Ondu Sarala Prema Kathe.News

Monday, March 04, 2024

  *25 ದಿನ ಪೂರೈಸಿದ ಒಂದು ಸರಳ ಪ್ರೇಮ ಕಥೆ..ಎಲ್ಲಿ ಯಾವ ಒಟಿಟಿಗೆ ಎಂಟ್ರಿ ಕೊಡಲಿದೆ ವಿನಯ್ ರಾಜ್ ಕುಮಾರ್ ಸಿನಿಮಾ..*?   *ಯಶಸ್ವಿಯಾಗಿ 25 ದಿನ ಪೂರೈಸಿದ ವಿನಯ್-ಸುನಿ ಸಿನಿಮಾ..ಒಂದು ಸರಳ ಪ್ರೇಮಕಥೆ ಒಟಿಟಿ ಎಂಟ್ರಿ ಯಾವಾಗ?*     ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಜೋಡಿಯ ಒಂದು ಸರಳ ಪ್ರೇಮಕಥೆ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ. ಫೆಬ್ರವರಿ 8ರಂದು ತೆರೆಗೆ ಬಂದ ಚಿತ್ರ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಪಡೆದುಕೊಂಡಿದೆ. ಇದೇ ಸಂಭ್ರಮದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಚಿತ್ರತಂಡ ಖುಷಿ ಹಂಚಿಕೊಂಡಿದೆ.   ಈ ವೇಳೆ ಮಾತನಾಡಿದ ನಿರ್ದೇಶಕ ಸಿಂಪಲ್ ಸುನಿ, ಸಕ್ಸಸ್ ಒಂದ್ ಒಂದು ಟೈಮ್ ನಲ್ಲಿ ಒಂಥರ ಡಿಫೈನ್ ಆಗುತ್ತದೆ. ಸಿಂಪಲ್ ....

46

Read More...

Gange Gowri.Film News

Monday, March 04, 2024

  ಶಿವನ ಹಬ್ಬದ ಸಲುವಾಗಿ ಗಂಗೆ ಗೌರಿ ಟೀಸರ್       ಭಕ್ತಿ ಪ್ರಧಾನ ಚಿತ್ರ ’ಗಂಗೆ ಗೌರಿ’ ಅಂದುಕೊಂಡಂತೆ ಸದ್ಯ ಡಬ್ಬಿಂಗ್ ಹಂತದಲ್ಲಿದೆ. ಸದ್ಯದಲ್ಲೆ ಶಿವರಾತ್ರ್ರಿ ಹಬ್ಬ ಬರುವ ಕಾರಣ ಸಿನಿಮಾದ ಟೀಸರ್ ಬಿಡುಗಡೆ ಸಮಾರಂಭವು ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್, ಹಿರಿಯ ಪತ್ರಿಕಾ ಛಾಯಾಗ್ರಾಹಕ ಕೆ.ಎನ್.ನಾಗೇಶ್‌ಕುಮಾರ್ ಮತ್ತು ’ನಮ್ಮ ಕರ್ನಾಟಕ ಸೇನೆ’ ರಾಜ್ಯಾದ್ಯಕ್ಷ ಬಸವರಾಜ ಪಡಕೋಟೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಹಬ್ಬದ ದಿನದಂದು ರಾಜ್ಯದ ಎಲ್ಲಾ ಕಡೆ ನಡೆಯುವ ಸಮಾರಂಭಗಳಲ್ಲಿ ಟೀಸರ್‌ನ್ನು ತೋರಿಸಲು ಯೋಜನೆ ರೂಪಿಸಲಾಗಿದೆಯಂತೆ.   ....

97

Read More...

Rosy.Film News

Monday, March 04, 2024

  *"ರೋಜಿ" ಚಿತ್ರದಲ್ಲಿ ಒರಟ ಪ್ರಶಾಂತ್* .    ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ "ರೋಜಿ". ಈ ಚಿತ್ರದಲ್ಲಿ ಈಗಾಗಲೇ ಶ್ರೀನಗರ ಕಿಟ್ಟಿ ಹಾಗೂ "ಲಿಯೋ" ಚಿತ್ರದ ಸ್ಯಾಂಡಿ ಕುಮಾರ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ನಟ ಒರಟ ಪ್ರಶಾಂತ್ "ರೋಜಿ" ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಸ್ವಾಮಿ ಅಣ್ಣ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಒರಟ ಪ್ರಶಾಂತ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಚಿತ್ರತಂಡದಿಂದ ಬಿಡುಗಡೆಯಾಗಿದೆ. "ರೋಜಿ" ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.      "ರೋಜಿ" ಚಿತ್ರ ಸ್ಟೈಲೀಶ್ ಗ್ಯಾಂಗ್ ಸ್ಟರ್ ಡ್ರಾಮ ಎಂದು ಮಾತನಾಡಿದ ನಿರ್ದೇಶಕ ಶೂನ್ಯ, ಒರಟ ಪ್ರಶಾಂತ್ ಬಹಳ ದಿನಗಳ ನಂತರ ನಮ್ಮ ....

50

Read More...

Jog 101.Film News

Saturday, March 02, 2024

  *ಟ್ರೇಲರ್ ನಲ್ಲೇ ಮೋಡಿ ಮಾಡಿದೆ "ಜೋಗ್ 101"* .    *ವಿಜಯ ರಾಘವೇಂದ್ರ ಅಭಿನಯದ ಈ ಚಿತ್ರ ಮಾರ್ಚ್ 7 ರಂದು ಬಿಡುಗಡೆ*   ನಿರ್ಮಾಪಕ & ಕ್ರಿಯೇಟಿವ್ ಡೈರೆಕ್ಟರ್ ರಾಘು ರವರ ಸೆವೆನ್ ಸ್ಟಾರ್ ಪಿಕ್ಚರ್ಸ್ ಅಡಿಯಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಹಾಗೂ ವಿಜಯ್ ರಾಘವೇಂದ್ರ ಅಭಿನಯದ, ವಿಜಯ್ ಕನ್ನಡಿಗ ನಿರ್ದೇಶನದ "ಜೋಗ್ 101" ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಜನಮನ್ನಣೆ ಪಡೆಯುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಮಾರ್ಚ್ 7ರಂದು ತೆರೆಗೆ ಬರಲಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಧ್ಯಮದವರಿಗೆ ಮಾಹಿತಿ ನೀಡಿದರು.     "ಜೋಗ್ 101" ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಆಕ್ಷನ್ ಥ್ರಿಲ್ಲರ್ ಚಿತ್ರ ಎಂದು ಮಾತನಾಡಿದ ನಾಯಕ ವಿಜಯ್ ....

52

Read More...

Kora.Film News

Saturday, March 02, 2024

  .*ಮಹರ್ಷಿ ಆನಂದ ಗುರೂಜಿ ಅವರಿಂದ ಬಿಡುಗಡೆಯಾಯಿತು "ಕೋರ" ಚಿತ್ರದ "ಬಾನಿನಿಂದ" ಹಾಡು* .    *ಸುನಾಮಿ ಕಿಟ್ಟಿ ಅಭಿನಯದ ಈ ಚಿತ್ರಕ್ಕೆ ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನ*   ರತ್ನಮ್ಮ‌ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ "ಕೋರ" ಚಿತ್ರದ "ಬಾನಿನಿಂದ" ಹಾಡು ಇತ್ತೀಚಿಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ಮಹರ್ಷಿ ಆನಂದ ಗುರೂಜಿ ಅವರು ಗೊಲ್ಲಹಳ್ಳಿ ಶಿವಪ್ರಸಾದ್ ಬರೆದಿರುವ, ರವೀಂದ್ರ ಸೊರಗಾವಿ ಅವರು ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಬಿ.ಆರ್.ಹೇಮಂತ್ ಕುಮಾರ್ ಈ ....

85

Read More...

Paravasha.Film Title.News

Friday, March 01, 2024

  *ಅದ್ದೂರಿಯಾಗಿ ಅನಾವರಣವಾಯಿತು "ಪರವಶ" ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್* .     *ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ರಘು ಭಟ್ ನಟನೆ* .   ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ನೂತನ ಪ್ರತಿಭೆ ರಘು ಭಟ್ ಪ್ರಮುಖಪಾತ್ರದಲ್ಲಿ ನಟಿಸಿರುವ ನೂತನ  ಚಿತ್ರವೊಂದರ ಚಿತ್ರೀಕರಣ ಸದ್ದಿಲ್ಲದೆ ನಡೆಯುತ್ತಿದ್ದು, ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್  ನೆಲಮಂಗಲದ ಬಳಿ ಆಯೋಜಿಸಲಾಗಿದ್ದ ಅದ್ದೂರಿ ಸಮಾರಂಭದಲ್ಲಿ ಅನಾವರಣವಾಯಿತು. ಚಿತ್ರಕ್ಕೆ "ಪರವಶ" ಎಂದು ಹೆಸರಿಡಲಾಗಿದೆ. ಖ್ಯಾತ ನಿರೂಪಕಿ ಅನುಶ್ರೀ ಅವರ ಅಚ್ಚುಕಟ್ಟಾದ ನಿರೂಪಣೆಯಲ್ಲಿ ಸಮಾರಂಭ ನೆರವೇರಿತು.   ....

70

Read More...

Kadal.Film Launch.News

Thursday, February 29, 2024

  *ಹೊಸಬರ ಅಪ್ಪಟ ಕನ್ನಡದ ಕಾದಲ್ ಗೆ ಅದ್ದೂರಿ ಮುಹೂರ್ತ*   *ಒಡಿ ಬಡಿ ಮಧ್ಯೆ ಕಾದಲ್ ಎನ್ನುತ್ತಿದ್ದಾರೆ ನಿರ್ದೇಶಕ ವಿಜಯ್*   ವಿಜಯದೀಪ ಪಿಕ್ಚರ್ಸ್ ಅಡಿಯಲ್ಲಿ ವಿಜಯಪ್ರಿಯ ಅವರ ಕಥೆ ಚಿತ್ರಕಥೆ ನಿರ್ದೇಶನದಲ್ಲಿ‌ ತಯಾರಾಗ್ತಿರುವ ’ಕಾದಲ್’ ಚಿತ್ರದ ಮುಹೂರ್ತ ಮಾಗಡಿ ರಸ್ತೆಯ ನಾಡಪ್ರಭು ಕೆಂಪೇಗೌಡ ಲೇಔಟ್ ನಲ್ಲಿರುವ ಶ್ರೀ ಆದಿಶಕ್ತಿ ಮದನಘಟ್ಟಮ್ಮ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡ ಸಮಾರಂಭದಲ್ಲಿ ಭಾಗಿಯಾಗಿ ಕಾದಲ್ ಬಗ್ಗೆ  ಮಾಧ್ಯಮದವರಿಗೆ ಮಾಹಿತಿ ನೀಡಿದರು. ವಿಶೇಷ ಅಂತಂದ್ರೆ ’ಭಾವನೆಗಳ ಭಾಷೆಗೆ ಮೌನವೆಂಬ ಲಿಪಿಯೇ ಪ್ರೇಮಿ’ ಅನ್ನೋ ಟ್ಯಾಗ್ ಲೈನ್ ಗಮನ ಸೆಳೆಯುತ್ತಿದೆ. ಕಾದಲ್ ಗೆ ನಿರ್ದೇಶಕರ ಧರ್ಮಪತ್ನಿ ದೀಪಿಕಾ ಬಂಡವಾಳ ಹೂಡಿದ್ದಾರೆ. ....

136

Read More...

Dheera Bhagath Roy.News

Wednesday, February 28, 2024

  *ಧೀರ ಭಗತ್ ರಾಯ್ ಸಿನಿಮಾದ ಏನು ಕರ್ಮ ಹಾಡು ಬಿಡುಗಡೆ..*   *ಧೀರ ಭಗತ್ ರಾಯ್ ಅಂಗಳದಿಂದ ತೇಲಿ ಬಂತು ಮನಮೋಹಕ ಹಾಡು*   *ಏನು ಕರ್ಮ ಎನ್ನುತಾ ಬಂದ ಧೀರ ಭಗತ್ ರಾಯ್...*   *ಹಾಡಿನಲ್ಲಿ ಧೀರ ಭಗತ್ ರಾಯ್...*   ರಂಗಭೂಮಿ ಹಿನ್ನೆಲೆಯಿಂದ ಬಂದ ಎಷ್ಟೋ ಕಲಾವಿದರು ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅದೇ ಹಾದಿಯಲ್ಲಿ ಸಾಗ್ತಿರುವವರು ರಾಕೇಶ್ ದಳವಾಯಿ. ‘ಧೀರ ಭಗತ್ ರಾಯ್’ ಚಿತ್ರದ ಮೂಲಕ ರಾಕೇಶ್ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಕರ್ಣನ್ ಎಸ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಏನು ಕರ್ಮ ಹಾಡು ಬಿಡುಗಡೆಯಾಗಿದ್ದು, ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ  ಕುರಿತು ಬೆಂಗಳೂರಿನ ಕಲಾವಿದರ ಸಂಘದಲ್ಲಿ ಪ್ರತಿಕಾಗೋಷ್ಟಿ ....

30

Read More...

Dil Kush.Film News

Wednesday, February 28, 2024

  *"ದಿಲ್ ಖುಷ್" ಚಿತ್ರದ "ನೀನೇ ನೀನೇ" ಹಾಡು ಬಿಡುಗಡೆ* .    *ಖ್ಯಾತ ನಿರ್ದೇಶಕರಾದ ಪವನ್ ಒಡೆಯರ್, ಸಿಂಪಲ್ ಸುನಿ, ಬಹದ್ದೂರ್ ಚೇತನ್ ಕುಮಾರ್ ಅವರಿಂದ ಸುಂದರ ಹಾಡಿನ ಅನಾವರಣ*   ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ "ದಿಲ್ ಖುಷ್" ಚಿತ್ರಕ್ಕಾಗಿ ಗೌಸ್ ಫಿರ್ ಅವರು ಬರದಿರುವ "ನೀನೇ ನೀನೇ" ಎಂಬ ಸುಮಧುರ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ.  ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರಾದ ಪವನ್ ಒಡೆಯರ್, ಸಿಂಪಲ್ ಸುನಿ ಹಾಗೂ ಬಹದ್ದೂರ್ ಚೇತನ್ ಕುಮಾರ್ ಈ ಹಾಡನ್ನು ಬಿಡುಗಡೆ ಮಾಡಿದರು. "ಸರಿಗಮಪ" ಖ್ಯಾತಿಯ ನಿಹಾಲ್ ತೌರೊ ಹಾಗೂ ಆರತಿ ಅಶ್ವಿನ್ ಈ ಹಾಡಿಗೆ ಧ್ವನಿಯಾಗಿದ್ದು ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿದ್ದಾರೆ.    ಚಿತ್ರದ ....

39

Read More...

Nidra Devi Next Door.News

Monday, February 26, 2024

  *ಸೆಟ್ಟೇರಿತು ’ನಿದ್ರಾದೇವಿ Next Door’..ಪ್ರವೀರ್ ಶೆಟ್ಟಿ-ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ ಕ್ರೇಜಿಸ್ಟಾರ್ ಕ್ಲಾಪ್..*   *ನಿದ್ರೆ ದೇವಿ ಜೊತೆ ಬಂದ ಕರವೇ ಪ್ರವೀಣ್ ಶೆಟ್ಟಿ ಪುತ್ರ..ಸೆಟ್ಟೇರಿತು ’ನಿದ್ರಾದೇವಿ Next Door’ ಸಿನಿಮಾ..*   *ನಿದ್ರಾದೇವಿ Next Door’ ಸಿನಿಮಾಗೆ ಮುಹೂರ್ತದ ಸಂಭ್ರಮ..ಪ್ರವೀಣ್ ಶೆಟ್ಟಿ ಪುತ್ರನಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಸಾಥ್..*   ಸೈರನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಪ್ರವೀರ್ ಶೆಟ್ಟಿ ಈಗ ಮತ್ತೊಂದು ವಿಭಿನ್ನ ಕಥೆ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದೆ. ಅದರ ಮೊದಲ ಭಾಗವೆಂಬಂತೆ ಇಂದು ಬೆಂಗಳೂರಿನ ಬನಶಂಕರಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ....

47

Read More...

Record Break.News

Saturday, February 24, 2024

  *ಮಾರ್ಚ್ 8 ರಂದು ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ "ರೆಕಾರ್ಡ್ ಬ್ರೇಕ್"* .    *ಎಂಟು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ ಈ ಪ್ಯಾನ್ ಇಂಡಿಯಾ ಚಿತ್ರ* .   ತೆಲುಗಿನಲ್ಲಿ ಅನೇಕ ಚಿತ್ರಗಳನ್ನು ನಿರ್ಮಿಸಿರುವ, ಈವರೆಗೂ ತೆಲುಗು ಸೇರಿದಂತೆ ಎರಡು ಸಾವಿರಕ್ಕೂ ಅಧಿಕ ಚಲನಚಿತ್ರಗಳನ್ನು ವಿತರಣೆ ಮಾಡಿರುವ ಚಲದವಾಡ ಶ್ರೀನಿವಾಸರಾವ್ ನಿರ್ಮಿಸಿ, ನಿರ್ದೇಶಿಸಿರುವ ಪ್ಯಾನ್ ಇಂಡಿಯಾ ಚಿತ್ರ "ರೆಕಾರ್ಡ್ ಬ್ರೇಕ್". ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಮಾರ್ಚ್ 8, ಮಹಾ ಶಿವರಾತ್ರಿ ದಿನದಂದು ಎಲ್ಲಾ ಭಾಷೆಗಳಲ್ಲೂ ಭಾರತದಾದ್ಯಂತ ಸುಮಾರು ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಲಿದೆ. ಈ ಚಿತ್ರದ ಕುರಿತು ಮಾಹಿತಿಯನ್ನು ಚಿತ್ರತಂಡದ ....

27

Read More...

First Night with Devva.News

Saturday, February 24, 2024

 

*ಟೀಸರ್ ನಲ್ಲೇ ಮೋಡಿ ಮಾಡಿದ "ಫಸ್ಟ್ ನೈಟ್ ವಿತ್ ದೆವ್ವ* "

 

 *ಇದು ಪ್ರಥಮ್ ಅಭಿನಯದ ಚಿತ್ರ* .

 

"ಬಿಗ್ ಬಾಸ್" ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ, ನವೀನ್ ಬೀರಪ್ಪ ನಿರ್ಮಾಣದ ಹಾಗೂ ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ "ಫಸ್ಟ್ ನೈಟ್ ವಿತ್ ದೆವ್ವ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇತ್ತೀಚಿಗೆ ನಡೆದ ಟೀಸರ್ ಬಿಡುಗಡೆ ಸಮಾರಂಭಕ್ಕೆ "ಬಿಗ್ ಬಾಸ್" ಸ್ಪರ್ಧಿಗಳಾದ "ತುಕಾಲಿ" ಸಂತೋಷ್ ಹಾಗೂ ನಮೃತ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

35

Read More...

Ravike Prasanga.News

Wednesday, February 21, 2024

  *ಜನರ ಮನ ಗೆಲ್ಲುತ್ತಿದೆ "ರವಿಕೆ ಪ್ರಸಂಗ"* .    *ವಿಜೇತರಿಗೆ ಬಹುಮಾನ ವಿತರಿಸಿದ ಚಿತ್ರತಂಡ* . .   ಹೆಣ್ಣುಮಕ್ಕಳಿಗೆ ಸೀರೆಯಷ್ಟೇ ರವಿಕೆಯೂ ಅಚ್ಚುಮೆಚ್ಚು. ಅಂತಹ "ರವಿಕೆ" ಯ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ "ರವಿಕೆ ಪ್ರಸಂಗ" ಚಿತ್ರ ಕಳೆದವಾರ ಬಿಡುಗಡೆಯಾಗಿ ಜನರ ಮನ ಗೆಲುತ್ತಿದೆ. "ರವಿಕೆ" ಯ ಕುರಿತಾದ ಸಿನಿಮಾ ಆಗಿರುವುದರಿಂದ ಚಿತ್ರತಂಡ   ವಿಶೇಷ ಡಿಸೈನ್ ರವಿಕೆ ಹೊಲಿಯುವವರಿಗಾಗಿ ಸ್ಪರ್ಧೆ ಆಯೋಜಿಸಿತ್ತು.  ‌ಆ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಹೊಲಿಗೆ ಯಂತ್ರ, ನಗದು ಸೇರಿದಂತೆ ಅನೇಕ ಬಹುಮಾನಗಳನ್ನು ನೀಡಲಾಯಿತು. ನಿರ್ದೇಶಕ ಸಂತೋಷ್ ಕೊಡೆಂಕೆರಿ, ಕಥೆ ಬರೆದಿರುವ ಪಾವನ ಸಂತೋಷ್, ನಟಿ ಗೀತಾಭಾರತಿ ಭಟ್, ಉದ್ಯಮಿ ಮತ್ತು ....

44

Read More...

Mehabooba.Film News

Saturday, February 24, 2024

  *'ಮೆಹಬೂಬಾ’ ಟೀಸರ್ ಅನಾವರಣ..ಮಾ.15ಕ್ಕೆ ಶಶಿ ಚೊಚ್ಚಲ ಕನಸು ಯಾನ*   *ಶಶಿ ’ಮೆಹಬೂಬಾ’ನಿಗೆ ಜೊತೆಯಾದ ಕನ್ನಡ ಬಿಗ್ ಬಾಸ್ ವಿನ್ನರ್ಸ್..ಮಾ.15ಕ್ಕೆ ಚಿತ್ರ ಬಿಡುಗಡೆ*     *ಮಾ.15ಕ್ಕೆ‌ ’ಮೆಹಬೂಬಾ’ ಮೆರವಣಿಗೆ...ಶಶಿ‌ ಹೊಸ ಪ್ರಯತ್ನದ ಝಲಕ್  ರಿಲೀಸ್ .*     *ಕಣ್ಣೀರಾದ ಮೆಹಬೂಬಾ ಶಶಿ...ಮಾ.15ಕ್ಕೆ ಸರ್ವಧರ್ಮ ಸಾಮರಸ್ಯ ಚಿತ್ರ ಬಿಡುಗಡೆ*     ಮಾರ್ಡನ್ ರೈತ ಶಶಿ ಹೊಸ ಪ್ರಯತ್ನ  ಮೆಹಬೂಬಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಮಾರ್ಚ್ 15ಕ್ಕೆ ಚಿತ್ರ ತೆರೆಗೆ ಬರ್ತಿದೆ. ಪೋಸ್ಟರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಮೆಹಬೂಬಾ ಟೀಸರ್ ಅನಾವರಣಗೊಂಡಿದೆ. ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಟೀಸರ್ ಬಿಡುಗಡೆ ಕಾರ್ಯಕ್ರಮ ....

31

Read More...

Photo.Film News

Wednesday, February 21, 2024

  ಪ್ರಕಾಶ್‌ರಾಜ್, ಡಾಲಿ ಧನಂಜಯ್ ಮೆಚ್ಚಿದ ಫೋಟೋ        ಕಳೆದ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರೇಕ್ಷಕರಿಂದ ಪ್ರಶಂಸೆಗೆ ಒಳಪಟ್ಟಿದ್ದ ‘ಫೋಟೋ’ ಚಿತ್ರವು ಈಗ ಸದ್ದು ಮಾಡುತ್ತಿದೆ.  ಪ್ರಚಾರದ ಸಲುವಾಗಿ  ಪ್ರಕಾಶ್‌ರೈ ಒಡೆತನದ ಶ್ರೀರಂಗಪಟ್ಟಣದಲ್ಲಿರುವ ನಿರ್ದಿಗಂತ ಆಡಿಟೋರಿಯಂದಲ್ಲಿ  ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಪ್ರಕಾಶ್‌ರೈ  ಮಾತನಾಡಿ ನಮ್ಮ ದೇಹಕ್ಕೆ ಆದ ಗಾಯಗಳು ಸುಮ್ಮನಿದ್ದರೂ ವಾಸಿಯಾಗುತ್ತದೆ. ಆದರೆ ಸಮಾಜಕ್ಕೆ ಆಗಿರುವ ಗಾಯ ಸುಮ್ಮನಿದ್ದಷ್ಟು ಜಾಸ್ತಿಯಾಗುತ್ತದೆ.  ಉತ್ಸವ್‌ಗೆ ಸಿನಿಮಾ ತೋರಿಸುವ ಆಸೆ ಇತ್ತು. ಬೇರೆ ....

28

Read More...

4N6 Film.News

Wednesday, February 21, 2024

  "4 ಎನ್ 6"  ಫಸ್ಟ್ ಗ್ಲಿಂಪ್ಸ್ ಟೀಸರ್ ಬಿಡುಗಡೆ          ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ಅವರು  ನಿರ್ಮಿಸಿರುವ, ಮರ್ಡರ್‌ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಥಾಹಂದರ  ಹೊಂದಿರುವ ಚಿತ್ರ 4 ಎನ್ 6. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಫಸ್ಟ್  ಗ್ಲಿಂಪ್ಸ್ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.    ಲವ್ ಮಾಕ್ಟೇಲ್ ಹಾಗೂ ಲವ್ 360  ಖ್ಯಾತಿಯ  ರಚನಾ ಇಂದರ್  ಭವಾನಿಪ್ರಕಾಶ್ ಹಾಗೂ ನವೀನ್ ಕುಮಾರ್,  ಆದ್ಯಶೇಖರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ  "4 ಎನ್ 6" ಚಿತ್ರಕ್ಕೆ  ದರ್ಶನ್ ಶ್ರೀನಿವಾಸ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕೊಲೆಯೊಂದರ ....

67

Read More...

Kamandala.Film News

Tuesday, February 20, 2024

ಆಕರ್ಷಕ ಶೀರ್ಷಿಕೆ ಕಮಂಡಲ       ಉತ್ತರ ಕರ್ನಾಟಕದ ಶಿವು ಜಮಖಂಡಿ  ಈ ಹಿಂದೆ ‘ನನ್ನ ನಿನ್ನ ಪ್ರೇಮಕಥೆ’ ಮತ್ತು ‘ಗುಲಾಲ್ ಡಾಟ್ ಕಾಮ್’ ಚಿತ್ರಗಳನ್ನು ನಿರ್ದೇಶಿಸಿದ್ದರು. ಗ್ಯಾಪ್ ನಂತರ ಈಗ ‘ಕಮಂಡಲ’ ಸಿನಿಮಾಕ್ಕೆ ಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೊನ್ನೆಯಷ್ಟೇ ಪೋಸ್ಟರ್ ಲಾಂಚ್ ಕಾರ್ಯಕ್ರಮ ನಡೆಯಿತು.       ಸಿನಿಮಾವು ದೈವಿಕ ಶಕ್ತಿಯನ್ನು ಹೇಳಲಿದೆ. ಹಾಗಂತ ಇದು ಪೌರಾಣಿಕ ಚಿತ್ರವಲ್ಲ. ಸಿನಿಮಾವು ಚೆನ್ನಾಗಿ ಮೂಡಿಬರಲೆಂದು ೪೮ ದಿನಗಳ ಕಾಲ ವೃತ ಮಾಡಿದ್ದಾರಂತೆ. ಒನ್ ಲೈನ್ ಹುಟ್ಟಿಕೊಂಡಿದ್ದೇ ದೇವಸ್ಥಾನದಲ್ಲಿ. ಕಮಂಡಲ ಎನ್ನುವುದು ಋಷಿ, ಮುನಿಗಳ ಕೈಲಿರುತ್ತದೆ. ಅದರಲ್ಲಿಯ ತೀರ್ಥ ತುಂಬಾ ....

78

Read More...

Purushothamana Prasanga.

Tuesday, February 20, 2024

 ಪುರುಷೋತ್ತಮನಿಗೆ  ಶರಣ್ ಸಾಥ್        ತುಳು ಚಿತ್ರರಂಗದ ಖ್ಯಾತ ಹಾಸ್ಯ ನಟ ದೇವಿದಾಸ್ ಕಾಪಿಕಾಡ್ ನಿರ್ದೇಶನ ಮಾಡಿರುವ ‘ಪುರುಷೋತ್ತಮನ ಪ್ರಸಂಗ’ ಸಿನಿಮಾವು ಕಾಮಿಡಿ, ನೈಜ ಘಟನೆ ಆಧಾರಿತ ಜತೆಗೆ ಕೌಟುಂಬಿಕ ಕಥೆಯನ್ನು ಹೊಂದಿದೆ. ರಾಷ್ಟ್ರಕೂಟ ಪಿಕ್ಚರ‍್ಸ್ ಲಾಂಛನದಲ್ಲಿ ವಿ.ರವಿಕುಮಾರ್ ಮಗನ ಸಲುವಾಗಿ ನಿರ್ಮಾಣ ಮಾಡಿದ್ದಾರೆ. ವಿದೇಶದಲ್ಲಿ ತರಭೇತಿ ಪಡೆದುಕೊಂಡಿರುವ ಅಜಯ್ ಶೀರ್ಷಿಕೆ ಹೆಸರಿನಲ್ಲಿ ನಾಯಕ. ಈ ಹಿಂದೆ ಕಿಸ್, ಮೆಹಬೂಬ, ನಾಟ್‌ಔಟ್ ಸಿನಿಮಾಗಳಲ್ಲಿ  ಅಭಿನಯಿಸಿದ್ದು, ಹೀರೋ ಆಗಿ ಮೊದಲ ಅನುಭವವಂತೆ. ರಿಷಿಕಾನಾಯಕ್ ನಾಯಕಿ. ಇವರೊಂದಿಗೆ ನವೀನ್.ಡಿ.ಪಡೀಲ್, ಅರವಿಂದ್  ಬೋಳಾರ್, ಭೋಜರಾಜ್ ವಾಮಂಜೂರು ಮುಂತಾದವರು ....

38

Read More...

Production 4.News

Monday, February 19, 2024

  *ಗುರು ದೇಶಪಾಂಡೆ ನಿರ್ಮಾಣದ ಹಾಗೂ ಬಿ.ಎಂ ಗಿರಿರಾಜ್ ನಿರ್ದೇಶನದ ನೂತನ ಚಿತ್ರಕ್ಕೆ ಬಿ.ಜೆ.ಭರತ್ ಸಾರಥ್ಯದಲ್ಲಿ ಹಾಡುಗಳ ಧ್ವನಿಮುದ್ರಣ ಆರಂಭ* .   ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ "ಪ್ರೊಡಕ್ಷನ್ ನಂ 4" ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಪೂಜೆ ನಾಗರಭಾವಿಯ ಲೂಪ್ ಸ್ಟುಡಿಯೋಸ್ ನಲ್ಲಿ ನೆರವೇರಿತು. "ಜಟ್ಟ", "ಮೈತ್ರಿ" ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.‌ ಕನ್ನಡದ ಹೆಸರಾಂತ ನಿರ್ದೇಶಕ ಬಿ.ಜೆ.ಭರತ್ ಸಂಗೀತ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.   ಹಿಂದೆ ಸಾಂಗ್ ರೆಕಾರ್ಡಿಂಗ್ ಪೂಜೆ ಎಂದರೆ ಒಂದು ಸಡಗರ ಎಂದು ....

51

Read More...

Majestic 2.News

Monday, February 19, 2024

  ಆಗ ದಾಸ ದರ್ಶನ್ ಈಗ ಮರಿದಾಸ ಭರತ್   ಎರಡು ದಶಕಗಳ ನಂತರ ಮತ್ತೆ ಮೆಜೆಸ್ಟಿಕ್ ನಲ್ಲಿ ಮರಿದಾಸನ ಹವಾ..        ನಟ ದರ್ಶನ್ ಗೆ ದಾಸ ಎಂಬ  ಹೆಸರು ಬಂದಿದ್ದೇ ಮೆಜೆಸ್ಟಿಕ್ ಚಿತ್ರದಿಂದ. 22 ವರ್ಷಗಳ ಹಿಂದೆ ತೆರೆಕಂಡು ದೊಡ್ಡ ದಾಖಲೆ ಬರೆದಿದ್ದ ಮೆಜೆಸ್ಟಿಕ್ ಸಿನಿಮಾ ನಟ ದರ್ಶನ್ ಗೆ ಒಳ್ಳೇ ಹೆಸರನ್ನೂ ತಂದುಕೊಟ್ಟಿತ್ತು. ಆ ಚಿತ್ರಕ್ಕೆ ಆರಂಭದಲ್ಲಿ ಕಾನ್ಸೆಪ್ಟ್ ಹೆಣೆದಿದ್ದ ರಾಮು ಅವರೇ ಈಗ ಮೆಜೆಸ್ಟಿಕ್ ೨ ಹೆಸರಲ್ಲಿ ಚಿತ್ರ ನಿರ್ದೇಶಿಸಲು ಮುಂದಾಗಿದ್ದಾರೆ. ಮಹಾಶಿವರಾತ್ರಿಯ ಶುಭ ದಿನದಂದು ಆ ಚಿತ್ರ ಸೆಟ್ಟೇರಲು ಸಿದ್ದವಾಗಿದೆ. ಈ ಚಿತ್ರದ ಮೂಲಕ ಹಿರಿಯ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್ ಅವರ  ಪುತ್ರ ಭರತ್ ನಾಯಕನಾಗಿ ಪರಿಚಯವಾಗುತ್ತಿದ್ದಾರೆ. ....

58

Read More...
Copyright@2018 Chitralahari | All Rights Reserved. Photo Journalist K.S. Mokshendra,