Hagga.Film News

Sunday, September 15, 2024

  *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಅನು ಪ್ರಭಾಕರ್ ಅಭಿನಯದ "ಹಗ್ಗ" ಚಿತ್ರ ಈ ವಾರ ತೆರೆಗೆ* .   ಅನು ಪ್ರಭಾಕರ್ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ 25 ವರ್ಷಗಳನ್ನು ಪೂರೈಸಿದ್ದಾರೆ. ಅನು ಪ್ರಭಾಕರ್ ನಾಯಕಿಯಾಗಿ ಅಭಿನಯಿಸಿದ ಮೊದಲ ಚಿತ್ರ ‘ಹೃದಯ ಹೃದಯ’, 1999ರ ಸೆಪ್ಟೆಂಬರ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಆ ಚಿತ್ರದ ಮೂಲಕ ವೃತ್ತಿ ಜೀವನ ಪ್ರಾರಂಭಿಸಿದ ಅವರು, ಈ 25 ವರ್ಷಗಳಲ್ಲಿ 80ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅಂದಹಾಗೆ, ಅನು ಪ್ರಭಾಕರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಹಗ್ಗ’ ಚಿತ್ರವು ಸೆಪ್ಟೆಂಬರ್ 20ರಂದು ಬಿಡುಗಡೆಯಾಗುತ್ತಿದೆ. ಅನು ಅಭಿನಯದ ಮೊದಲ ಚಿತ್ರ ಬಿಡುಗಡೆಯಾದ ದಿನವೇ ‘ಹಗ್ಗ’ ಚಿತ್ರದ ....

91

Read More...

Naa Ninna Bidalare.News

Saturday, September 14, 2024

  "ನಾ ನಿನ್ನ ಬಿಡಲಾರೆ" ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ಶರಣ್.     ಬೆಳ್ಳಿ ಪರದೆಗೆ ಮತ್ತೊಂದು ಹೊಸ ತಂಡ ಒಂದು ವಿಭಿನ್ನ ಪ್ರಯತ್ನದ ಚಿತ್ರದ ಮೂಲಕ ಚಿತ್ರ ಪ್ರೇಮಿಗಳನ್ನು ಸೆಳೆಯಲು ಮುಂದಾಗಿದೆ. ಗುಲ್ಬರ್ಗ ಮೂಲದ ಯುವ ಪ್ರತಿಭೆ ಅಂಬಾಲಿ ಭಾರತಿ ನಾಯಕಿಯಾಗಿ ನಟಿಸುವ ಮೂಲಕ ಅವರ ತಾಯಿ ಶ್ರೀಮತಿ ಭಾರತಿ ಬಾಳಿ ನಿರ್ಮಾಣದಲ್ಲಿ ಮೂಡಿ ಬರುತ್ತಿರುವಂತಹ ಚಿತ್ರ "ನಾ ನಿನ್ನ ಬಿಡಲಾರೆ". ಇತ್ತೀಚೆಗೆ ಈ ಚಿತ್ರದ ಟೀಸರ್ ಅನ್ನು ನಟ ಶರಣ್  ಬಿಡುಗಡೆ ಮಾಡಿ ಹೊಸ ತಂಡಕ್ಕೆ ಸಾಥ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶರಣ್ ಈ ಚಿತ್ರದ ನಟಿ , ನಿರ್ಮಾಪಕಿ ಭಾರತಿ ರವರ ಶ್ರಮಕ್ಕೆ ತಕ್ಕ ಚಿತ್ರ ಇದಾಗಿದೆ. ಬಹಳ ಸೌಮ್ಯ  ಸ್ವಭಾವವಿದ್ದರೂ ಆಸಕ್ತಿ , ಗುರಿ, ಶ್ರಮ ....

111

Read More...

Rummy Atta.News

Monday, September 16, 2024

  ರಮ್ಮಿ ಆಟ ಹಾಡು -ಟ್ರೈಲರ್ ಬಿಡುಗಡೆ      ವಿದ್ಯಾಸಂಸ್ಥೆಯನ್ನು ನಡೆಸುತ್ತಿರುವ ಉಮರ್ ಷರೀಫ್ ಅವರೀಗ ಚಿತ್ರರಂಗಕ್ಕೆ ಬಂದಿದ್ದಾರೆ‌. ಆನ್ ಲೈನ್ ಗೇಮ್ ಈಗಿನ‌ ಯುವ ಜನತೆಯನ್ನು ಹೇಗೆ ಹಾಳು ಮಾಡುತ್ತಿದೆ. ಅದರಿಂದ ಏನೆಲ್ಲ ಅನಾಹುತಗಳಾಗುತ್ತಿವೆ ಎಂಬ ಕಾನ್ಸೆಪ್ಟ್ ಇಟ್ಟುಕೊಂಡು "ರಮ್ಮಿ ಆಟ" ಎಂಬ  ಚಿತ್ರವನ್ನು ನಿರ್ಮಿಸಿದ್ದಾರೆ. ಅಲ್ಲದೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು  ಆಕ್ಷನ್ ಕಟ್ ಹೇಳಿದ್ದಾರೆ.  ರಮ್ಮಿ ಗೇಮ್ ನಂಥ ಆಟಗಳ ಚಟಕ್ಕೆ  ಕೆಲವರು ತಮ್ಮ ಮನೆ ಮಠ ಕಳೆದುಕೊಂಡು  ಜೀವನವನ್ನೇ ಸರ್ವನಾಶ ಮಾಡಿಕೊಂಡಿದ್ದಾರೆ. ಹಣದಾಸೆಗೆ ಬಿದ್ದು  ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಆನ್ ಲೈನ್ ರಮ್ಮಿ ಆಡುವುದರಿಂದ ಏನೇನು  ತೊಂದರೆಗಳಾಗುತ್ತವೆ, ಜನ ....

710

Read More...

Gangs Of UK.News

Monday, September 16, 2024

  ಪ್ರವರದೊಂದಿಗೆ ಪ್ರಾರಂಭವಾದ     " ಗ್ಯಾಂಗ್ಸ್ ಆಫ್ ಯುಕೆ "        ಡೆಡ್ಲಿ ಸೋಮ, ಮಾದೇಶ, ದಶಮುಖ ಹೀಗೆ ಬಹುತೇಕ ಸ್ಟಾರ್ ಚಿತ್ರಗಳನ್ನೇ ನಿರ್ದೇಶಿಸಿದ ರವಿ ಶ್ರೀವತ್ಸ ಅವರೀಗ ತಮ್ಮದೇ ಆದ ಹೊಸ ನಿರ್ಮಾಣ ಸಂಸ್ಥೆಯೊದನ್ನು ಸ್ಥಾಪಿಸಿದ್ದು,  ಆ ಮೂಲಕ ನಿರ್ಮಾಣವಾಗುತ್ತಿರುವ ’ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.     ಇತ್ತೀಚೆಗೆ ರವಿ ಶ್ರೀವತ್ಸ ಅವರ ’ಡೆಡ್ಲಿ ಆರ್ಟ್ಸ್’ ಸಂಸ್ಥೆಯ ಲಾಂಛನ ಬಿಡುಗಡೆ ಹಾಗೂ ಗ್ಯಾಂಗ್ಸ್ ಆಫ್ ಯುಕೆ ಚಿತ್ರದ ಪತ್ರಿಕಾಗೋಷ್ಠಿ ನಡೆಯಿತು. ನಿರ್ದೇಶಕ ಕೆವಿ.ರಾಜು ಅವರ ಧರ್ಮಪತ್ನಿ ನೂತನ ನಿರ್ಮಾಣ ಸಂಸ್ಥೆಯ ಲಾಂಛನಕ್ಕೆ ಚಾಲನೆ ನೀಡಿದರು. ಕನ್ನಡದ ....

194

Read More...

Gagana Kusuma.News

Saturday, September 14, 2024

 

ಗಗನ ಕುಸುಮ ಹಾಡುಗಳ ಬಿಡುಗಡೆ

 

’ಗಗನ ಕುಸುಮ’ ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಬಿಡುಗಡೆಗೊಂಡಿತು. ಹಿರಿಯ ನಿರ್ಮಾಪಕ ಮತ್ತು ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಎಸ್.ಎ.ಚಿನ್ನೆಗೌಡ ಕಾರ್ಯಕ್ರಮಕ್ಕೆ ಚಾಲನ ನೀಡಿದರು. ನಂತರ ಮಾತನಾಡುತ್ತಾ ನಿರ್ಮಾಪಕ ಹುಟ್ಟಿಕೊಂಡರೆ ನೂರಾರು ಜನರಿಗೆ ಕೆಲಸ ಸಿಗುತ್ತದೆ. ಮೊದಲು ಅವರು ಉಳಿಯಬೇಕು. ಟೈಟಲ್ ಚೆನ್ನಾಗಿದೆ. ಸಿನಿಮಾವು ಯಶಸ್ಸು ಗಳಿಸಲಿ ಅಂತ ಶುಭ ಹಾರೈಸಿದರು.

211

Read More...

Jaunty S/O Jayaraj.News

Friday, September 13, 2024

  ಜಾಂಟಿ ಸನ್ ಆಫ್ ಜಯರಾಜ್ ಟೀಸರ್ ಬಿಡುಗಡೆ          ’ಜಾಂಟಿ ಸನ್ ಆಫ್ ಜಯರಾಜ್’ ಚಿತ್ರದ ಪಾತ್ರಗಳ ಪರಿಚಯದ ಟೀಸರ್ ಹಾಗೂ ಟ್ರೈಲರ್ ಬಿಡುಗಡೆ ಸಮಾರಂಭವು ನಡೆಯಿತು. ನಟಿ ವಿನೋಧ್ ಪ್ರಭಾಕರ್ ಮತ್ತು ಶ್ರೀನಗರ ಕಿಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಚಿತ್ರರಂಗದಲ್ಲಿ ಎರಡು ದಶಕಗಳ ಕಾಲ ಪ್ರಚಾರ ಕಾರ್ಯದಲ್ಲಿ ಅನುಭವ ಹೊಂದಿರುವ ಸುಗೂರುಕುಮಾರ್ ಪ್ರಥಮ ಅನುಭವ ಎನ್ನುವಂತೆ ನಿರ್ಮಾಣ ಮಾಡಿದ್ದಾರೆ.          ಕತೆ ಬರೆದು ನಿರ್ದೇಶನ ಮಾಡಿರುವ ಆನಂದರಾಜ್ ಮಾತನಾಡಿ ಜಯರಾಜ್ ನಂತರದ ದಿನಗಳ ಸಂದರ್ಭದಲ್ಲಿ ಹಣಕಾಸು ವ್ಯವಹಾರ, ಮಾರ್ಕೆಟ್ ದಂಧೆ ಎಲ್ಲವು ರಾರಾಜಿಸುತ್ತಿತ್ತು. ಇಂತಹ ವಿಷಯಗಳನ್ನು ಕೇಳಿದ್ದು, ನೋಡಿದ್ದು, ....

94

Read More...

Thaayine Devara.News

Thursday, September 12, 2024

  ಬಾಬಾನ ಸನ್ನಿಧಿಯಲ್ಲಿ ತಾಯಿನೇ ದೇವರ? ಮುಹೂರ್ತ          ಪ್ರಪಂಚದಲ್ಲಿ ತಾಯಿಯನ್ನು ದೇವರಿಗೆ ಹೋಲಿಸುತ್ತಾರೆ. ಅಂತಹುದೇ ಅಂಶಗಳನ್ನು ಹೆಕ್ಕಿಕೊಂಡು ’ತಾಯಿನೇ ದೇವರ?’ ಚಿತ್ರವೊಂದು ಸೆಟ್ಟೇರಿದೆ. ಶುಭ ಗುರುವಾರದಂದು ಮಾಗಡಿ ರಸ್ತೆ ಲಕ್ಷೀಪುರದಲ್ಲಿರುವ ’ದಕ್ಷಿಣ ಶಿರಡಿ ಶ್ರೀ ಸಾಯಿ ಮಂದಿರ’ದಲ್ಲಿ ಅದ್ದೂರಿಯಾಗಿ ಮುಹೂರ್ತ ಸಮಾರಂಭ ನಡೆಯಿತು. ಪೂಜೆ ನಂತರ ತಂಡವು ಮಾಹಿತಿಗಳನ್ನು ಹಂಚಿಕೊಂಡಿತು.            ಡಾ.ಸಾಯಿ ಸತೀಶ್ ತೋಟಯ್ಯ ಮಾತನಾಡಿ, ಸಿನಿಮಾರಂಗದಲ್ಲಿ ಹದಿನಾರು ವರ್ಷ ಅನುಭವ ಹೊಂದಿದ್ದೇನೆ. ಸಿನಿಮಾಕ್ಕೆ ರಚನೆ,ಚಿತ್ರಕಥೆ ಬರೆದು ಶ್ರೀ ಸಾಯಿಶಕ್ತಿ ಸಿನಿ ಕಂಬೈನ್ಸ್ ಹೆಸರಿನಲ್ಲಿ ನಿರ್ಮಾಣ ಮಾಡುತ್ತಿದ್ದೇನೆ. ....

174

Read More...

Ninde Kathe.News

Sunday, September 15, 2024

  *ಚಿತ್ರೀಕರಣ ಮುಗಿಸಿದ ನಿಮ್ದೆ ಕಥೆ*   ಕನ್ನಡ ಚಿತ್ರರಂಗದಲ್ಲಿ ಹೊಸಬರ ಸಿನಿಮಾದ ಪಟ್ಟಿಯಲ್ಲಿ ಈಗ ನಿಮ್ದೆ ಕಥೆ ಎನ್ನುವ ಚಿತ್ರವು ಸೇರಿದೆ, Love Moktail ಖ್ಯಾತಿಯ ಅಭಿಲಾಷ ಧಳಪತಿ ಮತ್ತು ರಾಷಿಕಾ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿ ಜೊತೆಗೆ ಸಿಹಿ ಕಹಿ ಚಂದ್ರು, ಕಾಮಿಡಿ ಕಿಲಾಡಿಯ  ಕೋಳಿ ಕಳ್ಳ ಮನೋಹರ್ ಗೌಡ, ಕೆ ವಿ ಮಂಜಯ್ಯ, ಜ್ಯೋತಿ ಮರೂರ್ ಹಾಗೂ ಮುಂತಾದವರು ಈ ಚಿತ್ರದಲ್ಲಿ ನಟಿಸಿದಾರೆ.     ಶ್ರೀನಿವಾಸ ರೆಡ್ಡಿ ಮತ್ತು ಅರವಿಂದ್ ಯು ಎಸ್ ಜಂಟಿಯಾಗಿ ನಿಮ್ದೆ ಕಥೆ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ, ಸಿ ಎಸ್ ರಾಘವೇಂದ್ರ ಅವರು ನಿಮ್ದೆ ಕಥೆ ಚಿತ್ರದ ನಿರ್ದೇಶಕರು, ಪ್ರವೀಣ್ ನಿಕೇತನ್ ಅವರ ಸಂಗೀತ ಸಂಯೋಜನೆ, ಪ್ರಶಾಂತ್ ಸಾಗರ್ ಅವರ ಛಾಯಾಗ್ರಹಣವಿದ್ದು, ಸುನಿಲ್ ಎಸ್ ....

91

Read More...

Mantrika.Film News

Saturday, September 14, 2024

  "ಮಾಂತ್ರಿಕ"ನ ಟೀಸರ್  ಆತ್ಮಗಳನ್ನು  ಹುಡುಕಾಟದ ಸುತ್ತ...      ಜಗತ್ತಿನಲ್ಲಿ ದೆವ್ವ, ಭೂತಗಳು ಇದೆಯೋ ಇಲ್ಲವೊ ಗೊತ್ತಿಲ್ಲ. ಆದರೆ ಅವುಗಳ ಸತ್ಯಾಸತ್ಯತೆಯ ಹುಡುಕಾಟ ಮಾತ್ರ ನಡೆದೇ ಇದೆ. ಅಂಥದೇ ಒಂದು ಹುಡುಕಾಟದ ಪ್ರಯತ್ನದಲ್ಲಿ ಹೊರಬಂದ ಚಿತ್ರವೇ ಮಾಂತ್ರಿಕ. ಐಟಿ ಹಿನ್ನೆಲೆಯಿಂದ ಬಂದ ವ್ಯಾನವರ್ಣ ಜಮ್ಮುಲ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಸಹ ಕಾಣಿಸಿಕೊಂಡಿದ್ದಾರೆ, ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.      ಘೋಸ್ಟ್ ಹಂಟರ್(ಆತ್ಮಗಳನ್ನು ಪತ್ತೆಹಚ್ಚುವವ) ಸುತ್ತ ನಡೆಯುವ ಇಂಟಲೆಕ್ಚುಯಲ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಈ ....

97

Read More...

Ranaksh.Film News

Saturday, September 14, 2024

  ಟ್ರೈಲರ್ ನಲ್ಲಿ "ರಣಾಕ್ಷ"ನ ಝಲಕ್!  ದೇವರು- ದೆವ್ವದ ನಡುವಿನ ಸಂಘರ್ಷದ ಕಥೆ     ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು ನಾಯಕನಾಗಿ ನಟಿಸಿರುವ,  ದೇವರು, ದೆವ್ವದ ನಡುವಿನ ಸಂಘರ್ಷದ ಸುತ್ತ ನಡೆಯೋ  ಸಸ್ಪೆನ್ಸ್ , ಥ್ರಿಲ್ಲರ್  ಜಾನರ್ ಚಿತ್ರ "ರಣಾಕ್ಷ". ಕೆ.ರಾಘವ ಅವರ ನಿರ್ದೇಶನವಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು‌.     ಈ ಸಂದರ್ಭದಲ್ಲಿ ನಿರ್ಮಾಪಕ ರಾಮು  ಮಾತನಾಡುತ್ತಾ 6ರಿಂದ  80 ವರ್ಷದವರೂ ಕೂತು ನೋಡುವಂಥ, ಹಳ್ಳಿ ಸೊಗಡಿನ ಕೌಟುಂಬಿಕ  ಕಥಾನಕ ಇರೋ ಚಿತ್ರವಿದು.  ಸಿನಿಮಾ ನೋಡಿ ನೀವೆಲ್ಲ‌ ಗೆಲ್ಲಿಸಿದರೆ, ವರ್ಷಕ್ಕೆ ಒಂದೆರಡು ಸಿನಿಮಾ ಮಾಡುವ ಆಸೆಯಿದೆ. ಕುಚುಕು ಸ್ನೇಹಿತ ಉಮಾಮಹೇಶ್ವರ ....

82

Read More...

Asali Banna.Ramp Song.News

Friday, September 13, 2024

  ಬ್ಯಾಡ್ ಕಾಮೆಂಟ್ ಮಾಡೋರ "ಅಸಲಿ ಬಣ್ಣ" ಕಳಚಿದ ಇಶಾನಿ    ಹಿಪಾಪ್ ಸಾಂಗ್ ಮೂಲಕ ಟಾಂಗ್ ಕೊಟ್ಟ ಇಶಾನಿ   ಬಿಗ್ ಬಾಸ್ ಖ್ಯಾತಿಯ ಇಶಾನಿ ಅಭಿನಯದ ಅಸಲಿ ಬಣ್ಣ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.  ಕನ್ನಡದಲ್ಲಿ ಮಹಿಳೆಯರ ಹಿಪಾಪ್ ಸಾಂಗ್ ಎಂದರೆ ನೆನಪಿಗೆ ಬರೋದು ಇಶಾನಿ.  ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿರುವ ಇವರ ಪೋಸ್ಟ್ ಗಳಿಗೆ ಕೆಲವರು ಕೆಟ್ಟದಾಗಿ ಕಮೆಂಟ್ ಮಾಡುತ್ತಾರೆ‌. ಯುವತಿಯರು ಮಾಡ್ರನ್ ಡ್ರೆಸ್ ಹಾಕೋದು, ಬೋಲ್ಡ್ ಆಗಿರುವುದು ತಪ್ಪೇ, ನನ್ನ ಇಷ್ಟದಂತೆ  ನಾನಿರೋದನ್ನು ಯಾಕೆ ಸಹಿಸಲ್ಲ ಎನ್ನುವುದು ಇವರ ಪ್ರಶ್ನೆ. ಅಂಥವರಿಗೆ ಅಸಲಿ ಬಣ್ಣ ಎಂಬ ಈ ಹಿಪಪ್ ಸಾಂಗ್ ಮೂಲಕ ಇಶಾನಿ ತಿರುಗೇಟು ಕೊಟ್ಟಿದ್ದಾರೆ.   ....

84

Read More...

Vaibhoga.Film News

Thursday, September 12, 2024

  “ವೈಬೋಗ” ಟೈಟಲ್ ಲಾಂಚ್   ಯು ಟರ್ನ್-2 ಚಂದ್ರು ಓಬಯ್ಯ ಹೊಸ ಚಿತ್ರ       ಯೂ ಟರ್ನ್-2, ರಾಮು ಅಂಡ್ ರಾಮು ಹಾಗೂ ಕರಿಮಣಿ ಮಾಲೀಕ ಚಿತ್ರಗಳ ನಂತರ ನಿರ್ದೇಶಕ  ಚಂದ್ರು ಓಬಯ್ಯ ಇದೀಗ ನಾಲ್ಕನೇ ಚಿತ್ರವನ್ನು  ಕೈಗೆತ್ತಿಕೊಂಡಿದ್ದಾರೆ. ಅದುವೇ “ವೈಭೋಗ”.    ಚಿತ್ರದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ’ಯೌವ್ವನದಲ್ಲಿ ಹುಟ್ಟೋ ಪ್ರೀತಿಗೋಸ್ಕರ ಹೆತ್ತವರನ್ನು ಮರೀಬೇಡ’ ಎಂಬ ಟ್ಯಾಗ್ ಲೈನ್ ಹೊಂದಿರುವ ಈ ಚಿತ್ರವನ್ನು ಡಾ.ಚೇತನ್ ನಿಂಗೇಗೌಡ ಅವರು ನಿರ್ಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರು ಓಬಯ್ಯ, ವೈಭೋಗ, ಒಂದು ಕಮರ್ಷಿಯಲ್ ಸಿನಿಮಾ, ಯೌವ್ವನಲ್ಲಿ ಹುಟ್ಟುವ ಪ್ರೀತಿಗೋಸ್ಕರ ಹೆತ್ತವರ ಮರಿಬೇಡ,  ....

85

Read More...

Tarakeshwara.News

Wednesday, September 11, 2024

  ತಾರಕೇಶ್ವರ ಹಾಡುಗಳ ಬಿಡುಗಡೆ          ಭಕ್ತಿ ಪ್ರಧಾನ ’ತಾರಕೇಶ್ವರ’ ಚಿತ್ರದ ಸಮಾರಂಭವು ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಸಂಸ್ಥೆಯ ನಾಮಫಲಕವನ್ನು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಇದರ ಬೆನ್ನಲ್ಲೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಶೀರ್ಷಿಕೆ ಅನಾವರಣಗೊಳಿಸಿದರೆ, ಸಿರಿ ಮ್ಯೂಸಿಕ್ ಸಂಸ್ಥೆಯು ಹೊರತಂದಿರುವ ಹಾಡುಗಳ ಪೈಕಿ, ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಟೈಟಲ್ ಸಾಂಗ್‌ಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಟೆಲಿವಿಷನ್ ಸಂಘದ ಅಧ್ಯಕ್ಷ ರವಿ.ಆರ್.ಗರಣಿ, ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ‍್ಕೆ ವಿಶ್ವನಾಥ್ ....

91

Read More...

Ronny.Film News

Sunday, September 08, 2024

  *ಟೈಟಲ್ ಸಾಂಗ್ ನಲ್ಲೇ ಮೋಡಿ ಮಾಡಿದ  ‘ರಾನಿ* ’* .     *ಕಿರಣ್ ರಾಜ್ ಅಭಿನಯದ ಈ ಚಿತ್ರ ಸೆಪ್ಟೆಂಬರ್ 12 ರಂದು ತೆರೆಗೆ* .   ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ನಾಯಕನಾಗಿ ನಟಿಸಿರುವ "ರಾನಿ" ಚಿತ್ರದ ಟೈಟಲ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಚಿತ್ರಲೇಖಕ ಜೆ.ಕೆ.ಭಾರವಿ ಪ್ರಮೋದ್ ಮರವಂತೆ ಬರೆದು, ಸಚಿನ್ ಬಸ್ರೂರ್ ಸಂಗೀತ ನೀಡಿರುವ "ರಾನಿ" ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಗುರುತೇಜ್ ಶೆಟ್ಟಿ ನಿರ್ದೇಶನದ ಹಾಗೂ ಸ್ಟಾರ್ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರ ಸೆಪ್ಟೆಂಬರ್ 12 ಗುರುವಾರ ಬಿಡುಗಡೆಯಾಗಲಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ....

101

Read More...

Vikaasaparva.News

Tuesday, September 10, 2024

  ರಾಜ್ಯಾದ್ಯಂತ ವಿಕಾಸ ಪರ್ವಕ್ಕೆ   ಚಿತ್ರತಂಡಕ್ಕೆ ಅದ್ಭುತ ಪ್ರತಿಕ್ರಿಯೆ    ಸೆ.13ರಂದು ಬಿಡುಗಡೆಯಾಗಲಿದೆ ಫ್ಯಾಮಿಲಿ ಥ್ರಿಲ್ಲರ್ ಸಿನಿಮಾ !      ಚಿತ್ರರಂಗದಲ್ಲಿ 22 ವರ್ಷಗಳಿಂದ ಕನ್ನಡ, ತೆಲುಗು ಸೇರಿದಂತೆ  35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ, ಕಿರುತೆರೆಯ 65 ಸೀರಿಯಲ್ ಗಳಲ್ಲಿ  ಬಣ್ಣ ಹಚ್ಚಿರುವ  ನಟ ರೋಹಿತ್ ನಾಗೇಶ್ ಹಾಗೂ ಸ್ವಾತಿ ನಾಯಕ, ನಾಯಕಿಯಾಗಿ ನಟಿಸಿರೋ ಚಿತ್ರ ವಿಕಾಸ ಪರ್ವ ಸೆ.13 ರಂದು ರಾಜ್ಯಾದ್ಯಂತ ನೂರಕ್ಕೂ ಹೆಚ್ಚು  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ  ವಿಶೃತ್ ನಾಯಕ್ ಕಥೆ, ಚಿತ್ರಕಥೆ, ಸಂಭಾಷಣೆ ರಚಿಸಿರುವ ಈ ಚಿತ್ರಕ್ಕೆ ಅನ್ಬು ಅರಸ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಾಮಾಜಿಕ ಕಳಕಳಿಯುಳ್ಳ ಕಥಾಹಂದರ  ಈ ....

102

Read More...

Paru Parvathy.News

Monday, September 02, 2024

  " *#ಪಾರು ಪಾರ್ವತಿ" ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್* .         *ಪಿ.ಬಿ.ಪ್ರೇಮನಾಥ್ ನಿರ್ಮಾಣದ ಈ ಚಿತ್ರಕ್ಕೆ ರೋಹಿತ್ ಕೀರ್ತಿ ನಿರ್ದೇಶನ*   EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಮನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ "ಬಿಗ್ ಬಾಸ್" ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ "#ಪಾರು ಪಾರ್ವತಿ" ಚಿತ್ರದ ಶೀರ್ಷಿಕೆ ಅನಾವರಣ ಹಾಗೂ EIGHTEEN THIRTY SIX ಪಿಕ್ಚರ್ಸ್ ನಿರ್ಮಾಣ ಸಂಸ್ಥೆ ಉದ್ಘಾಟನೆ ಇತ್ತೀಚೆಗೆ ನೆರವೇರಿತು. ಆನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.     ಮೊದಲು ಮಾತನಾಡಿದ ನಿರ್ಮಾಪಕ ....

113

Read More...

1990's Film.News

Saturday, August 31, 2024

  *ಐದು ಭಾಷೆಗಳಲ್ಲಿ ಬರಲಿದೆ "1990 s" ಪ್ರೇಮಕಥೆ* .        *ಏಕಕಾಲಕ್ಕೆ ಬಿಡುಗಡೆಯಾಯಿತು ನಾಲ್ಕು ಭಾಷೆಗಳ ಟೀಸರ್* .       ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ಅಭಿನಯದ "1990s" ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಲಹರಿ ವೇಲು ಸೇರಿದಂತೆ ಅನೇಕ ಗಣ್ಯರು ನಾಲ್ಕು ಭಾಷೆಗಳ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ಹಿಂದಿ ಟೀಸರ್ ತಾಂತ್ರಿಕ ಕಾರಣದಿಂದ ಇಂದು ಬಿಡುಗಡೆಯಾಗಲಿಲ್ಲ. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ನಿರ್ದೇಶಕನಾಗಿ ಇದು ಚೊಚ್ಚಲ ಚಿತ್ರ. ಈ ಚಿತ್ರ ಆಗಲು ....

112

Read More...

Chakna.Film News

Saturday, August 31, 2024

ಸತ್ಯ ಘಟನೆಗಳ ಚಾಕ್ನ       ಚಂದನವನದಲ್ಲಿ ಪ್ರಸಕ್ತ ಸತ್ಯ ಘಟನೆಗಳ ಸಿನಿಮಾಗಳನ್ನು ಜನರು ಇಷ್ಟಪಡುತ್ತಿರುವುದರಿಂದ ಅಂತಹುದೆ ಕಥೆಗಳು ತೆರೆ ಮೇಲೆ ಬರುತ್ತಿವೆ.  ಆ ಸಾಲಿಗೆ ‘ಚಾಕ್ನ’ ಚಿತ್ರ ಸೇರ್ಪಡೆಯಾಗಿದೆ. ‘ಬೂದಿಯೊಳಗಿನ ಕೆಂಡಗಳ ಕಥೆ’ ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ. ಆರ್‌ಆರ್ ಕಂಬೈನ್ಸ್ ಅಡಿಯಲ್ಲಿ ವಿಮಲಾ ನಿರ್ಮಾಣ ಮಾಡುತ್ತಿದ್ದಾರೆ. ತಮಿಳಿನಲ್ಲಿ ಐದು ಚಿತ್ರಗಳ ನಿರ್ದೇಶನ, ‘ಜನಕ’ದಲ್ಲಿ ಖಳನಾಗಿ ಅಭಿನಯಿಸಿರುವ ಕನ್ನಡಿಗ ಕೆ.ಪಳನಿ ರಚನೆ,ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ.        ಪ್ರಚಾರದ ಮೊದಲ ಹಂತವಾಗಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್‌ನ್ನು ‘ಜಂಬದ ಹುಡುಗಿ’ ....

104

Read More...

Majestic 2.Film News

Friday, August 30, 2024

  "ಮೆಜೆಸ್ಟಿಕ್-2" ಚಿತ್ರದಲ್ಲಿ ಮಾಲಾಶ್ರೀ         ಹೀರೋ ಪರಿಚಯದ ಹಾಡಲ್ಲಿ ನಾಯಕನ       ‌ಗುಣಗಾನ ಮಾಡಿದ ಆ್ಯಕ್ಷನ್ ಕ್ವೀನ್         ರಾಮು ಅವರ ನಿರ್ದೇಶನದ ಮೆಜೆಸ್ಟಿಕ್-2 ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯ ಹಂತ ತಲುಪಿದೆ.  ತೊಂಭತ್ತರ ದಶಕದಲ್ಲಿ ರೌಡಿಸಂ ಹೇಗೆ ನಡೆಯುತ್ತಿತ್ತು ಎಂದು ದರ್ಶನ್ ಅಭಿನಯಿಸಿದ್ದ ಚಿತ್ರ ಹೇಳಿದ್ದರೆ, ಈಗಿನ ಮೆಜೆಸ್ಟಿಕ್ ಏರಿಯಾದಲ್ಲಿ ಏನೆಲ್ಲಾ  ಕರಾಳ ದಂಧೆಗಳು, ಅಕ್ರಮ ಚಟುವಟಿಕೆಗಳು  ಅಲ್ಲದೆ ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು  ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯ ಮೂಲಕ  ಮೆಜೆಸ್ಟಿಕ್-2 ಚಿತ್ರದ ಮೂಲಕ ನಿರ್ದೇಶಕ ರಾಮು ಹೇಳಲು ಪ್ರಯತ್ನಿಸಿದ್ದಾರೆ. ಈ ....

104

Read More...

Redrum.Film News

Thursday, August 29, 2024

  *"REDRUM" ಚಿತ್ರದಿಂದ ಬಂತು ರೊಮ್ಯಾಂಟಿಕ್ ಸಾಂಗ್* .    *ಚಿತ್ರದ ಶೀರ್ಷಿಕೆಯನ್ನು ಕನ್ನಡಿಯಲ್ಲಿ ನೋಡಿದರೆ ತಿಳಿಯುತ್ತದೆ ಮತ್ತೊಂದು ಶೀರ್ಷಿಕೆ* .      ಅಶೋಕ್ ದೇವನಾಂಪ್ರಿಯ, ಮೋಹನ್ ರಾಜ್ ಹಾಗೂ ಹನಿ ಚೌಧರಿ ನಿರ್ಮಾಣದ, ಪ್ರಮೋದ್ ಜೋಯಿಸ್ ನಿರ್ದೇಶನದ ಹಾಗೂ ಅಫ್ಜಲ್ ಕಾರ್ಯಕಾರಿ ನಿರ್ಮಾಪಕರಾಗಿರುವ "REDRUM" ಚಿತ್ರದ "ಅನುಪಮ" ಎಂಬ ರೊಮ್ಯಾಂಟಿಕ್ ಸಾಂಗ್ FMD ಆಡಿಯೋ ಮೂಲಕ ಬಿಡುಗಡೆಯಾಗಿದೆ. ನಿರ್ದೇಶಕರೆ ಬರೆದಿರುವ ಈ ಹಾಡನ್ನು "ಸರಿಗಮಪ" ಖ್ಯಾತಿಯ ದರ್ಶನ್ ನಾರಾಯಣ್ ಹಾಡಿದ್ದಾರೆ. ಹಾಡು‌ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.       ಇದು ನನ್ನ ನಿರ್ದೇಶನದ ಎರಡನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಪ್ರಮೋದ್ ಜೋಯಿಸ್, ....

101

Read More...
Copyright@2018 Chitralahari | All Rights Reserved. Photo Journalist K.S. Mokshendra,