*ಕ್ಯಾರಾವ್ಯಾನ್ ಸ್ಟಾರ್ ಸ್ಮೈಲ್ ಮಂಜು ಅವರಿಗೆ "ಲಕ್" ಬಂತು* . ಜೀವನದಲ್ಲಿ ಯಾರಿಗೆ ಯಾವಾಗ "ಲಕ್" ಬರತ್ತೆ ಹೇಳಲಿಕ್ಕೆ ಆಗಲ್ಲ. ಕಳೆದ ಒಂಭತ್ತು ವರ್ಷಗಳಿಂದ ಕ್ಯಾರಾವ್ಯಾನ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿರುವ ಕ್ಯಾರಾವ್ಯಾನ್ ಸ್ಟಾರ್ ಸ್ಮೈಲ್ ಮಂಜು ಅವರು "ಲಕ್" ಚಿತ್ರದ ನಾಯಕನಾಗಿ ಅಭಿನಯಿಸಿದ್ದಾರೆ ಜೊತೆಗೆ ನಿರ್ಮಾಣವನ್ನು ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ "90 ಕುಡಿ ಮಗ ಪಲ್ಟಿ ಹೊಡಿ" ಎಂಬ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಯಿತು. ಅಪ್ಪಿ ಹಾಗೂ ಹರೀಶ್ ಬರೆದಿರುವ ಈ ಹಾಡನ್ನು ನವೀನ್ ಸಜ್ಜು ಹಾಡಿದ್ದಾರೆ. ವಿಜಯ್ ಹರಿತ್ಸ ಸಂಗೀತ ನೀಡಿದ್ದಾರೆ. ಈ ಚಿತ್ರದ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ....
*ಕುತೂಹಲ ಮೂಡಿಸಿದೆ "ಬೇರ" ಚಿತ್ರದ ಟೀಸರ್* . *ಇದು ವಿನು ಬಳಂಜ ನಿರ್ದೇಶನದ ಮೊದಲ ಚಿತ್ರ* . ಕಿರುತೆರೆಯ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ನಿರ್ದೇಶಕ ವಿನು ಬಳಂಜ "ಬೇರ" ಚಿತ್ರ ನಿರ್ದೇಶಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ದಿವಾಕರ ದಾಸ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಚಿತ್ರತಂಡದ ಸದಸ್ಯರು "ಬೇರ" ಚಿತ್ರದ ಕುರಿತು ಮಾತನಾಡಿದರು. ಕಳೆದ ನಾಲ್ಕೈದು ವರ್ಷ ನಾನು ವೈಯಕ್ತಿಕ ಕಾರಣದಿಂದ ಕಿರುತೆರೆ ಹಾಗೂ ಹಿರಿತೆರೆಯಿಂದ ದೂರವಿದ್ದೆ. ಆನಂತರ ಒಂದು ಮ್ಯೂಸಿಯಂ ಗೆ ಹೋದೆ. ಅಲ್ಲೇ ಈ ಕಥೆ ಹುಟ್ಟಿದ್ದು. ಆನಂತರ ಮತ್ತೆ ನನ್ನನ್ನು ಸಿನಿಮಾ ....
ರೋನಿ ಮೋಷನ್ ಪೋಸ್ಟರ್,ಟೀಸರ್ ಬಿಡುಗಡೆ ವಿಭಿನ್ನ ಕಥಾಹಂದರ ಹೊಂದಿರುವ ’ರೋನಿ’ ಚಿತ್ರದ ಮೋಷನ್ ಪೋಸ್ಟರ್ನ್ನು ಪ್ರಜ್ವಲ್ದೇವರಾಜ್ ಮತ್ತು ಟೀಸರ್ನ್ನು ಖ್ಯಾತ ನಿರ್ಮಾಪಕಿ ಶೈಲಜಾನಾಗ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಮುಂಬೈನಲ್ಲಿ ಡಬ್ಬಿಂಗ್ ಹಕ್ಕುಗಳನ್ನು ಖರೀದಿಸುತ್ತಿದ್ದ ಹಿರಿಯ ಸಿನಿಪಂಡಿತ ಎಂ.ರಮೇಶ್ ಹಾಗೂ ಪವನ್ಕುಮಾರ್ ಮೊದಲಬಾರಿ ಕನ್ನಡ ಚಿತ್ರಕ್ಕೆ ಲಕ್ಷೀ ಗಣಪತಿ ಸ್ಟುಡಿಯೋಸ್ ಮತ್ತು ರೋಶಿಕಾ ಎಂಟರ್ಪ್ರೈಸಸ್ ಮೂಲಕ ಬಂಡವಾಳ ಹೂಡಿದ್ದಾರೆ. ಕಿರಣ್.ಆರ್.ಕೆ ಅವರ ಕಥೆ,ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನವಿದೆ. ’ದ ಹಂಟರ್’ ಅಂತ ಅಡಿಬಹರದಲ್ಲಿ ಹೇಳಲಾಗಿದೆ. ಉನ್ನತ ಮಟ್ಟದ ಕೇಸ್ ನಡೆಯುವ ....
*ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ 45 ಚಿತ್ರ ಮೈಸೂರಿನಲ್ಲಿ ಆರಂಭ* . ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ‘45’ ಚಿತ್ರದ ಮುಹೂರ್ತ ಇತ್ತೀಚೆಗೆ ಮೈಸೂರಿನಲ್ಲಿ ನೆರವೇರಿತು. ದೇವರ ಮೇಲೆ ಚಿತ್ರೀಕರಿಸಲಾದ ಮೊದಲ ದೃಶ್ಯಕ್ಕೆ ಗೀತಾ ಶಿವರಾಜಕುಮಾರ್ ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು, ಗಣ್ಯರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು. ‘45’ ಚಿತ್ರವನ್ನು ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಂ. ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಈ ಚಿತ್ರದ ಮೂಲಕ ಸ್ವತಂತ್ರ ....
*ಕ್ರೇಜಿಸ್ಟಾರ್ ಸುಪುತ್ರನ ಎರಡನೇ ಕನಸಿಗೆ ಶೀರ್ಷಿಕೆ ಫಿಕ್ಸ್..’ಮುಧೋಳ್’ ಜೊತೆ ಬಂದ ವಿಕ್ರಮ್ ರವಿಚಂದ್ರನ್..* *ವಿಕ್ರಮ್ ರವಿಚಂದ್ರನ್ ಎರಡನೇ ಸಿನಿಮಾಗೆ ‘ಮುಧೋಳ್’ ಶೀರ್ಷಿಕೆ ಫಿಕ್ಸ್..ಗ್ಯಾಂಗ್ ಸ್ಟರ್ ಅವತಾರದಲ್ಲಿ ಕ್ರೇಜಿಸ್ಟಾರ್ ಪುತ್ರ* ಸ್ಯಾಂಡಲ್ ವುಡ್ ಕನಸುಗಾರ ಡಾ.ವಿ ರವಿಚಂದ್ರನ್ ದ್ವಿತೀಯ ಪುತ್ರ ಮರಿ ರಣಧೀರ ವಿಕ್ರಮ್ ರವಿಚಂದ್ರನ್ ಎರಡನೇ ಕನಸಿಗೆ ಮಧೋಳ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಬೆಂಗಳೂರಿನ ನವರಂಗ್ ಚಿತ್ರಮಂದಿರದಲ್ಲಿ ಅಭಿಮಾನಿಗಳ ನಡುವೆ ವಿಕ್ಕಿ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಮಾಡಲಾಯಿತು. ಟೈಟಲ್ ಟೀಸರ್ ಮೂಲಕ ಎಂಟ್ರಿ ಕೊಟ್ಟ ವಿಕ್ರಮ್ ರವಿಚಂದ್ರನ್ ಕಂಪ್ಲೀಟ್ ಗ್ಯಾಂಗ್ ಸ್ಟಾರ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ....
*ಕನ್ನಡದ ಬಹುನಿರೀಕ್ಷಿತ ’ರಾಘು’ ಸಿನಿಮಾ ಬಿಡುಗಡೆಗೆ ದಿನಗಣನೆ..ವಿಭಿನ್ನ ಕಥೆಯೊಂದಿಗೆ ಬರ್ತಿದ್ದಾರೆ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ*
ಆರಂಭದಿಂದಲೂ ವಿಭಿನ್ನ ಕಥಾನಕದ ಸುಳಿವು ನೀಡುವ ಮೂಲಕ ಚಿತ್ರಾಭಿಮಾನಿಗಳಿಗೆ ನಿರೀಕ್ಷೆ ಮೂಡಿಸಿರುವ ಬಹುನಿರೀಕ್ಷಿತ ರಾಘು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 28ಕ್ಕೆ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ನಟಿಸಿರುವ ಏಕವ್ಯಕ್ತಿ ಚಿತ್ರ ರಾಜ್ಯಾದ್ಯಂತ ತೆರೆಗೆ ಬರ್ತಿದೆ. ಒಂದಿಷ್ಟು ಕೌತುಕಗಳನ್ನು ತನ್ನೊಡಲಲ್ಲಿ ಬಚ್ಚಿಟ್ಟುಕೊಂಡಿರುವ ರಾಘು ಸಿನಿಮಾ ಪೂರ್ತಿ ವಿಜಯ್ ರಾಘವೇಂದ್ರ ಒಬ್ಬರೇ ಕಾಣಿಸಿಕೊಳ್ಳಲಿದ್ದಾರೆ.
ಶಿವಾಜಿ ಸುರತ್ಕಲ್ ಭಾಗ-೩ಕ್ಕೆ ಸಿದ್ದತೆ
‘ಶಿವಾಜಿಸುರತ್ಕಲ್-೨’ ಚಿತ್ರವು ಬಿಡುಗಡೆಗೊಂಡು ಯಶಸ್ವಿಯಾಗಿತ್ತು. ಇದೇ ಖುಷಿಯಿಂದ ನಿರ್ದೇಶಕ ಆಕಾಶ್ಶ್ರೀವತ್ಸ ಮುಂದೆ ಭಾಗ-೩ ಮತ್ತು ೪ ಕಥೆ ಬಗ್ಗೆ ಚರ್ಚೆ ಈಗಾಗಲೇ ಆಗಿದೆ. ಯಾವ ಮಟ್ಟದಲ್ಲಿ ಮುಂದಿನ ಭಾಗಗಳನ್ನು ಚಿತ್ರಿಸಬೇಕೆಂದು ನಿರ್ಧರಿಸಲಾಗಿದೆ. ಮೊದಲ ಭಾಗಕ್ಕಿಂತ ಎರಡನೇ ಭಾಗವು ಹೆಚ್ಚು ಪ್ರೇಕ್ಷಕರನ್ನು ಸೆಳೆದಿತ್ತು. ಭಾಗ-೧ ರಿಮೇಕ್ ಹಕ್ಕುಗಳು ಸೇಲ್ ಆಗಿದೆ. ಅದರಂತೆ ಭಾಗ-೨ಕ್ಕೆ ರಿಮೇಕ್ ಹಾಗೂ ಡಬ್ಬಿಂಗ್ಗೆ ಬೇರೆ ಭಾಷೆಗಳಿಂದ ಕರೆಗಳು ಬರುತ್ತಿವೆ ಎನ್ನುತ್ತಾರೆ.
*ವೈಭವ್ ಪ್ರಶಾಂತ್ ನಿರ್ದೇಶನದ ಸಿನಿಮಾಗೆ ಟೈಟಲ್ ಫಿಕ್ಸ್...ಕ್ಲಾಂತ ಎನ್ನುತ್ತಿದ್ದಾರೆ ಸಂಗೀತ ಭಟ್* ಕನ್ನಡದಲ್ಲೀಗ ಹೊಸ ಬಗೆಯ ಶೀರ್ಷಿಕೆ ಸಿನಿಮಾಗಳು ಬಹಳಷ್ಟು ಸದ್ದು ಮಾಡುತ್ತಿವೆ. ಈ ಪಟ್ಟಿಗೀಗ ಹೊಸ ಸೇರ್ಪಡೆ ಕ್ಲಾಂತ. ಈ ಹಿಂದೆ ರಂಗನ್ ಸ್ಟೈಲ್, ದಗಲು ಬಾಜಿಲು ಸೇರಿದಂತೆ ಬೇರೆ ಬಗೆಯ ಜಾನರ್ ಚಿತ್ರ ನಿರ್ದೇಶಿರುವ ವೈಭವ್ ಪ್ರಶಾಂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಇಂದು ಕ್ಲಾಂತ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿತ್ತು. ಈ ಬಗ್ಗೆ ಚಿತ್ರತಂಡ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡಿತು. ನಿರ್ದೇಶಕ ವೈಭವ್ ಪ್ರಶಾಂತ್ ಮಾತನಾಡಿ, ಇದು ನನ್ನ ನಾಲ್ಕನೇ ಸಿನಿಮಾ. ಯುವಜನತೆಗೆ ಒಳ್ಳೆ ಸಂದೇಶ ಕೊಡುವ ....
*ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವ "ದ ಜಡ್ಜ್ ಮೆಂಟ್" ಚಿತ್ರಕ್ಕೆ ಚಾಲನೆ* . ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ "ದ ಜಡ್ಜ್ ಮೆಂಟ್" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆಯಿತು. G9 communication media & Entertainment ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಗುರುರಾಜ ಬಿ ಕುಲಕರ್ಣಿ(ನಾಡಗೌಡ) ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ "ಆಕ್ಸಿಡೆಂಟ್", " ಲಾಸ್ಟ್ ಬಸ್" , "ಅಮೃತ ಅಪಾರ್ಟ್ಮೆಂಟ್ಸ್" ಚಿತ್ರಗಳನ್ನು ಈ ಸಂಸ್ಥೆ ಮೂಲಕ ನಿರ್ಮಿಸಲಾಗಿತ್ತು ಹಾಗೂ ಈ ಚಿತ್ರಗಳನ್ನು ಗುರುರಾಜ್ ಬಿ ಕುಲಕರ್ಣಿ ಅವರೆ ನಿರ್ದೇಶಿಸಿದ್ದರು. ಸಂಸ್ಥೆಯ ನಾಲ್ಕನೇ ಚಿತ್ರವಾಗಿ "ದ ....
*ಪದ್ಮಭೂಷಣ ಪ್ರಶಸ್ತಿ ವಿಜೇತ ಸುಧಾಮೂರ್ತಿಯವರಿಗೊಂದು ಅರ್ಥಪೂರ್ಣ ಸನ್ಮಾನ* *ಖ್ಯಾತ ನಿರ್ಮಾಪಕ ರಮೇಶ್ ರೆಡ್ಡಿಯವರ ನೇತೃತ್ವದಲ್ಲಿ ಜರುಗಿತು ಅಪರೂಪದ ಕಾರ್ಯಕ್ರಮ* ಸರಳತೆ, ಸಹಾಯ, ಸಮಾಜಸೇವೆಗೆ ಇನ್ನೊಂದು ಹೆಸರು ಸುಧಾಮೂರ್ತಿ ಎಂದರೆ ತಪ್ಪಾಗಲಿಕ್ಕಿಲ್ಲ. ಇನ್ಫೋಸಿಸ್ ಎಂಬ ಐ.ಟಿ ದಿಗ್ಗಜ ಸಂಸ್ಥೆಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರ ಹೆಮ್ಮೆ ಹೆಚ್ಚಿಸಿದ ಕನ್ನಡತಿ. ಲಕ್ಷಾಂತರ ಮಂದಿಗೆ ಕೆಲಸ ಕೊಟ್ಟ ಉದ್ಯಮಿ, ಸಮಾಜಸೇವಕಿ, ಲೇಖಕಿ ಸುಧಾಮೂರ್ತಿಯವರ ಸಾಮಾಜಿಕ ಸೇವೆಗಾಗಿ ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದ್ದರು. ಈ ನಿಟ್ಟಿನಲ್ಲಿ, ಇತ್ತೀಚಿಗೆ ಖ್ಯಾತ ನಿರ್ಮಾಪಕರಾದ ರಮೇಶ್ ....
*ತೆರೆಗೆ ಬರಲು ಸಿದ್ದವಾಗಿದೆ "ಪ್ರೆಸೆಂಟ್ ಪ್ರಪಂಚ ೦% ಲವ್" ಚಿತ್ರ* . ರೊಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಪ್ರೆಸೆಂಟ್ ಪ್ರಪಂಚ 0% ಲವ್" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ನಿರ್ದೇಶಕನಿಗೆ ತನ್ನ ಚಿತ್ರವೇ ಸರ್ವಸ್ವ. ನಮ್ಮ ಚಿತ್ರದ ನಿರ್ದೇಶಕ ಅಭಿರಾಮ್ ಎ ಅವರಿಗೂ ಈ ಚಿತ್ರದ ಬಗ್ಗೆ ಅಪಾರ ಪ್ರೀತಿ. ಆದರೆ ವಿಧಿ, ಚಿತ್ರ ಬಿಡುಗಡೆಗೆ ಮುನ್ನವೇ ನಿರ್ದೇಶಕ ಅಭಿರಾಮ್ ಹಾಗೂ ನಾಯಕ ಅರ್ಜುನ್ ಮಂಜುನಾಥ್ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಅವರಿಬ್ಬರ ಅನುಪಸ್ಥಿತಿ ತುಂಬಾ ಕಾಡುತ್ತಿದೆ. ಇಬ್ಬರು ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಗಿಯುವ ತನಕ ಜೊತೆಗಿದ್ದರು. ಆಮೇಲೆ ಯಾರು ನಿರೀಕ್ಷಿಸದ್ದು ....
*ಸೆಟ್ಟೇರಿದ ’ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’....ಅಭಿಲಾಶ್-ಸೋನಲ್ ಜೋಡಿಗೆ ಡಾಲಿ ಧನಂಜಯ್ ಶುಭ ಹಾರೈಕೆ* ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಿನಿಮಾ ನಾಗರಹಾವು. ಈ ಚಿತ್ರದ ರಾಮಾಚಾರಿ ಹಾಗೂ ಮಾರ್ಗರೇಟ್ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಇದೇ ಚಿತ್ರದ ಪಾತ್ರಗಳನ್ನು ಇಟ್ಕೊಂಡು ಬಂದ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಇದೇ ನಾಗರಹಾವು ಸಿನಿಮಾದ ಪಾತ್ರಗಳ ಸ್ಫೂರ್ತಿ ಪಡೆದು ಹೊಸ ಸಿನಿಮಾವೊಂದು ಬರ್ತಿದೆ. ಆ ಚಿತ್ರಕ್ಕೆ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಎಂದು ಟೈಟಲ್ ಇಡಲಾಗಿದೆ. ಯುವ ಪ್ರತಿಭೆ ಅಭಿಲಾಶ್ ನಾಯಕನಾಗಿ ಹಾಗೂ ಸೋನಲ್ ಮೊಂಥೆರೋ ....
*ಬೆಂಗಳೂರಿನಲ್ಲಿ ಪೊನ್ನಿಯಿನ್ ಸೆಲ್ವನ್-2 ಅದ್ಧೂರಿ ಪ್ರಚಾರ.....ಕನ್ನಡ ಸಿನಿಮಾಗಳನ್ನು ಕೊಂಡಾಡಿದ ತಮಿಳು ಸ್ಟಾರ್ಸ್ಸ್* ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್ ’ಪೊನ್ನಿಯಿನ್ ಸೆಲ್ವನ್ 2' ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ತಿಂಗಳ 28ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸುತ್ತಿದೆ. ಉತ್ತರ ಭಾರತದಲ್ಲಿ ಪ್ರಚಾರ ಮುಗಿಸಿರುವ ಚಿತ್ರತಂಡ ದಕ್ಷಿಣದಲ್ಲಿ ಭರದ ಪ್ರಚಾರ ಕಾರ್ಯ ನಡೆಸುತ್ತಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಮೋಷನ್ ಮಾಡಿರುವ ಪಿಎಸ್-2 ಬಳಗ ಬೆಂಗಳೂರಿನಲ್ಲಿ ನಿನ್ನೆ ಪ್ರಮೋಷನ್ ಕಹಳೆ ಮೊಳಗಿಸಿದೆ. ನಿನ್ನೆ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ವಿಕ್ರಂ, ತ್ರಿಷಾ, ಕಾರ್ತಿ ಹಾಗೂ ಜಯಂರವಿ ಭಾಗಿಯಾಗಿದ್ದರು. ....
ಭಾವನೆಗಳನ್ನು ಕೆದಕುವ ಕಲರ್ಸ್ ಆಫ್ ಲವ್ ’ಕ್ರಷ್’ ಕಿರುಚಿತ್ರ ಹಾಗೂ ’ಲಗೋರಿ’ ಎಂಬ ಟೆಲಿಫಿಲಿಂ ಮಿಲಯಿನ್ಸ್ಗಟ್ಟಲೆ ವೀಕ್ಷಣೆಗೊಂಡು ಮೆಚ್ಚುಗೆಗೆ ಪಾತ್ರವಾಗಿತ್ತು. ಇದೇ ಹುಮ್ಮಸಿನಿಂದ ನಿರ್ದೇಶಕ ಯು.ವಿ.ಹರಿಶೌರ್ಯ ಮೂರನೇ ಪ್ರಯತ್ನ ಎನ್ನುವಂತೆ ’ಕಲರ್ಸ್ ಆಫ್ ಲವ್’ ಎನ್ನುವ ೫೦ ನಿಮಿಷದ ಚಿತ್ರಕ್ಕೆ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಒಂದು ಕಾವ್ಯಾತ್ಮಕ ಪ್ರೀತಿ ಕಥೆ ಎಂದು ಇಂಗ್ಲೀಷ್ನಲ್ಲಿ ಅಡಿಬರಹವಿದೆ. ಗ್ಯಾಂಗ್ಬ್ಯಾಂಗ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಚೇತನ್ಕುಮಾರ್ ಮತ್ತು ಜಯಪ್ರಕಾಶ್ ಬಂಡವಾಳ ಹೂಡಿದ್ದಾರೆ. ಕಥಾನಾಯಕ ಒಬ್ಬ ಬರಹಗಾರ. ’ಕಲರ್ಸ್ ಆಫ್ ಲವ್’ ಎನ್ನುವ ಪುಸ್ತಕವನ್ನು ಬರೆದು ....
ಚಿತ್ರಮಂದಿರದಲ್ಲಿ ರಂಜಾನ್ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ ’ರಂಜಾನ್’ ಸಿನಿಮಾವು ಹಿರಿಯ ಲೇಖಕ ಫಕೀರ್ಮುಹಮ್ಮದ್ ಕಟ್ಪಾಡಿ ಬರೆದಿರುವ ’ನೊಂಬು’ ಕಥೆಯನ್ನು ಆಧರಿಸಿದೆ. ’ಸಿಲ್ಲಿ ಲಲ್ಲಿ’ ಹಾಗೂ ಸುಮಾರು 35ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯ ನಟನಾಗಿ ಗುರುತಿಸಿಕೊಂಡಿರುವ ಸಂಗಮೇಶ ಉಪಾಸೆ ಮೊದಲಬಾರಿ ನಾಯಕನಾಗಿ ಶೀರ್ಷಿಕೆ ಹೆಸರಿನಲ್ಲಿ ಕಾಣಿಸಿಕೊಂಡಿದ್ದು, ಜತೆಗೆ ಚಿತ್ರಕಥೆ-ಸಂಭಾಷಣೆ ಹಾಗೂ ಸಾಹಿತ್ಯ ಒದಗಿಸಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಪಂಚಾಕ್ಷರಿ.ಸಿ.ಈ ನಿರ್ದೇಶನ ಮಾಡಿದ್ದಾರೆ. ಯೂನಿವರ್ಸಲ್ ಸ್ಟುಡಿಯೋ ಮೂಲಕ ಮಡಿವಾಳಪ್ಪ.ಎಂ.ಗೂಗಿ ನಿರ್ಮಾಣ ಮಾಡಿರುವುದು ಹೊಸ ಅನುಭವ. . ಬಡತನ, ....
ಕುತೂಹಲ ಕೆರಳಿಸುವ ನೋಡದ ಪುಟಗಳು ರಿಯಲ್ ಲೈಫ್ ಚಿತ್ರಗಳು ಹೆಚ್ಚು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ’ನೋಡದ ಪುಟಗಳು’ ಚಿತ್ರವೊಂದು ಸದ್ದಿಲ್ಲದೆ ಬಿಡುಗಡೆಗೆ ಸಿದ್ದವಾಗಿದೆ. ’ಜೀವನಪೂರ್ತಿ ತಿರುವುಗಳು ಬರುತ್ತದೆ. ನಿನ್ನ ತಿರುವು ಬರುವ ತನಕ ಕಾಯಬೇಕು’ ಎಂದು ಇಂಗ್ಲೀಷ್ದಲ್ಲಿ ಅಡಿಬರಹವಿದೆ. ಬಿಡುಗಡೆಯಾಗಿರುವ ಟ್ರೇಲರ್ಗೆ ಸುಚೇಂದ್ರಪ್ರಸಾದ್ ಧ್ವನಿ ನೀಡಿರುವುದು ತೂಕ ಹೆಚ್ಚಿದೆ. ನವ ಪ್ರತಿಭೆ ಎಸ್.ವಸಂತ್ಕುಮಾರ್ ಸಿನಿಮಾಕ್ಕೆ ರಚನೆ,ನಿರ್ದೇಶನ ಹಾಗೂ ಸ್ವೀಟ್ ಅಂಡ್ ಸಾಲ್ಟ್ ಮೂವೀಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಮೂಲತ: ಟೆಕ್ಕಿಯಾಗಿರುವ ಇವರು ಬಣ್ಣದ ಲೋಕದ ಆಸೆಯಿಂದ ನಿರ್ದೇಶನದ ....
*’ರಾಘು’ ಟ್ರೇಲರ್ ರಿಲೀಸ್…ಸೋಲೋ ಆಕ್ಟರ್ ಆಗಿ ಬಂದ ಚಿನ್ನಾರಿ ಮುತ್ತನಿಗೆ ಹ್ಯಾಟ್ರಿಕ್ ಹೀರೋ ಶಿವಣ್ಣ ಸಾಥ್* ಕನ್ನಡ ಚಿತ್ರರಂಗದಲ್ಲೀಗ ಪ್ಯಾನ್ ಇಂಡಿಯಾ ಸಿನಿಮಾಗಳ ಜೊತೆ ಜೊತೆಯಲಿ ಭಿನ್ನ-ವಿಭಿನ್ನ ಹಾಗೂ ಪ್ರಯೋಗಾತ್ಮಕ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಇದೇ ಸಾಲಿಗೆ ಒಂದಿಷ್ಟು ಕೌತುಕಗಳನ್ನು ತನ್ನ ಒಡಲಿನಲ್ಲಿಟ್ಟುಕೊಂಡಿರುವ ರಾಘು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 28ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗುತ್ತಿರುವ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಹೊಸ ಬಗೆಯ ರಾಘು ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. *‘ರಾಘು’ಗೆ ಶಿವಣ್ಣ ಬಲ* ಯುವ ನಿರ್ದೇಶಕ ಎಂ ಆನಂದ್ ರಾಜ್ ನಿರ್ದೇಶನದಲ್ಲಿ ಮೂಡಿ ....
*'ರಂಗು ರಗಳೆ’ಗೆ ಮುಹೂರ್ತದ ಸಂಭ್ರಮ...ಇದು ಜಾಕ್ ನಿರ್ದೇಶನದ ಮಲ್ಟಿಸ್ಟಾರ್ ಸಿನಿಮಾ* ಕನ್ನಡ ಚಿತ್ರರಂಗದಲ್ಲೀಗ ಹೊಸ ಪ್ರಯೋಗಗಳ ಪರ್ವ ಕಾಲ ಶುರುವಾಗಿದೆ. ಹೊಸಬರು ವಿಭಿನ್ನ ಪ್ರಯತ್ನದೊಂದಿಗೆ ಚಿತ್ರರಂಗಕ್ಕೆ ಅಡಿ ಇಡ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ರಂಗು ರಗಳೆ. ಅತೀವ ಕಲಾ ಪ್ರೇಮದಿಂದ ಯುವ ಪ್ರತಿಭೆ ಜಾಕ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಹೂರ್ತ ಬೆಂಗಳೂರಿನ ಪಂಚಮುಖಿ ಗಣಪತಿ ದೇಗುಲದಲ್ಲಿಂದು ನೆರವೇರಿದೆ. ತಮಿಳು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಜಾಕ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ....
*'ರಾಮನ ಅವತಾರ’ ಟೀಸರ್ ರಿಲೀಸ್....ಕಾಮಿಡಿ ಕಚಗುಳಿ ಇಟ್ಟ ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ* ಆಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಖ್ಯಾತಿಯ ರಿಷಿ ನಟನೆಯ ರಾಮನ ಅವತಾರ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಟೀಸರ್ ಮೂಲಕ ನಿರ್ದೇಶಕ ವಿಕಾಸ್ ಪಂಪಾಪತಿ ಭರಪೂರ ನಗುವಿನ ಮ್ಯಾಜಿಕ್ಕನ್ನು ಪ್ರೇಕ್ಷಕರಿಗೆ ಉಣ ಬಡಿಸಿದ್ದಾರೆ. ರಿಷಿ ಪಂಚಿಂಗ್ ಸಂಭಾಷಣೆ ಮೂಲಕ ನೋಡುಗರನ್ನು ನಕ್ಕು ನಲಿಸುತ್ತಾರೆ. ಇವರಿಗೆ ಜೋಡಿಯಾಗಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಟಿಸಿದ್ದಾರೆ. ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಟೀಸರ್ ರಿಲೀಸ್ ಬಳಿಕ ಮಾತಾನಾಡಿದ ರಿಷಿ, ಸಾಮಾನ್ಯವಾಗಿ ಕಾಮಿಡಿ ಕಷ್ಟವಾದ ಜಾನರ್. ಅದರಲ್ಲಿ ಡಬಲ್ ಮೀನಿಂಗ್ ....
*ಹೊರಬಿತ್ತು ಬಹುನಿರೀಕ್ಷಿತ, ಸಿನಿಮಾ ಅಭಿಮಾನಿಗಳು ಸೇರಿ ಆಡುವಂತಹ, ’ಫ್ಯಾನ್ಸ್ ಕ್ರಿಕೆಟ್ ಲೀಗ್’ ಈ ಸಾಲಿನ ದಿನಾಂಕಗಳು* 'ನಮ್ ಟಾಕೀಸ್’ನ ನೇತೃತ್ವದಲ್ಲಿ ನಡೆಯುವಂತಹ, ಸಿನಿಮಾ ಅಭಿಮಾನಿಗಳು, ಸಿನಿಮಾ ಪ್ರೇಮಿಗಳು ಸೇರಿ ಆಡುವಂತಹ ಏಕೈಕ ಕ್ರಿಕೆಟ್ ಪಂದ್ಯಾಟ ’ಫ್ಯಾನ್ಸ್ ಕ್ರಿಕೆಟ್ ಲೀಗ್’. 2015ನೇ ಇಸವಿಯಿಂದ ಯಶಸ್ವಿಯಾಗಿ ನಡೆಯುತ್ತಾ ಬಂದಿರುವ ಈ ಕ್ರಿಕೆಟ್ ಪಂದ್ಯಾಟ, ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಆಶೀರ್ವಾದದೊಂದಿಗೆ ಈ ಬಾರೀ ತನ್ನ ಹತ್ತನೇ ಆವೃತ್ತಿಯ ಆರಂಭ ಕಾಣುತ್ತಿದೆ. ಸದ್ಯ ಈ ಬಾರಿಯ ದಿನಾಂಕಗಳು ಹೊರಬಿದ್ದಿದ್ದು, ’ಲೂಸಿಯ’,’ಅಯೋಗ್ಯ’ ಸಿನಿಮಾಗಳ ಮೂಲಕ ಕನ್ನಡಿಗರ ಚಿರಪರಿಚಿತ ನಟ ಸತೀಶ್ ನೀನಾಸಂ ಅವರು ದಿನಾಂಕಗಳನ್ನ ಘೋಷಣೆ ....