ನೆಲ್ಸನ್ ಆಗಿ ವಿನೋಧ್ಪ್ರಭಾಕರ್
‘ಫೈಟರ್’ ಯಶಸ್ಸಿನ ಗುಂಗಿನಲ್ಲಿರುವ ವಿನೋಧ್ಪ್ರಭಾಕರ್ ಈಗ ‘ನೆಲ್ಸನ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಉಪೇಂದ್ರ ಟೀಸರ್ ಬಿಡುಗಡೆ ಮಾಡಿದರು. ನಂತರ ಮಾತನಾಡಿ ಟೈಗರ್ ಹವಾ ಆಗಲೂ ಇತ್ತು. ಈಗಲೂ ಇರುತ್ತೆ. ಮುಂದೆಯೂ ಇರುತ್ತದೆ. ನಿಮ್ಮ ತಂದೆ ಸಿನಿಮಾಗೆ ಡೈಲಾಗ್ ಬರೆದಿದ್ದೆ. ಇವತ್ತು ಅಪ್ಪ ನಿಮಗೆ ಆರ್ಶಿವಾದ ಮಾಡಿದ್ದಾರೆ. ಎಲ್ಲವೂ ಸೂಪರ್ ಆಗಿದೆ. ಮೇಕಿಂಗ್, ಗೆಟಪ್ ಚೆನ್ನಾಗಿದೆ. ಸೆಬ್ಜೆಕ್ಟ್ ಬೇರೆ ತರಹ ಇದೆ. ನಿಮಗೆಲ್ಲರಿಗೂ ಒಳ್ಳಯದಾಗಲಿ.
ಮಹಿಳಾಪ್ರಧಾನ ಚಿತ್ರ ಫೀನಿಕ್ಸ್
‘ಹುಚ್ಚ’ ‘ಎಕೆ ೪೭’ ‘ಸಿಂಹದ ಮರಿ’ ಸೇರಿದಂತೆ ಹಲವಾರು ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿರುವ ಓಂ ಪ್ರಕಾಶ್ರಾವ್ ಗ್ಯಾಪ್ ನಂತರ ‘ಫೀನಿಕ್ಸ್’ ಸಿನಿಮಾಕ್ಕೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುವ ಜತೆಗೆ ಶ್ರೀ ಗುರು ಚಿತ್ರಾಲಯ ಬ್ಯಾನರ್ ಅಡಿಯಲ್ಲಿ ತ್ರಿಷಾ ಪ್ರಕಾಶ್ ಹೆಸರಿನಲ್ಲಿ ಬಂಡವಾಳ ಹೂಡುತ್ತಿದ್ದಾರೆ. ಇದು ನಿರ್ದೇಶಕರ ೪೯ನೇ ಚಿತ್ರವಾಗಿದ್ದು, ಮೊದಲಬಾರಿ ಮಹಿಳಾ ಪ್ರಧಾನ ಕಥಾಹಂದರವನ್ನು ತೆಗೆದುಕೊಂಡಿರುವುದು ವಿಶೇಷ.
ಕಳೆದವಾರ ಮಾಗಡಿ ರಸ್ತೆಯ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯಿತು.
ಕ್ರೈಂ ಥ್ರಿಲ್ಲರ್ "ಸೈಕಿಕ್" ಕಿರುನೋಟ ಬಿಡುಗಡೆ ಕ್ರೈಮ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಸೈಕಿಕ್ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ನಿವೃತ್ತ ಪೊಲೀಸ್ ಆಧಿಕಾರಿಗಳ ಉಪಸ್ಥಿತಿಯಲ್ಲಿ ನೆರವೇರಿತು. ಹತ್ತಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಕಲನಕಾರರಾಗಿ ಕೆಲಸ ಮಾಡಿರುವ ಪುಷ್ಕರ್ ಗಿರಿಗೌಡ, ಸೈಕಿಕ್ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಕ್ರೈಮ್, ಸಸ್ಪೆನ್ಸ್, ಥ್ರಿಲ್ಲರ್ ಚಿತ್ರಗಳನ್ನು ಮಾಮೂಲಿ ಚೌಕಟ್ಟನ್ನು ಬಿಟ್ಟು ಈರೀತಿಯೂ ಮಾಡಿ ತೋರಿಸಬಹುದು ಎಂದು ಹೇಳಹೊರಟಿರುವ ನಿರ್ದೇಶಕ ಪುಷ್ಕರ ಗಿರಿಗೌಡ ಅದಕ್ಕೆ ತಕ್ಕಂತೆ ಕಥೆ, ಚಿತ್ರಕಥೆಯನ್ನೂ ರಚಿಸಿದ್ದಾರೆ. ನಿರ್ದೇಶಕ ಕೆ.ಎಂ.ಚೈತನ್ಯ, ನಿವೃತ್ತ ಎಸಿಪಿಗಳಾದ ....
*ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ "ಅಥಿ" ಐ ಲವ್ ಯು* ಇತ್ತೀಚಿಗೆ ಬರುತ್ತಿರುವ ಕನ್ನಡದ ಹೊಸ ಚಿತ್ರಗಳ ಹೊಸ ಪ್ರಯತ್ನವನ್ನು ಪ್ರೇಕ್ಷಕ ಮೆಚ್ಚಿಕೊಳ್ಳುತ್ತಿದ್ದಾನೆ. ಅಂತಹುದೆ ಒಂದು ವಿಭಿನ್ನ ಕಥಾಹಂದರ ಹೊಂದಿರುವ "ಅಥಿ" ಐ ಲವ್ ಯು ಚಿತ್ರ ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆದಿದೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ನನ್ನ ನಿರ್ಮಾಣದ ಎರಡನೇ ಚಿತ್ರವಿದು. ನಿರ್ದೇಶಕ ಲೋಕೇಂದ್ರ ಸೂರ್ಯ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣ ಮಾಡಿದ್ದೇನೆ. ಸತಿಪತಿಯರ ಸಂಬಂಧದ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರುತ್ತೇನೆ. ....
*ಮತ್ತೆ ಒಂದಾಯ್ತು ‘ಸೂರರೈ ಪೋಟ್ರು’ ಟೀ…ಸೂರ್ಯ 43ನೇ ಸಿನಿಮಾಗೆ ಸುಧಾ ಕೊಂಗರ ಆಕ್ಷನ್ ಕಟ್* ತಮಿಳಿನ ಖ್ಯಾತ ನಟ ಸೂರ್ಯ ಹಾಗೂ ನಿರ್ದೇಶಕಿ ಸುಧಾ ಕೊಂಗರ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನ ಆಧಾರಿತ ಸಿನಿಮಾ ಸೂರರೈ ಪೋಟ್ರು ಮೂಲಕ ಸಂಚಲನ ಸೃಷ್ಟಿಸಿದ್ದ ಈ ಜೋಡಿ ಮಗದೊಮ್ಮೆ ಒಂದಾಗಿದ್ದಾರೆ. ಸೂರ್ಯ ನಟಿಸಲಿರುವ 43ನೇ ಸಿನಿಮಾಗೆ ಸುಧಾ ಕೊಂಗರ ಆಕ್ಷನ್ ಕಟ್ ಹೇಳ್ತಿದ್ದಾರೆ. ಸೂರರೈ ಪೋಟ್ರು ಸಿನಿಮಾ ಪ್ರೇಕ್ಷಕರು ಹಾಗೂ ವಿಮರ್ಷಕರಿಂದಲೂ ಭಾರೀ ಮೆಚ್ಚುಗೆ ಪಡೆದುಕೊಂಡಿತ್ತು. ಆಸ್ಕರ್ ರೇಸ್ ಗೂ ಇಳಿದಿದ್ದ ಈ ಚಿತ್ರ ಹಲವು ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಬಾಚಿಕೊಂಡಿತ್ತು. ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ....
*'ಟಗರು ಪಲ್ಯ’ ಟ್ರೇಲರ್ ಬಂತು....ಡಿಬಾಸ್ ಮೆಚ್ಚಿದ ಟ್ರೇಲರ್ ನಲ್ಲಿ ಏನಿದೆ?* *ಟಗರು ಪಲ್ಯ ಟ್ರೇಲರ್ ರಿಲೀಸ್ ಮಾಡಿದ ಡಿಬಾಸ್...ಡಾಲಿ ಬಳಿ ದಚ್ಚು ಇಟ್ಟ ಸ್ವೀಟ್ ಬೇಡಿಕೆ ಏನು* ಡಾಲಿ ಧನಂಜಯ್ ನಿರ್ಮಾಣ ಮಾಡಿರುವ ಮೂರನೇ ಸಿನಿಮಾ ಟಗರು ಪಲ್ಯದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಕಲಾವಿದರ ಸಂಘದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಆಕರ್ಷಕ ಬಿಂದು ಡಿಬಾಸ್.. ಡಾಲಿ ನಿರ್ಮಾಣದ ಟಗಲು ಪಲ್ಯ ಟ್ರೇಲರ್ ರಿಲೀಸ್ ಮಾಡಿದ ದಚ್ಚು ಇಡೀ ತಂಡಕ್ಕೆ ಶುಭ ಹಾರೈಸಿದರು. ತಾರಾ, ರಂಗಾಯಣ ರಘು, ಅಮೃತಾ, ನಾಗಭೂಷಣ್ ಸೇರಿದಂತೆ ನೀನಾಸಂ ಸತೀಶ್ ಹಾಗೂ ನೆನಪಿರಲಿ ಪ್ರೇಮ್ ಇವೆಂಟ್ ನಲ್ಲಿ ಭಾಗಿಯಾಗಿದ್ದರು. ....
ಅಭಿಮಾನಿಗಳಿಂದ ಅರ್ದಂಬರ್ದ ಪ್ರೇಮಕಥೆಯ ಹಾಡು... ಬಿಗ್ಬಾಸ್ ಜೋಡಿ ದಿವ್ಯಾ ಉರಡುಗ ಹಾಗೂ ಬೈಕ್ ರೇಸರ್ ಅರವಿಂದ್ ಕೆಪಿ. ಈಗ ಬೆಳ್ಳಿತೆರೆಯ ಮೇಲೂ ಯುವ ಪ್ರೇಮಿಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹುಲಿರಾಯ ಖ್ಯಾತಿಯ ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅರ್ದಂಬರ್ದ ಪ್ರೇಮಕಥೆ. ಮುಂದಿನ ತಿಂಗಳು ರಿಲೀಸ್ ಗೆ ಸಿದ್ದವಾಗಿರುವ ಈ ಚಿತ್ರದ ಹಾಡೊಂದನ್ನು ಅಭಿಮಾನಿಗಳೇ ಬಿಡುಗಡೆ ಮಾಡಿದರು. ನಿರ್ದೇಶಕರೇ ಸಾಹಿತ್ಯ ರಚಿಸಿದ ’ಹುಚ್ಚುಮನಸಿನ ಹುಡುಗಿ’ ಎಂಬ ಹಾಡಲ್ಲಿ ನಾಯಕ, ನಾಯಕಿಯ ಮನದ ಭಾವನೆಗಳನ್ನು ತೆರೆದಿಡಲಾಗಿದೆ. ಮ್ಯಾಜಿಕಲ್ ಕಂಪೋಜರ್ ಅರ್ಜುನ್ ಜನ್ಯ ಈ ಹಾಡಿಗೆ ಮ್ಯೂಸಿಕ್ ಕಂಪೋಜ್ ಮಾಡಿದ್ದು, ವಾಸುಕಿ ....
*ಟ್ರೇಲರ್ ನಲ್ಲಿ ಸದ್ದು ಮಾಡುತ್ತಿದೆ ಯತಿರಾಜ್ ನಿರ್ದೇಶನದ "ಸತ್ಯಂ ಶಿವಂ"* . ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್ ನಿರ್ದೇಶನದ "ಸತ್ಯಂ ಶಿವಂ" ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಹಾಗೂ ಎರಡು ಹಾಡುಗಳ ಪ್ರದರ್ಶನ ಇತ್ತೀಚೆಗೆ ನಡೆಯಿತು. ನಿರ್ದೇಶಕ ದಯಾಳ್ ಪದ್ಮನಾಭನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ತಮಿಳಿನ ಖ್ಯಾತ ನಿರ್ದೇಶಕ ಕೆ ಬಾಲಚಂದರ್, ಕಲಾವಿದರ ಬಾಡಿ ಲಾಂಗ್ವೇಜ್ ನ್ನೆ ಪಾತ್ರವನ್ನಾಗಿಸಿ ಅಭಿನಯ ತೆಗೆಸುತ್ತಿದ್ದರು. ಅದೇ ಫಾರ್ಮುಲವನ್ನೆ ಯತಿರಾಜ್ ಅನುಸರಿಸಿದಂತೆ ಕಾಣುತ್ತದೆ ಎಂದು ಮಾರ್ಮಿಕವಾಗಿ ದಯಾಳ್ ಹೇಳಿದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ಯತಿರಾಜ್ , "ಸತ್ಯಂ ....
*ಅಜಯ್ ರಾಜ್ ಅಭಿನಯದ "ಮನ್ ರೇ " ಚಿತ್ರ ನವೆಂಬರ್ ನಲ್ಲಿ ಆರಂಭ* . ಕಳೆದ ತಿಂಗಳು ನಡೆದ ‘ಸೇನಾಪುರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಯದಲ್ಲೇ ಸದ್ಯದಲ್ಲೇ ಇನ್ನೊಂದು ಹೊಸ ಚಿತ್ರದ ಘೋಷಣೆ ಮಾಡುವುದಾಗಿ ನಿರ್ದೇಶಕ ಗುರು ಸಾವನ್ ಹೇಳಿಕೊಂಡಿದ್ದರು. ಅದರಂತೆ ಒಂದು ತಿಂಗಳ ಒಳಗೆ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಮನ್ ರೇ’. ಚಿತ್ರದ ಘೋಷಣೆ ಅಧಿಕೃತವಾಗಿ ಸೋಮವಾರದಂದು ಆಗಿದ್ದು, ನವೆಂಬರ್ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಭೂಮಿಕಾ ಕ್ರಿಯೇಷನ್ಸ್ ನಡಿ ತಿಲಕ್ ರಾಜು ಮತ್ತು ರಾಜಣ್ಣ ನಿರ್ಮಿಸುತ್ತಿರುವ ‘ಮನ್ರೇ’ ಚಿತ್ರದಲ್ಲಿ ಅಜಯ್ ರಾಜ್ ನಾಯಕನಾಗಿ ಕಾಣಿಸಿಕೊಂಡರೆ, ಗಾಯಕಿ ಐಶ್ವರ್ಯ ರಂಗರಾಜನ್ ಈ ....
ಘೋಸ್ಟ್ದಲ್ಲಿ ಶಿವಣ್ಣ ಮೂರು ಶೇಡ್ಸ್ ‘ಘೋಸ್ಟ್’ ಚಿತ್ರವು ಗುರುವಾರದಂದು ಬಿಡುಗಡೆಯಾಗಲಿದೆ. ಇದರ ಅಂಗವಾಗಿ ಕೊನೆ ಹಂತ ಎನ್ನುವಂತೆ ಬಿಡುಗಡೆಪೂರ್ವ ಸುದ್ದಿಗೋಷ್ಟಿಯಲ್ಲಿ ತಂಡವು ಮಾದ್ಯಮದವರನ್ನು ಭೇಟಿ ಮಾಡಿ ಒಂದಷ್ಟು ವಿಷಯಗಳನ್ನು ಹೇಳಿಕೊಂಡಿತು. ನಿರ್ಮಾಪಕ ಸಂದೇಶ್ ಹೇಳುವಂತೆ ಇಲ್ಲಿಯತನಕ ೩೭೫ ಕೇಂದ್ರಗಳು ಫೈನಲ್ ಆಗಿದ್ದು, ಇನ್ನು ಮೂರು ದಿನದೊಳಗೆ ಹೆಚ್ಚಾಗುವ ಸಾಧ್ಯತೆ ಇದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದ್ದು, ಒಂದು ವಾರದ ನಂತರ ತೆಲುಗುದಲ್ಲಿ ರಿಲೀಸ್ ಆಗಲಿದೆ. ನಮ್ಮ ಸಂಸ್ಥೆಯಿಂದ ಶಿವಣ್ಣ ಮಾಡಿರುವ ಮೂರನೇ ಚಿತ್ರ. ಅಂದುಕೊಂಡ ಹಾಗೆ ವರ್ಷದೊಳಗೆ ....
ಘೋಸ್ಟ್ದಲ್ಲಿ ಶಿವಣ್ಣ ಮೂರು ಶೇಡ್ಸ್ ‘ಘೋಸ್ಟ್’ ಚಿತ್ರವು ಗುರುವಾರದಂದು ಬಿಡುಗಡೆಯಾಗಲಿದೆ. ಇದರ ಅಂಗವಾಗಿ ಕೊನೆ ಹಂತ ಎನ್ನುವಂತೆ ಬಿಡುಗಡೆಪೂರ್ವ ಸುದ್ದಿಗೋಷ್ಟಿಯಲ್ಲಿ ತಂಡವು ಮಾದ್ಯಮದವರನ್ನು ಭೇಟಿ ಮಾಡಿ ಒಂದಷ್ಟು ವಿಷಯಗಳನ್ನು ಹೇಳಿಕೊಂಡಿತು. ನಿರ್ಮಾಪಕ ಸಂದೇಶ್ ಹೇಳುವಂತೆ ಇಲ್ಲಿಯತನಕ ೩೭೫ ಕೇಂದ್ರಗಳು ಫೈನಲ್ ಆಗಿದ್ದು, ಇನ್ನು ಮೂರು ದಿನದೊಳಗೆ ಹೆಚ್ಚಾಗುವ ಸಾಧ್ಯತೆ ಇದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದ್ದು, ಒಂದು ವಾರದ ನಂತರ ತೆಲುಗುದಲ್ಲಿ ರಿಲೀಸ್ ಆಗಲಿದೆ. ನಮ್ಮ ಸಂಸ್ಥೆಯಿಂದ ಶಿವಣ್ಣ ಮಾಡಿರುವ ಮೂರನೇ ಚಿತ್ರ. ಅಂದುಕೊಂಡ ಹಾಗೆ ವರ್ಷದೊಳಗೆ ....
*ರಿಷಭ್ ಶೆಟ್ಟಿ ಐಕಾನಿಕ್ ಡೈರೆಕ್ಟರ್; ರಕ್ಷಿತ್ ಶೆಟ್ಟಿ ಟ್ರೆಂಡಿಂಗ್ ಆ್ಯಕ್ಷರ್* *6ನೇ ಇನ್ನೋವೇಟೀವ್ ಅಂತರರಾಷ್ಟ್ರೀಯ* *ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ* ಕಳೆದ ವರ್ಷ ತಮ್ಮ ವಿಭಿನ್ನ ಪ್ರಯತ್ನದಿಂದ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯತೆ ತಂದುಕೊಟ್ಟ ‘ಕಾಂತಾರ’ ಖ್ಯಾತಿಯ ರಿಷಭ್ ಶೆಟ್ಟಿ ಈಗ ‘ಐಕಾನಿಕ್ ಡೈರೆಕ್ಟರ್’ ಆಗಿ ಹೊರಹೊಮ್ಮಿದ್ದಾರೆ. ಇನ್ನು, ‘777 ಚಾರ್ಲಿ’ ಚಿತ್ರದಲ್ಲಿ ತಮ್ಮ ಅದ್ಭುತ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾದ ರಕ್ಷಿತ್ ಶೆಟ್ಟಿ ‘ಟ್ರೆಂಡಿಂಗ್ ಆ್ಯಕ್ಟರ್’ ಆಗಿದ್ದಾರೆ. ಅವರಿಬ್ಬರಿಗೂ ಇಂಥದ್ದೊಂದು ....
ಕಾಲಾಪತ್ತರ್ದಲ್ಲಿ ಗೋರುಕನ ಹಾಡು ‘ಕೆಂಡಸಂಪಿಗೆ’ ಚಿತ್ರದ ಮೂಲಕ ನಾಯಕನಾಗಿ ಪರಿಚಯಗೊಂಡಿದ್ದ ವಿಕ್ಕಿವರುಣ್ ಈಗ ‘ಕಾಲಾಪತ್ಥರ್’ ಸಿನಿಮಾದಲ್ಲಿ ನಟನೆ ಹಾಗೂ ನಿರ್ದೇಶಕನ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಭುವನ್ ಮೂವೀಸ್ ಬ್ಯಾನರಿನಲ್ಲಿ ಸುರೇಶ್ ಮತ್ತು ನಾಗರಾಜು ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಮೊನ್ನೆಯಷ್ಟೇ ಅಶ್ವಿನಿಪುನೀತ್ರಾಜ್ಕುಮಾರ್ ಮತ್ತು ತಾರಾ ಸಿನಿಮಾದ ಮೊದಲ ಗೀತೆ ‘ಗೋರುಕನ ಗಾನ’ ಬಿಡುಗಡೆ ಮಾಡಿ ತಂಡಕ್ಕೆ ಶುಭಹಾರೈಸಿದರು. ಇದರ ಕುರಿತಂತೆ ಮಾತನಾಡಿರುವ ವಿಕ್ಕಿವರುಣ್ ಹಾಡಿಗೆ ಅನೂಪ್ಸೀಳನ್ ಸಂಗೀತ, ಡಾ.ವಿ.ನಾಗೇಂದ್ರಪ್ರಸಾದ್ ಸಾಹಿತ್ಯ, ....
'ಸೈಕಲ್ ಸವಾರಿ’ ಮಿಠಾಯಿ ಮಾರುವವನ ಜವಾರಿ ಪ್ರೇಮಕಥೆ ಹಳ್ಳಿಯಲ್ಲಿ ಮಿಠಾಯಿ ಮಾರಿಕೊಂಡು ಜೀವನ ನಡೆಸುತ್ತಿದ್ದ ಯುವಕನೊಬ್ಬನನ್ನು ಶ್ರೀಮಂತ ಮನೆತನದ ಯುವತಿಯು ಪ್ರೀತಿಸಿದಾಗ ಏನಾಗಬಹುದು ಎಂಬುದನ್ನು ಸೈಕಲ್ ಸವಾರಿ ಚಿತ್ರದ ಮೂಲಕ ನಿರ್ದೇಶಕ ದೇವು ಕೆ.ಅಂಬಿಗ ಅವರು ಹೇಳಹೊರಟಿದ್ದಾರೆ. ಕಲಾರಂಗ್ ಫಿಲಂ ಸ್ಟುಡಿಯೋ ಅಂಡ್ ಪ್ರೊಡಕ್ಷನ್ಸ್ ವತಿಯಿಂದ ಸುರೇಶ್ ಶಿವೂರ ಹಾಗೂ ಲೋಕೇಶ್ ಸವದಿ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಂಪೂರ್ಣ ಉತ್ತರ ಕರ್ನಾಟಕ ಸೊಗಡಿನ ಭಾಷೆ, ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ನಿರ್ದೇಶಕ ದೇವು ಅವರೇ ನಾಯಕನಾಗಿಯೂ ನಟಿಸಿದ್ದಾರೆ. ಬಿಜಾಪುರದ ದೀಕ್ಷಾ ಬೀಸೆ ನಾಯಕಿಯಾಗಿ ....
ಪ್ರಸ್ತುತ ವ್ಯವಸ್ಥೆಗೆ ಕನ್ನಡಿ ಹಿಡಿಯುವ ಮಾಯೆ ಅಂಡ್ ಕಂಪನಿ ದೂರದರ್ಶನದಲ್ಲಿ ಯಶಸ್ವಿಯಾಗಿ ನಿವೃತ್ತಿಗೊಂಡಿರುವ ಎಂ.ಎನ್.ರವೀಂದ್ರರಾವ್ ಮಾತೃಶ್ರೀ ವಿಷನ್ ಸಂಸ್ಥೆ ಹುಟ್ಟುಹಾಕಿ ಇದರ ಮೂಲಕ ಪ್ರಥಮ ಪ್ರಯತ್ನ ಎನ್ನುವಂತೆ ‘ಮಾಯೆ ಅಂಡ್ ಕಂಪನಿ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸಹ ನಿರ್ಮಾಪಕರುಗಳಾಗಿ ಜಿ.ಮೋಹನ್ಕುಮಾರ್, ಎಸ್.ನರಸಿಂಹರಾಜು ಕೈ ಜೋಡಿಸಿದ್ದಾರೆ. ಸಂದೀಪ್ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ಬಣಕಾರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ಜೋಷಿ, ನಟಿ ....
*ಅನಿರುದ್ಧ್ ಜತಕರ್ ಅಭಿನಯದ "chef ಚಿದಂಬರ" ಚಿತ್ರದ ಚಿತ್ರೀಕರಣ ಮುಕ್ತಾಯ* . ಹಿರಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ನಟ ಅನಿರುದ್ಧ್ ಜತಕರ್ ನಾಯಕರಾಗಿ ನಟಿಸಿರುವ, "ರಾಘು" ಚಿತ್ರದ ಖ್ಯಾತಿಯ ಎಂ.ಆನಂದರಾಜ್ ನಿರ್ದೇಶನದ "chef ಚಿದಂಬರ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು. ನಮ್ಮ ಚಿತ್ರದ ಚಿತ್ರೀಕರಣ ಆಗಸ್ಟ್ 10ರಂದು ಆರಂಭವಾಗಿತ್ತು. ಅಕ್ಟೋಬರ್ 10ರಂದು ಮುಕ್ತಾಯವಾಗಿದೆ ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ಆನಂದರಾಜ್, ನಮ್ಮ ಚಿತ್ರಕ್ಕೆ ಒಟ್ಟು 29 ದಿನಗಳ ಕಾಲ ಬೆಂಗಳೂರು, ಮಂಗಳೂರು, ತುಮಕೂರು, ದೇವರಾಯನದುರ್ಗ ಮುಂತಾದ ಕಡೆ ....
ಸ್ಯಾಂಡಲ್ವುಡ್ ಗೆ ನಾಯಕ ನಟನಾಗಿ ಪಾದಾರ್ಪಣೆ ಮಾಡುತ್ತಿರುವ ಯುವ ನಟ ದಕ್ಷ ನಾಯಕತ್ವದ, ಮಕ್ ದುಮ್ ಪಟೇಲ್,ಶೇಕ್ ಸಬೀರ್ ನಿರ್ಮಾಣದ,*ನೇತ್ರ೦* ಚಿತ್ರದ ಬಿಡುಗಡೆಯ ದಿನಾಂಕದ ಘೋಷಣೆ ಆಗಿದ್ದು,
ಚಿತ್ರ ರಾಜ್ಯಾದ್ಯಂತ ಇದೇ ನವೆಂಬರ್ 17ಕ್ಕೆ ಬರುತ್ತಿದೆ..
ಚಿತ್ರದ ನಾಯಕ ನಟ ದಕ್ಷ ಮಾತನಾಡಿ ಅಲ್ಲಿನ ವಾತಾವರಣವನ್ನು ತಿಳಿ ಮಾಡಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವ್ರನ್ನ ನೆನೆದು,ಅವರಿದ್ದರೆ ಖಂಡಿತಾ ಪ್ರೆಸ್ಸ್ ಮೀಟ್ ಗೆ ಬರ್ತಾ ಇದ್ರು, ನಮಗೆ ಆ ಅದೃಷ್ಟ ಇಲ್ಲ ಎನ್ನುವುದರ ಮೂಲಕ ಭಾವುಕರಾದರು..
ಅಪ್ಪು ಬಾಸ್ ನ ಭೇಟಿಯಾಗೆ ಬಂದು,ಚಿತ್ರದ ಬಿಡುಗಡೆಯ ಪತ್ರಿಕಾ ಗೋಷ್ಠಿ ಮಾಡ್ತಾ ಇದೀವಿ ಎನ್ನುವುದರ ಮೂಲಕ ತಮ್ಮ ಪ್ರೀತಿಯನ್ನು ತೋರಿಸಿದರು..
*ಲವ್ ರೆಡ್ಡಿ ಸಿನಿಮಾದ ಫಸ್ಟ್ ಗ್ಲಿಂಪ್ಸ್ ರಿಲೀಸ್...ಹೊಸಬರ ಪ್ರಯತ್ನಕ್ಕೆ ಸಾಥ್ ಕೊಟ್ಟ ಪ್ರದೀಪ್ ಈಶ್ವರ್* ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಸಿನಿಮಾ ಲವ್ ರೆಡ್ಡಿ... ಟೈಟಲ್ ಹೇಳುವಂತೆ ಇದೊಂದು ಸುಂದರ ಪ್ರೇಮಕಥೆ ಜೊತೆಗೆ ಫ್ಯಾಮಿಲಿ ಎಮೋಷನಲ್ ಡ್ರಾಮಾ. ಈ ಸಿನಿಮಾ ಮೂಲಕ ಗಡಿನಾಡ ಪ್ರತಿಭೆ ಅಂಜನ್ ರಾಮಚಂದ್ರ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದು, ನಾಯಕಿಯಾಗಿ ಶ್ರಾವಣಿ ನಟಿಸಿದ್ದಾರೆ. ಈ ಹಿಂದೆ ಲವ್ ರೆಡ್ಡಿ ಸಿನಿಮಾದ ಫಸ್ಟ್ ಲುಕ್ ನ್ನು ನಟಸಿಂಹ ಬಾಲಯ್ಯ ಬಿಡುಗಡೆ ಮಾಡಿದ್ದರು. ಇದೀಗ ಫಸ್ಟ್ ಝಲಕ್ ನ್ನು ಜನಪ್ರಿಯ ಶಾಸಕರಾದ ಪ್ರದೀಪ್ ಈಶ್ವರ್ ಅನಾವರಣ ಮಾಡಿ ತಮ್ಮೂರಿನ ಸಿನಿಮೋತ್ಸಾಹಿಗಳಿಗೆ ಸಾಥ್ ಕೊಟ್ಟಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ....
'ಪ್ರೇಮಂ’ ಪ್ರೀತಿಯ ಕಥೆಯಲ್ಲಿ ಏರಿಳಿತಗಳು ಈ ಹಿಂದೆ ಇಂಜಿನೀಯರ್ಸ ಮತ್ತು ಗಂಡುಲಿ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ವಿನಯ್ ರತ್ನಸಿದ್ದಿ ಈಗ ಮತ್ತೊಂದು ಪ್ರೇಮಕಥೆ ಹಿಡಿದುಕೊಂಡು ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇದೇ ತಿಂಗಳಲ್ಲಿ ತೆರೆಗೆ ಬರಲು ಸಿದ್ದವಾಗಿರುವ ಪ್ರೇಮಂ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ವಿನಯ್ ರತ್ನಸಿದ್ದಿ ಅವರೇ ಚಿತ್ರದ ನಾಯಕನಾಗಿ ನಟಿಸುವುದರ ಜೊತೆಗೆ ಆಕ್ಷನ್ ಕಟ್ ಕೂಡ ಹೇಳಿದ್ದಾರೆ. ಶಕುಂತಲಾ, ವೈಷ್ಣವಿ, ಸುಶ್ಮಿತಾ, ಮಂಜುಶ್ರೀ, ಕಾವೇರಿ ಹಾಗೂ ಪ್ರಿಯಾಂಕಾ ಸೇರಿ ೬ ಜನ ನಾಯಕಿಯರು ಚಿತ್ರದಲ್ಲಿದ್ದಾರೆ. ರತ್ನಸಿದ್ದಿ ಫಿಲಂಸ್ ಮೂಲಕ ಚಂದನ, ಅಮರೇಂದ್ರ ವರದ ಹಾಗೂ ಪ್ರಸಾದ್ ಬಿಜಿ, ಈ ....
ನಾ ಕೋಳಿಕ್ಕೆ ರಂಗ ನವೆಂಬರ್10ಕ್ಕೆ ರಿಲೀಸ್: ಇದು ಮಾಸ್ಟರ್ ಆನಂದ್ ಚಿತ್ರ ' ನಾನು ಕೋ ಕೋ ಕೋಳಿಕ್ಕೆ ರಂಗ...’ ಬಹುಶಃ ಈ ಹಾಡನ್ನು ಕೇಳದವರೇ ಇಲ್ಲ. ಈ ಹಾಡು ಇಂದಿಗೂ ಎವರ್ ಗ್ರೀನ್. ಇಷ್ಟಕ್ಕೂ ಈ ಹಾಡಿನ ಬಗ್ಗೆ ಹೇಳೋಕೆ ಕಾರಣ ’ ನಾ ಕೋಳಿಕ್ಕೆರಂಗ’ ಸಿನಿಮಾ. ಹೌದು, ಮಾಸ್ಟರ್ ಆನಂದ್ ಈ ಸಿನಿಮಾದ ಹೀರೋ. ಇದೊಂದು ಹಳ್ಳಿ ಕಥೆ. ಸಿನಿಮಾದ ಶೀರ್ಷಿಕೆ ಹೇಳುವಂತೆ, ಕೋಳಿ ಹಾಗು ರಂಗನ ಕಥೆ. ಅದೊಂದು ಅಪರೂಪದ ಭಾವ ಸಂಗಮ. ಈ ಚಿತ್ರ ಈಗ ತೆರೆಗೆ ಬರಲು ಸಜ್ಜಾಗಿದೆ. ನವೆಂಬರ್ 10 ರಂದು ರಿಲೀಸ್ ಆಗುತ್ತಿದೆ. ತಮ್ಮ ಸಿನಿಮಾ ಬಗ್ಗೆ ಮಾತಿಗಿಳಿದ ನಾಯಕ ಮಾಸ್ಟರ್ ಆನಂದ್, ’ಕೊರೊನಾ ಮೊದಲು ಚಿತ್ರ ಶುರುವಾಗಿತ್ತು. ಆ ನಂತರ ಸಮಸ್ಯೆ ಎದುರಾಯ್ತು. ಈಗ ಸಿನಿಮಾ ....