ಗಟ್ಟಿ ಕಥೆಯ ನಿರೀಕ್ಷೆಯ ಮುಂದೆ ಗರಿಬಿಚ್ಚಿತು ’ಬಿಳಿಚುಕ್ಕಿ ಹಳ್ಳಿಹಕ್ಕಿ’! ಕಂಟೆಂಟ್ ಓರಿಯಂಟೆಡ್ ಸಿನಿಮಾಗಳ ಗುಂಗು ಹತ್ತಿಸಿಕೊಂಡ ದೊಡ್ಡ ಪ್ರೇಕ್ಷಕ ವರ್ಗವೊಂದು ಕನ್ನಡದಲ್ಲಿದೆ. ಅದೇ ಧಾಟಿಯ ಚಿತ್ರವೊಂದು ಪಕ್ಕಾ ಕಮರ್ಶಿಯಲ್ ಪಥದಲ್ಲಿ ರೂಪುಗೊಂಡಿದೆಯೆಂದರೆ ಅದರ ಬಗೆಗೊಂದು ಕುತೂಹಲ ತಾನಾಗಿಯೇ ಮೂಡಿಕೊಳ್ಳುತ್ತೆ. ಸದ್ಯ ಅಂಥಾದ್ದೊಂದು ಕೌತುಕಕ್ಕೆ ಕಾರಣವಾಗಿರುವ ಚಿತ್ರ ’ಬಿಳಿಚುಕ್ಕಿ ಹಳ್ಳಿಹಕ್ಕಿ’. ಈ ಹಿಂದೆ `ಮಹಿರಾ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿ ಗಮನ ಸೆಳೆದಿದ್ದವರು ಮಹೇಶ್ ಗೌಡ. ಇದೀಗ ಅವರು ಸ್ವತಃ ನಿರ್ಮಾಣ, ನಿರ್ದೇಶನದ ಜವಾಬ್ದಾರಿ ಹೊತ್ತು ತಾವೇ ನಾಯಕನಾಗಿ ನಟಿಸಿರುವ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ’. ದಸರಾ ಹಬ್ಬಕ್ಕೆ ಶುಭ ....
95ನಿಮಿಷಗಳ ಥ್ರಿಲ್ಲರ್ `ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರ ಈ ವಾರ ತೆರೆಗೆ! ಶೀರ್ಷಿಕೆಯ ಕಾರಣದಿಂದ ಆರಂಭಿಕವಾಗಿ ಗಮನ ಸೆಳೆದಿದ್ದ ಚಿತ್ರ `ಪ್ರಕರಣ ತನಿಖಾ ಹಂತದಲ್ಲಿದೆ’. ಸುಂದರ್ ಎಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಟ್ರೈಲರ್ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಈ ಮೂಲಕವೇ ಭಿನ್ನ ಕಥಾನಕದ ಸುಳಿವು ಬಿಟ್ಟು ಕೊಟ್ಟಿದ್ದ `ಪ್ರಕರಣ ತನಿಖಾ ಹಂತದಲ್ಲಿದೆ’ ಸಿನಿಮಾ ಈ ವಾರ ಅಂದರೆ, ಅಕ್ಟೋಬರ್ 17ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಶೀರ್ಷಿಕೆ ಕೇಳಿದಾಕ್ಷಣವೇ ಒಟ್ಟಾರೆ ಕಥೆಯ ಬಗ್ಗೆ ಒಂದು ಕಲ್ಪನೆ ಮೂಡಿಸಿಕೊಂಡಿದ್ದ ಪ್ರೇಕ್ಷಕರನ್ನೆಲ್ಲ ಟ್ರೈಲರ್ ಅಚ್ಚರಿಗೀಡುಮಾಡಿತ್ತು. ಹಾಗೆ ಮೂಡಿಕೊಂಡಿದ್ದ ನಿರೀಕ್ಷೆಗಳ ನಡುವೆ ಈ 95 ನಿಮಿಷಗಳ ವಿಶಿಷ್ಟ ....
ಕಾಶಿನಾಥ್ ಪುತ್ರನ ಚಿತ್ರದ ಟ್ರೈಲರ್ ಬಿಡುಗಡೆಗೊಳಿಸಿದರು ಸುದೀಪ್! ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಪುತ್ರ ಅಭಿಮನ್ಯು ನಟಿಸಿರುವ ಚಿತ್ರ `ಎಲ್ಲಿಗೆ ಪಯಣ ಯಾವುದೋ ದಾರಿ’. ಈ ಸಿನಿಮಾದ ಟ್ರೈಲರ್ ಅನ್ನು ಕಿಚ್ಚಾ ಸುದೀಪ್ ಪ್ರೀತಿಯಿಂದ ಬಿಡುಗಡೆಗೊಳಿಸಿದ್ದಾರೆ. ಅಚ್ಚುಕಟ್ಟಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಟ್ರೈಲರ್ ಲಾಂಚ್ ಆಗಿದೆ. ಬಿಗ್ ಬಾಸ್ ಶೋ ಹಾಗೂ ಸಿನಿಮಾ ಒತ್ತಡಗಳ ನಡುವೆಯೂ ಪ್ರೀತಿಯಿಂದ ಆಗಮಿಸಿದ ಸುದೀಪ್, ಕಾಶೀನಾಥ್ ಅವರು ಕನ್ನಡ ಚಿತ್ರರಂಗಕ್ಕೆ ಕೊಟ್ಟ ಕೊಡುಗೆಯನ್ನು ಸ್ಮರಿಸುತ್ತಾ, ಅವರ ಪುತ್ರ ಅಭಿಮನ್ಯು ಕಾಶೀನಾಥ್ ಅವರಿಗೆ ಶುಭ ಕೋರುತ್ತಾ, ಟ್ರೈಲರ್ ಅನ್ನು ಲೋಕಾರ್ಪಣೆಗೊಳಿಸಿದ್ದಾರೆ. ಅಂದಹಾಗೆ, ಈ ಚಿತ್ರ ಇದೇ ಅಕ್ಟೋಬರ್ 25ರಂದು ತೆರೆಗಾಣಲಿದೆ. ....
ಟ್ರೈಲರ್ ಮೂಲಕ ಬೆರಗು ಮೂಡಿಸಿತು ಸೈಕ್ಯಾಡೆಲಿಕ್ ಥ್ರಿಲ್ಲರ್ ಅಂಶು! ಸಾಮಾಜಿಕ ಪಲ್ಲಟಗಳಿಗೆ ಕಣ್ಣಾದ ಕಥೆ ಹೊಂದಿರುವ ಚಿತ್ರಗಳೆಂದರೆ ಕನ್ನಡದ ಪ್ರೇಕ್ಷಕರಲ್ಲಿ ಒಂದು ಬಗೆಯ ಸೆಳೆತವಿದೆ. ಅಂಥಾದ್ದೊಂದು ಕಥೆ ಭಿನ್ನ ಜಾನರಿನಲ್ಲಿ, ಪಕ್ಕಾ ಕಮರ್ಶಿಯಲ್ ಬಗೆಯಲ್ಲಿ ರೂಪುಗೊಂಡಿದೆಯೆಂದರೆ ಅಂಥಾ ಸೆಳೆತ ಮತ್ತಷ್ಟು ತೀವ್ರವಾಗಿರುತ್ತದೆ. ಸದ್ಯ ಬಿಡುಗಡೆಗೊಂಡಿರುವ `ಅಂಶು’ ಚಿತ್ರದ ಟ್ರೈಲರ್ ನಲ್ಲಿಯೂ ಅಂಥಾದ್ದೊಂದು ಸೆಳೆತವಿದ್ದಂತಿದೆ. ಇದೀಗ ಬಿಡುಗಡೆಗೆ ಸಜ್ಜುಗೊಂಡಿರುವ `ಅಂಶು’ ಮಹಿಳಾ ಪ್ರಧಾನ ಕಥಾನಕವನ್ನು ಒಳಗೊಂಡಿರುವ ಚಿತ್ರ. ಅದರ ಒಟ್ಟಾರೆ ಸಾರದತ್ತ ಕುತೂಹಲ ಕೇಂದ್ರೀಕರಿಸುವಂತೆ ಮಾಡುವಲ್ಲಿ ಈ ಟ್ರೈಲರ್ ಯಶ ಕಂಡಿದೆ. ಈ ಚಿತ್ರದಲ್ಲಿ ನಿಶಾ ರವಿಕೃಷ್ಣನ್ ....
*ನವೆಂಬರ್ 7 ರಂದು ಕನ್ನಡದಲ್ಲಿ ತೆರೆಗೆ ಬರಲಿದೆ "ಜೈ ಕಿಸಾನ್"* . *ಮರಾಠಿಯಲ್ಲಿ ಈಗಾಗಲೇ ಬಿಡುಗಡೆಯಾಗಿದೆ ರೈತನ ಜೀವನದ ಕಥಾಹಂದರ ಹೊಂದಿರುವ ಈ ಚಿತ್ರ* . ಮಹಾರಾಷ್ಟ್ರ ಮೂಲದ ರವಿ ನಾಗಪುರೆ ಅವರು ತಾವೇ ಕಥೆ ಬರೆದು ನಿರ್ಮಿಸಿರುವ ಚಿತ್ರ "ಜೈ ಕಿಸಾನ್". ರೈತನ ಬದುಕಿನ ಕುರಿತಾದ ಈ ಚಿತ್ರ ಈಗಾಗಲೇ ಮರಾಠಿಯಲ್ಲಿ ಬಿಡುಗಡೆಯಾಗಿದ್ದು, ಕನ್ನಡದಲ್ಲಿ ನವೆಂಬರ್ 7 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗಲಿದೆ. ವಿಜಾಪುರ ಮೂಲದ ಮುಂಬೈ ನಿವಾಸಿ ನಾಗಾರಾಜ್ ಈ ಚಿತ್ರವನ್ನು ಕನ್ನಡಕ್ಕೆ ತರುತ್ತಿದ್ದಾರೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ರವಿ ನಾಗಪುರೆ ಅವರು ರೈತನ ಬಗ್ಗೆ ....
*ಅಕ್ಟೋಬರ್ 25 ರಂದು ಬಹು ನಿರೀಕ್ಷಿತ "ಯಲಾಕುನ್ನಿ" ತೆರೆಗೆ* . *ತೆರೆಯ ಮೇಲೆ ನಟ ಭಯಂಕರ ವಜ್ರಮುನಿ ಅವರ ಗೆಟಪ್ ನಲ್ಲಿ ಕೋಮಲ್ ಕುಮಾರ್* . ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ, ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಾಹಿತ್ಯ,ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಯಲಾಕುನ್ನಿ" ಚಿತ್ರ ಅಕ್ಟೋಬರ್ 25 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ನಿರ್ದೇಶಕ ಎನ್ ಆರ್ ....
*ಸಮಾಜಕ್ಕೆ ಉತ್ತಮ "ಉದಾಹರಣೆ" ಆಗಲಿದೆ ನಮ್ಮ ಚಿತ್ರ ನಿರ್ದೇಶಕ ದಿನೇಶಾಚಾರ್* .
ಕಳೆದ ಕೆಲವು ವರ್ಷಗಳಿಂದ ಪ್ರಸಾದನ ಕಲಾವಿದರಾಗಿ ಗುರುತಿಸಿಕೊಂಡಿರುವ ದಿನೇಶಾಚಾರ್ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವವರು. ಪ್ರಸ್ತುತ ಅವರು "ಉದಾಹರಣೆ" ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಭೂಮಿಕ ಮೂವೀಸ್ ಲಾಂಛನದಲ್ಲಿ ಹೇಮಾವತಿ ದಿನೇಶಾಚಾರ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ಅಕ್ಟೋಬರ್ 18 ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಯಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಉಗ್ರಾವತಾರ ಟ್ರೇಲರ್ಗೆ ಉಪೇಂದ್ರ ಫಿದಾ ಎಸ್ಜಿಎಸ್ ಕ್ರಿಯೇಶನ್ಸ್ ಅಡಿಯಲ್ಲಿ, ಎಸ್.ಜಿ.ಸತೀಶ್ ನಿರ್ಮಾಣ, ಗುರುಮೂರ್ತಿ ರಚನೆ ಮತ್ತು ನಿರ್ದೇಶನದ ’ಉಗ್ರಾವತಾರ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಎಂಎಂಬಿ ಲೆಗೆಸಿದಲ್ಲಿ ಅದ್ದೂರಿಯಾಗಿ ನಡೆಯಿತು. ರಿಯಲ್ ಸ್ಟಾರ್ ಉಪೇಂದ್ರ ತುಣುಕುಗಳನ್ನು ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದರು. ನಂತರ ಮಾತನಾಡಿ ನಿರ್ದೇಶಕರ ಶ್ರಮ ಇದರಲ್ಲಿ ಕಾಣಿಸುತ್ತದೆ. ಆದರೂ ಅವರು ದುಗಡದಿಂದ ಇದ್ದಾರೆ. ಮೊದಲಬಾರಿ ನನಗೂ ಅದೇ ಆಗಿತ್ತು. ಭವಿಷ್ಯದಲ್ಲಿ ನೀವು ಸ್ಟಾರ್ ನಿರ್ದೇಶಕರಾಗುತ್ತಿರಾ. ಮನೆಯಲ್ಲಿ ಉಗ್ರಾವತಾರ ಅವತಾರವನ್ನು ನೋಡಿದ್ದೇನೆ. ಮುಂದೆ ನೀವುಗಳು ನೋಡುತ್ತಿರಾ. ಆದರೆ ಪೋಲೀಸ್ರು ಗ್ಲಾಮರಸ್ ಆಗಿ ....
*ಟ್ರೇಲರ್ ನಲ್ಲೇ ಭರವಸೆ ಮೂಡಿಸಿರುವ "ಸಂತೋಷ ಸಂಗೀತ" ಸದ್ಯದಲ್ಲೇ ತೆರೆಗೆ* . ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ, ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ನಾಯಕ - ನಾಯಕಿಯಾಗಿ ನಟಿಸಿರುವ "ಸಂತೋಷ ಸಂಗೀತ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಚಂದ್ರಶೇಖರ ಶಿವರಾಧ್ಯ ಸ್ವಾಮೀಜಿರವರು ಟ್ರೇಲರ್ ಬಿಡುಗಡೆ ಮಾಡಿ ಹಾರೈಸಿದರು. ವಿಶೇಷ ಅತಿಥಿಯಾಗಿ ಲಹರಿ ವೇಲು ಅವರು ಆಗಮಿಸಿದ್ದರು. ಈ ಚಿತ್ರವು ’ಯು’ಪ್ರಮಾಣ ಪತ್ರ ಪಡೆದಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. "ಸಂತೋಷ ಸಂಗೀತ" ಚಿತ್ರ ನಿಲ್ಲಲು ನಾಲ್ಕು ಕಾಲು ತುಂಬಾ ಅವಶ್ಯಕತೆ ಇದ್ದು, ತಯಾರಿ, ....
**ಚಿತ್ರಮಂದಿರಗಳು ದೇವಸ್ಥಾನ ಇದ್ದ ಹಾಗೆ. ಇಲ್ಲಿಗೆ ಬರುವ ಪ್ರೇಕ್ಷಕರು ದೇವರುಗಳು* .. " *ಕೃಷ್ಣಂ ಪ್ರಣಯ ಸಖಿ" ಚಿತ್ರದ ಐವತ್ತನೇ ದಿನದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಗೋಲ್ಡನ್ ಮಾತು* . ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಡಗರ ಒಂದು ಕಡೆಯಾದರೆ, ಅಲ್ಲಿನ ವುಡ್ ಲ್ಯಾಂಡ್ಸ್ ಚಿತ್ರಮಂದಿರದಲ್ಲಿ "ಕೃಷ್ಣಂ ಪ್ರಣಯ ಸಖಿ" ಚಿತ್ರದ ಐವತ್ತನೇ ದಿನದ ಸಂಭಮ. ಈ ಸಂಭ್ರಮವನ್ನು ಸಂಭ್ರಮಿಸಲು ಸುಂದರ ಸಮಾರಂಭವನ್ನು ಆಯೋಜಿಸಿ, ಗೆಲುವಿಗೆ ಕಾರಣರಾದ ಚಿತ್ರತಂಡದವರನ್ನು ನಿರ್ಮಾಪಕರು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ ಚಿತ್ರತಂಡದ ಸದಸ್ಯರು ಮಾತನಾಡಿದರು. ಚಿತ್ರಮಂದಿರಗಳು ....
ಛಲವಾದಿ ವೇದಿಕೆಯಲ್ಲಿ ಸಂಜು ವೆಡ್ಸ್ ಗೀತಾ-2 ಹಾಡು ಪವಿತ್ರಾ ಇಂಟರ್ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರು ನಿರ್ಮಿಸಿರುವ ಕನ್ನಡದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-೨ ಚಿತ್ರದ ಹಾಡಿನ ಬಿಡುಗಡೆ ಸಮಾರಂಭ ಅಂಬೇಡ್ಕರ್ ಭವನದ ಸುಂದರ ವೇದಿಕೆಯಲ್ಲಿ ನೆರವೇರಿತು. ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅಭಿನಯದ ಈ ಹಾಡನ್ನು ಛಲವಾದಿ ಮಹಾಸಭಾದ ಜ್ಞಾನಪ್ರಕಾಶ ಸ್ವಾಮೀಜಿ ಅವರು ಬಿಡುಗಡೆ ಮಾಡಿದರು. ಜೊತೆಗೆ ಬಸನಾಗಿ ಸ್ವಾಮೀಜಿ ಕೂಡ ಉಪಸ್ಥಿತರಿದ್ದರು, ಇದೇ ವೇದಿಕೆಯಲ್ಲಿ ಉಪಸ್ಥಿತರಿದ್ದ ಛಲವಾದಿ ಮಹಾಸಭಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡುತ್ತ ’ನಮ್ಮ ಸಹೋದರ ಕುಮಾರ್ ಈಗ ....
*ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ "ಆಪರೇಷನ್ ಡಿ" ಚಿತ್ರದ ಟೀಸರ್ ಅನಾವರಣ** . . ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ ಹಾಗೂ ತಿರುಮಲೇಶ್ ವಿ ನಿರ್ದೇಶನದ *"ಆಪರೇಶನ್ ಡಿ"* ಚಿತ್ರದ ಟೀಸರ್ ಅನ್ನು ಬಿಡುಗಡೆ ಶುಭ ಹಾರೈಸಿದ್ದಾರೆ. ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ತಿಳಿಸಿ, "ಆಪರೇಷನ್ ಡಿ" ಕುರಿತು ಮಾತನಾಡಿದರು. ಟೀಸರ್ ಬಿಡುಗಡೆ ....
*ಸಿಂಪಲ್ ಸುನಿ ಅವರಿಂದ ನೂತನ ಚಿತ್ರದ ಶೀರ್ಷಿಕೆ ಅನಾವರಣ* . *"ಜಂಗಲ್ ಮಂಗಲ್" ಚಿತ್ರಕ್ಕೆ ಯಶ್ ಶೆಟ್ಟಿ ನಾಯಕ* . ತಮ್ಮ ಅಮೋಘ ಅಭಿನಯದ ಮೂಲಕ ಜನರಮನ ಗೆದ್ದಿರುವ ಯಶ್ ಶೆಟ್ಟಿ ನಾಯಕರಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆಯನ್ನು ನಿರ್ದೇಶಕ ಸಿಂಪಲ್ ಸುನಿ ಅನಾವರಣ ಮಾಡಿದರು. ನಂತರ ಸುನಿ ಹಾಗೂ ಚಿತ್ರತಂಡದವರು ಮಾತನಾಡಿದರು. . ಇದು ಅರೆ ಮಲೆನಾಡಿನ ಕಾಡಿನಲ್ಲಿ ನಡೆಯುವ ಕಥೆ. ಅರೆ ಮಲೆನಾಡು ಎಂದರೆ ಘಟ್ಟದ ಮೇಲೆ ಹಾಗೂ ಘಟ್ಟದ ಕೆಳಗೆ ಎರಡು ಸಂಧಿಸುವ ಊರು. ಅಲ್ಲಿ ವಿವಿಧ ಸಂಸ್ಕೃತಿಯ ಜನರು ಇರುತ್ತಾರೆ. ಅಲ್ಲೊಂದು ದಟ್ಟವಾದ ಕಾಡು. ಆ ....
ರಾಯಲ್ ಆಗಿ ರಿಲೀಸ್ ಆಯ್ತು ರಾಯಲ್ ಟಾಂಗು ಟಾಂಗು ಹಾಡು --- ರಾಯಲ್ ’ಟಾಂಗ್’ ಟಾಂಗ್ ಸಾಂಗ್ ಲಾಂಚ್ ----- ತುಮಕೂರಿನಲ್ಲಿ ರಾಯಲ್ ಧಮಕಾ --- ವಿದ್ಯಾರ್ಥಿಗಳ ಜೊತೆಗೆ ರಾಯಲ್ ವಿರಾಟ್ ಸಂಜನಾ ಟೀಮ್ ಮಸ್ತ್ ಡ್ಯಾನ್ಸ್ ---- ದಿನಕರ್ ತೂಗುದೀಪ ರಾಯಲ್ ಟಾಂಗ್ ದರ್ಶನ್ ಅಭಿಮಾನಿಗಳಿಗೆ ಭಾವುಕ ಸಂದೇಶ ---- ಟೈಟಲ್ ಅಷ್ಟೇ ಅಲ್ಲ ಪ್ರಮೋಷನ್ ನಲ್ಲೂ ನಾವು ರಾಯಲ್ ಅಂತೇಳಿ, ರಾಯಲ್ ಸಿನಿಮಾದ ಪ್ರಮೋಷನ್ ಅನ್ನ ಚಿತ್ರತಂಡ ಅದ್ಧೂರಿಯಾಗಿ ಮಾಡ್ತಿದೆ. ದಿನಕರ್ ತೂಗುದೀಪ ನಿರ್ದೇಶನದ, ಜಯಣ್ಣ ಭೋಗೇಂದ್ರ ನಿರ್ಮಾಣದ *ರಾಯಲ್* ಚಿತ್ರದ 2ನೇ ಹಾಡು ಇತ್ತೀಚೆಗಷ್ಟೇ ಬಿಡುಗಡೆಯಾಯಿತು. ಸಾಂಗ್ ಬಿಡುಗಡೆಗೂ ಮುನ್ನ ಇಡೀ ಚಿತ್ರತಂಡ ತುಮಕೂರು ಸಿದ್ದಗಂಗೆ ....
*ದಕ್ಷಿಣ ಭಾರತದ ಮೂವರು ದಿಗ್ಗಜ ನಿರ್ದೇಶಕರಿಂದ "ಜಸ್ಟ್ ಮ್ಯಾರೀಡ್" ಟೀಸರ್ ಅನಾವರಣ.* . *ಇದು ಶೈನ್ ಶೆಟ್ಟಿ - ಅಂಕಿತ ಅಮರ್ ಅಭಿನಯದ ಚಿತ್ರ* . abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು ನಿರ್ಮಿಸಿರುವ, ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ "ಜಸ್ಟ್ ....
ಅಮ್ಮನವರ ದರ್ಶನ ಅಕ್ಟೋಬರ್ 17ರಿಂದ ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಹಾಗೂ ಭಕ್ತಿಪ್ರಧಾನತೆವುಳ್ಳ ’ಸಿಂಹರೂಪಿಣಿ’ ಚಿತ್ರವು ಬಿಡುಗಡೆಗೆ ಸಿದ್ದವಾಗಿದ್ದು ಭರ್ಜರಿಯಾಗಿ ಮೂಡಿಬಂದಿದೆ. ಕೆ.ಎಂ.ನಂಜುಂಡೇಶ್ವರರವರು ಕಥೆ ಬರೆದು ಶ್ರೀ ಚಕ್ರ ಫಿಲಂಸ್ ಲಾಂಛನದಲ್ಲಿ ನಿರ್ಮಾಣ ಮಾಡಿದ್ದಾರೆ. ’ಕೆಜಿಎಫ್’ ’ಸಲಾರ್’ ಮುಂತಾದ ಹಿಟ್ ಸಿನಿಮಾಗಳಿಗೆ ಹಾಡುಗಳನ್ನು ಬರೆದಿರುವ ಕಿನ್ನಾಳ್ರಾಜ್ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಆಡಿಯೋ ಹಕ್ಕುಗಳನ್ನು ’ಮಾಳು ನಿಪ್ನಾಳ್ ಮ್ಯೂಸಿಕ್ ಸಂಸ್ಥೆ’ಯು ಅಧಿಕ ಬೆಲೆ ನೀಡಿ ಖರೀದಿ ಮಾಡಿರುವುದು ಸಿನಿಮಾಕ್ಕೆ ಸಿಕ್ಕ ಮೊದಲ ಗೆಲುವು ಆಗಿದೆಯಂತೆ. ....
*"#ಪಾರು ಪಾರ್ವತಿ" ಚಿತ್ರದ ಹಾಡುಗಳು ಎಲ್ಲರ ಮನಸ್ಸಿಗೆ ಹತ್ತಿರವಾಗಲಿದೆ. ಲಹರಿ ವೇಲು* . *ಇದು ಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್ ಆಭಿನಯದ ಚಿತ್ರ** . EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ "ಬಿಗ್ ಬಾಸ್" ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ "#ಪಾರು ಪಾರ್ವತಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು. ಲಹರಿ ವೇಲು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಲಹರಿ ವೇಲು ಹಾಗೂ ಚಿತ್ರತಂಡದ ಸದಸ್ಯರು ಸೇರಿ ವಿನೂತನ ಶೈಲಿಯಲ್ಲಿ ಹಾಡುಗಳನ್ನು ಲೋಕಾರ್ಪಣೆ ಮಾಡಿದ್ದು ....
ಸಸ್ಪೆನ್ಸ್ ಥ್ರಿಲ್ಲರ್ ಕಥೆಯ ಸುತ್ತ "ವೃತ್ತ" ಸಿನಿಮಾ ಹೊಸಬರ ಕಥೆಗೆ ಇಂಪ್ರೆಸ್ ಆಗಿ ಪ್ರಸೆಂಟ್ ಮಾಡಲು ಬಂದ ನಿನಾಸಂ ಸತೀಶ್ ಕನ್ನಡಕ್ಕೆ ಭರವಸೆಯ ಮತ್ತೊಂದು ಸಿನಿಮಾ ವೃತ್ತ ಪ್ರತಿ ದಿನ ಹೊಸ ಸಿನಿಮಾ ಸೆಟ್ಟೇರೋದು ಟ್ರೇಲರ್ ಟೀಸರ್ ಬಿಡುಗಡೆ ಆಗೋದು ಹೊಸತೇನಲ್ಲ... ಆದರೆ ಬಿಡುಗಡೆ ಆದ ಕೆಲವೇ ಕೆಲವು ಸಿನಿಮಾ ಟೀಸರ್ ಗಳು ಪ್ರೇಕ್ಷಕರ ಗಮನ ಸೆಳೆಯುತ್ತವೆ..ಸದ್ಯ ಈಗ ಸಿನಿ ಪ್ರೇಮಿಗಳ ಗಮನ ಸೆಳೆದಿರುವ ಟೀಸರ್ ವೃತ್ತ . ವೃತ್ತ ಅಂದ ತಕ್ಷಣ ಒಂದು ಸರ್ಕಲ್ ನಲ್ಲಿ ನಡೆಯೋ ಸ್ಟೋರಿ ಇರಬೇಕು ಅನ್ನೋದು ಮೊದಲಿಗೆ ಅನ್ನಿಸುತ್ತೆ ಆದ್ರೆ ಈ ವೃತ್ತ ಸಿನಿಮಾದ ಕಾನ್ಸೆಪ್ಟ್ ಬೇರೆ .. ಸಿನಿಮಾ ಕಂಪ್ಲೀಟ್ ಮಾಡಿ ಟೀಸರ್ ಬಿಡುಗಡೆ ಮಾಡಿರೋ ....
*"ಜಾಲಿವುಡ್" ಗೆ ಒಂದು ವರುಷ* . *ತಂಡದಲ್ಲಿ ಮನೆ ಮಾಡಿದೆ ಹರುಷ* . ಕಳೆದ ವರ್ಷ ಅದ್ದೂರಿಯಾಗಿ ಆರಂಭವಾದ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ಯಶಸ್ವಿಯಾಗಿ ಒಂದು ವರ್ಷ ಪೂರೈಸಿ, ಎರಡನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಜಾಲಿವುಡ್ ನಲ್ಲಿ ಮೊದಲ ವಾರ್ಷಿಕೋತ್ಸವ ಮತ್ತು ದಸರಾ ಸಂಭ್ರಮ ಅದ್ದೂರಿಯಾಗಿ ನೆರವೇರಿತು. ವೇಲ್ಸ್ ಗ್ರೂಪ್ ಆಫ್ ಕಂಪನಿ ಮಾಲೀಕತ್ವದಲ್ಲಿ ಜಾಲಿವುಡ್ ಸ್ಟುಡಿಯೋ ತಮಿಳಿನಲ್ಲಿ 15 ಸಿನಿಮಾ ನಿರ್ಮಾಣ ಮಾಡಿದೆ. ಶಿಕ್ಷಣ ಮತ್ತು ಮನರಂಜನೆಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿದೆ. ಹಲವು ಕ್ಷೇತ್ರಗಳಲ್ಲಿ ಗಮನ ಹರಿಸಿದೆ. ಡಾ. ಐಸಿರಿ ಕೆ ಗಣೇಶ್ ಅವರು ಜಾಲಿವುಡ್ ಸ್ಟುಡಿಯೋ ಸಾರಥ್ಯದಲ್ಲಿ ನಡೆದುಕೊಂಡು ಬರುತ್ತಿದೆ. ....
**ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ "ಮಾರ್ಟಿನ್" ಚಿತ್ರ ಅಕ್ಟೋಬರ್ 11 ರಂದು ತೆರೆಗೆ* . *ಬಿಡುಗಡೆಗೂ ಮುನ್ನ ಸಾಲುಸಾಲು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಚಿತ್ರತಂಡ* .* ಉದಯ್ ಕೆ ಮೆಹ್ತಾ ನಿರ್ಮಾಣದ, ಎ.ಪಿ.ಅರ್ಜುನ್ ನಿರ್ದೇಶನದ ಹಾಗೂ ಧ್ರುವ ಸರ್ಜಾ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಮಾರ್ಟಿನ್" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಬಹು ನಿರೀಕ್ಷಿತ ಈ ಪ್ಯಾನ್ ಇಂಡಿಯಾ ಚಿತ್ರ ಅಕ್ಟೋಬರ್ 11ರಂದು ತೆರೆಗೆ ಬರಲಿದೆ. ಬಿಡುಗಡೆಗೂ ಮುನ್ನ ಚಿತ್ರತಂಡ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ....