ರಾಜ್ಯಾದ್ಯಂತ ವಿಕಾಸ ಪರ್ವಕ್ಕೆ ಚಿತ್ರತಂಡಕ್ಕೆ ಅದ್ಭುತ ಪ್ರತಿಕ್ರಿಯೆ ಸೆ.13ರಂದು ಬಿಡುಗಡೆಯಾಗಲಿದೆ ಫ್ಯಾಮಿಲಿ ಥ್ರಿಲ್ಲರ್ ಸಿನಿಮಾ ! ಚಿತ್ರರಂಗದಲ್ಲಿ 22 ವರ್ಷಗಳಿಂದ ಕನ್ನಡ, ತೆಲುಗು ಸೇರಿದಂತೆ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ, ಕಿರುತೆರೆಯ 65 ಸೀರಿಯಲ್ ಗಳಲ್ಲಿ ಬಣ್ಣ ಹಚ್ಚಿರುವ ನಟ ರೋಹಿತ್ ನಾಗೇಶ್ ಹಾಗೂ ಸ್ವಾತಿ ನಾಯಕ, ನಾಯಕಿಯಾಗಿ ನಟಿಸಿರೋ ಚಿತ್ರ ವಿಕಾಸ ಪರ್ವ ಸೆ.13 ರಂದು ರಾಜ್ಯಾದ್ಯಂತ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ವಿಶೃತ್ ನಾಯಕ್ ಕಥೆ, ಚಿತ್ರಕಥೆ, ಸಂಭಾಷಣೆ ರಚಿಸಿರುವ ಈ ಚಿತ್ರಕ್ಕೆ ಅನ್ಬು ಅರಸ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಾಮಾಜಿಕ ಕಳಕಳಿಯುಳ್ಳ ಕಥಾಹಂದರ ಈ ....
" *#ಪಾರು ಪಾರ್ವತಿ" ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್* . *ಪಿ.ಬಿ.ಪ್ರೇಮನಾಥ್ ನಿರ್ಮಾಣದ ಈ ಚಿತ್ರಕ್ಕೆ ರೋಹಿತ್ ಕೀರ್ತಿ ನಿರ್ದೇಶನ* EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಮನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ "ಬಿಗ್ ಬಾಸ್" ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ "#ಪಾರು ಪಾರ್ವತಿ" ಚಿತ್ರದ ಶೀರ್ಷಿಕೆ ಅನಾವರಣ ಹಾಗೂ EIGHTEEN THIRTY SIX ಪಿಕ್ಚರ್ಸ್ ನಿರ್ಮಾಣ ಸಂಸ್ಥೆ ಉದ್ಘಾಟನೆ ಇತ್ತೀಚೆಗೆ ನೆರವೇರಿತು. ಆನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ಮಾಪಕ ....
*ಐದು ಭಾಷೆಗಳಲ್ಲಿ ಬರಲಿದೆ "1990 s" ಪ್ರೇಮಕಥೆ* . *ಏಕಕಾಲಕ್ಕೆ ಬಿಡುಗಡೆಯಾಯಿತು ನಾಲ್ಕು ಭಾಷೆಗಳ ಟೀಸರ್* . ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ಅಭಿನಯದ "1990s" ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಲಹರಿ ವೇಲು ಸೇರಿದಂತೆ ಅನೇಕ ಗಣ್ಯರು ನಾಲ್ಕು ಭಾಷೆಗಳ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ಹಿಂದಿ ಟೀಸರ್ ತಾಂತ್ರಿಕ ಕಾರಣದಿಂದ ಇಂದು ಬಿಡುಗಡೆಯಾಗಲಿಲ್ಲ. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ನಿರ್ದೇಶಕನಾಗಿ ಇದು ಚೊಚ್ಚಲ ಚಿತ್ರ. ಈ ಚಿತ್ರ ಆಗಲು ....
ಸತ್ಯ ಘಟನೆಗಳ ಚಾಕ್ನ ಚಂದನವನದಲ್ಲಿ ಪ್ರಸಕ್ತ ಸತ್ಯ ಘಟನೆಗಳ ಸಿನಿಮಾಗಳನ್ನು ಜನರು ಇಷ್ಟಪಡುತ್ತಿರುವುದರಿಂದ ಅಂತಹುದೆ ಕಥೆಗಳು ತೆರೆ ಮೇಲೆ ಬರುತ್ತಿವೆ. ಆ ಸಾಲಿಗೆ ‘ಚಾಕ್ನ’ ಚಿತ್ರ ಸೇರ್ಪಡೆಯಾಗಿದೆ. ‘ಬೂದಿಯೊಳಗಿನ ಕೆಂಡಗಳ ಕಥೆ’ ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ. ಆರ್ಆರ್ ಕಂಬೈನ್ಸ್ ಅಡಿಯಲ್ಲಿ ವಿಮಲಾ ನಿರ್ಮಾಣ ಮಾಡುತ್ತಿದ್ದಾರೆ. ತಮಿಳಿನಲ್ಲಿ ಐದು ಚಿತ್ರಗಳ ನಿರ್ದೇಶನ, ‘ಜನಕ’ದಲ್ಲಿ ಖಳನಾಗಿ ಅಭಿನಯಿಸಿರುವ ಕನ್ನಡಿಗ ಕೆ.ಪಳನಿ ರಚನೆ,ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್ನ್ನು ‘ಜಂಬದ ಹುಡುಗಿ’ ....
"ಮೆಜೆಸ್ಟಿಕ್-2" ಚಿತ್ರದಲ್ಲಿ ಮಾಲಾಶ್ರೀ ಹೀರೋ ಪರಿಚಯದ ಹಾಡಲ್ಲಿ ನಾಯಕನ ಗುಣಗಾನ ಮಾಡಿದ ಆ್ಯಕ್ಷನ್ ಕ್ವೀನ್ ರಾಮು ಅವರ ನಿರ್ದೇಶನದ ಮೆಜೆಸ್ಟಿಕ್-2 ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯ ಹಂತ ತಲುಪಿದೆ. ತೊಂಭತ್ತರ ದಶಕದಲ್ಲಿ ರೌಡಿಸಂ ಹೇಗೆ ನಡೆಯುತ್ತಿತ್ತು ಎಂದು ದರ್ಶನ್ ಅಭಿನಯಿಸಿದ್ದ ಚಿತ್ರ ಹೇಳಿದ್ದರೆ, ಈಗಿನ ಮೆಜೆಸ್ಟಿಕ್ ಏರಿಯಾದಲ್ಲಿ ಏನೆಲ್ಲಾ ಕರಾಳ ದಂಧೆಗಳು, ಅಕ್ರಮ ಚಟುವಟಿಕೆಗಳು ಅಲ್ಲದೆ ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯ ಮೂಲಕ ಮೆಜೆಸ್ಟಿಕ್-2 ಚಿತ್ರದ ಮೂಲಕ ನಿರ್ದೇಶಕ ರಾಮು ಹೇಳಲು ಪ್ರಯತ್ನಿಸಿದ್ದಾರೆ. ಈ ....
*"REDRUM" ಚಿತ್ರದಿಂದ ಬಂತು ರೊಮ್ಯಾಂಟಿಕ್ ಸಾಂಗ್* . *ಚಿತ್ರದ ಶೀರ್ಷಿಕೆಯನ್ನು ಕನ್ನಡಿಯಲ್ಲಿ ನೋಡಿದರೆ ತಿಳಿಯುತ್ತದೆ ಮತ್ತೊಂದು ಶೀರ್ಷಿಕೆ* . ಅಶೋಕ್ ದೇವನಾಂಪ್ರಿಯ, ಮೋಹನ್ ರಾಜ್ ಹಾಗೂ ಹನಿ ಚೌಧರಿ ನಿರ್ಮಾಣದ, ಪ್ರಮೋದ್ ಜೋಯಿಸ್ ನಿರ್ದೇಶನದ ಹಾಗೂ ಅಫ್ಜಲ್ ಕಾರ್ಯಕಾರಿ ನಿರ್ಮಾಪಕರಾಗಿರುವ "REDRUM" ಚಿತ್ರದ "ಅನುಪಮ" ಎಂಬ ರೊಮ್ಯಾಂಟಿಕ್ ಸಾಂಗ್ FMD ಆಡಿಯೋ ಮೂಲಕ ಬಿಡುಗಡೆಯಾಗಿದೆ. ನಿರ್ದೇಶಕರೆ ಬರೆದಿರುವ ಈ ಹಾಡನ್ನು "ಸರಿಗಮಪ" ಖ್ಯಾತಿಯ ದರ್ಶನ್ ನಾರಾಯಣ್ ಹಾಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಇದು ನನ್ನ ನಿರ್ದೇಶನದ ಎರಡನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಪ್ರಮೋದ್ ಜೋಯಿಸ್, ....
*ಬಿಡುಗಡೆಯಾಯಿತು ವಿಕ್ಕಿ ವರುಣ್ - ಧನ್ಯಾ ರಾಮಕುಮಾರ್ ಅಭಿನಯದ "ಕಾಲಾಪತ್ಥರ್" ಚಿತ್ರದ "ಬಾಂಡ್ಲಿ ಸ್ಟವ್" ಹಾಡು.* . *ಪ್ರಮೋದ್ ಮರವಂತೆ ಬರೆದು, ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ* . ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, "ಕೆಂಡಸಂಪಿಗೆ" ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ "ಕಾಲಾಪತ್ಥರ್" ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದು, ಅನೂಪ್ ಸೀಳಿನ್ ಸಂಗೀತ ನೀಡಿರುವ "ಬಾಂಡ್ಲಿ ಸೌಟ್" ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗೃಹಿಣಿಯರಿಂದಲೇ ಈ ಹಾಡು ಬಿಡುಗಡೆಯಾಗಿದ್ದು ವಿಶೇಷ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ....
*ವಾಸ್ತವಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದೆ "ತದ್ವಿರುದ್ಧ"* . *ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ CHARMION MOTION PICTURES ನಿರ್ಮಾಣದ ಹಾಗೂ ಸುಚೇಂದ್ರ ಪ್ರಸಾದ್, ಸುಮನ್ ರಂಗನಾಥ್, ವಿಕ್ರಮ್ ಅಭಿನಯದ ಈ ಚಿತ್ರ* . ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಇರುವ ಚಿತ್ರಗಳು ಯಶಸ್ಸು ಕಂಡಿರುವ ಸಾಕಷ್ಟು ಉದಾಹರಣೆಗಳಿದೆ. ಅಂತಹುದೇ ವಿಭಿನ್ನ ಕಂಟೆಂಟ್ ವುಳ್ಳ "ತದ್ವಿರುದ್ಧ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು .ಟೀಸರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸ್ವಚ್ಛ ಕನ್ನಡದ ಮಾತಿನಿಂದ ಹಾಗೂ ತಮ್ಮ ಅಮೋಘ ಅಭಿನಯದಿಂದ ಜನಪ್ರಿಯರಾಗಿರುವ ಸುಚೇಂದ್ರ ಪ್ರಸಾದ್, ಹಿರಿಯ ನಟಿ ಸುಮನ್ ರಂಗನಾಥ್ ಹಾಗೂ ವಿಕ್ರಮ್ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ....
ಗೌರಿ ಹಬ್ಬಕ್ಕೆ ಬರಲಿದೆ "ಅನ್ನ"... ಈಗ ಟ್ರೈಲರ್ ರಿಲೀಸ್ ನಮ್ಮ ನೆಲದ , ಮೂಲ ಸೊಗಡನ್ನ ಬಿಂಬಿಸುವಂತಹ ಚಿತ್ರಗಳು ಬರುವುದು ಬಹಳ ಅಗತ್ಯ. ’ಅನ್ನಂ ಪರಬ್ರಹ್ಮ ಸ್ವರೂಪಂ’ ಹೌದು ಸಾಮಾನ್ಯವಾಗಿ ಒಂದು ಮಾತಿದೆ, ಅನ್ನ ದ ಮಹತ್ವ ಹಸಿದವನಿಗೆ ಮಾತ್ರ ಗೊತ್ತು ಎನ್ನುವುದು. ಅಂತಹದ್ದೇ ಒಂದು ಅನ್ನದ ವಿಚಾರವನ್ನು ಮೂಲವಾಗಿಟ್ಟುಕೊಂಡು ಗ್ರಾಮೀಣ ಭಾಗದ ಸುತ್ತ ನೈಜಕ್ಕೆ ಹತ್ತಿರವಾಗಿ ಸೆರೆಹಿಡಿದಿರುವಂತಹ "ಅನ್ನ" ಚಿತ್ರದ ಟೈಲರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ ನೆರವೇರಿತು. ಹಾಗೆಯೇ ಈ ಚಿತ್ರದ ಟೀಸರ್ ಬಿಡುಗಡೆಯನ್ನು ನಿರ್ದೇಶಕ ಯೋಗರಾಜ್ ಭಟ್ ಮೂಲಕ ಮಾಡಿಸಿದ ವಿಡಿಯೋವನ್ನು ಪ್ರದೇಶಿಸಲಾಯಿತ್ತು. ಈ ಚಿತ್ರದ ಕುರಿತು ....
ಅಮ್ಮನ ಸನ್ನಿದಿಯಲ್ಲಿ ಸರ್ವೇ ನಂಬರ್ ೪೫ ಮುಹೂರ್ತ ಹೊಸಬರೇ ಸೇರಿಕೊಂಡು ಸಿದ್ದಪಡಿಸುತ್ತಿರುವ ‘ಸರ್ವೇ ನಂಬರ್ ೪೫’ ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಬಂಡಿ ಮಹಾಂಕಾಳಿ ಅಮ್ಮನ ಸನ್ನಿದಿಯಲ್ಲಿ ಅದ್ದೂರಿಯಾಗಿ ನಡೆಯಿತು. ಪ್ರಥಮ ದೃಶ್ಯಕ್ಕೆ ಹಿರಿಯ ನಿರ್ದೇಶಕ ಹೆಚ್.ವಾಸು ಕ್ಲಾಪ್ ಮಾಡಿದರೆ, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ಬಣಕಾರ್ ಕ್ಯಾಮಾರ ಆನ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಉಪಸ್ತಿತರಿದ್ದರು. ವರನಂದಿ ಸಿನಿ ಸಂಸ್ಥೆಯು ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ. ಹಿರಿಯ ನಿರ್ದೇಶಕರುಗಳಾದ ಹೆಚ್.ವಾಸು ಮತ್ತು ಕೆ.ರಾಘವ ಅವರಲ್ಲಿ ....
"ಲವ್ ಈಸ್ ಲೈಫ್" ಪ್ರೀತಿಯ ಹೊಸ ಅಧ್ಯಾಯ ಬಂಡೆ ಮಾಂಕಾಳಮ್ಮನ ಸನ್ನಿಧಿಯಲ್ಲಿ ಚಾಲನೆ ಇತ್ತೀಚೆಗಷ್ಟೇ ಮೆಜೆಸ್ಟಿಕ್-೨ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದ ಯುವಟನ ಭರತ್ಕುಮಾರ್ ಆ ಚಿತ್ರದ ಶೂಟಿಂಗ್ ಮುಗಿಯುವ ಮೊದಲೇ ಇನ್ನೊಂದು ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಆ ಚಿತ್ರದ ಹೆಸರು ಲವ್ ಈಸ್ ಲೈಫ್. ಭರತ್ಕುಮಾರ್, ಮಿಷಲ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು. ಅಂಬಿಗಾ ಕ್ರಿಯೇಶನ್ಸ್ ಮೂಲಕ ಜಿ.ಡಿ. ಸಂತೋಷ್ ಕುಮಾರ್ ಹಾಗೂ ಎನ್.ಹನುಮಂತಪ್ಪ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ....
*ಹೊರಬಂತು ‘ಕರ್ಕಿ’ ಟ್ರೇಲರ್* *ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಸಾರಥ್ಯದಲ್ಲಿ ಮೂಡಿಬಂದ ‘ಕರ್ಕಿ’* *ಜನಾಂಗೀಯ ಸಂಘರ್ಷದ ನಡುವೆ ಅರಳಿದ ಪ್ರೇಮಕಥೆ* *ಮಾಸ್ ಕಂಟೆಂಟ್ ಫುಲ್ ಎಂಟರ್ಟೈನ್ಮೆಂಟ್* ಈಗಾಗಲೇ ತನ್ನ ಟೈಟಲ್ ಮತ್ತು ಫಸ್ಟ್ ಲುಕ್ ಮೂಲಕ ಸಿನಿಮಂದಿಯ ಗಮನ ಸೆಳೆದಿರುವ ‘ಕರ್ಕಿ’ ಸಿನೆಮಾ ತೆರೆಗೆ ಬರಲು ಭರದ ಸಿದ್ದತೆ ನಡೆಸುತ್ತಿದೆ. ಸದ್ಯ ನಿಧಾನವಾಗಿ ‘ಕರ್ಕಿ’ ಸಿನೆಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ ಮೊದಲ ಹಂತದಲ್ಲಿ ಸಿನೆಮಾದ ಟೀಸರ್ ಮತ್ತು ಟ್ರೇಲರ್ ಅನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ‘ಕರ್ಕಿ’ ಸಿನೆಮಾದ ಟೀಸರ್ ಮತ್ತು ಟ್ರೇಲರ್ ಅದ್ಧೂರಿಯಾಗಿ ....
"ಸಂಜೆ ಹೊತ್ನಾಗ ಮೈಪುಳಕ " ಬ್ರಹ್ಮರಾಕ್ಷಸನ ಐಟಂ ಸಾಂಗ್ ಬಿಡುಗಡೆ ಕನ್ನಡ ಚಿತ್ರರಂಗದಲ್ಲೀಗ ಹೊಸ ಆಶಾಭಾವನೆ ಮೂಡಿದೆ. ಇತ್ತೀಚೆಗೆ ತೆರೆಕಂಡ ಚಿತ್ರಗಳ ಗೆಲುವು ಹೊಸಬರಿಗೆ ನವಚೇತನ ನೀಡಿದೆ. ಅದೇ ನಿಟ್ಟಿನಲ್ಲಿ ಮತ್ತಷ್ಟು ಚಿತ್ರತಂಡಗಳು ಬಿಡುಗಡೆಯ ಸಿದ್ದತೆ ಮಾಡಕೊಳ್ಳುತ್ತಿವೆ. ಅಂತಹ ಸಿನಿಮಾಗಳಲ್ಲಿ ಬ್ರಹ್ಮರಾಕ್ಷಸ ಕೂಡ ಒಂದು. ಲೈಟ್ಮ್ಯಾನ್ ಆಗಿ ಚಿತ್ರರಂಗಕ್ಕೆ ಬಂದು ಹಲವಾರು ನಿರ್ದೇಶಕರ ಬಳಿ ಕೆಲಸ ಕಲಿತ ಶಂಕರ್.ವಿ. ಮೊದಲಬಾರಿಗೆ ಆ್ಯಕ್ಷನ್ಕಟ್ ಹೇಳಿರುವ ಚಿತ್ರ ಇದಾಗಿದ್ದು, ಜ್ಯೋತಿ ಆರ್ಟ್ಸ್ ಮೂಲಕ ಕೆಎಂಪಿ. ಶ್ರೀನಿವಾಸ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಐಟಂ ಸಾಂಗ್ ....
*ವಿಕ್ಕಿ ವರುಣ್ - ಧನ್ಯಾ ರಾಮಕುಮಾರ್ ಅಭಿನಯದ "ಕಾಲಾಪತ್ಥರ್" ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆ* . ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ "ಕಾಲಾಪತ್ಥರ್" ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆಯಾಗಲಿದೆ. ಹಿರಿಯ ಪತ್ರಕರ್ತ ಕೆ.ಎಸ್.ವಾಸು ’ಕಾಲಾಪತ್ಥರ್’ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದರು. ಆನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ಮಾಪಕರಾದ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲನಕೋಟೆ, ಆರಂಭದಿಂದಲೂ ತಾವು ನಮ್ಮ ಚಿತ್ರಕ್ಕೆ ....
. *ಟೈಗರ್ ಅಭಿನಯದ ’ಬಲರಾಮನ ದಿನಗಳು’ ಚಿತ್ರಕ್ಕೆ ಸಂತೋಷ್ ನಾರಾಯಣನ್ ಸಂಗೀತ* . *ಈ ಚಿತ್ರದ ಮೂಲಕ "ಕಲ್ಕಿ" ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಕನ್ನಡಕ್ಕೆ ಎಂಟ್ರಿ* . ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸುತ್ತಿರುವ ಹಾಗೂ "ಆ ದಿನಗಳು" ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ನಾಯಕರಾಗಿ ನಟಿಸುತ್ತಿರುವ 25 ನೇ ಚಿತ್ರ "ಬಲರಾಮನ ದಿನಗಳು". ಕಳೆದ ಕೆಲವು ತಿಂಗಳ ಹಿಂದಷ್ಟೇ ಈ ಚಿತ್ರದ ಘೋಷಣೆಯಾಗಿತ್ತು. ಈಗ ಈ ಚಿತ್ರದ ಕುರಿತು ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಹೆಸರಾಂತ ಸಂಗೀತ ....
*"ಬಿಟಿಎಸ್" ನಲ್ಲಿ ಐದು ಜನ ನಿರ್ದೇಶಕರ ಐದು ಕಥೆಗಳು* .. *ಹೊಸ ಪ್ರಯತ್ನಕ್ಕೆ ರಾಜ್ ಬಿ ಶೆಟ್ಟಿ ಸಾಥ್* . ಒಂದು ಚಿತ್ರವನ್ನು ಇಬ್ಬರು ನಿರ್ದೇಶಕರು ಸೇರಿ ನಿರ್ದೇಶಿಸಿರುವ ಉದಾಹರಣೆ ಸಾಕಷ್ಟಿದೆ. ಆದರೆ ಐದು ಜನ ನಿರ್ದೇಶಕರು, ಐದು ಕಥೆಗಳನ್ನಿಟ್ಟುಕೊಂಡು "ಬಿ ಟಿ ಎಸ್" ಎಂಬ ಸಿನಿಮಾ ಮಾಡಿದ್ದಾರೆ. ಆಸಕ್ತಿಕರ ವಿಷಯಗಳನ್ನಿಟ್ಟುಕೊಂಡು ಜನರ ಮನಸ್ಸು ಗೆಲ್ಲಲ್ಲು ಮುಂದಾಗಿದ್ದಾರೆ.ಯುವ ಪ್ರತಿಭಾನ್ವಿತರ ತಂಡಕ್ಕೆ ನಟ ರಾಜ್ ಬಿ ಶೆಟ್ಟಿ ಸಾಥ್ ನೀಡಿ, ಪ್ರಯತ್ನ ಯಶಸ್ವಿ ಆಗಲಿ ಎಂದು ಹಾರೈಸಿದ್ದಾರೆ. ಟ್ರೇಲರ್ ಅನ್ನು "ಭೀಮ" ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಬಿಡುಗಡೆ ಮಾಡಿದ್ದಾರೆ. ಬಿಟಿಎಸ್ ( ಬಿಹೈಂಡ್ ದಿ ಸ್ಕ್ರೀನ್ ) ಚಿತ್ರವನ್ನು ....
*"ರಾನಿ" ನೋಡಲು ಆಗಸ್ಟ್ 30 ಅಲ್ಲ. ಇನ್ನೂ ಎರಡು ವಾರ ಕಾಯಬೇಕು* . ಕಿರಣ್ ರಾಜ್ ಅಭಿನಯದ ‘ರಾನಿ’ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ. ಮೊದಲು ಹೇಳಿದ ಹಾಗೆ ಆಗಸ್ಟ್ 30ರಂದು ಬಿಡುಗಡೆ ಆಗಬೇಕಿತ್ತು. ಆದರೆ ಈಗ ’ರಾನಿ’ ಆಗಸ್ಟ್ 30 ರ ಬದಲು ಸೆಪ್ಟೆಂಬರ್ 12 ರಂದು ತೆರೆಗೆ ಬರಲಿದೆ. ಪ್ರಸ್ತುತ ಬಿಡುಗಡೆಯಾಗಿರುವ ಕನ್ನಡ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಹಾಗಾಗಿ ಚಿತ್ರಮಂದಿರಗಳ ಸಮಸ್ಯೆ ಎದುರಾಗಬಾರದೆಂದು ಈ ನಿರ್ಧಾರ ತೆಗದುಕೊಂಡಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ತಿಳಿಸಿದೆ. ಮೊದಲು ಮಾತನಾಡಿದ ನಿರ್ದೇಶಕ ಗುರುತೇಜ್ ಶೆಟ್ಟಿ, ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಕೃಷ್ಣಂ ಪ್ರಣಯ ಸಖಿ’ ಮತ್ತು ‘ಭೀಮ’ ....
*ಕವೀಶ್ ಶೆಟ್ಟಿ ಹಾಗೂ ಮೇಘಾ ಶೆಟ್ಟಿ ಅಭಿನಯದ ಆಪರೇಷನ್ ಲಂಡನ್ ಕೆಫೆ ಚಿತ್ರದ ಟೀಸರ್ ಬ್ಯಾಂಗ್* ! *ಮೊದಲ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮನಬಿಚ್ಚಿ ಮಾತನಾಡಿದ ಚಿತ್ರತಂಡ* . ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ’ಆಪರೇಷನ್ ಲಂಡನ್ ಕೆಫೆ’ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರಿಂದ ಭರ್ಜರಿ ಫಲಿತಾಂಶವನ್ನು ಕಾಣುತ್ತಿದೆ. ಟೀಸರ್ ಬಿಡುಗಡೆ ಮಾಡಿದ ....
*ಎರಡು ಉಪಕಥೆಗಳ ನಡುವೆ ನಡೆಯುತ್ತದೆ "ರುದ್ರ ಗರುಡ ಪುರಾಣ" ಕಥೆ* . *ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ರಿಷಿ ಅಭಿನಯದ ಚಿತ್ರ* . ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಹಾಗೂ ಪ್ರಸ್ತುತ ತೆಲುಗು ಚಿತ್ರರಂಗದಲ್ಲೂ ಮನೆಮಾತಾಗಿರುವ ನಟ ರಿಷಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "ರುದ್ರ ಗರುಡ ಪುರಾಣ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ನಿರ್ದೇಶಕ ಜೇಕಬ್ ವರ್ಗೀಸ್ ಮುಂತಾದವರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. 914 ವಿಮಾನ 1955 ರಲ್ಲಿ ನ್ಯೂಯಾರ್ಕ್ ನಿಂದ ಮಿಯಾನ್ ಸಿಟಿಗೆ ....
ಶೀರ್ಷಿಕೆ ಹಳೇದು ಕಥೆ ಹೊಸತು
೮೦ರ ದಶಕದಲ್ಲಿ ಡಾ.ರಾಜ್ಕುಮಾರ್ ಅಭಿನಯದ ‘ಧ್ರುವತಾರೆ’ ಚಿತ್ರವು ಬಿಡುಗಡೆಗೊಂಡು ಹಿಟ್ ಆಗಿತ್ತು. ನಾಲ್ಕು ದಶಕದ ನಂತರ ಈಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸಿದ್ದಗೊಂಡಿದೆ. ಜಿ.ಪಿ.ಫಿಲಂಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಗಣೇಶ್ಕುಮಾರ್ ನಿರ್ಮಾಣ ಮಾಡಿದ್ದಾರೆ. ಮೈಸೂರು ಮೂಲದ ಪ್ರತೀಕ್ ನಿರ್ದೇಶನದ ಜೊತೆಗೆ ನಾಯಕನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಹಾಡುಗಳು ಹೊರಬಂದಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ಎನ್.ಸುರೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.