 ರ ಆಸುಪಾಸಿನ ಸಮಾರಂಭಗಳು ಈ ಸ್ಥಳದಲ್ಲಿ ನಡೆದಿದೆ. ಆ ಎಲ್ಲಾ ಕಾರ್ಯಕ್ರಮಗಳು ಚಲನಚಿತ್ರದ ಕುರಿತಾದ ಕಾರ್ಯಕ್ರಮಗಳೇ ಆಗಿರುವುದು ವಿಶೇಷ. ಇತ್ತೀಚಿಗೆ MMB legacy ಯ ದ್ವಿತೀಯ ವಾರ್ಷಿಕೋತ್ಸವ ಅದ್ದೂರಿಯಾಗಿ ನೆರವೇರಿತು. ಕರ್ನಾಟಕ ಚಲನಚಿತ್ರ ....
*ಧೀರ ಭಗತ್ ರಾಯ್* *ಬೆನ್ನಿಗೆ* ನಿಂತ ಸ್ಯಾಂಡಲ್ ವುಡ್ *ಸಲಗ ವಿಜಯ್* *ಧೀರ ಭಗತ್ ರಾಯ್* ಚಿತ್ರದ ಟ್ರೈಲರ್ ಲಾಂಚ್ ಮಾಡಿದ *ಭೀಮ* ಪ್ರೇಕ್ಷಕರೆದುರಿಗೆ ರಿಲೀಸ್ ಆಯ್ತು *ಧೀರ ಭಗತ್ ರಾಯ್* *ಟ್ರೈಲರ್* ಪ್ರಸನ್ನ ಥಿಯೇಟರಿನಲ್ಲಿ ಹೌಸ್ ಫುಲ್ ಆಗಿದ್ದ ಪ್ರೇಕ್ಷಕರೆದುರಿಗೆ ಧೀರ ಭಗತ್ ರಾಯ್ ಚಿತ್ರದ ಟ್ರೈಲರ್ ನ ಸ್ಯಾಂಡಲ್ ವುಡ್ ಸಲಗ ವಿಜಯ್ ಕುಮಾರ್ ಲೋಕಾರ್ಪಣೆ ಮಾಡಿದ್ರು... ಹೊಸ ನಿರ್ದೇಶಕ, ಹೊಸ ನಾಯಕ. ಹೊಸ ನಿರ್ಮಾಣ ಸಂಸ್ಥೆಯ ಈ ಅದ್ಧೂರಿ ಚಿತ್ರದ ಕಂಟೆಂಟ್ ನೋಡಿ, ತುಂಬು ಹೃದಯದಿಂದ ಸಲಗ ವಿಜಯ್ ಕುಮಾರ್ ಈ ಚಿತ್ರತಂಡದ ಬೆನ್ನಿಗೆ ನಿಂತು ಈ ಕೆಲಸ ಮಾಡಿದ್ದಾರೆ. ಧೀರ ಭಗತ್ ರಾಯ್ ಚಿತ್ರದ ಟ್ರೈಲರ್ ತುಂಬಾ ಪ್ರಾಮಿಸಿಂಗ್ ಆಗಿದೆ... ಕರ್ಣನ್ ಅನ್ನೋ ನವ ನಿರ್ದೇಶಕ ....
*ನಾ ನಿನ್ನ ಬಿಡಲಾರೆ* ಬಿಡುಗಡೆ *ದಿನಾಂಕ ಫಿಕ್ಸ್* *ನವೆಂಬರ್ 29ಕ್ಕೆ* ’ *ನಾನಿನ್ನ ಬಿಡಲಾರೆ’* ನಿಮ್ಮುಂದೆ ನವೆಂಬರ್ ಅಂತ್ಯಕ್ಕೆ *ಸಸ್ಪೆನ್ಸ್ ಥ್ರಿಲ್ಲರ್* *’ನಾ ನಿನ್ನ ಬಿಡಲಾರೆ’* ನಾನಿನ್ನ ಬಿಡಲಾರೆ... ಅಂದು ಅನಂತ್ ನಾಗ್ ಲಕ್ಷ್ಮೀ ಕಾಂಬಿನೇಷನ್ ನಲ್ಲಿ ಬಂದ ಎವರ್ ಗ್ರೀನ್ ಚಿತ್ರ. ಇದೀಗ ಅದೇ ಟೈಟಲ್ ಇಟ್ಟೊಂಡು, ಈ ಕಾಲಕ್ಕೆ ತಕ್ಕ, ಸಸ್ಪೆನ್ಸ್ ಥ್ರಿಲ್ಲರ್ ಕಂಟೆಂಟ್ ನ ಹೊಸ ತಂಡ ಹೊಸ ಆಯಾಮದಲ್ಲಿ ಕನ್ನಡ ಪ್ರೇಕ್ಷಕರೆದುರಿಗೆ ಬರ್ತಿದೆ.. ಈಗಾಗ್ಲೇ ಟೀಸರ್ ನಿಂದ ಕುತೂಹಲ ಮೂಡಿಸಿದ್ದ, ಈ ಚಿತ್ರತಂಡ ಸಿಂಗಲ್ ಟೀಸರ್ ನಿಂದ್ಲೇ ನಿರೀಕ್ಷೆ ಹುಟ್ಟಿಸಿತ್ತು. ಅದ್ರಂತೆ ಇದೀಗ ಪ್ರೇಕ್ಷಕರೆದುರಿಗೆ ಬರೋದಕ್ಕೆ ದಿನಾಂಕ ನಿಗದಿ ಮಾಡಿದೆ. ....
*ಮುಕ್ತಾಯದ ಹಂತದಲ್ಲಿ ಆರ್.ಚಂದ್ರು ಕನಸಿನ ಫಾದರ್* ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ 5 ಸಿನಿಮಾಗಳ ಟೈಟಲ್ ಲಾಂಚ್ ಮಾಡಿಸಿ ಸದ್ದು ಮಾಡಿದ್ದ ನಿರ್ಮಾಪಕ ಕಮ್ ನಿರ್ದೇಶಕ ಆರ್.ಚಂದ್ರು ನುಡಿದಂತೆ ಐದು ಸಿನಿಮಾಗಳಲ್ಲಿ ಮೊದಲನೆದಾಗಿ ಫಾದರ್ ಸಿನಿಮಾದ ಶೂಟಿಂಗ್ ಮುಕ್ತಾಯದ ಹಂತಕ್ಕೆ ತಂದು ನಿಲ್ಲಿಸಿದ್ದಾರೆ.. ರಾಜ್ ಮೋಹನ್ ನಿರ್ದೇಶನದಲ್ಲಿ ಫಾದರ್ ಸಿನಿಮಾ ಮೂಡಿ ಬರುತ್ತಿದ್ದು ಕೊನೆಯ ಹಂತದ ಶೂಟಿಂಗ್ ಆನೇಕಲ್ ತಾಲೂಕಿನ ಐತಿಹಾಸಿಕ ದೇವಾಲಯ ಶ್ರೀ ಚಂಪಕಧಾಮಸ್ವಾಮಿ ದೇವಾಲಯದಲ್ಲಿ ನಡೆಯುತ್ತಿದೆ. ಚಂಪಕಧಾಮಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನೂರಾರು ಜನ ಜೂನಿಯರ್ ಆರ್ಟಿಸ್ಟ್ ಗಳ ಸಮೂಖದಲ್ಲಿ ಫಾದರ್ ಚಿತ್ರದ ಸಾಹಸದೃಶ್ಯಗಳು ....
*ಮಾಜಿ ಪ್ರಧಾನಿ ಶ್ರೀಹೆಚ್ ಡಿ ದೇವೇಗೌಡ ಅವರಿಂದ ಲತಾಶ್ರೀ ಡಿ.ಸಿ ಸಾರಥ್ಯದ ಹರ್ಷಿಣಿ ಸಿನಿಮಾಸ್ ಸಂಸ್ಥೆಗೆ ಚಾಲನೆ*
*ಸಂಸ್ಥೆಯ ಚೊಚ್ಚಲ ಕಾಣಿಕೆಯಾಗಿ "ಕಿರುನಗೆ" ಚಿತ್ರ ನಿರ್ಮಾಣ*
ವಿಜಾಪುರ ಜಿಲ್ಲೆಯ ಮಾಜಿ ಶಾಸಕರಾದ ಡಾ|ದೇವಾನಂದ್ ಪೂ ಚವ್ಹಾಣ ಹಾಗೂ ಶ್ರೀಮತಿ ಸುನೀತಾ ದೇವಾನಂದ ಚವ್ಹಾಣ ಪುತ್ರಿ ಲತಾಶ್ರೀ ಡಿ.ಸಿ ಅವರು ಹರ್ಷಿಣಿ ಸಿನಿಮಾಸ್ ಎಂಬ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಇತ್ತೀಚೆಗೆ ಈ ನೂತನ ನಿರ್ಮಾಣ ಸಂಸ್ಥೆಯನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಉದ್ಘಾಟಿಸಿ, ಲತಾಶ್ರೀ.ಡಿ.ಸಿ ಅವರ ಹೊಸ ಪ್ರಯತ್ನಕ್ಕೆ ಮನತುಂಬಿ ಆಶೀರ್ವದಿಸಿದರು.
ಓಟಿಟಿ ಪ್ಲೇಯರ್ ಕನ್ನಡ ಚಿತ್ರ ನಿರ್ಮಾಪಕರಿಗೆ ವರದಾನ ಸಿನಿಪ್ರಿಯರಿಗೆ ಮತ್ತೊಂದು ಓಟಿಟಿ ವೇದಿಕೆ ಇತ್ತೀಚಿನ ದಿನಗಳಲ್ಲಿ ಚಿತ್ರಮಂದಿರಗಳಿಗೆ ಹೋಗಿ ಸಿನಿಮಾ ನೋಡುವವರ ಸಂಖ್ಯೆ ತುಂಬಾ ಕಡಿಮೆಯಾಗಿದೆ. ಓಟಿಟಿ ಪ್ಲಾಟ್ ಫಾರಂಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಚಿತ್ರಪ್ರೇಮಿಗಳ ಬೇಡಿಕೆಗನುಗುಣವಾಗಿ, ಅವರನ್ನು ರಂಜಿಸಲು ಓಟಿಟಿ ಪ್ಲಾಟ್ ಫಾರಂಗಳು ಸನ್ನದ್ದವಾಗುತ್ತಿವೆ. ಇದೀಗ ಗ್ರಾಹಕರ ಬಡ್ಜೆಟ್ ಫ್ರೆಂಡ್ಲಿ ಓಟಿಟಿ ಯಾಗಿ "ಓಟಿಟಿ ಪ್ಲೇಯರ್" ಪ್ರಾರಂಭವಾಗಿದೆ. ಇದು ಆ್ಯಪ್ ಅಲ್ಲ, ಹಾರ್ಲೀ ಎಂಟರ್ ಟೈನ್ ಮೆಂಟ್ ಮೀಡಿಯಾ ಸಂಸ್ಥೆಯಡಿ ಗೀತಾ ಕೃಷ್ಣನ್ ರಾವ್ ಹಾಗೂ ಮುರಳಿರಾವ್ ಅವರು ಅಭಿವೃದ್ದಿಪಡಿಸಿರುವ ವೆಬ್ ಸೈಟ್ ಆಗಿದ್ದು ಇದರ ಮೂಲಕ ಯಾವುದೇ ....
*ಈ ವಾರ ತೆರೆಗೆ "ಯಲಾಕುನ್ನಿ"*
*ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್*
ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಹಾಗೂ ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ "ಯಲಾಕುನ್ನಿ" ಚಿತ್ರ ಈ ವಾರ ಅಕ್ಟೋಬರ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
*ಈ ವಾರ ತೆರೆಗೆ "ಮೂಕ ಜೀವ"* ಜೆ ಎಂ ಪ್ರಹ್ಲಾದ್ ಅವರ ಕಾದಂಬರಿ ಆಧಾರಿತ ಚಲನಚಿತ್ರ "ಮೂಕ ಜೀವ" ಈ ವಾರ ಬಿಡುಗಡೆಯಾಗುತ್ತಿದೆ. ಹಳ್ಳಿಯ ಬಡ ಕುಟುಂಬದಲ್ಲಿ ಪ್ರಾರಂಭವಾಗುವ ಈ ಕಥೆ ಪಟ್ಟಣದಲ್ಲಿ ಅಂತ್ಯವಾಗುತ್ತದೆ. ಯಾವುದೇ ವ್ಯಕ್ತಿ ತಾನು ಸ್ವಾವಲಂಬಿಯಾಗಿ ಬದುಕಲು ಬೇಕಾದ ಸಹಾಯ, ಮಾರ್ಗದರ್ಶನ ಮತ್ತು ಸಹಾಯ ಪಡೆಯುವ ವ್ಯಕ್ತಿಯು ಸ್ಪಂದಿಸುವ ರೀತಿಯನ್ನು ಎಳೆ ಎಳೆಯಾಗಿ ತೆರೆದಿಡುವ ಪ್ರಯತ್ನವನ್ನು ಈ ಚಲನಚಿತ್ರದಲ್ಲಿ ಮಾಡಲಾಗಿದೆ. ಹಳ್ಳಿಯಲ್ಲಿ ಜೀವಿಸುತ್ತಿರುವ ಒಂದು ಬಡ ಕುಟುಂಬದ ಕಥೆ ಮೂಕ ಜೀವ, ಮನೆಗೆ ಆಸರೆಯಾಗಿ ಇರಬೇಕಿದ್ದ ತಂದೆ ಇಲ್ಲದ ಕುಟುಂಬ ಇವರದು, ತಾಯಿಗೆ ಇಬ್ಬರು ಮಕ್ಕಳು ಒಂದು ಹೆಣ್ಣು ಮತ್ತು ಒಂದು ಗಂಡು, ಮಗಳು ಮದುವೆಯ ವಯಸ್ಸಿಗೆ ....
*"ಕಸ್ಟಡಿ" ಚಿತ್ರದಲ್ಲಿ "ಭೀಮ" ಖ್ಯಾತಿಯ ನಟಿ ಪ್ರಿಯ* . *ಬಿರುಸಿನ ಚಿತ್ರೀಕರಣದಲ್ಲಿ ನಾಗೇಶ್ ಕುಮಾರ್ ಯು ಎಸ್ ನಿರ್ಮಾಣದ ಹಾಗೂ ಜೆ.ಜೆ.ಶ್ರೀನಿವಾಸ್ ನಿರ್ದೇಶನದ ಈ ಚಿತ್ರ* . ಬೃಂದಾವನ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಾಗೇಶ್ ಕುಮಾರ್ ಯು ಎಸ್ ನಿರ್ಮಾಣದ ಹಾಗೂ ಜೆ.ಜೆ.ಶ್ರೀನಿವಾಸ್ ನಿರ್ದೇಶನದ "ಕಸ್ಟಡಿ" ಚಿತ್ರದ ಪ್ರಮುಖಪಾತ್ರದಲ್ಲಿ "ಭೀಮ" ಚಿತ್ರದ ಗಿರಿಜಾ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ಪ್ರಿಯ ನಟಿಸುತ್ತಿದ್ದಾರೆ. ನಗರದ ಟೊರಿನೊ ಫ್ಯಾಕ್ಟರಿ ಆವರಣದಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಮ್ಮ ಸಂಸ್ಥೆಯ ಮೂಲಕ "ಗಜಾನನ ....
*ಭರ್ಜರಿಯಾಗಿದೆ ಶ್ರೀಮುರಳಿ ಅಭಿನಯದ "ಬಘೀರ" ಚಿತ್ರದ ಟ್ರೇಲರ್.* . *ಹೊಂಬಾಳೆ ಫಿಲಂಸ್ ನಿರ್ಮಾಣದ, ಡಾ||ಸೂರಿ ನಿರ್ದೇಶನದ ಈ ಚಿತ್ರ ಅಕ್ಟೋಬರ್ 31 ರಂದು ಬಿಡುಗಡೆ* . ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ "ಕೆ.ಜಿ.ಎಫ್", " ಕಾಂತಾರ " ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಹೆಸರಾಂತ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ, ಡಾ||ಸೂರಿ ನಿರ್ದೇಶನದಲ್ಲಿ ಶ್ರೀಮುರಳಿ ಅವರು ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಬಘೀರ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ಅಕ್ಟೋಬರ್ 31 ರಂದು ಅದ್ದೂರಿಯಾಗಿ ....
ಎಲ್ಲಿಗೆ ಪಯಣ ಯಾವುದೋ ದಾರಿ: ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆಗೊಳಿಸಿದರು ಡಾ.ಮಂಜುನಾಥ್! ಅಭಿಮನ್ಯು ಕಾಶಿನಾಥ್ ನಾಯಕನಾಗಿ ನಟಿಸಿರುವ `ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರ ಇದೇ ಅಕ್ಟೋಬರ್ ೨೫ರಂದು ಬಿಡುಗಡೆಗೊಳ್ಳಲಿದೆ. ಇತ್ತೀಚೆಗಷ್ಟೇ ಈ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿತ್ತು. ಅದಕ್ಕೆ ಭರಪೂರ ಮೆಚ್ಚುಗೆ ಮೂಡಿಕೊಳ್ಳುತ್ತಲೇ, ಸಂಸದ, ಖ್ಯಾತ ವೈದ್ಯ ಡಾ.ಮಂಜುನಾಥ್ ಈ ಚಿತ್ರದ `ನೀನಿರು ಸಾಕು’ ಎಂಬ ಲಿರಿಕಲ್ ವೀಡಿಯೋ ಸಾಂಗ್ ಅನ್ನು ಬಿಡುಗಡೆಗೊಳಿಸಿದ್ದಾರೆ. ನಟ, ನಿರ್ದೇಶಕ ಕಾಶಿನಾಥ್ ಅವರನ್ನು ನೆನೆಸಿಕೊಳ್ಳುತ್ತಲೇ, ಅವರ ಪುತ್ರ ಅಭಿಮನ್ಯು ಕಾಶೀನಾಥ್ ರಿಗೆ ಶುಭ ಕೋರಿದ್ದಾರೆ. ಅಂತ್ಯಂತ ಸಂತಸದಿಂದ ಈ ಲಿರಿಕಲ್ ವೀಡಿಯೋ ಸಾಂಗ್ ಅನ್ನು ಡಾಕ್ಟರ್ ಮಂಜುನಾಥ್ ....
*ಜಲದಾಳದಲ್ಲಿ ಅಡಗಿದೆ "ಜಲಂಧರ"ನ ಕಥೆ* . *ಪ್ರಮೋದ್ ಶೆಟ್ಟಿ ಅಭಿನಯದ ಈ ಚಿತ್ರದ ಮೊದಲ ಹಾಡು ಬಿಡುಗಡೆ** . ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ "ಜಲಂಧರ" ಚಿತ್ರದ "ಹುಟ್ಟುತ್ತಾ ನಾವು" ಎಂಬ ಹಾಡಿನ ಲಿರಿಕಲ್ ವೀಡಿಯೋ ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಮೂಲಕ ಬಿಡುಗಡೆಯಾಗಿದೆ. ಮನ್ವರ್ಷಿ ನವಲಗುಂದ ಬರದಿರುವ ಈ ಹಾಡನ್ನು ಅವಿನಾಶ್ ಬಸತ್ಕೂರ್ ಹಾಡಿದ್ದಾರೆ. ಜತಿನ್ ದರ್ಶನ್ ಸಂಗೀತ ನೀಡಿದ್ದಾರೆ. ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು. ಜಂಕಾರ್ ಮ್ಯೂಸಿಕ್ ನ ಭರತ್ ಜೈನ್, ನಾಯಕ ಪ್ರಮೋದ್ ಶೆಟ್ಟಿ ಸಹ ಜೊತೆಗಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ....
"ಮೆಜೆಸ್ಟಿಕ್-2" 126 ದಿನಗಳ ಚಿತ್ರೀಕರಣ ಈಗಿನ ಮೆಜೆಸ್ಟಿಕ್ ಏರಿಯಾ ಹೇಗಿದೆ, ಅಲ್ಲಿ ನಡೆಯುವ ದಂಧೆಗಳು, ಅಕ್ರಮ ಚಟುವಟಿಕೆಗಳು ಅಲ್ಲದೆ ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯನ್ನು ಮೆಜೆಸ್ಟಿಕ್-2 ಚಿತ್ರದ ಮೂಲಕ ನಿರ್ದೇಶಕ ರಾಮು ಹೇಳಹೊರಟಿದ್ದಾರೆ. ಹೀಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲದಂಥ ಅನೇಕ ಚಟುವಟಿಕೆಗಳನ್ನು ಮೆಜೆಸ್ಟಿಕ್-2 ಅನಾವರಣಗೊಳಿಸಲಿದೆ. ಇದೀಗ ಈ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ. ಅಮ್ಮಾ ಎಂಟರ್ ಪ್ರೈಸಸ್ ಮೂಲಕ ಚಿತ್ರದುರ್ಗದ ಹೆಚ್.ಆನಂದಪ್ಪ ಅವರ ನಿರ್ಮಾಣದ ಈ ಚಿತ್ರಕ್ಕೆ ರಾಮು ಅವರೇ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ....
"ಯಾಕೆ ಚಿತ್ರದ ಶೀರ್ಷಿಕೆ ಅನಾವರಣ: ನವಂಬರ್ ನಲ್ಲಿ ಚಿತ್ರೀಕರಣ ಆರಂಭ ಇತ್ತೀಚಿಗೆ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಕಿ ಪ್ಯಾನ್ ಇಂಡಿಯಾ ಮಟ್ಟದ. ಚಿತ್ರಗಳು ಸೆಟ್ಟೇರುತ್ತಿವೆ. ಇದೀಗ ಆ ಸಾಲಿಗೆ ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಕನ್ನಡ ಮತ್ತು ತೆಲುಗು ಸೇರಿ ಎರಡು ಭಾಷೆಯಲ್ಲಿ ಈ ಚಿತ್ರ ಮೂಡಿ ಬರಲಿದೆ. ಈ ಚಿತ್ರಕ್ಕೆ ಕನ್ನಡದಲ್ಲಿ ,"ಯಾಕೆ" ಎನ್ನುವ ಶೀರ್ಷಿಕೆ ಇಟ್ಟಿದ್ದು, ತೆಲುಗಿನಲ್ಲಿ "ಸಂಸ್ಥಾನಂ" ಎಂಬ ಟೈಟಲ್ ಇಡಲಾಗಿದೆ. ಸೀತಾ ಹರ್ಷವರ್ಧನ್ ಅವರು ಎರಡು ಭಾಷೆಯಲ್ಲಿ ನಿರ್ಮಾಣ ಮಾಡುತ್ತಿದ್ದು, ಪ್ರೇಮ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕನ್ನಡ ಮತ್ತು ತೆಲುಗು ....