Paravasha.Film Title.News

Friday, March 01, 2024

  *ಅದ್ದೂರಿಯಾಗಿ ಅನಾವರಣವಾಯಿತು "ಪರವಶ" ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್* .     *ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ರಘು ಭಟ್ ನಟನೆ* .   ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ನೂತನ ಪ್ರತಿಭೆ ರಘು ಭಟ್ ಪ್ರಮುಖಪಾತ್ರದಲ್ಲಿ ನಟಿಸಿರುವ ನೂತನ  ಚಿತ್ರವೊಂದರ ಚಿತ್ರೀಕರಣ ಸದ್ದಿಲ್ಲದೆ ನಡೆಯುತ್ತಿದ್ದು, ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್  ನೆಲಮಂಗಲದ ಬಳಿ ಆಯೋಜಿಸಲಾಗಿದ್ದ ಅದ್ದೂರಿ ಸಮಾರಂಭದಲ್ಲಿ ಅನಾವರಣವಾಯಿತು. ಚಿತ್ರಕ್ಕೆ "ಪರವಶ" ಎಂದು ಹೆಸರಿಡಲಾಗಿದೆ. ಖ್ಯಾತ ನಿರೂಪಕಿ ಅನುಶ್ರೀ ಅವರ ಅಚ್ಚುಕಟ್ಟಾದ ನಿರೂಪಣೆಯಲ್ಲಿ ಸಮಾರಂಭ ನೆರವೇರಿತು.   ....

202

Read More...

Kadal.Film Launch.News

Thursday, February 29, 2024

  *ಹೊಸಬರ ಅಪ್ಪಟ ಕನ್ನಡದ ಕಾದಲ್ ಗೆ ಅದ್ದೂರಿ ಮುಹೂರ್ತ*   *ಒಡಿ ಬಡಿ ಮಧ್ಯೆ ಕಾದಲ್ ಎನ್ನುತ್ತಿದ್ದಾರೆ ನಿರ್ದೇಶಕ ವಿಜಯ್*   ವಿಜಯದೀಪ ಪಿಕ್ಚರ್ಸ್ ಅಡಿಯಲ್ಲಿ ವಿಜಯಪ್ರಿಯ ಅವರ ಕಥೆ ಚಿತ್ರಕಥೆ ನಿರ್ದೇಶನದಲ್ಲಿ‌ ತಯಾರಾಗ್ತಿರುವ ’ಕಾದಲ್’ ಚಿತ್ರದ ಮುಹೂರ್ತ ಮಾಗಡಿ ರಸ್ತೆಯ ನಾಡಪ್ರಭು ಕೆಂಪೇಗೌಡ ಲೇಔಟ್ ನಲ್ಲಿರುವ ಶ್ರೀ ಆದಿಶಕ್ತಿ ಮದನಘಟ್ಟಮ್ಮ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡ ಸಮಾರಂಭದಲ್ಲಿ ಭಾಗಿಯಾಗಿ ಕಾದಲ್ ಬಗ್ಗೆ  ಮಾಧ್ಯಮದವರಿಗೆ ಮಾಹಿತಿ ನೀಡಿದರು. ವಿಶೇಷ ಅಂತಂದ್ರೆ ’ಭಾವನೆಗಳ ಭಾಷೆಗೆ ಮೌನವೆಂಬ ಲಿಪಿಯೇ ಪ್ರೇಮಿ’ ಅನ್ನೋ ಟ್ಯಾಗ್ ಲೈನ್ ಗಮನ ಸೆಳೆಯುತ್ತಿದೆ. ಕಾದಲ್ ಗೆ ನಿರ್ದೇಶಕರ ಧರ್ಮಪತ್ನಿ ದೀಪಿಕಾ ಬಂಡವಾಳ ಹೂಡಿದ್ದಾರೆ. ....

337

Read More...

Dheera Bhagath Roy.News

Wednesday, February 28, 2024

  *ಧೀರ ಭಗತ್ ರಾಯ್ ಸಿನಿಮಾದ ಏನು ಕರ್ಮ ಹಾಡು ಬಿಡುಗಡೆ..*   *ಧೀರ ಭಗತ್ ರಾಯ್ ಅಂಗಳದಿಂದ ತೇಲಿ ಬಂತು ಮನಮೋಹಕ ಹಾಡು*   *ಏನು ಕರ್ಮ ಎನ್ನುತಾ ಬಂದ ಧೀರ ಭಗತ್ ರಾಯ್...*   *ಹಾಡಿನಲ್ಲಿ ಧೀರ ಭಗತ್ ರಾಯ್...*   ರಂಗಭೂಮಿ ಹಿನ್ನೆಲೆಯಿಂದ ಬಂದ ಎಷ್ಟೋ ಕಲಾವಿದರು ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅದೇ ಹಾದಿಯಲ್ಲಿ ಸಾಗ್ತಿರುವವರು ರಾಕೇಶ್ ದಳವಾಯಿ. ‘ಧೀರ ಭಗತ್ ರಾಯ್’ ಚಿತ್ರದ ಮೂಲಕ ರಾಕೇಶ್ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಕರ್ಣನ್ ಎಸ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಏನು ಕರ್ಮ ಹಾಡು ಬಿಡುಗಡೆಯಾಗಿದ್ದು, ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ  ಕುರಿತು ಬೆಂಗಳೂರಿನ ಕಲಾವಿದರ ಸಂಘದಲ್ಲಿ ಪ್ರತಿಕಾಗೋಷ್ಟಿ ....

159

Read More...

Dil Kush.Film News

Wednesday, February 28, 2024

  *"ದಿಲ್ ಖುಷ್" ಚಿತ್ರದ "ನೀನೇ ನೀನೇ" ಹಾಡು ಬಿಡುಗಡೆ* .    *ಖ್ಯಾತ ನಿರ್ದೇಶಕರಾದ ಪವನ್ ಒಡೆಯರ್, ಸಿಂಪಲ್ ಸುನಿ, ಬಹದ್ದೂರ್ ಚೇತನ್ ಕುಮಾರ್ ಅವರಿಂದ ಸುಂದರ ಹಾಡಿನ ಅನಾವರಣ*   ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ "ದಿಲ್ ಖುಷ್" ಚಿತ್ರಕ್ಕಾಗಿ ಗೌಸ್ ಫಿರ್ ಅವರು ಬರದಿರುವ "ನೀನೇ ನೀನೇ" ಎಂಬ ಸುಮಧುರ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ.  ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರಾದ ಪವನ್ ಒಡೆಯರ್, ಸಿಂಪಲ್ ಸುನಿ ಹಾಗೂ ಬಹದ್ದೂರ್ ಚೇತನ್ ಕುಮಾರ್ ಈ ಹಾಡನ್ನು ಬಿಡುಗಡೆ ಮಾಡಿದರು. "ಸರಿಗಮಪ" ಖ್ಯಾತಿಯ ನಿಹಾಲ್ ತೌರೊ ಹಾಗೂ ಆರತಿ ಅಶ್ವಿನ್ ಈ ಹಾಡಿಗೆ ಧ್ವನಿಯಾಗಿದ್ದು ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿದ್ದಾರೆ.    ಚಿತ್ರದ ....

161

Read More...

Nidra Devi Next Door.News

Monday, February 26, 2024

  *ಸೆಟ್ಟೇರಿತು ’ನಿದ್ರಾದೇವಿ Next Door’..ಪ್ರವೀರ್ ಶೆಟ್ಟಿ-ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ ಕ್ರೇಜಿಸ್ಟಾರ್ ಕ್ಲಾಪ್..*   *ನಿದ್ರೆ ದೇವಿ ಜೊತೆ ಬಂದ ಕರವೇ ಪ್ರವೀಣ್ ಶೆಟ್ಟಿ ಪುತ್ರ..ಸೆಟ್ಟೇರಿತು ’ನಿದ್ರಾದೇವಿ Next Door’ ಸಿನಿಮಾ..*   *ನಿದ್ರಾದೇವಿ Next Door’ ಸಿನಿಮಾಗೆ ಮುಹೂರ್ತದ ಸಂಭ್ರಮ..ಪ್ರವೀಣ್ ಶೆಟ್ಟಿ ಪುತ್ರನಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಸಾಥ್..*   ಸೈರನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಪ್ರವೀರ್ ಶೆಟ್ಟಿ ಈಗ ಮತ್ತೊಂದು ವಿಭಿನ್ನ ಕಥೆ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದೆ. ಅದರ ಮೊದಲ ಭಾಗವೆಂಬಂತೆ ಇಂದು ಬೆಂಗಳೂರಿನ ಬನಶಂಕರಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ....

206

Read More...

Record Break.News

Saturday, February 24, 2024

  *ಮಾರ್ಚ್ 8 ರಂದು ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ "ರೆಕಾರ್ಡ್ ಬ್ರೇಕ್"* .    *ಎಂಟು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ ಈ ಪ್ಯಾನ್ ಇಂಡಿಯಾ ಚಿತ್ರ* .   ತೆಲುಗಿನಲ್ಲಿ ಅನೇಕ ಚಿತ್ರಗಳನ್ನು ನಿರ್ಮಿಸಿರುವ, ಈವರೆಗೂ ತೆಲುಗು ಸೇರಿದಂತೆ ಎರಡು ಸಾವಿರಕ್ಕೂ ಅಧಿಕ ಚಲನಚಿತ್ರಗಳನ್ನು ವಿತರಣೆ ಮಾಡಿರುವ ಚಲದವಾಡ ಶ್ರೀನಿವಾಸರಾವ್ ನಿರ್ಮಿಸಿ, ನಿರ್ದೇಶಿಸಿರುವ ಪ್ಯಾನ್ ಇಂಡಿಯಾ ಚಿತ್ರ "ರೆಕಾರ್ಡ್ ಬ್ರೇಕ್". ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಮಾರ್ಚ್ 8, ಮಹಾ ಶಿವರಾತ್ರಿ ದಿನದಂದು ಎಲ್ಲಾ ಭಾಷೆಗಳಲ್ಲೂ ಭಾರತದಾದ್ಯಂತ ಸುಮಾರು ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಲಿದೆ. ಈ ಚಿತ್ರದ ಕುರಿತು ಮಾಹಿತಿಯನ್ನು ಚಿತ್ರತಂಡದ ....

156

Read More...

First Night with Devva.News

Saturday, February 24, 2024

 

*ಟೀಸರ್ ನಲ್ಲೇ ಮೋಡಿ ಮಾಡಿದ "ಫಸ್ಟ್ ನೈಟ್ ವಿತ್ ದೆವ್ವ* "

 

 *ಇದು ಪ್ರಥಮ್ ಅಭಿನಯದ ಚಿತ್ರ* .

 

"ಬಿಗ್ ಬಾಸ್" ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ, ನವೀನ್ ಬೀರಪ್ಪ ನಿರ್ಮಾಣದ ಹಾಗೂ ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ "ಫಸ್ಟ್ ನೈಟ್ ವಿತ್ ದೆವ್ವ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇತ್ತೀಚಿಗೆ ನಡೆದ ಟೀಸರ್ ಬಿಡುಗಡೆ ಸಮಾರಂಭಕ್ಕೆ "ಬಿಗ್ ಬಾಸ್" ಸ್ಪರ್ಧಿಗಳಾದ "ತುಕಾಲಿ" ಸಂತೋಷ್ ಹಾಗೂ ನಮೃತ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

194

Read More...

Ravike Prasanga.News

Wednesday, February 21, 2024

  *ಜನರ ಮನ ಗೆಲ್ಲುತ್ತಿದೆ "ರವಿಕೆ ಪ್ರಸಂಗ"* .    *ವಿಜೇತರಿಗೆ ಬಹುಮಾನ ವಿತರಿಸಿದ ಚಿತ್ರತಂಡ* . .   ಹೆಣ್ಣುಮಕ್ಕಳಿಗೆ ಸೀರೆಯಷ್ಟೇ ರವಿಕೆಯೂ ಅಚ್ಚುಮೆಚ್ಚು. ಅಂತಹ "ರವಿಕೆ" ಯ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ "ರವಿಕೆ ಪ್ರಸಂಗ" ಚಿತ್ರ ಕಳೆದವಾರ ಬಿಡುಗಡೆಯಾಗಿ ಜನರ ಮನ ಗೆಲುತ್ತಿದೆ. "ರವಿಕೆ" ಯ ಕುರಿತಾದ ಸಿನಿಮಾ ಆಗಿರುವುದರಿಂದ ಚಿತ್ರತಂಡ   ವಿಶೇಷ ಡಿಸೈನ್ ರವಿಕೆ ಹೊಲಿಯುವವರಿಗಾಗಿ ಸ್ಪರ್ಧೆ ಆಯೋಜಿಸಿತ್ತು.  ‌ಆ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಹೊಲಿಗೆ ಯಂತ್ರ, ನಗದು ಸೇರಿದಂತೆ ಅನೇಕ ಬಹುಮಾನಗಳನ್ನು ನೀಡಲಾಯಿತು. ನಿರ್ದೇಶಕ ಸಂತೋಷ್ ಕೊಡೆಂಕೆರಿ, ಕಥೆ ಬರೆದಿರುವ ಪಾವನ ಸಂತೋಷ್, ನಟಿ ಗೀತಾಭಾರತಿ ಭಟ್, ಉದ್ಯಮಿ ಮತ್ತು ....

167

Read More...

Mehabooba.Film News

Saturday, February 24, 2024

  *'ಮೆಹಬೂಬಾ’ ಟೀಸರ್ ಅನಾವರಣ..ಮಾ.15ಕ್ಕೆ ಶಶಿ ಚೊಚ್ಚಲ ಕನಸು ಯಾನ*   *ಶಶಿ ’ಮೆಹಬೂಬಾ’ನಿಗೆ ಜೊತೆಯಾದ ಕನ್ನಡ ಬಿಗ್ ಬಾಸ್ ವಿನ್ನರ್ಸ್..ಮಾ.15ಕ್ಕೆ ಚಿತ್ರ ಬಿಡುಗಡೆ*     *ಮಾ.15ಕ್ಕೆ‌ ’ಮೆಹಬೂಬಾ’ ಮೆರವಣಿಗೆ...ಶಶಿ‌ ಹೊಸ ಪ್ರಯತ್ನದ ಝಲಕ್  ರಿಲೀಸ್ .*     *ಕಣ್ಣೀರಾದ ಮೆಹಬೂಬಾ ಶಶಿ...ಮಾ.15ಕ್ಕೆ ಸರ್ವಧರ್ಮ ಸಾಮರಸ್ಯ ಚಿತ್ರ ಬಿಡುಗಡೆ*     ಮಾರ್ಡನ್ ರೈತ ಶಶಿ ಹೊಸ ಪ್ರಯತ್ನ  ಮೆಹಬೂಬಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಮಾರ್ಚ್ 15ಕ್ಕೆ ಚಿತ್ರ ತೆರೆಗೆ ಬರ್ತಿದೆ. ಪೋಸ್ಟರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಮೆಹಬೂಬಾ ಟೀಸರ್ ಅನಾವರಣಗೊಂಡಿದೆ. ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಟೀಸರ್ ಬಿಡುಗಡೆ ಕಾರ್ಯಕ್ರಮ ....

169

Read More...

Photo.Film News

Wednesday, February 21, 2024

  ಪ್ರಕಾಶ್‌ರಾಜ್, ಡಾಲಿ ಧನಂಜಯ್ ಮೆಚ್ಚಿದ ಫೋಟೋ        ಕಳೆದ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರೇಕ್ಷಕರಿಂದ ಪ್ರಶಂಸೆಗೆ ಒಳಪಟ್ಟಿದ್ದ ‘ಫೋಟೋ’ ಚಿತ್ರವು ಈಗ ಸದ್ದು ಮಾಡುತ್ತಿದೆ.  ಪ್ರಚಾರದ ಸಲುವಾಗಿ  ಪ್ರಕಾಶ್‌ರೈ ಒಡೆತನದ ಶ್ರೀರಂಗಪಟ್ಟಣದಲ್ಲಿರುವ ನಿರ್ದಿಗಂತ ಆಡಿಟೋರಿಯಂದಲ್ಲಿ  ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಪ್ರಕಾಶ್‌ರೈ  ಮಾತನಾಡಿ ನಮ್ಮ ದೇಹಕ್ಕೆ ಆದ ಗಾಯಗಳು ಸುಮ್ಮನಿದ್ದರೂ ವಾಸಿಯಾಗುತ್ತದೆ. ಆದರೆ ಸಮಾಜಕ್ಕೆ ಆಗಿರುವ ಗಾಯ ಸುಮ್ಮನಿದ್ದಷ್ಟು ಜಾಸ್ತಿಯಾಗುತ್ತದೆ.  ಉತ್ಸವ್‌ಗೆ ಸಿನಿಮಾ ತೋರಿಸುವ ಆಸೆ ಇತ್ತು. ಬೇರೆ ....

143

Read More...

4N6 Film.News

Wednesday, February 21, 2024

  "4 ಎನ್ 6"  ಫಸ್ಟ್ ಗ್ಲಿಂಪ್ಸ್ ಟೀಸರ್ ಬಿಡುಗಡೆ          ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ಅವರು  ನಿರ್ಮಿಸಿರುವ, ಮರ್ಡರ್‌ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಥಾಹಂದರ  ಹೊಂದಿರುವ ಚಿತ್ರ 4 ಎನ್ 6. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಫಸ್ಟ್  ಗ್ಲಿಂಪ್ಸ್ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.    ಲವ್ ಮಾಕ್ಟೇಲ್ ಹಾಗೂ ಲವ್ 360  ಖ್ಯಾತಿಯ  ರಚನಾ ಇಂದರ್  ಭವಾನಿಪ್ರಕಾಶ್ ಹಾಗೂ ನವೀನ್ ಕುಮಾರ್,  ಆದ್ಯಶೇಖರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ  "4 ಎನ್ 6" ಚಿತ್ರಕ್ಕೆ  ದರ್ಶನ್ ಶ್ರೀನಿವಾಸ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕೊಲೆಯೊಂದರ ....

191

Read More...

Kamandala.Film News

Tuesday, February 20, 2024

ಆಕರ್ಷಕ ಶೀರ್ಷಿಕೆ ಕಮಂಡಲ       ಉತ್ತರ ಕರ್ನಾಟಕದ ಶಿವು ಜಮಖಂಡಿ  ಈ ಹಿಂದೆ ‘ನನ್ನ ನಿನ್ನ ಪ್ರೇಮಕಥೆ’ ಮತ್ತು ‘ಗುಲಾಲ್ ಡಾಟ್ ಕಾಮ್’ ಚಿತ್ರಗಳನ್ನು ನಿರ್ದೇಶಿಸಿದ್ದರು. ಗ್ಯಾಪ್ ನಂತರ ಈಗ ‘ಕಮಂಡಲ’ ಸಿನಿಮಾಕ್ಕೆ ಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೊನ್ನೆಯಷ್ಟೇ ಪೋಸ್ಟರ್ ಲಾಂಚ್ ಕಾರ್ಯಕ್ರಮ ನಡೆಯಿತು.       ಸಿನಿಮಾವು ದೈವಿಕ ಶಕ್ತಿಯನ್ನು ಹೇಳಲಿದೆ. ಹಾಗಂತ ಇದು ಪೌರಾಣಿಕ ಚಿತ್ರವಲ್ಲ. ಸಿನಿಮಾವು ಚೆನ್ನಾಗಿ ಮೂಡಿಬರಲೆಂದು ೪೮ ದಿನಗಳ ಕಾಲ ವೃತ ಮಾಡಿದ್ದಾರಂತೆ. ಒನ್ ಲೈನ್ ಹುಟ್ಟಿಕೊಂಡಿದ್ದೇ ದೇವಸ್ಥಾನದಲ್ಲಿ. ಕಮಂಡಲ ಎನ್ನುವುದು ಋಷಿ, ಮುನಿಗಳ ಕೈಲಿರುತ್ತದೆ. ಅದರಲ್ಲಿಯ ತೀರ್ಥ ತುಂಬಾ ....

240

Read More...

Purushothamana Prasanga.

Tuesday, February 20, 2024

 ಪುರುಷೋತ್ತಮನಿಗೆ  ಶರಣ್ ಸಾಥ್        ತುಳು ಚಿತ್ರರಂಗದ ಖ್ಯಾತ ಹಾಸ್ಯ ನಟ ದೇವಿದಾಸ್ ಕಾಪಿಕಾಡ್ ನಿರ್ದೇಶನ ಮಾಡಿರುವ ‘ಪುರುಷೋತ್ತಮನ ಪ್ರಸಂಗ’ ಸಿನಿಮಾವು ಕಾಮಿಡಿ, ನೈಜ ಘಟನೆ ಆಧಾರಿತ ಜತೆಗೆ ಕೌಟುಂಬಿಕ ಕಥೆಯನ್ನು ಹೊಂದಿದೆ. ರಾಷ್ಟ್ರಕೂಟ ಪಿಕ್ಚರ‍್ಸ್ ಲಾಂಛನದಲ್ಲಿ ವಿ.ರವಿಕುಮಾರ್ ಮಗನ ಸಲುವಾಗಿ ನಿರ್ಮಾಣ ಮಾಡಿದ್ದಾರೆ. ವಿದೇಶದಲ್ಲಿ ತರಭೇತಿ ಪಡೆದುಕೊಂಡಿರುವ ಅಜಯ್ ಶೀರ್ಷಿಕೆ ಹೆಸರಿನಲ್ಲಿ ನಾಯಕ. ಈ ಹಿಂದೆ ಕಿಸ್, ಮೆಹಬೂಬ, ನಾಟ್‌ಔಟ್ ಸಿನಿಮಾಗಳಲ್ಲಿ  ಅಭಿನಯಿಸಿದ್ದು, ಹೀರೋ ಆಗಿ ಮೊದಲ ಅನುಭವವಂತೆ. ರಿಷಿಕಾನಾಯಕ್ ನಾಯಕಿ. ಇವರೊಂದಿಗೆ ನವೀನ್.ಡಿ.ಪಡೀಲ್, ಅರವಿಂದ್  ಬೋಳಾರ್, ಭೋಜರಾಜ್ ವಾಮಂಜೂರು ಮುಂತಾದವರು ....

191

Read More...

Production 4.News

Monday, February 19, 2024

  *ಗುರು ದೇಶಪಾಂಡೆ ನಿರ್ಮಾಣದ ಹಾಗೂ ಬಿ.ಎಂ ಗಿರಿರಾಜ್ ನಿರ್ದೇಶನದ ನೂತನ ಚಿತ್ರಕ್ಕೆ ಬಿ.ಜೆ.ಭರತ್ ಸಾರಥ್ಯದಲ್ಲಿ ಹಾಡುಗಳ ಧ್ವನಿಮುದ್ರಣ ಆರಂಭ* .   ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ "ಪ್ರೊಡಕ್ಷನ್ ನಂ 4" ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಪೂಜೆ ನಾಗರಭಾವಿಯ ಲೂಪ್ ಸ್ಟುಡಿಯೋಸ್ ನಲ್ಲಿ ನೆರವೇರಿತು. "ಜಟ್ಟ", "ಮೈತ್ರಿ" ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.‌ ಕನ್ನಡದ ಹೆಸರಾಂತ ನಿರ್ದೇಶಕ ಬಿ.ಜೆ.ಭರತ್ ಸಂಗೀತ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.   ಹಿಂದೆ ಸಾಂಗ್ ರೆಕಾರ್ಡಿಂಗ್ ಪೂಜೆ ಎಂದರೆ ಒಂದು ಸಡಗರ ಎಂದು ....

177

Read More...

Majestic 2.News

Monday, February 19, 2024

  ಆಗ ದಾಸ ದರ್ಶನ್ ಈಗ ಮರಿದಾಸ ಭರತ್   ಎರಡು ದಶಕಗಳ ನಂತರ ಮತ್ತೆ ಮೆಜೆಸ್ಟಿಕ್ ನಲ್ಲಿ ಮರಿದಾಸನ ಹವಾ..        ನಟ ದರ್ಶನ್ ಗೆ ದಾಸ ಎಂಬ  ಹೆಸರು ಬಂದಿದ್ದೇ ಮೆಜೆಸ್ಟಿಕ್ ಚಿತ್ರದಿಂದ. 22 ವರ್ಷಗಳ ಹಿಂದೆ ತೆರೆಕಂಡು ದೊಡ್ಡ ದಾಖಲೆ ಬರೆದಿದ್ದ ಮೆಜೆಸ್ಟಿಕ್ ಸಿನಿಮಾ ನಟ ದರ್ಶನ್ ಗೆ ಒಳ್ಳೇ ಹೆಸರನ್ನೂ ತಂದುಕೊಟ್ಟಿತ್ತು. ಆ ಚಿತ್ರಕ್ಕೆ ಆರಂಭದಲ್ಲಿ ಕಾನ್ಸೆಪ್ಟ್ ಹೆಣೆದಿದ್ದ ರಾಮು ಅವರೇ ಈಗ ಮೆಜೆಸ್ಟಿಕ್ ೨ ಹೆಸರಲ್ಲಿ ಚಿತ್ರ ನಿರ್ದೇಶಿಸಲು ಮುಂದಾಗಿದ್ದಾರೆ. ಮಹಾಶಿವರಾತ್ರಿಯ ಶುಭ ದಿನದಂದು ಆ ಚಿತ್ರ ಸೆಟ್ಟೇರಲು ಸಿದ್ದವಾಗಿದೆ. ಈ ಚಿತ್ರದ ಮೂಲಕ ಹಿರಿಯ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್ ಅವರ  ಪುತ್ರ ಭರತ್ ನಾಯಕನಾಗಿ ಪರಿಚಯವಾಗುತ್ತಿದ್ದಾರೆ. ....

198

Read More...

Kuteera.Film News

Saturday, February 17, 2024

ಹೊಸ ಚಿತ್ರಕ್ಕೆ ಸಹಿ ಹಾಕಿದ ಕೋಮಲ್‌ಕುಮಾರ್       ‘ನಮೋ ಭೂತಾತ್ಮ’ ಚಿತ್ರದ ಯಶಸ್ಸಿನಿಂದ ಕೋಮಲ್‌ಕುಮಾರ್ ಸದ್ಯ ಬ್ಯುಸಿಯಾಗುತ್ತಿದ್ದಾರೆ. ಒಂದರ ನಂತರ ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು, ಇದರ ಸಾಲಿಗೆ ‘ಕುಟೀರ’ ಸೇರಿಕೊಂಡಿದೆ. ಶ್ರೀ ಬಂಡೆ ಮಹಾಂಕಾಳಿ ಅಮ್ಮನ ಸನ್ನಿದಿಯಲ್ಲಿ ಅದ್ದೂರಿಯಾಗಿ ಮುಹೂರ್ತ ಸಮಾರಂಭ ನಡೆಯಿತು. ಅನೂಪ್ ಆಂಟೋನಿ ನಿರ್ದೇಶನದಲ್ಲಿ, ಕಂಸಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮಧುಮರಿಸ್ವಾಮಿ ನಿರ್ಮಾಣ ಮಾಡುತ್ತಿದ್ದಾರೆ.       ನಂತರ ಮಾತನಾಡಿದ ಕೋಮಲ್, ಇದೊಂದು ಹಾರರ್ ಕಾಮಿಡಿ ಕಥೆಯನ್ನು ಹೊಂದಿದೆ. ಕುಟೀರ ಹೆಸರಿನ ಪಾಳು ಬಿದ್ದಿರುವ ಮನೆಯಲ್ಲಿ ....

276

Read More...

Krishna Nee Begane Baro.News

Wednesday, February 14, 2024

  ಹೊಸ ಕೃಷ್ಣಾ ನೀ ಬೇಗನೆ ಬಾರೋ         80ರ ದಶಕದಲ್ಲಿ ಡಾ.ವಿಷ್ಣುವರ್ಧನ್ ಅಭಿನಯದ ’ಕೃಷ್ಣಾ ನೀ ಬೇಗನೆ ಬಾರೋ’ ಚಿತ್ರವು ಬಿಡುಗಡೆಗೊಂಡು ಸೂಪರ್‌ಹಿಟ್ ಆಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸೆಟ್ಟೇರಿದೆ. ಪ್ರೇಮಿಗಳ ದಿನದಂದು ಬಲಮರಿ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಮುಹೂರ್ತ ನಡೆಯಿತು. ನಟರಾದ ಅನೀಶ್‌ತೇಜಶ್ವರ್ ಮತ್ತು ಇಶಾನ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ನಿರ್ಮಾಪಕರ ಸೋದರ ಹೈದರಬಾದ್ ಉದ್ಯಮಿ ಶ್ರೀನಿಬಾಬು ಪುಲ್ಲೆಟ್ ಕ್ಯಾಮಾರ ಆನ್ ಮಾಡಿದರು. ದುಬೈನ ಎಸ್.ನೀಲಕಂಠ ಮತ್ತು ಚಲಪತಿರಾಜು ಜಂಟಿಯಾಗಿ ನೀಲಕಂಠ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ ಹೂಡುತ್ತಿದ್ದಾರೆ. ಟಾಲಿವುಡ್‌ನ ಜಿ.ಸೂರ್ಯತೇಜ ....

172

Read More...

Evidence.Film News

Tuesday, February 13, 2024

  ಎವಿಡೆನ್ಸ್ ಲಿರಿಕಲ್ ಸಾಂಗ್ ಬಿಡುಗಡೆ       ಇಂಟರಾಗೇಶನ್ ರೂಮ್ ನಲ್ಲಿ ನಡೆಯುವ ಕ್ರೈಂ ಕಂಟೆಂಟ್  ಜೊತೆಗೊಂದು ತ್ರಿಕೋನ‌ ಪ್ರೇಮಕಥೆ ಇಟ್ಟುಕೊಂಡು ಪ್ರವೀಣ ಸಿಪಿ. ಆಕ್ಷನ್ ಕಟ್ ಹೇಳಿರುವ ಚಿತ್ರ ಎವಿಡೆನ್ಸ್. ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ’ಅಯ್ಯಯ್ಯೋ ಅರೆಮನಕೆ’ ಎಂಬ ಲಿರಿಕಲ್ ಹಾಡಿನ ಬಿಡುಗಡೆ ಹಾಗೂ ಪತ್ರಿಕಾಗೋಷ್ಟಿ ನಡೆಯಿತು. ಶ್ರೀಧೃತಿ ಪ್ರೊಡಕ್ಷನ್ಸ್ ಹಾಗೂ ರೋಷಿರಾ ಪ್ರೊಡಕ್ಷನ್ಸ್  ಲಾಂಛನದಲ್ಲಿ  ಕೊಡ್ಲಾಡಿ ಸುರೇಂದ್ರ ಶೆಟ್ಟಿ, ಶ್ರೀನಿವಾಸ್‌ಪ್ರಭು ಕೆ, ಕೆ.ಮಾದೇಶ್ (ಕೊಡಿಹಳ್ಳಿ), ನಟರಾಜ್ ಸಿ.ಎಸ್.(ಚನ್ನಸಂದ್ರ) ಸೇರಿ ನಿರ್ಮಿಸಿರುವ  ಈ ಚಿತ್ರಕ್ಕೆ ಪ್ರವೀಣ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ.      ....

175

Read More...

TPL 3.News

Friday, February 16, 2024

*N1 ಕ್ರಿಕೆಟ್ ಅಕಾಡೆಮಿ ಪ್ರೆಸೆಂಟ್ TPL-3 ಟ್ರೋಫಿ ಹಾಗೂ ಜೆರ್ಸಿ ಬಿಡುಗಡೆ..ಫೆ.28ರಿಂದ ಶುರು ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ..*     *ಮತ್ತೆ ಬಂದೇ ಬಿಡ್ತು N1 ಕ್ರಿಕೆಟ್ ಅಕಾಡೆಮಿ ಪ್ರೆಸೆಂಟ್ TPL.. ಫೆ.28ರಿಂದ ಮಾ.3ರವೆರೆಗೆ ನಡೆಯಲಿದೆ ಟೆಲಿವಿಷನ್ ಪ್ರೀಮಿಯರ್ ಲೀಗ್*   ಕಲಾವಿದರು ಮತ್ತು ತಂತ್ರಜ್ಞರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ N1 ಕ್ರಿಕೆಟ್ ಅಕಾಡೆಮಿಯ ಬಿಆರ್ ಸುನಿಲ್ ಕುಮಾರ್ ಕಳೆದ ಎರಡು ವರ್ಷಗಳಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಸುತ್ತಾ ಬಂದಿದ್ದಾರೆ. ಈಗಾಗಲೇ ಯಶಸ್ವಿಯಾಗಿ 2 ಸೀಸನ್ ಮುಕ್ತಾಯಗೊಂಡಿದ್ದು, ಇದೀಗ ಟಿಪಿಎಲ್ ಮೂರನೇ ಸೀಸನ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿ ಕಿರುತೆರೆ ಕಲಾವಿದರ ಕ್ರಿಕೆಟ್ ....

173

Read More...

Kreem.Film News

Thursday, February 15, 2024

ಕ್ರೀಂ ಟ್ರೇಲರ್ ಬಿಡುಗಡೆ

      ಮಹಿಳಾ ಪ್ರಧಾನ ಕಥೆಯನ್ನು ಹೊಂದಿರುವ ‘ಕ್ರೀಂ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ಇತ್ತೀಚೆಗೆ ನಡೆಯಿತು. ಅಭಿಷೇಕ್ ಬಸಂತ್ ಕಥೆ,ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ಡಿ.ಕೆ.ದೇವೇಂದ್ರ ಬಂಡವಾಳ ಹೂಡಿದ್ದಾರೆ.

      ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಗ್ನಿಶ್ರೀಧರ್ ನನಗೆ ನಟನೆಗಿಂತ ಬರವಣಿಗೆಯಲ್ಲಿ  ಹೆಚ್ಚು ಆಸಕ್ತಿ. ನಿರ್ಮಾಪಕರ ಒತ್ತಾಯದ ಮೇಲೆ ಬಣ್ಣ ಹಚ್ಚಬೇಕಾಯಿತು. ವಿಷಯವನ್ನು ಕೊನೆವರೆಗೂ ಗೌಪ್ಯವಾಗಿಡಬೇಕೆಂದು ಹೇಳಿದ್ದೆ. ಆದರೆ ತುಣುಕುಗಳಲ್ಲಿ ನನ್ನನ್ನು ತೋರಿಸಿಬಿಟ್ಟಿದ್ದಾರೆ ಎಂದರು.

160

Read More...
Copyright@2018 Chitralahari | All Rights Reserved. Photo Journalist K.S. Mokshendra,