Sada Nimmondige

Wednesday, October 10, 2018

722

ಕನ್ನಡ ಕಿರುತೆರೆಯ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಸಮಾಜ ಕಾಳಜಿ ಇಟ್ಟುಕೊಂಡು ಸಾಮಾನ್ಯ ಜನರಿಗೆ ಅನಕೂಲವಾಗಲು ಸೆಲಬ್ರಿಟಿಗಳು ಸಾಮನ್ಯ ಜನರಂತೆ ಕೆಲಸವನ್ನು ಮಾಡಿ ನೊಂದ ಮನಸ್ಸಿಗೆ ಸಹಾಯ ಮಾಡುವ ಏಕೈಕ ಶೋ “ಸದಾ ನಿಮ್ಮೊಂದಿಗೆ” ಇದೇ ಭಾನುವಾರದಿಂದ ರಾತ್ರಿ ೯ಕ್ಕೆ ಉದಯಟಿವಿಯಲ್ಲಿ ಪ್ರಸಾರವಾಗುತ್ತಿದೆ. ಪ್ರತಿ ಒಂದು ವಾರ ಅಸಹಾಯಕರಿಗೆ ಅವರ ಅವಶ್ಯಕತೆಗೆ ಚಿತ್ರರಂಗದ ದಿಗ್ಗಜರು ಸಾಮಾನ್ಯ ಜನರಂತೆ ಸಾರ್ವಜನಿಕರ ಮುಂದೆ ಕೆಲಸವನ್ನು ಮಾಡಿ ಹಣವನ್ನು ಸಂಗ್ರಹಿಸುತ್ತಾರೆ. ಆ ಸಂದರ್ಭದಲ್ಲಿ ಬಂದ ಹಣಕ್ಕೆ ಉದಯ ಟಿವಿ ಆ ಒಟ್ಟು ಹಣಕ್ಕೆ ೧೦೦ರಷ್ಟು ಸೆರಿಸಿ ಅವರ ಜೀವನಕ್ಕೆ ಅನುಕೂಲವನ್ನು ಮಾಡಿಕೊಡುವ ಸಮಾಜ ಕಳಕಳಿಯ ಕಾರ್ಯಕ್ರಮ ಇದಾಗಿದೆ. ಹೂವು ಮಾರುವುದು, ಏಳೆನೀರು ಮಾರುವುದು, ಪೆಟ್ರೋಲ್ ಬಂಕಿನಲ್ಲಿ ಕೆಲಸ ಮಾಡುವುದು,ಆಟೋ ಓಡಿಸುವುದು, ಗೋಲಿ ಸೋಡಾ ಮಾರುವುದು,ಸೊಪ್ಪು ಮಾರುವುದು ಪಾನಿ ಪುರಿ,ಕಬ್ಬಿನ ಹಾಲು ಮಾರುವುದು ಹೀಗೆ ಇನ್ನೂ ಅನೇಕ ಕೆಲಸವನ್ನು ಸಾರ್ವಜನಿಕರ ನಡುವೆ ಮಾಡಿ ಈ ಶೋಗೆ ಕೈ ಜೋಡಿಸಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು. “ಸದಾ ನಿಮ್ಮೊಂದಿಗೆ” ಯ ಮುಂಚುಣಿಯನ್ನು ಪಂಚಭಾಷಾ ತಾರೆ, ಕನ್ನಡದ ಹೆಸರಾಂತ ನಟಿ, ಚಿತ್ರರಂಗದಲ್ಲಿ ೫೦ ವರ್ಷವನ್ನು ಯಶಸ್ವಿಯಾಗಿ ಪೂರೈಸಿದ “ಜೂಲಿಲಕ್ಮೀ”ಯವರು ವಹಿಸಿಕೊಂಡಿದ್ದಾರೆ. ಲಕ್ಷ್ಮೀಯವರು ಈ ಕಾರ್ಯಮದಲ್ಲಿ ತಮ್ಮ ಜೀವನಾನುಭವದಲ್ಲಿ ನೋಡಿರುವ ಘಟನೆಗಳನ್ನು ಉದಾಹರಣೆಗೆ ತೆಗೆದುಕೊಂಡು ಬಹಳ ಘನತೆಯಿಂದ ನಡೆಸಿಕೊಡುತ್ತಿದ್ದಾರೆ. “ಎಷ್ಟೋ ಸಲ ನಮಗೆ ಅಸಹಾಯಕರಿಗೆ ಸಹಾಯ ಮಾಡಬೇಕು ಅನಿಸುತ್ತೆ ಆದರೆ ಯಾವುದೋ ಸಂದರ್ಭದಲ್ಲಿ ಅದನ್ನು ನಾವು ಮರೆತು ಬಿಡುತ್ತೇವೆ. ಆದರೆ ಉದಯ ಟಿವಿ ಈ ಕಾರ್ಯವನ್ನು ಕರ್ತವ್ಯ ಎಂದು ಭಾವಿಸಿ ದುರ್ಬಲರಿಗೆ ಬಲವನ್ನು ಕೊಡುವ ಅದ್ಭುತ ಕಾರ್ಯವನ್ನು ಮಾಡುತ್ತಿದೆ.ಇದಕ್ಕೆ ಸ್ಯಾಂಡಲ್‌ವುಡ್‌ನ ನಟನಟಿಯರು ಕೈ ಜೋಡಿಸಿದ್ದಾರೆ ಎಂಬುದು ಸಂತಸದ ವಿಷಯ. ಕನ್ನಡ ಕಿರುತೆರೆಯ ಇತಿಹಾದಲ್ಲಿಯೇ ಮೊದಲ ಬಾರಿಗೆ ಉದಯ ಟಿವಿ ಇಂತಹ ಕಾರ್ಯಕ್ರಮವನ್ನು ನಡೆಸಸುತ್ತಿರುವುದು ಅಭಿನಂದನಾರ್ಹ” ಎಂದು ಜುಲಿ ಲಕ್ಷ್ಮೀ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. “ಸದಾ ನಿಮ್ಮೊಂದಿಗೆ” ಕಾರ್ಯಕ್ರಮದಲ್ಲಿ ಮೊದಲ ಸಂಚಿಕೆಯಲ್ಲಿ ಅದ್ಧೂರಿಯಾಗಿ ಎಂಟ್ರಿ ಕೊಟ್ಟು ಬಹದ್ದೂರ್ ಆಗಿ ಮಿಂಚಿರೋ ಸರ್ಜಾ ಫ್ಯಾಮಿಲಿಯ ಭರ್ಜರಿ ಹುಡ್ಗ ಧ್ರುವ ಸರ್ಜಾ. ಇವರು ನರೇಂದ್ರ ಕುಮಾರ್ ಎಂಬ ಒಬ್ಬ ಆಟೋ ಡ್ರೈವರ್‌ಗೆ ಸಹಾಯ ಮಾಡಿದ್ದಾರೆ. ಧ್ರುವ ಸರ್ಜಾ ಅವರು ನರೇಂದ್ರ ಕುಮಾರ್‌ರ ಹಾಗೆ ಆಟೋ ಓಡಿಸಿ ಅವರಿಗೆ ಸಹಾಯವನ್ನು ಮಾಡಿದ್ದಾರೆ.

ಅಟೋ ಓಡಿಸುವ ಮೊದಲು ಆಟೋರಾಜ ಶಂಕ್ರಣ್ಣನ ಪ್ರತಿಮೆಗೆ ಹೂವಿನಹಾರ ಹಾಕಿ ನಮಸ್ಕರಿಸಿ ಶ್ರದ್ಧೆಯಿಂದ ಆಟೋ ಹತ್ತಿದರು. ಇವರಿಗೆ ಸಿಕ್ಕ ಮೊಟ್ಟ ಮೊದಲ ಕಸ್ಟಮರ್ ಗರ್ಭಿಣಿ ಅವರನ್ನು ಕರೆದುಕೊಂಡು ಹೋಗಿ ಶ್ರೀನಗರ ಆಸ್ಪತ್ರೆಗೆ ಬಿಟ್ರು. ಆ ಗರ್ಭಿಣಿ ಹತ್ರ ದುಡ್ಡು ತೆಗೆದುಕೊಳ್ಳದೇ ತಾವೇ ಆ ದುಡ್ಡನ್ನ ತಮ್ಮ ಜೇಬಿನಿಂದ ಕೊಟ್ಟಿದ್ದಾರೆ. ನಂತರ ವಿದ್ಯಾರ್ಥಿಗಳನ್ನು ವಾಸವಿ ಕಾಲೇಜ್‌ಗೆ ಬಿಟ್ಟು ಅಲ್ಲಿ ಸ್ಟೂಡೆಂಟ್ಸ್ ಜೊತೆ ಕುಣಿದು ಕುಪ್ಪಳಿಸಿ, ಮೋಜು ಮಸ್ತಿ ಮಾಡಿ ಮತ್ತೆ ಆಟೋ ಹತ್ತಿದರು. ಹೀಗೆ ದಿನ ಪೂರ್ತಿ ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದ ವೃದ್ಧ ದಂಪತಿಗಳ ವರೆಗೂ ಬೆಂಗಳೂರಿನಾದ್ಯಂತ ಎಲ್ಲ ಕಡೆ ಆಟೋ ಓಡಿಸಿದರು ಬಂದ ಹಣದಿಂದ  ನರೇಂದ್ರ ಕುಮಾರ್ ಅವರ ಸ್ವಂತ ಆಟೋ ಮಾಡಿಕೊಳ್ಳೋ ಆಸೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಶೋನಲ್ಲಿ ಪ್ರತಿ ವಾರವೂ ಒಬ್ಬೊಬ್ಬ ಸೆಲಬ್ರಿಟಿಗಳು ಬಂದಿದ್ದಾರೆ ಅವರುಗಳಲ್ಲಿ ಶ್ರೀ ಮುರಳಿ,ಲವ್ಲಿ ಸ್ಟಾರ್ ಪ್ರೇಮ್,ಪ್ರೀಯಾಂಕ ಉಪೇಂದ್ರ,ಪಾರೂಲ್ ಯಾದವ್,ವಿಜಯ ರಾಘವೇಂದ್ರ,ಸೃಜನ್ ಲೋಕೇಶ್,ಮಾನ್ವಿತಾ ಹರೀಶ್,ಪ್ರೀಯಾಮಣಿ,ರಶ್ಮೀಕಾ ಮಂದಣ್ಣ,ರ್ಧನಂಜಯ್,ಚಿರಂಜೀವಿ ಸರ್ಜಾ, ಹೀಗೆ ಇನ್ನೂ ಅನೇಕರು ಭಾಗವಹಿಸಿದ್ದಾರೆ.

ಇನ್ನು ಈ ಕಾರ್ಯಕ್ರಮ ಸೃಜನ್ ಲೋಕೇಶ್ ನೇತೃತ್ವದ ಪ್ರತಿಷ್ಠಿತ”ಲೋಕೇಶ್ ಪ್ರೊಡಕ್ಷನ್” ಸಂಸ್ಥೆಯ ಅಡಿಯಲ್ಲಿ ನಿರ್ಮಾಣವಾಗುತ್ತಿದೆ.

ಆರ್ಥಿಕ ದುರ್ಭಲರಿಗೆ ಬೆಂಬಲ ನೀಡಿ, ಬಲಹೀನರಿಗೆ  ದೈರ್ಯತುಂಬುವ ಶಕ್ತಿ ನೀಡುವ,  ಕಷ್ಟದ ಕಗ್ಗತ್ತಲೆಯಲ್ಲಿ ಮುಳಗಿದವರಿಗೆ ಬೆಳಕಿನ್ನು ಕೊಡುವ, ನೊಂದ ಬೆಂದ ಮನಸ್ಸಿಗೆ ಸೆಲಬ್ರಿಟಿಗಳಿಂದ ಸಾಂತ್ವನ ಹೆಳುವ ಉದಯ ಟಿವಿಯ ರೀಯಾಲಿಟಿ ಅಲ್ಲ್ಲ ರೀಯಲ್ ಶೋ ಸದಾ ನಿಮ್ಮೊಂದಿಗೆಪ್ರತಿ ಭಾನುವಾರ(೧೫..೨೦೧೮) ೯ಕ್ಕೆ ಪ್ರಸಾರವಾಗಲಿದೆ.

 

Copyright@2018 Chitralahari | All Rights Reserved. Photo Journalist K.S. Mokshendra,