Kaalapatthar.News

Wednesday, August 28, 2024

  *ಬಿಡುಗಡೆಯಾಯಿತು ವಿಕ್ಕಿ ವರುಣ್ - ಧನ್ಯಾ ರಾಮಕುಮಾರ್ ಅಭಿನಯದ "ಕಾಲಾಪತ್ಥರ್" ಚಿತ್ರದ "ಬಾಂಡ್ಲಿ ಸ್ಟವ್" ಹಾಡು.* .    *ಪ್ರಮೋದ್ ಮರವಂತೆ ಬರೆದು, ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ* .   ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, "ಕೆಂಡಸಂಪಿಗೆ" ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ "ಕಾಲಾಪತ್ಥರ್" ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದು, ಅನೂಪ್ ಸೀಳಿನ್ ಸಂಗೀತ ನೀಡಿರುವ "ಬಾಂಡ್ಲಿ ಸೌಟ್" ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗೃಹಿಣಿಯರಿಂದಲೇ ಈ ಹಾಡು ಬಿಡುಗಡೆಯಾಗಿದ್ದು ವಿಶೇಷ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ....

106

Read More...

Tadviruddha.News

Wednesday, August 28, 2024

  *ವಾಸ್ತವಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದೆ "ತದ್ವಿರುದ್ಧ"* .    *ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ CHARMION MOTION PICTURES ನಿರ್ಮಾಣದ ಹಾಗೂ ಸುಚೇಂದ್ರ ಪ್ರಸಾದ್, ಸುಮನ್ ರಂಗನಾಥ್, ವಿಕ್ರಮ್ ಅಭಿನಯದ ಈ ಚಿತ್ರ* .     ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಇರುವ ಚಿತ್ರಗಳು ಯಶಸ್ಸು ಕಂಡಿರುವ ಸಾಕಷ್ಟು ಉದಾಹರಣೆಗಳಿದೆ‌. ಅಂತಹುದೇ ವಿಭಿನ್ನ ಕಂಟೆಂಟ್ ವುಳ್ಳ "ತದ್ವಿರುದ್ಧ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು .ಟೀಸರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ‌. ಸ್ವಚ್ಛ ಕನ್ನಡದ ಮಾತಿನಿಂದ ಹಾಗೂ ತಮ್ಮ ಅಮೋಘ ಅಭಿನಯದಿಂದ ಜನಪ್ರಿಯರಾಗಿರುವ ಸುಚೇಂದ್ರ ಪ್ರಸಾದ್, ಹಿರಿಯ ನಟಿ ಸುಮನ್ ರಂಗನಾಥ್ ಹಾಗೂ ವಿಕ್ರಮ್ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ....

110

Read More...

Anna.Film News

Wednesday, August 28, 2024

  ಗೌರಿ ಹಬ್ಬಕ್ಕೆ ಬರಲಿದೆ "ಅನ್ನ"...  ಈಗ ಟ್ರೈಲರ್ ರಿಲೀಸ್       ನಮ್ಮ ನೆಲದ , ಮೂಲ ಸೊಗಡನ್ನ ಬಿಂಬಿಸುವಂತಹ ಚಿತ್ರಗಳು ಬರುವುದು ಬಹಳ ಅಗತ್ಯ. ’ಅನ್ನಂ ಪರಬ್ರಹ್ಮ ಸ್ವರೂಪಂ’  ಹೌದು ಸಾಮಾನ್ಯವಾಗಿ ಒಂದು ಮಾತಿದೆ, ಅನ್ನ ದ ಮಹತ್ವ ಹಸಿದವನಿಗೆ ಮಾತ್ರ ಗೊತ್ತು  ಎನ್ನುವುದು. ಅಂತಹದ್ದೇ ಒಂದು ಅನ್ನದ ವಿಚಾರವನ್ನು ಮೂಲವಾಗಿಟ್ಟುಕೊಂಡು ಗ್ರಾಮೀಣ ಭಾಗದ ಸುತ್ತ ನೈಜಕ್ಕೆ ಹತ್ತಿರವಾಗಿ ಸೆರೆಹಿಡಿದಿರುವಂತಹ "ಅನ್ನ" ಚಿತ್ರದ ಟೈಲರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ  ನೆರವೇರಿತು. ಹಾಗೆಯೇ ಈ ಚಿತ್ರದ ಟೀಸರ್ ಬಿಡುಗಡೆಯನ್ನು ನಿರ್ದೇಶಕ ಯೋಗರಾಜ್ ಭಟ್ ಮೂಲಕ ಮಾಡಿಸಿದ ವಿಡಿಯೋವನ್ನು ಪ್ರದೇಶಿಸಲಾಯಿತ್ತು. ಈ ಚಿತ್ರದ ಕುರಿತು ....

105

Read More...

Survey No 45.News

Wednesday, August 28, 2024

ಅಮ್ಮನ ಸನ್ನಿದಿಯಲ್ಲಿ ಸರ್ವೇ ನಂಬರ್ ೪೫ ಮುಹೂರ್ತ       ಹೊಸಬರೇ ಸೇರಿಕೊಂಡು ಸಿದ್ದಪಡಿಸುತ್ತಿರುವ ‘ಸರ್ವೇ ನಂಬರ್ ೪೫’ ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಬಂಡಿ ಮಹಾಂಕಾಳಿ ಅಮ್ಮನ ಸನ್ನಿದಿಯಲ್ಲಿ ಅದ್ದೂರಿಯಾಗಿ ನಡೆಯಿತು. ಪ್ರಥಮ ದೃಶ್ಯಕ್ಕೆ ಹಿರಿಯ ನಿರ್ದೇಶಕ ಹೆಚ್.ವಾಸು ಕ್ಲಾಪ್ ಮಾಡಿದರೆ, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ಬಣಕಾರ್ ಕ್ಯಾಮಾರ ಆನ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಉಪಸ್ತಿತರಿದ್ದರು. ವರನಂದಿ ಸಿನಿ ಸಂಸ್ಥೆಯು ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ. ಹಿರಿಯ ನಿರ್ದೇಶಕರುಗಳಾದ ಹೆಚ್.ವಾಸು ಮತ್ತು ಕೆ.ರಾಘವ ಅವರಲ್ಲಿ ....

107

Read More...

Love is life.News

Wednesday, August 28, 2024

  "ಲವ್ ಈಸ್ ಲೈಫ್"     ಪ್ರೀತಿಯ ಹೊಸ ಅಧ್ಯಾಯ     ಬಂಡೆ ಮಾಂಕಾಳಮ್ಮ‌ನ ಸನ್ನಿಧಿಯಲ್ಲಿ ಚಾಲನೆ        ಇತ್ತೀಚೆಗಷ್ಟೇ ಮೆಜೆಸ್ಟಿಕ್-೨ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದ ಯುವಟನ ಭರತ್‌ಕುಮಾರ್ ಆ ಚಿತ್ರದ ಶೂಟಿಂಗ್ ಮುಗಿಯುವ ಮೊದಲೇ ಇನ್ನೊಂದು ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಆ ಚಿತ್ರದ ಹೆಸರು ಲವ್ ಈಸ್ ಲೈಫ್. ಭರತ್‌ಕುಮಾರ್, ಮಿಷಲ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು. ಅಂಬಿಗಾ ಕ್ರಿಯೇಶನ್ಸ್ ಮೂಲಕ ಜಿ.ಡಿ. ಸಂತೋಷ್‌ ಕುಮಾರ್ ಹಾಗೂ ಎನ್.ಹನುಮಂತಪ್ಪ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ....

102

Read More...

Karki.Film News

Wednesday, August 21, 2024

  *ಹೊರಬಂತು ‘ಕರ್ಕಿ’ ಟ್ರೇಲರ್*   *ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಸಾರಥ್ಯದಲ್ಲಿ ಮೂಡಿಬಂದ ‘ಕರ್ಕಿ’*   *ಜನಾಂಗೀಯ ಸಂಘರ್ಷದ ನಡುವೆ ಅರಳಿದ ಪ್ರೇಮಕಥೆ*   *ಮಾಸ್ ಕಂಟೆಂಟ್ ಫುಲ್ ಎಂಟರ್ಟೈನ್ಮೆಂಟ್*     ಈಗಾಗಲೇ ತನ್ನ ಟೈಟಲ್ ಮತ್ತು ಫಸ್ಟ್ ಲುಕ್ ಮೂಲಕ ಸಿನಿಮಂದಿಯ ಗಮನ ಸೆಳೆದಿರುವ ‘ಕರ್ಕಿ’ ಸಿನೆಮಾ ತೆರೆಗೆ ಬರಲು ಭರದ ಸಿದ್ದತೆ ನಡೆಸುತ್ತಿದೆ. ಸದ್ಯ ನಿಧಾನವಾಗಿ ‘ಕರ್ಕಿ’ ಸಿನೆಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ ಮೊದಲ ಹಂತದಲ್ಲಿ ಸಿನೆಮಾದ ಟೀಸರ್ ಮತ್ತು ಟ್ರೇಲರ್ ಅನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ‘ಕರ್ಕಿ’ ಸಿನೆಮಾದ ಟೀಸರ್ ಮತ್ತು ಟ್ರೇಲರ್ ಅದ್ಧೂರಿಯಾಗಿ ....

124

Read More...

Brahmarakshasa.News

Saturday, August 24, 2024

  "ಸಂಜೆ ಹೊತ್ನಾಗ ಮೈಪುಳಕ "      ಬ್ರಹ್ಮರಾಕ್ಷಸನ ಐಟಂ ಸಾಂಗ್ ಬಿಡುಗಡೆ       ಕನ್ನಡ ಚಿತ್ರರಂಗದಲ್ಲೀಗ ಹೊಸ ಆಶಾಭಾವನೆ ಮೂಡಿದೆ. ಇತ್ತೀಚೆಗೆ ತೆರೆಕಂಡ ಚಿತ್ರಗಳ ಗೆಲುವು ಹೊಸಬರಿಗೆ  ನವಚೇತನ‌ ನೀಡಿದೆ. ಅದೇ ನಿಟ್ಟಿನಲ್ಲಿ  ಮತ್ತಷ್ಟು ಚಿತ್ರತಂಡಗಳು ಬಿಡುಗಡೆಯ ಸಿದ್ದತೆ ಮಾಡಕೊಳ್ಳುತ್ತಿವೆ.  ಅಂತಹ ಸಿನಿಮಾಗಳಲ್ಲಿ  ಬ್ರಹ್ಮರಾಕ್ಷಸ ಕೂಡ ಒಂದು.  ಲೈಟ್‌ಮ್ಯಾನ್ ಆಗಿ ಚಿತ್ರರಂಗಕ್ಕೆ ಬಂದು ಹಲವಾರು ನಿರ್ದೇಶಕರ ಬಳಿ ಕೆಲಸ ಕಲಿತ ಶಂಕರ್.ವಿ. ಮೊದಲಬಾರಿಗೆ ಆ್ಯಕ್ಷನ್‌ಕಟ್ ಹೇಳಿರುವ ಚಿತ್ರ ಇದಾಗಿದ್ದು, ಜ್ಯೋತಿ ಆರ್ಟ್ಸ್ ಮೂಲಕ ಕೆಎಂಪಿ. ಶ್ರೀನಿವಾಸ್  ಅವರು ಈ ಚಿತ್ರವನ್ನು  ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಐಟಂ ಸಾಂಗ್ ....

104

Read More...

Kaalapatther.News

Saturday, August 24, 2024

  *ವಿಕ್ಕಿ ವರುಣ್ - ಧನ್ಯಾ ರಾಮಕುಮಾರ್ ಅಭಿನಯದ "ಕಾಲಾಪತ್ಥರ್" ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆ* .   ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ "ಕಾಲಾಪತ್ಥರ್" ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆಯಾಗಲಿದೆ. ಹಿರಿಯ ಪತ್ರಕರ್ತ ಕೆ.ಎಸ್.ವಾಸು ’ಕಾಲಾಪತ್ಥರ್’ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದರು. ಆನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ಮೊದಲು ಮಾತನಾಡಿದ ನಿರ್ಮಾಪಕರಾದ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲನಕೋಟೆ,  ಆರಂಭದಿಂದಲೂ ತಾವು ನಮ್ಮ ಚಿತ್ರಕ್ಕೆ ....

107

Read More...

Balarama.Film News

Friday, August 23, 2024

.    *ಟೈಗರ್ ಅಭಿನಯದ ’ಬಲರಾಮನ ದಿನಗಳು’ ಚಿತ್ರಕ್ಕೆ ಸಂತೋಷ್‍ ನಾರಾಯಣನ್ ಸಂಗೀತ* .    *ಈ ಚಿತ್ರದ ಮೂಲಕ "ಕಲ್ಕಿ" ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಕನ್ನಡಕ್ಕೆ ಎಂಟ್ರಿ* .    ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸುತ್ತಿರುವ ಹಾಗೂ "ಆ ದಿನಗಳು" ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ನಾಯಕರಾಗಿ ನಟಿಸುತ್ತಿರುವ 25 ನೇ ಚಿತ್ರ "ಬಲರಾಮನ ದಿನಗಳು". ಕಳೆದ ಕೆಲವು ತಿಂಗಳ ಹಿಂದಷ್ಟೇ ಈ ಚಿತ್ರದ ಘೋಷಣೆಯಾಗಿತ್ತು. ಈಗ ಈ ಚಿತ್ರದ ಕುರಿತು ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ‌. ಹೆಸರಾಂತ ಸಂಗೀತ ....

109

Read More...

BTS Film.News

Thursday, August 22, 2024

  *"ಬಿಟಿಎಸ್" ನಲ್ಲಿ ಐದು ಜನ ನಿರ್ದೇಶಕರ ಐದು ಕಥೆಗಳು* ..    *ಹೊಸ ಪ್ರಯತ್ನಕ್ಕೆ ರಾಜ್ ಬಿ ಶೆಟ್ಟಿ ಸಾಥ್‌* .   ಒಂದು ಚಿತ್ರವನ್ನು ಇಬ್ಬರು ನಿರ್ದೇಶಕರು ಸೇರಿ ನಿರ್ದೇಶಿಸಿರುವ ಉದಾಹರಣೆ ಸಾಕಷ್ಟಿದೆ. ಆದರೆ ಐದು ಜನ ನಿರ್ದೇಶಕರು, ಐದು ಕಥೆಗಳನ್ನಿಟ್ಟುಕೊಂಡು "ಬಿ ಟಿ ಎಸ್" ಎಂಬ ಸಿನಿಮಾ ಮಾಡಿದ್ದಾರೆ. ಆಸಕ್ತಿಕರ ವಿಷಯಗಳನ್ನಿಟ್ಟುಕೊಂಡು ಜನರ ಮನಸ್ಸು ಗೆಲ್ಲಲ್ಲು ಮುಂದಾಗಿದ್ದಾರೆ‌.ಯುವ ಪ್ರತಿಭಾನ್ವಿತರ ತಂಡಕ್ಕೆ ನಟ ರಾಜ್ ಬಿ ಶೆಟ್ಟಿ ಸಾಥ್ ನೀಡಿ, ಪ್ರಯತ್ನ ಯಶಸ್ವಿ ಆಗಲಿ ಎಂದು ಹಾರೈಸಿದ್ದಾರೆ. ಟ್ರೇಲರ್ ಅನ್ನು "ಭೀಮ" ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಬಿಡುಗಡೆ ಮಾಡಿದ್ದಾರೆ.    ಬಿಟಿಎಸ್ ( ಬಿಹೈಂಡ್ ದಿ ಸ್ಕ್ರೀನ್ )  ಚಿತ್ರವನ್ನು ....

100

Read More...

Ronny.Film News

Tuesday, August 20, 2024

  *"ರಾನಿ" ನೋಡಲು ಆಗಸ್ಟ್ 30 ಅಲ್ಲ. ಇನ್ನೂ ಎರಡು ವಾರ ಕಾಯಬೇಕು* .‌   ಕಿರಣ್‍ ರಾಜ್‍ ಅಭಿನಯದ ‘ರಾನಿ’ ಚಿತ್ರ  ಆರಂಭದಿಂದಲೂ ಸದ್ದು ಮಾಡುತ್ತಿದೆ. ಮೊದಲು ಹೇಳಿದ ಹಾಗೆ ಆಗಸ್ಟ್ 30ರಂದು ಬಿಡುಗಡೆ ಆಗಬೇಕಿತ್ತು. ಆದರೆ ಈಗ ’ರಾನಿ’ ಆಗಸ್ಟ್ 30 ರ ಬದಲು ಸೆಪ್ಟೆಂಬರ್ 12 ರಂದು ತೆರೆಗೆ ಬರಲಿದೆ. ಪ್ರಸ್ತುತ ಬಿಡುಗಡೆಯಾಗಿರುವ ಕನ್ನಡ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿದೆ‌. ಹಾಗಾಗಿ ಚಿತ್ರಮಂದಿರಗಳ ಸಮಸ್ಯೆ ಎದುರಾಗಬಾರದೆಂದು ಈ ನಿರ್ಧಾರ ತೆಗದುಕೊಂಡಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ತಿಳಿಸಿದೆ.   ಮೊದಲು ಮಾತನಾಡಿದ ನಿರ್ದೇಶಕ ಗುರುತೇಜ್ ಶೆಟ್ಟಿ, ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಕೃಷ್ಣಂ ಪ್ರಣಯ ಸಖಿ’ ಮತ್ತು ‘ಭೀಮ’ ....

106

Read More...

After Operation London Cafe.News

Tuesday, August 20, 2024

  *ಕವೀಶ್ ಶೆಟ್ಟಿ ಹಾಗೂ ಮೇಘಾ ಶೆಟ್ಟಿ ಅಭಿನಯದ ಆಪರೇಷನ್ ಲಂಡನ್ ಕೆಫೆ ಚಿತ್ರದ ಟೀಸರ್ ಬ್ಯಾಂಗ್* !    *ಮೊದಲ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮನಬಿಚ್ಚಿ ಮಾತನಾಡಿದ ಚಿತ್ರತಂಡ* .   ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ  ’ಆಪರೇಷನ್ ಲಂಡನ್ ಕೆಫೆ’ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರಿಂದ ಭರ್ಜರಿ ಫಲಿತಾಂಶವನ್ನು ಕಾಣುತ್ತಿದೆ. ಟೀಸರ್ ಬಿಡುಗಡೆ ಮಾಡಿದ ....

100

Read More...

Rudhra Garuda Purana.News

Monday, August 19, 2024

  *ಎರಡು ಉಪಕಥೆಗಳ ನಡುವೆ ನಡೆಯುತ್ತದೆ "ರುದ್ರ ಗರುಡ ಪುರಾಣ" ಕಥೆ* .      *ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ರಿಷಿ ಅಭಿನಯದ ಚಿತ್ರ* .    ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಹಾಗೂ ಪ್ರಸ್ತುತ ತೆಲುಗು ಚಿತ್ರರಂಗದಲ್ಲೂ ಮನೆಮಾತಾಗಿರುವ ನಟ ರಿಷಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "ರುದ್ರ ಗರುಡ ಪುರಾಣ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ನಿರ್ದೇಶಕ ಜೇಕಬ್ ವರ್ಗೀಸ್ ಮುಂತಾದವರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   914 ವಿಮಾನ 1955 ರಲ್ಲಿ ನ್ಯೂಯಾರ್ಕ್ ನಿಂದ ಮಿಯಾನ್ ಸಿಟಿಗೆ ....

104

Read More...

Dhruva Thare.News

Monday, August 19, 2024

ಶೀರ್ಷಿಕೆ ಹಳೇದು ಕಥೆ ಹೊಸತು

      ೮೦ರ ದಶಕದಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ‘ಧ್ರುವತಾರೆ’ ಚಿತ್ರವು ಬಿಡುಗಡೆಗೊಂಡು ಹಿಟ್ ಆಗಿತ್ತು. ನಾಲ್ಕು ದಶಕದ ನಂತರ ಈಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸಿದ್ದಗೊಂಡಿದೆ. ಜಿ.ಪಿ.ಫಿಲಂಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಗಣೇಶ್‌ಕುಮಾರ್ ನಿರ್ಮಾಣ ಮಾಡಿದ್ದಾರೆ. ಮೈಸೂರು ಮೂಲದ ಪ್ರತೀಕ್ ನಿರ್ದೇಶನದ ಜೊತೆಗೆ ನಾಯಕನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಹಾಡುಗಳು ಹೊರಬಂದಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ಎನ್.ಸುರೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.

95

Read More...

My Hero.Film News

Monday, August 19, 2024

  *ಆಗಸ್ಟ್  30 ಕ್ಕೆ ಬರಲಿದ್ದಾನೆ "ಮೈ ಹೀರೋ"* .         ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ "ಮೈ ಹೀರೋ" ಚಿತ್ರ ಇದೇ ಆಗಸ್ಟ್ 30 ರಂದು ಬಿಡುಗಡೆಯಾಗಲಿದೆ. ಬಿಡುಗಡೆಗೆ ಪೂರ್ವಭಾವಿಯಾಗಿ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು "ಮೈ ಹೀರೋ" ಬಗ್ಗೆ ಮಾತನಾಡಿದರು. ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಅವಿನಾಶ್ ವಿಜಯ ಕುಮಾರ್, ನಟಿ ಅಂಕಿತ ಅಮರ್ ಹಾಗೂ ಸಂಗೀತ ನಿರ್ದೇಶಕ ಗಗನ್ ಭಡೇರಿಯಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.      ಹಾಲಿವುಡ್ ಕಲಾವಿದರಾದ ಜಿಲಾಲಿ ರಜ್ ಕಲ್ಲಹ್, ಎರಿಕ್ ರಾಬರ್ಟ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಮೈ ಹೀರೋ ಚಿತ್ರದ ಪ್ರಮುಖ ....

97

Read More...

Langoti Man.News

Monday, August 19, 2024

  *ನಟ ಶರಣ್ ಅವರಿಂದ ಅನಾವರಣವಾಯಿತು "ಲಂಗೋಟಿ ಮ್ಯಾನ್" ಚಿತ್ರದ ಟೀಸರ್* .     ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಸಂಜೋತ ಭಂಡಾರಿ ಕಥೆ ಬರೆದು ನಿರ್ದೇಶಿಸಿರುವ "ಲಂಗೋಟಿ ಮ್ಯಾನ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ ಶರಣ್ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ನಾನು ಹತ್ತು ವರ್ಷಗಳ ಹಿಂದೆ "ಮಿರ್ಚಿ ಮಂಡಕ್ಕಿ ಖಡಕ್ ಚಾಯ್" ಚಿತ್ರವನ್ನು ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕಿ ಸಂಜೋತ ಭಂಡಾರಿ, ನಾನು ಬೇರೆ ಒಂದು ಚಿತ್ರದ ಕಥೆ ಮಾಡುತ್ತಿದ್ದಾಗ ಈ ಕಾನ್ಸೆಪ್ಟ್ ಬಂತು‌. ಆ ಚಿತ್ರದ ಕಥೆ ....

109

Read More...

The Rulers.News

Saturday, August 17, 2024

ಸತ್ಯ ಘಟನೆಯ ದ ರೂಲರ‍್ಸ್        ೨೦೧೭ರಂದು ನಡೆದ ನೈಜ ಘಟನೆಯನ್ನು ‘ದ ರೂಲರ‍್ಸ್’ ಚಿತ್ರದಲ್ಲಿ ಬಳಸಲಾಗಿದೆ. ಎಂ.ಎನ್.ಮೂವೀಸ್ ಬ್ಯಾನರ್ ಅಡಿಯಲ್ಲಿ ಅಶ್ವಥ್ ಬಳಗೆರೆ ನಿರ್ಮಾಣ ಮಾಡಿದ್ದು, ಉದಯ್ ಭಾಸ್ಕರ್ ಛಾಯಾಗ್ರಹಣ, ಸಂಕಲನ ಜತೆಗೆ ಆಕ್ಷನ್ ಕಟ್ ಹೇಳಿದ್ದಾರೆ.  ಸಂವಿಧಾನದ ಶಕ್ತಿ ಎಂದು ಅಡಿಬರಹದಲ್ಲಿ  ಹೇಳಲಾಗಿದೆ. ಸಿನಿಮಾವು ಆಗಸ್ಟ್ ೩೦ರಂದು ತೆರೆ ಕಾಣುತ್ತಿರುವುದರಿಂದ ತಂಡವು ಮಾಹಿತಿ ಹಂಚಿಕೊಳ್ಳಲು ಮಾಧ್ಯಮದ ಮುಂದೆ ಹಾಜರಾಗಿತ್ತು.       ನಿರ್ದೇಶಕರು ಮಾತನಾಡುತ್ತಾ, ರಾಜ್ಯದ ಎಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾದ ಸುದ್ದಿಗಳನ್ನು ಆರಿಸಿಕೊಂಡು ಸ್ಕ್ರೀನ್‌ಪ್ಲೇ ....

169

Read More...

Jumboo Circus.News

Saturday, August 17, 2024

  ಜಂಬೂ ಸರ್ಕಸ್ ಮನಸೋತೆ ಮನಸಾರೆ ಹಾಡು ಬಂತು ಕನ್ನಡದ ಚಲನಚಿತ್ರದ ಸುಪ್ರಸಿದ್ದ ನಿರ್ದೇಶಕ ಎಂ ಡಿ ಶ್ರೀಧರ್ ಇದುವರೆವಿಗೂ ನಿರ್ದೇಶನ ಮಾಡಿದ ಸಿನಿಮಗಳೆಲ್ಲ ಸೂಪರ್ ಹಿಟ್. ಈಗ ಅವರ ‘ಜಂಬೂ ಸರ್ಕಸ್’ ಕೂಡ ಆ ನಿಟ್ಟಿನಲ್ಲಿ ಸಾಗುವಂತಿದೆ. ಅದಕ್ಕೆ ಸಾಕ್ಷಿಯಾಗಿ ಒಂದು ಇಂಪಾದ ಹಾಡು ‘ಮನಸೂತೆ ಮನಸಾರೆ.. ಕವಿರಾಜ್ ಅವರ ಗೀತ ಸಾಹಿತ್ಯದಲ್ಲಿ ನಕುಲ ಅಭಯಂಕರ ಹಾಡಿರುವ ಈ ಹಾಡನ್ನು ವಾಸುಕಿ ವೈಭವ ಸಂಯೋಜನೆ ಮಾಡಿದ್ದಾರೆ. ಈ ಹಾಡನ್ನು ಬಿಡುಗಡೆ ಮಾಡುತ್ತಾ ಚಿತ್ರದ ಇನ್ನೆರಡು ಹಾಡು ‘ಗ್ರಹಚಾರ.. ಹಾಗೂ ಗಾಂಚಲಿ ಗಂಗವ್ವ.. ಸಹ ಮಾಧ್ಯಮದರ ಮುಂದೆ ಕಳೆದ ಶನಿವಾರ ಎಂ ಎಂ ಬಿ ಲೆಗಸಿ ಸಭಾಂಗಣದಲ್ಲಿ ಅನಾವರಣ ಮಾಡಲಾಯಿತು. ‘ಜಂಬೂ ಸರ್ಕಸ್’ ಚಿತ್ರಕ್ಕೆ ಕಥಾ ಹಂದರ ಮೊದಲು ಬಂದಿದ್ದು ಹಾಸ್ಯ ....

101

Read More...

Doora Teera Yana.News

Friday, August 16, 2024

  *ಮಂಸೋರೆ "ದೂರ ತೀರ ಯಾನ" ಕ್ಕೆ ಜೊತೆಯಾದ ವಿಜಯ್ ಕೃಷ್ಣ - ಪ್ರಿಯಾಂಕ ಕುಮಾರ್‌* .    *ಡಿ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರಕ್ಕೆ ಸೆಪ್ಟೆಂಬರ್ ನಿಂದ ನಿರಂತರ ಚಿತ್ರೀಕರಣ* .                                                       ಡಿ.ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್ ನಿರ್ಮಾಣದ ಹಾಗೂ "ಹರಿವು", " ನಾತಿಚರಾಮಿ", "ಆಕ್ಟ್ 1978",  "19.20.21" ನಂತಹ ಜನಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕ ಮಂಸೋರೆ ನಿರ್ದೇಶಿಸುತ್ತಿರುವ ಮುಂದಿನ ಚಿತ್ರ "ದೂರ ತೀರ ಯಾನ". ವಿಜಯ್ ಕೃಷ್ಣ ಹಾಗೂ ....

98

Read More...

Kuri Kayhona.News

Friday, August 16, 2024

  ಶಾಸಕ ಭೈರತಿ ಬಸವರಾಜ್ ಶಿಶ್ಯ         ಈಗ ಕುರಿ ಕಾಯೋನು..          ಕಳೆದ ಎರಡು ದಶಕಗಳಿಂದಲೂ ಚಿತ್ರರಂಗದಲ್ಲಿ ಕಲಾವಿದ, ಸಹಾಯಕ ನಿರ್ದೇಶಕನಾಗಿ ತೊಡಗಿಕೊಂಡಿರುವ ಮಹೇಶ್(ಓಂ) ಈಗ ಸ್ವತಂತ್ರ ನಿರ್ದೇಶಕನಾಗುತ್ತಿದ್ದಾರೆ. ಜೊತೆಗೆ ಹೀರೋ ಕೂಡ  ಆಗುತ್ತಿದ್ದಾರೆ. ಅವರ ನಟನೆ ಹಾಗೂ ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನಡೆಯಿತು. ಅನಿವಾಸಿ ಕನ್ನಡಿಗರಾದ ರಾಜೇಶ್, ಪ್ರಿಯಾ ಅವರು  ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಮಾರಂಭದಲ್ಲಿ  ಶಾಸಕ ಭೈರತಿ ಬಸವರಾಜ್ ಅವರು ’ಕುರಿ ಕಾಯೋನು’ ಚಿತ್ರದ  ಟೈಟಲ್ ಲಾಂಚ್ ಮಾಡುವ ಮೂಲಕ ಚಿತ್ರಕ್ಕೆ  ಚಾಲನೆ ನೀಡಿದರು. ಇದಕ್ಕೂ ಮೊದಲು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ....

102

Read More...
Copyright@2018 Chitralahari | All Rights Reserved. Photo Journalist K.S. Mokshendra,