*ನವೆಂಬರ್ 14 ರಂದು ಮಕ್ಕಳ ದಿನಾಚರಣೆಯ ದಿನ ತೆರೆಗೆ ಬರಲಿದೆ "ಪಾಠಶಾಲಾ"* . ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ ಬಾಲ್ಯ ಸೇರಿದಂತೆ ಸೂಕ್ಷ್ಮ ವಿಚಾರಗಳ ಕುರಿತಾದ ಕಥಾಹಂದರ ಹೊಂದಿರುವ "ಪಾಠಶಾಲಾ" ಚಿತ್ರ ನವೆಂಬರ್ 14 ರಂದು ತೆರೆಗೆ ಬರಲು ಸಜ್ಜಾಗಿದೆ. ಇತ್ತೀಚೆಗೆ ಚಿತ್ರದ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಚಿತ್ರತಂಡದವರು "ಪಾಠಶಾಲಾ" ಕುರಿತು ಮಾತನಾಡಿದರು. "ಪಾಠಶಾಲಾ" ಎನ್ನುವ ಹೆಸರು ಇದೆ ಎಂದ ಮಾತ್ರಕ್ಕೆ ಇದು ಮಕ್ಕಳ ಚಿತ್ರ ಅಲ್ಲ ಎಂದು ಮಾತನಾಡಿದ ನಿರ್ದೇಶಕ ಹೆದ್ದೂರು ಮಂಜುನಾಥ ಶೆಟ್ಟಿ, ಈಗಿನ ಶಿಕ್ಷಣ 80 ರ ದಶಕದಲ್ಲಿ ಇದ್ದ ಹಾಗೆ ಇಲ್ಲ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ದೊಡ್ಡ ಅಂತರ ಇದೆ. ಈ ....
*ಬೆಂಗಳೂರಿನಲ್ಲಿ ತಮಿಳಿನ ಡೀಸೆಲ್ ಸಿನಿಮಾ ಪ್ರಚಾರ.. ಇದೇ ದೀಪಾವಳಿ ಹಬ್ಬಕ್ಕೆ ಚಿತ್ರ ರಿಲೀಸ್* ತಮಿಳಿನ ಆಕ್ಷನ್ ಥ್ರಿಲ್ಲರ್ ಸಿನಿಮಾ ಡೀಸೆಲ್ ಬಿಡುಗಡೆಗೆ ಸಜ್ಜಾಗಿದೆ. ಇದೇ ದೀಪಾವಳಿ ಹಬ್ಬಕ್ಕೆ ಬೆಳ್ಳಿತೆರೆಯಲ್ಲಿ ಈ ಚಿತ್ರ ಧಮಾಕ ಸೃಷ್ಟಿಸಲಿದೆ. ಕನ್ನಡದಲ್ಲಿಯೂ ಡಿಸೇಲ್ ಸಿನಿಮಾ ತೆರೆಗೆ ಬರ್ತಿದೆ. ಹೀಗಾಗಿ ಚಿತ್ರತಂಡ ನಿನ್ನೆ ಬೆಂಗಳೂರಿನಲ್ಲಿ ಪ್ರಚಾರ ನಡೆಸಿದೆ. ಎಂಎಂಬಿ ಲೆಗಸಿಯಲ್ಲಿ ಚಿತ್ರದ ಸುದ್ದಿ ಗೋಷ್ಟಿ ನಡೆಯಿತು. ಈ ವೇಳೆ ನಿರ್ದೇಶಕ ಷಣ್ಮುಗಂ ಮುತ್ತುಸಾಮಿ, ನಾಯಕ ಹರೀಶ್ ಕಲ್ಯಾಣ್ ಹಾಗೂ ನಾಯಕಿ ಅತುಲ್ಯ ರವಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು. ನಿರ್ದೇಶಕ ಷಣ್ಮುಗಂ ಮುತ್ತುಸ್ವಾಮಿ ಮಾತನಾಡಿ, ....
*"ಫ್ರಾಡ್ ಋಷಿ" ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡಿದ ನಮ್ ಋಷಿ* . *ಹಾಡು ಬಿಡುಗಡೆ ಮಾಡಿ ಹಾರೈಸಿದ ಡಾ||ವಿ.ನಾಗೇಂದ್ರಪ್ರಸಾದ್* . "ಒಳಿತು ಮಾಡು ಮನುಸ" ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ "ಫ್ರಾಡ್ ಋಷಿ" ಚಿತ್ರದ ಮೂರನೇ ಹಾಡು "ನೀ ಹೆಜ್ಜೆ ಇಟ್ಟ ಕಡೆಯಲ್ಲೆಲ್ಲ ಗೆಜ್ಜೆನಾದ" ಎಂಬ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಡಾ||ವಿ.ನಾಗೇಂದ್ರಪ್ರಸಾದ್ ಅವರು ನಮ್ ಋಷಿ ಬರೆದಿರುವ ರಾಜೇಶ್ ಕೃಷ್ಣನ್ ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿದರು. ಹಾಡು ಬಿಡುಗಡೆ ನಂತರ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಹಲವು ವರ್ಷಗಳಿಂದ ಋಷಿ ಅವರನ್ನು ಬಲ್ಲೆ. ಅವರ "ಒಳಿತು ಮಾಡು ಮನುಸ" ಹಾಡು ....
"ಬೀದಿ ಬದುಕು" ಟೀಸರ್ ಬಿಡುಗಡೆ: ಚಿಂದಿ ಆಯುವ ಮಹಿಳೆಯ ಬದುಕು ಬವಣೆಯ ಕಥೆ.. ಬಹುತೇಕ ಭಕ್ತಿಪ್ರಧಾನ ಚಿತ್ರಗಳಿಗೆ ಹೆಸರಾದ ಪುರುಷೋತ್ತಮ್ ಓಂಕಾರ್, ಇದೀಗ ಹೊಟ್ಟೆ ಪಾಡಿಗಾಗಿ ಚಿಂದಿ ಆಯುವ ಮಹಿಳೆಯ ಜೀವನದ ಕಥೆ ಹೇಳಹೊರಟಿದ್ದಾರೆ. ರಸ್ತೆ ಬದಿಯಲ್ಲಿ ಚಿಂದಿ ಆಯುತ್ತ ಜೀವನ ಸಾಗಿಸುವ ಮಹಿಳೆಯೊಬ್ಬಳ ಜೀವನ, ತನ್ನ ಪುಟ್ಟ ಮಗನಿಗಾಗಿ ಆಕೆ ಪಡುವ ಕಷ್ಟ ಇದನ್ನೆಲ್ಲ ಮನಮುಟ್ಟುವ ಹಾಗೆ ತೆರೆಮೇಲೆ ತೆರದಿಡುವ ಆ ಚಿತ್ರದ ಹೆಸರು ಬೀದಿ ಬದುಕು. ನಟಿ ರೇಖಾ ಸಾಗರ್(ರೆಖಾರಾಣಿ) ಈ ಚಿತ್ರದ ನಾಯಕಿಯಾಗಿದ್ದು, ಜತೆಗೆ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕಿಯೂ ಆಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ....
*ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ತೆರೆಗೆ ಬರಲಿದೆ ಬಹು ನಿರೀಕ್ಷಿತ ಚಿತ್ರ "ಕೊರಗಜ್ಜ"* . ಸುಧೀರ್ ಅತ್ತಾವರ್ ನಿರ್ದೇಶನದ ಹಾಗೂ ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹು ನಿರೀಕ್ಷಿತ, ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ಅಡಿಯ "ಕೊರಗಜ್ಜ" ಚಿತ್ರದ ಫಸ್ಟ್ ಲುಕ್ ಟೀಸರ್ ಹಾಗೂ ತ್ರಿಡಿ ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ದಕ್ಷಿಣ ಕನ್ನಡದ ವಾದ್ಯ ಹಿಮ್ಮೇಳ ಹಾಗೂ ಉಡುಪಿಯ ಮಹಿಳಾ ತಂಡದವರ ಹುಲಿ ನೃತ್ಯದ ಮೆರವಣಿಗೆಯಲ್ಲಿ ಸಾಗಿಬಂದ "ಕೊರಗಜ್ಜ" ನ ಎರಡು ಕಟೌಟ್ ಗಳು ಡೊಳ್ಳು,ಕೊಂಬು-ಕಹಳೆ, ಕೊಳಲು, ತಾಸೆ,ತಾಳಗಳ ವಾದ್ಯಮೇಳದ ಹಿನ್ನೆಯಲ್ಲಿ ಹುಲಿವೇಶದ ....
ಶ್ರೀಮುರುಳಿ ಸಮ್ಮುಖದಲ್ಲಿ `ಬಿಳಿಚುಕ್ಕಿ ಹಳ್ಳಿಹಕ್ಕಿ’ ಟ್ರೈಲರ್ ಬಿಡುಗಡೆ! ಮಹಿರಾ ಖ್ಯಾತಿಯ ಮಹೇಶ್ ಗೌಡ ನಿರ್ಮಾಣ, ನಿರ್ದೇಶನ ಮಾಡಿ ನಟಿಸಿರುವ, ರೋರಿಂಗ್ ಸ್ಟಾರ್ ಶ್ರೀಮುರುಳಿ ಅರ್ಪಿಸುವ `ಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರ ಅಕ್ಟೋಬರ್ ೨೪ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಈಗಾಗಲೇ ಹಾಡುಗಳ ಮೂಲಕ ಗಮನ ಸೆಳೆದಿರುವ ಈ ಸಿನಿಮಾದ ಟ್ರೈಲರ್ ಅನ್ನು ರೋರಿಂಗ್ ಸ್ಟಾರ್ ಶ್ರೀಮುರುಳಿ ಬಿಡುಗಡೆಗೊಳಿಸಿದ್ದಾರೆ. ಒಂದಿಡೀ ಸಿನಿಮಾದ ಅಂತಃಸತ್ವವನ್ನು ಆಳವಾಗಿ ಗ್ರಹಿಸಿಕೊಂಡು ಚಿತ್ರತಂಡದ ಶ್ರಮವನ್ನು ಮೆಚ್ಚಿಕೊಂಡಿದ್ದಾರೆ. ಭಾರತೀಯ ಸಿನಿಮಾ ರಂಗದಲ್ಲೇ ಮೊದಲೆಂಬಂಥಾ ಕಥಾ ಹಂದರ ಹೊಂದಿರುವ ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರಕ್ಕೆ ಶುಭ ಕೋರಿದ್ದಾರೆ. ಅತ್ಯಂತ ....
*ಜೈ ಗದಾ ಕೇಸರಿ ಟೀಸರ್ ಮತ್ತು ಹಾಡುಗಳು* *ಜೈ ಗದಾ ಕೇಸರಿ* ಚಿತ್ರದ ಟೀಸರ್ ಮತ್ತು ಹಾಡುಗಳ ಬಿಡುಗಡೆ ಸಮಾರಂಭ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು, ಕರ್ನಾಟಕ ನಿರ್ಮಾಪಕ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್,ಉಜ್ಜಲ್ ರಘು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿ.ಬಿ.ಮೂವೀ ಕ್ರಿಯೇಶನ್ಸ್ ಅಡಿಯಲ್ಲಿ ಕೊಪ್ಪಳ ಮೂಲದ ಉದ್ಯಮಿ *ಬಸವರಾಜ್ ಭಜಂತ್ರಿ ಕಲಾವಿದರನ್ನು ಉಳಿಸುವ ಸಲುವಾಗಿ ಹಾಗೂ ಕನ್ನಡ ನಾಡಿಗೆ ಹೆಮ್ಮೆ ತರಬೇಕೆಂಬ ಅಭಿಲಾಷೆಯಿಂದ ಬಂಡವಾಳ ಹೂಡಿದ್ದಾರೆ*. ಯತೀಶ್ಕುಮಾರ್.ವಿ ಮತ್ತು ಮಂಜು ಹೊಸಪೇಟೆ ಜಂಟಿಯಾಗಿ ಸಿನಿಮಾಕ್ಕೆ ....
*ಅನೂಪ್ ರೇವಣ್ಣ ಈಗ "ಕನಕರಾಜ".* *ಇದು ಸಿ.ಎಂ ಅಭಿಮಾನಿಯ ಕಥೆ* . ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ಅವರು ನಿರ್ಮಿಸುತ್ತಿರುವ, ಡಾ||ವಿ.ನಾಗೇಂದ್ರಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಸಂಗೀತ ಸಂಯೋಜನೆಯನ್ನೂ ಮಾಡುತ್ತಿರುವ, ವಿ.ಎಂ.ರಾಜು ಮತ್ತು ನೀಲ್ ಕೆಂಗಾಪುರ ಜಂಟಿಯಾಗಿ ನಿರ್ದೇಶಿಸುತ್ತಿರುವ ಹಾಗೂ ಎಚ್ ಎಂ ರೇವಣ್ಣ ಅವರ ಪುತ್ರ ಅನೂಪ್ ರೇವಣ್ಣ ನಾಯಕನಾಗಿ ನಟಿಸುತ್ತಿರುವ ‘ಕನಕರಾಜ’ ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿ ಲೇಔಟ್ ನ ಪ್ರಸನ್ನ ಶ್ರೀವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ....
*'ದಿಲ್ಮಾರ್’ ಟ್ರೇಲರ್ ರಿಲೀಸ್..ಹೊಸಬರಿಗೆ ಧ್ರುವ ಸರ್ಜಾ ಸಾಥ್* *ಕೆಜಿಎಫ್ ಡೈಲಾಗ್ ರೈಟರ್ ಚಂದ್ರಮೌಳಿ ಹೊಸ ಕನಸು ’ದಿಲ್ಮಾರ್’ ಗೆ ಧ್ರುವ ಸರ್ಜಾ ಬೆಂಬಲ* *ದಿಲ್ಮಾರ್ ಟ್ರೇಲರ್ ರಿಲೀಸ್ ಮಾಡಿದ ಧ್ರುವ ಸರ್ಜಾ..ಇದೇ ತಿಂಗಳ 24ಕ್ಕೆ ಸಿನಿಮಾ ತೆರೆಗೆ ಎಂಟ್ರಿ* ’ಕೆಜಿಎಫ್’ ಸಿನಿಮಾದಲ್ಲಿ ಡೈಲಾಗ್ಗಳಿಂದಲೇ ಜಾದು ಮಾಡಿದ್ದ ರೈಟರ್ ಚಂದ್ರಮೌಳಿ ದಿಲ್ಮಾರ್ ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಅವರ ಮೊದಲ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 24ಕ್ಕೆ ದಿಲ್ಮಾರ್ ತೆರೆಗೆ ಎಂಟ್ರಿ ಕೊಡುತ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಆಕ್ಷನ್ ....
*ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ "ಚತುಷ್ಪಥ"* . ರೂಪ ಬಾಯಿ ಹಾಗೂ ಕೃಷ್ಣೋಜಿ ರಾವ್ ಅವರು ನಿರ್ಮಿಸಿರುವ ಹಾಗೂ ಕೃಷ್ಣೋಜಿ ರಾವ್ ಅವರೆ ನಿರ್ದೇಶಿಸಿರುವ ಹಾಗೂ ಮಿಲನ ನಾಗರಾಜ್, ಜಗನ್, ಕಿರಣ್ ರಾಜ್ , ಶಿಲ್ಪ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ " ಚತುಷ್ಪಥ " ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ವಿಭಿನ್ನ ಕಂಟೆಂಟ್ ವುಳ್ಳ ಈ ಚಿತ್ರ ಟ್ರೇಲರ್ ನಲ್ಲೇ ನೋಡುಗರ ಗಮನ ಸೆಳೆದಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. "ಚತುಷ್ಪಥ" ಎಂದರೆ ನಾಲ್ಕು ದಾರಿಗಳು. ಹೆದ್ದಾರಿಗಳಲ್ಲಿ ನಾವು ಇದನ್ನು ನೋಡಬಹುದು. ಆದರೆ ನಮ್ಮ ಚಿತ್ರದಲ್ಲಿ ಬಡ ಜನರ ವರ್ಗ, ಮಧ್ಯಮ ವರ್ಗ, ಶ್ರೀಮಂತರ ವರ್ಗ ಹಾಗೂ ಕಾನೂನು ....
*"ಮಹಾಲಯ" ಚಿತ್ರಕ್ಕೆ ಶ್ರೀಮುರಳಿ ಚಾಲನೆ* ಪರ್ಪಲ್ ರಾಕ್ ಸ್ಟುಡಿಯೋಸ್ ಮೂಲಕ ಯತೀಶ್ ವೆಂಕಟೇಶ್ ಹಾಗೂ ಗಣೇಶ್ ಪಾಪಣ್ಣ ಸೇರಿ ನಿರ್ಮಿಸುತ್ತಿರುವ, ಡಾ||ಸೂರಿ(ಬಘೀರ) ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿರುವ "ಮಹಾಲಯ" ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೋಹನ್ ಮಾಯಣ್ಣ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ಮೊದಲ ದೃಶ್ಯಕ್ಕೆ ರೋರಿಂಗ್ ಸ್ಟಾರ್ ಶ್ರೀಮುರುಳಿ ಆರಂಭ ಫಲಕ ತೋರಿಸುವ ಮೂಲಕ ಚಾಲನೆ ನೀಡಿ, ಚಿತ್ರಕ್ಕೆ ಶುಭ ಕೋರಿದರು. ನಂತರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಗಣೇಶ್ ಪಾಪಣ್ಣ, ಇದು ನಮ್ಮ ಪರ್ಪಲ್ ರಾಕ್ ಸಂಸ್ಥೆಯ ಐದನೇ ಚಿತ್ರ. ....
" *ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಗ್ರೀನ್" ಚಿತ್ರದ ಟ್ರೇಲರ್ ಅನಾವರಣ ** .
*ಸೈಕಲಾಜಿಕಲ್ ಮೈಂಡ್ ಬೆಂಡಿಂಗ್ ಕಥಾಹಂದರ ಹೊಂದಿರುವ ಈ ಚಿತ್ರ ಅಕ್ಟೋಬರ್ 23 ರಂದು ತೆರೆಗೆ* .
ಗುನಾದ್ಯ ಪ್ರೊಡಕ್ಷನ್ಸ್ ಅರ್ಪಿಸುವ,
ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ಹಾಗೂ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ. ವಿಕ್ಕಿ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿರುವ "ಗ್ರೀನ್" ಚಿತ್ರದ ಟ್ರೇಲರ್ ಅನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು "ಗ್ರೀನ್" ಕುರಿತು ಮಾತನಾಡಿದರು.
*'ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ಪಾತ್ರ ಪರಿಚಯ* *ಹೊರಬಂತು ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಕ್ಯಾರೆಕ್ಟರ್ ಟೀಸರ್* *ತೆರೆಮೇಲೆ ಮುಖ್ಯಮಂತ್ರಿಯಾಗಿ ಎಲ್. ಆರ್. ಶಿವರಾಮೇಗೌಡ ಪ್ರಮಾಣ ವಚನ!* *ಬೆಳ್ಳಿತೆರೆ ಮೇಲೆ ಮುಖ್ಯಮಂತ್ರಿಯಾದ ಖುಷಿಯಲ್ಲಿ ಮಂಡ್ಯದ ಮಾಜಿ ಸಂಸದ* *ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದತ್ತ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ* ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. ಇದೀಗ ಈ ಸಿನಿಮಾ ಸದ್ದಿಲ್ಲದೆ ತನ್ನ ಚಿತ್ರೀಕರಣವನ್ನು ಪೂರೈಸಿದೆ. ಸಿನಿಮಾದ ಹೆಸರೇ ಹೇಳುವಂತೆ, ....
ಪ್ರೇಮಿಗಳ ಗಮನಕ್ಕೆ ಟ್ರೈಲರ್ ಬಿಡುಗಡೆ ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ವಾಸಿಸುವ, ಅದರಲ್ಲೂ ಬೇರೆ ಊರುಗಳಿಂದ ಬಂದವರ ನಡುವೆ ಲಿವಿಂಗ್ ರಿಲೇಶನ್ಶಿಪ್ ಹೆಚ್ಚಾಗುತ್ತಿದೆ. ಬೆಂಗಳೂರಿನಂಥ ದೊಡ್ಡ ದೊಡ್ಡ ನಗರಗಳಲ್ಲಿ ವಾಸಿಸುವ ಐಟಿ, ಬಿಟಿ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಲ್ಲಿ ಇಂಥ ಸಂಬಂಧಗಳು ಕಂಡುಬರುತ್ತಿದೆ. ವಯಸ್ಸಿಗೆ ಬಂದ ಯುವಕ, ಯುವತಿಯರು ಮದುವೆಯಾಗದೆ ಒಂದೇ ಮನೆಯಲ್ಲಿ ವಾಸಿಸುವ ವ್ಯವಸ್ಥೆಯನ್ನು ಈ ರೀತಿ ಕರೆಯಲಾಗುತ್ತದೆ. ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಲಿವಿಂಗ್ ರಿಲೇಶನ್ಶಿಪ್ನಲ್ಲಿದ್ದ ಇಬ್ಬರು ಪ್ರೇಮಿಗಳ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರದ ಹೆಸರು ಪ್ರೇಮಿಗಳ ಗಮನಕ್ಕೆ. ....
ಹೊಸತನದ ಸುಳಿವಿನೊಂದಿಗೆ ಟೈಮ್ ಪಾಸ್ ಟ್ರೈಲರ್ ಬಿಡುಗಡೆ! ಜನಪ್ರಿಯ ಸಿನಿಮಾಗಳ ಅಲೆಯ ನಡುವೆಯೇ ಒಂದಷ್ಟು ಹೊಸತನ ಹೊಂದಿರುವ ಚಿತ್ರಗಳು ತಣ್ಣಗೆ ಪ್ರೇಕ್ಷಕರ ಮುಂದೆ ಬರಲು ಅಣಿಯಾಗುತ್ತಿವೆ. ಸದ್ಯದ ಮಟ್ಟಿಗೆ ಆ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಚಿತ್ರ ಟೈಮ್ ಪಾಸ್. ಕೆ. ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ, ಇದೇ ಅಕ್ಟೋಬರ್ ೧೭ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಈ ಹಿನ್ನೆಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯ ಮೂಲಕ ಚಿತ್ರತಂಡ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿದೆ. ನಿರ್ದೇಶಕ ಚೇತನ್ ಜೋಡಿದಾರ್, ನಿರ್ಮಾಪಕರು, ಕಲಾವಿದರು ಮತ್ತು ತಂತ್ರಜ್ಞಸರ ಸಮ್ಮುಖದಲ್ಲಿ ಈ ಟ್ರೈಲರ್ ಬಿಡುಗಡೆಗೊಂಡಿದೆ. ಇದೇ ಹೊತ್ತಿನಲ್ಲಿ ....
*ಹೃದಯ ಕಲಕುವ ಶರತ್ ಮತ್ತು ಶರಧಿ ಕಿರುಚಿತ್ರ* ವಿಶ್ವದಲ್ಲೇ ಮೊದಲು ಎನ್ನುವಂತೆ ರಿಯಲ್ ಅಂದ ದಂಪತಿಗಳು ರೀಲ್ದಲ್ಲಿ ನಾಯಕ, ನಾಯಕಿಯಾಗಿ ಅಭಿನಯಿಸಿರುವ *ಶರತ್ ಮತ್ತು ಶರಧಿ* ಕಿರುಚಿತ್ರದ ವಿಶೇಷ ಪ್ರದರ್ಶನವನ್ನು ಮಾಧ್ಯಮದವರಿಗೆ ಏರ್ಪಡಿಸಲಾಗಿತ್ತು. ’ಏಪ್ರಿಲ್ನ ಹಿಮಬಿಂದು’ ಚಿತ್ರದ ನಿರ್ದೇಶಕ *ಎಂ.ಜಗದೀಶ್ ಕತೆ ಬರೆದು ಆಕ್ಷನ್ ಕಟ್* ಹೇಳುವುದರ ಜತೆಗೆ ನಿರ್ಮಾಣದಲ್ಲಿ ಪಾಲುದಾರರು. ಟಾಕ್ಗುರು ಕ್ರಿಯೇಶನ್ಸ್ ಅಡಿಯಲ್ಲಿ *ಗಣೇಶ್.ಬಿ.ಎಂ. ಬಂಡವಾಳ* ಹೂಡಿದ್ದಾರೆ. ನಂತರ ಮಾತನಾಡಿದ ನಿರ್ದೇಶಕರು, ಒಂದು ಸನ್ನಿವೇಶದಲ್ಲಿ ನಾವು ಕರೆಂಟ್ ಬಿಲ್ ದುಡ್ಡು ಉಳಿಸಬಹುದು ಎಂಬ ಸಂಭಾಷಣೆ ಇತ್ತು. ಅಶ್ವಿನಿರವರು ಇದನ್ನು ....
ಜೋಡೆತ್ತು ಜತೆ ಬಂದ ಚಿಕ್ಕಣ್ಣ ಮೂರು ಭಾಷೆಯ ಬೃಹತ್ ಸಿನಿಮಾ! ತುತ್ತು, ಮುತ್ತು, ಕುತ್ತುಗಳ ರೋಚಕ ಪಯಣ..! ಚಿಕ್ಕಣ್ಣ ನಾಯಕ ನಟರಾಗಿರುವ ಹೊಸ ಸಿನಿಮಾಕ್ಕೆ ಜೋಡೆತ್ತು ಎಂದು ನಾಮಕರಣ ಮಾಡಲಾಗಿದೆ. ಸೋಮಶೇಖರ್ (ಕಟ್ಟಿಗೇನಹಳ್ಳಿ) ನಿರ್ಮಾಣದ, ಎಸ್.ಮಹೇಶ್ ಕುಮಾರ್ ನಿರ್ದೇಶನವಿರುವ ಈ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೇರವೇರಿದೆ. ಖ್ಯಾತ ನಿರ್ದೇಶಕ, ನಿರ್ಮಾಪಕ ಆರ್.ಚಂದ್ರು ಕ್ಯಾಮೆರಾ ಸ್ವಿಚ್ ಆನ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಸ್ಯಾಂಡಲ್ವುಡ್ ‘ಅಧ್ಯಕ್ಷ’ ಶರಣ್ ಆರಂಭ ಫಲಕ ತೋರಿಸಿ, ಟೈಟಲ್ ಟೀಸರ್ ಬಿಡುಗಡೆ ಮಾಡಿ ‘ಜೋಡೆತ್ತು’ ತಂಡಕ್ಕೆ ಶುಭ ಹಾರೈಸಿದರು. ಕಂದಾಯ ಸಚಿನ ಕೃಷ್ಣ ಬೈರೇಗೌಡ ಸಮಾರಂಭಕ್ಕೆ ಆಗಮಿಸಿ ‘ಜೋಡೆತ್ತು’ ಬಳಗದ ....
*"ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿ ನಟಿಸುತ್ತಿರುವ "ಉಗ್ರಾಯುಧಮ್" ಚಿತ್ರಕ್ಕೆ ಅದ್ದೂರಿ ಚಾಲನೆ.* . *ಜಯರಾಮ್ ದೇವಸಮುದ್ರ ನಿರ್ಮಾಣದ ಏಳು ಶತಮಾನಗಳ ಹಿಂದಿನ ಈ ಪಿರಿಯಾಡಿಕ್ ಡ್ರಾಮ ಕಥಾನಕಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ ಪುನೀತ್ ರುದ್ರನಾಗ್* . ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಪುನೀತ್ ರುದ್ರನಾಗ್ ಚೊಚ್ಚಲ ನಿರ್ದೇಶನದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿ ಅಭಿನಯಿಸುತ್ತಿರುವ "ಉಗ್ರಾಯುಧಮ್" ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಶ್ರೀಮುರಳಿ ಅವರ ತಂದೆ, ಹಿರಿಯ ನಿರ್ಮಾಪಕ ....
*ಶ್ರೀ ಮಾರಮ್ಮ ದೇವಿ ಸನ್ನಿದಿಯಲ್ಲಿ ಶ್ರೀಮತಿ ಸಿಂಧೂರ ಮುಹೂರ್ತ* ಆರ್ ಅಂಡ್ ಆರ್ ಎಂಟರ್ಪ್ರೈಸಸ್ ಅಡಿಯಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ *ಡಿ.ಎನ್.ನಾಗೀರೆಡ್ಡಿ ನಿರ್ಮಾಣ*, *ಆರ್.ಅನಂತರಾಜು ನಿರ್ದೇಶನ* ಮಾಡುತ್ತಿರುವ *ಶ್ರೀಮತಿ ಸಿಂಧೂರ* ಚಿತ್ರವು ವಿಜಯದಶಮಿ ಶುಭದಿನದಂದು ಶ್ರೀ ಮಾರಮ್ಮ ದೇವಿ ಸನ್ನಿದಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು. ನಿರ್ಮಾಪಕರ ಪತ್ನಿ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿದರು. *ನಾಯಕನಾಗಿ ವಿಜಯರಾಘವೇಂದ್ರ*, ಹಳ್ಳಿ ಹುಡುಗಿಯಾಗಿ *ಪ್ರಿಯಾಹೆಗಡೆ ನಾಯಕಿ* ರೇಷ್ಮಾ.ವಿ.ಗೌಡ ಉಪನಾಯಕಿ. ವಿಲನ್ಗಳಾಗಿ ಪ್ರಸನ್ನಬಾಗೀನ, ಗಣೇಶ್ರಾವ್ ಕೇಸರ್ಕರ್. ’ಕಾಂತಾರ’ದಲ್ಲಿ ತಾಯಿ ಪಾತ್ರ ನಿರ್ವಹಿಸಿದ್ದ ....
*ರಾಷ್ಟ್ರ ಪ್ರಶಸ್ತಿ ಚಿತ್ರ ಕಂದೀಲು ಸಂತಸದ ಮಾತುಗಳು* *ಕಂದೀಲು* ಚಿತ್ರವು 71ನೇ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರಿಂದ ನಿರ್ಮಾಪಕರು ಮತ್ತು ನಿರ್ದೇಶಕರು ಎಲ್ಲರಿಗೂ ಕೃತಜ್ಘತೆ ಹೇಳುವ ಸಲುವಾಗಿ ತಂಡದೊಂದಿಗೆ ಮಾಧ್ಯಮದ ಮುಂದೆ ಹಾಜರಿದ್ದು ತೆರೆಯ ಹಿಂದಿನ ಶ್ರಮವನ್ನು ನೆನಪು ಮಾಡಿಕೊಂಡರು. ಇದಕ್ಕೂ ಮುನ್ನ ಕಲಾವಿದರು, ತಂತ್ರಜ್ಘರಿಗೆ ಬೆಳ್ಳಿ ನಾಣ್ಯ ನೀಡಿ ಗೌರವಿಸಲಾಯಿತು. *ನಿರ್ದೇಶಕಿ ಯಶೋಧ ಕೊಟ್ಟುಕತ್ತಿರ* ಮಾತನಾಡಿ ಸಿನಿಮಾ ಶುರುವಾದಾಗಿನಿಂದ ಎಲ್ಲರೂ ಶ್ರಮವಹಿಸಿ ಕೆಲಸ ನಿರ್ವಹಿಸಿದ್ದಾರೆ. ನಾನು ಎಲ್ಲರನ್ನು ನೆನೆಸಿಕೊಂಡು ಪ್ರಶಸ್ತಿ ಸ್ವೀಕರಿಸಿದೆ. ಯಾವ ರೀತಿ ರಾಷ್ಟ್ರಪತಿಗಳಿಂದ ಪ್ರಶಸ್ತಿ ....